ಪ್ರತಿಷ್ಠಿತ ರತ್ನಾಕರ ಬ್ಯಾಂಕ ನಿಂದ ಮೂರು ತಲೆಮಾರಿನ ಗ್ರಾಹಕರಿಗೆ ಸನ್ಮಾನ


Logo

Published Date: 25-Sep-2025 Link-Copied

ಮಹಾರಾಷ್ಟ್ರ ಮೂಲದ ಪ್ರತಿಷ್ಠಿತರತ್ನಾಕರ ಬ್ಯಾಂಕ್ (RBL Bank) ಇದು ಹುಬ್ಬಳ್ಳಿಯಲ್ಲಿ ತನ್ನ ಶಾಖೆಯನ್ನು ಸುಮಾರು 42 ವರ್ಷಗಳ ಹಿಂದೆ ತೆರೆಯಿತು. ಆಗಿನಿಂದ ಇಂದಿನವರೆಗೂ ಈ ಬ್ಯಾಂಕು ಬ್ಯಾಂಕಿಂಗ್ ಸೇವೆಯಲ್ಲಿ ಸಾರ್ವಜನಿಕ ವಲಯದಲ್ಲಿಯೇ ತನ್ನದೇ ಆದ ಛಾಪು ಮೂಡಿಸಿದೆ. ಪ್ರಸ್ತುತ ಈ ರತ್ನಾಕರ ಬ್ಯಾಂಕ್ ಮೂರು ತಲೆಮಾರಿನಿಂದ ಈಗಲೂ ಅತ್ಯಂತ ಕ್ರೀಯಾಶೀಲವಾಗಿ ವ್ಯವಹರಿಸುತ್ತಿರುವ ಈಗ ಮೂರನೇ ಜನರೇಷನ್ ಗ್ರಾಹಕರನ್ನು ಗುರುತಿಸಿ ಗೌರವಿಸಲು ಮುಂದಾಗಿದೆ. ಇತ್ತೀಚಿಗೆ ಪ್ರತಿಷ್ಠಿತ ಖಾಸಗಿ ಹೋಟೆಲ್ ಒಂದರಲ್ಲಿ ಮೂರು ತಲೆಮಾರಿನ ಗ್ರಾಹಕರಲ್ಲಿ ಪ್ರಮುಖರಾದ ಹುಬ್ಬಳ್ಳಿ ಮಹಾವೀರ ಗಲ್ಲಿಯ ಪ್ರತಿಷ್ಠಿತ ಮೆ. ಎಸ್. ಬಿ. ಬೀಳಗಿ & ಸನ್ಸ್ ಹೆಸರಿನ ವ್ಯಾಪಾರಿ ಸಂಸ್ಥೆಯ ಮುಖ್ಯಸ್ಥ ಬ್ರಹ್ಮಕುಮಾರ ಎಸ್ ಬೀಳಗಿ, ಇವರ ಪುತ್ರ ಅಜಯ ಬಿ. ಬೀಳಗಿ ಹಾಗೂ ಇವರ ಪುತ್ರಿ ಪ್ರಣೀತ ಎ. ಬೀಳಗಿ ಇವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಯಶೀಲಾ ಬೀಳಗಿ ಮತ್ತು ಚಂದನಾ ಎ. ಬೀಳಗಿ ಇದ್ದರು. ಹಾಗೆಯೇ ಹುಬ್ಬಳ್ಳಿಯ ಇನ್ನೊರ್ವ ಗಿರಿಯ ಗ್ರಾಹಕ ಮೆ| ರಾಧಾಕೃಷ್ಣ ಇಂಡಸ್ಟ್ರೀಸ್ ಮಾಲೀಕರಾದ ಉದಯ ದಡೋತಿ ಮತ್ತು ಪ್ರತಿಭಾ ದಡೋತಿ ಮತ್ತು ಇವರ ಪುತ್ರ ಗುಣಧರ ದಡೋತಿ ಹಾಗೂ ಇವರ ಪತ್ನಿ ಶಲಾಖಾ ಇವರನ್ನು ಸನ್ಮಾನಿಸಿ ಗೌರವಿಸಿದರು ಜೊತೆಗೆ ಅತ್ಯಂತ ಹಿರಿಯ ಗ್ರಾಹಕರು ಬ್ಯಾಂಕನ ಹಿತೈಸಿಗಳೂ ಆದ 92 ವಸಂತಗಳನ್ನು ಕಂಡ ಸುರೇಂದ್ರ ನಾವಳ್ಳಿ ಇವರನ್ನೂ ಬ್ಯಾಂಕ್ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಬ್ಯಾಂಕು ತನ್ನ ಪ್ರತಿಷ್ಠೆಯನ್ನು ಹೆಚ್ಚಿಸಿಕೊಂಡಿದೆ. ಬ್ಯಾಂಕಿನ ಹಿರಿಯ ಅಧಿಕಾರಿ ನಂಜುಂಡ ಸ್ವಾಮಿ, ಬ್ರಾಂಚ್ ಮ್ಯಾನೇಜರ್ ಚಂದ್ರಗೌಡ ಪಾಟೀಲ್, ಟಾಸ್ಕ್ ಮ್ಯಾನೇಜರ್ - ಸಂಗಪ್ಪ ಉಕ್ಕಲಿ, ಸಿಬ್ಬಂದಿ ರತ್ನಾ ಉಪಾಧ್ಯೆ ಮತ್ತು ಕಾವೇರಿ ರಾಥೋಡ್ ಇವರು ಈ ಸನ್ಮಾನ ಸಮಾರಂಭವನ್ನು ನೆರವೇರಿಸಿದರು. ವರದಿ : ಎಸ್. ಆರ್. ಮಲ್ಲಸಮುದ್ರ

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img