ಪುರಾತತ್ವ ಇಲಾಖೆ ನಿರ್ಧಾರದ ಪರಿಶೀಲನೆಗೆ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಅವರಿಗೆ ಮನವಿ


Logo

Published Date: 29-Sep-2025 Link-Copied

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಪುರಾತನ ಬಸದಿಗಳ ಮಾಹಿತಿಗಳನ್ನು ಕೇಳಿದ್ದು ಕೆಲವೊಂದು ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದ್ದು ಇದನ್ನು ನಾವು ತೀವ್ರವಾಗಿ ವಿರೋಧಿಸುತಿದ್ದೇವೆ. ಎಲ್ಲಾ ಬಸದಿಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿದ್ದು ಜೈನ ಸಮಾಜದ ಶ್ರದ್ದಾ ಕೇಂದ್ರಗಳಾಗಿದ್ದು ಪುರಾತತ್ವ ಇಲಾಖೆ ನಿರ್ಧಾರದಿಂದ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಲಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಅವರಿಗೆ ಮನವಿ ನೀಡಿ ಎಲ್ಲ ಬಸದಿಗಳ ಸ್ಥಳ ಪರಿಶೀಲನೆ ಮಾಡಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗದಂತೆ ಹಾಗೂ ಪುರಾತತ್ವ ಇಲಾಖೆಗೆ ಸೇರಿಸುವ ಅಗತ್ಯ ಇಲ್ಲದಿರುವ ಬಗ್ಗೆ ಪುರಾತತ್ವ ಇಲಾಖೆಗೆ ವರದಿ ನೀಡಬೇಕಾಗಿ ಮನವಿ ಮಾಡಲಾಯಿತು. ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಯಶೋಧರ್ ಬಳ್ಳಾಲ್ ಬಂಗಾಡಿ ಅರಮನೆ, ವಿಜಯಕುಮಾರ್ ಸಿದ್ದಾರ್ಥ್ ನಿಲಯ, ಯುವರಾಜ್ ಪೂವಣಿ, ಜಿನರಾಜ ಪೂವಣಿ, ಪಣಿರಾಜ್ ಜೈನ್, ಸುರಭಿ, ಅಭಿನಂದನ್, ವೀರೇಂದ್ರ ಜೈನ್, ಸುರೇಂದ್ರ ಕುಮಾರ್ ಧರ್ಮಸ್ಥಳ, ವಿನಯ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img