ಹಿರಿಯ ವಕೀಲ ಬಿಜೆಪಿ ನೇತಾರ ಎಂ.ಕೆ. ವಿಜಯಕುಮಾರ್


Logo

Published Date: 03-Oct-2025 Link-Copied

ಕಾರ್ಕಳ, ಅ. 3: ಹಿರಿಯ ವಕೀಲ, ಬಿಜೆಪಿ ಹಿರಿಯ ನಾಯಕರಾದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ. ಕೆ. ವಿಜಯಕುಮಾರ್ (82) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. 1968ರಲ್ಲಿ ವಕೀಲ ವೃತ್ತಿಗೆ ಪ್ರವೇಶಿಸಿದ ಅವರು, ಬಡವರು, ಕೃಷಿ ಕಾರ್ಮಿಕರು ಮತ್ತು ಅಸಹಾಯಕ ಮಹಿಳೆಯರ ಪರ ಉಚಿತವಾಗಿ ವಾದ ಮಂಡಿಸುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿದರು. ವಿಜ್ಞಾನ ಮತ್ತು ಕಾನೂನಿನಲ್ಲಿ ಪದವಿ ಪಡೆದ ಅವರು ಕಾನೂನು ಕ್ಷೇತ್ರದೊಂದಿಗೆ ಸಮಾಜಸೇವೆ, ಧಾರ್ಮಿಕ ಹಾಗೂ ಪರಿಸರಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಸಮಾಜಮುಖಿ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿದ್ದ ಅವರು, ಕಾರ್ಕಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದರು. ಕಾರ್ಕಳ ಬಿಜೆಪಿಯಲ್ಲಿ ಹಿರಿಯರಾಗಿ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img