ನೆಲ್ಲಿಕಾರಿನಲ್ಲಿ ಬೃಹತ್ ಶ್ರೀ ಸಿದ್ಧಚಕ್ರ ಮಹಾಮಂಡಲ ವಿಧಾನ ಸಂಪನ್ನ


Logo

Published Date: 07-Nov-2025 Link-Copied

ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರು ಭ|1008 ಶ್ರೀ ಅನಂತನಾಥ ಸ್ವಾಮಿ ಬಸದಿಯಲ್ಲಿ ಅಷ್ಟಾಹ್ನಿಕ ಪರ್ವದ ಶುಭ ಸಮಯದಲ್ಲಿ ದಿನಾಂಕ 29/10/2025 ರಿಂದ 5/11/2025 ರವರೆಗೆ ಕ್ಷೇತ್ರದಲ್ಲಿ ಪ್ರಪ್ರಥಮ ಬಾರಿಗೆ ನೆರೆವೆರಿದ ಬೃಹತ್ ಶ್ರೀ ಸಿದ್ಧಚಕ್ರ ಮಹಾಮಂಡಲ ವಿಧಾನವು, ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಮೂಡುಬಿದ್ರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿಯವರ ಪಾವನ ಸಾನಿದ್ಯ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ಅತ್ಯಂತ ಅದ್ದೂರಿಯಾಗಿ ಸಂಪನ್ನಗೊಂಡಿತು. ಬಸದಿಯ ಆಡಳಿತ ಮೊಕ್ತೇಸರರು ಮತ್ತು ಸೇವಾ ಕರ್ತೃಗಳಾದ ನೆಲ್ಲಿಕಾರಿನ ಧರ್ಮಬಂಧು ಮನ್ಮಥಕುಮಾರ್ ಮತ್ತು ರೂಪ ದಂಪತಿಗಳು ಹಾಗೂ ಶಂಭವ್ ಕುಮಾರ್ ಮತ್ತು ರಾಜೇಶ್ವರಿ ದಂಪತಿಗಳ ಪರಿವಾರದವರು ಆರಾಧನೆಯ ನೇತೃತ್ವ ವಹಿಸಿಕೊಂಡಿದ್ದರು. ಹಾಗೂ ಊರಿನ ಶ್ರಾವಕ ಶ್ರಾವಕಿಯರು ಪೂಜೆಯಲ್ಲಿ ಪಾಲ್ಗೊಂಡರು. ಪ್ರತಿಷ್ಠಾಚಾರ್ಯ ನೆಲ್ಲಿಕಾರಿನ ಪ್ರಸನ್ನಕುಮಾರ್ ಇಂದ್ರ ಮತ್ತು ಸಹ ಪುರೋಹಿತರು ಆರಾಧನ ವಿಧಿ ವಿಧಾನವನ್ನು ನೆರೆವೇರಿಸಿ ಕೊಟ್ಟರು. ಧಾರ್ಮಿಕ ವಿಧ್ವ0ಸರಾದ ಮುನಿರಾಜ್ ರೆಂಜಾಳರವರು ಪೂಜಾ ವಿಧಾನದ ವಿವರಣೆ ನೆರೆವೇರಿಸಿದರು. ನಿರೀಕ್ಷಾ ಜೈನ್ ಹೊಸ್ಮಾರ್ ರವರ ಸಂಗೀತ ಪೂಜಾಷ್ಟಕವು ದೇಶ ವಿದೇಶದ ಧರ್ಮ ಬಂಧುಗಳ ಮನ ಸೂರೆಗೊಳಿಸಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img