ಯುವಜನ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
Published Date: 09-Nov-2025 Link-Copied
ವೇಣೂರು: ಶ್ರೀ ಬಾಹುಬಲಿ ಯುವಜನ ಸಂಘದ ವಾರ್ಷಿಕ ಸಭೆಯು ಸಂಘದ ಅಧ್ಯಕ್ಷರಾದ ಪ್ರಭಾಚಂದ್ರರವರ ಅದ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಯದರ್ಶಿಗಳಾದ ಅಶ್ವಿನ್ ರವರು ವರದಿ ಮತ್ತು ಲೆಕ್ಕಪತ್ರ ಮಂಡನೆ ಮಾಡಿದರು. ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು . ಅಧ್ಯಕ್ಷರು : ಪ್ರಭಾಚಂದ್ರ ಬೆಳ್ಳಿಬೆಟ್ಟು, ಕಾರ್ಯದರ್ಶಿ : ಪವನ್ ಶ್ರೀಪದ್ಮ ಪೆರ್ಮಾಣು, ಖಜಾಂಚಿ : ಸಂತೋಷ್ ಎಂ.ಆರ್, ಜತೆ ಕಾರ್ಯದರ್ಶಿ: ಯುವರಾಜ್ ವೇಣೂರು ಹಾಗೂ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಕ್ರೀಡಾಕೂಟವನ್ನು ಡಿಸೆಂಬರ್ 25ರಂದು ನಡೆಸುವುದಾಗಿ ನಿರ್ದರಿಸಲಾಯಿತು.