ಧಾರವಾಡದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
Published Date: 26-Jan-2026 Link-Copied
ಧಾರವಾಡದ ಹೊಸಯಲ್ಲಾಪುರದ ದಿಗಂಬರ ಜೈನ್ ಸಮಾಜ ಟ್ರಸ್ಟ್ ವತಿಯಿಂದ ಶ್ರೀ ಆದಿನಾಥ ಜೈನ ಬಸದಿಯಲ್ಲಿ 77ನೆಯ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಟ್ರಸ್ಟ್ನ ಉಪಾಧ್ಯಕ್ಷರಾದ ಡಾ. ಆರ್. ಎ. ಬಾಳಿಕಾಯಿ ಅವರು ಧ್ವಜ ಅನಾವರಣ ಮಾಡಿ, ಭಾರತೀಯ ಸಂವಿಧಾನವು: ಎಲ್ಲ ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡುತ್ತದೆ. ಜಾತಿ, ಧರ್ಮ, ಲಿಂಗ ಆಧಾರಿತ ಭೇದಭಾವವನ್ನು ತಿರಸ್ಕರಿಸುತ್ತದೆ. ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನಿರ್ದಿಷ್ಟಪಡಿಸುತ್ತದೆ. ಇದು ಕೇವಲ ಕಾನೂನು ಪುಸ್ತಕವಲ್ಲ, ಒಂದು ಸಾಮಾಜಿಕ ಒಪ್ಪಂದವಾಗಿದೆ. ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದು ಮಾತ್ರವಲ್ಲದೆ ಸಾಮಾಜಿಕ ಸಾಮರಸ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ಬೆಳೆಯುತ್ತಿರುವ ಭಾರತಕ್ಕಾಗಿ ಕೆಲಸ ಮಾಡಲು ನಾವು ಇಂದು ಪ್ರತಿಜ್ಞೆ ಮಾಡೋಣ, ಎಂದು ತಿಳಿಸುತ್ತ, ಟ್ರಸ್ಟಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಟ್ರಸ್ಟಿನ ಕಾರ್ಯದರ್ಶಿ ಅರುಣ ಬ್ಯಾಡಗಿ, ಸಹ ಕೋಶಾಧ್ಯಕ್ಷ ಯಲ್ಲಪ್ಪ ಜೈನರ ಮತ್ತು ಆಡಳಿತ ಮಂಡಳಿ ಸದಸ್ಯರಾದ ಶ್ರೀಧರ ಬಸ್ತಿ, ಶ್ರಾವಕ-ಶ್ರಾವಕಿಯರು ಹಾಗೂ ಇತರರು ಉಪಸ್ಥಿತರಿದ್ದರು. ಡಾ. ಆರ್. ಎ. ಬಾಳಿಕಾಯಿ ಉಪಾಧ್ಯಕ್ಷರು, ದಿಗಂಬರ ಜೈನ್ ಸಮಾಜ ಟ್ರಸ್ಟ್, ಹೊಸಯಲ್ಲಾಪುರ, ಧಾರವಾಡ