ಸಿಂದಿಗೆರೆಯ ವಾರ್ಷಿಕ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ವೀರೇಂದ್ರಕುಮಾರ್ ಬೇಗೂರುರವರ ಬಿಡುಗಡೆ
Published Date: 26-Jan-2026 Link-Copied
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಹಾಗೂ ಪ್ರಾಚೀನ ಜೈನ ಕ್ಷೇತ್ರ ಬ್ರಹ್ಮಯಕ್ಷನ ಮಹೋನ್ನತ ಮಹಿಮಾ ಕ್ಷೇತ್ರ ಸಿಂದಿಗೆರೆಯ ವಾರ್ಷಿಕ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ವೀರೇಂದ್ರಕುಮಾರ್ ಬೇಗೂರುರವರ ಜೈನ ಸಮಾಜದ ನಿರೀಕ್ಷಿತ ಸಂಶೋಧನಾ ಕೃತಿಯಾದ "ಕರ್ನಾಟಕ ಜೈನ ಪರಂಪರೆಯಲ್ಲಿ ಬ್ರಹ್ಮಯಕ್ಷ" ಹಾಗೂ "ನಿರಂಜನ ವೈಭವ" ಎಂಬ ಎರಡು ಕೃತಿಗಳನ್ನು ನಿವೃತ್ತ ಇಂಜಿನಿಯರ್ ಹಾಗೂ ಹಾಸನ ಮಹಾವೀರ ಜೈನ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ನಾಗೇಂದ್ರಯ್ಯರವರು ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಕೃತಿಯನ್ನು ಕುರಿತು ವೃಷಬ್ ಕುಮಾರ್ ರವರು ಮಾತಾನಾಡಿದರು. ಕೃತಿಕಾರರಾದ ವೀರೇಂದ್ರ ಕುಮಾರ್ ರವರು ಜೈನ ಯಕ್ಷಯಕ್ಷಿಯರ ಮಹತ್ವ ಹಾಗೂ ಬ್ರಹ್ಮ ಯಕ್ಷರ ಆರಾಧನೆಯ ಕುರಿತು ಉಪನ್ಯಾಸ ಮಾಡಿದರು. ಈ ಕೃತಿಯ ಪ್ರಕಾಶಕರಾದ ಸಿಂದಗೆರೆ ಸುಪಾರ್ಶ್ವ ತೀರ್ಥಂಕರ ಹಾಗೂ ಬ್ರಹ್ಮ ಯಕ್ಷ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾದ ನಾಗರತ್ನರಾಜಯ್ಯ ಹಾಗೂ ಕಾರ್ಯದರ್ಶಿಗಳಾದ ಪಾರ್ಶ್ವನಾಥಯ್ಯರವರು, ವಿಪುಲ್ ಜೈನ್ ಅತುಲ್ ಜೈನ್ ಚಂದ್ರಕೀರ್ತಿ, ಹಾಸನ ದ ಧನಪಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.ನಾಡಿನ ತುಮಕೂರು ಮೈಸೂರು ಹಾಸನ ಬೆಂಗಳೂರು ಅಡಗೂರು ಮಾಯಸಂದ್ರ ಶ್ರವಣಬೆಳಗೊಳ ದಿಂದ ಜನರು ಆಗಮಿಸಿ ಈ ಕಾರ್ಯಕ್ರಮ ಕ್ಕೆ ಸಾಕ್ಷಿಯಾದರು.