ವೇಣೂರು: ಕಲ್ಲು ಬಸದಿಗಳ ವಾರ್ಷಿಕ ಮಹೋತ್ಸವ
Published Date: 06-Feb-2026 Link-Copied
ವೇಣೂರು: ಇಲ್ಲಿನ ಕಲ್ಲು ಬಸದಿ ಸಮಚ್ಚಯದ ಭ| ೧೦೦೮ ಶ್ರೀ ಶಾಂತಿನಾಥ ಸ್ವಾಮಿ, ಭ| ೧೦೦೮ ಆದಿನಾಥ ಸ್ವಾಮಿ, ಶ್ರೀ ೨೪ ತೀರ್ಥಂಕರರ ಬಸದಿಗಳ ವಾರ್ಷಿಕ ಮಹೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಫೆ. ೦೮ರಂದು (ನಾಳೆ) ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.