ವೇಣೂರು: ಕಲ್ಲು ಬಸದಿಯ ವಾರ್ಷಿಕ ಮಹೋತ್ಸವ


Logo

Published Date: 09-Feb-2026 Link-Copied

ಬೆಳ್ತಂಗಡಿ, ಫೆ. 08: ವೇಣೂರು ಕಲ್ಲು ಬಸದಿ ಸಮುಚ್ಚಯದ ಭ|| ೧೦೦೮ ಶ್ರೀ ಶಾಂತಿನಾಥ ಸ್ವಾಮಿ, ಭ| ೧೦೦೮ ಶ್ರೀ ಆದಿನಾಥ ಸ್ವಾಮಿ, ಶ್ರೀ ೨೪ ತೀರ್ಥಂಕರರ ಬಸದಿಗಳ ವಾರ್ಷಿಕ ಮಹೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನೆರವೇರಿತು. ನಂತರ ಪೂಜ್ಯ ಶ್ರೀಗಳು ಆಶೀರ್ವಚನವನ್ನು ದಯಪಾಲಿಸಿದರು. ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಉಪಾಧ್ಯಕ್ಷರು, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಶ್ರೀ ದಿ. ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ ಇಂದ್ರ, ಸಮಿತಿಯ ಕೋಶಾಧಿಕಾರಿ ಪಿ. ಜಯರಾಜ್ ಕಂಬಳಿ, ಸಮಿತಿಯ ಸರ್ವಸದಸ್ಯರು, ಊರ-ಪರವೂರ ಶ್ರಾವಕ-ಶ್ರಾವಕಿಯರು ಭಾಗವಹಿಸಿದ್ದರು. ಸಮಿತಿಯ ಜೊತೆ ಕಾರ್ಯದರ್ಶಿ ಮಹಾವೀರ್‌ ಜೈನ್‌ ಮೂಡುಕೋಡಿರವರು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಮಧ್ಯಾಹ್ನದ ಬಳಿಕ ಪದ್ಮಾವತಿ ದೇವಿಯ ಆರಾಧನ ಪೂರ್ವಕ ಪ್ರತಿಷ್ಠೆ ಮತ್ತು ಸರಸ್ವತಿ ದೇವಿ ಆರಾಧನಾ ಪೂರ್ವಕ ಪ್ರತಿಷ್ಠೆ ನೆರವೇರಿತು. ಶ್ರಾವಕ-ಶ್ರಾವಕಿಯರು ಸಹಕರಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img