ಧಾರವಾಡ: ಜೆಎಸ್ಎಸ್ ಸಭಾಭವನದಲ್ಲಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ
Published Date: 10-Mar-2026 Link-Copied
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಜೈನಶಾಸ್ತ್ರ ಅಧ್ಯಯನ ಪೀಠ ಮತ್ತು ಜೆ. ಎಸ್. ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಧಾರವಾಡ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 12-3-2026 ರಂದು ಗುರುವಾರ ಧಾರವಾಡ ಜೆ.ಎಸ್.ಎಸ್.ಡಿ.ಆರ್.ಎಚ್. ಸಭಾ ಭವನದಲ್ಲಿ "ಸಾಹಿತ್ಯ ಸಂಸ್ಕೃತಿ" ಕುರಿತಾಗಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಮುಂಜಾನೆ 10.30 ಗಂಟೆಗೆ ಧಾರವಾಡ ಜೆ ಎಸ್ ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಅಜಿತಪ್ರಸಾದ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಮಾನ್ಯ ಉಪಕುಲಪತಿ ಡಾ. ಎಎಮ್ ಖಾನ್ ಇವರು ಉದ್ಘಾಟಿಸಲಿದ್ದಾರೆ. ಡಾ. ಜೆ.ಎಮ್. ನಾಗಯ್ಯ ನಿವೃತ್ತ ಪ್ರಾಧ್ಯಾಪಕರು ಕ ವಿ ವಿ ಇವರು ದಿಕ್ಸೂಚಿ ನುಡಿಗಳನ್ನಾಡುವರು. 11.30 ಗಂಟೆಗೆ ಮೊದಲ ಗೋಷ್ಠಿ "ಕನ್ನಡ ಸಾಹಿತ್ಯಕ್ಕೆ ರನ್ನ ಕವಿಯ ಕೊಡುಗೆ" ವಿಷಯವಾಗಿ ಹಿರಿಯ ಸಾಹಿತಿ ನಿವೃತ್ತ ಪ್ರಾಧ್ಯಾಪಕರಾದ ಡಾ. ವೈ ಎಂ ಭಜಂತ್ರಿ ಇವರು ಉಪನ್ಯಾಸ ನೀಡಲಿದ್ದು ಅಧ್ಯಕ್ಷತೆಯನ್ನು ಖ್ಯಾತ ಶಾಸನ ತಜ್ಞರು ಹಿರಿಯ ಸಾಹಿತಿ ಹನುಮಾಕ್ಷಿ ಗೋಗಿ ವಹಿಸುವರು. ಊಟದ ವಿರಾಮದ ನಂತರ ಮಧ್ಯಾನ್ಹ 2 ಗಂಟೆಗೆ ಎರಡನೇ ಗೋಷ್ಠಿ "ಸರ್ವ ಧರ್ಮ ಸಮನ್ವಯ ಕೇಂದ್ರ : ಶ್ರೀ ಕ್ಷೇತ್ರ ಧರ್ಮಸ್ಥಳ " ವಿಷಯವಾಗಿ ರಂಗ ಕರ್ಮಿ ಸಾಹಿತಿ ಡಾ. ಶಶಿಧರ ನರೇಂದ್ರ ಮಾತನಾಡುವರು. ಅಧ್ಯಕ್ಷತೆಯನ್ನು ಸಾಹಿತಿ ಪ್ರಾಧ್ಯಾಪಕಿ ಡಾ. ವೀಣಾಯಲಿಗಾರ ವಹಿಸುವರು. ಮಧ್ಯಾನ್ಹ 3.30 ಗಂಟೆಗೆ ಜನತಾ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅರಿಹಂತಪ್ರಸಾದ ಇವರ ಗೌರವ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ ಜರುಗಲಿದ್ದು ಹಿರಿಯ ಸಾಹಿತಿ ಪ್ರೊ ಕೆ. ಎಸ್. ಕೌಜಲಗಿ ಇವರ ಸಮಾರೋಪ ನುಡಿಗಳೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳುವುದು. ಇದೇ ಸಂದರ್ಭದಲ್ಲಿ 'ಹಳಗನ್ನಡ ಸಾಹಿತ್ಯಕ್ಕೆ ಜೈನ ಕವಿಗಳ ಕೊಡುಗೆ 'ಎಂಬ ವಿಷಯ ಕುರಿತು ಆಯೋಜಿಸಿದ್ದ ಲೇಖನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುವುದು. ಕಾರ್ಯಕ್ರಮದಲ್ಲಿ ಜೈನಶಾಸ್ತ್ರ ಅಧ್ಯಯನ ಪೀಠದ ಸಂಯೋಜಕ ಡಾ. ಜಿನದತ್ತ ಹಡಗಲಿ ಹಾಗೂ ಸಲಹಾ ಸಮಿತಿ ಸದಸ್ಯರಾದ ಧರಣೇಂದ್ರ ಜವಳಿ, ಶಾಂತಿನಾಥ ಹೊತಪೇಟಿ, ಧನಪಾಲ ಮುನ್ನೊಳ್ಳಿ, ಡಾ. ರಾಯಪ್ಪ ಬಾಳಿಕಾಯಿ ಹಾಗೂ ಶಾಂತರಾಜ ಮಲ್ಲಸಮುದ್ರ ಉಪಸ್ಥಿತರಿರುವರು. ಅತ್ಯಂತ ವಿದ್ವತ್ಪೂರ್ಣ ಈ ವಿಚಾರ ಸಂಕಿರಣದಲ್ಲಿ ತಾವುಗಳು ತಪ್ಪದೆ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಗಿದೆ. ವರದಿ: ಎಸ್ ಆರ್ ಮಲ್ಲಸಮುದ್ರ