ಶಿಶಿಲ: ಪ್ರೀತಮ್ ಜೈನ್ ಇಂಡಿಯನ್ ಆರ್ಮಿಗೆ ಆಯ್ಕೆ
Published Date: 13-Jun-2026 Link-Copied
ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕ್ಷೇತ್ರ ಚಂದ್ರಪುರ ಶಿಶಿಲದ ಆಡಳಿತ ಮಂಡಳಿ ವತಿಯಿಂದ ಬೆಳ್ತಂಗಡಿಯ ಕೊಕ್ಕಡದ ಎಳ್ನೀರಿನ ಸಂಪತ್ ಕುಮಾರ್ ಹಾಗೂ ಶೋಭಿತರವರ ಪುತ್ರ ಪ್ರೀತಮ್ ಜೈನ್ ಇವರು ಇಂಡಿಯನ್ ಆರ್ಮಿಗೆ ಆಯ್ಕೆಯಾಗಿರುವುದಕ್ಕೆ ಸನ್ಮಾನಿಸಿ, ಶುಭಹಾರೈಸಲಾಯಿತು. ಇವರು ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಬಿಕಾಂ ಪದವಿಧರರಾಗಿದ್ದು ಕೃಷಿಕರಾಗಿರುತ್ತಾರೆ. ಶಿಶಿಲ ಬಸದಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯರಾಗುತ್ತಿದ್ದರು. ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯ ಕುಮಾರ್ ಜೈನ್, ಫಣಿರಾಜ್ ಜೈನ್, ಪಿ ಅತಶಯ ಜೈನ್, ಪ್ರೀತಮ್ ಜೈನ್, ಸಂಪತ್ ಜೈನ್ ಮುಂತಾದವರು ಉಪಸ್ಥಿತರಿದ್ದರು.