ರಾಮಚಂದ್ರ ಕಿಲ್ಲೇದಾರರಿಗೆ ಪಿ.ಎಚ್.ಡಿ. ಪ್ರದಾನ
Published Date: 06-Jul-2026 Link-Copied
ಬೆಳಗಾವಿ: ಕಾಗವಾಡ ತಾಲೂಕಿನ ಉಗಾರಖುರ್ದ ಪಟ್ಟಣದ ಪೀಪಲ್ಸ್ ಎಜ್ಯುಕೇಶನ್ ಸೊಸೈಟಿಯ ಪ್ರಾಚಾರ್ಯರು ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಗೌರವಾನ್ವಿತ ಸಿಂಡಿಕೇಟ್ ಸದಸ್ಯರಾದ ರಾಮಚಂದ್ರ ಕಿಲ್ಲೇದಾರ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿ.ಎಚ್.ಡಿ. (ಡಾಕ್ಟರ್ ಆಫ್ ಫಿಲಾಸಫಿ) ಪದವಿಯನ್ನು ಅಧಿಕೃತವಾಗಿ ಪ್ರದಾನ ಮಾಡಿದೆ. ವಿಶ್ವ ವಿದ್ಯಾಲಯದ ವಾಣಿಜ್ಯ ನಿಕಾಯದ ವ್ಯವಹಾರ ನಿರ್ವಹಣೆ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಸಂಶೋಧನಾ ಮಾರ್ಗದರ್ಶಕರಾದ ಪ್ರೊ. ಎಸ್.ಸಿ. ಪಾಟೀಲ ಅವರ ಮಾರ್ಗದರ್ಶನದಲ್ಲಿ ಇವರು ತಮ್ಮ ಸಂಶೋಧನಾ ಮಹಾಪ್ರಬಂಧವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇವರು ಉಗಾರ ಖುರ್ದದ ಹೆಸರಾಂತ ಶೈಕ್ಷಣಿಕ ಸಂಸ್ಥೆಯಾದ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2008 ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಅವರ ನೇತೃತ್ವದಲ್ಲಿ ಒಂದರಿಂದ ಎಂಟನೆ ತರಗತಿಯ ಇಂಗ್ಲಿಷ್ ಮಾಧ್ಯಮಶಾಲೆ, ಪಿಯುಸಿ (ಕಲಾ ಮತ್ತು ವಾಣಿಜ್ಯ) ಹಾಗೂ ಬಿ.ಬಿ.ಎ., ಬಿ.ಸಿ.ಎ. ಮತ್ತು ಬಿ.ಕಾಂ. ಪದವಿ ಕಾಲೇಜುಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಗ್ರಾಮೀಣ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಮಹತ್ವದ ನೀಡುತ್ತಿದೆ.