ಮೂಡುಬಿದಿರೆ: ಕಸ ವಿಲೇವಾರಿ ಪ್ರಾತ್ಯಕ್ಷಿಕೆ


Logo

Published Date: 13-Jul-2026 Link-Copied

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಧವಳತ್ರಯ ಜೈನ ಕಾಶಿ ಟ್ರಸ್ಟ್ ಸಹಕಾರದಿಂದ ಕಾಲೇಜಿನ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಹಾಗೂ ಮೂಡುಬಿದಿರೆ ಪುರಸಭೆಯ ಸಹಯೋಗದೊಂದಿಗೆ ಕಸ ವಿಲೇವಾರಿ ಪ್ರಾತ್ಯಕ್ಷಿಕೆ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ‍್ಯಕ್ರಮದಲ್ಲಿ ಕಾಲೇಜಿನ ಸ್ಥಾಪಕ ಅಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ‍್ಯ ಪಂಡಿತಾಚಾರ‍್ಯವರ‍್ಯ ಮಹಾಸ್ವಾಮೀಜಿ ಪಾವನ ಸಾನಿಧ್ಯವನ್ನು ವಹಿಸಿಕೊಂಡು ಮಾತನಾಡುತ್ತ ನಮ್ಮ ಊರಿನ ಪರಿಸರದ ಸ್ವಚ್ಛ ಸುಂದರವಾಗಿಸಿ ಕಸ ಇಲ್ಲದಂತೆ ನೋಡುದು ನಮ್ಮೆಲ್ಲರ ಜವಾಬ್ದಾರಿ ಕಸವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಿದಾಗ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರುತ್ತದೆ ಎಂದರು. ಕಾರ‍್ಯಕ್ರಮದಲ್ಲಿ ಮೂಡುಬಿದಿರೆ ಪುರಸಭೆಯ ಮುಖ್ಯ ಅಧಿಕಾರಿ ಇಂದೂರವರು ಹಾಗೂ, ಪುರಸಭೆಯ ಪರಿಸರ ಅಭಿಯಂತರೆ ಶಿಲ್ಪಾ ಉಪಸ್ಥಿತರಿದ್ದರು ಇವರನ್ನು ಸ್ವಸ್ತಿಶ್ರೀ ಪೂಜ್ಯ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದಿಸಿದರು. ಶಿಲ್ಪಾರವರು ಕಸ ವಿಲೇವಾರಿಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಯಾವ ಯಾವ ರೀತಿಯ ಕಸವನ್ನು ಯಾವ್ಯಾವ ರೀತಿ ವಿಲೇವಾರಿ ಮಾಡಬೇಕು ಎನ್ನುವ ವಿಷಯವನ್ನು ಮನವರಿಕೆ ಮಾಡಿಕೊಟ್ಟರು. ಕಾರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಜ್ವಲ್ ಶೆಣೈ ಇವರು ಉಪಸ್ಥಿತರಿದ್ದರು. ಇವರು ಕಸ ವಿಲೇವಾರಿ ಮಾದರಿಗಳ ಮುಖಾಂತರ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ‍್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಶ್ವೇತಾ ಜೈನ್ ನೋಟರಿ ಹಾಗೂ ನ್ಯಾಯವಾದಿಗಳು ಮೂಡುಬಿದಿರೆ ಇವರು ಉಪಸ್ಥಿತರಿದ್ದು ಎಲ್ಲಾ ವಿದ್ಯಾರ್ಥಿಗಳಿಗೆ ಬಟ್ಟೆ ಚೀಲ ಉಚಿತವಾಗಿ ನೀಡಿದರು. ಮಧ್ಯಾಹ್ನ ನಡೆದ ಈ ಸುಂದರ ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಸೌಮ್ಯಶ್ರೀ ಸ್ವಾಗತಿಸಿದರು. ಉಪನ್ಯಾಸಕಿ ಸರಸ್ವತಿ ವಂದಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img