ಪದ್ಮಾಂಬ ಮಹಿಳಾ ಸಮಾಜ: ಮಾಸಿಕ ಸಭೆ
Published Date: 17-Jul-2026 Link-Copied
ದಾವಣಗೆರೆ: ಪದ್ಮಾಂಬ ಮಹಿಳಾ ಸಮಾಜದ ವತಿಯಿಂದ, ಶ್ರೀ 1008 ಪಾರ್ಶ್ಶ್ವನಾಥ ಜಿನಮಂದಿರದ ಆವರಣದಲ್ಲಿ, ನಡೆದ ಸಮಾರಂಭದಲ್ಲಿ D.R.M. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರೂಪಶ್ರೀರವರು ದಾವಣಗೆರೆಯಲ್ಲಿ ಪ್ರಾಧ್ಯಾಪಕರಾಗಿ,ವಿಭಾಗ ಮುಖ್ಯಸ್ಥರಾಗಿ, ಪ್ರಾಶುಂಪಾಲರಾಗಿ ಅತ್ಯುತ್ತಮ ಸೇವೆ ಮತ್ತು ದಾವಣಗೆರೆಯ ಜೈನ ಸಮಾಜದ ಜೊತೆ ನಿಕಟ ಬಾಂಧವ್ಯವನ್ನು ಹೊಂದಿರುವುದನ್ನು ಗಮನಿಸಿ "ಪದ್ಮಾಂಬ ಮಹಿಳಾ ಸಾಧನಾ ಪ್ರಶಸ್ತಿ"ಯನ್ನು ನೀಡಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಮಹಿಳೆಯರ ಸಬಲೀಕರಣ ಮತ್ತು ಮಹಿಳಾ ಸಮಾಜಕ್ಕೆ ಮಹಿಳೆಯರ ಕೊಡುಗೆ ಇದರ ಬಗ್ಗೆ ತುಂಬಾ ವಿವರವಾಗಿ ಚೆನ್ನಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪದ್ಮಾಂಬ ಮಹಿಳಾ ಸಮಾಜದ ಅಧ್ಯಕ್ಷರಾದ ವರ್ಷ ಸುಧೀರ್, ಕಾರ್ಯದರ್ಶಿಯಾದ ಸುಹಾಸಿನಿ ದೀಪಕ್, ಖಜಾಂಚಿಯಾದ ಚೇತನ ಪದ್ಮರಾಜ್ ಹಾಗೂ ಗೌರವಾಧ್ಯಕ್ಷರಾದ ಸರಸ್ವತಮ್ಮ ಬೆತುರ, ಸಂಸ್ಥಾಪಕರಾದ ಉಷಾ ಜಯಪ್ರಕಾಶ್ ಮತ್ತು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಪದ್ಮ ಪ್ರಕಾಶ್ ಹಾಗೂ ಕಾರ್ಯದರ್ಶಿಯಾದ ಹರ್ಷ ನಾಗರಾಜ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯೆಯರು ಉಪಸ್ಥಿತರಿದ್ದರು.