ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ- ಸಮಾಲೋಚನಾ ಸಭೆ
Published Date: 21-Jul-2026 Link-Copied
ಬೆಂಗಳೂರು ಕೇಂದ್ರ ಕಚೇರಿಯಲ್ಲಿ ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ನಿಸಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳಜೈನ್ ರವರ ನೇತ್ರತ್ವದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶೇಕ್ ಲತಿಫ್ ರವರ ಉಪಸ್ಥಿತಿಯಲ್ಲಿ ಇಂದು (ಜು. 21) ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು ಸಮಾಜದ ಪ್ರಮುಖರು ಹಾಗೂ ಡಾ. ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಧನ ಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ಜೈನ್ ದೆಪ್ಪುನಿ ಮುಂತಾದವರು ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರಮುಖವಾಗಿ ತಸ್ತಿಕ್ ಕೊಡುತ್ತಿರುವ ಬಸದಿಗಳಿಗೆ ಸಹಾಯಕ ಪುರೋಹಿತರಿಗೂ ಗೌರವಧನ ನೀಡಬೇಕು, ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಕೊಡಬೇಕು, ಆಯೋಗದ ಕಚೇರಿಗಳಲ್ಲಿ ಸಮಾಜದವರಿಗೆ ಉದ್ಯೋಗ ಅವಕಾಶಗಳನ್ನು ನೀಡಬೇಕು, ಬಸದಿಗಳ ದಾಖಲೆಗಳನ್ನು ಸರಿಪಡಿಸಲು ಸಹಕರಿಸಬೇಕು, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮುಂತಾದ ಹಲವಾರು ವಿಷಯಗಳನ್ನು ಅಧ್ಯಕ್ಷರ ಗಮನಕ್ಕೆ ತಂದು ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಸಲ್ಲಿಸಲಾಯಿತು.