ಫೆ. 25 : ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆದ 4ನೇ ದಿನದ ಮಹಾಮಸ್ತಕಾಭಿಷೇಕ


Logo

Published Date: 26-Feb-2024 Link-Copied

ವೇಣೂರು ಭ| ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ 4 ದಿನವಾದ ಫೆ. 25ರಂದು ಬೆಳಿಗ್ಗೆ ಯುಗಳ ಮುನಿ ಮಹಾರಾಜರ ದೀಕ್ಷಾ ಮಹೋತ್ಸವದ ರಜತ ಸಂಭ್ರಮದ ಪ್ರಯುಕ್ತ ಬೆಳಿಗ್ಗೆ 108 ಕಲಶಗಳಿಂದ ಸ್ವಾಮಿಗೆ ಮಹಾಮಸ್ತಕಾಭಿಷೇಕ ಜರಗಿತು. ಈ ಮಹಾಮಸ್ತಕಾಭಿಷೇಕವನ್ನು ವೀಕ್ಷಿಸಲು ಭಕ್ತಾದಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. 4ನೇ ದಿನದ ಸೇವಾಕರ್ತರಾದ ಪೆರಿಂಜೆ ಪಡ್ಯೋಡಿಗುತ್ತು ಜೀವಂಧರ ಕುಮಾರ್‌, ಪತ್ನಿ ಸುಲೋಚನ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ಬೆಳಿಗ್ಗೆ ಪಂಚ ಕುಂಭ ವಿನ್ಯಾಸಯುಕ್ತ ಗ್ರಹಯಜ್ಞ ವಿಧಾನ, ಜಲಾಗ್ನಿ ಹೋಮ, ಬೃಹತ್‌ ಶಾಂತಿ ಯಂತ್ರಾರಾಧನೆ, ಅಗ್ರೋದಕ ಮೆರವಣಿಗೆ, ಸಂಜೆ ಭ| ಬಾಹುಬಲಿ ಸ್ವಾಮಿಗೆ 108 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ನೆರವೇರಿತು. ಹೀಗೆ 4ನೇ ದಿನ ಹಗಲು ಮತ್ತು ರಾತ್ರಿಗಳಲ್ಲಿ ನಡೆದ ಮಹಾಮಸ್ತಕಾಭಿಷೇಕಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸಾಕ್ಷಿಯಾದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img