ಇಂದು ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ


Logo

Published Date: 16-Mar-2024 Link-Copied

ಬೆಳ್ತಂಗಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವೇಣೂರು [ರಿ]. ವತಿಯಿಂದ ಇಂದು ಸಂಜೆ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ಜರಗಲಿರುವುದು. ಫೆ.22 ರಿಂದ ಮಾ. 01ರವರೆಗೆ ಜರಗಿದ ಮಹಾಮಸ್ತಕಾಭಿಷೇಕದ ಯಶಸ್ವಿಗೆ ಸಹಕರಿಸಿದ ಶ್ರಾವಕ ಶ್ರಾವಕಿಯರ ಅಭಿನಂದನಾ ಕಾರ್ಯಕ್ರಮವು ಮೂಡಬಿದ್ರೆ ಶ್ರೀ ಜೈನ ಮಠದ ಪರಮಪೂಜ್ಯ ‘ಭಾರತಭೂಷಣ' ಜಗದ್ಗುರು ಸ್ವಸಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ರವರ ಗೌರವ ಉಪಸ್ಥಿತಿಯಲ್ಲಿ, ಅಪರಾಹ್ನ ಗಂಟೆ 3-30 ಕ್ಕೆ ಶ್ರೀ ಭರತೇಶ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಜೆ 5-00 ರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಶ್ರೀ ಕೊಡಮಣಿತ್ತಾಯ ದೈವ ಹಾಗೂ ಕಲ್ಕುಡ-ಕಲ್ಲುರ್ಟಿ ದೈವಗಳ ಭಂಡಾರಗಳ ಆಗಮನ. 6-00 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಜಲಾಭಿಷೇಕ ಪ್ರಾರಂಭ. ರಾತ್ರಿ 7-00 ರಿಂದ ಶ್ರೀ ಮಹಾಲಿಂಗೇಶ್ವರ ದೇವರಿಗೆ ರಂಗ ಪೂಜೆ, 7-30 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ವಿವಿಧ ದ್ರವ್ಯಗಳಿಂದ ಮಹಾಮಸ್ತಕಾಭಿಷೇಕ, 8-00 ರಿಂದ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ ದೈವಗಳ ನೇಮ. ಈ ಎಲ್ಲ ಕಾರ್ಯಕ್ರಮಗಳು ಜರಗಲಿದೆ. ವಿ.ಸೂ: ಶ್ರಾವಕ ಬಂಧುಗಳು ರೂ.3000. ರೂ.5000, ರೂ.10000 ಕಲಶಗಳನ್ನು ಪಡೆದು ಅಭಿಷೇಕ ಮಾಡಬಹುದು. ದ್ರವ್ಯಾಬಿಷೇಕ ಮಾಡಲಿಚ್ಚಿಸುವ ಬಂಧುಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು. ಮೊ: 9606356288

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img