ದೆಹಲಿ: ಜಿನ ಬಸದಿ 24 ತೀರ್ಥಂಕರರ ಪಂಚ ಕಲ್ಯಾಣ-ವಿವಿಧ ಜಿನ ಬಿಂಬಗಳ ಸ್ಥಾಪನೆ


Logo

Published Date: 26-Apr-2024 Link-Copied

ಮುಂಬಯಿ, ಏ.25: ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿಯಲ್ಲಿ 24 ತೀರ್ಥಂಕರರ ಪಂಚ ಕಲ್ಯಾಣವು ರಾಷ್ಟ್ರಸಂತ ೧೦೮ ಉಪಾಧ್ಯಾಯ ಗುಪ್ತಿ ಸಾಗರ ಮುನಿಮಹಾರಾಜರ ಮಾರ್ಗದರ್ಶನ, ಪಾವನ ಸಾನ್ನಿಧ್ಯದಲ್ಲಿ ಮೂಡಬಿದಿರೆ ಶ್ರೀ ದಿಗಂಬರ ಜೈನ ಮಠದ, ಭಾರತ ಭೂಷಣ ಜಗದ್ಗುರು ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಇಂದು ಜರುಗಿತು. ಮೂರು ಆಡಿ ಎತ್ತರದ ಪಂಚ ಲೋಹದ ಇಪ್ಪತ್ತನಾಲ್ಕು ತೀರ್ಥಂಕರರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ, ಮೋಕ್ಷ ಕಲ್ಯಾಣ ಪೂಜೆ, ನಂತರ ದೆಹಲಿ ವಿಶ್ವ ವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಿಂದ ಮೆರವಣಿಗೆ ಮೂಲಕ ಮೂರು ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆಯಿಂದ ಮಧ್ಯಾಹ್ನವರೆಗೂ ದೆಹಲಿ ರಾಣಾಪತ್ ನಗರದ ಬಸದಿಯಲ್ಲಿ ಮೂರ್ತಿ ಸ್ಥಾಪನೆ ಜರುಗಿತು. ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಸ್ತಿಶ್ರೀ ಡಾ|| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರು ಜಿನ ಬಿಂಬ ಸ್ಥಾಪನೆಯಿಂದ ಆತ್ಮಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು, ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ಹೇಳುತ್ತಾ, ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಿ ಹರಸಿದರು. ರಾಷ್ಟ್ರಸಂತ ೧೦೮ ಗುಪ್ತಿ ಸಾಗರ ಮುನಿಮಹಾರಾಜರು ಮೂಡುಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿ ಹರಸಿ ಆಶೀರ್ವಾದಿಸಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ ರಾಷ್ಟ್ರಸಂತ ೧೦೮ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜರು ಶ್ರೀಗಳಿಗೆ ಗೌರವಾನ್ವಿತ ಪ್ರಧಾನ ಮಂತ್ರಿಗಳಿಂದ ಏ.21 ರ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂಪಾಯಿ 100ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದಕ್ಷೇತ್ರ ಫಸ್ಟೇಡ್ ಕವರ್ ನೀಡಿ ಹರಸಿದರು. ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿಯವರು ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಮುನಿಮಹಾರಾಜರ ಆಚಾರ್ಯ ಶತಾಬ್ಧಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣವನ್ನು ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img