ರಜತ ರಥೋತ್ಸವ ಮತ್ತು ಮಹಾಮಸ್ತಕಾಭಿಷೇಕ


Logo

Published Date: 07-May-2024 Link-Copied

ಕಾರ್ಕಳ ತಾಲೂಕಿನ ಶಿರ್ಲಾಲು ಬಸದಿಯ ಭಗವಾನ್ ಶ್ರೀ ಅನಂತನಾಥ ಸ್ವಾಮಿಯ ಮತ್ತು ಮಹಾಮಾತೆ ಶ್ರಿ ಪದ್ಮಾವತಿ ದೇವಿಯ ರಜತ ರಥಯಾತ್ರಾ ಮಹೋತ್ಸವ, ಸಿದ್ಧಗಿರಿ ಕ್ಷೇತ್ರದ ಭ|| ಶ್ರೀ ಆದಿನಾಥ ಸ್ವಾಮಿ ಮತ್ತು ಭ|| ಶ್ರೀ ಭರತ ಕೇವಲೀ ಸ್ವಾಮಿ ಹಾಗೂ ಭ|| ಶ್ರೀ ಬಾಹುಬಲಿ ಕೇವಲಿ ಸ್ವಾಮಿ ಜಿನ ಬಿಂಬಗಳಿಗೆ 108 ಕಲಶಗಳಿಂದ ಅಭಿಷೇಕ ಮತ್ತು ಮಸ್ತಕಾಭಿಷೇಕ ಮಹೋತ್ಸವವು ಶ್ರವಣಬೆಳಗೊಳ ಶ್ರೀ ಜೈನ ಮಠದ ಸ್ವರ್ಗೀಯ ಪ. ಪೂ. ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪ್ರೇರಣೆಯೊಂದಿಗೆ, ಕಾರ್ಕಳ ಶ್ರೀ ಜೈನ ಮಠದ ಪ. ಪೂ. ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವದಲ್ಲಿ ಮತ್ತು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತಭೂಷಣ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ಆಶೀರ್ವಚನದೊಂದಿಗೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ದಿನಾಂಕ 8-5-2024ನೇ ಬುಧವಾರ ಮೊದಲ್ಗೊಂಡು 10-5-2024ನೇ ಶನಿವಾರದಂದು ಸಂಪನ್ನಗೊಳ್ಳಲಿರುವುದು. ಅತಿಶಯ ಕ್ಷೇತ್ರ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಪರಿಸರದಲ್ಲಿ ಭ|| ಶ್ರೀ ಆದಿನಾಥ ಸ್ವಾಮಿ ಮತ್ತು ಭ|| ಶ್ರೀ ಭರತ ಕೇವಲೀ ಸ್ವಾಮಿ ಹಾಗೂ ಭ|| ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿಗಳನ್ನು ‘ಧರ್ಮರತ್ನಾಕರ’ ಶಿರ್ಲಾಲು ದೊಡ್ಡಮನೆ ಸ್ವರ್ಗಿಯ ರತ್ನವರ್ಮ ಪೂವಣಿ ದಂಪತಿಗಳು ದಿನಾಂಕ 18-02-2013ರಲ್ಲಿ ಪ್ರತಿಷ್ಠಾಪಿಸಿದ್ದಾರೆ

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img