ನಾರಾವಿಯಲ್ಲಿ ಮಂಡಲ ಪೂಜೆ


Logo

Published Date: 22-Jun-2024 Link-Copied

ನಾರಾವಿಯಲ್ಲಿ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪ್ರತಿಷ್ಠಾ ಮಹೋತ್ಸವ ನಡೆದು 48 ದಿನಗಳ ಬಳಿಕ ಶನಿವಾರ ಬಸದಿಯಲ್ಲಿ ಮಂಡಲ ಪೂಜೆ ನಡೆಯಿತು. ಕಾರ್ಕಳ ಜೈನಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಆರ್ಯಿಕಾ ಮುಕ್ತಿಶ್ರೀ ಮಾತಾಜಿ ಉಪಸ್ಥಿತರಿದ್ದರು. ಪೂರ್ವಾಹ್ನ ತೋರಣಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಸಾಮೂಹಿಕ ಜಿನಾಭಿಷೇಕ ಮತ್ತು ಋಷಿಮಂಡಲ ಆರಾಧನೆ ನಡೆಯಿತು. ಊರಿನ ಶ್ರಾವಕರು-ಶ್ರಾವಕಿಯರು ಮಂಗಲದ್ರವ್ಯಗಳಿಂದ ಅಭಿಷೇಕ ಮತ್ತು ಆರಾಧನೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಹೊಂದಿದರು. ಹೊರನಾಡು ಜಯಶ್ರೀ ಧರಣೇಂದ್ರ ಕುಮಾರ್ ಮತ್ತು ಬಳಗದವರ ಸುಶ್ರಾವ್ಯ ಸಂಗೀತ ಪೂಜಾಷ್ಟಕ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು. ಪದ್ಮಾವತಿ ದೇವಿ ಆರಾಧನೆ, ನೂತನ ಉಯ್ಯಾಲೆ ಸಮರ್ಪಣೆ, ಅಷ್ಟಾವಧಾನ ಪೂಜೆ ನಡೆಯಿತು. ಊರಿನ-ಪರವೂರಿನ ಶ್ರಾವಕ-ಶ್ರಾವಕಿಯರು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img