ಎಕ್ಸಲೆಂಟ್: ವನಮಹೋತ್ಸವ ಆಚರಣೆ


Logo

Published Date: 06-Jul-2024 Link-Copied

ಕಲ್ಲಬೆಟ್ಟು ವ್ಯಾಪ್ತಿಯ ಗಂಟಾಲ್‌ಕಟ್ಟೆ ಹಾಗೂ ಮಹಾವೀರ ಕಾಲೇಜು ಪರಿಸರದ ವ್ಯಾಪ್ತಿಯ ಜನತೆಗೆ ಪರಿಸರದ ಬಗ್ಗೆ, ಗಿಡ ಮರ, ಸಸಿಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಲು ಗಿಡ ವಿತರಣಾ ಕಾರ್ಯಕ್ರಮವನ್ನು ಎಕ್ಸಲೆಂಟ್ ಸಂಸ್ಥೆಯು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಲೆಕ್ಕಪರಿಶೋಧಕ ಮೊಹಮ್ಮದ್ ಯಾಸಿರ್ ಉಪಸ್ಥಿತರಿದ್ದು, ಪರಿಸರದ ಜಾಗೃತಿಯ ಕನಸನ್ನು ಎಕ್ಸಲೆಂಟ್ ಸಂಸ್ಥೆಯು ಹೊಂದಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎನ್ನುವುದನ್ನು ತಿಳಿಸಿದರು. ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್‌ರವರು ಮಾತನಾಡಿ ಪರಿಸರವನ್ನು ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಲ್ಲಬೆಟ್ಟು ವ್ಯಾಪ್ತಿಯಿಂದ ವೇಣೂರು ಪರಿಸರದ ವ್ಯಾಪ್ತಿಯವರೆಗೂ ಒಂದು ಸಾವಿರದಷ್ಟು ಹಸಿರು ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು. ಈ ಸುಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್‌ನ ಮ್ಯಾನೇಜರ್ ಆಗಿರುವ ರಕ್ಷಿತ್ ಹಾಗೂ ಕರ್ನಾಟಕ ಬ್ಯಾಂಕ್‌ನ ಸಿಬ್ಬಂದಿವರ್ಗದವರು, ರೊಟೇರಿಯನ್ ಆಗಿರುವ ಉದಯ್ ಕುಮಾರ್‌ರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಶೈಕ್ಷಣಿಕ ಸಂಯೋಜಕರಾದ ಶ್ರೀಪ್ರಸಾದ್‌ರವರು ನೆರವೇರಿಸಿ ವಂದಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img