ವರೂರ ನವಗ್ರಹತೀರ್ಥದ ದ್ವಿತೀಯ ಮಹಾಮಸ್ತಕಾಭಿಷೇಕದ ಸರ್ವಾಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸನ್ಮಾನ


Logo

Published Date: 14-Aug-2024 Link-Copied

ಅಂತರಾಷ್ಟ್ರೀಯ ಮಟ್ಟದ ಮತ್ತು ಪ್ರಪಂಚಕ್ಕೆ ಮಾದರಿಯಾಗಲಿರುವ ನವ ತೀರ್ಥoಕರರ ದ್ವಿತೀಯ ಮಹಾಮಸ್ತಕಾಭಿಷೇಕ, ಹಾಗೂ ಪ್ರಪಂಚದ ಮೊದಲ 405 ಅಡಿ ಎತ್ತರದ " ಸುಮೇರು ಪರ್ವತದ" ಲೋಕಾರ್ಪಣೆ ಮತ್ತು ಜಿನಬಿಂಬಗಳ ಪ್ರತಿಷ್ಠಾ ಮಹಾಮಹೋತ್ಸವದ ಸರ್ವಾಧ್ಯಕ್ಷರಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಭೂಷಣ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಯವರನ್ನು ಆಯ್ಕೆ ಮಾಡಿದ ಹಿನ್ನಲೆಯಲ್ಲಿ ಇಂದು ಡಾ. ಹೆಗ್ಗಡೆಯವರ ನಿವಾಸದಲ್ಲಿ ಪರಮಪೂಜ್ಯ ರಾಷ್ಟ್ರಸಂತ ಯುವಾಚಾರ್ಯ ಶ್ರೀ 108 ಗುಣದರಂದಿ ಮುನಿ ಮಹಾರಾಜರ ಹಾಗೂ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಸ್ವಾಮಿಗಳ ಶುಭ ಆಶೀರ್ವಾದದೊಂದಿಗೆ ಮತ್ತು ಸೂಚನೆಯ ಪ್ರಕಾರ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿದ ಡಾ. ಹೆಗ್ಗಡೆಯವರು ನನ್ನ ಮೇಲಿನ ಪ್ರೀತಿ ವಿಶ್ವಾಸದಿಂದ ನನಗೆ ಅಧ್ಯಕ್ಷ ಸ್ಥಾನ ನೀಡಿ ಜವಾಬ್ದಾರಿ ವಹಿಸಿದ ಪೂಜ್ಯರ ಆಶಯದಂತೆ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಸಮಾರಂಭದಲ್ಲಿ ನವಗ್ರಹ ಕ್ಷೇತ್ರದ ವತಿಯಿಂದ ರಾಜೇಶ್ವರಿ ದಿದಿ, ಸಂದೀಪ ಖ್ಯಾತನವರ ಹಾಗೂ ಎ ಜಿ ಎಂ ಸಮೂಹ ಸಂಸ್ಥೆಯ ಸಿಬ್ಬಂದಿ ಮತ್ತು ಜೈನ ಬೋರ್ಡಿಂಗ ಅಧ್ಯಕ್ಷ ವಿದ್ಯಾಧರ ಪಾಟೀಲ, ಸದಸ್ಯರಾದ ದೇವಿಂದ್ರಪ್ಪ ಕಾಗೆನವರ, ವಿಮಲ್ ತಾಳಿಕೋಟಿ ಸಂತೋಷ್ ಮುರಗಿ ಪಾಟೀಲ್, ವಿಮಲನಾಥ ಸಂಗಮಿ, ಪ್ರಶಾಂತ ಬಿಶೆಟ್ಟಿ, ಭರತ ಬಿಳಗಿ ಮತ್ತು ಹುಬ್ಬಳ್ಳಿ ಜೈನ ಸಮಾಜದ ಅಧ್ಯಕ್ಷ ರಾಜೇಂದ್ರ ಬೀಳಗಿ, ಶಾಂತಿನಾಥ ಹೋತಪೇಟೆ ಛಬ್ಬಿ ಹುಬ್ಬಳ್ಳಿ ವರೂರ ಗ್ರಾಮಗಳ ಮತ್ತು ಹಲವಾರು ಜೈನ ಸಮಾಜದ ಮುಖಂಡರು ಭಾಗವಹಿಸಿದ್ದರು. ವರದಿ: ಎಸ್ ಆರ್ ಮಲ್ಲಸಮುದ್ರ

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img