ತೌಳವ ಇಂದ್ರ ಸಮಾಜ(ರಿ.)ದಿಂದ ಆಟಿಡೊಂಜಿ ವಿಹಾರ ಕೂಟ


Logo

Published Date: 19-Aug-2024 Link-Copied

ತೌಳವ ಇಂದ್ರ ಸಮಾಜದ "ಆಟಿಡೊಂಜಿ ವಿಹಾರ ಕೂಟ" ವಿನೂತನವಾದ ಕಾರ್ಯಕ್ರಮ ರವಿವಾರ ಕಾರ್ಕಳ ಶಿರ್ಲಾಲಿನ ಪ್ರಕೃತಿ ಸೌಂದರ್ಯದ ಮಡಿಲಲ್ಲಿರುವ ಸೂಡಿ ಬಸದಿ ಪರಿಸರದಲ್ಲಿ ನಡೆಯಿತು.ಬಸದಿಗೆ ಬನ್ನಿ ಕಾರ್ಯಕ್ರಮದಿಂದ ಪ್ರೇರಿತರಾಗಿ ಈ ಕಾರ್ಯಕ್ರಮ ರೂಪಿಸಲಾಗಿದ್ದು ಸದಸ್ಯರೆಲ್ಲರೂ ಮೂಡಬಿದಿರೆಯಿಂದ ಸೂಡಿಗೆ ವಿಹಾರಗೈದು ಆಟಿ ಕೂಟ ನಡೆಸಿದರು. "ಸೂಡಿ ಬಸದಿ ಸಂದರ್ಶಿಸುವವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎನ್ನುತ್ತಾ "ಪ್ರಸ್ತುತ ಕಾಲಘಟ್ಟದಲ್ಲಿ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ ತಿಳಿಸುವ ಪ್ರಯತ್ನ ಇದಾಗಿದ್ದು ಹಳ್ಳಿ ಪ್ರದೇಶದಲ್ಲಿರುವ ಬಸದಿಗಳನ್ನು ಸಂದರ್ಶಿಸಿ ಸ್ಥಳೀಯರೊಡನೆ ಒಂದುದಿನ ಕಳೆದು ಸಂಪರ್ಕ ಕೊಂಡಿಯನ್ನು ಹೆಚ್ಚಿಸಿಕೊಳ್ಳುವುದು ಒಂದು ಒಳ್ಳೆಯ ಕಾರ್ಯಕ್ರಮ ಅಲ್ಲದೆ ಸ್ಥಳೀಯ ಆಡಳಿತ ಮಂಡಳಿಯವರ ಕಾರ್ಯಕ್ಕೆ ಪ್ರೋತ್ಸಾಹ ಹಾಗೂ ಬೆಂಬಲ ಕೊಟ್ಟಂತೆಯೂ ಆಗುತ್ತದೆ "ಎಂದು ಮುಖ್ಯ ಅತಿಥಿಯಾದ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದ ಗುಣಪಾಲ ಕಡಂಬ ಇಂದಿಲ್ಲಿ ಹೇಳಿದರು. ಸೂಡಿ ಬಸದಿ ಆಡಳಿತ ಮಂಡಳಿ ಕಾರ್ಯದರ್ಶಿ ಸೂರಜ್ ಜೈನ್ ರವರು ಮಾತನಾಡುತ್ತಾ ತೌಳವ ಇಂದ್ರ ಸಮಾಜದ ವಿನೂತನ ವಿಶಿಷ್ಟ ಶೈಲಿಯ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ ವೇದಿಕೆಯಲ್ಲಿದ್ದು ಶುಭ ಹಾರೈಸಿದರು. ತೌಳವ ಇಂದ್ರ ಸಮಾಜದ ಅಧ್ಯಕ್ಷರಾದ ಜ್ಞಾನಚಂದ್ರ ಇಂದ್ರರು ಪ್ರಾಸ್ತಾವಿಕ ಮಾತು ಆಡಿ, ಅತಿಥಿಗಳನ್ನು ಸ್ವಾಗತಿಸಿದರು. ನಿಕಟ ಪೂರ್ವ ಅಧ್ಯಕ್ಷರಾದ ಅರ್ಕಕೀರ್ತಿ ಇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೊದಲಿಗೆ ಬಸದಿಯ ಶ್ರೀ ಆದಿನಾಥ ಸ್ವಾಮಿಗೆ ಕ್ಷೀರಾಭಿಷೇಕ ಪೂಜೆಯನ್ನು ನಯನ ಇಂದ್ರರು ನೆರವೇರಿಸಿದ ಬಳಿಕ ಬಸದಿಯ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಸದಸ್ಯರಿಗೆ ವಿವಿಧ ಮನರಂಜನಾತ್ಮಕ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಮದ್ಯಾಹ್ನ ಗಂಜಿ ಚಟ್ನಿಯೂಟ, ಉಪಹಾರಕ್ಕೆ ಬಸಳೆಪುಂಡಿ, ಅರಸಿನ ಎಲೆಕಡುಬು ಮುಂತಾದ ಸಾಂಪ್ರದಾಯಿಕ ತಿಂಡಿಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ಅಲ್ಲಿಂದ ವಿಹಾರ ನಿರ್ಮಾಣ ಹಂತದಲ್ಲಿರುವ ಮೂಡಾರು ಬಸದಿಗೆ ತೆರಳಿ ದರ್ಶನ ಪಡೆದು ಮುಂದುವರಿದು ಹತ್ತಿರದ ಜಲಪಾತ ವೀಕ್ಷಣೆಯೂ ನಡೆಯಿತು. ಮೇಘನಾ ಪ್ರಾರ್ಥನೆ ನೆರವೇರಿಸಿದರು, ತೌಳವ ಇಂದ್ರ ಸಮಾಜದ ಉಪಾಧ್ಯಕ್ಷರಾದ ಅಕ್ಷಯ ಕುಮಾರ್ ಮಳಲಿಯವರು ಕಾರ್ಯಕ್ರಮ ಸಂಯೋಜಿಸಿ, ನಿರ್ವಹಣೆ ಮಾಡಿದರು, ಕಾರ್ಯದರ್ಶಿ ಅಭಯಕುಮಾರ್ ಬಿ. ಧನ್ಯವಾದಗಳನ್ನು ಅರ್ಪಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img