ಭಾರತಿಯ ಜೈನ್ ಮಿಲನ್ ವಲಯ 8 ರ ವಾರ್ಷಿಕ ಮಹಾಸಭೆ


Logo

Published Date: 19-Aug-2024 Link-Copied

ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ ಬೆಂಗಳೂರಿನ ಮಂಜುನಾಥ ಸ್ವಾಮಿ ಕಲಾಮಂಟಪದಲ್ಲಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಾಮೂಹಿಕ ಪಂಚ ನಮಸ್ಕಾರದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ಸುದರ್ಶನ್ ಜೈನ್, ನಿರ್ದೇಶಕರಾದ B. ಸೋಮಶೇಖರ ಶೆಟ್ಟಿ ಹಾಗೂ ಇತರ ಉಪಾಧ್ಯಕ್ಷರು, ನಿರ್ದೇಶಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು, ಜೈನ್ ಮಿಲನ್ ರಾಷ್ಟೀಯ ಉಪಾಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು, ಸಭಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರು ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಜಿನಭಜನೆ ಕಾರ್ಯಕ್ರಮದ ಕುರಿತು ಮಾರ್ಗದರ್ಶನ ನೀಡಿದರು. ವಲಯಾಧ್ಯಕ್ಷರಾದ ಯುವರಾಜ್ ಭಂಡಾರಿ ಅವರು ಎಲ್ಲಾ ವಿಭಾಗಗಳ ಚಟುವಟಿಕೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು, ಕಾರ್ಯದರ್ಶಿ ರತ್ನರಾಜ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಲಯದ ಪದಾಧಿಕಾರಿಗಳು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿದರು, ಶಾಂತಿಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img