ಶ್ರೀ ಜೈನ ಮಠ, ದಾನಶಾಲೆಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು


Logo

Published Date: 11-Sep-2024 Link-Copied

ಕಾರ್ಕಳ: ಶ್ರೀ ಜೈನ ಮಠದ ಪರಮ ಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಿಂಹ ಮಾಸದ ಮಂಗಳವಾರದ ವಿಶೇಷ ಪೂಜಾ ಕಾರ್ಯಕ್ರಮಗಳು ಕಾರ್ಕಳದ ಶ್ರೀ ಜೈನ ಮಠದಲ್ಲಿ ಜರುಗಿದವು. ವಿಶೇಷ ಆಮಂತ್ರಿತರಾದ ಶ್ರೀ ಕ್ಷೇತ್ರ ಕೊಲ್ಲಾಪುರ, ಶ್ರೀ ದಿಗಂಬರ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ತಮ್ಮ ಪಾವನ ಸಾನಿಧ್ಯವನ್ನು ನೀಡಿದ ಈ ಪುಣ್ಯ ಸಂದರ್ಭದಲ್ಲಿ ಕಾರ್ಕಳ ಶ್ರೀ ಮಠದ ವತಿಯಿಂದ ಪೂಜ್ಯರನ್ನು ಮಠಾಧೀಶರು ಕಾರ್ಕಳದ ಸಮಸ್ತ ಜೈನ ಬಾಂಧವರ ಪರವಾಗಿ ಅತ್ಯಂತ ಪ್ರೀತಿಯಿಂದ ಗೌರವ ಸಮರ್ಪಣೆ ಮಾಡಿದರು. ಈ ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ ಇವರು ಮಾಡಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img