ನಲ್ಲೂರು ಜಗತ್ಪಾಲ ಕಡಂಬರಿಗೆ ಸನ್ಮಾನ
Published Date: 13-Feb-2025 Link-Copied
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ 'ಹಿರಿಯ ರೆಡೆಗೆ ಸಾಹಿತ್ಯ ನಡಿಗೆ' ಕಾರ್ಯಕ್ರಮದಲ್ಲಿ ಬಜಗೋಳಿ ನಲ್ಲೂರು ಜಗತ್ಪಾಲ ಕಡಂಬರಿಗೆ ಕನ್ನಡ ನಾಡು ನುಡಿಗೆ ಸಲ್ಲಿಸಿದ ಸೇವೆಗಾಗಿ ನಲ್ಲೂರು ಗುಣಲಲಿತ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಕಳ ತಾಲೂಕು ಸಮ್ಮೇಳನದ ಸಭಾಧ್ಯಕ್ಷರಾದ ಕೆ ಗುಣಪಾಲ ಕಡಂಬ, ಕ.ಸಾ.ಪ. ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಉದ್ಯಮಿ ಬಜಗೋಳಿ ಡಾ ರವೀಂದ್ರ ಶೆಟ್ಟಿ, ನಿತ್ಯಾನಂದ ಪೈ, ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ರೂಪ ರವೀಂದ್ರ ಶೆಟ್ಟಿ, ನಲ್ಲೂರು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ನಾಗೇಶ್, ದೇವದಾಸ ಕೆರೆಮನೆ ಮತ್ತಿತರರು ಈ ಸಂದರ್ಭದಲ್ಲಿದ್ದರು.