Article Image

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ- ಸಮಾಲೋಚನಾ ಸಭೆ

Article Image

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ- ಸಮಾಲೋಚನಾ ಸಭೆ

ಬೆಂಗಳೂರು ಕೇಂದ್ರ ಕಚೇರಿಯಲ್ಲಿ ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ನಿಸಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳಜೈನ್ ರವರ ನೇತ್ರತ್ವದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶೇಕ್ ಲತಿಫ್ ರವರ ಉಪಸ್ಥಿತಿಯಲ್ಲಿ ಇಂದು (ಜು. 21) ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು ಸಮಾಜದ ಪ್ರಮುಖರು ಹಾಗೂ ಡಾ. ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಧನ ಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ಜೈನ್ ದೆಪ್ಪುನಿ ಮುಂತಾದವರು ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರಮುಖವಾಗಿ ತಸ್ತಿಕ್ ಕೊಡುತ್ತಿರುವ ಬಸದಿಗಳಿಗೆ ಸಹಾಯಕ ಪುರೋಹಿತರಿಗೂ ಗೌರವಧನ ನೀಡಬೇಕು, ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಕೊಡಬೇಕು, ಆಯೋಗದ ಕಚೇರಿಗಳಲ್ಲಿ ಸಮಾಜದವರಿಗೆ ಉದ್ಯೋಗ ಅವಕಾಶಗಳನ್ನು ನೀಡಬೇಕು, ಬಸದಿಗಳ ದಾಖಲೆಗಳನ್ನು ಸರಿಪಡಿಸಲು ಸಹಕರಿಸಬೇಕು, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮುಂತಾದ ಹಲವಾರು ವಿಷಯಗಳನ್ನು ಅಧ್ಯಕ್ಷರ ಗಮನಕ್ಕೆ ತಂದು ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಸಲ್ಲಿಸಲಾಯಿತು.

ಹೇಮಾವತಿ ವೀ. ಹೆಗ್ಗಡೆಯವರಿಗೆÀ ಗೌರವ ಡಾಕ್ಟರೇಟ್ ಪ್ರದಾನ

Article Image

ಹೇಮಾವತಿ ವೀ. ಹೆಗ್ಗಡೆಯವರಿಗೆÀ ಗೌರವ ಡಾಕ್ಟರೇಟ್ ಪ್ರದಾನ

ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಜ್ಞಾನವಿಕಾಸ’ ಕಾರ್ಯಕ್ರಮದ ಅಧ್ಯಕ್ಷರಾಗಿ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಸೇವಾ ಚಟುವಟಿಕೆಗಳಿಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಜಾಗತಿಕ ಮನ್ನಣೆ ಪಡೆದ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಯಾದ ‘ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬ್ಯುಸಿನೆಸ್ ಸ್ಕೂಲ್’ ಇವರು ‘ಗೌರವ ಡಾಕ್ಟರೇಟ್’ ಪದವಿಯನ್ನು ನೀಡಿ ಗೌರವಿಸಿದರು. ಡನ್‌ಸ್ಟರ್ ಬಿಸಿನೆಸ್ ಸ್ಕೂಲ್ ಇದೊಂದು ಅಂತಾರಾಷ್ಟ್ರೀಯ ಮಟ್ಟದ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ರಾಜ್ಯಮಟ್ಟದ ಪುನಶ್ಚೇತನಾ ಕಾರ್ಯಾಗಾರದಲ್ಲಿ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನ ಅಧ್ಯಕ್ಷರಾದ ಫಿಲಿಪ್ ಥೆವೆನೋಟ್‌ರವರು ಆನ್‌ಲೈನ್ ಮೂಲಕ ಪದವಿಯನ್ನು ಪ್ರಕಟಿಸಿದರು. ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನ ಪರವಾಗಿ ಅವಿನಾಶ್ ಗುಪ್ತಾರವರು ಗೌರವ ಡಾಕ್ಟರೇಟ್ ಪದವಿಯನ್ನು ಧರ್ಮಸ್ಥಳದಲ್ಲಿ ಪ್ರದಾನಿಸಿದರು. ಈ ಸಂದರ್ಭದಲ್ಲಿ ಅವಿನಾಶ್ ಗುಪ್ತಾರವರು ಮಾತಾನಾಡುತ್ತಾ ‘ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರನ್ನು ಗೌರವಿಸುವ ಈ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳುವುದು ನಮ್ಮ ಸಂಸ್ಥೆಗೆ ಹೆಮ್ಮೆ ಹಾಗೂ ಧನ್ಯತೆಯ ಕ್ಷಣವಾಗಿದೆ. ನಾವಿಲ್ಲಿ ಕೇವಲ ಒಬ್ಬ ವ್ಯಕ್ತಿಯನ್ನು ಗೌರವಿಸುತ್ತಿಲ್ಲ. ಬದಲಾಗಿ ಅಸಂಖ್ಯಾತ ಜನರ ಬದುಕಿನಲ್ಲಿ ಬೆಳಕಾಗಿ, ಅವರ ಜೀವನವನ್ನೇ ಧನ್ಯಗೊಳಿಸಿದ ಮಹೋನ್ನತ ಚೇತನವೊಂದರ ಸಾಧನೆಯನ್ನು ಸಂಭ್ರಮಿಸುತ್ತಿದ್ದೇವೆ. ಅಪರೂಪಕ್ಕೊಮ್ಮೆ ನಮಗೆ ಇಂತಹ ಅಸಾಧಾರಣ ವ್ಯಕ್ತಿಗಳು ಸಿಗುತ್ತಾರೆ. ಇವರು ನಮಗೆ ಅತ್ಯುನ್ನತವಾದ ಜ್ಞಾನ ಅಂದರೆ ಕೇವಲ ಅಕ್ಷರ ಜ್ಞಾನ ಮಾತ್ರವಲ್ಲ, ಬದಲಾಗಿ ಮಾನವನ ಬದುಕನ್ನು ಸುಧಾರಿಸುವ ಶಕ್ತಿ ಇದೆ ಎಂಬುದನ್ನು ನೆನಪಿಸುತ್ತಾರೆ. ಅಂತಹ ಅಸಾಧಾರಣ ವ್ಯಕ್ತಿತ್ವವೇ ಹೇಮಾವತಿ ವೀ. ಹೆಗ್ಗಡೆಯವರು. ಕಳೆದ ನಾಲ್ಕು ದಶಕಗಳಿಂದ ಗ್ರಾಮೀಣ ಮಟ್ಟದಲ್ಲಿ ಸುಸ್ಥಿರವಾದ ಸಾಮಾಜಿಕ ಪರಿವರ್ತನೆಯನ್ನು ನಿರಂತರವಾಗಿ ಹೇಗೆ ತರಬಹುದು ಎಂಬುವುದನ್ನು ಮಾತೃಶ್ರೀಯವರು ಅತ್ಯಂತ ಯಶಸ್ವಿಯಾಗಿ ತೋರಿಸಿಕೊಟ್ಟಿದ್ದಾರೆ. ಜಗತ್ತು ಮಹಿಳಾ ಸಬಲೀಕರಣ, ಆರ್ಥಿಕತೆ, ಸಾಮಾಜಿಕ ಉದ್ಯಮಶೀಲತೆ ಮತ್ತು ಸಮಗ್ರ ಅಭಿವೃದ್ಧಿಯಂತಹ ಪರಿಕಲ್ಪನೆಗಳನ್ನು ಒಪ್ಪಿಕೊಳ್ಳುವುದಕ್ಕಿಂತ ದಶಕಗಳ ಹಿಂದೆಯೆ ರಾಜ್ಯದಾದ್ಯಂತ ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಇವರು ಕೆಲಸವನ್ನು ಮಾಡಿದ್ದಾರೆ. ಇವರ ಉದಾತ್ತ ಆದರ್ಶಗಳಿಗೆ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಸಾಕ್ಷಿಯಾಗಿದೆ. ಗ್ರಾಮೀಣ ಮಹಿಳೆಯರು ಎದುರಿಸುತ್ತಿದ್ದ ವಾಸ್ತವಿಕ ಸಮಸ್ಯೆಗಳಿಗೆ ಪರಿಹಾರವಾಗಿ ನಾಲ್ಕು ದಶಕಗಳ ಹಿಂದೆ ‘ಜ್ಞಾನವಿಕಾಸ’ ಎಂಬ ಕಾರ್ಯಕ್ರಮವನ್ನು ಆರಂಭಿಸಿದರು. ಅದು ಇಂದು ಹೆಮ್ಮರವಾಗಿ ಬೆಳೆದು ವಾತ್ಸಲ್ಯ, ಮಾಸಾಶನ ಮುಂತಾದ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿದೆ. ಜ್ಞಾನವಿಕಾಸದಿಂದಾಗಿ ಹಳ್ಳಿಯ ಮಹಿಳೆಯರಲ್ಲಿ ಮಹತ್ತರ ಬದಲಾವಣೆಯಾಗಿದೆ. ಆತ್ಮವಿಶ್ವಾಸ, ಸ್ವಾಭಿಮಾನದಿಂದ ಬದುಕು ಸಾಗಿಸಲು ಸಾಧ್ಯವಾಗಿದೆ. ಸಿರಿ ಗ್ರಾಮೋದ್ಯೋಗ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿದೆ. ಪರಿಸರ, ಜಲ ಸಂರಕ್ಷಣೆಯ ನಿಟ್ಟಿನಲ್ಲೂ ಕೆಲಸ ಮಾಡಿದ್ದಾರೆ. ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಇವರ ಕೊಡುಗೆ ಅಪೂರ್ವವಾದುದು. ಮಾತೃಶ್ರೀಯವರು ಸರ್ವ ಆದರ್ಶಗಳಿಗೆ ಮಾದರಿಯಾಗಿದ್ದಾರೆ. ಮಹಿಳಾ ಸಬಲೀಕರಣ, ಗ್ರಾಮಾಭಿವೃದ್ಧಿ ಸಮುದಾಯದ ನಾಯಕತ್ವ ಮತ್ತು ಮಾನವೀಯ ಸೇವೆಗೆ ಇವರು ನೀಡಿರುವ ಅಸಾಧಾರಣ ಕೊಡುಗೆಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಅನ್ನು ನೀಡಿ ಗೌರವಿಸಲಾಗಿದೆ’ ಎಂದರು. ಹೆಗ್ಗಡೆಯವರು, ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿಗಳಾದ ಡಾ. ಹರೀಶ್ ಕೃಷ್ಣ ಸ್ವಾಮಿ, ಉದಯಕುಮಾರ್ ಶೆಟ್ಟಿ, ಸಂಪತ್ ಸಾಮ್ರಾಜ್ಯ, ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದÀ ಅನಿಲ್ ಕುಮಾರ್ ಎಸ್.ಎಸ್., ಯೋಜನೆಯ ಹಣಕಾಸು ಅಧಿಕಾರಿಗಳಾದ ಶಾಂತಾರಾಮ್ ಆರ್. ಪೈ., ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರುಗಳು, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. 1972 ಡಿಸೆಂಬರ್ 27ರಂದು ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿಯಾದ ಹೇಮಾವತಿ ವೀ. ಹೆಗ್ಗಡೆಯವರು ಮಹಿಳಾ ಸಬಲೀಕರಣಕ್ಕಾಗಿ, ಸಮಾಜದ ಅಸಹಾಯಕರಿಗೆ ನೆರವು ನೀಡುವ ನಿಟ್ಟಿನಲ್ಲಿ ಕೈಗೊಂಡ ಕೆಲಸಗಳ ಪಟ್ಟಿ ಬಹುದೊಡ್ಡದು. ಧರ್ಮಸ್ಥಳದ ಯುವತಿಯರನ್ನೇ ಸೇರಿಸಿಕೊಂಡು ಆರಂಭಿಸಿದ ‘ಕನ್ಯಾಕುಮಾರಿ ಯುವತಿ ಮಂಡಲ ಮುಂದೆ ಅವರ ಸಮಾಜಸೇವೆಗೆ ಮುನ್ನುಡಿ ಬರೆಯಿತು. ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರನ್ನು ಸ್ವಉದ್ಯೋಗಿಗಳನ್ನಾಗಿಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕಾರ್ಯಕ್ರಮದ ಆರಂಭ, ಕೌಟುಂಬಿಕ ಸಮಸ್ಯೆಗಳ ಪರಿಹಾರಕ್ಕಾಗಿ ‘ಗೆಳತಿ ಕೌಟುಂಬಿಕ ಸಲಹಾ ಕೇಂದ್ರ’ ಗ್ರಾಮೀಣ ಮಹಿಳೆಯರಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸುವ, ಬೆಳೆಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕೇಂದ್ರಗಳಲ್ಲಿ ಗ್ರಂಥಾಲಯಗಳ ಸ್ಥಾಪನೆ, ಮಹಿಳೆಯರು ನೀರಿಗಾಗಿ ಪಡುತ್ತಿರುವ ಬವಣೆಯನ್ನು ನೀಗಿಸಲು ರಾಜ್ಯದ ಕೆರೆಗಳನ್ನು ಹೂಳೆತ್ತುವ ಕಾರ್ಯಕ್ರಮ, ರಾಜ್ಯದಲ್ಲಿರುವ ಅಸಹಾಯಕರಿಗೆ ನೆರವು ನೀಡುವ ನಿಟ್ಟಿನಲ್ಲಿ ‘ವಾತ್ಸಲ್ಯ’, ‘ಮಾಸಾಶನ’ ಕಾರ್ಯಕ್ರಮ ಹೀಗೆ ಅವರು ಕೈಗೊಂಡ ಕಾರ್ಯಕ್ರಮಗಳು ಒಂದೆರಡಲ್ಲ. ಇವರು ಕಲಾಪ್ರಿಯರೂ ಹೌದು. ಧರ್ಮಸ್ಥಳದ ಸಿಬ್ಬಂದಿಗಳನ್ನು ಸೇರಿಸಿ ಕಟ್ಟಿದ ‘ರಂಗಶಿವ ಕಲಾ ಬಳಗ’ ಈಗಾಗಲೇ ಹಲವಾರು ನಾಟಕಗಳನ್ನು ಪ್ರದರ್ಶಿಸಿ ಕಲಾಭಿಮಾನಿಗಳ ಮನೆಗೆದ್ದಿದೆ. ಹಾಗೆಯೇ ಉಜಿರೆಯಲ್ಲಿ ‘ಸಮೂಹ’ ಸಾಂಸ್ಕೃತಿಕ ಕೇಂದ್ರ ವನ್ನು ಸ್ಥಾಪಿಸುವ ಮೂಲಕ ಉಜಿರೆಯ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕಾರಣೀಕರ್ತರಾಗಿದ್ದಾರೆ. ಓದು ಇವರ ಹವ್ಯಾಸಗಳಲ್ಲೊಂದು. ನಿರಂತರದ ‘ಗೆಳತಿ’, ಮಂಜುವಾಣಿಯ ‘ಮಗಳಿಗೊಂದು ಪತ್ರ’ ಅಂಕಣದ ಮೂಲಕವೂ ಇವರು ಚಿರಪರಿಚಿತರು. ಇವರು ಕೈಗೊಂಡಿರುವ ಕೆಲಸ ಕಾರ್ಯಗಳು, ಸೇವೆಗಳು ನಾಡಿಗೆ ಮಾದರಿಯಾಗಿದೆ.

ಪದ್ಮಾಂಬ ಮಹಿಳಾ ಸಮಾಜ: ಮಾಸಿಕ ಸಭೆ

Article Image

ಪದ್ಮಾಂಬ ಮಹಿಳಾ ಸಮಾಜ: ಮಾಸಿಕ ಸಭೆ

ದಾವಣಗೆರೆ: ಪದ್ಮಾಂಬ ಮಹಿಳಾ ಸಮಾಜದ ವತಿಯಿಂದ, ಶ್ರೀ 1008 ಪಾರ್ಶ್ಶ್ವನಾಥ ಜಿನಮಂದಿರದ ಆವರಣದಲ್ಲಿ, ನಡೆದ ಸಮಾರಂಭದಲ್ಲಿ D.R.M. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರೂಪಶ್ರೀರವರು ದಾವಣಗೆರೆಯಲ್ಲಿ ಪ್ರಾಧ್ಯಾಪಕರಾಗಿ,ವಿಭಾಗ ಮುಖ್ಯಸ್ಥರಾಗಿ, ಪ್ರಾಶುಂಪಾಲರಾಗಿ ಅತ್ಯುತ್ತಮ ಸೇವೆ ಮತ್ತು ದಾವಣಗೆರೆಯ ಜೈನ ಸಮಾಜದ ಜೊತೆ ನಿಕಟ ಬಾಂಧವ್ಯವನ್ನು ಹೊಂದಿರುವುದನ್ನು ಗಮನಿಸಿ "ಪದ್ಮಾಂಬ ಮಹಿಳಾ ಸಾಧನಾ ಪ್ರಶಸ್ತಿ"ಯನ್ನು ನೀಡಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಮಹಿಳೆಯರ ಸಬಲೀಕರಣ ಮತ್ತು ಮಹಿಳಾ ಸಮಾಜಕ್ಕೆ ಮಹಿಳೆಯರ ಕೊಡುಗೆ ಇದರ ಬಗ್ಗೆ ತುಂಬಾ ವಿವರವಾಗಿ ಚೆನ್ನಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪದ್ಮಾಂಬ ಮಹಿಳಾ ಸಮಾಜದ ಅಧ್ಯಕ್ಷರಾದ ವರ್ಷ ಸುಧೀರ್, ಕಾರ್ಯದರ್ಶಿಯಾದ ಸುಹಾಸಿನಿ ದೀಪಕ್, ಖಜಾಂಚಿಯಾದ ಚೇತನ ಪದ್ಮರಾಜ್ ಹಾಗೂ ಗೌರವಾಧ್ಯಕ್ಷರಾದ ಸರಸ್ವತಮ್ಮ ಬೆತುರ, ಸಂಸ್ಥಾಪಕರಾದ ಉಷಾ ಜಯಪ್ರಕಾಶ್ ಮತ್ತು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಪದ್ಮ ಪ್ರಕಾಶ್ ಹಾಗೂ ಕಾರ್ಯದರ್ಶಿಯಾದ ಹರ್ಷ ನಾಗರಾಜ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯೆಯರು ಉಪಸ್ಥಿತರಿದ್ದರು.

ಹುಬ್ಬಳ್ಳಿಯ ಬ್ರಹ್ಮಕುಮಾರ ಬೀಳಗಿರವರಿಗೆ ಚಾಣಕ್ಯಶ್ರೀ ಪುರಸ್ಕಾರ

Article Image

ಹುಬ್ಬಳ್ಳಿಯ ಬ್ರಹ್ಮಕುಮಾರ ಬೀಳಗಿರವರಿಗೆ ಚಾಣಕ್ಯಶ್ರೀ ಪುರಸ್ಕಾರ

ಹುಬ್ಬಳಿಯ ಹೆಸರಾಂತ ವ್ಯಾಪಾರೋಧ್ಯಮಿ, ಸರಳ ಸಜ್ಜನಿಕೆಯ ಸ್ನೇಹಜೀವಿ, ಅಜಾತ ಶತ್ರು ಹಾಗೂ ಜೈನ ಸಮಾಜದ ಗಣ್ಯರು, ಸಕ್ರಿಯ ಸಮಾಜಸೇವೆಯಲ್ಲಿ ಕ್ರೀಯಾಶೀಲರಾದ 80 ರ ಹರೆಯದ ಬ್ರಹ್ಮಕುಮಾರ ಬೀಳಗಿ ಇವರ ಸಹಸ್ರ ಚಂದ್ರದರ್ಶನ ಅಭಿಮಾನೋತ್ಸವ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮ ವೈಭವದಿಂದ ಮಾತ್ರ ಕೂಡಿರಲಿಲ್ಲ ಇದು ಇತರರಿಗೂ ಒಂದು ಅನುಕರಣಿಯ ಆದರ್ಶದ ಪಾಠ ಎನ್ನುವ ರೀತಿಯಲ್ಲಿ ಪರೋಕ್ಷವಾಗಿ ಸಂದೇಶ ರವಾನಿಸಿದಂತಿತ್ತು ಯಾಕಂದರೆ ಬ್ರಹ್ಮಕುಮಾರ ಬೀಳಗಿ ಇವರು 80 ರ ಹರೆಯದಲ್ಲೂ ಅವರ ಜೀವನ ಶೈಲಿ, ಯುವಕರನ್ನು ನಾಚಿಸುವ ಜೀವನೋತ್ಸಾಹ, ಕ್ರಮಬದ್ಧ ಶಿಸ್ತಿನ ದಿನಚರಿ, ಆರೋಗ್ಯ ಭಾಗ್ಯ ಇವೆಲ್ಲಕ್ಕಿಂತಲೂ ಮುಖ್ಯವಾಗಿ ಇವರ ಸಮಾಜಮುಖಿ ಕಲ್ಯಾಣ ಕಾರ್ಯಗಳು ನಿಜಕ್ಕೂ ಮೆಚ್ಚಬೇಕು. ಈ ಇಳಿ ವಯಸ್ಸಿನಲ್ಲೂ ನಿಮ್ಮ ಉತ್ಸಾಹಕ್ಕೆ ಚಿರಯೌವನ ಮತ್ತು ಆರೋಗ್ಯದ ಗುಟ್ಟೇನು? ಎಂದು ಯಾರಾದರೂ ಕೇಳಿದರೆ ಅದಕ್ಕೆ ಅವರು ಕೊಡುವ ಉತ್ತರ - ನಾನು ಎಲ್ಲರನ್ನೂ ಆತ್ಮೀಯವಾಗಿ ಪ್ರೀತಿಸುತ್ತೇನೆ ಯಾರನ್ನೂ ದ್ವೇಷಿಸುವದಿಲ್ಲ ಪ್ರತಿಯೊಬ್ಬರೂ ಒಳ್ಳೆಯವರೇ ಅವರಲ್ಲಿರುವ ಒಳ್ಳೆಯ ಗುಣಗಳನ್ನು ಸ್ವೀಕರಿಸುತ್ತೇನೆ, ಯಾರನ್ನೂ ನಿಂದಿಸುವದಿಲ್ಲ, ಸಹಾಯ, ಸಹಕಾರ, ಪರೋಪಕಾರ ದಾನ ಧರ್ಮ, ಮಾಡುವ ಮನೋಭಾವನೆ ಧಾರ್ಮಿಕ ಚಿಂತನೆ ಮೂಲಕ ಸಮಾಜದ ಕೆಲಸದಲ್ಲಿ ದೇವರನ್ನು ಕಾಣುವ ಪ್ರವೃತ್ತಿಯನ್ನು ಅಳವಡಿಸಿಕೊಂಡಿದ್ದೇನೆ ಪ್ರತಿಯೊಂದು ಕೆಲಸವನ್ನು ಇಷ್ಟಪಟ್ಟು ಮಾಡುತ್ತೇನೆ " ಎನ್ನುತ್ತಾರೆ. ಇದೇ ಇವರ ದೀರ್ಘ ಜೀವನೋತ್ಸಾಹದ ಸೂತ್ರ. ಇತ್ತೀಚಿನ ಆಧುನಿಕ ಪರಿಸರದಲ್ಲಿ ನಿತ್ಯ ಒತ್ತಡದ ಬದುಕು ಮತ್ತು ಅನಾರೋಗ್ಯ ಜೀವನಶೈಲಿ ಮಧ್ಯದಲ್ಲೂ ನಾವು ಹೇಗೆ ಉತ್ಸಾಹದಿಂದ ಬದುಕಬೇಕು ಎನ್ನುವದನ್ನು ಮೌಲ್ಯಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಎನ್ನುವದನ್ನು ಇವರಿಂದ ಕಲಿಯಬೇಕು ಎಂದು ಅನೇಕರು ಅಂದುಕೊಳ್ಳುತ್ತಾರೆ. ಇದೇ ಸಂದರ್ಭದಲ್ಲಿ ಹುಬ್ಬಳ್ಳಿಯ ಶ್ರೀ ಶಾಂತಿನಾಥ ತೀರ್ಥಂಕರ ದಿಗಂಬರ ಜೈನ ಬಸದಿ ಟ್ರಸ್ಟ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಮಹಾವೀರ ಗೊಂಗಡಿ ಸೇರಿ ಪದಾಧಿಕಾರಿಗಳು ಇವರ ಸಮಾಜ ಸೇವೆಯನ್ನು ಗುರುತಿಸಿ "ಚಾಣಕ್ಯಶ್ರೀ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಿದರು. ಮಾಜಿ ಮುಖ್ಯಮಂತ್ರಿ, ಸಂಸದರಾದ ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ, ಶಾಸಕ ಅರವಿಂದ ಬೆಲ್ಲದ ರಾಜಕೀಯ ಮುಖಂಡರಾದ ಮಹೇಶ್ ತೆಂಗಿನಕಾಯಿ,ಶಂಕರಣ್ಣ ಮುನವಳ್ಳಿ, ಮೋಹನ್ ಲಿಂಬಿಕಾಯಿ, ಖ್ಯಾತ ಪತ್ರಕರ್ತ ಅಜಿತ್ ಹನಮಕ್ಕನವರ ಮುಂತಾದವರು ಭಾಗವಹಿಸಿ ಶುಭಕೋರಿ ಅಭಿನಂದಿಸಿದರು. ಎನ್ ಆರ್ ಪುರ ಜೈನ ಮಠದ ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಮಹಾಸ್ವಾಮಿಗಳು, ಹೊಂಬುಜದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಸೇರಿದಂತೆ ಎಲ್ಲಾ ಜೈನ ಮಠಗಳ ಸ್ವಾಮೀಜಿಯವರು ಮತ್ತು ಮಾಜಿ ಮುಖ್ಯಮಂತ್ರಿ ಯಡೆಯೂರಪ್ಪ ಸೇರಿ ಹಲವು ರಾಜಕೀಯ ಗಣ್ಯರು ಶುಭ ಸಂದೇಶ ಕಳಿಸುವ ಮೂಲಕ ಶುಭಾಶಯ ತಿಳಿಸಿದ್ದಾರೆ. ವರದಿ : ಎಸ್ ಆರ್ ಮಲ್ಲಸಮುದ್ರ

ಸಂತಶಿರೋಮಣಿ ಆಚಾರ್ಯ ವಿದ್ಯಾಸಾಗರ ಮಹಾರಾಜರ 59ನೇ ದೀಕ್ಷಾ ದಿನ ಆಚರಣೆ

Article Image

ಸಂತಶಿರೋಮಣಿ ಆಚಾರ್ಯ ವಿದ್ಯಾಸಾಗರ ಮಹಾರಾಜರ 59ನೇ ದೀಕ್ಷಾ ದಿನ ಆಚರಣೆ

ದಿಗಂಬರ ಜೈನ ಸಮಾಜದ ಅತಿದೊಡ್ಡ ನಕ್ಷತ್ರ ಎಂದೇ ಹೆಸರಾಗಿದ್ದ, ವಿಶ್ವ ವಂದನೀಯ ಆಚಾರ್ಯ ಶ್ರೀ 108 ವಿದ್ಯಾಸಾಗರ್ ಮಹಾರಾಜರ 59ನೇ ದೀಕ್ಷಾ ದಿನ ಆಚರಣೆಯು ಧಾರವಾಡ ಚಿಕ್ಕಮಲ್ಲಿಗವಾಡ ಹೊರವಲಯದ ಹಿರಿಯ ನ್ಯಾಯಾಧೀಶ ರಾಜಶೇಖರ್ ತಿಳಗಂಜಿ ಇವರ ನಿವಾಸದಲ್ಲಿ ಪರಮಪೂಜ್ಯ ಆಚಾರ್ಯಶ್ರೀ ಪುಣ್ಯಸಾಗರ ಮಹಾರಾಜರ ಮತ್ತು ಪ.ಪೂ ಮುನಿಶ್ರೀ ಪುರಾಣ ಸಾಗರ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ವೈಭವದಿಂದ ಜರುಗಿತು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಶ್ರಾವಕ ಶ್ರಾವಕಿಯರಿಂದ ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಂತರ ಪೂಜಾ ಅಷ್ಟಕ ಜರುಗಿತು. ಹಿರಿಯ ನ್ಯಾಯಾಧೀಶ ರಾಜಶೇಖರ್ ತಿಳಗಂಜಿ ಮತ್ತು ಪರಿವಾರದವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ತೀರ್ಥಂಕರರನ್ನು ನಾವು ನೋಡಿಲ್ಲ ಆದರೆ ದೇಶದಾದ್ಯಂತ ಶಾಂತಿ ಅಹಿಂಸೆ ಸಂದೇಶಗಳ ಮೂಲಕ ಧರ್ಮ ಪ್ರಭಾವನೆ ಮಾಡುತ್ತಿರುವ ಕಣ್ಣಿಗೆ ಕಾಣುವ ತೀರ್ಥಂಕರರನ್ನೇ ದಿಗಂಬರ ಮುನಿ ಮಹಾರಾಜರು ಇಂಥ ಮುನಿ ಮಹಾರಾಜರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನಮ್ಮ ಭಾಗ್ಯ ಎಂದು ತಿಳಿಸಿ ಅವರ ಪಾದಪೂಜೆ ಮಾಡಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಕೆ ಜೆ ರಪಾಟಿ, ಎಸ್ ಆರ್ ಮಲ್ಲಸಮುದ್ರ ಮುಂತಾದವರು ಮಾತನಾಡಿದರು. ಪರಮಪೂಜ್ಯ ಮುನಿಶ್ರೀ ಪುರಾಣ ಸಾಗರ ಮಹಾರಾಜರು ತಮ್ಮ ಪ್ರವಚನದಲ್ಲಿ ಆಚಾರ್ಯಶ್ರೀಗಳ ಗುಣಗಾನ ಮಾಡಿ ಸ್ಮರಿಸಿದರು. ಸಾನಿಧ್ಯ ವಹಿಸಿ ಪ್ರವಚನ ದಯಪಾಲಿಸಿದ ಆಚಾರ್ಯ ಶ್ರೀ ಪುಣ್ಯಸಾಗರ ಮಹಾರಾಜರು ಸಂತಶಿರೋಮಣಿ ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜರು ಭಾರತ ದೇಶ ಕಂಡ ಅತ್ಯಂತ ಶ್ರೇಷ್ಠ ಪ್ರಭಾವಿ ಆಚಾರ್ಯರಾಗಿದ್ದರು ಅವರು ಆಧ್ಯಾತ್ಮ ಕವಿ, ಲೇಖಕ, ವಿಮರ್ಶಕ, ದಿಗಂಬರ ಜೈನ ಸರೋವರದ ರಾಜಹಂಸ ಎಂದು ಕರೆಯಲ್ಪಡುತ್ತಿದ್ದರು, ಕರ್ನಾಟಕದ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದಲ್ಲಿ ಶ್ರೀಮತಿ ಶ್ರೀಮತಿದೇವಿ ಹಾಗೂ ಶ್ರೀ ಮಲ್ಲಪ್ಪಾಜಿಯವರ ಸುಪುತ್ರರಾಗಿ ದಿನಾಂಕ 10-10-1946 ಜನಿಸಿದರು. ಬಾಲ್ಯದಿಂದಲೂ ಆದ್ಯಾತ್ಮದ ಕಡೆ ಒಲವು ಹೊಂದಿದ್ದರು, ಆಚಾರ್ಯ ದೇಷಭೂಷಣ ಮಹಾರಾಜರಿಂದ ಪ್ರಭಾವಿತರಾಗಿ ಅನೇಕ ಸ್ಥಳಗಲ್ಲಿ ಸಂಚಾರಿಸುತ್ತ ಧರ್ಮದ ಅಧ್ಯಯನ ಮಾಡಿದರು. ಪೂಜ್ಯ ಜ್ಞಾನ ಸಾಗರ ಮಹಾರಾಜರಿಂದ ದಿನಾಂಕ 30-6-1968 ರಲ್ಲಿ ದಿಗಂಬರ ದೀಕ್ಷೆ ಪಡೆದು ಇಂದಿಗೆ 58 ವರ್ಷ ಮುಗಿದು 59ನೇ ವರ್ಷಕ್ಕೆ ಜೈನ ಮುನಿಯಾದರು. ಆಚಾರ್ಯರೊಟ್ಟಿಗೆ ಸದಾಕಾಲ ಸಾವಿರಕ್ಕೂ ಹೆಚ್ಚು ಅವರ ಶಿಷ್ಯರು ದೇಶದಾದ್ಯಂತ ವಿಹಾರ ಮಾಡಿ ಜಿನಧರ್ಮದ ಪ್ರಸಾರ ಹಾಗೂ ಧರ್ಮಜ್ಞಾನವನ್ನು ಪ್ರಸರಿಸಿದರು. ಆಶ್ಚರ್ಯವೆಂದರೆ ಆಚಾರ್ಯರ ಮೂಕ ಮಾಟಿ ಎಂಬ ಗ್ರಂಥವು ಜಗತ್ತಿನ ಎಲ್ಲ ಭಾಷೆಗಳಲ್ಲಿ ಪ್ರಕಟವಾಗಿದೆ. ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ. ಇಂಥ ಗುರುವರ್ಯರಿಂದ ನನ್ನನ್ನೂ ಸೇರಿ ಹಲವಾರು ಮುನಿಗಳು ದೀಕ್ಷೆ ಪಡೆದು ಧನ್ಯರಾಗಿದ್ದೇವೆ ಎಂದು ದೀಕ್ಷಾ ಗುರುಗಳನ್ನು ಸ್ಮರಿಸಿದರು. ನಂತರ 59 ದೀಪಗಳಿಂದ ಮಹಾ ಮಂಗಳಾರತಿ ವೈಭವದಿಂದ ನಡೆಯಿತು. ಸಮಾರಂಭದಲ್ಲಿ ಹುಬ್ಬಳ್ಳಿ ನವನಗರ ಧಾರವಾಡ ಮುಮ್ಮಿಗಟ್ಟಿ ಗದಗ ಮುಂತಾದ ಊರುಗಳಿಂದ ಹಲವಾರು ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು. ಕುಶಲ ಅವಲಕ್ಕಿ ಅವರು ಪ್ರಾರ್ಥಿಸಿ, ಎಸ್ ಆರ್ ಮಲ್ಲಸಮುದ್ರರವರು ಸ್ವಾಗತಿಸಿ, ನಂದಿನಿ ಗೊಟೂರೆ ಇವರಿಂದ ಮಂಗಳಾಚರಣೆ ನೆರವೇರಿತು. ವರದಿ : ಶಾಂತರಾಜ ಮಲ್ಲಸಮುದ್ರ.

ಮೈಸೂರು: 20ನೇ ವಲಯ ಸಮ್ಮೇಳನ

Article Image

ಮೈಸೂರು: 20ನೇ ವಲಯ ಸಮ್ಮೇಳನ

ಮೈಸೂರು: ಭಾರತೀಯ ಜೈನ್ ಮಿಲನ್ ವಲಯ 8ರ 20ನೇ ವಲಯ ಸಮ್ಮೇಳನವು ಇತ್ತೀಚೆಗೆ ಮಾನಸ ಗಂಗೋತ್ರಿಯ ಸೆನೆಟ್ ಹಾಲ್ ನಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ಪ್ರಸನ್ನ ಕುಮಾರ್ ರವರು ವಿದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜೈನ್ ಮಿಲನ್ ಗಳ ಬಗ್ಗೆ ಮಾಹಿತಿ ನೀಡಿದರು. ದುಬೈ, ಜರ್ಮನಿ, ಲಂಡನ್, ಅಮೇರಿಕಾ, ಕೆನಡಾ, ಆಸ್ಟ್ರೇಲಿಯಾ ಮತ್ತು ಸಿಂಗಾಪುರದಲ್ಲಿ ಜೈನ್ ಮಿಲನ್ ಶಾಖೆಗಳು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದು ಬಹಳ ಜನಪ್ರಿಯವಾಗಿವೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್, ರಾಷ್ಟ್ರೀಯ ಉಪಾಧ್ಯಕ್ಷೆ ಅನಿತಾ ಸುರೇಂದ್ರ ಕುಮಾರ್ ಸೇರಿದಂತೆ ಗಣ್ಯಾತೀಗಣ್ಯರು ಉಪಸ್ಥಿತರಿದ್ದರು.

ಧಾರವಾಡ: ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ

Article Image

ಧಾರವಾಡ: ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ

‘ಧಾರವಾಡದಲ್ಲಿ ಪ್ರಪ್ರಥಮ ಸಾಧಕರೊಂದಿಗೆ ಸಂವಾದ’ ಕಾರ್ಯಕ್ರಮ ನಗರದ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ವಿಭಾಗದ ವತಿಯಿಂದ ಹಿರಿಯ ಚಿತ್ರಕಲಾವಿದ ಮಹಾವೀರ ರಾಯಪ್ಪಾ ಬಾಳಿಕಾಯಿ ಅವರ ಕುರಿತು ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ ಜರುಗಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ. ಎಚ್. ಚನ್ನೂರ ಮಾತನಾಡಿ, ರಾಜ್ಯದ ನಾಲ್ಕು ವಿಭಾಗಗಳ ಪೈಕಿ ಒಂದು ಜಿಲ್ಲೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರದಂದು ಆಯಾ ಜಿಲ್ಲೆಯಲ್ಲಿರುವ ನಾಡು-ನುಡಿ, ಕಲೆ, ಸಾಹಿತ್ಯ ಹಾಗೂ ಸಂಗೀತ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಪರಿಗಣಿಸಿ, ಅವರ ಸಾಧನೆಯನ್ನು ಯುವಜನಾಂಗಕ್ಕೆ ಪರಿಚಯಿಸುವ ಉದ್ದೇಶದಿಂದ “ಸಾಧಕರೊಂದಿಗೆ ಸಂವಾದ” ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರಸ್ತುತ ಧಾರವಾಡ ಜಿಲ್ಲೆಯಿಂದಲೇ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಚಿತ್ರಕಲಾವಿದರಾದ ಎಮ್. ಆರ್. ಬಾಳಿಕಾಯಿ ಅವರ ಜೀವನ-ಸಾಧನೆ ಕುರಿತು ಸಂವಾದ ಮಾಡಲಾಗುತ್ತಿದೆ ಎಂದರು. ಎಮ್. ಆರ್. ಬಾಳಿಕಾಯಿ ಅವರು ಚಿತ್ರಕಲಾ ಕ್ಷೇತ್ರಕ್ಕೆ ಸಲ್ಲಿಸಿರುವ ಅನುಪಮ ಸಾಧನೆ ಗುರುತಿಸಿ, 2023ರಲ್ಲಿ ಜರುಗಿದ ಹುಕ್ಕೇರಿ ತಾಲೂಕಾ 11ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿದ್ದು ಹೆಮ್ಮೆಯ ಸಂಗತಿ ಎಂದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಎಮ್. ಆರ್. ಬಾಳಿಕಾಯಿ ಅವರು, ತಮ್ಮ ಬಾಲ್ಯ, ಜೀವನ, ಕಲಾಕ್ಷೇತ್ರದಲ್ಲಿ ತಾವು ನಡೆದು ಬಂದ ದಾರಿಯನ್ನು ವಿವರಿಸುತ್ತ, ನನ್ನ ಸಾಧನೆಯ ಹಿಂದೆ ಇಡೀ ಸಮಾಜವೇ ಇದೆ. ಅದಕ್ಕಾಗಿ ನನ್ನ ಸಾಧನೆಯನ್ನು ಸಮಾಜಕ್ಕೇ ಅರ್ಪಿಸುತ್ತೇನೆ ಎಂದರು. ಜೀವನದಲ್ಲಿ ನಾವು ಎಷ್ಟು ಕಷ್ಟಗಳನ್ನು ಅನುಭವಿಸಿತ್ತೇವೆಯೋ ಅವುಗಳೇ ಸಾಧನೆಯ ಮೆಟ್ಟಲುಗಳಾಗುತ್ತವೆ. ಯಾವುದೇ ಕಾರ್ಯವನ್ನು ಹೃದಯಪೂರ್ವಕವಾಗಿ ಮಾಡಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ. ಅನುಭವವೇ ನನ್ನ ಜೀವನಕ್ಕೆ ದಾರಿದೀಪವಾಗಿದೆ. ಸತ್ಯದ ಹಾದಿಯಲ್ಲಿ ನಡೆದರೆ ಜೀವನ ಸುಗಮವಾಗಿರುತ್ತದೆ ಎಂದರು. ತಮ್ಮ ಸಾಧನೆಯ ಮಾರ್ಗವನ್ನು ಮತ್ತು ಗುರು-ಶಿಷ್ಯರುಗಳ ಬೆಸುಗೆಯ ಬಗ್ಗೆ ಸಭಿಕರೊಂದಿಗೆ ಮನಬಿಚ್ಚಿ ಮಾತನಾಡಿದರು. ನಂತರ ಜರುಗಿದ ಸಂವಾದದಲ್ಲಿ ಡಿ. ವಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನ ಅಧ್ಯಕ್ಷ ಬಿ. ಮಾರುತಿ, ಮಹದೇವ ಜಗತಾಪ, ಡಾ. ಬಿ. ಎಲ್. ಚೌಹಾನ, ಪಿ. ಎಸ್. ಕಡೇಮನಿ, ಡಾ. ಎಸ್. ಸಿ. ಪಾಟೀಲ, ಎಮ್. ಎಸ್. ಚೌಧರಿ, ಡಿ. ಎಮ್. ಬಡಿಗೇರ, ಬಿ. ಐ. ಈಳಗೇರ ಮುಂತಾದವರು ಪಾಲ್ಗೊಂಡಿದ್ದರು. ಪ್ರಾರಂಭದಲ್ಲಿ ಎಮ್. ಆರ್. ಬಾಳಿಕಾಯಿ ಅವರ ಕುರಿತು ಸಾಕ್ಷ್ಯ ಚಿತ್ರ ಪ್ರದರ್ಶನಗೊಂಡಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಆರತಿ ದೇವಶಿಖಾಮನಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಸುರೇಶ ಹಾಲಭಾವಿ, ಡಾ. ಶಶಿಧರ ನರೇಂದ್ರ, ಡಾ. ಬಸವರಾಜ ಕುರಿಯವರ, ಎನ್. ಆರ್. ನಾಯ್ಕರ್, ಡಾ. ರಾಯಪ್ಪಾ ಬಾಳಿಕಾಯಿ, ವಿಠ್ಠಲ ಬಸಳಿಗುಂದಿ, ಎಸ್. ಬಿ. ಕಂಕಣವಾಡಿ, ರಮೇಶಕುಮಾರ ಬಾಳಿಕಾಯಿ, ಎಸ್. ಪಿ. ಸತ್ಯನಾಯಕ ಇನ್ನಿತರರು ಇದ್ದರು. ವರದಿ: ಡಾ. ರಾಯಪ್ಪಾ ಬಾಳಿಕಾಯಿ

ವೈಶಾಲಿ ಚಂದ್ರಪ್ರಭುರವರಿಗೆ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ

Article Image

ವೈಶಾಲಿ ಚಂದ್ರಪ್ರಭುರವರಿಗೆ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ

ಕರ್ನಾಟಕ ಮಿಡಿಯಾ ಕ್ಲಬ್ ವತಿಯಿಂದ ಕೊಡಮಾಡುವ “ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ”ಯನ್ನು ವೈಶಾಲಿ ಚಂದ್ರಪ್ರಭುರವರ ಮಾಧ್ಯಮ ಕ್ಷೇತ್ರದ ಅಪೂರ್ವ ಸಾಧನೆ ಬದುಕಿನ ಧೃಡತೆ, ಮಾನವೀಯ ಮೌಲ್ಯಗಳೊಂದಿಗೆ ಈ ಸಮಾಜಕ್ಕಾಗಿ ಸಾಧಿಸಿದ ಸಾಧನೆಯನ್ನು ಗುರುತಿಸಿ, ಬೆಂಗಳೂರಿನ ವಿಶ್ವವಿದ್ಯಾಲಯ ಆವರಣದ ಕಲಾಗ್ರಾಮದಲ್ಲಿ ಜೂ. 5ರಂದು ನಡೆದ ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.

ರತ್ನತ್ರಯ ಜೈನ ಮಿಲನ್ ಸಭೆ

Article Image

ರತ್ನತ್ರಯ ಜೈನ ಮಿಲನ್ ಸಭೆ

ದಿನಾಂಕ 06-03-2026ಶುಕ್ರವಾರದಂದು ರತ್ನತ್ರಯ ಜೈನ ಮಿಲನ್ ಆನ್‌ಲೈನ್ ಸಭೆ ಜರುಗಿತು. ಮುಖ್ಯ ಅತಿಥಿಗಳಾಗಿ ತ್ರಿಶಲಾ ಬ್ರಹ್ಮಯ್ಯ ಹಾಗೂ ರತ್ನತ್ರಯ ಜೈನ್ ಮಿಲನ್ ಅಧ್ಯಕ್ಷರಾದ ನವೀನ್ ಕುಮಾರ್ ಉಪಸ್ಥಿತರಿದ್ದರು. ಸಾಮೂಹಿಕ ಪಂಚ ನಮಸ್ಕಾರ ಪಠಣೆ, ಅತಿಥಿಗಳಿಂದ ದೀಪ ಪ್ರಜ್ವಲನೆ ಹಾಗೂ ಭಾಮಾ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ರಾಣಿ ಪ್ರಫುಲ್ಲ ಅವರು ಸ್ವಾಗತ ಭಾಷಣ ಮಾಡಿದರು. ಸುನೀತಾ ಸುಂದರರಾಜ್ ಅವರು ರತ್ನತ್ರಯ ಮಿಲನಿನ ಉದ್ದೇಶವನ್ನು ತಿಳಿಸಿದರು. ಪದ್ಮ ಸೂರಿ ಅವರು ಪರ್ವವಾಚನ ಮಾಡಿದರು. ಶ್ವೇತಾ ನವೀನ್ ಅವರು ಹಿಂದಿನ ಸಭೆಯ ವರದಿಯನ್ನು ಪ್ರಸ್ತುತಪಡಿಸಿದರು. ಶೋಭಿತಾ ನವೀನ್ ಅವರು ಮಾರ್ಚ್ ತಿಂಗಳಲ್ಲಿ ವಿವಾಹ ವಾರ್ಷಿಕ ಹಾಗೂ ಹುಟ್ಟುಹಬ್ಬ ಆಚರಿಸಿಕೊಂಡ ರತ್ನತ್ರಯ ಮಿಲನ್ ಸದಸ್ಯರಿಗೆ ಶುಭ ಕೋರಿದರು. ಚಂದನ ಸುರೇಂದ್ರ ಅವರು ಜಿನ ಭಕ್ತಿ ಗೀತೆಯನ್ನು ಹಾಡಿದರು. ಮಹಾವೀರ ಕುಮಾರ್ ಅವರು ಅತಿಥಿಗಳ ಪರಿಚಯ ಮಾಡಿದರು. ಮುಖ್ಯ ಅತಿಥಿಗಳಾಗಿ‌ ಆಗಮಿಸಿದ್ದ ತ್ರಿಶಲಾ ಬ್ರಹ್ಮಯ್ಯ ಅವರು ‘ಬದಲಾಗುತ್ತಿರುವ ಸಮಾಜದಲ್ಲಿ ಜೈನ ಧರ್ಮ’ ಈ ಕುರಿತು ಅತ್ಯಂತ ಉಪಯುಕ್ತ ಉಪನ್ಯಾಸ ಮಾಡಿದರು. ನವೀನ್ ಕುಮಾರ್ ಗುಬ್ಬಿಯವರು ಅಧ್ಯಕ್ಷರ ನುಡಿಗಳನ್ನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಅನಂತರವರು ನಡೆಸಿಕೊಟ್ಟರು. ಉಷಾ ರಾಣಿ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ಮಲೆನಾಡು ವಿಭಾಗದ ಜಿನ ಭಜನಾ ಸ್ಪರ್ಧೆಗಳು

Article Image

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ಮಲೆನಾಡು ವಿಭಾಗದ ಜಿನ ಭಜನಾ ಸ್ಪರ್ಧೆಗಳು

ಭಾರತೀಯ ಜೈನ್ ಮಿಲನ್ ವಲಯ - 8 ಬೆಂಗಳೂರು, ಮಲೆನಾಡು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಗಳು ಸೀಸನ್- 9, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ಮಲೆನಾಡು ವಿಭಾಗದ ಜಿನ ಭಜನಾ ಸ್ಪರ್ಧೆಗಳು ದಿನಾಂಕ 16 -11- 2025ರಂದು ಭಾನುವಾರ ಶಿವಮೊಗ್ಗದ ಹೊಂಬುಜ ಪದ್ಮಾವತಿ ಜೈನ ಸಮುದಾಯ ಭವನದಲ್ಲಿ ನಡೆದವು. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಮತ್ತು ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ಡಿ. ಅನಿತಾ ಸುರೇಂದ್ರ ಕುಮಾರ್ ರವರು ಜಿನ ಭಜನಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಕೇಂದ್ರ ಸಮಿತಿಯ ಪಿ .ಅಜಿತ್ ಕುಮಾರ್, ಬೆಂಗಳೂರು ವಿಭಾಗದ ಕಾರ್ಯದರ್ಶಿ ವಿಲಾಸ್ ಪಾಸಣ್ಣವರ್, ಮಲೆನಾಡು ವಿಭಾಗದ ಉಪಾಧ್ಯಕ್ಷರಾದ ಯಶೋಧರ ಹೆಗ್ಡೆ ಕೆ. ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಸಾನಿಧ್ಯ ಮತ್ತು ಆಶೀರ್ವಚನ ನೀಡಿದರು. ಪೂಜ್ಯ ಸ್ವಾಮೀಜಿಯವರು ತಮ್ಮ ಆಶೀರ್ವಚನದಲ್ಲಿ ಭಾರತೀಯ ಆಧ್ಯಾತ್ಮ 14ನೆಯ ಶತಮಾನದವರೆಗೆ ಜ್ಞಾನಮಾರ್ಗದಲ್ಲಿ ಕಠಿಣವಾದ ತಪಸ್ಸುಗಳು, ವ್ರತಗಳು, ನಿಯಮಗಳ ಮೂಲಕ ಭಗವಂತನನ್ನು ತಲುಪುವ ಮಾರ್ಗವಾಗಿತ್ತು. ಹದಿನಾಲ್ಕನೆಯ ಶತಮಾನದ ನಂತರದಲ್ಲಿ ಭಗವಂತನ ಭಜನೆ ಕೀರ್ತನೆ ಮುಂತಾದ ಎಲ್ಲರಿಗೂ ಸುಲಭವಾದ ಭಕ್ತಿ ಮಾರ್ಗದಲ್ಲಿ ಸಾಗುತ್ತಾ ಬಂದಿದೆ. ಮಹಾಕವಿ ರತ್ನಾಕರವರ್ಣಿ ಮುಂತಾದ ಅನೇಕ ಕವಿಗಳು ಜೈನ ಆಧ್ಯಾತ್ಮ ಗೀತೆಗಳನ್ನು ರಚಿಸಿದ್ದಾರೆ. ಶತಮಾನಗಳಿಂದ ಭಜನೆ ಮತ್ತು ಭಕ್ತಿಗೀತೆಗಳು ಸ್ತೋತ್ರಗಳು ಭಾರತೀಯ ಆಧ್ಯಾತ್ಮಿಕ ಪರಂಪರೆಯಲ್ಲಿ ದೈನಂದಿನ ಅವಿಭಾಜ್ಯ ಅಂಗಗಳಾಗಿದ್ದವು. ಆದರೆ ಪ್ರಸ್ತುತದಲ್ಲಿ ಮಕ್ಕಳಿಗೆ ಲೌಕಿಕ ಶಿಕ್ಷಣಕ್ಕೆ ಮಾತ್ರ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ. ಆದ್ದರಿಂದ ತಂದೆ - ತಾಯಿಯರು ಮಕ್ಕಳಿಗೆ ಲೌಕಿಕ ಶಿಕ್ಷಣದ ಜೊತೆ ಜೊತೆಯಲ್ಲಿ ಧಾರ್ಮಿಕ ಶಿಕ್ಷಣವನ್ನು ಸಹ ನೀಡಬೇಕು, ಇಲ್ಲದಿದ್ದರೆ ಮಕ್ಕಳ ಶಿಕ್ಷಣ ಅಪೂರ್ಣವಾಗುತ್ತದೆ. ಪ್ರತಿದಿನ ಅರ್ಧ ಗಂಟೆಯಾದರೂ ಮಕ್ಕಳಿಗೆ ಜೈನ ಧರ್ಮದ ಮೂಲ ಗುಣಗಳು ಮತ್ತು ಆಚಾರ ವಿಚಾರಗಳನ್ನು, ಸಣ್ಣ ಸಣ್ಣ ಸಂಗತಿಗಳನ್ನು ತಿಳಿಸಿಕೊಡಬೇಕು. ಮನೆಗಳಲ್ಲಿ ಹಿರಿಯರು ಮಕ್ಕಳನ್ನು ಸೇರಿಕೊಂಡು ಜಿನ ಭಜನೆಗಳನ್ನು ಮಾಡುವುದು ಮತ್ತು ಮನೆಯಲ್ಲಿಯೇ ಧಾರ್ಮಿಕ ಸಂಸ್ಕಾರ ನಿಡುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು. ಜೈನ ಪೂರ್ವಾಚಾರ್ಯರು ಉಪಸರ್ಗಗಳು ಉಂಟಾದಾಗ ಜಿನ ಭಗವಂತರ ಧ್ಯಾನದಲ್ಲಿ ತಲ್ಲೀನರಾಗಿ ಅನೇಕ ಸ್ತೋತ್ರಗಳನ್ನು ರಚಿಸಿದ್ದಾರೆ. ಆಚಾರ್ಯ ಸಮಂತಭದ್ರಸ್ವಾಮಿವರ ಸ್ವಯಂಭೂಸ್ತೋತ್ರ, ಮಾನತುಂಗಾಚಾರ್ಯರ ಭಕ್ತಾಮರ ಸ್ತೋತ್ರ, ಧನಂಜಯ ಕವಿಯ ವಿಷಾಪಹಾರ ಸ್ತೋತ್ರ ಇಂತಹ ಅನೇಕ ಸ್ತೋತ್ರಗಳಿಂದ ಜಿನ ಭಕ್ತಿಯ ಮಹಿಮೆಯಿಂದ ಉಪಸರ್ಗಗಳನ್ನು ನಿವಾರಣೆ ಮಾಡಿಕೊಂಡರು. ದೈಹಿಕ ಆರೋಗ್ಯಕ್ಕೆ ಭೋಜನ ಹೇಗೆ ಅಗತ್ಯವಿದೆಯೋ ಅದೇ ರೀತಿಯಲ್ಲಿ ಮಾನಸಿಕ ಆರೋಗ್ಯಕ್ಕೆ ಭಜನೆ ಅಷ್ಟೇ ಅಗತ್ಯವಾಗಿದೆ. ಜಿನಭಜನೆಯನ್ನು ಸ್ಪರ್ಧೆಗಾಗಿ ಮಾತ್ರವಲ್ಲದೆ ಜಿನ ಭಗವಂತರ ಭಕ್ತಿಯನ್ನು ಪ್ರತಿದಿನವೂ ಮಾಡುವುದರಿಂದ ಇಹ ಪರದಲ್ಲಿ ಶಾಂತಿ ನೆಮ್ಮದಿ ಪಡೆಯಬಹುದು ಎಂದು ಹೇಳಿದರು. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ಡಿ. ಅನಿತಾ ಸುರೇಂದ್ರ ಕುಮಾರ್ ರವರು ಮುಖ್ಯ ಅತಿಥಿಗಳಾಗಿ ಮನದಾಳದ ಮಾತುಗಳನ್ನು ಹೇಳುತ್ತಾ, ಕಳೆದ ಒಂಭತ್ತು ವರ್ಷಗಳಿಂದ ಜಿನ ಭಜನಾ ವೇದಿಕೆಯಿಂದ ಸಮಾಜದಲ್ಲಿ ಅನೇಕ ಉತ್ತಮವಾದ ಬೆಳವಣಿಗೆಗಳು ಆಗಿರುತ್ತವೆ. ಜಿನ ಭಜನಾ ಸ್ಪರ್ಧೆಗಳ ಫಲವಾಗಿ ಈಗ ಜೈನ ಸಮಾಜದಲ್ಲಿ ಜಿನ ಭಕ್ತಿ ಗೀತೆಗಳ ಹಾಡುಗಾರು, ಸಾಹಿತ್ಯ ರಚನೆಕಾರರು, ತೀರ್ಪುಗಾರರು, ಸಂಯೋಜಕರು ಮುಂತಾದ ಅನೇಕ ಪ್ರತಿಭೆಗಳು ಮುನ್ನೆಲೆಗೆ ಬಂದಿದ್ದಾರೆ ಎಂದು ಹೇಳಿದರು. ಸಮಾಜದ ಅನೇಕ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಿದೆ ಎಂಬ ಸಂತಸವನ್ನು ಹಂಚಿಕೊಂಡರು. ಸ್ಪರ್ಧೆಗಳು ಬಹುಮಾನ ಗಳಿಸಲು ಮಾತ್ರವಲ್ಲದೆ ಭಗವಂತರ ಸ್ಮರಣೆಯಿಂದ ಮಾನಸಿಕ ನೆಮ್ಮದಿ ಮತ್ತು ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳಿದರು. ಮುಂದಿನ ವರ್ಷದ ದಶಮಾನೋತ್ಸವದ ಯೋಜನೆಗಳ ಕುರಿತು ತಮ್ಮ ಪರಿಕಲ್ಪನೆಯನ್ನು ತಿಳಿಸಿಕೊಟ್ಟರು. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ರವರು, ಜೈನ್ ಮಿಲನ್ ಸಂಘಟನೆಯು ರಾಷ್ಟ್ರ ಮತ್ತು ರಾಜ್ಯ ವ್ಯಾಪ್ತಿಯ ಸಂಘಟನೆಯಾಗಿದೆ ಎಂದು ಹೇಳಿದರು. ವಿದೇಶಗಳಲ್ಲಿ ಸಹ ಅನಿವಾಸಿ ಭಾರತೀಯ ಜೈನರು ಪ್ರತಿ ಭಾನುವಾರ ಜೈನ ಧರ್ಮದ ಆಚಾರ ವಿಚಾರಗಳನ್ನು ತಮ್ಮ ಮಕ್ಕಳಿಗೆ ಕಲಿಸಿ ಕೊಡುತ್ತಿದ್ದಾರೆ ಎಂದು ಹೇಳಿದರು. ಮುನಿರಾಜ ರೆಂಜಾಳ ಮತ್ತು ಕಾವ್ಯ ಬೆಂಗಳೂರುರವರು ತೀರ್ಪುಗಾರರಾಗಿ ಪ್ರತಿಯೊಂದು ತಂಡದ ಸ್ಪರ್ಧಿಗಳಿಗೆ ಉತ್ತಮವಾದ ವಿಮರ್ಶೆಗಳನ್ನು ಮತ್ತು ಸಲಹೆಗಳನ್ನು ನೀಡಿದರು. ಹಿರಿಯರ ವಿಭಾಗದಲ್ಲಿ ಓಂಕಾರ್ ಜಿನ ಭಜನಾ ತಂಡ ಹೊರನಾಡು ಪ್ರಥಮ ಸ್ಥಾನ, ಸುಸ್ವರ ಜಿನ ಭಜನಾ ತಂಡ ಹೊರನಾಡು ದ್ವಿತೀಯ ಸ್ಥಾನ ಮತ್ತು ತೃತೀಯ ಸ್ಥಾನವನ್ನು ಶ್ರೀ ಶಾಂತಿನಾಥ ಜಿನ ಭಜನಾ ತಂಡ ಮೇಗುಂದ ಹಾಗೂ ದಿವ್ಯ ದ್ವನಿ ಜಿನ ಭಜನಾ ತಂಡ ಹೊರನಾಡು ಎರಡೂ ತಂಡಗಳು ಪಡೆದವು. ಕಿರಿಯರ ವಿಭಾಗದಲ್ಲಿ ಪಾರಸ್ ಜಿನ ಭಜನಾ ತಂಡ ಮಂಡವಳ್ಳಿ ಪ್ರಥಮ ಸ್ಥಾನ, ಶುಭಸ್ವರ ಜಿನ ಭಜನಾ ತಂಡ ಹೊರನಾಡು ದ್ವೀತೀಯ ಸ್ಥಾನ ‌ಮತ್ತು ತೃತೀಯ ಸ್ಥಾನವನ್ನು ಸಿದ್ಧಿ ಪದ್ಮಾವತಿ ಜಿನ ಭಜನಾ ತಂಡ ಹೊರನಾಡು ಹಾಗೂ ಸರ್ವತೋಭದ್ರ ಜಿನ ಭಜನಾ ತಂಡ ಸಾಗರ ಎರಡೂ ತಂಡಗಳು ಹಂಚಿಕೊಂಡವು. ವಿಜೇತ ತಂಡಗಳಿಗೆ ನಗದು ಪುರಸ್ಕಾರ ಮತ್ತು ಟ್ರೊಫಿಗಳನ್ನು ನೀಡಲಾಯಿತು. ಹಿರಿಯರ ವಿಭಾಗದಲ್ಲಿ - 28 ಮತ್ತು ಕಿರಿಯರ ವಿಭಾಗದಲ್ಲಿ - 13 ತಂಡಗಳು ಭಾಗವಹಿಸಿದ್ದವು . ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೈನ್ ಮಿಲನ್ ಜಿನ ಭಜನಾ ಕೇಂದ್ರ ಸಮಿತಿಯ ಪಿ. ಅಜಿತ್ ಕುಮಾರ್ , ಬೆಂಗಳೂರು ವಿಭಾಗದ ಕಾರ್ಯದರ್ಶಿ ವಿಲಾಸ್ ಪಾಸಣ್ಣವರ್, ಶಿವಮೊಗ್ಗ ದಿಗಂಬರ ಸಂಘದ ಅಧ್ಯಕ್ಷರಾದ ಜಯರಾಜ ಬಿ. ಪಾಂಡಿ, ಪ್ರಿಯಕಾರಿಣಿ ಮಹಿಳಾ ಸಮಾಜದ ಅಧ್ಯಕ್ಷೆ ಶೀಲಾ ಸಿರಸಪ್ಪ ಗೋಗಿ, ತೀರ್ಥಹಳ್ಳಿಯ ಡಾ. ಜೀವಂಧರ ಜೈನ್, ಮಲೆನಾಡು ವಿಭಾಗದ ಉಪಾಧ್ಯಕ್ಷ ಯಶೋಧರ ಹೆಗ್ಡೆ. ಕೆ., ಕಾರ್ಯದರ್ಶಿ ಡಿ .ಪೂರ್ಣಿಮಾ ಅಶೋಕ್ ಕುಮಾರ್, ನಿರ್ದೇಶಕರಾದ ಬಿ.ಡಿ. ಧರ್ಮಪಾಲ್, ದೇವರಾಜ್ ಜೈನ್ ಕುಪ್ಪಡಿ ವಗೆಕೆರೆ ಇವರುಗಳು ಉಪಸ್ಥಿತರಿದ್ದರು. ಶಿವಮೊಗ್ಗ ಜೈನ್ ಮಿಲನ್ ಅಧ್ಯಕ್ಷರಾದ ಅಪ್ಪಣ್ಣಜ್ಜ ಎ.ಪಿ ಇವರು ಅಧ್ಯಕ್ಷತೆ ವಹಿಸಿದ್ದರು. ಪೂರ್ಣಿಮಾ ಅಶೋಕ್ ಕುಮಾರ್ ಕಾರ್ಯಕ್ರಮದ ನಿರೂಪಣೆ ಮಾಡಿದರು. ರೋಹಿಣಿ ಪ್ರಶಾಂತ ಪ್ರಾರ್ಥನೆ ಮಾಡಿದರು. ಸುಜಾತಾ ಪ್ರಶಾಂತ್ ವಂದಿಸಿದರು .

ನಾರಾವಿ ಬಸದಿಯಲ್ಲಿ ಕಾರ್ತಿಕ ದೀಪೋತ್ಸವ

Article Image

ನಾರಾವಿ ಬಸದಿಯಲ್ಲಿ ಕಾರ್ತಿಕ ದೀಪೋತ್ಸವ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ನಾರಾವಿ ಗ್ರಾಮದಲ್ಲಿರುವ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವವು ನ. 11 ರಂದು ಮಂಗಳವಾರ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿಶೇಷ ಪೂಜೆ, ಆರಾಧನೆಯೊಂದಿಗೆ ನಡೆಯಲಿದೆ ಎಂದು ಬಸದಿಯ ಆಡಳಿತ ಸಮಿತಿಯವರು ತಿಳಿಸಿದ್ದಾರೆ. ಮಂಗಳವಾರ ಅಪರಾಹ್ನ 2.00 ಗಂಟೆಯಿಂದ ನಿತ್ಯವಿಧಿ ಸಹಿತ ದೇವಿ ಪದ್ಮಾವತಿ ಅಮ್ಮನವರ ಆರಾಧನೆ 6.00 ಗಂಟೆಗೆ ಉಯ್ಯಾಲೆ ಸೇವೆ, ಭಗವಾನ್ ಧರ್ಮನಾಥ ಸ್ವಾಮಿಗೆ 24 ಕಲಶ ಅಭಿಷೇಕ ಹಾಗೂ ದೇವರ ಉತ್ಸವದ ಬಳಿಕ ದೀಪೋತ್ಸವ ನಡೆಯಲಿದೆ. ಹೊರನಾಡು ಜಯಶ್ರೀ ಜೈನ್ ಸಂಗೀತ ಪೂಜಾಷ್ಟಕ ಹಾಡುವರು. ರಾತ್ರಿ 11.00 ಗಂಟೆಯಿಂದ ಇಡೀ ರಾತ್ರಿ ನಾರಾವಿಯ ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ಜಿನಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕಕರು ತಿಳಿಸಿದ್ದಾರೆ. ಮಾನಸಿ ಮಹಿಳಾ ಸಂಘ ಉದ್ಘಾಟನೆ: ಸಂಜೆ 5 ಗಂಟೆಗೆ ಮಾನಸಿ ಮಹಿಳಾ ಸಂಘವನ್ನು ಮೂಡಬಿದ್ರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಉದ್ಘಾಟಿಸುವರು. ಬಿ. ನಿರಂಜನ ಅಜ್ರಿ ರಾಮೆರಗುತ್ತು ಅಧ್ಯಕ್ಷತೆ ವಹಿಸುವರು. ಮೂಡಬಿದ್ರೆ ನೋಟರಿ ವಕೀಲರಾದ ಶ್ವೇತಾ ಜೈನ್ ಶುಭಾಶಂಸನೆ ಮಾಡುವರು.

ಹುಬ್ಬಳ್ಳಿ: ಬಸದಿಗಳಲ್ಲಿ ಭಕ್ತಾಮರ ಭಕ್ತಿ

Article Image

ಹುಬ್ಬಳ್ಳಿ: ಬಸದಿಗಳಲ್ಲಿ ಭಕ್ತಾಮರ ಭಕ್ತಿ

ಭಕ್ತಾಮರವಾಲೆ ಬಾಬಾ ಖ್ಯಾತಿಯ ಪರಮಪೂಜ್ಯ ಮುನಿಶ್ರೀ ಪ್ರಣಾಮಸಾಗರ ಮಹಾರಾಜರ ಕರೆಯ ಮೇರೆಗೆ ದೇಶದ ಬಹುಪಾಲು ಜಿನಮಂದಿರಗಳಲ್ಲಿ ಜೈನ ಜಗತ್ತಿನ ಜನಪ್ರಿಯ ಸ್ತೋತ್ರ ಭಕ್ತಾಮರ ಏಕಕಾಲಕ್ಕೆ ಗುಂಜಾಯಮಾನಗೊಳ್ಳುವ ಮೂಲಕ ಸುಖ ಶಾಂತಿ ನೆಮ್ಮದಿ ಸಂತೋಷಗಳ ಹಿತಾನುಭವ ನೀಡಿತು. ವಿಶ್ವಶಾಂತಿಯ ಭಾವನೆಯೊಂದಿಗೆ "ಭಕ್ತಾಮರ ಉತ್ಸವ " ಹೆಸರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಿನಿಂದ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಶ್ರಾವಕ ಶ್ರಾವಕಿಯರು ಸಂಭ್ರಮದಿಂದ ಪಾಲ್ಗೊಂಡರು. ಹುಬ್ಬಳ್ಳಿಯ ಎಲ್ಲ ಬಸದಿಗಳಲ್ಲೂ ಭಕ್ತಾಮರ ಉತ್ಸವ ವರ್ಣರಂಜಿತವಾಗಿ ನಡೆಯಿತು. ನಗರದ ವಿವಿಧ ಮಹಿಳಾ ಸಮಾಜಗಳ ನೇತೃತ್ವದಲ್ಲಿ ವಿವಿಧ ಬಸದಿಗಳಲ್ಲಿ ವೈವಿಧ್ಯಮಯ ಅಲಂಕಾರ ಸಹಿತ ಭಕ್ತಾಮರ ಪಾಠ ನಡೆಯಿತು. ಭಕ್ತಾಮರ ನಾಯಕ ಭಗವಾನ್ ಆದಿನಾಥರೇ ಮೂಲನಾಯಕರಾಗಿರುವ, ಭಿತ್ತಿಗಳಲ್ಲಿ ಭಕ್ತಾಮರ ಚಿತ್ತಾರವನ್ನು ಹೊಂದಿರುವ ಭಗವಾನ್ ಶ್ರೀ ಆದಿನಾಥ ಬಸದಿ, ಭಗವಾನ್ ಶ್ರೀ ಶಾಂತಿನಾಥ ಬಸದಿ, ಭಗವಾನ್ ಶ್ರೀ ಚಂದ್ರಪ್ರಭ ಬಸದಿ, ಭಗವಾನ್ ಶ್ರೀ ಅನಂತನಾಥಬಸದಿ, ಭಗವಾನ್ ಶ್ರೀ ಪಾರ್ಶ್ಶ್ವನಾಥ ಬಸದಿ, ಭಗವಾನ್ ಶ್ರೀ ಚಂದ್ರಪ್ರಭ ಬಸದಿ, ಭಗವಾನ್ ಶ್ರೀ ಆದಿನಾಥರ ಸಮವಸರಣವನ್ನೇ ಹೊಂದಿರುವ ತ್ರಿಕೂಟ ಬಸದಿಗಳಲ್ಲಿ ನಡೆದ ಸಾಮೂಹಿಕ ಭಕ್ತಾಮರ ಪಾಠ ನೆರೆದ ಜನರಿಗೆ ವಿಶಿಷ್ಟ, ಅನುಪಮ ಆನಂದವನ್ನು ನೀಡಿತು.. ಪ್ರತಿ ಒಂದು ಶ್ಲೋಕ ಪಾಠದ ನಂತರ ದೀಪ ಬೆಳಗಿ ಭಗವಂತನ ಸನ್ನಿಧಿಗೆ ಅರ್ಪಿಸಿ ಭಕ್ತಿ ಮಾಡಲಾಯಿತು. ದೀಪಾವಳಿಗೆ ಮುನ್ನ ಒಂದು ಕಿರು ದೀಪೋತ್ಸವ ನಡೆಯಿತು. ಭಗವಾನ್ ಶ್ರೀ ಆದಿನಾಥ ಸ್ವಾಮಿ, ಆಚಾರ್ಯ ಶ್ರೀಮಾನತುಂಗರು, ಭಕ್ತಾಮರ ಸ್ತೋತ್ರ, ಭಕ್ತಾಮರವಾಲೇ ಬಾಬಾರ ಜಯಘೋಷಗಳು ಮೊಳಗಿದವು.

ರತ್ನತ್ರಯ ಜೈನ ಮಿಲನ್: ಮಾಸಿಕ ಸಭಾ ವರದಿ

Article Image

ರತ್ನತ್ರಯ ಜೈನ ಮಿಲನ್: ಮಾಸಿಕ ಸಭಾ ವರದಿ

ರತ್ನತ್ರಯ ಜೈನ ಮಿಲನ ಮಾಸಿಕ ಸಭೆಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವು ಅತಿಥಿಗಳಿಂದ ದೀಪಪ್ರಜ್ವಲನೆ ಪ್ರಾರಂಭಗೊಂಡು ಮುಖ್ಯ ಅತಿಥಿಗಳಾದ ನೀರಜ ನಾಗೇಂದ್ರ ಕುಮಾರ ದಶಲಕ್ಷಣಗಳ (ಕ್ಷಮಾ, ಮಾರ್ದವ, ಆರ್ಜವ, ಶೌಚ, ಸತ್ಯ, ಸಂಯಮ, ತಪ, ತ್ಯಾಗ, ಅಕಿಂಚನ್ಯ ಮತ್ತು ಬ್ರಹ್ಮಚರ್ಯ) ಮಹತ್ವದ ಕುರಿತು ಉಪನ್ಯಾಸ ನೀಡಿದರು. ಉಷಾರಾಣಿ ‘ಉತ್ತಮ ಕ್ಷಮಾ’ ಎಂಬ ವಿಷಯದ ಕುರಿತು ವಿಶದವಾದ ಭಾಷಣ ಮಾಡಿದರು. ಸುಖಾನಂದ ಅವರು, ನಡೆಯಲಿರುವ ಜಾತಿಗಣತಿಯ ಸಂದರ್ಭದಲ್ಲಿ ‘ಜೈನ - ದಿಗಂಬರ’ ಎಂದು ನಮೂದಿಸಲು ಸದಸ್ಯರಿಗೆ ಸಲಹೆ ನೀಡಿದರು. ಅನಂತಕುಮಾರಿ ಪದ್ಮರಾಜ್ ಅವರು ಆತ್ಮೀಯ ಸ್ವಾಗತ ಭಾಷಣ ಮಾಡಿದರು. ಬಳಿಕ ಮಾಲಿನಿ ಬ್ರಹ್ಮಣ್ಣ ರತ್ನತ್ರಯ ಮಿಲನದ ಉದ್ದೇಶವನ್ನು ವಿವರಿಸಿದರು. ಪೂರ್ಣಿಮಾ ಜಯಂತ್ ಪರ್ವವಾಚನ ಮಾಡಿದರು. ಸೆಪ್ಟೆಂಬರ್ ತಿಂಗಳಲ್ಲಿ ವಿವಾಹ ವಾರ್ಷಿಕೋತ್ಸವ ಹಾಗು ಹುಟ್ಟುಹಬ್ಬ ಆಚರಿಸಿಕೊಂಡ ಸದಸ್ಯರಿಗೆ ಮಹಾವೀರ ಕುಮಾರ್ ಅವರು ಹಾರ್ದಿಕ ಶುಭಾಶಯ ಕೋರಿದರು. ರಾಣಿ ಪ್ರಫುಲ್ಲ ಅವರು ಅತಿಥಿಗಳ ಪರಿಚಯ ಮಾಡಿಕೊಟ್ಟರು. ಬಳಿಕ ಸಭಾಧ್ಯಕ್ಷರಾದ ನವೀನ್ ಕುಮಾರ್ ಗುಬ್ಬಿ ಅಧ್ಯಕ್ಷರ ನುಡಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಆತಿಥ್ಯವನ್ನು ಪದ್ಮ ಸೂರಿಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಷಾರಾಣಿ, ನೀರಜ ನಾಗೇಂದ್ರ ಕುಮಾರ, ಪ್ರೇಮ, ಸುಖಾನಂದ ಹಾಗು ರತ್ನತ್ರಯ ಜೈನ ಮಿಲನ ಅಧ್ಯಕ್ಷರಾದ ನವೀನ್ ಕುಮಾರ್ ಗುಬ್ಬಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನಂತಕುಮಾರಿಯವರು ನಿರೂಪಿಸಿ. ಶ್ವೇತಾ ನವೀನ್ ಕುಮಾರ್ ಅವರ ವಂದನಾರ್ಪಣೆಯೊಂದಿಗೆ ಸಭೆ ಸಮಾರೋಪಗೊಂಡಿತು.

ಮೂಡುಬಿದಿರೆ: ಶ್ರೀ ಧವಲಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

Article Image

ಮೂಡುಬಿದಿರೆ: ಶ್ರೀ ಧವಲಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಶ್ರೀ ಧವಲಾ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಇನ್ನರ್ ವೀಲ್ ಕ್ಲಬ್‌ ಮೂಡುಬಿದಿರೆ, ಲಯನ್ಸ್ ಕ್ಲಬ್ ಮೂಡುಬಿದಿರೆ ಮತ್ತು ರೋಟರಿ ಕ್ಲಬ್‌ ಮೂಡುಬಿದಿರೆ ಟೆಂಪಲ್ ಟೌನ್‌ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಾಲೇಜಿನ ಎ.ವಿ. ಹಾಲ್‌ನಲ್ಲಿ ಸೆ. 17ರಂದು ಜರಗಿತು. ಶಿಬಿರವನ್ನು ಉದ್ಘಾಟಿಸಿದ ಡಿಜೆವಿವಿ ಸಂಘದ ಕಾರ್ಯದರ್ಶಿ ಅಬಿಜಿತ್ ಎಂ. ಶುಭ ಹಾರೈಸಿದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಜೈನ್ ಅವರು ಮಾತನಾಡಿ ಎಷ್ಟೇ ಹಣವಿದ್ದರೂ ರಕ್ತದ ಉತ್ಪಾದನೆ ಸಾಧ್ಯವಿಲ್ಲ. ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ರಕ್ತದ ಅವಶ್ಯಕತೆಯನ್ನು ಅರಿತು ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದೆ ಬರಬೇಕಾಗಿರುವುದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದರು. ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆಯವರು ಮಾತನಾಡಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಇಂದು ಎಲ್ಲಾ ಕಡೆ ಕಾಣಿಸುತ್ತಿದ್ದು ಆಸ್ಪತ್ರೆ ಸೇರಿರುವ ವ್ಯಕ್ತಿ ಬದುಕಿ ಉಳಿದು ಬರಬೇಕಾದರೆ ರಕ್ತದ ಅಗತ್ಯವಿದೆ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಾರ್ಶ್ವನಾಥ ಅಜ್ರಿಯವರು ಮಾತನಾಡಿ ರಕ್ತದಾನಿ ಒಬ್ಬ ಸೈಲೆಂಟ್ ಹೀರೋ, ಯಾಕೆಂದರೆ ತಾನು ನೀಡಿರುವ ರಕ್ತ ಯಾರಿಗೆ ಸೇರುತ್ತದೆ ಎಂಬುದೂ ಆತನಿಗೆ ತಿಳಿದಿರುವುದಿಲ್ಲ. ಅಂತೆಯೇ ವೈಯಕ್ತಿಕ ಲಾಭ, ಅಭಿಲಾಷೆಗಳೂ ರಕ್ತದಾನದ ಸಂದರ್ಭ ಆತನಲ್ಲಿ ಇರುವುದಿಲ್ಲ ಎಂದರು. ಟೆಂಪಲ್ ಟೌನ್‌ ರೋಟರಿ ಅಧ್ಯಕ್ಷ ಹರೀಶ್ ಎಂ.ಕೆ., ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ವೆನ್ಲಾಕ್ ಆಸ್ಪತ್ರೆಯ ಬ್ಲಡ್‌ ಬ್ಯಾಂಕ್‌ನ ವಿದ್ಯಾ, ಆಂಟನಿ, ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಖಾದರ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮೂರೂ ಕ್ಲಬ್‌ಗಳ ಕಾರ್ಯದರ್ಶಿ ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎನ್ನೆಸ್ಸೆಸ್ ಅಧಿಕಾರಿ ಮಲ್ಲಿಕಾ ರಾವ್ ಸ್ವಾಗತಿಸಿದರು. ಶ್ರೇಯಾ ನಿರೂಪಿಸಿದ ಕಾರ್ಯಕ್ರಮದಲ್ಲಿ ರಶ್ಮಿ ವಂದಿಸಿದರು.

ತೌಳವ ಇಂದ್ರ ಸಮಾಜ(ರಿ)ದಿಂದ ಧರ್ಮಸ್ಥಳದಲ್ಲಿ ಶಾಂತಿ ಚಕ್ರ ಆರಾಧನೆ ಮತ್ತು ಲಕ್ಷಾಧಿಕ ಜಾಪ್ಯಮಂತ್ರ ಪಠನೆ

Article Image

ತೌಳವ ಇಂದ್ರ ಸಮಾಜ(ರಿ)ದಿಂದ ಧರ್ಮಸ್ಥಳದಲ್ಲಿ ಶಾಂತಿ ಚಕ್ರ ಆರಾಧನೆ ಮತ್ತು ಲಕ್ಷಾಧಿಕ ಜಾಪ್ಯಮಂತ್ರ ಪಠನೆ

ತೌಳವ ಇಂದ್ರ ಸಮಾಜದ ಸದಸ್ಯರಿಂದ ಲೋಕ ಶಾಂತ್ಯರ್ಥವಾಗಿ ಧರ್ಮಸ್ಥಳದ ಭ l ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶಾಂತಿ ಚಕ್ರ ಆರಾಧನೆ, ಸಾಮೂಹಿಕ ಜಾಪ್ಯಾ ಮಂತ್ರ ಹಾಗೂ ಪೂಜಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಬೆಳಗ್ಗೆ 7 ಗಂಟೆಗೆ ಆರಾಧನಾ ಪೂಜಾ ಕಾರ್ಯಕ್ರಮಗಳು ಪ್ರಾರಂಭಗೊಂಡವು,ತದನಂತರ ಲಕ್ಷಾಧೀಕ ಶಾಂತಿ ಮಂತ್ರ ಪಠಣ ಕಾರ್ಯ ಸಾಮೂಹಿಕವಾಗಿ ಮಾಡಲಾಯಿತು. ನೆರೆದಿರುವ ಸುಮಾರು ಇನ್ನೂರಕ್ಕೂ ಮಿಕ್ಕಿದ ಸಮಾಜ ಬಾಂಧವರುಗಳು ಬೇರೆಬೇರೆ ಊರುಗಳಿಂದ (ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ) ಬಂದು ಸಕ್ರಿಯವಾಗಿ ಭಾಗವಹಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಬೆಂಬಲವನ್ನು ನೀಡಿದರು. ನಂತರ ನಡೆದ ಸರಳ ಸಮಾರಂಭದಲ್ಲಿ ಸಮಾಜ ಬಾಂಧವರಿಂದ ಸನ್ಮಾನ ಹಾಗೂ ಬೇರೆ ಬೇರೆ ಬಸದಿಗಳ ಪ್ರಸಾದ ಸ್ವೀಕರಿಸಿ ಮಾತನಾಡಿದ ಪೂಜ್ಯ ಖಾವಂದರು "ಇಂದ್ರ ಸಮಾಜದವರು ಯಾವತ್ತೂ ನಮ್ಮೊಡನೆ ಇದ್ದು ಕ್ಷೇತ್ರದ ಎಲ್ಲಾ ಕಾರ್ಯಗಳಿಗೆ ಬೆಂಬಲ ನೀಡುತ್ತಾರೆ. ಹಿರಿಯರ ಪುರೋಹಿತರ ಆಶೀರ್ವಾದ ಸದಾ ಸಕಾರಾತ್ಮಕವಾಗಿರಲಿ" ಎಂದು ಎಲ್ಲರನ್ನು ಅಭಿನಂದಿಸಿದರು. ಹೇಮಾವತಿ ಹೆಗ್ಗಡೆಯವರು ಮತ್ತು ಹರ್ಷೇಂದ್ರ ಕುಮಾರ್ ಹೆಗ್ಗಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಬೆಳ್ತಂಗಡಿ ಬಸದಿಗೆ ಭೇಟಿ

Article Image

ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಬೆಳ್ತಂಗಡಿ ಬಸದಿಗೆ ಭೇಟಿ

ಉಜಿರೆ: ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸೆ. 21 ರಂದು ಭಾನುವಾರ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥ ಕ್ಷೇತ್ರಕ್ಕೆ ಆಗಮಿಸಲಿದ್ದು ಕೀರ್ತಿಶೇಷ ಕಿನ್ಯಮ್ಮ ಯಾನೆ ಗುಣವತಿಅಮ್ಮ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ 700 ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸಲಿದ್ದಾರೆ ಎಂದು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್ ತಿಳಿಸಿದ್ದಾರೆ. ಬಸದಿಯ ಆಡಳಿತ ಮೊಕ್ತೇಸರರಾಗಿದ್ದ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿಅಮ್ಮನವರ ವಾರ್ಷಿಕ ಸ್ಮರಣಾರ್ಥ ಪೂರ್ವಾಹ್ನ ಗಂಟೆ ಏಳರಿಂದ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ 108 ಕಲಶಾಭಿಷೇಕ, ಮೂರು ಬಸದಿಗಳಲ್ಲಿ ನವಕಲಶಾಭಿಷೇಕ, ಮಹಾಪೂಜೆ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ಅಲಂಕಾರಪೂಜೆ ನಡೆಯಲಿದೆ. ಅಪರಾಹ್ನ ಮೂರು ಗಂಟೆಯಿಂದ ಪೂಜ್ಯ ಸ್ವಾಮೀಜಿಯವರಿಂದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ನಡೆಯಲಿದೆ. ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್ ಅಧ್ಯಕ್ಷತೆ ವಹಿಸುವರು.

ದಿಗಂಬರ್ ಜೈನ್ ಮಹಾಸಮಿತಿ ದೆಹಲಿಯ ಕಾರ್ಯಾಧ್ಯಕ್ಷರ ಭೇಟಿ

Article Image

ದಿಗಂಬರ್ ಜೈನ್ ಮಹಾಸಮಿತಿ ದೆಹಲಿಯ ಕಾರ್ಯಾಧ್ಯಕ್ಷರ ಭೇಟಿ

ದಿಗಂಬರ್ ಜೈನ್ ಮಹಾಸಮಿತಿ, ದೆಹಲಿ ಇದರ ಕಾರ್ಯಾಧ್ಯಕ್ಷರು ಬಿಪಿನ್ ಸುಮಾರ್ ಜೈನ್ ಸರಫ್, ದಿನಾಂಕ 12.09.2025ನೇ ಶುಕ್ರವಾರ ಹಾಸನಕ್ಕೆ ಭೇಟಿ ನೀಡಿದರು. ಕಾರ್ಯಕ್ರಮವನ್ನು ಹಾಸನದ ದೆಹಲಿ ದಿಗಂಬರ ಜೈನ್ ಸಮಿತಿಯ ಸಂಚಾಲಕರಾದ ಹೆಚ್.ಎನ್‌., ಅಭಿನಂದನ್‌ರವರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಜೈನ ಮಹಾಸಮಿತಿಯ ಕಾರ್ಯಾಧ್ಯಕ್ಷರು ಸಮಿತಿಯು 50 ವರ್ಷಗಳ ಹಿಂದೆ 1976ರಲ್ಲಿ ಸ್ಥಾಪಿತವಾಗಿದ್ದು ಶ್ರೀ 108 ವಿದ್ಯಾನಂದ ಮುನಿಮಹರಾಜರ ಆಶೀರ್ವಾದದಿಂದ ಪ್ರಾರಂಭವಾಗಿರುತ್ತದೆ. ಸಮಿತಿಯ ಸಮನ್ವಯ ಸದ್ಭಾವನೆ ಮತ್ತು ಸಂಘಟನೆಯ ಪ್ರತಿಬಿಂಬವಾಗಿರುತ್ತದೆ. ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಜೈನ ಸಾಮಾಜಿಕ ಕಲ್ಯಾಣ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಗಳನ್ನು ಹಂಚಿಕೊಳ್ಳು ಸಮಾಜದ ಹಿತದೃಷ್ಠಿಯಿಂದ ಸರಪಳಿ ಸಧಿಸಬಹುದಾಗಿರುತ್ತದೆ. ಸಮಾಜದ ಬಡವರಿಗೆ, ಮಕ್ಕಳಿಗೆ, ಅವಶ್ಯಕತೆ ಇರುವ ಸವಲತ್ತುಗಳನ್ನು ಪೂರೈಸಲಾಗುತ್ತದೆ. ಹಾಸನದ ಜೈನ ಬಾಂಧವರು ಈ ಸಂಸ್ಥೆಯ ಅಜೀವ ಸದಸ್ಯತ್ವ ಪಡೆದುಕೊಳ್ಳಬೇಕೆಂದು ವಿನಂತಿಸಿದರು. ಹಾಸನ ಜೈನ ಸಂಘದ ಅಧ್ಯಕ್ಷರಾದ ಹೆಚ್‌.ಬಿ. ಶಾಂತೀಶ್, ಕರ್ನಾಟಕ ಜೈನ ಅಸೋಸಿಯೇಷನ್‌ ಹಾಸನದ ಪ್ರತಿನಿಧಿ ಹೆಚ್.ಬಿ.ನಾಗೇಂದ್ರಯ್ಯ, ಜೈನ ಸಹಕಾರ ಮಂಡಳಿಯ ಅಧ್ಯಕ್ಷರಾದ ಸುಕುಮಾ‌ ಮತ್ತು ಮಹಾವೀರ ಭವನದ ಅಧ್ಯಕ್ಷರಾದ ಎಂ. ಧನ್‌ ಪಾಲ್ ಮತ್ತು ಕಾಳಲಾದೇವಿ ಮಹಿಳಾ ಸಮಾಜದ ಅಧ್ಯಕ್ಷರಾದ ಸುಪ್ರಭ ಅಭಿನಂದನ್ ಇವರುಗಳು ಮಾತನಾಡಿ ಸಮಿತಿಯ ಸದಸ್ಯರಾಗಿ ಬೆಂಬಲಿಸುವುದಾಗಿ ತಿಳಿಸಿದರು. ಹಾಸನ ವಿಭಾಗಕ್ಕೆ ಹೆಚ್.ಎನ್. ಅಭಿನಂದನ್‌ ರವರು ಸಂಚಾಲಕ ಸಂರಕ್ಷಕರಾಗಿರುತ್ತಾರೆ ಎಂದು ಕಾರ್ಯಾಧ್ಯಕ್ಷರು ತಿಳಿಸಿದರು. ಹಾಸನದ ಬಾಹುಬಲಿ ಭವನದಲ್ಲಿ ಜೈನ ಸಮಾಜದ ಪ್ರಮುಖರು ಭಾಗವಹಿಸಿದ್ದರು. ಸಭೆಯು ರಂಜಿತ ಸಮಂತ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಸಂಚಾಲಕರಾದ ಅಭಿನಂದನ್‌ರವರು ಸಭೆಗೆ ಆಗಮಿಸಿದ್ದ ಅತಿಥಿಗಳು ಮತ್ತು ಗಣ್ಯರಿಗೆ ಸ್ವಾಗತವನ್ನು ಕೋರಿದರು. ಅಭಿನಂದನ್‌ರವರು ಆಗಮಿಸಿದ್ದ ಅತಿಥಿಗಳಿಗೆ ಗೌರವ ಸಮರ್ಪಿಸಿದರು. ವಂದನಾರ್ಪಣೆ ಮಾಡಿದರು.

ಕಾರ್ಕಳ : ದಶಲಕ್ಷಣ ಪರ್ವ ಆಚರಣೆ

Article Image

ಕಾರ್ಕಳ : ದಶಲಕ್ಷಣ ಪರ್ವ ಆಚರಣೆ

ಕಾರ್ಕಳ ಹಿರಿಯಂಗಡಿ ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮದಲ್ಲಿ ದಿನಾಂಕ 28.08.2025 ನೇ ಗುರುವಾರದಿಂದ ದಿನಾಂಕ 06.09.2025 ನೇ ಶನಿವಾರದವರೆಗೆ ಪರಮ ಪೂಜ್ಯ 108 ಮುನಿಶ್ರೀ ಮಹಿಮಾಸಾಗರ ಮುನಿ ಮಹಾರಾಜರ ಆಶೀರ್ವಾದಪೂರ್ವಕ ಹಾಗೂ ಕಾರ್ಕಳ ದಾನಶಾಲಾ ಜೈನ ಮಠದ ರಾಜಗುರು ಧ್ಯಾನ ಯೋಗಿ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಶಲಕ್ಷಣ ಪರ್ವವನ್ನು ಶ್ರದ್ಧಾ ಭಕ್ತಿಯಿಂದ ಪ್ರತಿ ವರ್ಷದಂತೆ ಆಚರಿಸಲಾಯಿತು. ಉತ್ತಮ ಕ್ಷಮಾಧರ್ಮದಂದು ಯುವ ನ್ಯಾಯವಾದಿಗಳಾದ ಸುವೃತ್ ಕುಮಾರ್ ಹಾಗೂ ಸಮಾಜದ ಹಿರಿಯರು ದೀಪ ಬೆಳಗಿಸುವುದರ ಮೂಲಕ 10 ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರತಿದಿನ ಸಂಜೆ ಜಿನಪೂಜೆ, ಭಜನೆ, ಮಹಾಮಂಗಳಾರತಿ, ವಿದ್ವಾಂಸರಿಂದ ಉಪನ್ಯಾಸ, ತತ್ವಾರ್ಥ ಸೂತ್ರವಾಚನ, ನಿಲಯದ ವಿದ್ಯಾರ್ಥಿಗಳಿಂದ ಭಾಷಣ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕೊನೆಯ ದಿನವಾದ ದಿನಾಂಕ 06.09.2025 ನೇ ಶನಿವಾರ ಉತ್ತಮ ಬ್ರಹ್ಮಚರ್ಯ ಧರ್ಮದ ಆಚರಣೆಯಂದು ಆಶ್ರಮದ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಎಂಕೆ ವಿಜಯಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕೋಶಾಧಿಕಾರಿಗಳಾದ ಎಸ್ ಅನಂತರಾಜ್ ಪೂವಣಿ ಮತ್ತು ಆಶ್ರಮದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸನ್ಮತ್ ಕುಮಾರ್ ನಾರಾವಿ ಇವರ ಗೌರವ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಆರಂಭದಲ್ಲಿ ಯೋಗರಾಜ್ ಶಾಸ್ತ್ರಿ ಇವರು ಸ್ವಾಗತಿಸಿದರು. ಪರ್ವದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನಡೆಸಲಾದ ಧಾರ್ಮಿಕ ಮತ್ತು ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಆಶ್ರಮದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ವತಿಯಿಂದ 7 ನೇ, 10 ನೇ ಮತ್ತು ದ್ವಿತೀಯ ಪಿಯುಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪುರಸ್ಕರಿಸಲಾಯಿತು. ಧಾರ್ಮಿಕ ಗುರುಗಳಾದ ಯೋಗರಾಜ್ ಶಾಸ್ತ್ರಿ ಇವರು ತತ್ವಾರ್ಥಸೂತ್ರ ಪಠಿಸಿದರು. ವಿದ್ಯಾರ್ಥಿ ಹಿತೇಶ್ ಪ್ರಾರ್ಥಿಸಿದರು. ಅನ್ವಿತ್ ಎಚ್ ಎಸ್ ವರದಿ ಮಂಡಿಸಿದರು. ಶ್ರವಣ್ ವಿದ್ಯಾರ್ಥಿ ಭಾಷಣ ನೆರವೇರಿಸಿದರು. ಆಶ್ರಮದ ಮೇಲ್ವಿಚಾರಕರಾದ ವೀರೇಂದ್ರ ಜೈನ್ ಧನ್ಯವಾದ ಸಮರ್ಪಿಸಿದರು. ತೀರ್ಥನ್ ಇವರು ಕಾರ್ಯಕ್ರಮ ನಿರೂಪಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

Article Image

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

ತೌಳವ ಇಂದ್ರ ಸಮಾಜ(ರಿ). ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಇತ್ತೀಚೆಗೆ ಮೂಡಬಿದಿರೆ ಶ್ರೀ ಧವಳ ಕಾಲೇಜ್ ನ ಸಭಾಂಗಣದಲ್ಲಿ ನಡೆಯಿತು. "2009ರಲ್ಲಿ ಸಮಾಜ ಮುಖಿ ಚಿಂತನೆಯ ಇಂದ್ರ ಬಂಧುಗಳ ಶ್ರಮದಲ್ಲಿ,ಸಮಸ್ತ ಇಂದ್ರ ವರ್ಗದವರನ್ನು ಒಗ್ಗೂಡಿಸಿ, ಸಂಘ ಸ್ಥಾಪನೆಯಾಯಿತು ಮತ್ತು ಕಳೆದ ಹಲವಾರು ವರ್ಷಗಳಲ್ಲಿ ಸಂಘಟನೆಯು ಪೂಜಾಪಾಠಗಳ ತರಬೇತಿ, ಹಿರಿಯ ಪುರೋಹಿತರ ಸನ್ಮಾನ, ವಿದ್ಯಾರ್ಥಿ ಪುರಸ್ಕಾರ, ಕ್ರೀಡಾಕೂಟ, ಸಾಮೂಹಿಕ ಮೃತ್ಯುಂಜಯ ಆರಾಧನೆ, ಸಾಧಕರ ಸನ್ಮಾನ, ವಿದ್ಯಾರ್ಥಿ ವೇತನ ನೀಡಿಕೆ, ಆಟಿಕೂಟ, ಪ್ರವಾಸ, ಉಚಿತ ಆರೋಗ್ಯ ಶಿಬಿರ, ಸಾಮೂಹಿಕ ಉಪನಯನ ಸಂಸ್ಕಾರ ಹಾಗೂ ವೃತೋಪದೇಶಗಳು ಮುಂತಾದ ಪರಸ್ಪರ ಬಾಂಧವ್ಯ ಸಂವರ್ಧನೆಯ ಕೆಲಸ ಕಾರ್ಯಗಳನ್ನು ಮಾಡಿದೆ." ಎಂದು ಪ್ರಾಸ್ತಾವಿಕ ಭಾಷಣವನ್ನು ಸಂಘದ ಉಪಾಧ್ಯಕ್ಷರಾದ ಪ್ರೊ.ಅಕ್ಷಯ ಕುಮಾರ್ ಮಳಲಿಯವರು ಬಳಿಕ ಅತಿಥಿಗಳನ್ನೂ ಸ್ವಾಗತಿಸಿದರು. ಹಿರಿಯ ಪುರೋಹಿತರಾದ ಮಿತ್ರಸೇನ ಇಂದ್ರ ಮುಂಡಾಜೆ,ನೆರೆಂಕಿ ಸುಭಾಶ್ಚಂದ್ರ ಇಂದ್ರ, ಆನಂತರಾಜ ಇಂದ್ರ ಬಂಟ್ವಾಳ, ಹಾಗೂ ಶ್ಯಾಮರಾಜ ಇಂದ್ರ, ನೇರೆಂಕಿ ಅವರುಗಳನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಎಂ. ಜ್ಞಾನಚಂದ್ರ ಇಂದ್ರರವರು ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲರನ್ನು ಸ್ಮರಿಸುತ್ತಾ, ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ಪ್ರತಿ ವರ್ಷದಂತೆ ಎಸ್ ಎಸ್ ಎಲ್ ಸಿ ಮತ್ತು ಪಿ. ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಶಸ್ತ ವರ್ಷದಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು. ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿ ವಿವಿಧ ಉನ್ನತ ಹುದ್ದೆಯನ್ನು ಅಲಂಕರಿಸಿರುವ ಸಮಾಜ ಬಾಂಧವರನ್ನು ಅಭಿನಂದಿಸಲಾಯಿತು. ಅನಂತರ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಕಾರ್ಯಕ್ರಮ ನಡೆಯಿತು. ಅರ್ಕಕೀರ್ತಿ ಇಂದ್ರರವರು ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷ ಧರಣೇಂದ್ರ ಇಂದ್ರರು ತಮ್ಮ ಮುಂದಿನ ಯೋಜನೆಗಳನ್ನು ಪ್ರಸ್ತಾಪಿಸಿದರು. ಕಾರ್ಯದರ್ಶಿ ಅಭಯ ಕುಮಾರ್ ಬಿ. ವಾರ್ಷಿಕ ವರದಿ ಓದಿದರು, ಸುವಿಧಿ ಇಂದ್ರ ಲೆಕ್ಕಪತ್ರ ಮಂಡಿಸಿದರು.ಮಹಾ ಸೇನಾ ಇಂದ್ರ ಪ್ರತಿಭಾ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು, ದಿವ್ಯಾ ವೀರೇಂದ್ರ ಶ್ರದ್ಧಾಂಜಲಿ ಅರ್ಪಣೆ ಮಾಡಿದರು. ಪ್ರಮೋದ್ ಕುಮಾರ್ ಅಭಿನಂದಿತರ ಪಟ್ಟಿ ಓದಿ ಕಾರ್ಯಕ್ರಮ ನಡೆಸಿಕೊಟ್ಟರು. ಕೋಶಾಧಿಕಾರಿ ವಿಜಯ ಕುಮಾರಿ ಇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿಶ್ಚಿತ ಪ್ರಾರ್ಥನೆ ಮಾಡಿದರು, ಹರಿಶ್ಚಂದ್ರ ಇಂದ್ರ ಕಾರ್ಯಕ್ರಮ ನಿರೂಪಿಸಿದರು. ಸುಜ್ಞಾನ ಇಂದ್ರ ಧನ್ಯವಾದ ಸಮರ್ಪಿಸಿದರು.

ದಶಲಕ್ಷಣ ಪರ್ವ

Article Image

ದಶಲಕ್ಷಣ ಪರ್ವ

ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ (ರಿ.) ಹಿರಿಯಂಗಡಿ, ಕಾರ್ಕಳದಲ್ಲಿ ದಿನಾಂಕ 28.08.2025ನೇ ಗುರುವಾರದಿಂದ 06.09.2025ನೇ ಶನಿವಾರದ ಪರ್ಯಂತ ಆಶ್ರಮದ ಜಿನ ಮಂದಿರದ ಪ್ರಾಂಗಣದಲ್ಲಿ ಪ್ರತಿನಿತ್ಯ ಸಂಜೆ ಗಂಟೆ 6.00ರಿಂದ ಪರಮಪೂಜ್ಯ 108 ಮುನಿಶ್ರೀ ಮಹಿಮಾಸಾಗರ ಮುನಿ ಮಹಾರಾಜರ ಆಶೀರ್ವಾದ ಪೂರ್ವಕ ಹಾಗೂ ಕಾರ್ಕಳ ಶ್ರೀ ಜೈನ ಮಠದ ರಾಜಗುರು ಧ್ಯಾನಯೋಗಿ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಶಲಕ್ಷಣ ಪರ್ವ ಸಮಾರಂಭವು ಪೂಜೆ, ಭಜನೆ ಉಪನ್ಯಾಸ, ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ವಿ.ಸೂ. ಈ ಪುಣ್ಯ ದಿನಗಳಲ್ಲಿ ತಾವು ನೀಡಿದ ಅಮೂಲ್ಯ ದಾನವನ್ನು ಸ್ವೀಕರಿಸಲಾಗುವುದು.

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Article Image

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ ಪರಂಪರೆ ಹಾಗೂ ಹೆಗ್ಗಡೆಯವರ ಬಹುಮುಖಿ ಸಮಾಜಸೇವಾ ಕಾರ್ಯಗಳನ್ನು ಬೆಂಬಲಿಸಿ ಸಕ್ರಿಯ ಸಹಕಾರ ನೀಡುವುದು ಸಮಗ್ರ ಜೈನಸಮಾಜದ ಕರ್ತವ್ಯವಾಗಿದೆ ಎಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಕಾರ್ಕಳ ಸೀಮೆಯ ಜೈನ ಬಾಂಧವರೊಂದಿಗೆ ಶನಿವಾರ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರನ್ನು ಗೌರವಿಸಿ ಶುಭ ಹಾರೈಸಿದರು. ಕೆಸರಾದ ನೀರನ್ನು ಮತ್ತೆ ತಿಳಿಯಾಗಿ ಪರಿಶುದ್ಧಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಪಪ್ರಚಾರ, ಆರೋಪಗಳಲೆಲ್ಲ ದೂರವಾಗಲಿ. ಹೆಗ್ಗಡೆಯವರಿಗೆ ಎಲ್ಲಾ ದೈವ-ದೇವರುಗಳು ದೀರ್ಘಾಯುರಾರೋಗ್ಯವನ್ನಿತ್ತು ಇನ್ನಷ್ಟು ಲೋಕಕಲ್ಯಾಣ ಕಾರ್ಯಗಳನ್ನು ಮಾಡುವಂತೆ ಹರಸಲೆಂದು ಸ್ವಾಮೀಜಿ ಪ್ರಾರ್ಥಿಸಿದರು. ಕಾರ್ಕಳ ಸೀಮೆಯ ಎಲ್ಲಾ ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುರೋಹಿತರು ತಂದ ಪ್ರಸಾದವನ್ನು ಹೆಗ್ಗಡೆಯವರಿಗೆ ಅರ್ಪಿಸಿದರು. ಸ್ವಾಮೀಜಿಯವರು ಕಾರ್ಕಳ ಮಠದ ಬಸದಿಯ ವಿಶೇಷ ಪ್ರಸಾದವನ್ನು ಹೆಗ್ಗಡೆಯವರಿಗೆ ನೀಡಿ ಶುಭ ಹಾರೈಸಿದರು. ಕಾರ್ಕಳದ ಡಾ. ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ಸತ್ಯಕ್ಕೆ ಸದಾ ಜಯವಿದೆ. ಮಾತುಬಿಡ ಮಂಜುನಾಥ ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಸತ್ಯ ಪ್ರಕಟವಾಗುವುದರೊಂದಿಗೆ ಆರೋಪಿಗಳಿಗೆ ಶಿಕ್ಷೆಯಾಗಲಿ. ಹೆಗ್ಗಡೆಯವರ ಜೊತೆ ನಾವೆಲ್ಲ ಸದಾ ಪೂರ್ಣ ಬೆಂಬಲ ನೀಡಲು ಸಿದ್ಧರು, ಬದ್ಧರು ಎಂದು ಅವರು ಭರವಸೆ ನೀಡಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಶಿರ್ತಾಡಿಯ ಎಸ್.ಡಿ. ಸಂಪತ್ ಸಾಮ್ರಾಜ್ಯ, ಸುದರ್ಶನ ಜೈನ್ ಬಂಟ್ವಾಳ, ಪುಷ್ಪರಾಜ ಜೈನ್, ಮಂಗಳೂರು, ಕುಲದೀಪ್, ಚೌಟರ ಅರಮನೆ, ಮೂಡಬಿದ್ರೆ, ಅಂಡಾರು ಮಹಾವೀರ ಹೆಗ್ಡೆ, ಅನಂತ್ರಾಜ ಪೂವಣಿ, ಶಿಶುಪಾಲ ಜೈನ್, ಮೋಹನ ಪಡಿವಾಳ್, ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ, ಗುಣವರ್ಮ ಜೈನ್, ಕಾರ್ಕಳ, ನೇಮಿರಾಜ ಆರಿಗಾ ಮೊದಲಾದವರು ಇದ್ದರು. ತಮ್ಮ ಬಗ್ಗೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಸಮಾಜ ಬಾಂಧವರ ಭಕ್ತಿ-ಗೌರವ, ಅಭಿಮಾನ ಸದಾ ಇದೇ ರೀತಿ ಇರಲೆಂದು ಹಾರೈಸಿ, ಹೆಗ್ಗಡೆಯವರು ಎಲ್ಲರಿಗೂ ಶುಭ ಹಾರೈಸಿದರು. ಕಾರ್ಕಳ ಸೀಮೆಯಿಂದ ಸುಮಾರು ಮುನ್ನೂರು ಮಂದಿ ಶ್ರಾವಕರು-ಶ್ರಾವಕಿಯರು ಆಗಮಿಸಿದರು.

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್

Article Image

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ವತಿಯಿಂದ ಜೈನ್ ಮಿಲನ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಆಟಿಡೂರ ತಮ್ಮನದ ಲೇಸ್ ಕಾರ್ಯಕ್ರಮ ಭಾನುವಾರ ಸಂಜೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಸುಮಾರು 65ಕ್ಕೂ ಅಧಿಕ ಬಗೆಯ ಆಟಿಯ ಖಾದ್ಯಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಸಭಾ ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ಜೈನಬಾಂಧವರು ಆಟಿಡೊರ ತಮ್ಮನದ ಲೇಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಭಾರತೀಯ ಜೈನ್ ಮಿಲನ್ ವಲಯ 8ರ ಮಂಗಳೂರು ವಿಭಾಗದ ನಿಕಟಪೂರ್ವ ಅಧ್ಯಕ್ಷ ಪುಷ್ಪರಾಜ್ ಜೈನ್ ಉದ್ಘಾಟಿಸಿದರು. ಪದಪ್ರದಾನದ ಪೌರೋಹಿತ್ಯವನ್ನು ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ಸುದರ್ಶನ ಜೈನ್ ಪಂಜಿಕಲ್ಲು ವಹಿಸಿದ್ದರು. ಅಧ್ಯಕ್ಷತೆಯನ್ನು ಜೈನ್ ಮಿಲನ್ ಬಂಟ್ವಾಳ ಅಧ್ಯಕ್ಷ ಮಧ್ವರಾಜ್ ಜೈನ್ ಪಂಜಾಲು ವಹಿಸಿದ್ದರು. ನೂತನ ಸಾಲಿನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ರಾಜೇಂದ್ರ ಜೈನ್, ಕಾರ್ಯದರ್ಶಿಯಾಗಿ ಜಯಕೀರ್ತಿ ವೈ.ಎಸ್., ಕೋಶಾಧಿಕಾರಿಯಾಗಿ ಪ್ರವೀಣ್ ಕುಮಾರ್ ಬಸ್ತಿಪಡ್ಡು, ಉಪಾಧ್ಯಕ್ಷರಾಗಿ ತೇಜ್ ಪಾಲ್ ಜೈನ್, ಡಾ. ಸೀಮಾ ಸುದೀಪ್, ಅರ್ಕಕೀರ್ತಿ ಹೆಗ್ಡೆ, ಹರ್ಷರಾಜ್ ಬಲ್ಲಾಳ್, ವಿನಯಚಂದ್ರ ಜೈನ್, ಜೊತೆ ಕಾರ್ಯದರ್ಶಿಗಳಾಗಿ ಹರ್ಷೇಂದ್ರ ಹೆಗ್ಡೆ, ಸಂಧ್ಯಾ ಸಿದ್ಧಕಟ್ಟೆ, ಚಂದನಾ ಬೃಜೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸನ್ಮತಿ ಜಯಕೀರ್ತಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯಕುಮಾರ್, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೇಯಾಂಸ್ ಜೈನ್ ಸಹಿತ ಸಂಚಾಲಕರ ತಂಡ, ಕಾರ್ಯಕಾರಿ ಸಮಿತಿಯ ಅಧಿಕಾರ ಸ್ವೀಕರಿಸಿತು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಡ್ ಉಳಿಪ್ಪಾಡಿ ಮಾತನಾಡಿ, ಜೈನರು ಸಮಾಜದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುವುದರ ಮೂಲಕ ಗೌರವಾನ್ವಿತ ಸ್ಥಾನಮಾನದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಶುಭ ಹಾರೈಸಿದರು. ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಸರ್ವ ಸಮಾಜದ ಪ್ರೀತಿಗೆ ಮಾನ್ಯರಾದ ಜೈನರು ಸಾಮಾಜಿಕವಾಗಿ ಗೌರವಾನ್ವಿತರಾದ ಸ್ಥಾನದಲ್ಲಿದ್ದಾರೆ. ಜೈನ ಆಹಾರ ಪದ್ಧತಿಯಿಂದ ತೊಡಗಿ, ಮುನಿಗಳು ನೀಡಿದ ಸಂದೇಶಗಳು ಪ್ರಸ್ತುತವಾಗಿವೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಅಶೋಕ್ ಜೈನ್ ಮಾತನಾಡಿ, ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬ ಕುರಿತು ವಿವರಿಸಿದರು. ಈ ಸಂದರ್ಭ ಹಿರಿಯರನ್ನು ಗೌರವಿಸಲಾಯಿತು ನೂತನ ಅಧ್ಯಕ್ಷ ರಾಜೇಂದ್ರ ಜೈನ್ ಮುಂದಿನ ಯೋಜನೆಗಳ ಕುರಿತು ವಿವರಿಸಿದರು. ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ನಿರ್ದೇಶಕ ಪ್ರಮೋದ್ ಕುಮಾರ್ ವೇಣೂರು ಶುಭ ಹಾರೈಸಿದರು. ಮಂಗಳೂರು ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ನೂತನ ಕಾರ್ಯದರ್ಶಿ ಜಯಕೀರ್ತಿ ವೈ.ಎಸ್. ವಂದಿಸಿದರು.

ಮೂಡುಬಿದಿರೆಯಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣೆ, ಯೋಜನೆ, ತರಬೇತಿ, ಚರ್ಚಾ ಗೋಷ್ಠಿ

Article Image

ಮೂಡುಬಿದಿರೆಯಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣೆ, ಯೋಜನೆ, ತರಬೇತಿ, ಚರ್ಚಾ ಗೋಷ್ಠಿ

ಮಂಗಳೂರು ಜಿಲ್ಲಾ ಪಂಚಾಯತ್ ತೋಟಗಾರಿಕಾ ಇಲಾಖೆ, ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರ, ರೈತ ಜನ್ಮಯ ರೈತ ಉತ್ಪಾದಕರ ಕಂಪನಿ, ಮೂಡುಬಿದರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿಗಳ ಜಂಟಿ ಸಹಭಾಗಿತ್ವದಲ್ಲಿ ತೋಟಗಾರಿಕೆ ಪಿತಾಮಹ ದಿ. ಡಾ. ಎಂ.ಎಚ್. ಮರಿಗೌಡ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕೆ ಬೆಳೆಗಳಲ್ಲಿ ಸಂಸ್ಕರಣೆ, ಯೋಜನೆ, ತರಬೇತಿ ಹಾಗೂ ಚರ್ಚಾ ಗೋಷ್ಠಿ ಆಗಸ್ಟ್ 8ರಂದು ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಲ್ಪವೃಕ್ಷ ಕ್ಕೆ ನೀರು ಎರೆದು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಬಾಹುಬಲಿ ಪ್ರಸಾದ್ ಮಾತನಾಡಿ ಕೃಷಿಕರಿಗೆ ನಮ್ಮ ಸೊಸೈಟಿ ಉತ್ತೇಜನವನ್ನು ನೀಡುತ್ತಿದೆ ಆ ಎಲ್ಲಾ ಸೌಲಭ್ಯಗಳನ್ನು ಕೃಷಿಕರು ಉಪಯೋಗಿಸಿಕೊಳ್ಳಬೇಕೆಂದು ಕೇಳಿಕೊಂಡರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ. ಅವರು ತೋಟಗಾರಿಮೋವಾಬಕೆ ಬೆಳೆಗಳ ಸಂಸ್ಕರಣೆ, ಯೋಜನೆಗಳ ಬಗ್ಗೆ ತರಬೇತಿಯನ್ನು ನೀಡಿದರು. ಆರಂಭದಲ್ಲಿ ಕೃಷಿ ವಿಚಾರ ವಿನಿಮಯ ಕೇಂದ್ರದ ಹಿರಿಯ ಸದಸ್ಯರಾದ ರಾಜವಮ೯ ಬೈಲಂಗಡಿಯವರು ಪ್ರಸ್ಥಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಎಂಸಿಎಸ್ ಬ್ಯಾಂಕಿನ ಕಾಯ೯ನಿವಾಕರಾದ ರಘುವೀರ್ ಕಾಮತ್, ಕೃಷಿ ವಿಚಾರ ಕೇಂದ್ರದ ಅಧ್ಯಕ್ಷ ಅಭಯ ಕುಮಾರ್, ರೈತಜನ್ಯ ಸಂಸ್ಥೆಯ ಅಧ್ಯಕ್ಷ ಲಿಯೋ ವಾಲ್ಟರ್ ನಜ್ರೆತ್, ಹಾಜರಿದ್ದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ. ಅವರು ಸ್ವಾಗತಿಸಿ ವಂದಿಸಿದರು. ಸದಾನಂದ ನಾರಾವಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ವಯೋನಿವೃತಿ

Article Image

ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ವಯೋನಿವೃತಿ

ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು. ‌ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ವಹಿಸಿದ್ದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಇವರು ಆಗಮಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ. ರವಿಕುಮಾರ್, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್, ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ, ಡಾ| ಸಂತೋಷ್ ಗೌಡ, ಡಾ| ಯತೀಶ್, ಡಾ| ವಿನಯ್ ಕುಮಾರ್, ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ, ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು., ಜಾನುವಾರು ಅಧಿಕಾರಿಗಳವರಾದ ನಾಗಶಯನ, ಪ್ರಶಾಂತ್ ಕುಮಾರ್ ಮತ್ತು ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು.

ಮಹಿಳೆಯರ ಸೇವಾ ಸಾಧನೆ ಸ್ತುತ್ಯರ್ಹ- ಅನಿತಾ ಸುರೇಂದ್ರ ಕುಮಾರ್

Article Image

ಮಹಿಳೆಯರ ಸೇವಾ ಸಾಧನೆ ಸ್ತುತ್ಯರ್ಹ- ಅನಿತಾ ಸುರೇಂದ್ರ ಕುಮಾರ್

ಮೂಡುಬಿದಿರೆ: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಮತ್ತು ಸಾಧನೆಯ ಮೂಲಕ ಸ್ತುತ್ಯರ್ಹ ಕಾರ್ಯ ಮಾಡುತ್ತಿದ್ದಾರೆ. ಇಂತಹ ಸೇವೆ, ಸಾಧನೆಗಳು ನಿರಂತರ ಮುಂದುವರಿಯಲಿ ಎಂದು ಭಾರತೀಯ ಜೈನ್ ಮಿಲನ್ ನ ಉಪಾಧ್ಯಕ್ಷೆಯೂ ಆಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ನುಡಿದರು. ಜು. 21ರಂದು ಸಂಜೆ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆದ ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನೂತನ ಅಧ್ಯಕ್ಷೆ ನ್ಯಾಯವಾದಿ ಶ್ವೇತಾ ಜೈನ್, ಕಾರ್ಯದರ್ಶಿ ಅನಿತಾ ಪಿ. ಶೆಟ್ಟಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಮೂಡುಬಿದಿರೆಯ ಇನ್ನರ್ ವೀಲ್ ಕ್ಲಬ್ ಕಳೆದ 35 ವರ್ಷಗಳಿಂದ ಗೈದಿರುವ ಸೇವೆ ಸಾಧನೆಗಳನ್ನು ಗಮನಿಸುತ್ತಾ ಬಂದಿದ್ದೇನೆ. ವಿದ್ಯಾಗಿರಿ, ನಿಶ್ಮಿತಾ ಟವರ್ ಬಳಿಯ ಬಸ್ ತಂಗುದಾಣ, ಇನ್ನರ್ ವೀಲ್ ಕ್ಲಬ್ ವೃತ್ತಗಳು ಮೂಡುಬಿದಿರೆಯಲ್ಲಿ ಕ್ಲಬ್ ಹಮ್ಮಿಕೊಂಡಿರುವ ಸೇವೆಯ ಪ್ರತೀಕವಾಗಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕ್ಲಬ್‌ನ ಎಲ್ಲಾ ಹಿರಿಯ ಸದಸ್ಯೆಯರು ಅಭಿನಂದನೀಯರು ಎಂದು ನುಡಿದರು. ಇನ್ನರ್ ವೀಲ್ ಕ್ಲಬ್ ಜಿಲ್ಲಾ ಉಪಾಧ್ಯಕ್ಷೆ ರಜನಿ ಭಟ್ ಅವರು ಮಾತನಾಡಿ ಒಂದು ಹೆಜ್ಜೆ ಮುಂದೆ ಹೋಗಿ ಮಾದರಿ ನಾಯಕತ್ವ ಈ ವರ್ಷ ಇನ್ನರ್ ವೀಲ್ ಕ್ಲಬ್‌ನ ಧ್ಯೇಯವಾಕ್ಯವಾಗಿದ್ದು ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನ ನೂತನ ಅಧ್ಯಕ್ಷೆ ಶ್ವೇತಾ ಜೈನ್ ಒಂದು ಹೆಜ್ಜೆ ಮುಂದೆ ಹೋಗಿ 33 ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು ಶ್ಲಾಘಿಸಿ ಶುಭ ಕೋರಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಹಗಡೆಯವರು ಮಾತನಾಡಿ ಸ್ನೇಹ ಮತ್ತು ಸೇವೆ ಇನ್ನರ್ ವೀಲ್ ಕ್ಲಬ್‌ನ ಧ್ಯೇಯವಾಗಿದ್ದು ಈ ಆಶಯದೊಂದಿಗೆ ನಡೆಯುವ ಕ್ಲಬ್‌ನ ಎಲ್ಲಾ ಚಟುವಟಿಕೆಗಳಿಗೆ ಪೂರ್ಣ ಬೆಂಬಲ ನೀಡುವ ಭರವಸೆಯಿತ್ತರು. ನೂತನ ಅಧ್ಯಕ್ಷೆ ಶ್ವೇತಾ ಜೈನ್ ಅವರು ಮಾತನಾಡಿ ಕ್ಲಬ್‌ನ ಹಿರಿಯ ಸದಸ್ಯೆಯರಾದ ಶಾಲಿನಿ ನಾಯಕ್, ಜಯಶ್ರೀ ಅಮರನಾಥ ಶೆಟ್ಟಿ, ಪ್ರಕಾಶಿನಿ ಹೆಗ್ಡೆ ಮುಂತಾದವರ ಪಾರದರ್ಶಕ ನಾಯಕತ್ವ ತಮಗೆ ಮಾದರಿಯಾಗಿದ್ದು, ತಮ್ಮ ಕಕ್ಷಿದಾರರಿಗೆ ಯಾವುದೇ ತೊಂದರೆಯಾಗದಂತೆ ವಕೀಲ ವೃತ್ತಿಯನ್ನು ಮುಂದುವರಿಸಿ, ಕ್ಲಬ್‌ ಮುಖಾಂತರ ಹಮ್ಮಿಕೊಳ್ಳುವ ಎಲ್ಲಾ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಭರವಸೆಯಿತ್ತರು. ಸೇವಾ ಕಾರ್ಯಕ್ರಮದ ಅಂಗವಾಗಿ ದ್ವಿತೀಯ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ಕುಸುಮಾ ಅವರಿಗೆ ರೂ. 15 ಸಾವಿರ ಸಹಾಯಧನ, ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರೂ. 10 ಸಾವಿರದ ಪುಸ್ತಕಗಳು, ಮೂಡುಬಿದಿರೆ ಪ್ರೆಸ್ ಕ್ಲಬ್ ನೂತನ ಕಟ್ಟಡ ನಿರ್ಮಾಣಕ್ಕೆ ರೂ. 10 ಸಾವಿರ ಕೊಡುಗೆ ಹಾಗೂ ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ನ ಹಸಿ ಮತ್ತು ಒಣ ಕಸ ಸಂಗ್ರಹಣಾ ವ್ಯವಸ್ಥೆಗೆ ರೂ. 5ಸಾವಿರ ಮೌಲ್ಯದ ಸಾಮಗ್ರಿ ವಿತರಿಸಲಾಯಿತು. ಇನ್ನರ್ ವೀಲ್ ಕ್ಲಬ್ ಜಿಲ್ಲಾ ಸಂಪಾದಕಿ ದೀಪಾ ಭಂಡಾರಿ, ಐ.ಎಸ್.ಒ. ಸಹನಾ ಭಟ್ ಉಪಸ್ಥಿತರಿದ್ದರು. ಬಿಂದಿಯಾ ಶೆಟ್ಟಿ ಸ್ವಾಗತಿಸಿದರು. ಅನಿತಾ ಪ. ಶೆಟ್ಟಿ ಸೇವಾ ಕಾರ್ಯಗಳ ವಿವರ ನೀಡಿದರು. ಅಪೇಕ್ಷಾ ಪೂರ್ಣಚಂದ್ರ ಜೈನ್ ಪ್ರಾರ್ಥಿಸಿದರು. ತರೀನಾ ಪಿಂಟೋ ನಿರೂಪಿಸಿದ ಕಾರ್ಯಕ್ರಮದಲ್ಲಿ ನಿಶ್ಮಿತಾ ನಾಗರಾಜ್ ವಂದಿಸಿದರು.

ಮೂಡುಬಿದಿರೆ: ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ

Article Image

ಮೂಡುಬಿದಿರೆ: ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ

ಧರ್ಮ ಬಂಧು, ಶ್ರೀ ದಿಗಂಬರ ಜೈನ ಮಠದಲ್ಲಿ ಪ.ಪೂ ಆಚಾರ್ಯ ೧0೮ ಗುಲಾಬ್ ಭೂಷಣ ಮುನಿ ಮಹಾರಾಜ್ ಉಪಸ್ಥಿತಿ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾ ಚಾರ್ಯವರ್ಯ ಮಹಾಸ್ವಾಮೀಜಿ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ ಗಂಟೆ 2.00 ರಿಂದ 20.07.2025 ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ ಜರುಗಿತು. ಆಚಾರ್ಯರ ಉಪಸ್ಥಿತಿಯಲ್ಲಿ ಪ್ರವಚನ ನೀಡಿದ ಪ.ಪೂ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಪ್ರತಿ ಸಂಸಾರಿ ಜೀವಿಗಳು ದರ್ಶನಾವರಣಿಯ ಜ್ಞಾನಾವರಣಿಯ ವೇದನಿಯ, ಮೋಹನೀಯ, ಆಯು, ನಾಮ,ಗೋತ್ರ ಅಂತರಾಯ ಎಂಬ ಎಂಟು ಕರ್ಮಗಳನ್ನು ನಾಶ ಮಾಡ ದ ಹೊರತು ಮುಕ್ತಿ ಸಿಗದು ಮುಕ್ತಿ ಸಿಗಲು ಉತ್ತಮ ಮನಸ್ಸು ರತ್ನತ್ರಯ ಅವಲಂಬನೆ ಮುಖ್ಯ ಇಂದಿನ ಆರಾಧನೆ ಮೂಲ ಎಂಟು ಕರ್ಮ ದ ಭೇದ ಗಳಾದ 148 ಕರ್ಮ ನಾಶ ಪಡಿಸಿದ ಸಿದ್ದ ಭಗವಂತರ ಗುಣಗಾನ ಎಂದು ಆಶೀರ್ವಾದ ನೀಡಿದರು ಬಳಿಕ ಆಚಾರ್ಯರ ಸ್ವಾಮೀಜಿ, ಗಳ ಪಾದಪೂಜೆ, ಆರತಿ ಜರುಗಿತು.

ಶ್ರೀ ದಿಗಂಬರ ಜೈನ ಮಠದಲ್ಲಿ ಕರ್ಮ ದಹನ ಆರಾಧನಾ ಕಾರ್ಯಕ್ರಮ

Article Image

ಶ್ರೀ ದಿಗಂಬರ ಜೈನ ಮಠದಲ್ಲಿ ಕರ್ಮ ದಹನ ಆರಾಧನಾ ಕಾರ್ಯಕ್ರಮ

ಮೂಡಬಿದಿರೆ: ಶ್ರೀ ದಿಗಂಬರ ಜೈನ ಮಠದಲ್ಲಿ ನಾಳೆ (ಜು.20) ಪ.ಪೂ ಆಚಾರ್ಯ ೧0೮ ಗುಲಾಬ್ ಭೂಷಣ ಮುನಿ ಮಹಾರಾಜ್‌ರ ಸಾನ್ನಿಧ್ಯದಲ್ಲಿ, ಜಗದ್ಗುರು ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಉಪಸ್ಥಿತಿಯಲ್ಲಿ ಮಧ್ಯಾಹ್ನ 2.00 ರಿಂದ ವಿಶೇಷ ಅಭಿಷೇಕ ಕರ್ಮ ದಹನ ಆರಾಧನೆ, ಆಚಾರ್ಯರ ಪ್ರವಚನ, ಸ್ವಾಮೀಜಿಗಳವರ ಆಶೀರ್ವಚನ ಆಚಾರ್ಯರ ಪಾದಪೂಜೆ, ಆರತಿ ಈ ಎಲ್ಲಾ ಕಾರ್ಯಕ್ರಮಗಳು ಜರುಗಲಿದೆ.

ವೇಣೂರು: ನೂತನ ಪದಾಧಿಕಾರಿಗಳ ಪದಗ್ರಹಣ

Article Image

ವೇಣೂರು: ನೂತನ ಪದಾಧಿಕಾರಿಗಳ ಪದಗ್ರಹಣ

ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಯಾತ್ರಿ ನಿವಾಸದಲ್ಲಿ ಜು. 13ರಂದು ನಡೆಯಿತು. ಸಭಾ ಕಾರ್ಯಕ್ರಮ ಪ್ರಾರಂಭವಾಗುವ ಮೊದಲು ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಭ| ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಮತ್ತು ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ಜಿನವಾಣಿ ಮಹಿಳಾ ಸಮಾಜದ ಅಧ್ಯಕ್ಷರಾದ ಸುಮನಾಜಿ ಡಿ. ಅಧಿಕಾರಿ ಹಾಗೂ ಮೂಡಬಿದ್ರಿ ಸರ್ವಮಂಗಳ ಜೈನ ಮಹಿಳಾ ಸಮಾಜದ ಅಧ್ಯಕ್ಷರಾದ ಮಂಜುಳಾ ಯಶೋಧರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಅಧ್ಯಕ್ಷರಾಗಿ ಸುನೀತಾ ಶಾಂತಿಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿ ದೀಪಶ್ರೀ ಜೈನ್ ಮತ್ತು ಕೋಶಾಧಿಕಾರಿಯಾಗಿ ಸುಕನ್ಯ ಬಲ್ಲಾಳ್ ಆಯ್ಕೆಯಾದರು. ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಮಹಿಳಾ ಒಕ್ಕೂಟದ ನಿರ್ದೇಶಕರಾದ ಸರೋಜ ಗುಣಪಾಲ್ ಜೈನ್ ವಹಿಸಿದ್ದರು. ಗೌರವ ಉಪಸ್ಥಿತಿಯನ್ನು ಬ್ರಾಹ್ಮಿ ಜೈನ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷರಾದ ಪ್ರಸನ್ನ ಆರ್. ಹೆಗ್ಡೆ ಹಾಗೂ ರಾಜೇಶ್ವರಿ ವಿ.ಅಧಿಕಾರಿ ವಹಿಸಿದ್ದರು. ವಾರ್ಷಿಕ ಗತ ಸಭೆಯ ವರದಿಯನ್ನು ನಿರ್ಗಮಿತ ಕಾರ್ಯದರ್ಶಿಗಳಾದ ಆಶಾಲತಾ ಮಂಡಿಸಿದರು. ಹಾಗೆಯೇ ನಿರ್ಗಮಿತ ಕೋಶಾಧಿಕಾರಿ ವಾಣಿ ವೃಷಭರಾಜ್ ಲೆಕ್ಕ ಪತ್ರ ಮಂಡಿಸಿದರು. ನಿರ್ಗಮಿತ ಅಧ್ಯಕ್ಷರಾದ ಸರೋಜಾ ಗುಣಪಾಲ್ ಜೈನ್ ನೂತನ ಅಧ್ಯಕ್ಷರಾದ ಸುನೀತಾ ಶಾಂತಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪದ್ಮಲತಾ ಮತ್ತು ಸುನೀತಾ ಬಲ್ಲಾಳ್ ಪ್ರಾರ್ಥಿಸಿ, ನಿರ್ಗಮಿತ ಜತೆ ಕಾರ್ಯದಶಿಗಳಾದ ಮಮತಾ ಪ್ರಸಾದ್ ಸ್ವಾಗತಿಸಿದರು. ನೂತನ ಕಾರ್ಯದರ್ಶಿಗಳಾದ ದೀಪಶ್ರೀ ಜೈನ್ ಧನ್ಯವಾದವಿತ್ತರು. ಸಂಧ್ಯಾ ಸುಕುಮಾರ್, ಆಶಾಲತಾ ಜೈನ್‌ರವರು ಕಾರ್ಯಕ್ರಮ ನಿರೂಪಿಸಿದರು.

ತೋವಿನಕೆರೆ ಜೈನ ಮಂದಿರದಲ್ಲಿ ಚಾತುರ್ಮಾಸ

Article Image

ತೋವಿನಕೆರೆ ಜೈನ ಮಂದಿರದಲ್ಲಿ ಚಾತುರ್ಮಾಸ

ತೋವಿನಕೆರೆ: ಗ್ರಾಮದ ಚಂದ್ರನಾಥ ದೇವಾಲಯದಲ್ಲಿ ದಿಗಂಬರ ಜೈನ ಮುನಿ ಪಾಯಸಾಗರ ಮುನಿ ಚಾತುರ್ಮಾಸ ಕೈಗೊಂಡಿದ್ದು, ಇಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಜುಲೈ 14ರಿಂದ ಇಲ್ಲಿ ಚಾತುರ್ಮಾಸ ಆಚರಣೆ ಕೈಗೊಂಡಿದ್ದಾರೆ. ಅಕ್ಟೋಬರ್ 21ರವರೆಗೆ ಮುಂದುವರೆಯುತ್ತದೆ. 20ರಂದು ಮಂಗಳ ಕಳಸ ಪ್ರತಿಷ್ಠಾಪನೆ ಸಲುವಾಗಿ ವಿಶೇಷ ಸಮಾರಂಭ ದೇವಾಲಯದ ಅವರಣದಲ್ಲಿ ನಡೆಯುತ್ತದೆ ಎಂದು ಚಂದ್ರನಾಥ ಸ್ವಾಮಿ ದಿಗಂಬರ ಜೈನ ಸಂಘದವರು ತಿಳಿಸಿದ್ದಾರೆ. ಪ್ರತಿ ದಿನ ಸಂಜೆ 6ರಿಂದ ಮುನಿಗಳಿಂದ ಉಪನ್ಯಾಸ ಹಾಗೂ ಭಕ್ತರಿಂದ ಅರತಿ ಕಾರ್ಯಕ್ರಮ ನಡೆಯುತ್ತದೆ.

ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮಗಳು

Article Image

ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮಗಳು

ಚಿಕ್ಕಮಗಳೂರು: ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರ ಪೆನುಗೊಂಡ ದಿಗಂಬರ ಜೈನ ಮಹಾಸಂಸ್ಥಾನ ಮಠ ಶ್ರೀ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತೀ ಭಾನುವಾರ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ. ಪೂಜಾ ವಿವರ ಬೆಳಿಗ್ಗೆ 8-00 ಕ್ಕೆ : ಜಿನೇಶ್ವರರ ಪಂಚಾಮೃತ ಅಭಿಷೇಕ, 09-30 ಕ್ಕೆ : ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪಂಚಾಮೃತ ಅಭಿಷೇಕ ಮತ್ತು ಆರಾಧನೆ, ಸಂಜೆ 6-30 ಕ್ಕೆ : ಅಷ್ಠಾವದಾನ ಸೇವೆ, ಷೋಡಶೋಪಚಾರ ಪೂಜೆ, 7-30 ಕ್ಕೆ : ಮಹಾಮಂಗಳಾರತಿ ನಡೆಯಲಿದೆ.

First Previous

Showing 1 of 4 pages

Next Last