Article Image

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

Article Image

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯು ಊರ ಹಾಗೂ ಪರವೂರ ದಾನಿಗಳಿಂದ ಜೀರ್ಣೋದ್ಧಾರಗೊಂಡಿದ್ದು, ಧಾಮ ಸಂಪ್ರೋಕ್ಷಣ ಮಹೋತ್ಸವವು ಫೆ. 28 (ಶುಕ್ರವಾರ) ಹಾಗೂ ಮಾರ್ಚ್ 1 (ಶನಿವಾರ) ಮತ್ತು 2 ರಂದು (ಭಾನುವಾರ) ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ ಎಂದು ಬಸದಿಯ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಹೆಗ್ಡೆ, ಎರ್ಮೆದೋಡಿ ಗುತ್ತು ಮತ್ತು ಕಾರ್ಯದರ್ಶಿ ಸುರೇಶ್ ಕುಮಾರ್, ಉಜಿರೆ ತಿಳಿಸಿದ್ದಾರೆ. ಫೆ:28: ಶುಕ್ರವಾರ: ಬೆಳಿಗ್ಗೆ ಗಂಟೆ 8 ರಿಂದ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ. ಅಪರಾಹ್ನ ಗಂಟೆ 2.30ರಿಂದ ನಾಂದಿಮಂಗಲ ಪೂಜಾವಿಧಾನ, ಕ್ಷೇತ್ರಪಾಲ ಪ್ರತಿಷ್ಠೆ, ನಾಗಪ್ರತಿಷ್ಠೆ, ಭಗವಾನ್ ಆದಿನಾಥ ಸ್ವಾಮಿಗೆ 24 ಕಲಶ ಅಭಿಷೇಕ, ಮಹಾಪೂಜೆ ಮಾ. 1: ಶನಿವಾರ: ಬೆಳಿಗ್ಗೆ 8 ಗಂಟೆಯಿಂದ ನಿತ್ಯವಿಧಿ ಸಹಿತ ವಾಸ್ತು ಪೂಜಾವಿಧಾನ, ನವಗ್ರಹ ಶಾಂತಿ, ಅಪರಾಹ್ನ ಗಂಟೆ 2 ರಿಂದ ಪದ್ಮಾವತಿ ದೇವಿಗೆ ರಜತಕವಚ ಸಮರ್ಪಣೆ, ಆರಾಧನೆ, ಲಕ್ಷ ಹೂವಿನ ಪೂಜೆ, ಭಗವಾನ್ ಆದಿನಾಥ ಸ್ವಾಮಿಗೆ ೫೪ ಕಲಶ ಅಭಿಷೇಕ, ಮಹಾಪೂಜೆ ಮಾ. 2: ಭಾನುವಾರ: ಬೆಳಿಗ್ಗೆ ಗಂಟೆ 8 ರಿಂದ ಧಾಮ ಸಂಪ್ರೋಕ್ಷಣೆ, ಭಗವಾನ್ ಆದಿನಾಥ ಸ್ವಾಮಿ ಪ್ರತಿಷ್ಠೆ, ಶಿಖರಾರೋಹಣ. ಅಪರಾಹ್ನ ಗಂಟೆ 3.30 ರಿಂದ ಭಕ್ತಾಮರ ಆರಾಧನೆ. ಭಗವಾನ್ ಆದಿನಾಥ ಸ್ವಾಮಿಗೆ 108 ಕಲಶ ಅಭಿಷೇಕ, ಮಹಾಪೂಜೆ, ತೋರಣ ವಿಸರ್ಜನೆ. ಸೇವಾಕರ್ತೃಗಳು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬಸ್ಥರು. ಪ್ರತಿಷ್ಠಾಚಾರ್ಯ ಬೆಳ್ತಂಗಡಿ ಜಯರಾಜ ಇಂದ್ರರು, ಪುಷ್ಪರಾಜ ಇಂದ್ರರು ಮತ್ತು ಸ್ಥಳ ಪುರೋಹಿತ ವೃಷಭರಾಜ ಇಂದ್ರರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸುವರು. ಧಾರ್ಮಿಕ ಸಭೆ: ಮಾ. 2 ರಂದು ಭಾನುವಾರ ಸಂಜೆ 5 ಗಂಟೆಯಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸುವರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಕಿಶೋರ್ ಹೆಗ್ಡೆ: ಮೊ: 9148659620

ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ

Article Image

ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ

ಭಾರತೀಯ ಜೈನ್ ಮಿಲನ್ ವಲಯ 8, ಮಂಗಳೂರು ವಿಭಾಗ ಇದರ ಆಶ್ರಯದಲ್ಲಿ ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ ಹಾಗೂ ಜಿನ ಭಜನ ವಿಜೇತ ತಂಡಗಳಿಗೆ ಪುರಸ್ಕಾರ ಸಮಾರಂಭ ಮತ್ತು ಮಾಹಿತಿ ಕಾರ್ಯಕ್ರಮವು ದಿನಾಂಕ 23- 2 -2025 ಆದಿತ್ಯವಾರ ಅಪರಾಹ್ನ 3.30ಕ್ಕೆ ಸರಿಯಾಗಿ ಕುಪ್ಪೆಪದವು ಅನಂತರಾಜ್ ಸಭಾಭವನದಲ್ಲಿ ನಡೆಯಿತು. ಪ್ರಾರಂಭದಲ್ಲಿ ನೇರೆಂಕಿ ಪಾರ್ಶ್ವನಾಥ್ ಮೂಡಬಿದ್ರೆ ಇವರು ಜೈನ ಬಸದಿಗಳ ದಾಖಲೀಕರಣದ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿವರಣೆಯೊಂದಿಗೆ ನಡೆಸಿಕೊಟ್ಟರು. ಬಳಿಕ ನಡೆದ ಮಾಸಿಕ ಸಭೆಯಲ್ಲಿ ನೇರಂಕಿ ಪಾರ್ಶ್ವನಾಥ್ ಇವರನ್ನು ಸನ್ಮಾನಿಸಲಾಯಿತು . ವಿಜೇತ ಜಿನಭಜನಾ ತಂಡಗಳಾದ ಅನಂತ ಶ್ರೀ ಜನಭಜನಾ ತಂಡ ಬಜಗೋಳಿ, ಬ್ರಾಹ್ಮಿ ಜಿನಭಜನಾ ತಂಡ ಮೂಡಬಿದ್ರೆ , ಸಮ್ಯಕ್ತ ಜಿನಭಜನಾ ತಂಡ, ಬಂಟ್ವಾಳ, ಅನಂತಪಾರ್ಶ್ವ ಜಿನಭಜನಾ ತಂಡ ಕುಪ್ಪೆ ಪದವು ಇದರ ಸದಸ್ಯರನ್ನು ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ. ಉಜ್ವಲ ಕಂಬಳಿ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಭಾಗ 8ರ ಉಪಾಧ್ಯಕ್ಷರಾದ ಸುದರ್ಶನ್ ಜೈನ್ ವಹಿಸಿದ್ದರು. ಮಧ್ವರಾಜ್ ಜೈನ್ ಅಧ್ಯಕ್ಷರು ಬಂಟ್ವಾಳ ಜೈನ್ ಮಿಲನ್, ಸ್ವರ್ಣ ಲತಾ ಅಜಿತ್ ಕುಮಾರ್ ಅಧ್ಯಕ್ಷರು ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆ ಪದವು ಉಪಸ್ಥಿತರಿದ್ದರು. ಜೈನ್ ಮಿಲನ್ ವಲಯ 8ರ ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಜೈನ್ ಜಿನಭಜನಾ ತಂಡಗಳಿಗೆ ಪುರಸ್ಕಾರ ನೀಡಿ ಅಭಿನಂದಿಸಿದರು. ವಲಯ ನಿರ್ದೇಶಕರಾದ ಸೋಮಶೇಖರ್ ಶೆಟ್ಟಿ, ಪ್ರಮೋದ್ ಕುಮಾರ್, ಶ್ರೀವರ್ಮ ಅಜ್ರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಡಾ. ಸುದೀಪ್ ಕುಮಾರ್ ಮಾಜಿ ಅಧ್ಯಕ್ಷರು, ಜೈನ್ ಮಿಲನ್ ಬಂಟ್ವಾಳ, ಭೋಜರಾಜ ಜೈನ್ ಸ್ಥಾಪಕ ಅಧ್ಯಕ್ಷರು ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆಪದವು ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಿಲನ್ ಕಾರ್ಯದರ್ಶಿಗಳಾದ ಭರತ್ ಕುಮಾರ್, ಹರ್ಷ ಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅನ್ವಿತಾ ಜೈನ್ ಸ್ವಾಗತಿಸಿ, ಸುಪ್ರಿಯಾ ಭರತ್ ಧನ್ಯವಾದ ನೀಡಿದರು. ಕಾಂಚನಶ್ರೀ, ನಿಶ್ಚಿತಾ ಜೈನ್ ಸನ್ಮಾನ ಪತ್ರವನ್ನು ಓದಿದರು. ಮಂಗಳೂರು ವಿಭಾಗ ಕಾರ್ಯದರ್ಶಿ, ವೀರ್ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು. ಜೈನ್ ಮಿಲನ್ ಕುಪ್ಪೆಪದವು ಆತಿಥ್ಯವನ್ನು ವಹಿಸಿದ್ದರು.

ಮೈಸೂರು: ವಾರ್ಷಿಕ ಪೂಜಾ ಮಹೋತ್ಸವ

Article Image

ಮೈಸೂರು: ವಾರ್ಷಿಕ ಪೂಜಾ ಮಹೋತ್ಸವ

ಮೈಸೂರು: ಇಲ್ಲಿಯ ಶ್ರೀ ಆದಿನಾಥ ತೀರ್ಥಂಕರ ಸೇವಾ ಸಮಿತಿಯವರ ಆಶ್ರಯದಲ್ಲಿ ಶ್ರೀ ೧೦೦೮ ಆದಿನಾಥ ತೀರ್ಥಂಕರರ ಮೋಕ್ಷ ಕಲ್ಯಾಣ ಜಿನರಾತ್ರಿ ವಾರ್ಷಿಕ ಪೂಜಾ ಮಹೋತ್ಸವ ಆಚರಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಆದಿನಾಥ ಸಭಾಂಗಣ ಶ್ರೀ ಕ್ಷೇತ್ರ ಶ್ರೀರಂಗ ಪಟ್ಟಣದಲ್ಲಿ ದಿನಾಂಕ 27-02-2025ನೇ ಗುರುವಾರದಂದು ನಡೆಯಲಿದೆ. ಪಾವನ ಸಾನ್ನಿಧ್ಯ, ಆಶೀರ್ವಚನ: ಪ.ಪೂ. ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಶ್ರೀ ಕ್ಷೇತ್ರ ಕನಕಗಿರಿ ಅಧ್ಯಕ್ಷತೆ: ಬಿ.ಎಸ್. ಸಂತೋಷ್ ಕುಮಾರ, ಅಧ್ಯಕ್ಷರು, ಶ್ರೀ ಆದಿನಾಥ ಸೇವಾ ಟ್ರಸ್ಟ್, ಮೈಸೂರು ಉಪನ್ಯಾಸ: ಪಂಪ ಮಹಾಕವಿ ವಿರಚಿತ ಆದಿ ಪುರಾಣ ಉಪನ್ಯಾಸಕರು: ಡಾ. ಹೆಚ್.ಪಿ. ಮೋಹನ ಕುಮಾರ ಶಾಸ್ತ್ರಿ, ಕುಲಸಚಿವರು, ಆಚಾರ್ಯ ಗುರುಕುಲ, ಮೈಸೂರು ದಿವ್ಯ ಉಪಸ್ಥಿತಿ: ಪ್ರತಿಷ್ಟಾಚಾರ್ಯ ಎಸ್. ಎಂ. ಸನ್ಮತಿಕುಮಾರ ಶಾಸ್ತ್ರಿ, ಶ್ರೀರಂಗ ಪಟ್ಟಣ ಕ್ಷೇತ್ರ ಸಂರಕ್ಷಕರು ಮತ್ತು ಶ್ರಾವಿಕಭೂಷಣೆ ಪದ್ಮಲತಾ ಸನ್ಮತಿಕುಮಾರ, ಶ್ರೀ ಕ್ಷೇತ್ರ ಶ್ರೀ ರಂಗ ಪಟ್ಟಣ, ಮಂಡ್ಯ ಜಿಲ್ಲೆ.

ಕಾರ್ಕಳ: ಭಾರತೀಯ ಜೈನ್‌ ಮಿಲನಿನ ಮಾಸಿಕ ಸಭೆ

Article Image

ಕಾರ್ಕಳ: ಭಾರತೀಯ ಜೈನ್‌ ಮಿಲನಿನ ಮಾಸಿಕ ಸಭೆ

ಕಾರ್ಕಳ: ಇಲ್ಲಿಯ ಭಾರತೀಯ ಜೈನ್‌ ಮಿಲನಿನ ಫೆಬ್ರವರಿ ತಿಂಗಳ ಮಾಸಿಕ ಸಭೆಯು ನಾಳೆ (ಫೆ.23) ಹಿರಿಯಂಗಡಿಯಲ್ಲಿರುವ ಶ್ರೀ ಮಹಾವೀರ ಭವನದಲ್ಲಿ ನಡೆಯಲಿದೆ. ಚಾವಡಿ ಚರ್ಚೆ: ವಿಷಯ: ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಆಧುನಿಕತೆ ನಡೆಸಿಕೊಡುವವರು: ಮುನಿರಾಜ ರೆಂಜಾಳ ಭಾಗವಹಿಸುವವರು: ಮಹಾವೀರ ಜೈನ್‌ ಇಚಲಂಪಾಡಿ, ನಿರಂಜನ್‌ ಅಳಿಯೂರು, ಅಜಿತ್‌ ಕುಮಾರ್‌ ಜೈನ್‌ ಕೊಕ್ರಾಡಿ, ಶ್ವೇತಾ ಜೈನ್‌ ಮೂಡುಬಿದಿರೆ.

ವಿಟ್ಲ: ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ

Article Image

ವಿಟ್ಲ: ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ

ಶ್ರೀ ಕ್ಷೇತ್ರ ವಿಟ್ಲದಲ್ಲಿ ಫೆಬ್ರವರಿ 13 ರಿಂದ ಫೆ. 17ರವರೆಗೆ ನಡೆಯುತ್ತಿರುವ ಭ|| 1008 ಚಂದ್ರನಾಥ ಸ್ವಾಮಿ ಬಸದಿಯ ಪಂಚಕಲ್ಯಾಣ ಮಹೋತ್ಸವದಲ್ಲಿ ದಿನಾಂಕ 16-02-2025ರ ಭಾನುವಾರದಂದು ಸಂಜೆ 7.00 ಗಂಟೆಗೆ ಮಂಗಳೂರು ಜೈನ ಸಮಾಜ ಅರ್ಪಿಸುವ “ ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ” ಜರುಗಲಿದೆ. ಸಾಹಿತ್ಯ ಮತ್ತು ನಿರ್ದೇಶನ: ಸುಕುಮಾರ್ ಬಲ್ಲಾಳ್ ಮಂಗಳೂರು ನೃತ್ಯ ನಿರ್ದೇಶನ: ವಿಧುಷಿ ಶಾಶ್ವತಿ ಸಚಿನ್ ಮಂಗಳೂರು ರಂಗ ನಿರ್ವಹಣೆ ಹಾಗೂ ಸಂಯೋಜನೆ: ಸಚಿನ್ ಜೈನ್ ಮಂಗಳೂರು ಸಂಗೀತ: ಜಿನಗಾನ ವಿಶಾರದೆ ಜಯಶ್ರೀ ಡಿ. ಜೈನ್ ಹೊರನಾಡು ವಿಶೇಷ ಆಕರ್ಷಣೆ: ನವಿಲು ಬಸದಿಯಲ್ಲಿ ನವಿಲು ನೃತ್ಯ ಪುಟ್ಟ ಮಕ್ಕಳಿಂದ ಸಮವಸರಣ ನಿರ್ಮಾಣ ಒಂದೇ ವೇದಿಕೆಯಲ್ಲಿ ನೂರು ಶ್ರಾವಕ-ಶ್ರಾವಕಿಯರ ಅಭೂತಪೂರ್ವ ಪ್ರದರ್ಶನ.

ಬಜಿರೆ: ಬಸದಿಯಲ್ಲಿ ವಾರ್ಷಿಕ ಪೂಜಾ ಮಹೋತ್ಸವ

Article Image

ಬಜಿರೆ: ಬಸದಿಯಲ್ಲಿ ವಾರ್ಷಿಕ ಪೂಜಾ ಮಹೋತ್ಸವ

ಉಜಿರೆ: ವೇಣೂರು ಬಳಿ ಇರುವ ಬಜಿರೆ ಗ್ರಾಮದ ಹಲ್ಲಂದೋಡಿ ಬಸದಿ ಭಗವಾನ್ ವರ್ಧಮಾನ ಸ್ವಾಮಿ ಸನ್ನಿಧಿಯಲ್ಲಿ ಇದೇ 26 ರಂದು ಭಾನುವಾರ ವಾರ್ಷಿಕ ಪೂಜಾಮಹೋತ್ಸವ ನಡೆಯಲಿದೆ ಎಂದು ಬಸದಿಯ ಬಿ. ಶಶಿಕುಮಾರ್ ಇಂದ್ರ ತಿಳಿಸಿದ್ದಾರೆ. ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಭಾನುವಾರ ಬೆಳಿಗ್ಗೆ ಏಳು ಗಂಟೆಯಿಂದ ವಿಮಾನಶುದ್ಧಿ, ಶಾಂತಿ ಹೋಮದ ಬಳಿಕ 108 ಕಲಶ ಅಭಿಶೇಕ ನಡೆಯಲಿದೆ. ಅಪರಾಹ್ನ ಎರಡು ಗಂಟೆಯಿಂದ ಕಲಿಕುಂಡಯಂತ್ರಾರಾಧನೆ, ಅಷ್ಟಾವಧಾನ ಪೂಜೆ ನಡೆಯಲಿದೆ. ಸಂಜೆ ಗಂಟೆ 5.30 ರಿಂದ ಪದ್ಮಾವತಿ ಅಮ್ಮನವರಿಗೆ ಲಕ್ಷಹೂವಿನ ಪೂಜೆ ನಡೆಯಲಿದೆ. ಬಳಿಕ ಮೂಡಬಿದ್ರೆಯ ಪೂಜ್ಯ ಚಾರುಕೀರ್ತಿ ಭಟ್ಟಾರಕಸ್ವಾಮೀಜಿ ಮಂಗಲಪ್ರವಚನ ನೀಡುವರು.

10ನೇ ವರ್ಷದ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Article Image

10ನೇ ವರ್ಷದ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ವೇಣೂರು: ಇಲ್ಲಿನ ಶ್ರೀ ಬಾಹುಬಲಿ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಜೈನ ಭಾಂಧವರಿಗಾಗಿ 10ನೇ ವರ್ಷದ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು “ಶ್ರೀ ಬಾಹುಬಲಿ ಟ್ರೋಫಿ 2025” ಬಾಹುಬಲಿ ಬೆಟ್ಟದ ಬಳಿ ಇರುವ “ಇಂದ್ರ ಗ್ರೌಂಡ್”ನಲ್ಲಿ ಜ. 04ರಂದು ನಡೆಯಿತು. ಮೂಡುಬಿದಿರೆ ಶ್ರೀ ಜೈನ ಮಠದ ಭಾರತಭೂಷಣ ಪ. ಪೂ. ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪಾವನ ಸಾನ್ನಿಧ್ಯವಹಿಸಿ, ಕ್ರೀಡೆಯ ಬಗ್ಗೆ ಇರುವ ಅಭಿಮಾನವನ್ನು ವ್ಯಕ್ತಪಡಿಸಿ ಆಶೀರ್ವಚನವನ್ನಿತ್ತರು. ಕಾರ್ಯಕ್ರಮದ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಜೈನ್ ನೆರವೇರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ, ದ.ಕ, ಜೈನ್ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷರಾದ ವಿನಯ್ ಹೆಗ್ಡೆ ನಾರಾವಿ ವಹಿಸಿದ್ದರು. ಮುಖ್ಯ ಅತಿಥಿಗಳಾದ ವೇಣೂರಿನ ಪದ್ಮಾಂಬ ಸಮೂಹ ಸಂಸ್ಥೆಗಳ ಮಾಲಕರಾದ ಜಿನರಾಜ್ ಜೈನ್, ಜೈನ್ ಮಿಲನ್ ಅಧ್ಯಕ್ಷರಾದ ಸುಕುಮಾರ್ ಜೈನ್, ಬಾಹುಬಲಿ ಯುವಜನ ಸಂಘದ ಅಧ್ಯಕ್ಷರಾದ ಪ್ರಭಾಚಂದ್ರ ಜೈನ್, ಶಮಂತ್ ಕುಮಾರ್ ಜೈನ್ ಕಳೆಂಜಿರೋಡಿ ಪಡಂಗಡಿ, ಸತ್ಯಪ್ರಸಾದ್ ವಿ. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ| ಕೆ. ರವೀಂದ್ರನಾಥ್ ಪ್ರಸಾದ್, ಡಾ. ಜಯಕೀರ್ತಿಜೈನ್, ಸತೀಶ್ ಕೊಂಬ, ಜಿನರಾಜ್ ಜೈನ್ ಅವರನ್ನು ಸನ್ಮಾನಿಸಲಾಯಿತು. ನಿಧಿ, ಸುಶ್ಮಿತಾ, ಋತ್ವಿರವರು ಪ್ರಾರ್ಥಿಸಿದರು. ನಿಧಿರವರು ಸ್ವಾಗತಿಸಿ, ಮಹಾವೀರ ಜೈನ್ ಮೂಡುಕೋಡಿಗುತ್ತುರವರು ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ನಡೆದು. ಜ. 05ರಂದು ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿನಯ ಕುಮಾರ್ ಜೈನ್‌ರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಪ್ರಶಾಂತ್ ಕರಿಮುಗೇರು, ಸಂಭಾಷಣೆ ಉದಯಕುಮಾರ್, ಜಿನರಾಜ್ ಜೈನ್, ಸುದತ್ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸನ್ಮತ್‌ರಾಜ್ ನಿರೂಪಿಸಿದರು. ವಿಜೇತರ ಪಟ್ಟಿ: ಪ್ರಥಮ ಬಹುಮಾನ: ಬಳಂಜ ಟೀಮ್ ದ್ವಿತೀಯ ಬಹುಮಾನ: ಜೈನ್ ಫ್ರೆಂಡ್ಸ್ ಮೂಡುಬಿದಿರೆ ತೃತೀಯ ಬಹುಮಾನ: ಶ್ರೀ ಬಾಹುಬಲಿ ವೇಣೂರು ಚತುರ್ಥ ಬಹುಮಾನ: ಅರ್ವ ಟೀಮ್

ಮಲೆನಾಡು ಜೈನ್ ಮಿಲನ್ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಶೃಂಗೇರಿ ಚಿನಿವಾರ್ ರಾಜಶೇಖರಯ್ಯ ಜನ್ಮ ಶತಮಾನೋತ್ಸವ

Article Image

ಮಲೆನಾಡು ಜೈನ್ ಮಿಲನ್ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಶೃಂಗೇರಿ ಚಿನಿವಾರ್ ರಾಜಶೇಖರಯ್ಯ ಜನ್ಮ ಶತಮಾನೋತ್ಸವ

ನ.16: ಮೇಲ್ಕಂಡ ಸಂಸ್ಥೆಯ ಆಶ್ರಯದಲ್ಲಿ ಶೃಂಗೇರಿ ಸ್ವಾತಂತ್ರ್ಯ ಹೋರಾಟಗಾರ ಶೃಂಗೇರಿ ಚಿನಿವಾಶ್ ರಾಜಶೇಖರಯ್ಯನವರ ಜನ್ಮ ಶತಮಾನೋತ್ಸವವನ್ನು ಶೃಂಗೇರಿ ಬಸದಿ ಆವರಣದಲ್ಲಿ ಆಚರಿಸಲಾಯಿತು. ಚಿನಿವಾಶ್ ರಾಜಶೇಖರಯ್ಯನವರ ಮಗಳು ಕೀರ್ತಿಲತಾ ಮಲ್ಲಪ್ರಸಾದ್ ಶ್ರೀಯುತರ ಸ್ಮರಣಾರ್ಥ ಹತ್ತು ಜನ ಫಲಾನುಭವಿಗಳಿಗೆ ತಲಾ ಹತ್ತು ಸಾವಿರ ರೂ. ಸಹಾಯಧನ ನೀಡಿದರು. ಮಿಲನ್‌ನ ಅಧ್ಯಕ್ಷ ಶ್ರೇಣಿಕ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಶಿಲ್ಪಾರವಿ ಹಾಗೂ ಪ್ರವೀಣ್ ಪೂಜಾರಿ ಅತಿಥಿಗಳಾಗಿ ಆಗಮಿಸಿದ್ದರು. ಜೇಸಿ ಟ್ರೈನರ್ ಎನ್. ಪಿ. ಪಾಂಡುರಂಗ ರಾಜಶೇಖರಯ್ಯನವರ ಗುಣಗಾನ ಮಾಡಿದರು. ಕೀರ್ತಿಲತಾ ಪ್ರಾಸ್ತಾವಿಕ ಭಾಷಣ ಮಾಡಿದರು. ಡಾ| ನಿರಂಜನ್ ಸ್ವಾಗತಿಸಿ ಶುಭಾಶ್ಚಂದ್ರ ವಂದಿಸಿದರು ನಂತರ ಜೈನ ಬಸದಿಯಲ್ಲಿ ಮಿಲನ್ ಸದಸ್ಯರು ಶ್ರದ್ಧಾಭಕ್ತಿಯೊಂದಿಗೆ ದೀಪೋತ್ಸವ ಆಚರಿಸಿದು. ಶಶಿಪ್ರಭಾ ಶಾಂತಕುಮಾರ್ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮವನ್ನು ಶ್ರಾವಕಿಯರು ನಡೆಸಿಕೊಟ್ಟರು.

ಮಂಗಳೂರು ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ

Article Image

ಮಂಗಳೂರು ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ

ಉಜಿರೆ: ಸಾಹಿತ್ಯಕ್ಕೂ ಸಂಗೀತಕ್ಕೂ ಅವಿನಾಭಾವ ಸಂಬಂಧವಿದ್ದು, ಅಂತರಾತ್ಮದಲ್ಲಿ ದೇವರನ್ನು ಸ್ಮರಿಸಿ ಧ್ಯಾನ ಮಾಡಿ ರಾಗ, ತಾಳ, ಲಯ ಬದ್ಧವಾಗಿ ಭಜನೆ ಹಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ಮಕ್ಕಳಿಗೂ, ನಿತ್ಯವೂ ಭಜನೆ ಹಾಡುವ ಸಂಸ್ಕಾರವನ್ನು ನೀಡಿದರೆ ಅವರು ಧರ್ಮದ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡಿದಂತಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಭಾರತೀಯ ಜೈನ್‌ಮಿಲನ್ ನೇತೃತ್ವದಲ್ಲಿ ಬೆಳ್ತಂಗಡಿ ಜೈನ್‌ಮಿಲನ್ ಶಾಖೆಯ ಸಹಯೋಗದೊಂದಿಗೆ ಆಯೋಜಿಸಿದ ಮಂಗಳೂರು ವಿಭಾಗಮಟ್ಟದ ಜಿನಭಜನಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಭಜನೆಯನ್ನು ಸ್ಪರ್ಧೆಗಾಗಿ ಕಲಿಯದೆ ಮನೆಯಲ್ಲಿ ನಿತ್ಯವೂ ಸಹಜವಾಗಿ ಭಜನೆ ಹಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಸೋಲು-ಗೆಲುವಿನ ಬಗ್ಯೆ ಚಿಂತಿಸದೆ ಎಲ್ಲರೂ ಸ್ಪರ್ಧೆಯಲ್ಲಿ ಭಾಗವಹಿಸಿ ಭಜನಾ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಹೇಳಿದರು. ಸಾಧ್ಯವಾದರೆ ಮಕ್ಕಳೆ ಸಾಹಿತ್ಯ ರಚನೆ ಮಾಡಿ ರಾಗ, ಭಾವ, ತಾಳ ಸಂಯೋಜನೆಯೊAದಿಗೆ ಭಜನೆ ಹಾಡುವ ಅಭ್ಯಾಸ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಇಂದು(ಸೋಮವಾರ) ಹೆಗ್ಗಡೆಯವರ 76ನೆ ಜನ್ಮದಿನ ಆಚರಣೆಗಾಗಿ ನಿರೀಕ್ಷಾ ಹೊಸ್ಮಾರು ಜನ್ಮದಿನದ ಶುಭಾಶಯ ಕೋರುವ ಹಾಡೊಂದನ್ನು ಸುಶ್ರಾವ್ಯವಾಗಿ ಹಾಡಿದರು. ಜೈನ್‌ಮಿಲನ್ ವತಿಯಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳನ್ನು ಗೌರವಪೂರ್ವಕವಾಗಿ ಅರ್ಪಿಸಲಾಯಿತು. ಭಾರತೀಯ ಜೈನ್‌ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ಅನಿತಾ ಸುರೇಂದ್ರಕುಮಾರ್, ಉಜಿರೆಯ ಸೋನಿಯಾ ಯಶೋವರ್ಮ, ಪೂರನ್‌ವರ್ಮ, ಪೆರಿಂಜೆ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನದ ಆಡಳಿತಮೊಕ್ತೇಸರ ಜೀವಂಧರಕುಮಾರ್, ಭಾರತೀಯ ಜೈನ್‌ಮಿಲನ್ ವಲಯ 8 ರ ಕಾರ್ಯಾಧ್ಯಕ್ಷ ಪ್ರಸನ್ನಕುಮಾರ್, ಮೂಡಬಿದ್ರೆಯ ನೋಟರಿ ಶ್ವೇತಾ ಜೈನ್, ಕಾರ್ಕಳದ ಶಶಿಕಲಾ ಹೆಗ್ಡೆ, ವೇಣೂರು ಜೈನತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣಕುಮಾರ್ ಇಂದ್ರ ಮತ್ತು ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್‌ಕುಮಾರ್ ಜೈನ್ ಹಾಗೂ ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ಡಾ. ನವೀನ್ ಕುಮಾರ್ ಜೈನ್ ಉಪಸ್ಥಿತರಿದ್ದರು. ಸುದರ್ಶನ್‌ಜೈನ್ ಬಂಟ್ವಾಳ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಜಿರೆಯ ಬಿ. ಸೋಮಶೇಖರ ಶೆಟ್ಟಿ ಧನ್ಯವಾದವಿತ್ತರು. ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಉಪನ್ಯಾಸಕಿ ದಿವ್ಯಾ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು. ಭಜನಾ ಸ್ಪರ್ಧೆಯಲ್ಲಿ ಹಿರಿಯರ ವಿಭಾಗದಲ್ಲಿ ೪೫ ತಂಡಗಳು ಹಾಗೂ ಕಿರಿಯರ ವಿಭಾಗದಲ್ಲಿ 32 ತಂಡಗಳು ಸೇರಿದಂತೆ ಒಟ್ಟು ಐದುನೂರಕ್ಕೂ ಮಿಕ್ಕಿ ಸ್ಪರ್ಧಿಗಳು ಭಾಗವಹಿಸಿದರು.

ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವ: ಮಕ್ಕಿಮನೆ ಕಲಾವೃಂದದಿಂದ ಸಾಂಸ್ಕ್ರತಿಕ ಕಾರ್ಯಕ್

Article Image

ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವ: ಮಕ್ಕಿಮನೆ ಕಲಾವೃಂದದಿಂದ ಸಾಂಸ್ಕ್ರತಿಕ ಕಾರ್ಯಕ್

ರಿಪ್ಪನ್ ಪೇಟೆ: ಅತಿಶಯ ಶ್ರೀ ಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾ ಸನ್ನಿಧಿಯಲ್ಲಿ ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಯವರ ನೇತೃತ್ವದಲ್ಲಿ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಶನಿವಾರ (16-11-2024) ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು ಎಲ್ಲರ ಮೆಚ್ಚುಗೆ ಪಡೆಯಿತು. ಅನನ್ಯ ರಂಜನಿ, ನೀಶ್ಮಾ ಜೈನ್, ದೀಪ್ತಿ ಜೈನ್, ಅರೀಕಾ ಜೈನ್, ಜಯಂತಿ ಜೈನ್, ಅನಘ ಜೈನ್, ಅವನಿ ಜೈನ್, ಅರುಹ ಜೈನ್, ಈಯಾ ಜೈನ್ ಭಾಗವಹಿಸಿದರು. ವಾಣಿಶ್ರೀ ಜೈನ್ ಕಾರ್ಯಕ್ರಮ ನಿರೂಪಿಸಿದರು. ರತ್ವಿಕ್ ಜೈನ್, ಪ್ರಪುಲ್ಲ ಜೈನ್, ಸನ್ಮತ್ ರಾಜ್ ಜೈನ್ ಸಹಕರಿಸಿದರು. ಈ ಸಂದರ್ಭದಲ್ಲಿ 105 ಶಿವಮತಿ ಮಾತಾಜಿ ಮತ್ತು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿ ಹಾಗೂ ಶ್ರೀ ಕ್ಷೇತ್ರ ಸೋಂದಾ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಮಹಾಸ್ವಾಮಿಯವರು ಉಪಸ್ಥಿತರಿದ್ದು ಎಲ್ಲ ಕಲಾವಿದರನ್ನು ಆಶಿರ್ವದಿಸಿ ಗೌರವಿಸಿದರು .

ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Article Image

ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಅವರಿಗೆ 2024 ನೇಯ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಾಪ್ತವಾಗಿದೆ. ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಿಲಾಗಿದೆ. ನವೆಂಬರ್ ಒಂದರಂದು ಕರ್ನಾಟಕ ರಾಜ್ಯೋತ್ಸವದ ಶುಭಾವಸರದಲ್ಲಿ ಮಂಗಳೂರಿನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಈ ಪುರಸ್ಕಾರವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚೆಗೆ ಅಗಲಿದ ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ನುಡಿ ನಮನ

Article Image

ಇತ್ತೀಚೆಗೆ ಅಗಲಿದ ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ನುಡಿ ನಮನ

ಮೂಡುಬಿದಿರೆ, ಶ್ರೀ ದಿಗಂಬರ ಜೈನ ವಿದ್ಯಾವರ್ಧಕ ಸಂಘ(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜೈನ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 21-10-2024 ನೇ‌ ಸೋಮವಾರದಂದು ಇತ್ತೀಚೆಗೆ ಅಗಲಿದ ಯಶಸ್ವಿ ಹಿರಿಯ ಉದ್ಯಮಿ, ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ನುಡಿ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿ.ಜೆ.ವಿ.ಸಂಘ(ರಿ.) ಹಾಗೂ ಕಾಲೇಜಿನ ಗೌರವಾನ್ವಿತ ಸಂಚಾಲಕರಾದ ಕೆ. ಹೇಮರಾಜ್ ಇವರು ಜ್ಯೋತಿಯನ್ನು ಬೆಳಗಿಸುವ ಮೂಲಕ ರತನ್ ಟಾಟಾ ಅವರಿಗೆ ಗೌರವವನ್ನು ಸಮರ್ಪಿಸಿದರು. ನಂತರ ಮಾತನಾಡುತ್ತಾ " ದೇಶ ಕಂಡ ಅಪರೂಪದ, ಅಗ್ರಗಣ್ಯ ವಾಣಿಜ್ಯೋದ್ಯಮಿ ಹಾಗೂ ಮಾನವತಾವಾದಿಗಳಲ್ಲಿ ರತನ್ ಟಾಟಾ ಒಬ್ಬರಾಗಿದ್ದಾರೆ. ನನ್ನ ಬದುಕು ಎಂದಿಗೂ ಭಾರತದ ಅಭಿವೃದ್ಧಿಗಾಗಿ ಮುಡಿಪು ಎಂದು ಹೇಳುತ್ತಾ ತಮ್ಮ ಲಾಭದ ಅರುವತ್ತು ಶೇಕಡಾ ಸಂಪತ್ತನ್ನು ಚಾರಿಟೇಬಲ್ ಟ್ರಸ್ಟ್ ಗಳಿಗಾಗಿ ಖರ್ಚು ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸೇವಾ ಮನೋಭಾವವನ್ನು ಮೆರೆದವರು ಇವರಾಗಿದ್ದಾರೆ. ಆದುದರಿಂದ ವಿದ್ಯಾರ್ಥಿಗಳೆಲ್ಲರೂ ರತನ್ ಟಾಟಾ ಅವರ ಸರಳ ಜೀವನ, ಸಾಧನೆ ಹಾಗೂ ಗೈದ ಸೇವೆಯನ್ನು ತಮ್ಮ ಜೇವನದಲ್ಲಿ ಅಳವಡಿಸಿಕೊಂಡು, ಅವರನ್ನು ಮಾದರಿಯಾಗಿ ಇಟ್ಟುಕೊಂಡು ಅವರಂತೆ ಆಗಲು ಕನಸನ್ನು ಕಂಡು ಅದಕ್ಕಾಗಿ ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಚಾರ್ಯರಾದ ಡಾI ಪ್ರಭಾತ್ ಬಲ್ನಾಡು ಇವರು ರತನ್ ಟಾಟಾ ಇವರ ಸಾಧನೆಯನ್ನು ವಿವರಿಸುತ್ತಾ ಸುಮಾರು 150 ದೇಶಗಳಲ್ಲಿ ತಮ್ಮ ಕಂಪೆನಿಯನ್ನು ಸ್ಥಾಪಿಸಿ, ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗದಾತರಾಗಿ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ವಿದ್ಯಾರ್ಥಿಗಳಾದ ನೀವೂ ಕೂಡ ಇನ್ನೊಬ್ಬರಿಗೆ ಉದ್ಯೋಗ ನೀಡುವ ಮಟ್ಟದಲ್ಲಿ ಬೆಳೆಯಬೇಕು. ರತನ್ ಟಾಟಾ ಅವರು ತಮ್ಮ ಆದಾಯದ ನೂರಕ್ಕೆ ನೂರು ಶೇಕಡಾ ತೆರಿಗೆ ಕಟ್ಟುವ ಮೂಲಕ ಬಹಳ ಶುಭ್ರ ಹಾಗೂ ಪ್ರಾಮಾಣಿಕವಾಗಿ ಧ್ರುವ ನಕ್ಷತ್ರದಂತೆ ಬೆಳಗಿದ್ದಾರೆ ಹಾಗೂ ಭಾರತದ ಕೀರ್ತಿಯನ್ನು ಬಾನೆತ್ತರಕ್ಕೆ ಏರಿಸಿದ್ದಾರೆ ಎಂದು ಹೇಳುತ್ತಾ ನುಡಿ ನಮನವನ್ನು ಸಮರ್ಪಿಸಿದರು. ನಂತರ ಸಭೆಯಲ್ಲಿ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಡಿ.ಜೆ ಅನುದಾನಿತ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ, ಡಿ. ಜೆ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ವೀಣಾ, ಕಾಲೇಜಿನ ನಿಕಟಪೂರ್ವ ಪ್ರಾಚಾರ್ಯರಾದ ಮಧುಕರ್ ಸಾಲಿನ್ಸ್, ಸಹ ಸಂಸ್ಥೆಗಳ ಉಪನ್ಯಾಸಕರು, ಕಾಲೇಜಿನ ಉಪನ್ಯಾಸಕರು - ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿ ನಾಯಕರು ಶ್ರೀ ರತನ್ ಟಾಟಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು ಹಾಗೂ ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕರಾದ ಮಹಾವೀರ್ ಎಂ. ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ಹಿರಿಯ ಕಲಾವಿದರಾದ ಎಮ್. ಆರ್. ಬಾಳಿಕಾಯಿ ಇವರಿಗೆ ಗೌರವ ಪಿಆರ್‌ಟಿ ಕಲಾಪ್ರಶಸ್ತಿ

Article Image

ಹಿರಿಯ ಕಲಾವಿದರಾದ ಎಮ್. ಆರ್. ಬಾಳಿಕಾಯಿ ಇವರಿಗೆ ಗೌರವ ಪಿಆರ್‌ಟಿ ಕಲಾಪ್ರಶಸ್ತಿ

ಹಿರಿಯ ಕಲಾವಿದರಿಗೆ ಪಿ ಆರ್ ತಿಪ್ಪೇಸ್ವಾಮಿ ಪ್ರತಿಷ್ಠಾನ (ರಿ), ಮೈಸೂರು ಇವರು ಕೊಡಮಾಡುವ “ಗೌರವ ಪಿಆರ್‌ಟಿ ಕಲಾಪ್ರಶಸ್ತಿ” ಗೆ ಧಾರವಾಡದ ಹಿರಿಯ ಕಲಾವಿದರಾದ ಮಹಾವೀರ ರಾಯಪ್ಪ ಬಾಳಿಕಾಯಿ ಇವರು ಭಾಜನರಾಗಿದ್ದಾರೆ. ಮೈಸೂರಿನ ಶ್ರೀ ಕಲಾನಿಕೇತನ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ದಿನಾಂಕ 20-09-2024ರಂದು ಜರುಗಿದ ಹಿರಿಯ ಕಲಾವಿದ ಶ್ರೀ ಪಿ.ಆರ್. ತಿಪ್ಪೇಸ್ವಾಮಿ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಮಹಾವೀರ ರಾಯಪ್ಪ ಬಾಳಿಕಾಯಿ ಇವರಿಗೆ ಪ್ರದಾನ ಮಾಡಿದರು. ಈ ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ. ಇವರಿಗೆ 1995ರಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ ಪ್ರಶಸ್ತಿ, 2007ರಲ್ಲಿ ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿ, 2017ರಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ನೀಡುವ ಜೀವಮಾನ ಸಾಧಕ ಸನ್ಮಾನ, 2012-13ರ ನಾಡೋಜ ಆರ್. ಎಮ್. ಹಡಪದ ಪ್ರಶಸ್ತಿ, 2010ರಲ್ಲಿ ಕಲಾಗುರು ಶ್ರೀ ಡಿ. ವಿ. ಹಾಲಭಾವಿ ಗೌರವ ಪ್ರಶಸ್ತಿ, 2016ರಲ್ಲಿ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಇಂತಹ ವ್ಯಕ್ತಿತ್ವವನ್ನು ಹೊಂದಿರುವ ಎಮ್. ಆರ್. ಬಾಳಿಕಾಯಿ ಅವರ ಕಲಾ ಸೇವೆಯನ್ನು ಗುರುತಿಸಿ ಧಾರವಾಡದ ಚಿತ್ರಕಲಾ ಶಿಲ್ಪಿ ಶ್ರೀ ಡಿ. ವಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಚಿತ್ರಕಲಾ ಪ್ರಪಂಚದಲ್ಲಿ ಜೀವಮಾನ ಸಾಧನೆಗಾಗಿ ಪ್ರತಿಷ್ಠಿತ “ಕುಂಚ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿ 2023” ನ್ನು ದಿನಾಂಕ 28-11-2023ರಂದು ನೀಡಿ ಗೌರವಿಸಲಾಗಿದೆ.

ಶ್ರೀ ಕ್ಷೇತ್ರ ನವಗ್ರಹ ತೀರ್ಥದಲ್ಲಿ ನವರಾತ್ರಿಯ ವೈಭವ

Article Image

ಶ್ರೀ ಕ್ಷೇತ್ರ ನವಗ್ರಹ ತೀರ್ಥದಲ್ಲಿ ನವರಾತ್ರಿಯ ವೈಭವ

ಪರಮ ಪೂಜ್ಯ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜರ ಮಾರ್ಗದರ್ಶನದಲ್ಲಿ, ಆರ್ಯಿಕಾ ಸಂಘ ಉಪಸ್ಥಿತಿಯಲ್ಲಿ, ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕರ ನಿರ್ದೇಶನದಲ್ಲಿ ವರೂರು ನವಗ್ರತೀರ್ಥದಲ್ಲಿ ಲೋಕಕಲ್ಯಾಣ ಭಾವನೆಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ವಿವಿಧ ಹವನ, ಶ್ರೀ ಜಿನರ ಆರಾಧನೆ,, ವಿಶೇಷ ಪೂಜೆ, ಅಭಿಷೇಕ, ಮಾತೆ ಪದ್ಮಾವತಿ ಅಮ್ಮನವರ ವಿಶೇಷ ಅಲಂಕಾರ, ಷೋಡಶೋಪಚಾರ ಪೂಜೆಗಳು ವೈಭವದಿಂದ ನಡೆಯುತ್ತಿದ್ದು ಜನ ಶ್ರದ್ಧೆ ಭಕ್ತಿಗಳಿಂದ ಭಾಗವಹಿಸುತ್ತಿದ್ದಾರೆ. ನವದಿನಗಳ ಸಂಭ್ರಮಕ್ಕೆ ಮೊದಲ ದಿನದಂದು ಹುಬ್ಬಳ್ಳಿ ಜೈನ ಸಮಾಜ ಅಧ್ಯಕ್ಷ ರಾಜೇಂದ್ರ ಬೀಳಗಿ,ಉಪಾಧ್ಯಕ್ಷ ವಿಮಲ್ ತಾಳಿಕೋಟಿ, ಜೈನ ಬೋರ್ಡಿಂಗ್ ಅಧ್ಯಕ್ಷ ವಿದ್ಯಾಧರ ಪಾಟೀಲ ಬಸ್ತಿ ಪರಿವಾರ ದೇವೇಂದ್ರ ಕಾಗಿನವರು ಮತ್ತಿತರರು ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.

ಸರ್ವಮಂಗಳ ಜೈನ ಮಹಿಳಾ ಸಂಘ (ರಿ.) ನ ಮಾಸಿಕ ಸಭೆ

Article Image

ಸರ್ವಮಂಗಳ ಜೈನ ಮಹಿಳಾ ಸಂಘ (ರಿ.) ನ ಮಾಸಿಕ ಸಭೆ

ಮೂಡಬಿದಿರೆ: ಸರ್ವಮಂಗಳ ಜೈನ ಮಹಿಳಾ ಸಂಘ (ರಿ.) ನ ಮಾಸಿಕ ಸಭೆಯು ಅ. 2 ರಂದು ಶೆಟ್ರ ಬಸದಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಸನ್ನಿಧಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಕ್ಷೀರಾಭಿಷೇಕ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ಪೂಜೆಯೊಂದಿಗೆ ಪ್ರಾರಂಭವಾಯಿತು. ತದನಂತರ ಮಹಾತ್ಮಾ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಬಗ್ಗೆ ಮಾತ್ರವಲ್ಲದೆ ಜೈನ ಧರ್ಮದ ತತ್ವಗಳನ್ನು ಪಾಲಿಸಿದ್ದರಿಂದ ಅವರು ಮಹಾತ್ಮಾರಾದರು ಎನ್ನುವುದನ್ನು ಸುಧಾ ಪಾರ್ಶ್ವನಾಥ್ ಅವರು ಮನಮುಟ್ಟುವಂತೆ ತಿಳಿಸಿಕೊಟ್ಟರು. ನಂತರ ಆದಿನಾಥ ವೈಭವ ವಿಶ್ವ ದಾಖಲೆಯ ಸಂದರ್ಭದಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದವರಿಗೆ ಆದಿನಾಥ ವೈಭವದ ಕವಯತ್ರಿ ಮೂಡಬಿದಿರೆಯ ವೀಣಾ ರಘಚಂದ್ರ ಶೆಟ್ಟಿಯವರು ಸ್ಮರಣಿಕೆ ವಿತರಣೆ ಮಾಡಿದರು. ಸರ್ವಮಂಗಳದ ಅಧ್ಯಕ್ಷೆಯಾದ ಮಂಜುಳ ಯಶೋಧರ್ ರವರು ಎಲ್ಲರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ, ಕಾರ್ಯದರ್ಶಿ ಆರತಿ ಮಹಾವೀರ್ ವಂದನಾರ್ಪಣೆ ಗೈದರು

ಪುತ್ತೂರು: ಮಂಗಳೂರು ವಿಭಾಗದ ಮಿಲನ್ ಪದಾಧಿಕಾರಿಗಳ ಕಾರ್ಯಗಾರ

Article Image

ಪುತ್ತೂರು: ಮಂಗಳೂರು ವಿಭಾಗದ ಮಿಲನ್ ಪದಾಧಿಕಾರಿಗಳ ಕಾರ್ಯಗಾರ

ಪುತ್ತೂರು: ಭಾರತೀಯ ಜೈನ್ ಮಿಲನ್ ವಲಯ - 8 ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ವಿಭಾಗದ ಎಲ್ಲಾ ಮಿಲನ್ ಪದಾಧಿಕಾರಿಗಳ ಕಾರ್ಯಗಾರವು ಪುತ್ತೂರು ಜೈನ್ ಮಿಲನ್ ಆತಿಥೇಯದಲ್ಲಿ ಮಹಾವೀರ ವೆಂಚರ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸೋನಿಯ ಯಶೋವರ್ಮ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಭಾರತೀಯ ಜೈನ್ ಮಿಲನ್ ವಲಯ - 8 ರ ಕಾರ್ಯಾಧ್ಯಕ್ಷ ಪ್ರಸನ್ನಕುಮಾರ್ ಉಡುಪಿ, ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇಂಜಿನಿಯರ್ ಹಾಗೂ ಉದ್ಯಮಿ ವಿ.ಕೆ ಜೈನ್ ಪುತ್ತೂರು, ಭಾರತೀಯ ಜೈನ್ ಮಿಲನ್ ವಲಯ -8 ರ ಉಪಾಧ್ಯಕ್ಷ ಜಿತೇಶ್ ಜೈನ್ ಮಂಗಳೂರು ಭಾಗವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಲಯದ ಎಲ್ಲಾ ನಿರ್ದೇಶಕರುಗಳು, ಸುಭಾಶ್ಚಂದ್ರ ಜೈನ್ ಕಾರ್ಯದರ್ಶಿ ವಲಯ-8 ಮತ್ತು ಪುತ್ತೂರು ಜೈನ್ ಮಿಲನ್ ಅಧ್ಯಕ್ಷ ಸತೀಶ್ ಪಡಿವಾಳ್, ಕಾರ್ಯದರ್ಶಿ ರಾಜೇಶ್ ಕುಮಾರ್ ಪಿ, ಕೋಶಾಧಿಕಾರಿ ನರೇಂದ್ರ ಪಡಿವಾಳ್ ಆಸೀನರಾಗಿದ್ದರು.. ವಲಯ - 8ರ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿ, ಜೈನ್ ಮಿಲನ್ ಪುತ್ತೂರು ಅಧ್ಯಕ್ಷ ಸತೀಶ್ ಪಡಿವಾಳ್ ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ್ ಕುಮಾರ್ ಪಿ. ವಂದಿಸಿದರು. ಕಾರ್ಯಕ್ರಮದಲ್ಲಿ ಸುಮಾರು 125 ಜಿನ ವೀರ, ವೀರಾಂಗನೆಯವರು ಭಾಗವಹಿಸಿದ್ದರು.

ಹೊಂಬುಜ: ಶರನ್ನವರಾತ್ರಿ ವಿಜಯದಶಮಿ ಉತ್ಸವ

Article Image

ಹೊಂಬುಜ: ಶರನ್ನವರಾತ್ರಿ ವಿಜಯದಶಮಿ ಉತ್ಸವ

ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ನೇತೃತ್ವ, ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ದಿನವನ್ನು ಪರಂಪರೆಯಂತೆ ಧಾರ್ಮಿಕ ವಿಧಿಪೂರ್ವಕವಾಗಿ ನೆರವೇರಿಸಲಾಗುವುದು. ನಿನ್ನೆ (ಅ. 03) ಗುರುವಾರದಂದು-ಶರನ್ನವರಾತ್ರಿ ಪ್ರಾರಂಭಗೊಂಡು (ಘಟಸ್ಥಾಪನೆ) ಅ. 09 ಬುಧವಾರ- ಸರಸ್ವತಿ ಪೂಜೆ, (ಮೂಲಾ ನಕ್ಷತ್ರ) ಅ. 10 ಗುರುವಾರ-ಜೀವದಯಾಷ್ಟಮಿ ಪೂಜೆ, ಅ. 11 ಶುಕ್ರವಾರ-ಮಹಾನವಮಿ (ಆಯುಧಪೂಜೆ) ಅ. 12 ಶನಿವಾರ-ವಿಜಯದಶಮಿ, ಬನ್ನಿಮಂಟಪಕ್ಕೆ ಶ್ರೀದೇವಿ, ಪಲ್ಲಕ್ಕಿ ಉತ್ಸವ, ಸ್ವಸ್ತಿಶ್ರೀಗಳವರ ಸಿಂಹಾಸನಾರೋಹಣ ಹಾಗೂ ಶ್ರೀಗಳವರ ಪಾದಪೂಜೆ ನೆರವೇರಲಿದೆ. ಹೊಂಬುಜ ಜೈನ ಮಠದ ಅಧೀನ ಕ್ಷೇತ್ರಗಳಾದ ಶ್ರೀಕ್ಷೇತ್ರ ಕುಂದಾದ್ರಿ, ವರಂಗ ಹಾಗೂ ಹಟ್ಟಿಯಂಗಡಿ ಜಿನಮಂದಿರಗಳಲ್ಲಿ ಶರನ್ನವರಾತ್ರಿ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ನೆರವೇರಲಿವೆ. ಭಕ್ತವೃಂದದವರು ಶರನ್ನವರಾತ್ರಿ ಉತ್ಸವಗಳಲ್ಲಿ ಪಾಲ್ಗೊಂಡು ಪುಣ್ಯಭಾಗಿಗಳಾಗುವಂತೆ ಆಡಳಿತಾಧಿಕಾರಿಗಳು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮೊ: 9481453653, 9483801460.

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Article Image

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವೇಣೂರು, ಅ. 2: ಗಾಂಧಿ ಜಯಂತಿ ಪ್ರಯುಕ್ತ ಭ| ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ವೇಣೂರು ವಲಯ ಅರಣ್ಯ ಇಲಾಖೆ ವತಿಯಿಂದ ಶ್ರೀ ದಿಗಂಬರ ಜೈ ತೀರ್ಥ ಕ್ಷೇತ್ರ ಸಮಿತಿ ವೇಣೂರು ಇವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಯಾತ್ರಿ ನಿವಾಸದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರ್ ತಮ್ಮ ಮನೆ ಅಲ್ಲದೆ ತಾವಿರುವ ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕದಲ್ಲಿ ಅರಣ್ಯ ಇಲಾಖೆ ವತಿಯಿಂದ ಇವರು ನೀಡಿದ ಸಹಕಾರವನ್ನು ಸ್ಮರಿಸುತ್ತಾ ಇವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವತಿಯಿಂದ ಕಾರ್ಯದರ್ಶಿಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ ಸನ್ಮಾನಿಸಿದರು. ವಲಯದ ಎಲ್ಲ ಉಪ ಅರಣ್ಯಾಧಿಕಾರಿಗಳಾದ ಸುನಿಲ್, ಹರಿಪ್ರಸಾದ್, ಇಬ್ರಾಹಿಂ, ಸುರೇಶ್ ಮತ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿಗಳು ಮತ್ತು ತೀರ್ಥಕ್ಷೇತ್ರ ಸಮಿತಿಯ ಸಿಬ್ಬಂದಿಗಳಾದ ವೈ. ಜಯರಾಜ್, ದೀಪಶ್ರೀ ಉಪಸ್ಥಿತರಿದ್ದರು. ವಿ. ಪ್ರವೀಣ್ ಕುಮಾರ್ ಇಂದ್ರರವರು ಸ್ವಾಗತಿಸಿದರು. ತೀರ್ಥಕ್ಷೇತ್ರ ಸಮಿತಿಯ ಜೊತೆ ಕಾರ್ಯದರ್ಶಿಗಳಾದ ಮಹಾವೀರ್ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಗೈದರು.

ಬೆಳ್ತಂಗಡಿ ಬಸದಿಯಲ್ಲಿ ವಿಶೇಷ ಆರಾಧನೆ, ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ

Article Image

ಬೆಳ್ತಂಗಡಿ ಬಸದಿಯಲ್ಲಿ ವಿಶೇಷ ಆರಾಧನೆ, ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ

ಉಜಿರೆ: ವಿದ್ಯಾರ್ಥಿಗಳು ವಿದ್ಯೆಯ ಜೊತೆ ಉತ್ತಮ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಶನಿವಾರ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ 733 ವಿದ್ಯಾರ್ಥಿಗಳಿಗೆ 20,29,000 ರೂ. ವಿದ್ಯಾರ್ಥಿ ಪ್ರೋತ್ಸಾಹಧನವನ್ನು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಸ್ಮಾರಕ ಟ್ರಸ್ಟ್ ವತಿಯಿಂದ ವಿತರಿಸಿ ಆಶೀರ್ವಚನ ನೀಡಿದರು. ಇಂದಿನ ಅತ್ಯಂತ ವೇಗ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಒತ್ತಡದಲ್ಲೇ ಬದುಕುತ್ತಿದ್ದಾರೆ. ಗುರುಹಿರಿಯರಿಂದಲೂ ಮಕ್ಕಳಿಗೆ ಸಕಾಲಿಕ ಮಾರ್ಗದರ್ಶನ ಸಿಗುತ್ತಿಲ್ಲ. ಹಣ, ಉದ್ಯೋಗ, ಆಸ್ತಿ, ಕೀತಿ- ಯಾವುದೂ ಶಾಶ್ವತವಲ್ಲ. ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ವಿನಯ, ಪರೋಪಕಾರ, ಕರುಣೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಸ್ವಾಗತಿಸಿದರು. ಕೆ. ರಾಜವರ್ಮ ಬಳ್ಳಾಲ್, ಡಾ. ಜೀವಂಧರ ಬಳ್ಳಾಲ್, ಕೆ. ಪ್ರಸನ್ನ ಕುಮಾರ್, ಪ್ರೇಮ್ ಕುಮಾರ್ ಹೊಸ್ಮಾರು, ವಿಜಯಾ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಎಂ. ಜಿನರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಬಸದಿಯಲ್ಲಿ 24 ತೀರ್ಥಂಕರರ ಆರಾಧನೆ ಮತ್ತು ವಿಶೇಷ ಪೂಜೆ ನಡೆಯಿತು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ಧರಣೇಂದ್ರ ಕುಮಾರ್ ಧನ್ಯವಾದವಿತ್ತರು.

ವಿಶ್ವಶಾಂತಿ ಯುವಸೇವಾ ಸಮಿತಿ (ರಿ) ಬೆಂಗಳೂರು ಶ್ರೀ ಆದಿನಾಥ ವೈಭವ ಕಾರ್ಯಕ್ರಮ

Article Image

ವಿಶ್ವಶಾಂತಿ ಯುವಸೇವಾ ಸಮಿತಿ (ರಿ) ಬೆಂಗಳೂರು ಶ್ರೀ ಆದಿನಾಥ ವೈಭವ ಕಾರ್ಯಕ್ರಮ

ವಿಶ್ವಶಾಂತಿ ಯುವಸೇವಾ ಸಮಿತಿ (ರಿ) ಬೆಂಗಳೂರು “ಶ್ರೀ ಆದಿನಾಥ ವೈಭವ” ವಿಶ್ವದ ಮೊದಲ ಬೃಹತ್ ಜಿನಸಹಸ್ರನಾಮ ಸ್ತುತಿ ವಿಶ್ವ ದಾಖಲೆ ಕಾರ್ಯಕ್ರಮವು ಸಾವಿರಕಂಬ ಬಸದಿಯಲ್ಲಿ ಪೂಜ್ಯ ಸ್ವಾಮೀಜಿಯವರ ಚಾಲನೆ ಮೂಲಕ ಸೆ. 22ರಂದು ಪ್ರಾತಃಕಾಲ 3.15ಕ್ಕೆ ನಡೆಯಲಿದೆ. ಕಾರ್ಯಕ್ರಮದ ಸಮಾರೋಪ ಸಮಾರಂಭವು ಮೂಡುಬಿದಿರೆ ಶ್ರೀ ಜೈನ ಮಠದ ಭಾರತಭೂಷಣ ಜಗದ್ಗುರು ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನ್ನಿಧ್ಯದಲ್ಲಿ, ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ಸಂಜೆ 6.15ರಿಂದ ನಡೆಯಲಿದ್ದು, ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಗೌರವ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರೀಯಾ ಹರ್ಷೇಂದ್ರ ಕುಮಾರ್ ಇವರ ಗೌರವ ಅತಿಥೇಯದಲ್ಲಿ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮತ್ತು ಕಾರ್ಯದರ್ಶೀಯಾದ ರಶ್ಮಿತಾ ಯುವರಾಜ್ ಜೈನ್ ಮತ್ತು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಅಭಯಚಂದ್ರ ಜೈನ್ ಇವರ ವಿಶೇಷ ಅತಿಥೇಯದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಪ್ರೊ. ಅಜಿತ್ ಪ್ರಸಾದ್ ನಿವೃತ್ತ ಉಪ ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಮತ್ತು ವೀಣಾ ಬಿ. ಆರ್. ಶೆಟ್ಟಿ ಸಾಹಿತಿಗಳು ಮೂಡುಬಿದಿರೆ ಇವರು ಆಗಮಿಸಲಿದ್ದಾರೆ.

ಬಜಿಲಕೇರಿ ಶ್ರೀ ಆದಿನಾಥ ಬಸದಿ: ದಶಲಕ್ಷಣ ಪರ್ವ

Article Image

ಬಜಿಲಕೇರಿ ಶ್ರೀ ಆದಿನಾಥ ಬಸದಿ: ದಶಲಕ್ಷಣ ಪರ್ವ

ಬಜಲಕೇರಿ, ಸೆ. 21: ಭಾರತೀಯ ಜೈನ್ ಮಿಲನ್ ಆಶ್ರಯದಲ್ಲಿ ಬಜಿಲಕೇರಿಯ ಶ್ರೀ ಆದಿನಾಥ ಬಸದಿಯಲ್ಲಿ ದಶಲಕ್ಷಣ ಪರ್ವದ ಹಿನ್ನೆಲೆಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಮೂಡುಬಿದಿರೆಯ ಶ್ರೀ ಜೈನ ಮಠದ ಸ್ವಸ್ತಿಶ್ರೀ ಡಾ। ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಆಶೀರ್ವಚನಗೈದರು. ಬಸದಿಯ ಮೊಕ್ತೇಸರರಾದ ಸುರೇಶ್ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ರಾಜವರ್ಮ ಬಳ್ಳಾಲ್ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭ ವಿದ್ವಾಂಸ ಮುನಿರಾಜ ರೆಂಜಾಳ ಕಾರ್ಕಳ ಅವರನ್ನು ಸಮ್ಮಾನಿಸಲಾಯಿತು. ಭಾರತೀಯ ಜೈನ್ ಮಿಲನ್ ನ ಮಂಗಳೂರು ವಲಯ ಅಧ್ಯಕ್ಷರಾದ ರತ್ನಾಕರ್ ಜೈನ್ ಸ್ವಾಗತಿಸಿದರು. ವೈಶಾಲಿ ಪಡಿವಾಲ್ ವಂದಿಸಿದರು. ಪ್ರಿಯಾ ಸುದೇಶ್ ನಿರೂಪಿಸಿದರು. ಸನತ್ ಕುಮಾರ್ ಜೈನ್ ಸಹಕರಿಸಿದರು. ದಿ। ಎಂ. ಶ್ರೀಧರ ಪಾಂಡಿ ವಿರಚಿತ ಜಿನಕಾವ್ಯ 'ಶ್ರೀ ಜ್ವಾಲಾಮಾಲಿನಿ ದೇವಿ ಚರಿತೆ' ಯಕ್ಷಗಾನದ ಶೈಲಿಯ ಕಾವ್ಯವಾಚನ ಕಾರ್ಯಕ್ರಮದಲ್ಲಿ ಕಾವ್ಯಶ್ರೀ ಅಜೇರು ಅವರಿಂದ ಹಾಡುಗಾರಿಕೆ ಹಾಗೂ ಮುನಿರಾಜ ರೆಂಜಾಳ ಕಾರ್ಕಳ ಅವರಿಂದ ಪ್ರವಚನ ನಡೆಯಿತು. ಚೆಂಡೆಯಲ್ಲಿ ಶ್ರೀಪತಿ ನಾಯಕ್ ಅಜೇರು, ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಸಹಕರಿಸಿದರು.

ದತ್ತಿನಿಧಿ ಪ್ರಶಸ್ತಿ ಪ್ರಧಾನ

Article Image

ದತ್ತಿನಿಧಿ ಪ್ರಶಸ್ತಿ ಪ್ರಧಾನ

2023ನೇ ಸಾಲಿನ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ, ಶ್ರೀ ಜೈನ ಮಠ ಶ್ರವಣಬೆಳಗೊಳ ದತ್ತಿನಿಧಿ ಪ್ರಶಸ್ತಿ”ಯನ್ನು ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ವಿದ್ಯಾರ್ಥಿನಿ ಪ್ರೀತಿ ಸುನಿಲ್ ವೈಗುಡೆ, ಭೋಜ್, ಚಿಕ್ಕೋಡಿ ತಾ|| ಇವರಿಗೆ ನೀಡಲಾಯಿತು. ಧಾರ್ಮಿಕ ಚಿಂತಕ, ಉಪನ್ಯಾಸಕ, ಮಹಾವೀರ್ ಜೈನ್ ಇಚಿಲಂಪಾಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆ ಇವರು, ಪ್ರಶಸ್ತಿ ಪ್ರಧಾನ ಮಾಡಿದರು. ಅವರು ಕಾರ್ಕಳದ ಶ್ರೀ ಬಾಹುಬಲಿ ಶ್ರಾವಿಕಾಶ್ರಮದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರನ್ನುದ್ಧೇಶಿಸಿ ಮಾತನಾಡುತ್ತಾ, ಉತ್ತಮ ‘ಮಾರ್ಕ್ಸ್’ ಗಳಿಸಿದಲ್ಲಿ ಉನ್ನತ ಉದ್ಯೋಗ ಸಿಗಬಹುದು. 'ರಿಮಾರ್ಕ್ಸ್’ ಇಲ್ಲದ ರೀತಿಯಲ್ಲಿ ಕುಟುಂಬವನ್ನು ಉತ್ತಮವಾಗಿ ನಿರ್ವಹಿಸಬೇಕಾದರೆ, ಧಾರ್ಮಿಕ, ಆಧ್ಯಾತ್ಮಿಕ, ಸಂಸ್ಕಾರ ಬೇಕಾಗಿದೆ. ಇಂತಹ ಮೌಲ್ಯಯುತ ಸಂಸ್ಕಾರವು, ಮಾತೃಶ್ರೀಯವರು ನಡೆಸುತ್ತಿರುವ ಆಶ್ರಮದಿಂದ ಸಿಗುತ್ತಿರುವುದು ಶ್ಲಾಘನೀಯವಾಗಿದೆ. ಎಂದು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಶ್ರೀಯುತರನ್ನು ಶಾಲು, ಹಾರ ಹಾಕಿ, ಫಲ-ಪುಷ್ಪ ನೀಡಿ ಗೌರವಿಸಲಾಯಿತು. ಆಶ್ರಮದಲ್ಲಿ ಶೈಕ್ಷಣಿಕವಾಗಿ ಉನ್ನತ ಸ್ಥಾನ ಪಡೆದ ವಿದ್ಯಾರ್ಥಿನಿಯರಿಗೆ, ಸಂಸ್ಥೆಯ ಅಧ್ಯಕ್ಷರಾದ ಹೇಮಾವತಿ ಅಮ್ಮನವರು ಕೊಡಮಾಡಿದ ಅಭಿನಂದನಾ ಪತ್ರ ಮತ್ತು ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು. ಸಮಾರಂಭದಲ್ಲಿ ಮಾಜಿ ರೋಟರಿ ಗವರ್ನರ್, ಡಾ|| ಭರತೇಶ್ ಜೈನ್, ಕಾರ್ಯದರ್ಶಿ ಶಿಶುಪಾಲ್ ಪೂವಣಿ, ಧರ್ಮಸ್ಥಳ, ಟ್ರಸ್ಟಿಗಳಾದ ಸುಮಾಲಿನಿ, ಮಾಲತಿ, ಜಯಲಕ್ಷ್ಮೀ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ, ಕಾರ್ಕಳ ಶ್ರೀ ಜೈನ ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ ಇವರು ಆಶ್ರಮದ ಅಭಿವೃದ್ಧಿ ನಿಧಿಗಾಗಿ ರೂ.1,11,111/-ರ (ಒಂದು ಲಕ್ಷದ, ಹನ್ನೊಂದು ಸಾವಿರದ, ನೂರ ಹನ್ನೊಂದು) ಚಕ್ ನ್ನು ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು. 10 ದಿವಸವೂ ಅಷ್ಟವಿಧಾರ್ಚನೆ, ದಶಲಕ್ಷಣ ಪೂಜೆ, ಪದ್ಮಾವತಿ ಅಮ್ಮನವರ ಪೂಜೆ, ಭಜನೆ, ಗಣ್ಯರಿಂದ ಹಾಗೂ ವಿದ್ಯಾರ್ಥಿನಿಯರಿಂದ ಧಾರ್ಮಿಕ ಪ್ರವಚನವನ್ನು ಏರ್ಪಡಿಸಲಾಗಿತ್ತು. ಸ್ಥಳೀಯ ಶ್ರಾವಕ, ಶ್ರಾವಿಕೆಯರು ಪೂಜೆಯಲ್ಲಿ ಭಾಗವಹಿಸಿ ಪುಣ್ಯಭಾಗಿಗಳಾದರು. ವರದಿ : ಶಿಶುಪಾಲ್ ಪೂವಣಿ, ಧರ್ಮಸ್ಥಳ

ಹೊಸ್ಮಾರು: ಸಾಮೂಹಿಕ ವ್ರತ ಸ್ವೀಕಾರ (ವೃತೋಪದೇಶ) ಸಮಾರಂಭ

Article Image

ಹೊಸ್ಮಾರು: ಸಾಮೂಹಿಕ ವ್ರತ ಸ್ವೀಕಾರ (ವೃತೋಪದೇಶ) ಸಮಾರಂಭ

ಶ್ರೀ ಸಿದ್ಧಿ ಕ್ಷೇತ್ರ ಸಿದ್ದರವನ ಬಸದಿಯಲ್ಲಿ ನಡೆದ ಸಾಮೂಹಿಕ ವ್ರತ ಸ್ವೀಕಾರ (ವೃತೋಪದೇಶ) ಸಮಾರಂಭವು ಪ. ಪೂ. 105 ಮುಕ್ತಿ ಮತಿ ಮಾತಾಜಿಯವರ ಧರ್ಮೋಪದೇಶ ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಗಳವರ ದಿವ್ಯ ಮಾರ್ಗದರ್ಶನ, ಸಿಂಹನಗದ್ದೆ ಬಸ್ತಿಮಠದ ಪ. ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಗಳವರ ಆಶೀರ್ವಚನಗಳೊಂದಿಗೆ ಸೆ.15ರಂದು ಸಂಪನ್ನಗೊಂಡಿತು. ಜೈನರ ಪವಿತ್ರ ವ್ರತ ನಿಯಮಗಳನ್ನು ಪಾಲನೆ ಮಾಡಿದರೆ ಜಗತ್ತಿನ ಯಾವ ಕಾನೂನುಗಳು ಜೈನರಿಗೆ ಅನ್ವಯಿಸುವುದಿಲ್ಲ ಹಾಗಾಗಿ ಯಾರು ಭಯ ಆತಂಕ ಪಡದೆ ವ್ರತ ನಿಯಮಗಳನ್ನು ಪಾಲನೆ ಮಾಡಬೇಕು. ಭಾರತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುಧರ್ಮ ಸಂಸ್ಕೃತಿ ಇದ್ದರೂ ನಮ್ಮ ಧರ್ಮವನ್ನು ರಕ್ಷಿಸುವ ಹಕ್ಕು ಮತ್ತು ಅಧಿಕಾರ ನಮಗಿದೆ. ಕನ್ಯಾ ಕುಮಾರಿಯಿಂದ ಗೋವಾ ಕರಾವಳಿಯವರೆಗೆ ಯಾವ ವಿದೇಶಿಗನು ಪ್ರವೇಶಿಸದಂತೆ ಹೋರಾಟ ಮಾಡಿದ ಜೈನ ಮಹಿಳೆ ಚೆನ್ನಾಬೈರಾದೇವಿಯ ಪರಾಕ್ರಮವನ್ನು ಸವಿಸ್ತಾರವಾಗಿ ವಿವರಿಸಿದರು. ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುವ ಅಗತ್ಯವಿದೆ ಎಂದು ಸಿಂಹನಗದ್ದೆ ಬಸ್ತಿಮಠದ ಪ. ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಗಳವರು ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಮೂಡಾ ಅಧ್ಯಕ್ಷರಾದ ಹರ್ಷವರ್ಧನ ಪಡಿವಾಲ್ ಅವರನ್ನು ಗೌರವಿಸಲಾಯಿತು. ಮುನಿರಾಜ ರೆಂಜಾಳರವರು ಮಕ್ಕಳಿಗೆ ಸಂಸ್ಕಾರದ ಮಾಹಿತಿ ನೀಡಿದರು. ಸುಮಾರು 112 ಜೈನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡು ಜೈನಾಗಮದಂತೆ ದೇವ ಗುರು ಶಾಸ್ತ್ರದೊಂದಿಗೆ ರತ್ನತ್ರಯವನ್ನು ಧಾರಣೆ ಮಾಡಿದರು. ಸೇವಾ ಕರ್ತೃರಾದ ಶ್ರುತಾಂಜನ್ ಜೈನ್ ಉಪಸ್ಥಿತರಿದ್ದರು. ವಿಜಯ ಕುಮಾರ್ ಕಂಗಿನಮನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರೂಪಿಸಿದರು.

ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Article Image

ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಎರಡು ತಿಂಗಳ ಕಾಲ ನಡೆದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಸೋಮವಾರ ಮುಕ್ತಾಯಗೊಂಡಿತು. ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6 ರಿಂದ ರಾತ್ರಿ ಗಂಟೆ 8ರ ವರೆಗೆ ನಡೆದ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಕೂಡಾ ಕಾರ್ಯಕ್ರಮದ ಸೊಗಡನ್ನು ಆಸ್ವಾದಿಸಿ ಪುಣ್ಯಸಂಚಯ ಮಾಡಿಕೊಂಡರು. ಎರಡು ತಿಂಗಳು ನಡೆದ ಪುರಾಣ ವಾಚನದಲ್ಲಿ 14 ಮಂದಿ ಹಾಗೂ ಪ್ರವಚನದಲ್ಲಿ 20 ಮಂದಿ ವಿದ್ವಾಂಸರು ಭಾಗವಹಿಸಿದರು. ಸೋಮವಾರ ಸುಪ್ರೀತಾ ಕೋರ್ನಾಯ ವಾಚನ ಮಾಡಿದರೆ ಅಶೋಕ ಭಟ್ ಪ್ರವಚನ ನೀಡಿದರು. ಸಮಾರೋಪ ಸಮಾರಂಭದಲ್ಲಿ ಹೆಗ್ಗಡೆಯವರು ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿ, ಎಲ್ಲರನ್ನೂ ಗೌರವಿಸಿ ಅಭಿನಂದಿಸಿದರು.

ನಾರಾವಿ ಬಸದಿಯಲ್ಲಿ ಅನಂತನೋಂಪಿ ಆರಾಧನಾ ವಿಧಾನ

Article Image

ನಾರಾವಿ ಬಸದಿಯಲ್ಲಿ ಅನಂತನೋಂಪಿ ಆರಾಧನಾ ವಿಧಾನ

ಉಜಿರೆ: ನಾರಾವಿ ಗ್ರಾಮದಲ್ಲಿರುವ ಭಗವಾನ್ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಹದಿಮೂರನೆ ವರ್ಷದ ಅನಂತನೋಂಪಿ ಆರಾಧನಾ ವಿಧಾನದ ಪ್ರಥಮ ದಿನದ ಪೂಜೆಯು ಸೋಮವಾರ ನಡೆಯಿತು. 12 ಮಂದಿ ಶ್ರಾವಕರು ಹಾಗೂ 8 ಮಂದಿ ಶ್ರಾವಕಿಯರು ಸೇರಿದಂತೆ ಒಟ್ಟು 20 ಮಂದಿ ನೋಂಪಿಯ ವೃತಧಾರಿಗಳಾಗಿ ಶ್ರದ್ಧಾ-ಭಕ್ತಿಯಿಂದ ಭಾಗವಹಿಸಿದರು. ಅಳದಂಗಡಿಯ ಪದ್ಮಪ್ರಭ ಇಂದ್ರ ಮತ್ತು ನಾರಾವಿ ಹರ್ಷೇಂದ್ರ ಇಂದ್ರ ಅವರ ಸಹಕಾರದೊಂದಿಗೆ ನೋಂಪಿ ಆರಾಧನಾ ವಿಧಾನ ನಡೆಯಿತು. ಮೂರು ದಿನಗಳಲ್ಲಿ ಅನಂತ ನೋಂಪಿ ನಡೆಯಲಿದ್ದು ಇಂದು ಬುಧವಾರ ಸಮಾಪನಗೊಳ್ಳುತ್ತದೆ. ಬುಧವಾರ ಮಧ್ಯಾಹ್ನ 12 ಗಂಟೆಗೆ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಉಪಸ್ಥಿತಿರಿದ್ದು ಮಂಗಲಪ್ರವಚನ ನೀಡುವರು.

ಶ್ರೀ ಭುಜಬಲಿ ಬ್ರಹ್ಮಚರ್ಯಾ ಶ್ರಮ ಹಿರಿಯoಗಡಿ ಕಾರ್ಕಳ ದಶಲಕ್ಷಣ ಪರ್ವ ಸಮಾರಂಭ

Article Image

ಶ್ರೀ ಭುಜಬಲಿ ಬ್ರಹ್ಮಚರ್ಯಾ ಶ್ರಮ ಹಿರಿಯoಗಡಿ ಕಾರ್ಕಳ ದಶಲಕ್ಷಣ ಪರ್ವ ಸಮಾರಂಭ

ದಶಲಕ್ಷಣ ಪರ್ಯೂಶಣ ಪರ್ವದ ಮೂರನೇ ದಿನ ಪೂಜೆ ಭಜನೆ, ವಿದ್ಯಾರ್ಥಿಗಳ ಉಪನ್ಯಾಸದೊಂದಿಗೆ ಉತ್ತಮ ಆರ್ಜವ ಧರ್ಮವನ್ನು ಆಚರಿಸಲಾಯಿತು. ಮೂಡುಬಿದಿರೆಯ ಖ್ಯಾತ ವಕೀಲರಾದ ಶ್ವೇತಾ ಜೈನ್ ಉತ್ತಮ ಆರ್ಜವ ಧರ್ಮದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು.

ದಶಲಕ್ಷಣಪರ್ವ ಆಚರಣೆ ಉದ್ಘಾಟನೆ

Article Image

ದಶಲಕ್ಷಣಪರ್ವ ಆಚರಣೆ ಉದ್ಘಾಟನೆ

ಉಜಿರೆ: ಧರ್ಮದ ಮರ್ಮವನ್ನರಿತು ಮಾಡುವ ಆಚರಣೆಯಿಂದ ನಮ್ಮಲ್ಲಿರುವ ದೋಷಗಳ ನಿವಾರಣೆಯಾಗಿ ವರ್ತನೆಯಲ್ಲಿ ಪರಿವರ್ತನೆಯಾಗುತ್ತದೆ ಎಂದು ನಿವೃತ್ತ ಉಪನ್ಯಾಸಕಿ ಪ್ರೊ. ತ್ರಿಶಲಾ ಉದಯಕುಮಾರ್ ಮಲ್ಲ ಹೇಳಿದರು. ಅವರು ಸೋಮವಾರ ಉಜಿರೆಯಲ್ಲಿ ಸಿದ್ಧವನ ಗುರುಕುಲದಲ್ಲಿ ದಶಲಕ್ಷಣ ಪರ್ವ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ದಶಲಕ್ಷಣ ಪರ್ವವು ಆಧ್ಯಾತ್ಮಿಕ ಪರ್ವವಾಗಿದ್ದು, ದಶಧರ್ಮಗಳ ಅನುಷ್ಠಾನದಿಂದ ಮಾನವೀಯ ಮೌಲ್ಯಗಳು ಉದ್ದೀಪನಗೊಂಡು, ಸುಖ-ಶಾಂತಿ, ನೆಮ್ಮದಿಯ ಸಾರ್ಥಕ ಜೀವನ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸಮಯದ ಸದುಪಯೋಗ ಮಾಡಬೇಕೆಂದು ಅವರು ಸಲಹೆ ನೀಡಿದರು. ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ, ನಿರಂಜನ ಜೈನ್ ಅಳಿಯೂರು ಧಾರ್ಮಿಕ ಪ್ರವಚನ ನೀಡಿ, ಉತ್ತಮ ಕ್ಷಮಾ ಉತ್ತಮ ಮಾರ್ದವ, ಉತ್ತಮ ಆರ್ಜವ, ಉತ್ತಮ ಶೌಚ, ಉತ್ತಮ ಸತ್ಯ, ಉತ್ತಮ ಸಂಯಮ, ಉತ್ತಮ ತಪ, ಉತ್ತಮ ತ್ಯಾಗ, ಉತ್ತಮ ಆಕಿಂಚನ್ಯ ಮತ್ತು ಉತ್ತಮ ಬ್ರಹ್ಮಚರ್ಯ ಎಂಬ ದಶಧರ್ಮಗಳು ನಮ್ಮ ಆತ್ಮನ ಸಹಜ ಗುಣಗಳಾಗಿವೆ. ಆತ್ಮನಿಗೆ ಕರ್ಮದ ಕೊಳೆ ಅಂಟಿದಾಗ ಆತ್ಮನ ಸಹಜಗುಣ ಪ್ರಕಟವಾಗುವುದಿಲ್ಲ. ರಾಗ-ದ್ವೇಷ ರಹಿತವಾಗಿ, ಸಮ್ಯಕ್‌ದರ್ಶನ, ಸಮ್ಯಕ್‌ಜ್ಞಾನ ಮತ್ತು ಸಮ್ಯಕ್‌ಚಾರಿತ್ರ್ಯಾಂ ಎಂಬ ರತ್ನತ್ರಯ ಧರ್ಮದ ಮೂಲಕ ದಶಧರ್ಮಗಳ ಪಾಲನೆ ಮಾಡಬೇಕು. ಕೋಪವನ್ನು ತ್ಯಜಿಸಿದಾಗ, ಕ್ಷಮಾ ಗುಣ ಬೆಳೆಯುತ್ತದೆ. ಮಾರ್ದವ ಅಂದರೆ ಮೃದು ಸ್ವಭಾವ, ವಿನಯಶೀಲತೆ. ಮನಸು, ಕಣ್ಣು ಮತ್ತು ಕೋಪದ ನಿಯಂತ್ರಣದಿಂದ ದಶಧರ್ಮಗಳ ಪಾಲನೆಯೊಂದಿಗೆ ಜೀವನ ಪಾವನವಾಗುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳಾದ ಆದರ್ಶ್ ಮತ್ತು ಜೀವನ್ ಮಾತನಾಡಿದರು. ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ ಚೌತಿ, ದಶಲಕ್ಷಣಪರ್ವ ಮೊದಲಾದ ಪರ್ವಗಳ ಆಚರಣೆಯಿಂದ ಸಾರ್ವಕಾಲಿಕ ಮಾನವೀಯ ಮೌಲ್ಯಗಳು ಉದ್ದೀಪನಗೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಂದಿನ ವೇಗದ ಮತ್ತು ಯಾಂತ್ರಿಕ ಬದುಕಿನಲ್ಲಿ ನಮ್ಮ ಆಚಾರ-ವಿಚಾರ ಮತ್ತು ಆಹಾರ-ವಿಹಾರ ಪರಿಶುದ್ಧವಾಗಿದ್ದಲ್ಲಿ ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಹೇಳಿದರು. ಸಿದ್ಧವನ ಗುರುಕುಲದ ಉಪಪಾಲಕ ಕೇಶವ ಉಪಸ್ಥಿತರಿದ್ದರು. ಸಂಕೇತ್ ಸ್ವಾಗತಿಸಿದರು. ಚೇತನ್ ಧನ್ಯವಾದವಿತ್ತರು. ಉಪನ್ಯಾಸಕ ಮಹಾವೀರ ಜೈನ್ ಇಚಿಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

ದಾವಣಗೆರೆ: ದಶ ಲಕ್ಷಣ ಪರ್ವ ಉಪನ್ಯಾಸ

Article Image

ದಾವಣಗೆರೆ: ದಶ ಲಕ್ಷಣ ಪರ್ವ ಉಪನ್ಯಾಸ

ದಾವಣಗೆರೆಯ ಶ್ರೀ ಪಾರ್ಶ್ವನಾಥ ಜಿನ ಮಂದಿರಕ್ಕೆ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಹಾಗೂ ರತ್ನತ್ರಯ ಧಾರವಾಹಿ ನಿರ್ದೇಶಕಿ. ಡಾ. ನೀರಜಾ ನಾಗೇಂದ್ರ ಕುಮಾರ್ ಭೇಟಿ ನೀಡಿ ಉತ್ತಮ ಅರ್ಜವ ಧರ್ಮದ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷ ಪದ್ಮಪ್ರಕಾಶ್ ಹಾಗೂ ದಾವಣಗೆರೆ ಜೈನ ಸಮಾಜದ ಪದಾಧಿಕಾರಿಗಳು ಶ್ರಾವಕ-ಶ್ರಾವಕಿಯರು ಭಾಗವಹಿಸಿದ್ದರು.

ವಿಶ್ವ ಭೌತಚಿಕಿತ್ಸಾ ಸಪ್ತಾಹ ಮತ್ತು ಭೌತ ಚಿಕಿತ್ಸಾ ದಿನಾಚರಣೆ

Article Image

ವಿಶ್ವ ಭೌತಚಿಕಿತ್ಸಾ ಸಪ್ತಾಹ ಮತ್ತು ಭೌತ ಚಿಕಿತ್ಸಾ ದಿನಾಚರಣೆ

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ವಿಶ್ವ ಭೌತಚಿಕಿತ್ಸಾ ಸಪ್ತಾಹ ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನಲ್ಲಿ ಸೆಪ್ಟೆಂಬರ್ 3 ರಿಂದ 6ರವರೆಗೆ ವಿಶ್ವ ಭೌತಚಿಕಿತ್ಸಾ ಸಪ್ತಾಹ ಮತ್ತು ಭೌತ ಚಿಕಿತ್ಸಾ ದಿನಾಚರಣೆಯನ್ನು ಆಚರಿಸಲಾಯಿತು. ಭೌತಚಿಕಿತ್ಸಾ ಸಪ್ತಾಹದ ಅಂಗವಾಗಿ ಪೋಸ್ಟರ್ ಪ್ರದರ್ಶನ, ಚರ್ಚಾ ಸ್ಪರ್ಧೆ, ಶೈಕ್ಷಣಿಕ ಕಾರ್ಯಕ್ರಮಗಳು, ಕಾಲ್ನಡಿಗೆ ಜಾಥಾ, ತಪಾಸಣಾ ಶಿಬಿರ ಮುಂತಾದ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಮುಖ್ಯ ಅತಿಥಿಗಳಾಗಿದ್ದು ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಭೌತಚಿಕಿತ್ಸಕರು ಮತ್ತು ಎಂ.ಎಸ್.ರಾಮಯ್ಯ್ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ರವೀಂದ್ರ ಹಾಗೂ ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವಿ ಸವದತ್ತಿ ಅವರನ್ನು ಭೌತಚಿಕಿತ್ಸೆಯ ಕ್ಷೇತ್ರಕ್ಕೆ ನೀಡಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್, ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಹಣಕಾಸು ಅಧಿಕಾರಿಗಳಾದ ವಿ. ಜಿ. ಪ್ರಭು ಮತ್ತು ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಪರಮಾರ ಮತ್ತು ಇತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಸಂಗೀತಾ ಅಪ್ಪಣ್ಣನವರ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಡಾ. ಜ್ಯೋತಿ ಜೀವಣ್ಣವರ ಅತಿಥಿಗಳನ್ನು ಸ್ವಾಗತಿಸಿದರು. ಡಾ. ತುಳಸಿ ಕುಲಕರ್ಣಿ ಮತ್ತು ಡಾ. ಐಶ್ವರ್ಯ ದೇಸಾಯಿ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಸುಧೀರ್ ಭಟ್ಟಭೋಲನ್ ವಂದರ್ನಾಪಣೆ ಸಲ್ಲಿಸಿದರು.

ದಶಲಕ್ಷಣ ಪರ್ವದ ಉದ್ಘಾಟನಾ ಸಮಾರಂಭ

Article Image

ದಶಲಕ್ಷಣ ಪರ್ವದ ಉದ್ಘಾಟನಾ ಸಮಾರಂಭ

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ (ರಿ.) ವತಿಯಿಂದ ನಡೆಯುತ್ತಿರುವ ದಶಲಕ್ಷಣ ಪರ್ವ ಆಚರಣೆಯ ಉದ್ಘಾಟನಾ ಸಮಾರಂಭವು ಇಂದು (ಅ.08ರಂದು) ಶ್ರೀ ಬಾಹುಬಲಿ ಕ್ಷೇತ್ರ (ಯಾತ್ರಿ ನಿವಾಸ)ದಲ್ಲಿ ನಡೆಯಿತು. ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಜರುಗಿ, ನಂತರ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪರ್ವಗಳ ರಾಜ ದಶಲಕ್ಷಣ ಮಹಾಪರ್ವ. ಜೀವನ ಬಿಟ್ಟು ಧರ್ಮವಿಲ್ಲ. ಸಿಟ್ಟನ್ನು ನಿಗ್ರಹಿಸುವುದನ್ನ ಜೈನ ಆಚಾರ್ಯರು ತಿಳಿಸಿದ್ದಾರೆ. ಜ್ಞಾನಕ್ಕೆ ಗುಣಕ್ಕೆ ಉತ್ತಮ ಬೆಲೆ ಇದೆ. ಒಳಗಿನ ನಮ್ಮ ಮನಸ್ಸನ್ನು ಪರಿವರ್ತನೆ ಮಾಡಬೇಕು ಎಂದು ಜೈನ ಧರ್ಮ ಹೇಳುತ್ತದೆ ಎಂದರು. ಕ್ರೋಧವು ಮಾಯಾದಿಂದ ಮಾನದಿಂದ ಲೋಭದಿಂದ ಹೊರ ಬರಬಾರದು ಕ್ಷಮಾ ಧರ್ಮವನ್ನು ಪಾಲಿಸಬೇಕು. ಕ್ಷಮೆಯನ್ನು ಧಾರಣೆ ಮಾಡಬೇಕು. ದಶಲಕ್ಷಣವನ್ನು ನಾವು ನಮ್ಮ ಜೀವನದಲ್ಲಿ ಪಾಲಿಸೋಣ ಎಂದು ಹೇಳಿದರು. ಕೆ. ಅಭಯಚಂದ್ರ ಜೈನ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಅವರು ಶಿಕ್ಷಣದಿಂದ ಒಳ್ಳೆಯ ಸ್ಥಾನಮಾನ, ಸಮಾಜದಲ್ಲಿ ಉತ್ತಮ ಗೌರವ ಸಿಗುತ್ತದೆ ಎಂದರು. ಈಗಿನ ಕಾಲಘಟ್ಟದಲ್ಲಿ ಯುವ ಪೀಳಿಗೆಯನ್ನು ಹುರಿದುಂಬಿಸುವ ಕೆಲಸ ಆಗಬೇಕು ಎಂದು ಹೇಳಿದರು. ಇತ್ತೀಚೆಗೆ ನಿಧನರಾದ ಯಂ. ವಿಜಯರಾಜ ಅಧಿಕಾರಿಯವರ ಪ್ರೀತಿ, ಪ್ರಾಮಾಣಿಕತೆ, ನೇರ ನುಡಿಯ ವ್ಯಕ್ತಿತ್ವವನ್ನು ನೆನಪಿಸಿಕೊಂಡರು. ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಪ್ರಭಾತ್ ಬಲ್ನಾಡ್‌ರವರು ಉತ್ತಮ ಕ್ಷಮಾ ಧರ್ಮದ ಬಗ್ಗೆ ಉಪನ್ಯಾಸ ನೀಡಿದರು. ಮನುಷ್ಯ ಜನ್ಮ ಶ್ರೇಷ್ಠವಾದ ಜನ್ಮವಾಗಿದೆ. ಪರ್ವಗಳ ರಾಜ ದಶಲಕ್ಷಣ ಪರ್ವದ ಹತ್ತು ಲಕ್ಷಣಗಳನ್ನು ಯಾವ ವ್ಯಕ್ತಿ ಅನುಸರಿಸುತ್ತಾನೋ ಅವನು ಪರಿಪೂರ್ಣವಾಗುತ್ತಾನೆ, ನಾಲ್ಕು ಕಷಾಯಗಳಾದ ಕ್ರೋಧ, ಮಾಯಾ, ಮಾನ, ಲೋಭ, ಇವುಗಳನ್ನು ನಿಗ್ರಹಿಸುವುದರಿಂದ ಮಾತ್ರ ಉತ್ತಮ ಕ್ಷಮಾ ಧರ್ಮವನ್ನು ಪಾಲಿಸಿದಂತಾಗುತ್ತದೆ. ಪುಣ್ಯ ಸಂಪಾದನೆಯು ಕ್ಷಮೆಯಿಂದಾಗುತ್ತದೆ. ಕ್ಷಮಾ ಧರ್ಮದ ಪಾಲನೆಯಿಂದ ಮೋಕ್ಷ ಮಾರ್ಗವನ್ನು ಪಡೆಯೋಣ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್‌ರವರು ಯಾವುದು ಕೂಡ ಭಗವಂತನ ಇಚ್ಚೆಯಿಲ್ಲದೇ ನಡೆಯುವುದಿಲ್ಲ ಮನಸ್ಸಿನಲ್ಲಿ ಒಳ್ಳೆಯ ಭಾವನೆಯಿದ್ದರೆ ಏನನ್ನೂ ಬೇಕಾದರೂ ಸಾಧಿಸಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಮಿತಿಯ ಉಪಾಧ್ಯಕ್ಷರಾದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಕೆಲವು ಘಟನೆಗಳನ್ನು ವಿವರಿಸುವ ಮೂಲಕ ಕ್ಷಮಾ ಧರ್ಮವನ್ನು ತಿಳಿಸಿದರು. ಯಾವುದೇ ಕಾರ್ಯಕ್ರಮ ಮಾಡುವಾಗ ಕ್ಷಮಾ ಧರ್ಮ ಇದ್ದರೆ ಮಾತ್ರ ಆ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕದ ಸಮಯದಲ್ಲಿ ಜಾಗವನ್ನು ನೀಡಿ ಸಹಕರಿಸಿದ ವಿಜೇತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಿಧನರಾದ ಶ್ರೀ ದಿಗಂಬರ ಜೈನತೀರ್ಥ ಕ್ಷೇತ್ರ ಸಮಿತಿಯ ಮಾಜಿ ಕಾರ್ಯದರ್ಶಿಗಳಾದ ಮಾರಗುತ್ತು ಯಂ. ವಿಜಯರಾಜ್ ಅಧಿಕಾರಿ ಅವರಿಗೆ ಶ್ರದ್ಧಾಂಜಲಿಯ ನುಡಿ ನಮನ ಸಲ್ಲಿಸಲಾಯಿತು. ವೇದಿಕೆಯಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಸಮಿತಿಯ ಕಾರ್ಯದರ್ಶಿಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ, ಕೋಶಾಧಿಕಾರಿಗಳಾದ ಜಯರಾಜ್ ಕಂಬಳಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು ಮತ್ತು ಶಿವಪ್ರಸಾದ್ ಅಜಿಲರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತೀ ಹೆಚ್ಚಿನ ಸಂಖ್ಯೆಯ ಶ್ರಾವಕ-ಶ್ರಾವಕಿಯರು ಭಾಗವಹಿಸಿದ್ದರು. ನಿಧಿ ಜೈನ್ ಪ್ರಾರ್ಥಿಸಿ, ಸಮಿತಿಯ ಕಾರ್ಯದರ್ಶಿಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಮಹಾವೀರ ಜೈನ್ ಮೂಡುಕೋಡಿಯವರು ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದವಿತ್ತರು.

First Previous

Showing 3 of 4 pages

Next Last