Article Image

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ಮೇ 30 ರಂದು ಧರ್ಮಸ್ಥಳದಲ್ಲಿ ರಜತ ಮಹೋತ್ಸವ ಸಮಾರಂಭ

Article Image

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ಮೇ 30 ರಂದು ಧರ್ಮಸ್ಥಳದಲ್ಲಿ ರಜತ ಮಹೋತ್ಸವ ಸಮಾರಂಭ

ಉಜಿರೆ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭ ಇದೇ 30 ರಂದು ಗುರುವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ ಎಂದು ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಬೆಂಗಳೂರಿನ ಪದ್ಮಿನಿ ಪದ್ಮರಾಜ್ ರವರು ತಿಳಿಸಿದ್ದಾರೆ. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಸೇವೆ, ಸಾಧನೆ ಬಗ್ಗೆ ಅವರು ಧರ್ಮಸ್ಥಳದಲ್ಲಿ ಮಾಹಿತಿ ನೀಡಿದರು. ಮೇ 30 ರಂದು ಗುರುವಾರ ಪೂರ್ವಾಹ್ನ ಹತ್ತು ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸುವರು. ಹೇಮಾವತಿ ವೀ. ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಖ್ಯಾತ ಹೃದ್ರೋಗ ತಜ್ಞರಾದ ಬೆಂಗಳೂರಿನ ಡಾ. ವಿಜಯಲಕ್ಷ್ಮೀ ಬಾಳೆಕುಂದ್ರೀಯವರು ಮತ್ತು ಚಲನಚಿತ್ರ ನಟಿ ಪದ್ಮಜಾ ರಾವ್ ರವರು ಶುಭಾಶಂಸನೆ ಮಾಡುವರು. ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ, ಬೆಳಗಾವಿಯ ಸುಮನ್ ಪತ್ರಾವಳಿ, ಮೂಡಬಿದ್ರೆಯ ವೀಣಾ ಶೆಟ್ಟಿ, ಬೆಂಗಳೂರಿನ ಸುರೀಮಾ ಯಶವಂತ್, ಹುಣಸೂರಿನ ಛಾಯಾ ಮತ್ತು ಮೈಸೂರಿನ ಕುಮಾರಿ ಅನನ್ಯಾ ಅವರನ್ನು ಸನ್ಮಾನಿಸಲಾಗುವುದು. ರಾಜ್ಯದಲ್ಲಿರುವ ಜೈನ ಮಹಿಳಾ ಒಕ್ಕೂಟದ ಎಲ್ಲಾ ಶಾಖೆಗಳಿಂದ ಸುಮಾರು ಒಂದು ಸಾವಿರ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದು ಸಿದ್ಧತೆಗಳು ಭರದಿಂದ ನಡೆಯುತ್ತಿವೆ ಎಂದು ಪದ್ಮಿನಿ ಪದ್ಮರಾಜ್ ರವರು ಮಾಹಿತಿ ನೀಡಿದರು.

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

Article Image

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

ಭಾರತೀಯ ಜೈನ್ ಮಿಲನ್ ಮೂಡುಬಿದಿರೆಯ ಮಾಸಿಕ ಸಭೆ ವಾಲ್ಪಾಡಿ ಬಸದಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀಪಾಲ್ ಎಸ್. ರವರು ತಮ್ಮ ಧರ್ಮಪತ್ನಿ ಮತ್ತು ಮಾತೃಶ್ರೀಯವರ ಸ್ಮರಣೆಯಲ್ಲಿ ಕೊಡಮಾಡುವ "ವಜ್ರಶ್ರೀ ಅರ್ಚಕ ಪುರಸ್ಕಾರ"ವನ್ನು ಅಳಿಯೂರು ಬಸದಿಯ ಹಿರಿಯ ಅರ್ಚಕರಾದ ರತ್ನವರ್ಮ ಇಂದ್ರರ ಸೇವೆಯನ್ನು ಗುರುತಿಸಿ, ರತ್ನವರ್ಮ ಇಂದ್ರ ಹಾಗೂ ವಿನಯ ದಂಪತಿಯನ್ನು ಶಾಲು, ಫಲಕಾಣಿಕೆ, ಸನ್ಮಾನ ಪತ್ರ ಹಾಗೂ ನಗದು ಪುರಸ್ಕಾರದೊಂದಿಗೆ ಜೈನ್ ಮಿಲನ್ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಮಿಲನ್ ಅಧ್ಯಕ್ಷ ದಿನೇಶ್ ಕುಮಾರ್ ಆನಡ್ಕ, ಶ್ವೇತಾ ಜೈನ್, ಪ್ರಭಾಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.

First Previous

Showing 5 of 5 pages

Next Last