Article Image

ಮಾರಗುತ್ತು ವಿಜಯರಾಜ್ ಅಧಿಕಾರಿ ನಿಧನ

Article Image

ಮಾರಗುತ್ತು ವಿಜಯರಾಜ್ ಅಧಿಕಾರಿ ನಿಧನ

ಬೆಳ್ತಂಗಡಿ ತಾಲೂಕಿನ ವೇಣೂರು, ಶ್ರೀಕ್ಷೇತ್ರ ಮುದ್ದಾಡಿ ದೈವಸ್ಥಾನದ ಆಡಳಿತ ಮೊಕ್ತೇಸರರು, ನಿವೃತ್ತ ಉಪನ್ಯಾಸಕರಾದ ಮಾರಗುತ್ತು ವಿಜಯರಾಜ್ ಅಧಿಕಾರಿಯವರು ಇಂದು (ಆ. 16ರಂದು) ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಇವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಸಹಿತ ಅಪಾರ ಬಂಧು ವಗ೯ವನ್ನು ಅಗಲಿದ್ದಾರೆ. ವೇಣೂರು ಶ್ರೀ ಜೈನ ದಿಗಂಬರ ತೀಥ೯ಕ್ಷೇತ್ರ ಸಮಿತಿಯ ಮಾಜಿ ಕಾಯ೯ದಶಿ೯ಗಳು, ವಿವೇಕಾನಂದ ಸೇವಾ ಟ್ರಸ್ಟ್ ನ ಸ್ಥಾಪಾಕಾಧ್ಯಕ್ಷರೂ ಆದ ಇವರು ಪ್ರಗತಿ ಪರ ಕೃಷಿಕರು, ಧಾರ್ಮಿಕ, ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು.

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ

Article Image

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಕರಿಮಣೇಲು ಮಾಗಣೆಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ಇವರು ಹೃದಯಾಘಾತದಿಂದ ಇಂದು(ಜೂ. 12) ಮುಂಜಾನೆ ನಿಧನ ಹೊಂದಿದರು. ಇವರು ಪತ್ನಿ, ಪುತ್ರ ಮತ್ತು ಪುತ್ರಿ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ. ಇವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕದ ಮಾಧ್ಯಮ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 2000 ಇಸವಿಯ ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಮಸ್ತಕಾಭಿಷೇಕದ ದೃಶ್ಯಗಳನ್ನು ವಿದ್ಯುನ್ಮಾನಗಳ ಮೂಲಕ ಪ್ರಚಾರ ಪಡಿಸುವ ವಿಧಾನವನ್ನು ಮೊತ್ತಮೊದಲಿಗೆ ಈ ಪರಿಸರದಲ್ಲಿ ಪ್ರಚಾರ ಪಡಿಸಿದ ಹೆಗ್ಗಳಿಕೆ ಇವರದು. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ನಿಧನ: ಕಟ್ಟೆಮನೆ ಉದಯ್ ಕುಮಾರ್

Article Image

ನಿಧನ: ಕಟ್ಟೆಮನೆ ಉದಯ್ ಕುಮಾರ್

ಪುಂಜಾಲಕಟ್ಟೆ: ಇಲ್ಲಿಯ ಕಟ್ಟೆಮನೆ ಉದಯ್ ಕುಮಾರ್ (77ವ) ಇವರು ಮೇ 21 ರಂದು ರಾತ್ರಿ ನಿಧನ ಹೊಂದಿದರು. ಇವರು ಪತ್ನಿ ಮತ್ತು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು- ವರ್ಗವನ್ನು ಅಗಲಿದ್ದಾರೆ

ನಿಧನ: ಗುರುವಾಯನಕೆರೆ ಶಕ್ತಿನಗರದ ಧನಂಜಯ ಇಂದ್ರ

Article Image

ನಿಧನ: ಗುರುವಾಯನಕೆರೆ ಶಕ್ತಿನಗರದ ಧನಂಜಯ ಇಂದ್ರ

ಗುರುವಾಯನಕೆರೆ ಶಕ್ತಿನಗರದ ಧನಂಜಯ ಇಂದ್ರ(72ವ) ಇವರು ಇಂದು (ಮೇ. 19) ಬೆಳಗ್ಗೆ ನಿಧನ ಹೊಂದಿದರು. ಇವರು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ಬಸದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಓರ್ವ ಮಗ, ಸೊಸೆ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ವೇಣೂರು: ಸುರಭಿ ಮನೆ ಶ್ರೀಮತಿ ವಸಂತಿ ನಿಧನ

Article Image

ವೇಣೂರು: ಸುರಭಿ ಮನೆ ಶ್ರೀಮತಿ ವಸಂತಿ ನಿಧನ

ಬೆಳ್ತಂಗಡಿ ತಾಲೂಕಿನ ವೇಣೂರು, ಬಜಿರೆ ಗ್ರಾಮದ ಸುರಭಿ ಮನೆ ನಿವಾಸಿ, ಬಿ. ರತ್ನವರ್ಮ ಇಂದ್ರರ ಧರ್ಮಪತ್ನಿ ಶ್ರೀಮತಿ ವಸಂತಿ (76ವ) ಇವರು ಇಂದು (ಎ.1) ನಿಧನ ಹೊಂದಿದರು. ಇವರು ಮಕ್ಕಳಾದ ಪ್ರಮೋದ್ ಕುಮಾರ್, ಶುಭ, ಮತ್ತು ಪೂರ್ಣಿಮಾ, ಸವಿತ, ಸುಧೀರ್ ಕುಮಾರ್ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಹಿರಿಯ ಸಾಹಿತಿ ನಾಗರಾಜ್ ಪೂವಣಿ ನಿಧನ

Article Image

ಹಿರಿಯ ಸಾಹಿತಿ ನಾಗರಾಜ್ ಪೂವಣಿ ನಿಧನ

ಹಿರಿಯ ಸಾಹಿತಿ, ಬರಹಗಾರರು, ನಾ ವುಜಿರೆ ಎಂದೇ ಪ್ರಸಿದ್ಧಿ ಹೊಂದಿದ್ದ ಎಸ್‌ಡಿಎಂ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಪ್ರೋಫೆಸರ್, ನಾಗರಾಜ್ ಪೂವಣಿ (84 ವ). ಇವರು ಇಂದು (ಮಾ. 11) ನಿಧನ ಹೊಂದಿದರು. ಇವರು ಪತ್ನಿ ಸರಸ್ವತಿ ನಾ ವುಜಿರೆ ಮತ್ತು ಪುತ್ರ ಪಾಶ್ವನಾಥ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಆಚಾರ್ಯ ಶ್ರೀ ವಿದ್ಯಾಸಾಗರ ಮುನಿಮಹಾರಾಜರ ಸಮಾಧಿಮರಣ

Article Image

ಆಚಾರ್ಯ ಶ್ರೀ ವಿದ್ಯಾಸಾಗರ ಮುನಿಮಹಾರಾಜರ ಸಮಾಧಿಮರಣ

ಚತ್ತೀಸ್‌ಗಢದ, ಚಂದ್ರಗಿರಿತೀರ್ಥ ಡೊಂಗರಗಢದಲ್ಲಿ ಆಧ್ಯಾತ್ಮ ಕವಿ, ಲೇಖಕ, ವಿಮರ್ಶಕ, ಪ್ರಾಥಃಸ್ಮರಣೀಯ ದಿಗಂಬರ ಜೈನ ಸರೋವರದ ರಾಜಹಂಸ, ಈ ಶತಮಾನದ ಶ್ರೇಷ್ಠ ತಪಸ್ವಿ ಸಂತಶಿರೋಮಣಿ ಆಚಾರ್ಯ ಶ್ರೀ ವಿದ್ಯಾಸಾಗರ ಮುನಿಮಹಾರಾಜರು ಇಂದು(ಫೆ.18) ಬೆಳಗಿನಜಾವ 2.30ಕ್ಕೆ ಸಮಾಧಿಮರಣ ಹೊಂದಿದರು. ಕರ್ನಾಟಕದ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದಲ್ಲಿ ಶ್ರೀಮತಿದೇವಿ ಹಾಗೂ ಮಲ್ಲಪ್ಪಾಜಿಯವರ ಸುಪುತ್ರರಾಗಿ ಜನಿಸಿ ಆಚಾರ್ಯ ದೇಷಭೂಷಣ ಮಹಾರಾಜರಿಂದ ಪ್ರಭಾವಿತರಾಗಿ ಜೈನ ಮುನಿಯಾದರು. ಕಾಲಕ್ರಮೇಣ ಇವರ ತಂದೆ-ತಾಯಿ, ಇಬ್ಬರು ಸಹೋದರರು ಹಾಗೂ ಇಬ್ಬರು ಸಹೋದರಿಯರು ಕೂಡ ಜೈನ ದೀಕ್ಷೆಪಡೆದು ಜಿನನ ಮಾರ್ಗವನ್ನು ಹಿಡಿದು ನಡೆದರು. ಆಚಾರ್ಯರೊಟ್ಟಿಗೆ ಸದಾಕಾಲ ಸಾವಿರಕ್ಕೂ ಹೆಚ್ಚು ಅವರ ಶಿಷ್ಯರು ದೇಶದಾದ್ಯಂತ ವಿಹಾರ ಮಾಡಿ ಜಿನಧರ್ಮದ ಪ್ರಸಾರ ಹಾಗೂ ಧರ್ಮಜ್ಞಾನವನ್ನು ಪ್ರಸರಿಸಿದರು ಆಚಾರ್ಯರ ‘ಮೂಕ ಮಾಟಿ’ ಎಂಬ ಗ್ರಂಥವು ಜಗತ್ತಿನ ಎಲ್ಲ ಭಾಷೆಗಳಲ್ಲಿ ಪ್ರಕಟಿತವಾಗಿದ್ದು ಅದರೊಟ್ಟಿಗೆ ‘ತೋತಾ ಕ್ಯೂ ರೋತಾ’ ಹಾಗೂ ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ.

ಬಾವಂತಬೆಟ್ಟು ನಿರಂಜನ್ ಜೈನ್ ನಿಧನ

Article Image

ಬಾವಂತಬೆಟ್ಟು ನಿರಂಜನ್ ಜೈನ್ ನಿಧನ

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಬಾವಂತಬೆಟ್ಟು ನಿವಾಸಿ, ಹಿರಿಯ ಸಹಕಾರಿ ಧುರೀಣ, ಸಜ್ಜನ ರಾಜಕಾರಣಿ ನಿರಂಜನ್ ಜೈನ್ ಬಾವಂತಬೆಟ್ಟು (75 ವ.)ರವರು ಇಂದು (ಫೆ. 12) ನಿಧನರಾಗಿದ್ದಾರೆ. ಇವರು 1973ರಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕಣಿಯೂರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸುಮಾರು 38 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರು ಪತ್ನಿ ಅರುಣ, ಮಕ್ಕಳಾದ ಪವಿತ್ರ, ಚೈತ್ರ ಹಾಗೂ ಅಪಾರ ಬಂಧು-ವರ್ಗದವರನ್ನು ಅಗಲಿದ್ದಾರೆ

ಪದ್ಮಾವತಿ ಅಮ್ಮ

Article Image

ಪದ್ಮಾವತಿ ಅಮ್ಮ

ಹಾಸನ ಜಿಲ್ಲೆಯ ಜಾವಗಲ್ ನ ನಿವಾಸಿ ಪದ್ಮಾವತಿ ಅಮ್ಮ (95ವ) ಇವರು ಜ. 8ರಂದು ನಿಧನ ಹೊಂದಿದರು. ಇವರು ಮಕ್ಕಳಾದ ಮರುದೇವಿಯಮ್ಮ, ಧರ್ಮಪಾಲ್ ಎಚ್. ಎ. ಮತ್ತು ಪೂರ್ಣಿಮಾ ಜೈನ್ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

First Previous

Showing 1 of 1 pages

Next Last