ಬೆಂಗಳೂರಿನ ರಾಜಾಜಿನಗರ: ಜೈನ್ ಮಿಲನ್ ಕಾರ್ಯಕ್ರಮ
ಬೆಂಗಳೂರು: ಕರ್ನಾಟಕದಲ್ಲಿ ಜೈನ ಧರ್ಮ ಸಮಸ್ಯೆಗಳನ್ನು ಎದುರಿಸುತ್ತಿದ್ದು , ಉತ್ತರ ಕರ್ನಾಟಕದ ಸಂಘಟನೆ ಕೊರತೆಯ ಜೊತೆಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಸುಹಾಸ್ತಿ ಜೈನ ಮಿಲನ. ಮುಖಂಡ, ಕಲಾವಿದ ಚಿತ್ತ ಜಿನೇಂದ್ರ ತಿಳಿಸಿದರು. ಅವರು ರಾಜಾಜಿನಗರ ಜೈನ್ ಮಿಲನ್ ಮಾಸಿಕ ಸಭೆಯಲ್ಲಿ, ಮುಖ್ಯ ಅತಿಥಿಗಳಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಜೈನ ಧರ್ಮದ ಸಮಸ್ಯೆ, ಸಂಘಟನೆ, ಸಂಸ್ಕೃತಿ, ಸಂಸ್ಕಾರ, ಆರ್ಥಿಕ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಸಮಸ್ಯೆಗಳು ಎದ್ದು ಕಾಣುತ್ತಿವೆ, ಜೈನ ಧರ್ಮದ ಪರಿಸ್ಥಿತಿ ಹೀನಾಯವಾಗಿದ್ದು ಸಂಘಟನೆ ಕೊರತೆ ಎದ್ದು ಕಾಣುತ್ತಿವೆ ಈ ಬಗ್ಗೆ ಎಲ್ಲರೂ ಸಂಘಟಿತರಾಗಿ ಧ್ವನಿ ಗೂಡಿಸಬೇಕೆಂದರು.
ರಾಜಾಜಿನಗರ ಜೈನ್ ಮಿಲನ್ ಅಧ್ಯಕ್ಷೇ ಮಮತಾ ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸುಧಾ ಬಾಹುಬಲಿ, ಬಾಹುಬಲಿ ಗೌರಜ್ ಸೇರಿದಂತೆ ರಾಜಾಜಿನಗರ ಜೈನ ಮಿಲನ್ ಪದಾಧಿಕಾರಿಗಳು, ಶ್ರಾವಕ -ಶ್ರಾವಕಿಯರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕಲಾವಿದ ಚಿತ್ತ ಜಿನೇಂದ್ರರವರನ್ನು ಸನ್ಮಾನಿಸಲಾಯಿತು.
ಜೆ. ರಂಗನಾಥ - ತುಮಕೂರು