Thu, May 15, 2025

Thu, May 15, 2025

ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆ

Article Image

ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಥ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿರುವ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲೆಯ ವಿವಿಧ ತಾಲೂಕುಗಳಿಂದ ಒಟ್ಟು 12 ಮಂದಿ ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಳ್ತಂಗಡಿ ತಾಲೂಕಿನಿಂದ ಪದ್ಮಶ್ರೀ ಜೈನ್ ಆಯ್ಕೆಯಾಗಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯಮಟ್ಟದ ಥ್ರೋಬಾಲ್ ಪಂದ್ಯದಲ್ಲಿ ದ.ಕ.ಜಿಲ್ಲಾ ಮಹಿಳಾ ಥ್ರೋಬಾಲ್ ತಂಡವು ಪದ್ಮಶ್ರೀ ಅವರ ನೇತೃತ್ವದಲ್ಲಿ ಭಾಗವಹಿಸಲಿದೆ.

ಪ್ರೋ. ಪದ್ಮಾಶೇಖರ್ ಅವರಿಗೆ ಸಿದ್ಧಾಂತಕೀರ್ತಿ ಪ್ರಶಸ್ತಿ

Article Image

ಪ್ರೋ. ಪದ್ಮಾಶೇಖರ್ ಅವರಿಗೆ ಸಿದ್ಧಾಂತಕೀರ್ತಿ ಪ್ರಶಸ್ತಿ

ಹೊಂಬುಜ ಜೈನ ಮಠದಿಂದ ನೀಡುವ 2025ನೇ ಸಾಲಿನ ಸಿದ್ಧಾಂತಕೀರ್ತಿ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ, ಪ್ರೋ. ಪದ್ಮಾಶೇಖರ್ ಅವರಿಗೆ ವಾರ್ಷಿಕ ಮಹಾರಥೋತ್ಸವ ಮುನ್ನಾ ದಿನವಾದ ಮಾ.21 ರಂದು ನಡೆಯುವ ಧಾರ್ಮಿಕ ಸಭೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ತಿಳಿಸಿದ್ದಾರೆ. ಈ ಪ್ರಶಸ್ತಿಯು 51 ಸಾವಿರ ರೂ. ನಗದು ಒಳಗೊಂಡಿದೆ. ಕವಯತ್ರಿ, ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ, ಆಡಳಿತಗಾರ್ತಿ, ವಿಮರ್ಶಕಿ ಹಾಗೂ ಮಹಿಳಾ ಪರ ಹೋರಾಟಗಾರ್ತಿಯಾಗಿ ಪ್ರೊ. ಪದ್ಮಾ ಶೇಖರ್ ಬಹುಮುಖ ಸಾಧನೆ ಮಾಡಿದ್ದಾರೆ. ವಿಮರ್ಶೆ, ಸಂಶೋಧನೆ, ಕಾವ್ಯ, ಜೀವನಚರಿತ್ರೆ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಪಿಎಚ್.ಡಿ ಸಂಶೋಧಕರಿಗೆ ಮಾರ್ಗದರ್ಶನ ಮಾಡಿದ್ದಾರೆ. ಇವರ ನೇತೃತ್ವದಲ್ಲಿ ಆರು ಸಾವಿರಕ್ಕೂ ಹೆಚ್ಚು ಪ್ರಾಚೀನ ತಾಳೆಪತ್ರಗಳನ್ನು ಡಿಜಟಲೀಕರಣ ಮಾಡಲಾಗಿದೆ. ಈಗಾಗಲೇ ಇವರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ವಿಠಲಾನುಗ್ರಹ ಪ್ರಶಸ್ತಿ, ಚಾವುಂಡರಾಯ ಪ್ರಶಸ್ತಿ, ಆದರ್ಶ ಮಹಿಳಾ ರಾಷ್ಟ್ರೀಯ ಪುರಸ್ಕಾರ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿಗಳು ಲಭಿಸಿವೆ. ಪ್ರಸ್ತುತ ಇವರು ಮೈಸೂರಿನಲ್ಲಿ ನೆಲೆಸಿರುತ್ತಾರೆ.

ಅನಿತಾ ಸುರೇಂದ್ರ ಕುಮಾರ್‌ರವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ 2025

Article Image

ಅನಿತಾ ಸುರೇಂದ್ರ ಕುಮಾರ್‌ರವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ 2025

ಸಮಾಜ ಸೇವಕಿ, ಮುನಿಗಳ ಚಾತುರ್ಮಾಸದ ರುವಾರಿ, ಪ್ರತಿಯೊಂದು ಮನೆ ಮನೆಯಲ್ಲಿ ಜಿನಭಜನೆಯ ಮುಖಾಂತರ ಮನೆ ಮಾತಾಗಿರುವ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್‌ರವರಿಗೆ ಬೆಂಗಳೂರಿನ ರಾಣಿ ಅಬ್ಬಕ್ಕ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ "ವೀರರಾಣಿ ಅಬ್ಬಕ್ಕ ಪ್ರಶಸ್ತಿ"ಯನ್ನು ಮಹಾಲಕ್ಷ್ಮೀ ಲೇಔಟ್‌ನಲ್ಲಿ ಭಾನುವಾರ ಆಯೋಜಿಸಿದ್ದ ರಾಣಿ ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.

ಡಾ. ಹೆಚ್.ಎ.ಪಾಶ್ವ೯ನಾಥ್ ಅವರಿಗೆ ಪ್ರೊ.ಎಚ್ಚೆಸ್ಕೆ ಶತಮಾನೋತ್ಸವ ಪ್ರಶಸ್ತಿ ಪ್ರದಾನ

Article Image

ಡಾ. ಹೆಚ್.ಎ.ಪಾಶ್ವ೯ನಾಥ್ ಅವರಿಗೆ ಪ್ರೊ.ಎಚ್ಚೆಸ್ಕೆ ಶತಮಾನೋತ್ಸವ ಪ್ರಶಸ್ತಿ ಪ್ರದಾನ

ಗ್ರಾಮಾಂತರ ಬುದ್ಧಿ ಜೀವಿಗಳ ಬಳಗ (ಕೆ.ಆರ್.ನಗರ) ಸಂಸ್ಥೆಯು ತನ್ನ 40ನೇ ವಾಷಿ೯ಕೋತ್ಸವ ಹಾಗೂ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದ ಅಂಗವಾಗಿ ಫೆ.23ರಂದು ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರಗಳಲ್ಲಿನ ಅತ್ಯಮೂಲ್ಯ ಕೊಡುಗೆಗಳನ್ನು ಪರಿಗಣಿಸಿ ಹಿರಿಯ ಸಾಹಿತಿಗಳು ಹಾಗೂ ರಂಗಭೂಮಿ ಕಲಾವಿದರು ಆಗಿರುವ ಡಾ. ಹೆಚ್.ಎ. ಪಾಶ್ವ೯ನಾಥ್ ಅವರಿಗೆ ಪ್ರೊ, ಎಚ್ಚೆಸ್ಕೆ ಶತಮಾನೋತ್ಸವ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿಯವರು ಪ್ರದಾನಮಾಡಿ ಗೌರವಿಸಿದರು. ಇವರು‌ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುತ್ತಾರೆ.

ಹಂ.ಪ. ನಾಗರಾಜಯ್ಯ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ

Article Image

ಹಂ.ಪ. ನಾಗರಾಜಯ್ಯ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ

ಉಡುಪಿ, ಫೆ. 24: ಮಾಹೆ ವಿ.ವಿ.ಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡುವ ಟಿ. ವಿಮಲಾ ಪೈ ಪ್ರಾಯೋಜಿತ 2024ನೇ ಸಾಲಿನ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಹಿರಿಯ ಸಾಹಿತಿ ಪ್ರೊ| ಹಂ.ಪ. ನಾಗರಾಜಯ್ಯ(ಹಂಪನಾ) ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲ. ರೂ., ಪಾರಿತೋಷಕ, ಪ್ರಶಸ್ತಿಪತ್ರ ಒಳಗೊಂಡಿದೆ. ಮಾ.23ರಂದು ಗೋವಿಂದ ಪೈ ಸಂಶೋಧನ ಸಂಪುಟದ ದ್ವಿತೀಯ ಭಾಗದ ಬಿಡುಗಡೆ ಕಾರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಸಮಿತಿ ಸದಸ್ಯರಾದ ಡಾ| ತಾಳ್ತಜೆ ವಸಂತ ಕುಮಾರ್, ಡಾ| ಕೆ. ಚಿನ್ನಪ್ಪ ಗೌಡ, ಡಾ| ಪ್ರಭಾಕರ ಜೋಷಿ, ಡಾ| ಕಿಶೋರಿ ನಾಯಕ್‌, ಡಾ| ಎಸ್. ಪಾಡೀಗಾರ್ ಸಹಕರಿಸಿದ್ದಾರೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಪದವಿ ಪ್ರದಾನ

Article Image

ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಪದವಿ ಪ್ರದಾನ

ಜಮಖಂಡಿಯ ೧೦೦೮ ಶ್ರೀ ಪಾರ್ಶ್ವನಾಥ ದಿಗಂಬರ ಜೈನ್ ಮಂದಿರದ ಅರ್ಚಕರಾದ ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಜಿಂಜರ್ ವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಪಂಚಕಲ್ಯಾಣ ಪ್ರತಿಷ್ಠ ಮಹಾಮಹೋತ್ಸವದಲ್ಲಿ “ಸಾಧನ ರತ್ನ” ಪ್ರಶಸ್ತಿಯನ್ನು ಹಾಗೂ ಜೈನ್ ಇಂಡಿಯನ್ ಟಿ.ವಿ ವತಿಯಿಂದ “ಕರ್ನಾಟಕ ಪುರೋಹಿತ ರತ್ನ” ಎಂಬ ಪದವಿಯನ್ನು ನೀಡಿ ಗೌರವಿಸಲಾಗಿದೆ. ಇವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ: ಪ್ರತಿಷ್ಠ ರತ್ನ, ಪ್ರತಿಷ್ಠ ಶಿರೋಮಣಿ, ಪ್ರತಿಷ್ಠ ಬಾಸ್ಕರ, ಪ್ರತಿಷ್ಠ ಪ್ರವೀಣ, ಪಂಡಿತರತ್ನ, ವಾಣಿಭೂಷಣ, ಪ್ರತಿಷ್ಠಾಚಾರ್ಯ.

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಗೆ ಪದವಿ

Article Image

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಗೆ ಪದವಿ

ಶ್ರೀ ಧ ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯೂಷ್ ಸಚಿವರಾದ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಇವರಿಂದ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಪದವಿಯನ್ನು ಪಡೆದರು. ಇವರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಹಾಗೂ ರತ್ನಶ್ರೀ ದಂಪತಿ ಪುತ್ರ. ಇವರು ಇದೇ ಕಾಲೇಜಿನಲ್ಲಿ ಎಮ್. ಡಿಗೆ (ಸ್ನಾತಕೋತ್ತರ ಪದವಿ) ಪ್ರವೇಶಾತಿಯನ್ನು ಪಡೆದಿದ್ದಾರೆ.

ಅಬ್ಯಾಕಸ್ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಷಡ್ಜ

Article Image

ಅಬ್ಯಾಕಸ್ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಷಡ್ಜ

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ಬಾಲ್ಯದಲ್ಲಿಯೇ ಅತ್ಯಂತ ಅದ್ಬುತ ಪ್ರತಿಭಾವಂತ ಪುಟ್ಟ ಬಾಲಕ ಷಡ್ಜ ಹುಬ್ಬಳ್ಳಿಯಲ್ಲಿ ಎಜು ಸ್ಮಾರ್ಟ್ ಕೇರ್ "ಅಬ್ಯಾಕಸ್" ( ಅಂಕಗಣಿತದ ಕೌಶಲ್ಯ) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಬೆಂಗಳೂರಿನಲ್ಲಿಯೂ ಪ್ರಥಮ ಬಹುಮಾನ ತನ್ನದಾಗಿರಿಸಿಕೊಂಡಿದ್ದಾನೆ. ಇದೀಗ ಮುಂಬೈಯಲ್ಲಿ ಕಳೆದ ವಾರ ನಡೆದ 17ನೇ ರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದುಕೊಂಡು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ, ಅಬ್ಯಾಕಸ್ ಮತ್ತು ಗ್ರೇಡಿಂಗ್ ಪರೀಕ್ಷೆಯಲ್ಲಿ "ಅಚೀವರ್ " ಪ್ರಶಸ್ತಿ ಪಡೆದ ಈ ಬಾಲಕ ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾನೆ. ಇವನು ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ ನ ಸದಸ್ಯರು ಧರ್ಮನುರಾಗಿಗಳೂ ಆದ ಶಿಲ್ಪಾ ವಿಜಯಕುಮಾರ ಕಾಶಿನ ಅವರ ಮೊಮ್ಮಗ, ಉಪನ್ಯಾಸಕಿ ಭಾಗ್ಯಶ್ರೀ ಮತ್ತು ಭಾರತೀಯ ಅಂಚೆ ಇಲಾಖೆಯ ಉದ್ಯೋಗಿ ಜೀವಂಧರ ಕಾಶಿನರವರ ಪುತ್ರ, ಪ್ರಭಾ ನಾಯಕ್ ಇವರು ಷಡ್ಜನಿಗೆ ಮಾರ್ಗದರ್ಶಕರಾಗಿ ಪ್ರೇರಣೆ ಪ್ರೋತ್ಸಾಹ ನೀಡಿದ್ದಾರೆ. ಶಾಂತರಾಜ ಮಲ್ಲಸಮುದ್ರ

ಇಂಡಿಯನ್ ವುಮೆನ್ ನೆಟ್‌ವಕ್‌೯ನ 2025-26ನೇ ಸಾಲಿನ ಅಧ್ಯಕ್ಷೆಯಾಗಿ ಪದ್ಮಿನಿ ಎಸ್. ನವಲಗೂಂದ ಆಯ್ಕೆ

Article Image

ಇಂಡಿಯನ್ ವುಮೆನ್ ನೆಟ್‌ವಕ್‌೯ನ 2025-26ನೇ ಸಾಲಿನ ಅಧ್ಯಕ್ಷೆಯಾಗಿ ಪದ್ಮಿನಿ ಎಸ್. ನವಲಗೂಂದ ಆಯ್ಕೆ

ಇಂಡಿಯನ್ ವುಮೆನ್ ನೆಟ್‌ವಕ್‌೯ (ಸಿಐಐ-ಐಡಬ್ಲ್ಯುಎನ್) ಕರ್ನಾಟಕ, 2025-26ನೇ ಸಾಲಿನ ಅಧ್ಯಕ್ಷೆಯಾಗಿ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಪೂರ್ವ ವಿದ್ಯಾರ್ಥಿನಿ ಪದ್ಮಿನಿ ಎಸ್. ನವಲಗೂಂದ ಅವರ ನೇಮಕವನ್ನು ಫೆಬ್ರವರಿ 5, 2025 ರಂದು ಬೆಂಗಳೂರಿನಲ್ಲಿ ನಡೆದ ವಾರ್ಷಿಕ ಸಮ್ಮೇಳನದಲ್ಲಿ ಘೋಷಿಸಿದೆ. ಸ್ವೀಕಾರ ಭಾಷಣದಲ್ಲಿ, ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿ, ಮಹಿಳಾ ವೃತ್ತಿಪರರಿಗೆ ಬೆಂಬಲಾತ್ಮಕ ಪರಿಸರವನ್ನು ನಿರ್ಮಿಸಲು ತಮ್ಮ ಬದ್ಧತೆಯನ್ನು ವಿವರಿಸುತ್ತಾ, ಮುಂದಿನ ವರ್ಷದ ದೃಷ್ಟಿಕೋನವನ್ನು ಹಂಚಿಕೊಂಡರು. ಇವರು, ಹುಬ್ಬಳ್ಳಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಪೂರ್ವ ವಿದ್ಯಾರ್ಥಿನಿ, ಪ್ರಸ್ತುತ ಬೋಶ್ ಗ್ಲೋಬಲ್ ಸಾಫ್ಟ್‌ವೇರ್ ಟೆಕ್ನಾಲಜೀಸ್ ಲಿಮಿಟೆಡ್‌ನಲ್ಲಿ ಉತ್ಪನ್ನ ಅನುಕೂಲತೆ ಅಧಿಕಾರಿ. ಡಿಟ್ರಾಯಿಟ್ನಲ್ಲಿ 2024ನೇ ಸಾಲಿನಲ್ಲಿ ಆಟೋಮೋಟಿವ್ ವುಮೆನ್ ಆಫ್ ದ ಇಯರ್ ಪ್ರಶಸ್ತಿಯನ್ನು ಪಡೆದಿರುವ ಪ್ರಥಮ ಭಾರತೀಯ ಮಹಿಳೆ. ಅವರು ಮಹಿಳಾ ನೆಟ್‌ವಕ್‌೯ಗೆ ಸಹಾಯ ಮಾಡುವ ಹಲವಾರು ಉಪಕ್ರಮಗಳನ್ನು ಚಲಾಯಿಸುವಲ್ಲಿ ವಿಶಾಲ ಅನುಭವವನ್ನು ಹೊಂದಿರುವ ನಾಯಕಿಯಾಗಿರುತ್ತಾರೆ.

ನಿತಿನ್ ಹೆಚ್.ಪಿ. ರವರಿಗೆ 'ಸಂಸ್ಕೃತಿ ಸಂರಕ್ಷಕ' ಗೌರವ

Article Image

ನಿತಿನ್ ಹೆಚ್.ಪಿ. ರವರಿಗೆ 'ಸಂಸ್ಕೃತಿ ಸಂರಕ್ಷಕ' ಗೌರವ

ಕೋಲ್ಕತಾ, ಡಿಸೆಂಬರ್ 30, 2024: ಐಟಿ ತಂತ್ರಜ್ಞ, ಜೈನ ಸಂಶೋಧಕ ಹಾಗೂ www.jainheritagecentres.com (ಜೈನ್ ಹೆರಿಟೇಜ್ ಸೆಂಟರ್ಸ್.ಕಾಂ) ನ ಸಂಸ್ಥಾಪಕರು ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ನಿತಿನ್ ಹೆಚ್.ಪಿ. ರವರ "ಜೈನಧರ್ಮದ ಸಂರಕ್ಷಣೆ ಮತ್ತು ಸಂವರ್ಧನೆ"ಯ ಕಾರ್ಯವನ್ನು ಗುರುತಿಸಿ, ಶ್ರೀ ಭಾರತವಾರ್ಷೀಯ ದಿಗಂಬರ ಜೈನ ತೀರ್ಥಸಂರಕ್ಷಿಣಿ ಮಹಾಸಭಾದ ಪಶ್ಚಿಮ ಬಂಗಾಳ ವಿಭಾಗವು "ಸಂಸ್ಕೃತಿ ಸಂರಕ್ಷಕ" ಎಂಬ ಬಿರುದನ್ನು ನೀಡಿ ಗೌರವಿಸಿದೆ. ಕೋಲ್ಕತ್ತಾದ ಬಡಾ ಬಜಾರ್ ನ ಜೈನಭವನದಲ್ಲಿ 30 ಡಿಸೆಂಬರ್ 2024ರಂದು ನಡೆದ ವಿಶೇಷ ಸಮಾರಂಭದಲ್ಲಿ ಇವರನ್ನು ಸತ್ಕರಿಸಿ ಸನ್ಮಾನಿಸಲಾಯಿತು. ನಿತಿನ್ ರವರು ಕರ್ನಾಟಕ ವಲ್ಲದೇ ಭಾರತದ ಇತರ ರಾಜ್ಯಗಳ ಅದರಲ್ಲೂ ವಿಶೇಷವಾಗಿ ಪಶ್ಚಿಮ ಬಂಗಾಳ ರಾಜ್ಯದ ಜೈನ ಪರಂಪರೆ ಕೇಂದ್ರಗಳಿಗೆ ಕ್ಷೇತ್ರಕಾರ್ಯವನ್ನು ಕೈಗೊಂಡು ಪಶ್ಚಿಮ ಬಂಗಾಳದಲ್ಲಿ ಜೈನಧರ್ಮದ ಕುರಿತು ಕಳೆದ ಎರಡು ವರ್ಷಗಳಿಂದ ವಿಶೇಷ ಸಂಶೋಧನೆಯನ್ನು ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ದಿಗಂಬರ ಜೈನ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ ರಾಜ್ ಕುಮಾರ್ ಸೇಠಿ, ಮಹಾಸಭಾದ ಪಶ್ಚಿಮ ಬಂಗಾಳ ವಿಭಾಗದ ಪದಾಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಯುವರಾಜ ಜೈನ್ ಅವರಿಗೆ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ

Article Image

ಯುವರಾಜ ಜೈನ್ ಅವರಿಗೆ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ

ಯುವರಾಜ ಜೈನ್ ಅವರಿಗೆ ಮಾನ್ಯತೆ ಪಡೆದ ಅನುದಾನ ರಹಿತ ಸಂಘ ಕರ್ನಾಟಕ (RECOGNISED UNAIDED PRIVAT SCHOOLS ASSOCIATION OF KARNATAKA) ರುಪ್ಸಾ ಇವರು ಕೊಡಮಾಡುವ 2024-25 ನೇ ಸಾಲಿನ 'ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ' ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಇವರಿಗೆ ನೀಡಲಾಯಿತು. ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟ್ರದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಶ್ರೀಯುತರು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕ್ರತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ. ಕಳೆದ ಮೂರು ದಶಕಗಳಿಂದ ಶಿಕ್ಷಣ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಪ್ರಮಯಿ ಜೈನ್ ಆಯ್ಕೆ

Article Image

ಪ್ರಮಯಿ ಜೈನ್ ಆಯ್ಕೆ

ಪ್ರಮಯಿ ಜೈನ್, ಎಸ್‌ಡಿಎಂ ಕಾನೂನು ಕಾಲೇಜಿನ 2ನೇ ಬಿಬಿಎ, ಎಲ್‌ಎಲ್‌ಬಿ ವಿದ್ಯಾರ್ಥಿನಿ 2024-25ರ ಅಂತರ ವಿಶ್ವವಿದ್ಯಾಲಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಬ್ಯಾಡ್ಮಿಂಟನ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ ನೇಮಕ

Article Image

ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ ನೇಮಕ

ಬೆಳ್ತಂಗಡಿ: ಕರ್ನಾಟಕ ಸರ್ಕಾರಿ ನಿವೃತ್ತರ ಸಂಘ ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಸಂಘಟನಾ ಕಾರ್ಯದರ್ಶಿಯಾಗಿ ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ ಅವರನ್ನು ನೇಮಕಗೊಳಿಸಿದ್ದಾರೆ. ಡಾ. ಕೆ. ಜಯಕೀರ್ತಿ ಜೈನ್ ಕರ್ನಾಟಕ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಯಾಗಿ, 25 ವರ್ಷ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಪಶು ವೈದ್ಯಕೀಯ ಪರಿವೀಕ್ಷಕರಾಗಿ, ಸಂಘದಲ್ಲಿ 35 ವರ್ಷ ಜಿಲ್ಲಾಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸರ್ಕಾರದಿಂದ ಸಮನ್ವಯಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮಹಾವೀರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ, ಶ್ರೀಕ್ಷೇತ್ರ ಚಂದ್ರಪುರ, ಶಿಶಿಲ ಆಡಳಿತ ಮಂಡಳಿಯ ಸಂಚಾಲಕರಾಗಿ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಯುವರಾಜ ಜೈನ ಅವರಿಗೆ ಸಿರಿಪುರ ಪ್ರಶಸ್ತಿ

Article Image

ಯುವರಾಜ ಜೈನ ಅವರಿಗೆ ಸಿರಿಪುರ ಪ್ರಶಸ್ತಿ

ಮೂಡುಬಿದಿರೆ : ಮೂಡುಬಿದಿರೆ ಪೂನೆಚ್ಚಾರಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಸಮಿತಿಯಿಂದ ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಶಾರದಾ ಮಹೋತ್ಸವದ ಸಂದರ್ಭದಲ್ಲಿ ಪ್ರತಿಷ್ಠಿತ "ಸಿರಿಪುರ ಪ್ರಶಸ್ತಿ-2024"ನ್ನು ಎಕ್ಸಲೆಂಟ್ ವಿದ್ಯಾರ್ಥಿ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ ಅವರಿಗೆ ನೀಡಲಾಯಿತು. ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಶ್ರೀಯುತರು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ. ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಪ್ರಥ್ವಿರಾಜ್ ಬಲ್ಲಾಳ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ

Article Image

ಪ್ರಥ್ವಿರಾಜ್ ಬಲ್ಲಾಳ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಥ್ವಿರಾಜ್ ಬಲ್ಲಾಳ್ ರವರಿಗೆ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ.) ಬೆಂಗಳೂರು ಇವರ ವತಿಯಿಂದ ಶಿಕ್ಷಕ ವೃತ್ತಿಯಲ್ಲಿ ಅಮೋಘ ಸೇವೆ ಸಲ್ಲಿಸಿ ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದು ಇವರ ಸೇವೆಯನ್ನು ಪುರಸ್ಕರಿಸಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ 2024-25ನೇ ಸಾಲಿನ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗಣ್ಯ ಅತಿಥಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಮೊದಲು ಇವರಿಗೆ, "ತಾಲೂಕು ಸಾಧಕ ಶಿಕ್ಷಕ ಪ್ರಶಸ್ತಿ" "ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ", "ನಿಟ್ಟೆ ರೋಟರಿ ಸಂಸ್ಥೆಯ ನೇಶನ್ ಬಿಲ್ಡರ್ ಅವಾರ್ಡ್" ಲಭಿಸಿರುತ್ತದೆ.

ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಶಿಕಾಂತ್ ವೈ. ಆಯ್ಕೆ

Article Image

ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಶಿಕಾಂತ್ ವೈ. ಆಯ್ಕೆ

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಬಿದಿರೆ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶಶಿಕಾಂತ್ ವೈ ಆಯ್ಕೆಯಾಗಿದ್ದು ಸೆ.14 ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು, ರಾಜ್ಯಾಧ್ಯಕ್ಷರಾದ ಎನ್.ಗೋಪಾಲ ಹಾಗೂ ಗಣ್ಯರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಇವರಿಗೆ 2019 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುತ್ತದೆ.

ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ 'ನವ ನಕ್ಷತ್ರ ಸನ್ಮಾನ 2024'

Article Image

ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ 'ನವ ನಕ್ಷತ್ರ ಸನ್ಮಾನ 2024'

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ನವ ನಕ್ಷತ್ರ ಸನ್ಮಾನ 2024 ಗೌರವ ಪುರಸ್ಕಾರವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಟಿವಿ9 ಕನ್ನಡ ಸುದ್ದಿ ವಾಹಿನಿಯ 17ನೇ ಹುಟ್ಟು ಹಬ್ಬದ ಸಂಭ್ರಮಾಚರಣೆ ಸಂದರ್ಭದಲ್ಲಿ ಅರಮನೆ ಮೈದಾನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿದರು.

ಯೋಗ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ: ಡಾ. ಶಶಿಕಾಂತ ಜೈನ್‌ರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

Article Image

ಯೋಗ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ: ಡಾ. ಶಶಿಕಾಂತ ಜೈನ್‌ರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಯೋಗ ಕ್ಷೇತ್ರದಲ್ಲಿ ಮಾಡಿದ ಉನ್ನತ ಸೇವೆ, ಸಾಧನೆಗಾಗಿ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ನ ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ಏಶಿಯಾ ಪೆಸಿಫಿಕ್ ಐಕಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅ. 22 ರಂದು ಗುರುವಾರ ಕೊಲೊಂಬೊದಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಜಿನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ

Article Image

ಬೆಂಗಳೂರು: ಜಿನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ

ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿಯು ಕುಟುಂಬ ಕೌನ್ಸಿಲರ್ ಪ್ರಾಕ್ಟಿಸ್ ಮಾಡುತ್ತಿರುವ ಜನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಿದೆ. ಡಾ. ಮಂಜುಳಾ ವಿ. ಅವರ ಮಾರ್ಗದರ್ಶನದಲ್ಲಿ "Process of Emotion regulation in relation to Attachment and Mindfulness traits during Gottman's Dreams & within & Conflict intervention psychology" ಎಂಬ ವಿಷಯ ಮೇಲೆ ಮಂಡಿಸಿದ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿ ಲಭಿಸಿದೆ. ಜಿನಶ್ರೀ ಅವರು ಭಾರತದ ರಾಷ್ಟ್ರೀಯ ಗ್ರಂಥಾಲಯ ಕೊಲ್ಕತ್ತಾದ ಮಾಜಿ ಮಹಾನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕರಾದ ಡಾ. ಪಿ. ವೈ. ರಾಜೇಂದ್ರ ಕುಮಾರ್ ಅವರ ಪುತ್ರಿಯಾಗಿದ್ದು, ಸಿಸ್ಕೊ, ಎಚ್‌ಪಿ, ವಿಪ್ರೊ ಕಂಪನಿಗಳಲ್ಲಿ 17 ವರ್ಷಗಳ ಕಾಲ ಸಾಫ್ಟ್ವೇರ್ ಎಂಜಿನಿಯರ್ ಮತ್ತು ತಾಂತ್ರಿಕ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. MA ಸೈಕಾಲಜಿ (IGNOU), MBA (SISII ಕ್ಯಾಲಿಫೋರ್ನಿಯಾ), MS (IIITB ಬೆಂಗಳೂರು) ಮತ್ತು BE(BIT, ಬೆಂಗಳೂರು)ನಲ್ಲಿ ಪದವಿ ಪಡೆದಿದ್ದಾರೆ.

ದೂರದರ್ಶನದ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ

Article Image

ದೂರದರ್ಶನದ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ

ದೂರದರ್ಶನ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಮಹಾವೀರ ಹಾಗೂ ಆರತಿರವರ ಪುತ್ರಿ ಉದಯೋನ್ಮುಖ ಭರತನಾಟ್ಯ ಕಲಾವಿದೆ ಅನನ್ಯ ರಂಜನಿ ಆಯ್ಕೆಯಾಗಿದ್ದಾರೆ. ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್, ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿದ್ದಾರೆ. ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು, ಉಜಿರೆಯ ಎಸ್. ಡಿ ಎಂ. ಕಾಲೇಜಿನಲ್ಲಿ ಅಂತಿಮ ವಿಜ್ಞಾನ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಗೀತಾ ಅಜೀತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ 'ಶ್ರೇಷ್ಠತಾ ಪ್ರಶಸ್ತಿ'

Article Image

ಗೀತಾ ಅಜೀತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ 'ಶ್ರೇಷ್ಠತಾ ಪ್ರಶಸ್ತಿ'

ಸುಮಾರು ಎರಡು ದಶಕಗಳಿಂದ ಎಲ್.ಐ.ಸಿ ಯಲ್ಲಿ ಸಲಹೆಗಾರರಾಗಿ ಮತ್ತು ಸಲಹೆಗಾರರಿಗೆ ತರಬೇತುಗಾರರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ಗೀತಾ ಅಜಿತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ ಧಾರವಾಡ ವಿಭಾಗದ ಶ್ರೇಷ್ಠತಾ ಪ್ರಶಸ್ತಿ( Excellence Award ) ದೊರೆಕಿದೆ. ಹೈದ್ರಾಬಾದ್ ನ ಹಿರಿಯ ವಿಭಾಗೀಯ ಅಧಿಕಾರಿ ಜಯಸಿಂಹನ್, ಧಾರವಾಡದ ಹಿರಿಯ ವಿಭಾಗೀಯ ವ್ಯವಸ್ಥಾಪಕ ಬಿ.ಎಸ್ ಚಕ್ರವರ್ತಿ, ಮಾರ್ಕೆಟಿಂಗ್ ಮ್ಯಾನೇಜರ್ ಪದ್ಮಪ್ರಭಾ ಶಂಕರ ಮತ್ತು ಮಹೇಶ್ ಹುನ್ಸವಾಡಕರ್ ಇವರೆಲ್ಲರ ಸಮ್ಮುಖದಲ್ಲಿ ಜೂ. 6ರಂದು ಪ್ರಶಸ್ತಿ ಪ್ರದಾನ ಮಾಡಿದರು.

ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡಬಿದ್ರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್

Article Image

ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡಬಿದ್ರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್

ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ ಇವರು ಶಾಲಾ ಮಕ್ಕಳಿಗಾಗಿ ಪ್ರತಿ ವರ್ಷವೂ ಆಯೋಜಿಸುವ ರಾಷ್ಟ್ರಮಟ್ಟದ ಯುವ ವಿಜ್ಞಾನಿ ಕಾರ್ಯಕ್ರಮ ‘ಯುವಿಕ’ಗೆ ಈ ಬಾರಿ ಎಕ್ಸಲೆಂಟ್ ಮೂಡುಬಿದಿರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್ ಆಯ್ಕೆಗೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಯನ್ನು ಗೈದಿದ್ದಾರೆ. ಇಸ್ರೋ’ ನ ವಿವಿಧ ಕೇಂದ್ರಗಳಲ್ಲಿ ಎರಡು ವಾರಗಳ ಕಾಲ ಜರಗುವ 'ಯುವಿಕ-2024' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ಬಾರಿ ದೇಶದ ಎಲ್ಲಾ ರಾಜ್ಯಗಳಿಂದ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 85,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಕಾಂಕ್ಷಿಗಳಾಗಿ ಅರ್ಜಿಯನ್ನು ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮೂರು ವರುಷಗಳ ಶೈಕ್ಷಣಿಕ ಸಾಧನೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ವೈಜ್ಞಾನಿಕ, ಕ್ರೀಡಾ ಸಾಧನೆಗಳು, ಒಲಂಪಿಯಾಡ್ ತತ್ಸಮಾನ ಸ್ಪರ್ಧೆಗಳಲ್ಲಿ ಪಡೆದ ರ‍್ಯಾಂಕ್ ಜೊತೆಗೆ ಮುಖ್ಯವಾಗಿ ಇಸ್ರೋ ಆಯೋಜಿಸುವ ಆನ್‌ಲೈನ್ ರಸಪ್ರಸ್ನೆಯಲ್ಲಿ ವಿದ್ಯಾರ್ಥಿಯ ಪಲಿತಾಂಶ ಇವೆಲ್ಲವನ್ನು ಮಾನದಂಡವನ್ನಾಗಿರಿಸಿ 250 ಮಂದಿ ವಿದ್ಯಾರ್ಥಿಗಳನ್ನು ಪ್ರಸಕ್ತ ಸಾಲಿನ ‘ಯುವಿಕ’ಗೆ ಆಯ್ಕೆ ಮಾಡಲಾಗಿದ್ದು ಈ ಪಟ್ಟಿಯಲ್ಲಿ 12 ಮಂದಿಗಳಲ್ಲಿ ರಾಜ್ಯ ಪಠ್ಯಕ್ರಮ ಭೋಧಿಸುವ ಶಿಕ್ಷಣ ಸಂಸ್ಥೆಯಿಂದ ಆಯ್ಕೆಯಾಗಿ ಭಾಗವಹಿಸಿದ ಕರ್ನಾಟಕದ ಏಕೈಕ ವಿದ್ಯಾರ್ಥಿನಿ ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೌಲ್ಯ ವೈ. ಆರ್. ಜೈನ್ ಆಗಿರುವುದು ಶಿಕ್ಷಣ ಕಾಶಿ ಎನಿಸಿದ ಮೂಡುಬಿದಿರೆಗೆ ವಿಶೇಷ ಮೆರಗನ್ನು ತಂದಿದೆ ಈಗಾಗಲೇ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ ಕಾರ್ಯಕ್ರಮದಲ್ಲಿ ವಿಜ್ಞಾನ ಮಾದರಿ ತಯಾರಿ, ಜಿಲ್ಲಾ ರಾಜ್ಯ ಮಟ್ಟದ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆಯ ಜೊತೆಗೆ ರಾಷ್ಟ್ರ, ರಾಜ್ಯಮಟ್ಟದ ಅಟಲ್ ಮಾರಥಾನ್, ಇನ್‌ಸ್ಪಾಯರ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿನೂತನವಾದ ಸಂಶೋಧನಾತ್ಮಕ ಮಾದರಿಗಳನ್ನು ಪ್ರಸ್ತುತ ಪಡಿಸುವ ಮೂಲಕ ಗಮನ ಸೆಳೆದಿರುವ ಈ ಪ್ರತಿಭೆ ಮೂಡುಬಿದಿರೆಯ ಪ್ರತಿಷ್ಠಿತ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಇವರ ಸುಪುತ್ರಿಯಾಗಿದ್ದಾಳೆ.

ಡಾ. ಪ್ರಭಾತ್ ಬಲ್ನಾಡು ಪ್ರಾಂಶುಪಾಲರಾಗಿ ಪದೋನ್ನತಿ

Article Image

ಡಾ. ಪ್ರಭಾತ್ ಬಲ್ನಾಡು ಪ್ರಾಂಶುಪಾಲರಾಗಿ ಪದೋನ್ನತಿ

ಮೂಡುಬಿದಿರೆಯ 52 ವರ್ಷಗಳ ಇತಿಹಾಸವನ್ನು ಹೊಂದಿರುವ ಜೈನ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಪ್ರಭಾತ್ ಬಲ್ನಾಡು ಪೇಟೆಯವರು ಪದೋನ್ನತಿ ಹೊಂದಿದ್ದಾರೆ. 1999ರಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆಯಲ್ಲಿ ಉಪನ್ಯಾಸ ವೃತ್ತಿ ಆರಂಭಿಸಿದ ಇವರು ಕಳೆದ 22 ವರ್ಷಗಳಿಂದ ಜೈನ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯಕ್ಷಗಾನ ಕಲಾವಿದರಾಗಿ, ಸಂಘಟಕರಾಗಿ, ಆಕಾಶವಾಣಿ ಹಾಗೂ ಟಿವಿ ಮಾಧ್ಯಮಗಳ ಸಂಪನ್ಮೂಲ ವ್ಯಕ್ತಿಯಾಗಿ, ಇತಿಹಾಸ ಸಂಶೋಧಕರಾಗಿ, ಲೇಖಕರಾಗಿ, ಜೆಸಿಐ ತರಬೇತುದಾರರಾಗಿ, ಅಧ್ಯಕ್ಷರಾಗಿ ಹತ್ತಾರು ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಇವರು ಹಿರಿಯ ಯಕ್ಷಗಾನ ಸಂಘಟಕ ಮರ್ಕಂಜದ ಯುವರಾಜ ಜೈನ್ ಮತ್ತು ಪ್ರಸನ್ನ ದಂಪತಿಗಳ ಪುತ್ರ.

ಹಾಸನ: ಡಾ. ಎಸ್. ಎ. ನಿತಿನ್ ನೇಮಕ

Article Image

ಹಾಸನ: ಡಾ. ಎಸ್. ಎ. ನಿತಿನ್ ನೇಮಕ

ಬೆಂಗಳೂರಿನ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಸದಸ್ಯರನ್ನಾಗಿ ಡಾ.ಎಸ್.ಎ ನಿತಿನ್ ಅವರನ್ನು ನೇಮಕ ಮಾಡಲಾಗಿದೆ. ಇವರು ಪ್ರಸ್ತುತ ನಗರದ ರಾಜೀವ್ ಗಾಂಧಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಉಪಾಧ್ಯಕ್ಷರಾಗಿ ಸೂರಜ್ ಜೈನ್ ಮಾರ್ನಾಡ್ ಆಯ್ಕೆ

Article Image

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಉಪಾಧ್ಯಕ್ಷರಾಗಿ ಸೂರಜ್ ಜೈನ್ ಮಾರ್ನಾಡ್ ಆಯ್ಕೆ

ಕಳೆದ ಅನೇಕ ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸೂರಜ್ ಜೈನ್ ಅವರು ಇದೀಗ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ. ಈ ಹಿಂದೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾಗಿಯು ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಅದೇ ರೀತಿ ಅನೇಕ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರು ಮೂಡುಬಿದಿರೆ ತಾಲೂಕಿನ ಮಾರ್ನಾಡಿನವರು

ಅಮೇರಿಕಾದ ಹಾರ್ವರ್ಡ್ ಯೂನಿವರ್ಸಿಟಿಗೆ ಪ್ರದೀಪ್ ಜೈನ್ ಬಲ್ನಾಡು ಪೇಟೆ

Article Image

ಅಮೇರಿಕಾದ ಹಾರ್ವರ್ಡ್ ಯೂನಿವರ್ಸಿಟಿಗೆ ಪ್ರದೀಪ್ ಜೈನ್ ಬಲ್ನಾಡು ಪೇಟೆ

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರೇಟೆಜಿಕ್ ಲೀಡರಶಿಪ್ ಪ್ರೋಗ್ರಾಮ್ ಗೆ (strategic Leadership ) ಸುಳ್ಯ ತಾಲೂಕು ಮರ್ಕಂಜದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ ಯಾಗಿದ್ದು ಇದರಲ್ಲಿ ಭಾಗವಹಿಸಲು ಶನಿವಾರ ಅಮೆರಿಕದ ಬೋಸ್ಟನ್ ಗೆ ತೆರಳಿದ್ದಾರೆ. ಇದೇ ಸಂದರ್ಭ ಅವರು ಅಮೆರಿಕದ ನ್ಯೂಯಾರ್ಕ್ ಮತ್ತು ವಾಷಿಂಗ್ಟನಿಗೂ ಭೇಟಿ ನೀಡಲಿದ್ದಾರೆ. ದೇಶದಾದ್ಯಂತ 25 ರಾಜ್ಯಗಳಲ್ಲಿ 750 ಶಾಖೆಗಳನ್ನು ಹೊಂದಿರುವ ಉಜ್ಜಿವನ್ ಬ್ಯಾಂಕ್ ಇದರ ಹೌಸಿಂಗ್ ಲೋನ್ ವಿಭಾಗದ ರಾಷ್ಟ್ರಮಟ್ಟದ ವ್ಯವಹಾರ ಮುಖ್ಯಸ್ಥರಾಗಿರುವ ಇವರು ಸುಳ್ಯ ತಾಲೂಕು ಬಲ್ನಾಡು ಪೇಟೆ ಬಸದಿಯ ಆಡಳಿತ ಮುಕ್ತೆಸರರಾದ ಮತ್ತು ಯಕ್ಷಗಾನ ಸಂಘಟಕರಾದ ಮರ್ಕಂಜ ಯುವರಾಜ ಜೈನ್ ಮತ್ತು ಪ್ರಸನ್ನ ದಂಪತಿಗಳ ಕಿರಿಯ ಪುತ್ರರಾಗಿದ್ದಾರೆ.

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

Article Image

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

SCDCC ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಮುಲ್ಕಿ ಅರಮನೆಯ ವತಿಯಿಂದ ಎಂ ಗೌತಮ್ ಜೈನ್ ಹಾಗೂ ಪವಿತ್ರೇಶ್ ಗೌರವಾರ್ಪಣೆ ಸಲ್ಲಿಸಿದರು.

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

Article Image

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ನ್ಯೂ ಪಡಿವಾಳ್ ಮಾಲಕ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆಯಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ಅಧ್ಯಕ್ಷರಿಲ್ಲದೇ ಇದ್ದ ಮೂಡಾ ಕ್ಕೆ ಇದೀಗ ಹೊಸ ಸಾರಥಿಯ ನೇಮಕವಾಗಿರುತ್ತದೆ.

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

Article Image

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

ಹೊಸದಿಲ್ಲಿ ಮಾ. 8: ಕಾರ್ಕಳದ ಶ್ರದ್ಧಾ ಜೈನ್, ತಾಂಜಾನಿಯಾದ ಕಿಲಿ ಪೌಲ್ ಸಹಿತ ಸಾಮಾಜಿಕ ಜಾಲತಾಣಗಳ ಮೂಲಕ ಜನಮನ ಗೆದ್ದಿರುವ ಒಟ್ಟು 20 ಕ್ಷೇತ್ರಗಳ 23 ಯುವ ಕ್ರಿಯೇಟರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ದೇಶದ ಪ್ರಪ್ರಥಮ 'ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ'ಯನ್ನು ಪ್ರದಾನ ಮಾಡಿದರು. ಅತ್ಯಂತ ಸೃಜನಶೀಲ ಮಹಿಳಾ ಕ್ರಿಯೇಟರ್ ವಿಭಾಗದಲ್ಲಿ 'ಅಯ್ಯೋ ಶ್ರದ್ಧಾ' ಎಂದೇ ಖ್ಯಾತರಾಗಿರುವ ಕನ್ನಡತಿ ಶ್ರದ್ಧಾ ಜೈನ್ ಅವರು ಪ್ರಶಸ್ತಿ ಪಡೆದರು. ಇವರಲ್ಲದೆ ಪಂಖ್ತಿ ಪಾಂಡೆ, ಕೀರ್ತಿಕಾ ಗೋವಿಂದಸ್ವಾಮಿ, ಗಾಯಕಿ ಮೈಥಿಲಿ ಠಾಕೂರ್, ಮಲ್ಹಾರ್ ಕಳಂಬೆ ಸಹಿತ ಹಲವು ಯುವ ಪ್ರತಿಭೆಗಳ ಜತೆಗೆ ಮೂವರು ಅಂತರಾಷ್ಟ್ರೀಯ ಕ್ರಿಯೇಟರ್‌ಗಳಿಗೆ ಕೂಡ ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ, ನಾವೆಲ್ಲರೂ ಭಾರತದಲ್ಲೇ ರೂಪಿಸೋಣ, ಜಗತ್ತಿಗಾಗಿ ರೂಪಿಸೋಣ ಎಂದ ಪ್ರಧಾನಿ, ಭಾರತದ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುವಂತೆ ಮತ್ತು ನಾರಿ ಶಕ್ತಿಯ ಥೀಮ್‌ನೊಂದಿಗೆ ಕಂಟೆಂಟ್ ರೂಪಿಸುವಂತೆ ಪ್ರಶಸ್ತಿ ಪುರಸ್ಕೃತರಿಗೆ ಕರೆ ನೀಡಿದರು.'ಅಯ್ಯೋ ಶ್ರದ್ಧಾ ಕಾರ್ಕಳ ತಾಲೂಕಿನ ಬಜಗೋಳಿ ವರ್ಧಮಾನ ಜೈನ್ ಹಾಗೂ ದಿ.ಸುಶೀಲಾ ದಂಪತಿಯ ಇಬ್ಬರು ಪುತ್ರಿಯರಲ್ಲಿ ಶ್ರದ್ಧಾ ಒಬ್ಬರು. 'ಅಯ್ಯೋ ಶ್ರದ್ಧಾ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಪ್ರಸ್ತುತ ಬೆಂಗಳೂರಿನಲ್ಲಿದ್ದಾರೆ. ಪ್ರಶಸ್ತಿ ಸ್ವೀಕರಿಸುವ ವೇಳೆ ಶ್ರದ್ಧಾ, ಎಷ್ಟೇ ಒತ್ತಡದ ಪರಿಸ್ಥಿತಿ ಇದ್ದರೂ ನಾವು ಭಾರತೀಯರು ನಗುವ ಮಾರ್ಗವನ್ನು ಕಂಡುಕೊಳ್ಳುತ್ತಲೇ ಇರುತ್ತೇವೆ ಎಂದರು.

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

Article Image

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಸುಪ್ರೀತ್ ಜೈನ್ ಅವರನ್ನು ಆಯ್ಕೆ ಮಾಡಲಾಗಿದೆ. ಇವರು ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಪತ್ರಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾಧ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು.

First Previous

Showing 1 of 2 pages

Next Last