Article Image

ಡಾ. ಜಿನೇಶ್ ಬಹುಬಲಿ ನಾಗವಿ ಅವರಿಗೆ: ಬೆಸ್ಟ್ ಆರ್ಟಿಕಲ್ ಅವಾರ್ಡ್‌

Article Image

ಡಾ. ಜಿನೇಶ್ ಬಹುಬಲಿ ನಾಗವಿ ಅವರಿಗೆ: ಬೆಸ್ಟ್ ಆರ್ಟಿಕಲ್ ಅವಾರ್ಡ್‌

ಅಸೋಸಿಯೇಷನ್ ಆಫ್ ಫಾರ್ಮಾಟಿಕಲ್ ಟೀಚರ್ಸ್‌ ಆಫ್‌ ಇಂಡಿಯಾ (APTI) ಸಂಸ್ಥೆಯು ಡಾ. ಜಿನೇಶ್ ಬಹುಬಲಿ ನಾಗವಿ ಅವರಿಗೆ ಶ್ರೀ ಇಶ್ವರ್ ಎನ್. ಹುಕ್ಕೇರಿ ಮೆಮೋರಿಯಲ್ ಅವಾರ್ಡ್ - 2025 ಅಡಿಯಲ್ಲಿ ಕ್ಲಿನಿಕಲ್ ಪ್ರಾಕ್ಟಿಸ್ ಕ್ಷೇತ್ರದ “ಬೆಸ್ಟ್ ಆರ್ಟಿಕಲ್ ಅವಾರ್ಡ್‌” ಅನ್ನು ಪ್ರದಾನ ಮಾಡಿದೆ. ಡಾ. ಜಿನೇಶ್‌ ನಾಗವಿ ಅವರು “Assessment of Compliance in Hypertensive and Diabetic Patients at Primary Health Care: A Prospective Study" ಎಂಬ ಸಂಶೋಧನಾ ಲೇಖನವನ್ನು Indian Journal of Pharmacy Practice ಪತ್ರಿಕೆಯಲ್ಲಿ ಪ್ರಕಟಿಸಿದ್ದು, ಈ ಸಂಶೋಧನೆ ಗುಣಮಟ್ಟ, ವೈಜ್ಞಾನಿಕ ಆಳತೆ ಹಾಗೂ ಸಮಕಾಲೀನ ಆರೋಗ್ಯ ಸವಾಲುಗಳಿಗೆ ಹೊಂದಿಕೆಯಾಗಿರುವುದಕ್ಕಾಗಿ ಈ ಗೌರವಕ್ಕೆ ಪಾತ್ರವಾಗಿದೆ. ಈ ಪ್ರಶಸ್ತಿಯನ್ನು 74ನೇ ಇಂಡಿಯನ್ ಫಾರ್ಮಾಸ್ಯೂಟಿಕಲ್ ಕಾಂಗ್ರೆಸ್ (IPC) ಸಮಾವೇಶದ ಸಂದರ್ಭದಲ್ಲಿ, 2025ರ ಡಿಸೆಂಬರ್ 19 ರಿಂದ 21ರವರೆಗೆ ಬೆಂಗಳೂರಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ (BIEC), ಕರ್ನಾಟಕದಲ್ಲಿ ಆಯೋಜಿಸಲಾದ APTI ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪದಾನ ಮಾಡಲಾಯಿತು. ಈ ಗೌರವವು ಸಾಮಾನ್ಯವಾಗಿ ವೈಜ್ಞಾನಿಕ ವಿಶ್ಲೇಷಣೆಯ ಶ್ರೇಷ್ಠತೆ, ಸಂಶೋಧನಾ ನವೀನತೆ ಹಾಗೂ ಪ್ರಸ್ತುತ ಫಾರ್ಮಾಸ್ಯೂಟಿಕಲ್ ಕ್ಷೇತ್ರದ ಅಗತ್ಯಗಳಿಗೆ ಸ್ಪಂದಿಸುವ ಸಂಶೋಧನೆಗಳಿಗೆ ಮಾತ್ರ ನೀಡಲಾಗುತ್ತದೆ. ಈ ಪ್ರಶಸ್ತಿ ದೊರಕಿರುವುದು ಡಾ. ಜಿನೇಶ್ ನಾಗವಿ ಅವರ ಸಂಶೋಧನಾ ಕಾರ್ಯದ ಗುಣಮಟ್ಟ, ವೈಜ್ಞಾನಿಕ ಪುಸ್ತುತಿಕೆಯ ಸ್ಪಷ್ಟತೆ ಹಾಗೂ ತಜ್ಞ ವಿಮರ್ಶಕರ ಸಮಿತಿಯಿಂದ ದೊರೆತ ಉನ್ನತ ಮೌಲ್ಯಮಾಪನವನ್ನು ಪ್ರತಿಬಿಂಬಿಸುತ್ತದೆ. ಡಾ. ಜಿನೇಶ್ ಬಹುಬಲಿ ನಾಗವಿ ಅವರು ಪ್ರಸ್ತುತ ಶಾರದಾ ವಿಲಾಸ್ ಕಾಲೇಜ್ ಆಫ್ ಫಾರ್ಮಸಿ, ಶಾರದಾ ವಿಲಾಸ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್ಸ್, ಮೈಸೂರು ಇಲ್ಲಿ ಫಾರ್ಮಾಸ್ಯೂಟಿಕಲ್ ಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕರಾಗಿ ಮತ್ತು ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಅವರು HESDAR ಸೆಂಟರ್, ಮೈಸೂರುನಲ್ಲಿ ಗೌರವಾನ್ವಿತ ಸಂಯೋಜಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಈ ಸಾಧನ ಡಾ. ಜಿನೇಶ್ ನಾಗವಿ ಅವರ ವೃತ್ತಿಪರ ಜೀವನದಲ್ಲಿ ಮಹತ್ವದ ಮೈಲಿಗಲ್ಲಾಗಿದ್ದು, ಭಾರತೀಯ ಫಾರ್ಮಾಸ್ಯೂಟಿಕಲ್ ಸಂಶೋಧನಾ ಕ್ಷೇತ್ರದಲ್ಲಿ ಅವರ ಕೊಡುಗೆಗೆ ಮತ್ತೊಂದು ಗೌರವವಾಗಿದೆ.

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಮಾಧ್ಯಮ ವಕ್ತಾರರಾಗಿ ಸುದೇಶ್ ಕುಮಾರ್ ಮಂಗಳೂರು ಆಯ್ಕೆ

Article Image

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಮಾಧ್ಯಮ ವಕ್ತಾರರಾಗಿ ಸುದೇಶ್ ಕುಮಾರ್ ಮಂಗಳೂರು ಆಯ್ಕೆ

ಮಂಗಳೂರು: ಕನ್ನಡ ನಾಡು-ನುಡಿ ಹಾಗೂ ಶಿಕ್ಷಣದ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ 'ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ'ದ ರಾಜ್ಯ ಮಾಧ್ಯಮ ವಕ್ತಾರರಾಗಿ ಹಿರಿಯ ಪತ್ರಕರ್ತ, ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಸುದೇಶ್ ಕುಮಾರ್ ಮಂಗಳೂರು ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ​ಕನ್ನಡ ಮಾಧ್ಯಮ ಶಾಲೆಗಳನ್ನು ಸಬಲೀಕರಣಗೊಳಿಸುವ ಮತ್ತು ಸರ್ಕಾರಿ ಶಾಲೆಗಳ ಹಿತರಕ್ಷಣೆಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಈ ಮಹತ್ವದ ಅಭಿಯಾನಕ್ಕೆ ಮಾಧ್ಯಮಗಳ ಸಹಕಾರ ಮತ್ತು ಸಮರ್ಪಕ ಸಂವಹನದ ಅಗತ್ಯವಿದ್ದು, ಸುದೇಶ್ ಕುಮಾರ್ ಅವರ ಸುದೀರ್ಘ ಪತ್ರಿಕಾ ಅನುಭವವು ಈ ನಿಟ್ಟಿನಲ್ಲಿ ಆನೆಬಲ ತಂದಿದೆ. ​ಆಯ್ಕೆಯ ಪ್ರಮುಖ ಅಂಶಗಳು: ಅನುಭವ: ಪತ್ರಿಕೋದ್ಯಮದಲ್ಲಿ ದಶಕಗಳ ಕಾಲ ಸಕ್ರಿಯರಾಗಿರುವ ಸುದೇಶ್ ಕುಮಾರ್ ಅವರು ಸಮಾಜಮುಖಿ ಕಳಕಳಿಯ ಬರಹಗಳ ಮೂಲಕ ಗುರುತಿಸಿಕೊಂಡಿದ್ದಾರೆ. ​ಜವಾಬ್ದಾರಿ: ಇನ್ನು ಮುಂದೆ ಅಭಿಯಾನದ ಅಧಿಕೃತ ಮಾಹಿತಿ, ಉದ್ದೇಶಗಳು ಮತ್ತು ಮುಂಬರುವ ಯೋಜನೆಗಳನ್ನು ಮಾಧ್ಯಮಗಳಿಗೆ ತಲುಪಿಸುವ ಸಂಪರ್ಕ ಸೇತುವೆಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ​ಸಂಘಟನೆ: ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವರು ಹೊಂದಿರುವ ಸಂಘಟನಾ ಚತುರತೆಯು ಅಭಿಯಾನವನ್ನು ರಾಜ್ಯದ ಮೂಲೆ ಮೂಲೆಗೂ ತಲುಪಿಸಲು ಸಹಕಾರಿಯಾಗಲಿದೆ. ಕನ್ನಡ ಶಾಲೆಗಳು ನಮ್ಮ ಸಂಸ್ಕೃತಿಯ ತಾಯಿಬೇರುಗಳು. ಈ ಅಭಿಯಾನದ ಮೂಲಕ ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ, ಎಂದು ಸುದೇಶ್ ಕುಮಾರ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಅಭಿಯಾನದ ರಾಜ್ಯ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಸುದೇಶ್ ಕುಮಾರ್ ಅವರ ಈ ನೇಮಕಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಕಾರ್ಯದರ್ಶಿ, ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ, ಕರ್ನಾಟಕ.

ಧನ್ಯಕುಮಾರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Article Image

ಧನ್ಯಕುಮಾರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ

ತಾಲೂಕಿನ ಹಿರಿಯ ಜೈನ ಸಮಾಜದ ಮುಖಂಡರು ಹಾಗೂ ಪಟ್ಟಣದ ಪಾರ್ಶ್ವನಾಥ ಸಹಕಾರ ಸಂಘ ನಿಯಮಿತದ ಅಧ್ಯಕ್ಷರು ಆದ ಇ.ವಿ ಧನ್ಯಕುಮಾ‌ರ್ ಇವರಿಗೆ ಕರ್ನಾಟಕ ಸರ್ಕಾರದ ವತಿಯಿಂದ "ಸಹಕಾರ ರತ್ನ ಪ್ರಶಸ್ತಿ" ಲಭಿಸಿದೆ. ಇವರು ಸಹಕಾರ ಕ್ಷೇತ್ರದಲ್ಲಿ ಐದು ದಶಕಗಳ ಕಾಲ ಹಗಲಿರಳು ಶ್ರಮಿಸಿ ಅನೇಕ ಸಹಕಾರ. ಸಂಘಗಳಲ್ಲಿ ಸೇವೆ ಸಲ್ಲಿಸಿ ಹಾಗೂ ಪಟ್ಟಣದ ಶ್ರೀ ಪಾರ್ಶ್ವನಾಥ ಬ್ಯಾಂಕಿನ ಅಧ್ಯಕ್ಷರು ಮತ್ತು ಸಂಸ್ಥಾಪಕರು ಆಗಿ ಬ್ಯಾಂಕಿನ ಸ್ವಂತ ಕಟ್ಟಡದ ನಿರ್ಮಾತೃ ಆಗಿದ್ದಾರೆ ಹಾಗೂ ಖಾಸಗಿ ಬಸ್ಸಿನ ಮಾಲೀಕರು ಆದಂತಹ ಇವರು ವಿಜಯಗಂಗೋತ್ರಿ ಶಾಲೆಯ ಕಾರ್ಯದರ್ಶಿಯಾಗಿ ಹಾಗೂ ಜೈನ ಸಮಾಜದ ಗೌರವಾಧ್ಯಕ್ಷರಾಗಿ ಹಾಗೂ ಇನ್ನಿತರ ಸಂಘ ಸಂಸ್ಥೆಗಳಿಗೆ ಶ್ರಮಿಸಿದವರಾಗಿದ್ದ ಇವರ ಹಿರಿಯತನಕ್ಕೆ ಗೌರವ ಲಭಿಸಿದ್ದಾಗಿದೆ. ಜೈನ ಸಮಾಜದ ಮುಖಂಡರುಗಳಾದ ಧನಪಾಲ್‌, ಬ್ರಹ್ಮಪಾಲ್.ಡಿ, ಆದಿರಾಜಯ್ಯ, ಅನುಷ್‌ ಜೈನ್, ಶ್ರೀ ಪಾರ್ಶ್ವನಾಥ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಟಿ.ಜಿ.ಗುರುಸ್ವಾಮಿ, ಸಿಬ್ಬಂಧಿವರ್ಗ, ಸರ್ವ ಸದಸ್ಯರು ಸೇರಿದಂತೆ ಮತ್ತಿತರರು ಅಭಿನಂದಿಸಿದ್ದಾರೆ.

ಕಾರ್ಕಳದ ಶಗುನ್ ಎಸ್ ವರ್ಮಾ ಭಾರತ ತಂಡದ ವಾಲಿಬಾಲ್ ಮಹಿಳಾ ತಂಡಕ್ಕೆ ಆಯ್ಕೆ

Article Image

ಕಾರ್ಕಳದ ಶಗುನ್ ಎಸ್ ವರ್ಮಾ ಭಾರತ ತಂಡದ ವಾಲಿಬಾಲ್ ಮಹಿಳಾ ತಂಡಕ್ಕೆ ಆಯ್ಕೆ

ಕಾರ್ಕಳದ ಶಗುನ್ ಎಸ್ ವರ್ಮಾ ಭಾರತ ತಂಡದ 15 ವರ್ಷ ಕೆಳಗಿನ ವಾಲಿಬಾಲ್ ಮಹಿಳಾ ತಂಡಕ್ಕೆ ಆಯ್ಕೆಯಾಗಿದ್ದಾರೆ. World School Games Federation ವತಿಯಿಂದ ಚೀನಾದಲ್ಲಿ ನಡೆಯಲಿರುವ ವಾಲಿಬಾಲ್ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸುವ ಕರ್ನಾಟಕದ ಏಕೈಕ ಆಟಗಾರ್ತಿ ಎಂಬ ಹೆಮ್ಮೆ ಇವರದ್ದು. ಇವರು ಕಾರ್ಕಳದ MMC Decorators ನ ಮಾಲಿಕರಾದ ಸಂದೇಶ್ ವರ್ಮ ಮತ್ತು ಶೃತಿರಾಜ್ ಇವರ ಪುತ್ರಿಯಾಗಿದ್ದು, ಪ್ರಸ್ತುತ ಕ್ರೈಸ್ಟ್ ಕಿಂಗ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಸಚಿನ್ ಕುಮಾರ್ ಜೈನ್ ನಿರ್ದೇಶಕರಾಗಿ ಆಯ್ಕೆ

Article Image

ಸಚಿನ್ ಕುಮಾರ್ ಜೈನ್ ನಿರ್ದೇಶಕರಾಗಿ ಆಯ್ಕೆ

ಸವಣೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಇದರ ಪುತ್ತೂರು ಕ್ಷೇತ್ರದಿಂದ ನಿರ್ದೇಶಕರಾಗಿ ಪುಣ್ಚಪ್ಪಾಡಿ ಗ್ರಾಮದ ಸಚಿನ್ ಕುಮಾರ್ ಜೈನ್ ಅವರು 2ನೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಚಿನ್ ಕುಮಾರ್ ಜೈನ್ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದು, ಪ್ರಸ್ತುತ ಪುಣ್ಚಪ್ಪಾಡಿ ಗೌರಿಗಣೇಶ ಸೇವಾಟ್ರಸ್ಟ್ ಅಧ್ಯಕ್ಷರಾಗಿ, ಮಂಗಳೂರಿನ ಧವಳ ಕೋ-ಅಪರೇಟಿವ್ ಸೊಸೈಟಿ ನಿಯಮಿತ ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಚಿನ್ ಕುಮಾರ್ ಅವರು ಪುಣ್ಚಪಾಡಿ ಯುವರಾಜ ಕಡಂಬ ಮತ್ತು ಮಲ್ಲಿಕಾ ಯುವರಾಜ್ ಅವರ ಪುತ್ರ.

ಡಾ. ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

Article Image

ಡಾ. ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

ಮೈಸೂರಿನ ಆಚಾರ್ಯ ಗುರುಕುಲದ ಕುಲ ಸಚಿವರು ಹಾಗೂ ಖ್ಯಾತ ವಾಗ್ಮಿಗಳು ಶಿಕ್ಷಣ ತಜ್ಞರು, ವಿದ್ಯಾರ್ಥಿ ಪೋಷಕ ಆಪ್ತ ಸಮಾಲೋಚಕರಾದ ವಿದ್ಯಾ ವಾಚಸ್ಪತಿ ಡಾ ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಮಹಾತ್ಮ ಗಾಂಧಿ ನ್ಯಾಷನಲ್ ಸರ್ವೀಸ್ ಪುರಸ್ಕಾರ 2025 ಲಭಿಸಿದೆ.

ಶಾಂತಿನಾಥ ಪಾಯಪ್ಪ ಕುರನಿರವರು ಪಿ.ಎಸ್.‌ಐ ಆಗಿ ಆಯ್ಕೆ

Article Image

ಶಾಂತಿನಾಥ ಪಾಯಪ್ಪ ಕುರನಿರವರು ಪಿ.ಎಸ್.‌ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ನಿವಾಸಿಯಾಗಿರುವ ಶಾಂತಿನಾಥ ಪಾಯಪ್ಪ ಕುರನಿರವರು ಪೋಲೀಸ್‌ ಸಬ್ ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆ‌ಯ್ಕೆಯಾಗಿರುತ್ತಾರೆ. ಇವರು 132‌ ರಾಂಕ್ ಪಡೆದಿರುತ್ತಾರೆ. ಇವರು ಪಾಯಪ್ಪ ಕುರನಿ ಮತ್ತು ಸುಜಾತ ಕುರನಿ ದಂಪತಿಗಳ ಪುತ್ರ.

ಶಿಕ್ಷಕ ಲಕ್ಷ್ಮಣ್ ಮಲ್ಲಸಮುದ್ರಗೆ : ಶಿಕ್ಷಣ ಸೇವಾ ರತ್ನ ಪ್ರಶಸ್ತಿ

Article Image

ಶಿಕ್ಷಕ ಲಕ್ಷ್ಮಣ್ ಮಲ್ಲಸಮುದ್ರಗೆ : ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ಇವರು ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷನ್ ಇವರ ಜನ್ಮದಿನಾಚರಣೆ ಮತ್ತು ಶಿಕ್ಷಕ ದಿನಾಚರಣೆಯ ಅಂಗವಾಗಿ ಕೊಡಮಾಡುವ ರಾಜ್ಯಮಟ್ಟದ "ಶಿಕ್ಷಣ ಸೇವಾ ರತ್ನ" ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕ ಲಕ್ಷ್ಮಣ್ ಮಲ್ಲಸಮುದ್ರಇವರು ಭಾಜನರಾಗಿದ್ದಾರೆ. ಲಕ್ಷ್ಮಣ್ ರವರು ಕಳೆದ 35 ವರ್ಷಗಳಿಂದ ಶಿಕ್ಷಕರಾಗಿ ಅತ್ಯತ್ತಮ ಸೇವೆ ಸಲ್ಲಿಸುತ್ತಿದ್ದು ಸಹಸ್ರಾರು ಮಕ್ಕಳ ಬಾಳಲ್ಲಿ ಬೆಳಕಾಗಿದ್ದಾರೆ. ಇವರು ಮಕ್ಕಳಿಗೆ ಕೇವಲ ಅಕ್ಷರಗಳನ್ನು ಭೋದನೆ ಮಾಡಿಲ್ಲ ಅವರು ವಿದ್ಯಾರ್ಥಿಗಳಿಗೆ ಬದುಕುವ ರೀತಿಯನ್ನು ಕಲಿಸಿ ಅವರ ಭವಿಷ್ಯವನ್ನು ರೂಪಿಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರು ಕಾಡ ಕಲ್ಲನ್ನು ಸುಂದರ ಮೂರ್ತಿಯನ್ನಾಗಿ ಮಾಡುವ ಶಿಲ್ಪಿಗಳಿದ್ದಹಾಗೆ ಇದು ಶಿಕ್ಷಕರಿಂದ ಮಾತ್ರ ಸಾಧ್ಯ ಈ ಕಾರಣಕ್ಕೆ ಶಿಕ್ಷಕರ ಬಗ್ಗೆ ಅಪಾರವಾದ ಗೌರವ ಅಭಿಮಾನ ಇರುವದು ಸಹಜ. ಪ್ರಸ್ತುತ ಗದಗ ಜಿಲ್ಲೆ ಶಿರಹಟ್ಟಿ ತಾಲೂಕ ಲಕ್ಷ್ಮೇಶ್ವರ ದಲ್ಲಿ ಸೇವೆ ಸಲ್ಲಿಸುತ್ತಿದ್ದು, ಇಲ್ಲಿನ ಶಾಲೆಯೊಂದರಲ್ಲಿ ಸ್ಥಳೀಯರ ಸಹಕಾರ ಸಹಾಯದಿಂದ ಸುಂದರವಾದ ಕೊಠಡಿಗಳನ್ನು ನಿರ್ಮಿಸಿ ಅದರ ಆವರಣದಲ್ಲಿ ಕೈದೋಟ ಹೂವಿನ ಗಿಡಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಿದ್ದಾರೆ. ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು, ರಾಷ್ಟ್ರಪ್ರೇಮ, ಸಹಬಾಳ್ವೆ ಸಮಾನತೆಯ ತಿಳುವಳಿಕೆ ನೀಡಿ ಮಕ್ಕಳ ಮನದಲ್ಲಿ ಹೆಮ್ಮೆಯ ಶಿಕ್ಷಕರಾಗಿ ರುಪುಗೊಂಡಿದ್ದಾರೆ. ಇವರ ಅತ್ಯುತ್ತಮ ಸೇವೆಯನ್ನು ಗಮನಿಸಿದ ಕರ್ನಾಟಕ ಪ್ರೆಸ್ ಕ್ಲಬ್ ಪ್ರಸಕ್ತ ಸಾಲಿನಲ್ಲಿ "ಶಿಕ್ಷಣ ಸೇವಾ ರತ್ನ ಪ್ರಶಸ್ತಿ" ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ದಿನಾಂಕ 24-9-2025 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 3-30 ಕ್ಕೆ ಜರುಗಲಿದ್ದು ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರು, ಮಂತ್ರಿಗಳು ಶಾಸಕರು, ಸಂಸದರು ಗಣ್ಯರು ಭಾಗವಹಿಸಲಿದ್ದಾರೆ. ತನ್ನಿಮಿತ್ಯ ಇವರ ಸಂಕ್ಷಿಪ್ತ ಪರಿಚಯ : ದಿನಾಂಕ: 22-05-1966 ರಂದು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ಹರ್ಲಾಪುರ ಗ್ರಾಮದಲ್ಲಿ ರಾಮಣ್ಣ ಮತ್ತು ಸಾವಿತ್ರಮ್ಮ ದಂಪತಿಗಳ ನಾಲ್ಕು ಮಕ್ಕಳಲ್ಲಿ ಕೊನೆಯವರಾಗಿ ಜನಿಸಿದರು. (ಜೈನ ಸಮಾಜದ ಗಣ್ಯರೂ, ಹಿರಿಯ ಬರಹಗಾರರು ಸಾಮಾಜಿಕ ಕಾರ್ಯಕರ್ತರು ಆದ ಶ್ರೀ ಶಾಂತರಾಜ ಮಲ್ಲಸಮುದ್ರ ಇವರು ಇವರ ಹಿರಿಯ ಸಹೋದರ). ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ, ಮಾಧ್ಯಮಿಕ ಶಿಕ್ಷಣ, ಕಾಲೇಜ್ ಶಿಕ್ಷಣ ಹಾಗೂ ಶಿಕ್ಷಕ ತರಬೇತಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ಪಟ್ಟಣದಲ್ಲಿ ಮುಗಿಸಿದರು. ಹಾಸನ ಜಿಲ್ಲೆ ಶ್ರವಣಬೆಳಗೊಳದ ಶ್ರೀಮಠವು ನಡೆಸುವ ಶ್ರೀ ಅಂಬಿಕಾ ಶಾಲೆಯಲ್ಲಿ ಶಿಕ್ಷಕ ವೃತ್ತಿ ಪ್ರಾರಂಭಿಸಿ ಇಲ್ಲಿ 10-06-1990 ರಿಂದ 04-01-1999 ರ ವರೆಗೆ ಇಲ್ಲಿ ಸೇವೆ ಸಲ್ಲಿಸಿದ್ದಾರೆ. ನಂತರ 1999ರಲ್ಲಿ ಹಾಸನ ಜಿಲ್ಲೆಯ ಶಿಕ್ಷಣ ಇಲಾಖೆಯಲ್ಲಿ ಸರಕಾರಿ ಶಾಲಾ ಶಿಕ್ಷಕರಾಗಿ ನಿಯುಕ್ತಿಗೊಂಡು ದಿನಾಂಕ 05.01.1999 ರಿಂದ 07-07-2000 ರವರೆಗೆ ಸ .ಹಿ. ಪ್ರಾಥಮಿಕ ಶಾಲೆ ಬಿ ಹೊನ್ನೆನಹಳ್ಳಿ ಹೋಂ.ಬಾಗೂರು. ತಾಲೂಕು ಚನ್ನರಾಯಪಟ್ಟಣ ಇಲ್ಲಿ ಸೇವೆ ನಂತರ 08.07.2000 ರಿಂದ 07.03.2003 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಿ ಹೊನ್ನೇನಹಳ್ಳಿ ಬೆಕ್ಕ ಹೋಬಳಿ ಕ್ಲಸ್ಟರ್ ಶ್ರವಣಬೆಳಗೊಳ ಜಿಲ್ಲಾ ಹಾಸನ ಇಲ್ಲಿಗೆ ವರ್ಗಾವಣೆ ಗೊಂಡರು. ಮುಂದೆ ಹಾಸನ ಜಿಲ್ಲೆಯಿಂದ ಗದಗ ಜಿಲ್ಲೆಗೆ ವರ್ಗಾವಣೆಗೊಂದು ದಿ. 08.03.2003 ರಿಂದ 18.06.2008 ರವರೆಗೆ ಸರ್ಕಾರಿ ಹಿರಿಯ ಗಂಡು ಮಕ್ಕಳ ಶಾಲೆ ಸೂರಣಗಿ ತಾಲೂಕು. ಶಿರಹಟ್ಟಿ ಜಿಲ್ಲಾ ಗದಗ ಇಲ್ಲಿ ನಂತರ 18.06.2008ರಿಂದ 03.09.2013ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆದರಹಳ್ಳಿ ತಾ. ಲಕ್ಷ್ಮೇಶ್ವರ ಜಿಲ್ಲೆ ಗದಗ ನಂತರ 04.09.2013ರಿಂದ ಇಲ್ಲಿಯವರೆಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಡಾಕ್ಟರ್ ಬಿ ಆರ್ ಅಂಬೇಡ್ಕರ್ ನಗರ ಲಕ್ಷ್ಮೇಶ್ವರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು ಸೇವೆ 35 ವರ್ಷಗಳ ಸುದೀರ್ಘ ಸೇವೆಯಲ್ಲಿ ಜೀವನದುದ್ದಕ್ಕೂ ಆದರ್ಶ ಮತ್ತು ಶಿಸ್ತು ಮೈಗೂಡಿಸಿಕೊಂಡ ಇವರು ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿ ಆದರ್ಶಪ್ರಾಯರಾಗಿದ್ದಾರೆ. ಇತರ ಸಾಮಾಜಿಕ ಚಟುವಟಿಕೆಗಳು: ಪ್ರತಿ ವರ್ಷ ದಸರಾ ಸಂಧರ್ಭದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನ ಲಕ್ಷ್ಮೇಶ್ವರದಲ್ಲಿ ಐದು ವರ್ಷದಿಂದ ಪುರಾಣ ಪ್ರವಚನ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಸುಮಾರು ಹತ್ತು ವರ್ಷದಿಂದ ಬಿ.ಎಲ್.ಓ. (ಬೂತ್ ಲೆವೆಲ್ ಆಫೀಸರ್) ಅಂತ ಕಂದಾಯ ಇಲಾಖೆಯ ಜೊತೆಗೆ ಅಂದರೆ ಹೊಸದಾಗಿ ಮತದಾರರನ್ನು ಮತ ಪಟ್ಟಿಗೆ ಸೇರಿಸುವುದು, ತಿದ್ದುಪಡೆ ಮಾಡುವುದು, ಬೇರೆ ಕಡೆ ವರ್ಗಾವಣೆ ಆದರೆ ವರ್ಗಾವಣೆ ಮಾಡುವುದು ಇತ್ಯಾದಿ ಶಿಕ್ಷಣ ಇಲಾಖೆಯ ಕೆಲಸದ ಜೊತೆಗೆ ಕಂದಾಯ ಇಲಾಖೆಯ ಕೆಲಸವನ್ನು ಕೂಡ ಮಾಡುವ ಮೂಲಕ ಎಲ್ಲಾ ಸರಕಾರಿ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ. ಏತನ್ಮದ್ಯ ದಿನಾಂಕ 15.05.1995 ರಂದು ಸ್ವಗ್ರಾಮದವರೇ ಆದ ಶಿಕ್ಷಕಿ ಸಾವಿತ್ರಿ ಇವರೊಂದಿಗೆ ವಿವಾಹವಾಗಿದ್ದು ಈ ಶಿಕ್ಷಕ ದಂಪತಿಗಳು ಒಂದೇ ಜಿಲ್ಲೆ ಯಲ್ಲಿ ಕಳೆದ ಕೆಲವು ವರ್ಷಗಳಿಂದ ಸೇವೆಯಲ್ಲಿದ್ದಾರೆ. ಇವರ ಸಾಧನೆಯ ಹಿಂದೆ ಇವರ ಪತ್ನಿಯ ಸಹಕಾರ ಪ್ರೋತ್ಸಾಹ ಬಹುಮಟ್ಟಿಗೆ ಕಾರಣವಾಗಿದೆ ಎನ್ನಬಹುದು. ಇವರಿಗೆ ಇಬ್ಬರು ಪುತ್ರರು ಇದ್ದು ಓರ್ವ ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಇನ್ನೊರ್ವ ವೈದ್ಯಕೀಯ ಶಿಕ್ಷಣ ಪಡೆಯಲು ಪ್ರವೇಶ ಪರೀಕ್ಷೆ ಬರುತ್ತಿದ್ದಾನೆ. ಇವರ ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿ ಇನ್ನೂ ಹಲವಾರು ಪ್ರಶಸ್ತಿ ಸಮ್ಮಾನಗಳು ಸಿಗಲಿ. ಶಾಂತರಾಜ ಮಲ್ಲಸಮುದ್ರ ಲೇಖಕರು

ಡಾ. ಅಜಿತಪ್ರಸಾದ ಇವರು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ

Article Image

ಡಾ. ಅಜಿತಪ್ರಸಾದ ಇವರು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ

ಕರ್ನಾಟಕ ವಿದ್ಯಾವರ್ಧಕ ಸಂಘವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರು ಮಹಾಸಾಧಕರಿಗೆ ಗೌರವ ಉಪಾಧ್ಯಕ್ಷರನ್ನಾಗಿ ನೇಮಿಸಿ ತನ್ನ ಘನತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಇವರಲ್ಲಿ ಪ್ರಮುಖರಾದ ಡಾ. ಅಜಿತಪ್ರಸಾದ ಇವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆ ಬೆಟ್ಟದಷ್ಟು. ಜೆ.ಎಸ್.ಎಸ್. ಸಂಸ್ಥೆಯ ಮೂಲಕ ಶ್ರೇಷ್ಠ ಗುಣಮಟ್ಟದ ಶಿಕ್ಷಣ ಕೊಡುವದಕ್ಕೆ ಅಪಾರವಾಗಿ ಶ್ರಮಿಸಿದ್ದಾರೆ. ಈಗಲೂ ಅದೇ ದಾರಿಯಲ್ಲಿ ಮುನ್ನಡೆದಿದ್ದಾರೆ. ನಮ್ಮ ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟಿನ ಗೌರವಾಧ್ಯಕ್ಷರಾದ ಇವರು ಸಾಹಿತ್ಯದ ಚಟುವಟಿಕೆಗಳನ್ನು ಅಭಿವೃದ್ಧಿ ಮಾಡುವಲ್ಲಿ ಸಲಹೆ ಮಾರ್ಗದರ್ಶನ ನೀಡುತ್ತ ಪ್ರೋತ್ಸಾಹಿಸುತ್ತಿದ್ದಾರೆ. ಪ್ರಸ್ತುತ 130 ವರ್ಷಗಳ ಇತಿಹಾಸ ಹೊಂದಿದ ಕರ್ನಾಟಕದ ಹೆಮ್ಮೆಯ ಮತ್ತು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ ಮಾಡಿ ಗೌರವಿಸಿದ್ದು ಸಮಾಜಕ್ಕೆ ಅವರ ಶಿಷ್ಯ ಬಳಗಕ್ಕೆ, ಅಭಿಮಾನಿಗಳಿಗೆ ಬಾರೀ ಸಂತೋಷವನ್ನುಂಟುಮಾಡಿದೆ. ಎಸ್. ಆರ್. ಮಲ್ಲಸಮುದ್ರ

ಮಂಜುನಾಥ ಕಡಹಟ್ಟಿರವರು ಪಿ.ಎಸ್.ಐ ಆಗಿ ಆಯ್ಕೆ

Article Image

ಮಂಜುನಾಥ ಕಡಹಟ್ಟಿರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ರಾಯಬಾಗ್‌ ತಾಲೂಕಿನ ಯಲ್ಪರಟ್ಟಿ ನಿವಾಸಿಯಾಗಿರುವ ಮಂಜುನಾಥ ಕಡಹಟ್ಟಿರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ಸುಲೋಚನ ಮತ್ತು ರಾಮಪ್ಪ ದಂಪತಿಗಳ ಪುತ್ರ.

ರೋಹಿತ್‌ ರಾಜಗೌಡ ಪಾಟೀಲರವರು ಪಿ.ಎಸ್.ಐ ಆಗಿ ಆಯ್ಕೆ

Article Image

ರೋಹಿತ್‌ ರಾಜಗೌಡ ಪಾಟೀಲರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ರಾಯಬಾಗ ತಾಲೂಕಿನ ಮೊರಬ ಗ್ರಾಮದ ನಿವಾಸಿಯಾಗಿರುವ ರೋಹಿತ್‌ ರಾಜಗೌಡ ಪಾಟೀಲ್‌ರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ರಾಜಗೌಡ ಪಾಟೀಲ ಮತ್ತು ಭಾರತಿ ರಾಜಗೌಡ ಪಾಟೀಲ ದಂಪತಿಗಳ ಪುತ್ರ.

ಅಮಿತ್‌ ಭಗವಂತ್‌ ಹರವಿರವರು ಪಿ.ಎಸ್.ಐ ಆಗಿ ಆಯ್ಕೆ

Article Image

ಅಮಿತ್‌ ಭಗವಂತ್‌ ಹರವಿರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ರಾಯಬಾಗ್ ತಾಲೂಕಿನ ಹಾರೊಗೇರಿ ನಿವಾಸಿಯಾಗಿರುವ ಅಮಿತ್‌ ಭಗವಂತ್‌ ಹರವಿರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ಭಗವಂತ್‌ ಹರವಿ ಮತ್ತು ಸುನಂದ ಹರವಿ ದಂಪತಿಗಳ ಪುತ್ರ.

ಅಭಿಷೇಕ್‌ ಅಣ್ಣಾಸಾಹೇಬ್‌ ಸುಲ್ತಾಣ್ಣವರ್‌ರವರು ಪಿ.ಎಸ್.ಐ ಆಗಿ ಆಯ್ಕೆ

Article Image

ಅಭಿಷೇಕ್‌ ಅಣ್ಣಾಸಾಹೇಬ್‌ ಸುಲ್ತಾಣ್ಣವರ್‌ರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ಚಿಕ್ಕೋಡಿ ತಾಲೂಕಿನ ಪಟ್ಟಣಕುಡಿ ನಿವಾಸಿಯಾಗಿರುವ ಅಭಿಷೇಕ್‌ ಅಣ್ಣಾಸಾಹೇಬ್‌ ಸುಲ್ತಾಣ್ಣವರ್‌ರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ಅಣ್ಣಾಸಾಹೇಬ್‌ ಮತ್ತು ಶೀಲಾ ದಂಪತಿಗಳ ಪುತ್ರ.

ಶಟಲ್ ಬ್ಯಾಡ್ಮಿಂಟನ್: ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ಮನಸ್ವಿ ಎಂ.ವಿ. ರಾಜ್ಯಮಟ್ಟಕ್ಕೆ ಆಯ್ಕೆ

Article Image

ಶಟಲ್ ಬ್ಯಾಡ್ಮಿಂಟನ್: ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ಮನಸ್ವಿ ಎಂ.ವಿ. ರಾಜ್ಯಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಮಂಗಳೂರಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪದವಿ ಪೂರ್ವ ಕಾಲೇಜಿನ ಮನಸ್ವಿ ಎಂ.ವಿ. ವಿನ್ನರ್ ಆಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮೈಸೂರಿನ ವಿಜಯನಗರದ ವೀರೇಂದ್ರ ಕುಮಾರ್‌ ಎಂ. ಎನ್‌. ಮತ್ತು ಅನುಪಮ ಎಸ್.‌ ಇವರ ಪುತ್ರಿ.

ಡಾ. ಅಪ್ಪಣ್ಣ ಹಂಜೆ ಅವರಿಗೆ ಈಶ್ವರಜ್ಞಾನ ಗುರುರತ್ನ ಪ್ರಶಸ್ತಿ

Article Image

ಡಾ. ಅಪ್ಪಣ್ಣ ಹಂಜೆ ಅವರಿಗೆ ಈಶ್ವರಜ್ಞಾನ ಗುರುರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ.) ಗದಗ ಗ್ರಾಮೀಣ ವಿಭಾಗ ಮತ್ತು ಹುಲಕೋಟಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ‘ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಹಾಗೂ ಎನ್.ಎಸ್.ಎಸ್. ಘಟಕದ ಸಂಯೋಜಕ ಡಾ. ಅಪ್ಪಣ್ಣ ಹಂಜೆ ಅವರನ್ನು ‘ಈಶ್ವರಜ್ಞಾನ ಗುರುರತ್ನ’ ಪ್ರಶಸ್ತಿಯಿಂದ ಗೌರವಿಸಿವೆ. ಇವರು 20 ವರ್ಷಗಳ ಬೋಧನಾ ಅನುಭವ ಹೊಂದಿದ್ದು, ಪ್ರಾಚೀನ ಸಮಾಜ, ಧರ್ಮ, ಇತಿಹಾಸ, ಸಂಸ್ಕೃತಿ, ವಾಸ್ತುಕಲೆ, ಶಿಲ್ಪಕಲೆ, ಶಾಸನಗಳು, ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ಸಂಶೋಧನ ಅಧ್ಯಯನ ಕೈಗೊಂಡು 12ಕ್ಕೂ ಹೆಚ್ಚು ಕೃತಿಗಳು, 150ಕ್ಕೂ ಹೆಚ್ಚು ಸಂಶೋಧನ ಲೇಖನಗಳನ್ನು ಪ್ರಕಟಿಸಿದ್ದಾರೆ. ಬೀದರ ಜಿಲ್ಲೆಯ ಜೈನ ಶಾಸನಗಳು, ಲಕ್ಕುಂಡಿಯ ಬಸದಿಗಳು, ಅಣ್ಣಿಗೇರಿಯ ಜೈನ ದೇಸಗತಿ ಮನೆತನ, ಬೆಳಗಾವಿಯ ಕಮಲ ಬಸದಿ, ಕರ್ನಾಟಕದ ಬಸದಿಗಳು, ಶಾಸನ ಸಾಹಿತ್ಯದಲ್ಲಿ ಜೀವನ ಮೌಲ್ಯ ಕೃತಿಗಳು ವಸ್ತುನಿಷ್ಠ ಸಂಶೋಧನ ಅಧ್ಯಯನ ಗೌರವಕ್ಕೆ ಪಾತ್ರವಾಗಿವೆ. ಡಾ. ಅಪ್ಪಣ್ಣ ಅವರು ಗದಗ ಜಿಲ್ಲೆಯ ದೇಸಗತಿ ಮನೆತನಗಳು, ದಾಖಲೆ ಪತ್ರಗಳ ಶೋಧನೆ ಮತ್ತು ಸಂರಕ್ಷಣೆ, ಕರ್ನಾಟಕ ಏಕೀಕರಣ ಚಳುವಳಿ ಹಾಗೂ ಐತಿಹಾಸಿಕ ದಾಖಲೆಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನ ಸೇರಿದಂತೆ ಹಲವು ವಿಚಾರ ಸಂಕಿರಣ ಮತ್ತು ಕಾರ್ಯಾಗಾರಗಳನ್ನು ಏರ್ಪಡಿಸಿದ್ದು, ಕೆಲವು ಸಂಸ್ಮರಣ ಕೃತಿಗಳು, ನಿಯತಕಾಲಿಕೆಗಳು, ಪತ್ರಿಕೆಗಳ ಸಂಪಾದಕ ಮಂಡಳಿ ಸದಸ್ಯರಾಗಿ, ಕರ್ನಾಟಕ ಪುರಾತತ್ವ ಮತ್ತು ಸಾಹಿತ್ಯ ಪರಿಷತ್ತು, ಗದಗ ಜಿಲ್ಲಾ ದಿಗಂಬರ ಜೈನ ಸಂಘ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಜೈನ ಸಾಹಿತ್ಯ ಸಂಸ್ಕೃತಿ ಅಧ್ಯಯನ ಕೇಂದ್ರಗಳ ಸಲಹಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಮಾನ್ಯತಾ ಕೇಂದ್ರ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಹಾಮಾನಾ ಸಂಶೋಧನ ಕೇಂದ್ರದಲ್ಲಿ ಪಿಎಚ್.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದಾರೆ. ಇವರು ಸಂಶೋಧನೆ, ಅಧ್ಯಯನ, ಪ್ರಕಟಣೆ ಕ್ಷೇತ್ರಗಳಲ್ಲಿ ಕೈಗೊಳ್ಳುತ್ತಿರುವ ಸಾಧನೆ, ಕೊಡುಗೆಗಳಿಗೆ ನಾಡಿನ ಹಲವು ಸಂಘ-ಸಂಸ್ಥೆಗಳಿಂದ ಶ್ರೀ ಹುಯಿಲಗೋಳ ನಾರಾಯಣರಾವ ಸ್ಮಾರಕ ಪ್ರಶಸ್ತಿ, ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ ಪ್ರಶಸ್ತಿ, ಆಚಾರ್ಯ 108 ಶ್ರೀ ಬಾಹುಬಲಿ ಕನ್ನಡ ಸಾಹಿತ್ಯ ಪ್ರಶಸ್ತಿ, ಜಯಲಕ್ಷ್ಮಮ್ಮ ಬಿ.ಎಸ್. ಸಣ್ಣಯ್ಯ ದತ್ತಿ ಪ್ರಶಸ್ತಿ, ಆದರ್ಶ ಜೈನ ಯುವ ಪ್ರಶಸ್ತಿ, ಜ್ಞಾನಶ್ರೀ ಪ್ರಶಸ್ತಿ, ಬಾಹುಬಲಿ ಸಿದ್ಧಶ್ರೀ ಪ್ರಶಸ್ತಿ, ಜ್ಞಾನೇಶ್ವರ ಆದರ್ಶ ಶಿಕ್ಷಕ ಪ್ರಶಸ್ತಿ, ಬೆಳ್ಳಿ ಸಂಭ್ರಮ ಪ್ರಶಸ್ತಿ, ಸಾಹಿತ್ಯ ಸಿರಿ ಪ್ರಶಸ್ತಿಗಳ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರನ್ನು ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಕವಿ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನಕ್ಕೆ ರಾಷ್ಟ್ರೀಯ ಪುರಸ್ಕಾರ

Article Image

ಕವಿ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನಕ್ಕೆ ರಾಷ್ಟ್ರೀಯ ಪುರಸ್ಕಾರ

ಕವಿ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನಕ್ಕೆ 2025 ನೇ ಸಾಲಿನ ರಾಷ್ಟ್ರ ಮಟ್ಟದ “ಕಾವ್ಯ ಸಿರಿ” ಪ್ರಶಸ್ತಿಗೆ ಆಯ್ಕೆಯಾಗಿದೆ. ಹೈದರಬಾದಿನ ರಾಷ್ಟ್ರೀಯ ಕನ್ನಡ ಸಾಹಿತ್ಯ ಬಳಗ ಪ್ರತಿ ವರ್ಷ ಕನ್ನಡ ಕವನ ಸಂಕಲನಗಳಿಗೆ ರಾಷ್ಟ್ರ ಮಟ್ಟದ ಕಾವ್ಯ ಸಿರಿ ಪ್ರಶಸ್ತಿಯನ್ನು ನೀಡಲಾಗುತ್ತ ಬಂದಿದ್ದು ಈ ವರ್ಷ ಸಾಗರದ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ, ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪ್ರಸಾದ್ ಅವರು ತಿಳಿಸಿದ್ದಾರೆ. ಸಾಗರದ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಟಿ.ಸ್ವಾಮಿಯವರು ಕಳೆದ ಹಲವು ದಶಕಗಳ ಕಾಲ ಶೈಕ್ಷಣಿಕ ಸಾಹಿತ್ಯ, ಸಾಂಸ್ಕೃತಿಕ ಸಾಮಾಜಿಕ ಕ್ಷೇತ್ರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿರುವ ಇವರು, ಈಗಾಗಲೇ 30 ಕ್ಕೂ ಹೆಚ್ಚಿನ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿರುವ ಇವರು ಸ್ಥಳೀಯ ಜಿಲ್ಲೆ ರಾಜ್ಯ ಮಟ್ಟದ ಅನೇಕ ಪತ್ರಿಕೆಗಳಲ್ಲಿ ತಮ್ಮ ಬರಹಗಳನ್ನು ಪ್ರಕಟಿಸಿದ್ದಾರೆ. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ವಿವಿಧ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಬಂದಿರುವ ಇವರು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದಾರೆ. ಸಾಂಸ್ಕೃತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಹಿತ್ಯ, ಜಾನಪದ ಸಾಹಿತ್ಯದಲ್ಲಿ ಇವರು ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರವರ್ಧನ್ ಜೈನ್ ಪ್ರಥಮ

Article Image

ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರವರ್ಧನ್ ಜೈನ್ ಪ್ರಥಮ

ಇತ್ತೀಚೆಗೆ ಮುಂಬೈನಲ್ಲಿ ನಡೆದ ಹೈರೋಕ್ಸ್ ದೇಹ ಸಧೃಢತೆಯ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಜೈನ ಸಮುದಾಯದ ಏಕೈಕ ಸ್ಪರ್ಧಿ ಪ್ರವರ್ಧನ್ ಜೈನ್ ರವರು ವಿಜಯಿಯಾಗಿದ್ದಾರೆ. ಈ ಸ್ಪರ್ಧೆಯು ಎಂಟು ಕಿ.ಮೀ. ಓಟ ಹಾಗೂ ಎಂಟು ವಿವಿಧ ಬಗೆಯ ದೈಹಿಕ ಸ್ಪರ್ಧೆಗಳನ್ನು ಒಳಗೊಂಡಿದ್ದು ಅತ್ಯಂತ ಕಡಿಮೆ ಸಮಯದಲ್ಲಿ ಪೂರೈಸುವ ಸ್ಪರ್ಧಿ ವಿಜೇತರಾಗುತ್ತಾರೆ. ಇವರು ಕುತ್ಲೂರು ಪದ್ಮಾಂಬಾ ನಿಲಯ ಪಾರ್ಶ್ವನಾಥ ಜೈನ್ ಹಾಗೂ ವಾಗೀಶ್ವರಿ ದಂಪತಿಗಳ ಪುತ್ರರಾಗಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Article Image

ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ : ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ದಿ. ನೇಮಿರಾಜು ಜೈನ್ ಮತ್ತು ಪುಷ್ಪಾವತಿ ದಂಪತಿಗಳ ಎರಡನೇ ಪುತ್ರಿಯಾಗಿ ಜನಿಸಿದ ಆರತಿ ಕುಮಾರಿ ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಬಳಿಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಹಂಬಲದೊಂದಿಗೆ 1994ರಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗಾಧಿಬನೂರು ಎಂಬಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುತ್ತಾರೆ. 1997ರಲ್ಲಿ ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವಂತಹ ವಿದ್ಯಾಸಂಸ್ಥೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಟ್ಟಡೆಗೆ ಕರ್ತವ್ಯಕ್ಕೆ ಹಾಜರಾಗಿರುತಗತ್ತಾರೆ. ವಿದ್ಯಾರ್ಥಿ ಸಾಗರದಲ್ಲಿ ಪ್ರೀತಿ ಆದರ್ಶಗಳ ನೆಚ್ಚಿನ ಶಿಕ್ಷಕಿಯಾಗಿ, ಶಿಕ್ಷಕ ವೃಂದದವರ ಮಧ್ಯೆ ಆತ್ಮೀಯ ಸಹೋದ್ಯೋಗಿಯಾಗಿ, ಇಲಾಖಾಧಿಕಾರಿಗಳ ಮೆಚ್ಚುಗೆಯ ನೌಕರಳಾಗಿ, ಊರ ವಿದ್ಯಾಭಿಮಾನಿಗಳ ಪೋಷಕರ ಮನಗೆದ್ದು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುತ್ತಾರೆ. ಇವರು ಸರಕಾರಿ ನೌಕರರ ಸಂಘದಲ್ಲಿ ಪದಾಧಿಕಾರಿಯಾಗಿ 2 ಬಾರಿ ರಾಜ್ಯ ಪರಿಷತ್ ಸದಸ್ಯೆಯಾಗಿ ಪ್ರಸ್ತುತ ಕ್ರೀಡಾ ಮತ್ತು ಸಾಂಸ್ಕೃತಿಕ ಸದಸ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್-2 ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸತ್ತಿದ್ದಾರೆ. ಇವರು ವಲಯ ಮಟ್ಟದ ಪಂದ್ಯಾಟ ಹಾಗೂ ಕ್ರೀಡಾಕೂಟಕ್ಕೆ ನೋಡೆಲ್ ಆಗಿ, ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸದಸ್ಯರಾಗಿ ಹಾಗೂ ಉಪಾಧ್ಯಕ್ಷರಾಗಿ 2 ಬಾರಿ ಸೇವೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ 2 ಬಾರಿ ರಾಜ್ಯ ಪರಿಷತ್ ಸದಸ್ಯರಾಗಿ ಸೇವೆ, ಭಾರತ ಸೇವಾದಳ ಜಿಲ್ಲಾ ಸಮಿತಿಯಲ್ಲಿ ಸದಸ್ಯರಾಗಿ ಪ್ರಸ್ತುತ ಕಾರ್ಯದರ್ಶಿಯಾಗಿ, ಭಾರತ ಸೇವಾದಳದ ತಾಲೂಕು ಮಟ್ಟದ ರ‍್ಯಾಲಿ ಹಾಗೂ ಜಿಲ್ಲಾ ಮಟ್ಟದ ರ‍್ಯಾಲಿಯ ಸಂಯೋಜಕರಾಗಿಯೂ ಸೇವೆ ಸಲ್ಲಿಸಯತ್ತಿದ್ದಾರೆ. ಇವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸುದೀರ್ಘ 31 ವರ್ಷಗಳ ಸೇವೆ, ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗಿದೆ.

ದಕ್ಷಿಣ ಭಾರತ ಜೈನ ಸಭಾ ಸಾಂಗ್ಲಿ ಇದರ ಹುಬ್ಬಳ್ಳಿ ವಿಭಾಗೀಯ ನೂತನ ಪದಾಧಿಕಾರಿಗಳು

Article Image

ದಕ್ಷಿಣ ಭಾರತ ಜೈನ ಸಭಾ ಸಾಂಗ್ಲಿ ಇದರ ಹುಬ್ಬಳ್ಳಿ ವಿಭಾಗೀಯ ನೂತನ ಪದಾಧಿಕಾರಿಗಳು

ದಕ್ಷಿಣ ಭಾರತ ಜೈನ ಸಭೆ ಸಾಂಗ್ಲಿ ಇದು ಜೈನ ಸಮುದಾಯದ ಅತ್ಯಂತ ಪ್ರತಿಷ್ಠಿತ ಮತ್ತು ಬಹು ರಾಜ್ಯಗಳ ಜೈನರ ಪ್ರಾತಿನಿಧಿಕ ಸಂಸ್ಥೆ ಎಂದೇ ಕರೆಯಲ್ಪಡುವ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿವಿಧ ರೀತಿಯಲಿ ಸೇವೆಸಲ್ಲಿಸುತ್ತಿರುವ ಶತಮಾನದ ಇತಿಹಾಸ ಹೊಂದಿರುವ ಒಂದು ಬೃಹತ್ ಸಂಸ್ಥೆ. ಈ ಸಂಸ್ಥೆಯು ಹುಬ್ಬಳ್ಳಿ ವಿಭಾಗೀಯ ಆಡಳಿತ ಮಂಡಳಿಯನ್ನು ಹೊಂದಿದೆ. ಹುಬ್ಬಳ್ಳಿಯಲ್ಲಿ ದಿಗಂಬರ ಜೈನ ಬೋರ್ಡಿಂಗ ಶಾಖೆಯ ಮೂಲಕ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿಕೊಂಡದ್ದು ಇದಕ್ಕಾಗಿ ನೂತನವಾಗಿ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ತ್ರೈವಾರ್ಷಿಕ ಅಧಿವೇಶನದಲ್ಲಿ ನಡೆಯಿತು. ಈ ವಿಭಾಗೀಯ ಪದಾಧಿಕಾರಿಗಲ್ಲಿ ಟ್ರಸ್ಟಿಯಾಗಿ ಹುಬ್ಬಳ್ಳಿ ನಗರದ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಆರ್. ಟಿ. ಅಣ್ಣಿಗೇರಿ, ಉಪಾಧ್ಯಕ್ಷರಾಗಿ ನವಲಗುಂದದ ಸಮಾಜದ ಮುಖಂಡರಾದ ಬಾಹುಬಲಿ ಬಸ್ತಿ, ಮಹಾಮಂತ್ರಿಯಾಗಿ ಹುಬ್ಬಳ್ಳಿಯ ಪ್ರಸಿದ್ದ ವ್ಯಾಪಾರೋದ್ಯಮಿ ಭರತರಾಜ ಆರ್ ಬೀಳಗಿ, ಮಹಿಳಾ ಮಹಾಮಂತ್ರಿಯಾಗಿ ಹಿರಿಯ ಧರ್ಮಾನುರಾಗಿ ಹಿರಿಯ ಶ್ರಾವಕಿ ಪಂಕಜಾ ಎಮ್. ಸೂಜಿ ಇವರು ಆಯ್ಕೆಯಾಗಿದ್ದಾರೆ. ಎಸ್. ಆರ್. ಮಲ್ಲಸಮುದ್ರ

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

Article Image

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಆಗಸ್ಟ್ 03 ರಂದು ಸುಳ್ಯ ದಲ್ಲಿ ನಡೆದಿದ್ದು, ಸಾಹಿತ್ಯ ಕೃಷಿಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ ನೂಜಿಬಾಳ್ತಿಲದ ಧರಣೇoದ್ರ ಇಂದ್ರ ಮತ್ತು ಮಂಜುಳಾರವರ ಸುಪುತ್ರರಾಗಿರುತ್ತಾರೆ.

ರಾಜಸ್ಥಾನದ, ಜೈಪುರ: ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಲಾಸ್ಯರಾಜ್

Article Image

ರಾಜಸ್ಥಾನದ, ಜೈಪುರ: ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಲಾಸ್ಯರಾಜ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿನಿಯಾದ ಲಾಸ್ಯರಾಜ್ ಇವಳು ರಾಜಸ್ಥಾನದ ಜೈಪುರದಲ್ಲಿ ನಡೆದ ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾಳೆ. ಇವಳು ವೀರವನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್. ಬಿ. ನರೇಂದ್ರ ಕುಮಾರ್ ಇವರ ಮೊಮ್ಮಗಳು ಹಾಗೂ ಸಿದ್ಧಾಂತ್ ಕೀರ್ತಿರಾಜ್ ಮತ್ತು ಸೌಭಾಗ್ಯ ಇವರ ಪುತ್ರಿ. ಇವರಿಗೆ ಎಸ್. ಡಿ.ಎಂ ಶಿಕ್ಷಣ ಸಂಸ್ಥೆಗಳ ಕ್ರೀಡಾ ಕಾರ್ಯದರ್ಶಿಗಳು ಹಾಗೂ ವಾಲಿಬಾಲ್ ತರಬೇತುದಾರರಾದ ರಮೇಶ್ ಹೆಚ್ ಇವರು ಸಹಕರಿಸಿ ಮಾರ್ಗದರ್ಶನವನ್ನು ನೀಡಿದರು.

ನವನಗರ ಸೇವಾ ಸಂಘಕ್ಕೆ ಕಾರ್ಯಧ್ಯಕ್ಷರ ನೇಮಕ

Article Image

ನವನಗರ ಸೇವಾ ಸಂಘಕ್ಕೆ ಕಾರ್ಯಧ್ಯಕ್ಷರ ನೇಮಕ

ಹುಬ್ಬಳ್ಳಿ ನವನಗರದ ಅಲ್ಪಸಂಖ್ಯಾತ ಜೈನ ಸೇವಾ ಸಂಘದ ಕಾರ್ಯಧ್ಯಕ್ಷರಾಗಿ ಅಶೋಕ ಯೋಗಪ್ಪನವರ ಇವರನ್ನು ಸಂಘದ ಅಧ್ಯಕ್ಷರಾದ ಶಾಂತರಾಜ ಮಲ್ಲಸಮುದ್ರ ಇವರು ನೇಮಕ ಮಾಡಿದ್ದಾರೆ. ಇತ್ತೀಚೆಗೆ ನಡೆದ ಸಂಘದ ವಾರ್ಷಿಕ ಸರ್ವಸಾದಾರಣ ಸಭೆಯಲ್ಲಿ ಸರ್ವನುಮತದಿಂದ ಇವರನ್ನು ಆಯ್ಕೆ ಮಾಡಲಾಗಿದೆ. ಅಶೋಕ ಯೋಗಪ್ಪನವರ ಇವರು ಎರಡು ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ 37 ವರ್ಷ ದಕ್ಷ ಪ್ರಾಮಾಣಿಕವಾಗಿ ಸುದೀರ್ಘ ಸೇವೆ ಸಲ್ಲಿಸಿ ಸಹಾಯಕ ನಿರ್ದೇಶಕರಾಗಿ ವಯೋನಿವೃತ್ತಿ ಹೊಂದಿದರು. ಕಳೆದ 12 ವರ್ಷಗಳಿಂದ ಸಮಾಜದ ಎಲ್ಲ ಕಾರ್ಯಗಳಲ್ಲಿ ಸಂಘದ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದು ಧಾರ್ಮಿಕ ಚಟುವಟಿಕೆಯಲ್ಲಿ ಕ್ರೀಯಾಶೀಲವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಎಸ್ ಆರ್ ಮಲ್ಲಸಮುದ್ರ

ಡಾ. ಅಭೀಷ್ ಹೆಗ್ಡೆಯರಿಗೆ ಪ್ರಥಮ ಬಹುಮಾನ

Article Image

ಡಾ. ಅಭೀಷ್ ಹೆಗ್ಡೆಯರಿಗೆ ಪ್ರಥಮ ಬಹುಮಾನ

ಮಂಗಳೂರು: ಏಪ್ರಿಲ್ 2025ರಲ್ಲಿ ಕೋಲ್ಕತ್ತಾದಲ್ಲಿ ನಡೆದ ವಾರ್ಷಿಕ ಯುರೊಲಿಥಿಯಾಸಿಸ್ ಸಮ್ಮೇಳನದಲ್ಲಿ ಸಲಹೆಗಾರರ ರಸಪ್ರಶ್ನೆಯಲ್ಲಿ ಮಂಗಳೂರಿನ ಮೂತ್ರ ಶಾಸ್ತ್ರತಜ್ಞ ಡಾ. ಅಭೀಷ್ ಹೆಗ್ಡೆರವರು ಪ್ರಥಮ ಬಹುಮಾನ ಪಡೆದಿರುತ್ತಾರೆ. ಇವರು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀ ಯ ಕಾಲೇಜಿನ ಮೂತ್ರ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುತ್ತಾರೆ.

ಸತ್ತೂರು, ಧಾರವಾಡ: ಡಾ. ನಿರಂಜನ್ ಕುಮಾರ್ ಅವರಿಗೆ ಜಾಗತಿಕ ಶ್ರೇಷ್ಠತೆ ಮತ್ತು ಗೌರವ ಪ್ರಧಾನ

Article Image

ಸತ್ತೂರು, ಧಾರವಾಡ: ಡಾ. ನಿರಂಜನ್ ಕುಮಾರ್ ಅವರಿಗೆ ಜಾಗತಿಕ ಶ್ರೇಷ್ಠತೆ ಮತ್ತು ಗೌರವ ಪ್ರಧಾನ

ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರಿಗೆ ಟೈಮ್ಸ್ ಆಫ್ ಇಂಡಿಯಾ ಮತ್ತು ವಿಜಯ ಕರ್ನಾಟಕ ಸಮೂಹ ಮಾಧ್ಯಮಗಳು, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಡಾ. ನಿರಂಜನ್ ಕುಮಾರ್ ಅವರ ಮಹತ್ವದ ಕೊಡುಗೆಗಳನ್ನು ಪರಿಗಣಿಸಿ ಜಾಗತಿಕ ಶ್ರೇಷ್ಠತೆಯ ಪ್ರಮಾಣಪತ್ರವನ್ನು ನೀಡಿ ಗೌರವಿಸಿವೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ ಅವರು ಡಾ. ನಿರಂಜನ್ ಕುಮಾರ್ ಅವರ ಪರವಾಗಿ ಈ ಪ್ರತಿಷ್ಠಿತ ಜಾಗತಿಕ ಶ್ರೇಷ್ಠತೆಯ ಗೌರವವನ್ನು ಮಲೇಷ್ಯಾದ ಮ್ಯಾಪ್ಸ್ ಗ್ರುಪ್‌ನ ಸಂಸ್ಥಾಪಕರಾದ ದಾತುಕ್ ಎಂ.ಎ.ಪಿ. ಸಿಗರನ್ ಮತ್ತು ಇತರ ಗಣ್ಯರಿಂದ ಸ್ವೀಕರಿಸಿದರು. ಈ ಪ್ರಶಸ್ತಿಯನ್ನು ಜುಲೈ 13, 2025 ರಂದು ಮಲೇಷ್ಯಾದ ಕೌಲಾಲಂಪುರದ ರಾಯಲ್ ಚುಲಾನ್‌ನಲ್ಲಿ ನಡೆದ ಕರ್ನಾಟಕ ಜಾಗತಿಕ ಸಾಧಕರ ಅಂತರರಾಷ್ಟ್ರೀಯ ಆಚರಣೆಯ ಸಂದರ್ಭದಲ್ಲಿ ನೀಡಲಾಯಿತು.

ರಚನಾ ಎಸ್.ಡಿ. ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Article Image

ರಚನಾ ಎಸ್.ಡಿ. ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಕಾರ್ಕಳ: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2025ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಡಾ.ಎನ್. ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 2017-2020 ನೇ ಸಾಲಿನ ಬಿಕಾಂ ವಿದ್ಯಾರ್ಥಿನಿ ರಚನಾ ಎಸ್.ಡಿ. ತೇರ್ಗಡೆಯಾಗಿದ್ದಾರೆ. ಇವರು ಮೂಡಬಿದ್ರೆಯ ಧೀರಜ್ ಎಸ್.ಎಮ್. ಮತ್ತು ಪದ್ಮಜಾ ಶೆಟ್ಟಿಯವರ ಪುತ್ರಿ, ರಚನಾ ಎಸ್.ಡಿ. ಮಂಗಳೂರಿನ ಕೆಎನ್‌ಡಿಸಿ ಆಂಡ್ ಅಸೋಸಿಯೆಶನ್‌ನಲ್ಲಿ ಸಿಎ ಪ್ರಾಯೋಗಿಕ ತರಬೇತಿಯನ್ನು ಪಡೆದಿರುತ್ತಾರೆ.

ತುಮಕೂರು ವಿಶ್ವ ವಿದ್ಯಾಲಯದಿಂದ ನಾಡೋಜ ಹಂಪಾನಾ ಸರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Article Image

ತುಮಕೂರು ವಿಶ್ವ ವಿದ್ಯಾಲಯದಿಂದ ನಾಡೋಜ ಹಂಪಾನಾ ಸರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಸಂಶೋಧಕ ನಾಡೋಜ, ಹಂ.ಪ ನಾಗರಾಜಯ್ಯ ಭಾಷಾ ವಿಜ್ಞಾನಿ, ಗ್ರಂಥ ಸಂಪಾದಕ, ಶ್ರೇಷ್ಠವಾಗ್ಮಿ, ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದವರು. 1936ರ ಅಕ್ಟೋಬರ್ 7ರಂದು ಕೋಲಾರ ಜಿಲ್ಲೆ (ಚಿಕ್ಕಬಳ್ಳಾಪುರ ಜಿಲ್ಲೆ) ಗೌರಿಬಿದನೂರು ತಾಲೂಕಿನ ಹಂಪಸಂದ್ರದಲ್ಲಿ ಜನನ. ಪ್ರಾಥಮಿಕ ವಿದ್ಯಾಭ್ಯಾಸ ಹಂಪಸಂದ್ರದಲ್ಲಿ, ಪ್ರೌಢ ಹಾಗೂ ಕಾಲೇಜು ಶಿಕ್ಷಣ ಗೌರಿಬಿದನೂರಿನಲ್ಲಿ, ಪಡೆದ ಇವರು ಕಲಾ ಪದವಿ ಹಾಗೂ ಕಲಾ ಸ್ನಾತಕೋತ್ತರ ಪದವಿಗಳನ್ನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪಡೆದರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು ಅಂದಿನಿಂದಲೂ ಮೈಸೂರು ದಸರಾ ಬಗ್ಗೆ ವಿಶೇಷವಾದ ಗೌರವ, ಪ್ರೀತಿ. ನಾಡೋಜ ಹಂ.ಪ ನಾಗರಾಜಯ್ಯ ಸಾಹಿತ್ಯ ಲೋಕದ ವಿಶೇಷ ಆಸ್ತಿ, ಹಂಪನ ಎಂಬ ಕಾವ್ಯ ನಾಮದಿಂದ ಹೆಸರಾಗಿರುವ ಇವರು, ನಾಡೋಜ ಎಂಬ ಕೀರ್ತಿ ಭಾಷಾ ವಿಜ್ಞಾನಿ, ಕಾದಂಬರಿ ಕಾರ, ಕಾವ್ಯ, ಇತಿಹಾಸ, ಭಾಷಾ ಶಾಸ್ತ್ರ, ಜೈನ ಸಾಹಿತ್ಯ ಇನ್ನಿತರ ಕೃತಿಗಳನ್ನು ರಚಿಸಿರುವವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಇವರ ಕೊಡುಗೆ ಅಪಾರ. (ಜೆ.ರಂಗನಾಥ ತುಮಕೂರು)

ಗಾನವಿ ಡಿ. ಅವರಿಗೆ ಪಿಎಚ್.ಡಿ ಪದವಿ

Article Image

ಗಾನವಿ ಡಿ. ಅವರಿಗೆ ಪಿಎಚ್.ಡಿ ಪದವಿ

ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and Biological Activity Studies of Some Simple and Fused Nitrogenous Heterocycles) ಎಂಬ ಶೀರ್ಷಿಕೆಯಲ್ಲಿ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಪ್ರೊ. ಭೋಜ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಮಂಡಿಸಿದ್ದಾರೆ. ಸಮರ್ಥ ಶೋಧನಾ ಕಾರ್ಯಕ್ಕೆ ಬೆಂಗಳೂರು ಸಿಟಿ ಯುನಿವರ್ಸಿಟಿಯ ರಸಾಯನ ಶಾಸ್ತ್ರ ವಿಭಾಗದ ಸೀನಿಯರ್ ಪ್ರೊಪೆಸರ್ ಡಾ. ಹರಿಪ್ರಸಾದ್ ಎಸ್. ಇವರ ಸಮ್ಮುಖದಲ್ಲಿ ಡಾ. ಗಾನವಿ ಡಿ. ಅವರಿಗೆ ದಿನಾಂಕ 11 ಜುಲೈ 2025 ರಂದು ಪಿಎಚ್.ಡಿ ಪದವಿ ನೀಡಲಾಯಿತು. ಉಜಿರೆಯ ಲಲಿತನಗರದ ನಿವಾಸಿಯಗಿರುವ ಇವರು ಧರ್ಮಸ್ಥಳದ ದೇವಸ್ಥಾನ ಕಚೇರಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಯ ಜೈನ್ ಅವರ ಧರ್ಮಪತ್ನಿ.

ಪರಾಗ್ ಜೈನ್ ರಾ ಹೊಸ ಮುಖ್ಯ

Article Image

ಪರಾಗ್ ಜೈನ್ ರಾ ಹೊಸ ಮುಖ್ಯ

ಹೊಸದಿಲ್ಲಿ: ‘ಆಪರೇಷನ್ ಸಿಂದೂರ’ ಸೇನಾ ಕಾರ್ಯಾಚರಣೆ ಯಶಸ್ಸಿನಲ್ಲಿ ಮಹತ್ವದ ಪಾತ್ರವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಗುಪ್ತಚರ ಸಂಸ್ಥ ‘ರಾ’ ಮುಖ್ಯಸ್ಥರನ್ನಾಗಿ ಕೇಂದ್ರ ಸರಕಾರ ನೇಮಿಸಿದೆ. ‘ರಾ’ ಹಾಲಿ ಮುಖ್ಯಸ್ಥ ರವಿ ಸಿನ್ಹಾ ಅವರು ಜೂನ್ 30ರಂದು ನಿವೃತ್ತಿ ಹೊಂದಲಿದ್ದಾರೆ. ಸದ್ಯ ‘ರಾ’ದ ವೈಮಾನಿಕ ಸಂಶೋಧನಾ ಕೇಂದ್ರದ ಮುಖ್ಯಸ್ಥರಾಗಿರುವ ಪರಾಗ್ ಅವರು ಜುಲೈ 1ರಂದು ‘ರಾ’ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಇವರ ಅಧಿಕಾರ ಅವಧಿ ಎರಡು ವರ್ಷ ಇರಲಿದೆ. ಪರಾಗ್ 1989ನೇ ಸಾಲಿನ ಪಂಜಾಬ್ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಗುಪ್ತಚರ ಇಲಾಖೆಯಲ್ಲಿ ಮಾನವ ಬುದ್ಧಿಮತ್ತೆ ಹಾಗೂ ಕೃತಕ ಬುದ್ಧಿಮತ್ತೆಯನ್ನು ಪರಿಣಾಮಕಾರಿಯಾಗಿ ಸಂಯೋಜಿಸಿ ಬಳಸುವಲ್ಲಿ ಪರಿಣತಿ ಹೊಂದಿದ್ದಾರೆ.

ವೈ. ಡಿ.ರತ್ನಾಕರವರಿಗೆ ಸನ್ಮಾನ

Article Image

ವೈ. ಡಿ.ರತ್ನಾಕರವರಿಗೆ ಸನ್ಮಾನ

ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಯುವ ರತ್ನ ಪ್ರಶಸ್ತಿಯ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ಪುಟ್ಟೇನ ಹಳ್ಳಿಯ ಸಿದ್ಧಾಂಥ ಧಾರ್ಮಿಕ ಪತ್ರಿಕೆಯ ಸಂಪಾದಕರಾದ ವೈ. ಡಿ.ರತ್ನಾಕರವರಿಗೆ ಸಂಘದ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿನ ಗಣ್ಯರು ಪ್ರಶಸ್ತಿನೀಡಿ ಸನ್ಮಾನಿಸಿದರು.

ಮಹಾವೀರ ಜೈನ್‌ ಇಚ್ಲಂಪಾಡಿ ಇವರಿಗೆ ಪಿ.ಹೆಚ್.ಡಿ ಪದವಿ

Article Image

ಮಹಾವೀರ ಜೈನ್‌ ಇಚ್ಲಂಪಾಡಿ ಇವರಿಗೆ ಪಿ.ಹೆಚ್.ಡಿ ಪದವಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್‌ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ. ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ "ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ. ಇವರು ಧಾರ್ಮಿಕ ಉಪನ್ಯಾಸಕ, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್‌ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಆಗಿದ್ದರು.

First Previous

Showing 1 of 3 pages

Next Last