ಪ್ರಥ್ವಿರಾಜ್ ಬಲ್ಲಾಳ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಥ್ವಿರಾಜ್ ಬಲ್ಲಾಳ್ ರವರಿಗೆ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ.) ಬೆಂಗಳೂರು ಇವರ ವತಿಯಿಂದ ಶಿಕ್ಷಕ ವೃತ್ತಿಯಲ್ಲಿ ಅಮೋಘ ಸೇವೆ ಸಲ್ಲಿಸಿ ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದು ಇವರ ಸೇವೆಯನ್ನು ಪುರಸ್ಕರಿಸಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ 2024-25ನೇ ಸಾಲಿನ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗಣ್ಯ ಅತಿಥಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಮೊದಲು ಇವರಿಗೆ, "ತಾಲೂಕು ಸಾಧಕ ಶಿಕ್ಷಕ ಪ್ರಶಸ್ತಿ" "ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ", "ನಿಟ್ಟೆ ರೋಟರಿ ಸಂಸ್ಥೆಯ ನೇಶನ್ ಬಿಲ್ಡರ್ ಅವಾರ್ಡ್" ಲಭಿಸಿರುತ್ತದೆ.