Article Image

ಪ್ರಥ್ವಿರಾಜ್ ಬಲ್ಲಾಳ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ

Article Image

ಪ್ರಥ್ವಿರಾಜ್ ಬಲ್ಲಾಳ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಥ್ವಿರಾಜ್ ಬಲ್ಲಾಳ್ ರವರಿಗೆ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ.) ಬೆಂಗಳೂರು ಇವರ ವತಿಯಿಂದ ಶಿಕ್ಷಕ ವೃತ್ತಿಯಲ್ಲಿ ಅಮೋಘ ಸೇವೆ ಸಲ್ಲಿಸಿ ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದು ಇವರ ಸೇವೆಯನ್ನು ಪುರಸ್ಕರಿಸಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ 2024-25ನೇ ಸಾಲಿನ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗಣ್ಯ ಅತಿಥಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಮೊದಲು ಇವರಿಗೆ, "ತಾಲೂಕು ಸಾಧಕ ಶಿಕ್ಷಕ ಪ್ರಶಸ್ತಿ" "ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ", "ನಿಟ್ಟೆ ರೋಟರಿ ಸಂಸ್ಥೆಯ ನೇಶನ್ ಬಿಲ್ಡರ್ ಅವಾರ್ಡ್" ಲಭಿಸಿರುತ್ತದೆ.

ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಶಿಕಾಂತ್ ವೈ. ಆಯ್ಕೆ

Article Image

ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಶಿಕಾಂತ್ ವೈ. ಆಯ್ಕೆ

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಬಿದಿರೆ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶಶಿಕಾಂತ್ ವೈ ಆಯ್ಕೆಯಾಗಿದ್ದು ಸೆ.14 ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು, ರಾಜ್ಯಾಧ್ಯಕ್ಷರಾದ ಎನ್.ಗೋಪಾಲ ಹಾಗೂ ಗಣ್ಯರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಇವರಿಗೆ 2019 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುತ್ತದೆ.

ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ 'ನವ ನಕ್ಷತ್ರ ಸನ್ಮಾನ 2024'

Article Image

ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ 'ನವ ನಕ್ಷತ್ರ ಸನ್ಮಾನ 2024'

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ನವ ನಕ್ಷತ್ರ ಸನ್ಮಾನ 2024 ಗೌರವ ಪುರಸ್ಕಾರವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಟಿವಿ9 ಕನ್ನಡ ಸುದ್ದಿ ವಾಹಿನಿಯ 17ನೇ ಹುಟ್ಟು ಹಬ್ಬದ ಸಂಭ್ರಮಾಚರಣೆ ಸಂದರ್ಭದಲ್ಲಿ ಅರಮನೆ ಮೈದಾನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿದರು.

ಯೋಗ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ: ಡಾ. ಶಶಿಕಾಂತ ಜೈನ್‌ರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

Article Image

ಯೋಗ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ: ಡಾ. ಶಶಿಕಾಂತ ಜೈನ್‌ರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಯೋಗ ಕ್ಷೇತ್ರದಲ್ಲಿ ಮಾಡಿದ ಉನ್ನತ ಸೇವೆ, ಸಾಧನೆಗಾಗಿ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ನ ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ಏಶಿಯಾ ಪೆಸಿಫಿಕ್ ಐಕಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅ. 22 ರಂದು ಗುರುವಾರ ಕೊಲೊಂಬೊದಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಜಿನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ

Article Image

ಬೆಂಗಳೂರು: ಜಿನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ

ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿಯು ಕುಟುಂಬ ಕೌನ್ಸಿಲರ್ ಪ್ರಾಕ್ಟಿಸ್ ಮಾಡುತ್ತಿರುವ ಜನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಿದೆ. ಡಾ. ಮಂಜುಳಾ ವಿ. ಅವರ ಮಾರ್ಗದರ್ಶನದಲ್ಲಿ "Process of Emotion regulation in relation to Attachment and Mindfulness traits during Gottman's Dreams & within & Conflict intervention psychology" ಎಂಬ ವಿಷಯ ಮೇಲೆ ಮಂಡಿಸಿದ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿ ಲಭಿಸಿದೆ. ಜಿನಶ್ರೀ ಅವರು ಭಾರತದ ರಾಷ್ಟ್ರೀಯ ಗ್ರಂಥಾಲಯ ಕೊಲ್ಕತ್ತಾದ ಮಾಜಿ ಮಹಾನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕರಾದ ಡಾ. ಪಿ. ವೈ. ರಾಜೇಂದ್ರ ಕುಮಾರ್ ಅವರ ಪುತ್ರಿಯಾಗಿದ್ದು, ಸಿಸ್ಕೊ, ಎಚ್‌ಪಿ, ವಿಪ್ರೊ ಕಂಪನಿಗಳಲ್ಲಿ 17 ವರ್ಷಗಳ ಕಾಲ ಸಾಫ್ಟ್ವೇರ್ ಎಂಜಿನಿಯರ್ ಮತ್ತು ತಾಂತ್ರಿಕ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. MA ಸೈಕಾಲಜಿ (IGNOU), MBA (SISII ಕ್ಯಾಲಿಫೋರ್ನಿಯಾ), MS (IIITB ಬೆಂಗಳೂರು) ಮತ್ತು BE(BIT, ಬೆಂಗಳೂರು)ನಲ್ಲಿ ಪದವಿ ಪಡೆದಿದ್ದಾರೆ.

ದೂರದರ್ಶನದ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ

Article Image

ದೂರದರ್ಶನದ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ

ದೂರದರ್ಶನ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಮಹಾವೀರ ಹಾಗೂ ಆರತಿರವರ ಪುತ್ರಿ ಉದಯೋನ್ಮುಖ ಭರತನಾಟ್ಯ ಕಲಾವಿದೆ ಅನನ್ಯ ರಂಜನಿ ಆಯ್ಕೆಯಾಗಿದ್ದಾರೆ. ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್, ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿದ್ದಾರೆ. ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು, ಉಜಿರೆಯ ಎಸ್. ಡಿ ಎಂ. ಕಾಲೇಜಿನಲ್ಲಿ ಅಂತಿಮ ವಿಜ್ಞಾನ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಗೀತಾ ಅಜೀತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ 'ಶ್ರೇಷ್ಠತಾ ಪ್ರಶಸ್ತಿ'

Article Image

ಗೀತಾ ಅಜೀತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ 'ಶ್ರೇಷ್ಠತಾ ಪ್ರಶಸ್ತಿ'

ಸುಮಾರು ಎರಡು ದಶಕಗಳಿಂದ ಎಲ್.ಐ.ಸಿ ಯಲ್ಲಿ ಸಲಹೆಗಾರರಾಗಿ ಮತ್ತು ಸಲಹೆಗಾರರಿಗೆ ತರಬೇತುಗಾರರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ಗೀತಾ ಅಜಿತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ ಧಾರವಾಡ ವಿಭಾಗದ ಶ್ರೇಷ್ಠತಾ ಪ್ರಶಸ್ತಿ( Excellence Award ) ದೊರೆಕಿದೆ. ಹೈದ್ರಾಬಾದ್ ನ ಹಿರಿಯ ವಿಭಾಗೀಯ ಅಧಿಕಾರಿ ಜಯಸಿಂಹನ್, ಧಾರವಾಡದ ಹಿರಿಯ ವಿಭಾಗೀಯ ವ್ಯವಸ್ಥಾಪಕ ಬಿ.ಎಸ್ ಚಕ್ರವರ್ತಿ, ಮಾರ್ಕೆಟಿಂಗ್ ಮ್ಯಾನೇಜರ್ ಪದ್ಮಪ್ರಭಾ ಶಂಕರ ಮತ್ತು ಮಹೇಶ್ ಹುನ್ಸವಾಡಕರ್ ಇವರೆಲ್ಲರ ಸಮ್ಮುಖದಲ್ಲಿ ಜೂ. 6ರಂದು ಪ್ರಶಸ್ತಿ ಪ್ರದಾನ ಮಾಡಿದರು.

ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡಬಿದ್ರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್

Article Image

ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡಬಿದ್ರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್

ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ ಇವರು ಶಾಲಾ ಮಕ್ಕಳಿಗಾಗಿ ಪ್ರತಿ ವರ್ಷವೂ ಆಯೋಜಿಸುವ ರಾಷ್ಟ್ರಮಟ್ಟದ ಯುವ ವಿಜ್ಞಾನಿ ಕಾರ್ಯಕ್ರಮ ‘ಯುವಿಕ’ಗೆ ಈ ಬಾರಿ ಎಕ್ಸಲೆಂಟ್ ಮೂಡುಬಿದಿರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್ ಆಯ್ಕೆಗೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಯನ್ನು ಗೈದಿದ್ದಾರೆ. ಇಸ್ರೋ’ ನ ವಿವಿಧ ಕೇಂದ್ರಗಳಲ್ಲಿ ಎರಡು ವಾರಗಳ ಕಾಲ ಜರಗುವ 'ಯುವಿಕ-2024' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ಬಾರಿ ದೇಶದ ಎಲ್ಲಾ ರಾಜ್ಯಗಳಿಂದ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 85,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಕಾಂಕ್ಷಿಗಳಾಗಿ ಅರ್ಜಿಯನ್ನು ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮೂರು ವರುಷಗಳ ಶೈಕ್ಷಣಿಕ ಸಾಧನೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ವೈಜ್ಞಾನಿಕ, ಕ್ರೀಡಾ ಸಾಧನೆಗಳು, ಒಲಂಪಿಯಾಡ್ ತತ್ಸಮಾನ ಸ್ಪರ್ಧೆಗಳಲ್ಲಿ ಪಡೆದ ರ‍್ಯಾಂಕ್ ಜೊತೆಗೆ ಮುಖ್ಯವಾಗಿ ಇಸ್ರೋ ಆಯೋಜಿಸುವ ಆನ್‌ಲೈನ್ ರಸಪ್ರಸ್ನೆಯಲ್ಲಿ ವಿದ್ಯಾರ್ಥಿಯ ಪಲಿತಾಂಶ ಇವೆಲ್ಲವನ್ನು ಮಾನದಂಡವನ್ನಾಗಿರಿಸಿ 250 ಮಂದಿ ವಿದ್ಯಾರ್ಥಿಗಳನ್ನು ಪ್ರಸಕ್ತ ಸಾಲಿನ ‘ಯುವಿಕ’ಗೆ ಆಯ್ಕೆ ಮಾಡಲಾಗಿದ್ದು ಈ ಪಟ್ಟಿಯಲ್ಲಿ 12 ಮಂದಿಗಳಲ್ಲಿ ರಾಜ್ಯ ಪಠ್ಯಕ್ರಮ ಭೋಧಿಸುವ ಶಿಕ್ಷಣ ಸಂಸ್ಥೆಯಿಂದ ಆಯ್ಕೆಯಾಗಿ ಭಾಗವಹಿಸಿದ ಕರ್ನಾಟಕದ ಏಕೈಕ ವಿದ್ಯಾರ್ಥಿನಿ ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೌಲ್ಯ ವೈ. ಆರ್. ಜೈನ್ ಆಗಿರುವುದು ಶಿಕ್ಷಣ ಕಾಶಿ ಎನಿಸಿದ ಮೂಡುಬಿದಿರೆಗೆ ವಿಶೇಷ ಮೆರಗನ್ನು ತಂದಿದೆ ಈಗಾಗಲೇ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ ಕಾರ್ಯಕ್ರಮದಲ್ಲಿ ವಿಜ್ಞಾನ ಮಾದರಿ ತಯಾರಿ, ಜಿಲ್ಲಾ ರಾಜ್ಯ ಮಟ್ಟದ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆಯ ಜೊತೆಗೆ ರಾಷ್ಟ್ರ, ರಾಜ್ಯಮಟ್ಟದ ಅಟಲ್ ಮಾರಥಾನ್, ಇನ್‌ಸ್ಪಾಯರ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿನೂತನವಾದ ಸಂಶೋಧನಾತ್ಮಕ ಮಾದರಿಗಳನ್ನು ಪ್ರಸ್ತುತ ಪಡಿಸುವ ಮೂಲಕ ಗಮನ ಸೆಳೆದಿರುವ ಈ ಪ್ರತಿಭೆ ಮೂಡುಬಿದಿರೆಯ ಪ್ರತಿಷ್ಠಿತ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಇವರ ಸುಪುತ್ರಿಯಾಗಿದ್ದಾಳೆ.

ಡಾ. ಪ್ರಭಾತ್ ಬಲ್ನಾಡು ಪ್ರಾಂಶುಪಾಲರಾಗಿ ಪದೋನ್ನತಿ

Article Image

ಡಾ. ಪ್ರಭಾತ್ ಬಲ್ನಾಡು ಪ್ರಾಂಶುಪಾಲರಾಗಿ ಪದೋನ್ನತಿ

ಮೂಡುಬಿದಿರೆಯ 52 ವರ್ಷಗಳ ಇತಿಹಾಸವನ್ನು ಹೊಂದಿರುವ ಜೈನ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಪ್ರಭಾತ್ ಬಲ್ನಾಡು ಪೇಟೆಯವರು ಪದೋನ್ನತಿ ಹೊಂದಿದ್ದಾರೆ. 1999ರಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆಯಲ್ಲಿ ಉಪನ್ಯಾಸ ವೃತ್ತಿ ಆರಂಭಿಸಿದ ಇವರು ಕಳೆದ 22 ವರ್ಷಗಳಿಂದ ಜೈನ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯಕ್ಷಗಾನ ಕಲಾವಿದರಾಗಿ, ಸಂಘಟಕರಾಗಿ, ಆಕಾಶವಾಣಿ ಹಾಗೂ ಟಿವಿ ಮಾಧ್ಯಮಗಳ ಸಂಪನ್ಮೂಲ ವ್ಯಕ್ತಿಯಾಗಿ, ಇತಿಹಾಸ ಸಂಶೋಧಕರಾಗಿ, ಲೇಖಕರಾಗಿ, ಜೆಸಿಐ ತರಬೇತುದಾರರಾಗಿ, ಅಧ್ಯಕ್ಷರಾಗಿ ಹತ್ತಾರು ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಇವರು ಹಿರಿಯ ಯಕ್ಷಗಾನ ಸಂಘಟಕ ಮರ್ಕಂಜದ ಯುವರಾಜ ಜೈನ್ ಮತ್ತು ಪ್ರಸನ್ನ ದಂಪತಿಗಳ ಪುತ್ರ.

ಹಾಸನ: ಡಾ. ಎಸ್. ಎ. ನಿತಿನ್ ನೇಮಕ

Article Image

ಹಾಸನ: ಡಾ. ಎಸ್. ಎ. ನಿತಿನ್ ನೇಮಕ

ಬೆಂಗಳೂರಿನ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಸದಸ್ಯರನ್ನಾಗಿ ಡಾ.ಎಸ್.ಎ ನಿತಿನ್ ಅವರನ್ನು ನೇಮಕ ಮಾಡಲಾಗಿದೆ. ಇವರು ಪ್ರಸ್ತುತ ನಗರದ ರಾಜೀವ್ ಗಾಂಧಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಉಪಾಧ್ಯಕ್ಷರಾಗಿ ಸೂರಜ್ ಜೈನ್ ಮಾರ್ನಾಡ್ ಆಯ್ಕೆ

Article Image

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಉಪಾಧ್ಯಕ್ಷರಾಗಿ ಸೂರಜ್ ಜೈನ್ ಮಾರ್ನಾಡ್ ಆಯ್ಕೆ

ಕಳೆದ ಅನೇಕ ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸೂರಜ್ ಜೈನ್ ಅವರು ಇದೀಗ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ. ಈ ಹಿಂದೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾಗಿಯು ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಅದೇ ರೀತಿ ಅನೇಕ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರು ಮೂಡುಬಿದಿರೆ ತಾಲೂಕಿನ ಮಾರ್ನಾಡಿನವರು

ಅಮೇರಿಕಾದ ಹಾರ್ವರ್ಡ್ ಯೂನಿವರ್ಸಿಟಿಗೆ ಪ್ರದೀಪ್ ಜೈನ್ ಬಲ್ನಾಡು ಪೇಟೆ

Article Image

ಅಮೇರಿಕಾದ ಹಾರ್ವರ್ಡ್ ಯೂನಿವರ್ಸಿಟಿಗೆ ಪ್ರದೀಪ್ ಜೈನ್ ಬಲ್ನಾಡು ಪೇಟೆ

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರೇಟೆಜಿಕ್ ಲೀಡರಶಿಪ್ ಪ್ರೋಗ್ರಾಮ್ ಗೆ (strategic Leadership ) ಸುಳ್ಯ ತಾಲೂಕು ಮರ್ಕಂಜದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ ಯಾಗಿದ್ದು ಇದರಲ್ಲಿ ಭಾಗವಹಿಸಲು ಶನಿವಾರ ಅಮೆರಿಕದ ಬೋಸ್ಟನ್ ಗೆ ತೆರಳಿದ್ದಾರೆ. ಇದೇ ಸಂದರ್ಭ ಅವರು ಅಮೆರಿಕದ ನ್ಯೂಯಾರ್ಕ್ ಮತ್ತು ವಾಷಿಂಗ್ಟನಿಗೂ ಭೇಟಿ ನೀಡಲಿದ್ದಾರೆ. ದೇಶದಾದ್ಯಂತ 25 ರಾಜ್ಯಗಳಲ್ಲಿ 750 ಶಾಖೆಗಳನ್ನು ಹೊಂದಿರುವ ಉಜ್ಜಿವನ್ ಬ್ಯಾಂಕ್ ಇದರ ಹೌಸಿಂಗ್ ಲೋನ್ ವಿಭಾಗದ ರಾಷ್ಟ್ರಮಟ್ಟದ ವ್ಯವಹಾರ ಮುಖ್ಯಸ್ಥರಾಗಿರುವ ಇವರು ಸುಳ್ಯ ತಾಲೂಕು ಬಲ್ನಾಡು ಪೇಟೆ ಬಸದಿಯ ಆಡಳಿತ ಮುಕ್ತೆಸರರಾದ ಮತ್ತು ಯಕ್ಷಗಾನ ಸಂಘಟಕರಾದ ಮರ್ಕಂಜ ಯುವರಾಜ ಜೈನ್ ಮತ್ತು ಪ್ರಸನ್ನ ದಂಪತಿಗಳ ಕಿರಿಯ ಪುತ್ರರಾಗಿದ್ದಾರೆ.

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

Article Image

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

SCDCC ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಮುಲ್ಕಿ ಅರಮನೆಯ ವತಿಯಿಂದ ಎಂ ಗೌತಮ್ ಜೈನ್ ಹಾಗೂ ಪವಿತ್ರೇಶ್ ಗೌರವಾರ್ಪಣೆ ಸಲ್ಲಿಸಿದರು.

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

Article Image

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ನ್ಯೂ ಪಡಿವಾಳ್ ಮಾಲಕ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆಯಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ಅಧ್ಯಕ್ಷರಿಲ್ಲದೇ ಇದ್ದ ಮೂಡಾ ಕ್ಕೆ ಇದೀಗ ಹೊಸ ಸಾರಥಿಯ ನೇಮಕವಾಗಿರುತ್ತದೆ.

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

Article Image

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

ಹೊಸದಿಲ್ಲಿ ಮಾ. 8: ಕಾರ್ಕಳದ ಶ್ರದ್ಧಾ ಜೈನ್, ತಾಂಜಾನಿಯಾದ ಕಿಲಿ ಪೌಲ್ ಸಹಿತ ಸಾಮಾಜಿಕ ಜಾಲತಾಣಗಳ ಮೂಲಕ ಜನಮನ ಗೆದ್ದಿರುವ ಒಟ್ಟು 20 ಕ್ಷೇತ್ರಗಳ 23 ಯುವ ಕ್ರಿಯೇಟರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ದೇಶದ ಪ್ರಪ್ರಥಮ 'ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ'ಯನ್ನು ಪ್ರದಾನ ಮಾಡಿದರು. ಅತ್ಯಂತ ಸೃಜನಶೀಲ ಮಹಿಳಾ ಕ್ರಿಯೇಟರ್ ವಿಭಾಗದಲ್ಲಿ 'ಅಯ್ಯೋ ಶ್ರದ್ಧಾ' ಎಂದೇ ಖ್ಯಾತರಾಗಿರುವ ಕನ್ನಡತಿ ಶ್ರದ್ಧಾ ಜೈನ್ ಅವರು ಪ್ರಶಸ್ತಿ ಪಡೆದರು. ಇವರಲ್ಲದೆ ಪಂಖ್ತಿ ಪಾಂಡೆ, ಕೀರ್ತಿಕಾ ಗೋವಿಂದಸ್ವಾಮಿ, ಗಾಯಕಿ ಮೈಥಿಲಿ ಠಾಕೂರ್, ಮಲ್ಹಾರ್ ಕಳಂಬೆ ಸಹಿತ ಹಲವು ಯುವ ಪ್ರತಿಭೆಗಳ ಜತೆಗೆ ಮೂವರು ಅಂತರಾಷ್ಟ್ರೀಯ ಕ್ರಿಯೇಟರ್‌ಗಳಿಗೆ ಕೂಡ ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ, ನಾವೆಲ್ಲರೂ ಭಾರತದಲ್ಲೇ ರೂಪಿಸೋಣ, ಜಗತ್ತಿಗಾಗಿ ರೂಪಿಸೋಣ ಎಂದ ಪ್ರಧಾನಿ, ಭಾರತದ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುವಂತೆ ಮತ್ತು ನಾರಿ ಶಕ್ತಿಯ ಥೀಮ್‌ನೊಂದಿಗೆ ಕಂಟೆಂಟ್ ರೂಪಿಸುವಂತೆ ಪ್ರಶಸ್ತಿ ಪುರಸ್ಕೃತರಿಗೆ ಕರೆ ನೀಡಿದರು.'ಅಯ್ಯೋ ಶ್ರದ್ಧಾ ಕಾರ್ಕಳ ತಾಲೂಕಿನ ಬಜಗೋಳಿ ವರ್ಧಮಾನ ಜೈನ್ ಹಾಗೂ ದಿ.ಸುಶೀಲಾ ದಂಪತಿಯ ಇಬ್ಬರು ಪುತ್ರಿಯರಲ್ಲಿ ಶ್ರದ್ಧಾ ಒಬ್ಬರು. 'ಅಯ್ಯೋ ಶ್ರದ್ಧಾ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಪ್ರಸ್ತುತ ಬೆಂಗಳೂರಿನಲ್ಲಿದ್ದಾರೆ. ಪ್ರಶಸ್ತಿ ಸ್ವೀಕರಿಸುವ ವೇಳೆ ಶ್ರದ್ಧಾ, ಎಷ್ಟೇ ಒತ್ತಡದ ಪರಿಸ್ಥಿತಿ ಇದ್ದರೂ ನಾವು ಭಾರತೀಯರು ನಗುವ ಮಾರ್ಗವನ್ನು ಕಂಡುಕೊಳ್ಳುತ್ತಲೇ ಇರುತ್ತೇವೆ ಎಂದರು.

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

Article Image

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಸುಪ್ರೀತ್ ಜೈನ್ ಅವರನ್ನು ಆಯ್ಕೆ ಮಾಡಲಾಗಿದೆ. ಇವರು ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಪತ್ರಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾಧ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು.

ಡಾ| ಎನ್. ಸಾಹಿತ್ ಜೈನ್ ರಾಜ್ಯ ಮಟ್ಟದಲ್ಲಿ 3ನೇ ರ‍್ಯಾಂಕ್

Article Image

ಡಾ| ಎನ್. ಸಾಹಿತ್ ಜೈನ್ ರಾಜ್ಯ ಮಟ್ಟದಲ್ಲಿ 3ನೇ ರ‍್ಯಾಂಕ್

2023ನೇ ಜುಲೈ ತಿಂಗಳಲ್ಲಿ ಬೆಂಗಳೂರಿನ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯ ನಡೆಸಿದ ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಡಾ| ಎನ್. ಸಾಹಿತ್ ಜೈನ್ ರಾಜ್ಯಮಟ್ಟದಲ್ಲಿ 3ನೇ ರ‍್ಯಾಂಕ್ ಗಳಿಸಿರುತ್ತಾರೆ. ಇವರು ಕಾರ್ಕಳ ತಾಲೂಕಿನ ನಲ್ಕೆದಬೆಟ್ಟುಗುತ್ತು, ಜಿನಪ್ರಸಾದ ನಿಲಯದ ಎನ್. ಅರವಿಂದ ಕುಮಾರ್ ಜೈನ್ ಮತ್ತು ಪದ್ಮಕಾಂತಿ ದಂಪತಿಗಳ ಪುತ್ರ .

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಶಾಂತಿ ಪ್ರಸಾದ್‌ ಹೆಗ್ಡೆ ಅವರು ಆಯ್ಕೆ

Article Image

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಶಾಂತಿ ಪ್ರಸಾದ್‌ ಹೆಗ್ಡೆ ಅವರು ಆಯ್ಕೆ

ದ.ಕ. ಜಿಲ್ಲೆಯಲ್ಲಿ ಹೆಸರುವಾಸಿಯಾಗಿ, ಮೂಡಬಿದ್ರೆಯಲ್ಲಿ ವಕೀಲ ವೃತ್ತಿಯನ್ನು ಮಾಡುತ್ತ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಿ ಪ್ರಸಾದ್ ಹೆಗ್ಡೆಯವರು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಇವರು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಪ್ರಸಿದ್ಧ ಹಿರಿಯ ನ್ಯಾಯವಾದಿ ಪದ್ಮಪ್ರಸಾದ್ ಹೆಗ್ಡೆ (ಪಿ.ಪಿ. ಹೆಗ್ಡೆ)ಯವರ ಸಹೋದರರಾಗಿರುತ್ತಾರೆ.

ಡಾ. ಜಿನದತ್ತ ದೇಸಾಯಿ ಇವರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

Article Image

ಡಾ. ಜಿನದತ್ತ ದೇಸಾಯಿ ಇವರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

ನಿವೃತ್ತ ಜಿಲ್ಲಾ ನ್ಯಾಯಾಧೀಶರೂ, ಸಮಾಜದ ಹಿರಿಯ ಸಾಹಿತಿಗಳೂ, ಈ ನಾಡು ಕಂಡ ಅಪರೂಪದ ಜನಪ್ರಿಯ ಕವಿ, ಶಿಕ್ಷಣ ಪ್ರೇಮಿ ಡಾ. ಜಿನದತ್ತ ದೇಸಾಯಿ ಇವರು ಸಾಹಿತ್ಯ ಕ್ಷೇತ್ರಕ್ಕೆ ಹಾಗೂ ಹಲವಾರು ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ ಮತ್ತು ಜೀವಮಾನದ ಅಮೋಘ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರ 2023ನೇ ಸಾಲಿನ ಪ್ರತಿಷ್ಠಿತ "ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯು ರೂ. ಹತ್ತು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಕೌಸಲ್ಯಾ ಧರಣೇಂದ್ರಯ್ಯರವರು ಆಯ್ಕೆ

Article Image

ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಕೌಸಲ್ಯಾ ಧರಣೇಂದ್ರಯ್ಯರವರು ಆಯ್ಕೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ "ದಾನ ಚಿಂತಾಮಣಿ ಅತ್ತಿಮಬ್ಬೆ " ಪ್ರಶಸ್ತಿಗೆ ಕೌಸಲ್ಯಾ ಧರಣೇಂದ್ರಯ್ಯರವರು ಭಾಜನರಾಗಿದ್ದಾರೆ. ಜನವರಿ 31ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ 5 ಲಕ್ಷ ರೂ.ಗಳ ನಗದು ಬಹುಮಾನವನ್ನು ನೀಡಿ ಸನ್ಮಾನಿಸಲಾಗುತ್ತದೆ.

ಆದಿನಾಥ ಉಪಾಧ್ಯೆಗೆ ಪಿಎಚ್.ಡಿ

Article Image

ಆದಿನಾಥ ಉಪಾಧ್ಯೆಗೆ ಪಿಎಚ್.ಡಿ

ಬೆಳಗಾವಿ: ಗುಲ್ಬರ್ಗಾ ವಿಶ್ವವಿದ್ಯಾಲಯವು ಗಣಿತಶಾಸ್ತ್ರ ವಿಷಯದಲ್ಲಿ ‘ನ್ಯೂಮರಿಕಲ್ ಸ್ಟಡಿ ಆಫ್ ಸ್ಲೈಡರ್ ಆ್ಯಂಡ್ ಸ್ಕ್ವೀಝ್ ಫಿಲ್ಮ್ ಬೇರಿಂಗ್ಸ್ ಲೂಬ್ರಿಕೇಟೆಡ್ ವಿಥ್ ನಾನ್- ನ್ಯೂಟೋನಿಯನ್ ಪ್ಲೂಯಿಡ್’ ಎಂಬ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧಕ್ಕೆ ಆದಿನಾಥ ಚಂದ್ರನಾಥ ಉಪಾಧ್ಯೆ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಮೂಲತಃ ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಆದಿನಾಥ ಉಪಾಧ್ಯೆ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕಲಬುರ್ಗಿಯ ಜಿಲ್ಲೆಯ ಸೇಡಂನ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಡಾ| ಕಾಶೀನಾಥ ಬಿರಾದಾರ ಮಾರ್ಗದರ್ಶಕರಾಗಿದ್ದರು. ಇವರು ತಾಳಿಕೋಟೆಯ ಚಂದ್ರನಾಥ ಜೆ. ಉಪಾಧ್ಯ ಮತ್ತು ವಿಜಯಮಾಲಾ ಚಂದ್ರನಾಥ ಉಪಾಧ್ಯ ದಂಪತಿಗಳ ಪುತ್ರ.

ಆಕರ್ಷಣಿ ಶೈಲೆಂದ್ರ ಕುಮಾರ್

Article Image

ಆಕರ್ಷಣಿ ಶೈಲೆಂದ್ರ ಕುಮಾರ್

ಅಜ್ಜಿಬೆಟ್ಟು ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ನ ಸಮೃದ್ಧಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾಗಿರುವ ಆಕರ್ಷಣಿ ಶೈಲೆಂದ್ರ ಕುಮಾರ್ ಇವರು ಬಂಟ್ವಾಳ ತಾಲೂಕು ಸಂಜೀವಿನಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಎಂ. ಬಾಹುಬಲಿ ಪ್ರಸಾದ್ ಇವರು ಪುನರ್ ಆಯ್ಕೆ

Article Image

ಎಂ. ಬಾಹುಬಲಿ ಪ್ರಸಾದ್ ಇವರು ಪುನರ್ ಆಯ್ಕೆ

ಮೂಡುಬಿದಿರೆ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿ ಲಿ., ಇದರ ಅಧ್ಯಕ್ಷರಾಗಿ “ಸಹಕಾರ ರತ್ನ” ಎಂ. ಬಾಹುಬಲಿ ಪ್ರಸಾದ್ ನ್ಯಾಯವಾದಿ ಇವರು ಎರಡನೇ ಬಾರಿಗೆ ಸರ್ವಾನುಮತದಿಂದ ಪುನರ್ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಕೆ. ಅಭಯಚಂದ್ರ ಜೈನ್, ಅಶೋಕ ಕಾಮತ್ ಎಂ.ಪಿ., ಎಂ. ಜ್ಞಾನೇಶ್ವರ ಕಾಳಿಂಗ ಪೈ, ಜಯರಾಮ ಕೋಟ್ಯಾನ್, ಮನೋಜ್ ಕುಮಾರ್ ಶೆಟ್ಟಿ ಸಿ. ಎಚ್. ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಈಗಾಗಲೇ ಎಂ. ಗಣೇಶ್ ನಾಯಕ್, ಜಾರ್ಜ್ ಮೋನಿಸ್, ಎಂ. ಪದ್ಮನಾಭ ಹಾಗೂ ದಯಾನಂದ ನಾಯ್ಕ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಾ. ಅಜಿತ ಮುರುಗುಂಡೆ

Article Image

ಡಾ. ಅಜಿತ ಮುರುಗುಂಡೆ

ಡಾ. ಅಜಿತ ಮುರುಗುಂಡೆ ಅವರ ಕೃತಿ ಕೆ. ಸಾ. ಪ. ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ. ಕನ್ನಡ ಸಾಹಿತ್ಯ ಪರಿಷತ್ತು ೨೦೨೦ ಎರಡನೇ ಸಾಲಿನ ವಿವಿಧ ದತ್ತಿ ಪ್ರತಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಂಗಳೂರಿನ ಡಾ. ಅಜಿತ ಮುರಗುಂಡೆ ಇವರು ಬರೆದ ‘ರತ್ನಾಕರ ವರ್ಣಿಯ ಹಾಡುಗಳು, ಸಾಹಿತ್ಯ ಮತ್ತು ತಾತ್ವಿಕತೆ’ ಈ ಕೃತಿ ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲ ಶೆಟ್ಟಿ ಡಾ. ಮದನಕೇಸರಿ ಜೈನ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಸ್ತುತ ಇವರು ಯೋಜನೆ ಮತ್ತು ಸಾಂಖ್ಯಿಕ ಸಚಿವರ ವಿಶೇಷ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ

First Previous

Showing 1 of 1 pages

Next Last