Article Image

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

Article Image

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

SCDCC ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಮುಲ್ಕಿ ಅರಮನೆಯ ವತಿಯಿಂದ ಎಂ ಗೌತಮ್ ಜೈನ್ ಹಾಗೂ ಪವಿತ್ರೇಶ್ ಗೌರವಾರ್ಪಣೆ ಸಲ್ಲಿಸಿದರು.

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

Article Image

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ನ್ಯೂ ಪಡಿವಾಳ್ ಮಾಲಕ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆಯಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ಅಧ್ಯಕ್ಷರಿಲ್ಲದೇ ಇದ್ದ ಮೂಡಾ ಕ್ಕೆ ಇದೀಗ ಹೊಸ ಸಾರಥಿಯ ನೇಮಕವಾಗಿರುತ್ತದೆ.

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

Article Image

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

ಹೊಸದಿಲ್ಲಿ ಮಾ. 8: ಕಾರ್ಕಳದ ಶ್ರದ್ಧಾ ಜೈನ್, ತಾಂಜಾನಿಯಾದ ಕಿಲಿ ಪೌಲ್ ಸಹಿತ ಸಾಮಾಜಿಕ ಜಾಲತಾಣಗಳ ಮೂಲಕ ಜನಮನ ಗೆದ್ದಿರುವ ಒಟ್ಟು 20 ಕ್ಷೇತ್ರಗಳ 23 ಯುವ ಕ್ರಿಯೇಟರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ದೇಶದ ಪ್ರಪ್ರಥಮ 'ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ'ಯನ್ನು ಪ್ರದಾನ ಮಾಡಿದರು. ಅತ್ಯಂತ ಸೃಜನಶೀಲ ಮಹಿಳಾ ಕ್ರಿಯೇಟರ್ ವಿಭಾಗದಲ್ಲಿ 'ಅಯ್ಯೋ ಶ್ರದ್ಧಾ' ಎಂದೇ ಖ್ಯಾತರಾಗಿರುವ ಕನ್ನಡತಿ ಶ್ರದ್ಧಾ ಜೈನ್ ಅವರು ಪ್ರಶಸ್ತಿ ಪಡೆದರು. ಇವರಲ್ಲದೆ ಪಂಖ್ತಿ ಪಾಂಡೆ, ಕೀರ್ತಿಕಾ ಗೋವಿಂದಸ್ವಾಮಿ, ಗಾಯಕಿ ಮೈಥಿಲಿ ಠಾಕೂರ್, ಮಲ್ಹಾರ್ ಕಳಂಬೆ ಸಹಿತ ಹಲವು ಯುವ ಪ್ರತಿಭೆಗಳ ಜತೆಗೆ ಮೂವರು ಅಂತರಾಷ್ಟ್ರೀಯ ಕ್ರಿಯೇಟರ್‌ಗಳಿಗೆ ಕೂಡ ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ, ನಾವೆಲ್ಲರೂ ಭಾರತದಲ್ಲೇ ರೂಪಿಸೋಣ, ಜಗತ್ತಿಗಾಗಿ ರೂಪಿಸೋಣ ಎಂದ ಪ್ರಧಾನಿ, ಭಾರತದ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುವಂತೆ ಮತ್ತು ನಾರಿ ಶಕ್ತಿಯ ಥೀಮ್‌ನೊಂದಿಗೆ ಕಂಟೆಂಟ್ ರೂಪಿಸುವಂತೆ ಪ್ರಶಸ್ತಿ ಪುರಸ್ಕೃತರಿಗೆ ಕರೆ ನೀಡಿದರು.'ಅಯ್ಯೋ ಶ್ರದ್ಧಾ ಕಾರ್ಕಳ ತಾಲೂಕಿನ ಬಜಗೋಳಿ ವರ್ಧಮಾನ ಜೈನ್ ಹಾಗೂ ದಿ.ಸುಶೀಲಾ ದಂಪತಿಯ ಇಬ್ಬರು ಪುತ್ರಿಯರಲ್ಲಿ ಶ್ರದ್ಧಾ ಒಬ್ಬರು. 'ಅಯ್ಯೋ ಶ್ರದ್ಧಾ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಪ್ರಸ್ತುತ ಬೆಂಗಳೂರಿನಲ್ಲಿದ್ದಾರೆ. ಪ್ರಶಸ್ತಿ ಸ್ವೀಕರಿಸುವ ವೇಳೆ ಶ್ರದ್ಧಾ, ಎಷ್ಟೇ ಒತ್ತಡದ ಪರಿಸ್ಥಿತಿ ಇದ್ದರೂ ನಾವು ಭಾರತೀಯರು ನಗುವ ಮಾರ್ಗವನ್ನು ಕಂಡುಕೊಳ್ಳುತ್ತಲೇ ಇರುತ್ತೇವೆ ಎಂದರು.

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

Article Image

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಸುಪ್ರೀತ್ ಜೈನ್ ಅವರನ್ನು ಆಯ್ಕೆ ಮಾಡಲಾಗಿದೆ. ಇವರು ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಪತ್ರಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾಧ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು.

ಡಾ| ಎನ್. ಸಾಹಿತ್ ಜೈನ್ ರಾಜ್ಯ ಮಟ್ಟದಲ್ಲಿ 3ನೇ ರ‍್ಯಾಂಕ್

Article Image

ಡಾ| ಎನ್. ಸಾಹಿತ್ ಜೈನ್ ರಾಜ್ಯ ಮಟ್ಟದಲ್ಲಿ 3ನೇ ರ‍್ಯಾಂಕ್

2023ನೇ ಜುಲೈ ತಿಂಗಳಲ್ಲಿ ಬೆಂಗಳೂರಿನ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯ ನಡೆಸಿದ ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಡಾ| ಎನ್. ಸಾಹಿತ್ ಜೈನ್ ರಾಜ್ಯಮಟ್ಟದಲ್ಲಿ 3ನೇ ರ‍್ಯಾಂಕ್ ಗಳಿಸಿರುತ್ತಾರೆ. ಇವರು ಕಾರ್ಕಳ ತಾಲೂಕಿನ ನಲ್ಕೆದಬೆಟ್ಟುಗುತ್ತು, ಜಿನಪ್ರಸಾದ ನಿಲಯದ ಎನ್. ಅರವಿಂದ ಕುಮಾರ್ ಜೈನ್ ಮತ್ತು ಪದ್ಮಕಾಂತಿ ದಂಪತಿಗಳ ಪುತ್ರ .

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಶಾಂತಿ ಪ್ರಸಾದ್‌ ಹೆಗ್ಡೆ ಅವರು ಆಯ್ಕೆ

Article Image

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಶಾಂತಿ ಪ್ರಸಾದ್‌ ಹೆಗ್ಡೆ ಅವರು ಆಯ್ಕೆ

ದ.ಕ. ಜಿಲ್ಲೆಯಲ್ಲಿ ಹೆಸರುವಾಸಿಯಾಗಿ, ಮೂಡಬಿದ್ರೆಯಲ್ಲಿ ವಕೀಲ ವೃತ್ತಿಯನ್ನು ಮಾಡುತ್ತ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಿ ಪ್ರಸಾದ್ ಹೆಗ್ಡೆಯವರು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಇವರು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಪ್ರಸಿದ್ಧ ಹಿರಿಯ ನ್ಯಾಯವಾದಿ ಪದ್ಮಪ್ರಸಾದ್ ಹೆಗ್ಡೆ (ಪಿ.ಪಿ. ಹೆಗ್ಡೆ)ಯವರ ಸಹೋದರರಾಗಿರುತ್ತಾರೆ.

ಡಾ. ಜಿನದತ್ತ ದೇಸಾಯಿ ಇವರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

Article Image

ಡಾ. ಜಿನದತ್ತ ದೇಸಾಯಿ ಇವರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

ನಿವೃತ್ತ ಜಿಲ್ಲಾ ನ್ಯಾಯಾಧೀಶರೂ, ಸಮಾಜದ ಹಿರಿಯ ಸಾಹಿತಿಗಳೂ, ಈ ನಾಡು ಕಂಡ ಅಪರೂಪದ ಜನಪ್ರಿಯ ಕವಿ, ಶಿಕ್ಷಣ ಪ್ರೇಮಿ ಡಾ. ಜಿನದತ್ತ ದೇಸಾಯಿ ಇವರು ಸಾಹಿತ್ಯ ಕ್ಷೇತ್ರಕ್ಕೆ ಹಾಗೂ ಹಲವಾರು ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ ಮತ್ತು ಜೀವಮಾನದ ಅಮೋಘ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರ 2023ನೇ ಸಾಲಿನ ಪ್ರತಿಷ್ಠಿತ "ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯು ರೂ. ಹತ್ತು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಕೌಸಲ್ಯಾ ಧರಣೇಂದ್ರಯ್ಯರವರು ಆಯ್ಕೆ

Article Image

ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಕೌಸಲ್ಯಾ ಧರಣೇಂದ್ರಯ್ಯರವರು ಆಯ್ಕೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ "ದಾನ ಚಿಂತಾಮಣಿ ಅತ್ತಿಮಬ್ಬೆ " ಪ್ರಶಸ್ತಿಗೆ ಕೌಸಲ್ಯಾ ಧರಣೇಂದ್ರಯ್ಯರವರು ಭಾಜನರಾಗಿದ್ದಾರೆ. ಜನವರಿ 31ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ 5 ಲಕ್ಷ ರೂ.ಗಳ ನಗದು ಬಹುಮಾನವನ್ನು ನೀಡಿ ಸನ್ಮಾನಿಸಲಾಗುತ್ತದೆ.

ಆದಿನಾಥ ಉಪಾಧ್ಯೆಗೆ ಪಿಎಚ್.ಡಿ

Article Image

ಆದಿನಾಥ ಉಪಾಧ್ಯೆಗೆ ಪಿಎಚ್.ಡಿ

ಬೆಳಗಾವಿ: ಗುಲ್ಬರ್ಗಾ ವಿಶ್ವವಿದ್ಯಾಲಯವು ಗಣಿತಶಾಸ್ತ್ರ ವಿಷಯದಲ್ಲಿ ‘ನ್ಯೂಮರಿಕಲ್ ಸ್ಟಡಿ ಆಫ್ ಸ್ಲೈಡರ್ ಆ್ಯಂಡ್ ಸ್ಕ್ವೀಝ್ ಫಿಲ್ಮ್ ಬೇರಿಂಗ್ಸ್ ಲೂಬ್ರಿಕೇಟೆಡ್ ವಿಥ್ ನಾನ್- ನ್ಯೂಟೋನಿಯನ್ ಪ್ಲೂಯಿಡ್’ ಎಂಬ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧಕ್ಕೆ ಆದಿನಾಥ ಚಂದ್ರನಾಥ ಉಪಾಧ್ಯೆ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಮೂಲತಃ ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಆದಿನಾಥ ಉಪಾಧ್ಯೆ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕಲಬುರ್ಗಿಯ ಜಿಲ್ಲೆಯ ಸೇಡಂನ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಡಾ| ಕಾಶೀನಾಥ ಬಿರಾದಾರ ಮಾರ್ಗದರ್ಶಕರಾಗಿದ್ದರು. ಇವರು ತಾಳಿಕೋಟೆಯ ಚಂದ್ರನಾಥ ಜೆ. ಉಪಾಧ್ಯ ಮತ್ತು ವಿಜಯಮಾಲಾ ಚಂದ್ರನಾಥ ಉಪಾಧ್ಯ ದಂಪತಿಗಳ ಪುತ್ರ.

ಆಕರ್ಷಣಿ ಶೈಲೆಂದ್ರ ಕುಮಾರ್

Article Image

ಆಕರ್ಷಣಿ ಶೈಲೆಂದ್ರ ಕುಮಾರ್

ಅಜ್ಜಿಬೆಟ್ಟು ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ನ ಸಮೃದ್ಧಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾಗಿರುವ ಆಕರ್ಷಣಿ ಶೈಲೆಂದ್ರ ಕುಮಾರ್ ಇವರು ಬಂಟ್ವಾಳ ತಾಲೂಕು ಸಂಜೀವಿನಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಎಂ. ಬಾಹುಬಲಿ ಪ್ರಸಾದ್ ಇವರು ಪುನರ್ ಆಯ್ಕೆ

Article Image

ಎಂ. ಬಾಹುಬಲಿ ಪ್ರಸಾದ್ ಇವರು ಪುನರ್ ಆಯ್ಕೆ

ಮೂಡುಬಿದಿರೆ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿ ಲಿ., ಇದರ ಅಧ್ಯಕ್ಷರಾಗಿ “ಸಹಕಾರ ರತ್ನ” ಎಂ. ಬಾಹುಬಲಿ ಪ್ರಸಾದ್ ನ್ಯಾಯವಾದಿ ಇವರು ಎರಡನೇ ಬಾರಿಗೆ ಸರ್ವಾನುಮತದಿಂದ ಪುನರ್ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಕೆ. ಅಭಯಚಂದ್ರ ಜೈನ್, ಅಶೋಕ ಕಾಮತ್ ಎಂ.ಪಿ., ಎಂ. ಜ್ಞಾನೇಶ್ವರ ಕಾಳಿಂಗ ಪೈ, ಜಯರಾಮ ಕೋಟ್ಯಾನ್, ಮನೋಜ್ ಕುಮಾರ್ ಶೆಟ್ಟಿ ಸಿ. ಎಚ್. ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಈಗಾಗಲೇ ಎಂ. ಗಣೇಶ್ ನಾಯಕ್, ಜಾರ್ಜ್ ಮೋನಿಸ್, ಎಂ. ಪದ್ಮನಾಭ ಹಾಗೂ ದಯಾನಂದ ನಾಯ್ಕ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಾ. ಅಜಿತ ಮುರುಗುಂಡೆ

Article Image

ಡಾ. ಅಜಿತ ಮುರುಗುಂಡೆ

ಡಾ. ಅಜಿತ ಮುರುಗುಂಡೆ ಅವರ ಕೃತಿ ಕೆ. ಸಾ. ಪ. ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ. ಕನ್ನಡ ಸಾಹಿತ್ಯ ಪರಿಷತ್ತು ೨೦೨೦ ಎರಡನೇ ಸಾಲಿನ ವಿವಿಧ ದತ್ತಿ ಪ್ರತಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಂಗಳೂರಿನ ಡಾ. ಅಜಿತ ಮುರಗುಂಡೆ ಇವರು ಬರೆದ ‘ರತ್ನಾಕರ ವರ್ಣಿಯ ಹಾಡುಗಳು, ಸಾಹಿತ್ಯ ಮತ್ತು ತಾತ್ವಿಕತೆ’ ಈ ಕೃತಿ ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲ ಶೆಟ್ಟಿ ಡಾ. ಮದನಕೇಸರಿ ಜೈನ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಸ್ತುತ ಇವರು ಯೋಜನೆ ಮತ್ತು ಸಾಂಖ್ಯಿಕ ಸಚಿವರ ವಿಶೇಷ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ

First Previous

Showing 3 of 3 pages

Next Last