Article Image

ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರವರ್ಧನ್ ಜೈನ್ ಪ್ರಥಮ

Article Image

ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರವರ್ಧನ್ ಜೈನ್ ಪ್ರಥಮ

ಇತ್ತೀಚೆಗೆ ಮುಂಬೈನಲ್ಲಿ ನಡೆದ ಹೈರೋಕ್ಸ್ ದೇಹ ಸಧೃಢತೆಯ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಜೈನ ಸಮುದಾಯದ ಏಕೈಕ ಸ್ಪರ್ಧಿ ಪ್ರವರ್ಧನ್ ಜೈನ್ ರವರು ವಿಜಯಿಯಾಗಿದ್ದಾರೆ. ಈ ಸ್ಪರ್ಧೆಯು ಎಂಟು ಕಿ.ಮೀ. ಓಟ ಹಾಗೂ ಎಂಟು ವಿವಿಧ ಬಗೆಯ ದೈಹಿಕ ಸ್ಪರ್ಧೆಗಳನ್ನು ಒಳಗೊಂಡಿದ್ದು ಅತ್ಯಂತ ಕಡಿಮೆ ಸಮಯದಲ್ಲಿ ಪೂರೈಸುವ ಸ್ಪರ್ಧಿ ವಿಜೇತರಾಗುತ್ತಾರೆ. ಇವರು ಕುತ್ಲೂರು ಪದ್ಮಾಂಬಾ ನಿಲಯ ಪಾರ್ಶ್ವನಾಥ ಜೈನ್ ಹಾಗೂ ವಾಗೀಶ್ವರಿ ದಂಪತಿಗಳ ಪುತ್ರರಾಗಿದ್ದಾರೆ.

ಕಾರ್ಕಳ : ದಶಲಕ್ಷಣ ಪರ್ವ ಆಚರಣೆ

Article Image

ಕಾರ್ಕಳ : ದಶಲಕ್ಷಣ ಪರ್ವ ಆಚರಣೆ

ಕಾರ್ಕಳ ಹಿರಿಯಂಗಡಿ ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮದಲ್ಲಿ ದಿನಾಂಕ 28.08.2025 ನೇ ಗುರುವಾರದಿಂದ ದಿನಾಂಕ 06.09.2025 ನೇ ಶನಿವಾರದವರೆಗೆ ಪರಮ ಪೂಜ್ಯ 108 ಮುನಿಶ್ರೀ ಮಹಿಮಾಸಾಗರ ಮುನಿ ಮಹಾರಾಜರ ಆಶೀರ್ವಾದಪೂರ್ವಕ ಹಾಗೂ ಕಾರ್ಕಳ ದಾನಶಾಲಾ ಜೈನ ಮಠದ ರಾಜಗುರು ಧ್ಯಾನ ಯೋಗಿ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಶಲಕ್ಷಣ ಪರ್ವವನ್ನು ಶ್ರದ್ಧಾ ಭಕ್ತಿಯಿಂದ ಪ್ರತಿ ವರ್ಷದಂತೆ ಆಚರಿಸಲಾಯಿತು. ಉತ್ತಮ ಕ್ಷಮಾಧರ್ಮದಂದು ಯುವ ನ್ಯಾಯವಾದಿಗಳಾದ ಸುವೃತ್ ಕುಮಾರ್ ಹಾಗೂ ಸಮಾಜದ ಹಿರಿಯರು ದೀಪ ಬೆಳಗಿಸುವುದರ ಮೂಲಕ 10 ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರತಿದಿನ ಸಂಜೆ ಜಿನಪೂಜೆ, ಭಜನೆ, ಮಹಾಮಂಗಳಾರತಿ, ವಿದ್ವಾಂಸರಿಂದ ಉಪನ್ಯಾಸ, ತತ್ವಾರ್ಥ ಸೂತ್ರವಾಚನ, ನಿಲಯದ ವಿದ್ಯಾರ್ಥಿಗಳಿಂದ ಭಾಷಣ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕೊನೆಯ ದಿನವಾದ ದಿನಾಂಕ 06.09.2025 ನೇ ಶನಿವಾರ ಉತ್ತಮ ಬ್ರಹ್ಮಚರ್ಯ ಧರ್ಮದ ಆಚರಣೆಯಂದು ಆಶ್ರಮದ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಎಂಕೆ ವಿಜಯಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕೋಶಾಧಿಕಾರಿಗಳಾದ ಎಸ್ ಅನಂತರಾಜ್ ಪೂವಣಿ ಮತ್ತು ಆಶ್ರಮದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸನ್ಮತ್ ಕುಮಾರ್ ನಾರಾವಿ ಇವರ ಗೌರವ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಆರಂಭದಲ್ಲಿ ಯೋಗರಾಜ್ ಶಾಸ್ತ್ರಿ ಇವರು ಸ್ವಾಗತಿಸಿದರು. ಪರ್ವದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನಡೆಸಲಾದ ಧಾರ್ಮಿಕ ಮತ್ತು ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಆಶ್ರಮದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ವತಿಯಿಂದ 7 ನೇ, 10 ನೇ ಮತ್ತು ದ್ವಿತೀಯ ಪಿಯುಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪುರಸ್ಕರಿಸಲಾಯಿತು. ಧಾರ್ಮಿಕ ಗುರುಗಳಾದ ಯೋಗರಾಜ್ ಶಾಸ್ತ್ರಿ ಇವರು ತತ್ವಾರ್ಥಸೂತ್ರ ಪಠಿಸಿದರು. ವಿದ್ಯಾರ್ಥಿ ಹಿತೇಶ್ ಪ್ರಾರ್ಥಿಸಿದರು. ಅನ್ವಿತ್ ಎಚ್ ಎಸ್ ವರದಿ ಮಂಡಿಸಿದರು. ಶ್ರವಣ್ ವಿದ್ಯಾರ್ಥಿ ಭಾಷಣ ನೆರವೇರಿಸಿದರು. ಆಶ್ರಮದ ಮೇಲ್ವಿಚಾರಕರಾದ ವೀರೇಂದ್ರ ಜೈನ್ ಧನ್ಯವಾದ ಸಮರ್ಪಿಸಿದರು. ತೀರ್ಥನ್ ಇವರು ಕಾರ್ಯಕ್ರಮ ನಿರೂಪಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Article Image

ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ : ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ದಿ. ನೇಮಿರಾಜು ಜೈನ್ ಮತ್ತು ಪುಷ್ಪಾವತಿ ದಂಪತಿಗಳ ಎರಡನೇ ಪುತ್ರಿಯಾಗಿ ಜನಿಸಿದ ಆರತಿ ಕುಮಾರಿ ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಬಳಿಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಹಂಬಲದೊಂದಿಗೆ 1994ರಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗಾಧಿಬನೂರು ಎಂಬಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುತ್ತಾರೆ. 1997ರಲ್ಲಿ ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವಂತಹ ವಿದ್ಯಾಸಂಸ್ಥೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಟ್ಟಡೆಗೆ ಕರ್ತವ್ಯಕ್ಕೆ ಹಾಜರಾಗಿರುತಗತ್ತಾರೆ. ವಿದ್ಯಾರ್ಥಿ ಸಾಗರದಲ್ಲಿ ಪ್ರೀತಿ ಆದರ್ಶಗಳ ನೆಚ್ಚಿನ ಶಿಕ್ಷಕಿಯಾಗಿ, ಶಿಕ್ಷಕ ವೃಂದದವರ ಮಧ್ಯೆ ಆತ್ಮೀಯ ಸಹೋದ್ಯೋಗಿಯಾಗಿ, ಇಲಾಖಾಧಿಕಾರಿಗಳ ಮೆಚ್ಚುಗೆಯ ನೌಕರಳಾಗಿ, ಊರ ವಿದ್ಯಾಭಿಮಾನಿಗಳ ಪೋಷಕರ ಮನಗೆದ್ದು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುತ್ತಾರೆ. ಇವರು ಸರಕಾರಿ ನೌಕರರ ಸಂಘದಲ್ಲಿ ಪದಾಧಿಕಾರಿಯಾಗಿ 2 ಬಾರಿ ರಾಜ್ಯ ಪರಿಷತ್ ಸದಸ್ಯೆಯಾಗಿ ಪ್ರಸ್ತುತ ಕ್ರೀಡಾ ಮತ್ತು ಸಾಂಸ್ಕೃತಿಕ ಸದಸ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್-2 ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸತ್ತಿದ್ದಾರೆ. ಇವರು ವಲಯ ಮಟ್ಟದ ಪಂದ್ಯಾಟ ಹಾಗೂ ಕ್ರೀಡಾಕೂಟಕ್ಕೆ ನೋಡೆಲ್ ಆಗಿ, ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸದಸ್ಯರಾಗಿ ಹಾಗೂ ಉಪಾಧ್ಯಕ್ಷರಾಗಿ 2 ಬಾರಿ ಸೇವೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ 2 ಬಾರಿ ರಾಜ್ಯ ಪರಿಷತ್ ಸದಸ್ಯರಾಗಿ ಸೇವೆ, ಭಾರತ ಸೇವಾದಳ ಜಿಲ್ಲಾ ಸಮಿತಿಯಲ್ಲಿ ಸದಸ್ಯರಾಗಿ ಪ್ರಸ್ತುತ ಕಾರ್ಯದರ್ಶಿಯಾಗಿ, ಭಾರತ ಸೇವಾದಳದ ತಾಲೂಕು ಮಟ್ಟದ ರ‍್ಯಾಲಿ ಹಾಗೂ ಜಿಲ್ಲಾ ಮಟ್ಟದ ರ‍್ಯಾಲಿಯ ಸಂಯೋಜಕರಾಗಿಯೂ ಸೇವೆ ಸಲ್ಲಿಸಯತ್ತಿದ್ದಾರೆ. ಇವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸುದೀರ್ಘ 31 ವರ್ಷಗಳ ಸೇವೆ, ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗಿದೆ.

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

Article Image

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

ತೌಳವ ಇಂದ್ರ ಸಮಾಜ(ರಿ). ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಇತ್ತೀಚೆಗೆ ಮೂಡಬಿದಿರೆ ಶ್ರೀ ಧವಳ ಕಾಲೇಜ್ ನ ಸಭಾಂಗಣದಲ್ಲಿ ನಡೆಯಿತು. "2009ರಲ್ಲಿ ಸಮಾಜ ಮುಖಿ ಚಿಂತನೆಯ ಇಂದ್ರ ಬಂಧುಗಳ ಶ್ರಮದಲ್ಲಿ,ಸಮಸ್ತ ಇಂದ್ರ ವರ್ಗದವರನ್ನು ಒಗ್ಗೂಡಿಸಿ, ಸಂಘ ಸ್ಥಾಪನೆಯಾಯಿತು ಮತ್ತು ಕಳೆದ ಹಲವಾರು ವರ್ಷಗಳಲ್ಲಿ ಸಂಘಟನೆಯು ಪೂಜಾಪಾಠಗಳ ತರಬೇತಿ, ಹಿರಿಯ ಪುರೋಹಿತರ ಸನ್ಮಾನ, ವಿದ್ಯಾರ್ಥಿ ಪುರಸ್ಕಾರ, ಕ್ರೀಡಾಕೂಟ, ಸಾಮೂಹಿಕ ಮೃತ್ಯುಂಜಯ ಆರಾಧನೆ, ಸಾಧಕರ ಸನ್ಮಾನ, ವಿದ್ಯಾರ್ಥಿ ವೇತನ ನೀಡಿಕೆ, ಆಟಿಕೂಟ, ಪ್ರವಾಸ, ಉಚಿತ ಆರೋಗ್ಯ ಶಿಬಿರ, ಸಾಮೂಹಿಕ ಉಪನಯನ ಸಂಸ್ಕಾರ ಹಾಗೂ ವೃತೋಪದೇಶಗಳು ಮುಂತಾದ ಪರಸ್ಪರ ಬಾಂಧವ್ಯ ಸಂವರ್ಧನೆಯ ಕೆಲಸ ಕಾರ್ಯಗಳನ್ನು ಮಾಡಿದೆ." ಎಂದು ಪ್ರಾಸ್ತಾವಿಕ ಭಾಷಣವನ್ನು ಸಂಘದ ಉಪಾಧ್ಯಕ್ಷರಾದ ಪ್ರೊ.ಅಕ್ಷಯ ಕುಮಾರ್ ಮಳಲಿಯವರು ಬಳಿಕ ಅತಿಥಿಗಳನ್ನೂ ಸ್ವಾಗತಿಸಿದರು. ಹಿರಿಯ ಪುರೋಹಿತರಾದ ಮಿತ್ರಸೇನ ಇಂದ್ರ ಮುಂಡಾಜೆ,ನೆರೆಂಕಿ ಸುಭಾಶ್ಚಂದ್ರ ಇಂದ್ರ, ಆನಂತರಾಜ ಇಂದ್ರ ಬಂಟ್ವಾಳ, ಹಾಗೂ ಶ್ಯಾಮರಾಜ ಇಂದ್ರ, ನೇರೆಂಕಿ ಅವರುಗಳನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಎಂ. ಜ್ಞಾನಚಂದ್ರ ಇಂದ್ರರವರು ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲರನ್ನು ಸ್ಮರಿಸುತ್ತಾ, ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ಪ್ರತಿ ವರ್ಷದಂತೆ ಎಸ್ ಎಸ್ ಎಲ್ ಸಿ ಮತ್ತು ಪಿ. ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಶಸ್ತ ವರ್ಷದಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು. ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿ ವಿವಿಧ ಉನ್ನತ ಹುದ್ದೆಯನ್ನು ಅಲಂಕರಿಸಿರುವ ಸಮಾಜ ಬಾಂಧವರನ್ನು ಅಭಿನಂದಿಸಲಾಯಿತು. ಅನಂತರ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಕಾರ್ಯಕ್ರಮ ನಡೆಯಿತು. ಅರ್ಕಕೀರ್ತಿ ಇಂದ್ರರವರು ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷ ಧರಣೇಂದ್ರ ಇಂದ್ರರು ತಮ್ಮ ಮುಂದಿನ ಯೋಜನೆಗಳನ್ನು ಪ್ರಸ್ತಾಪಿಸಿದರು. ಕಾರ್ಯದರ್ಶಿ ಅಭಯ ಕುಮಾರ್ ಬಿ. ವಾರ್ಷಿಕ ವರದಿ ಓದಿದರು, ಸುವಿಧಿ ಇಂದ್ರ ಲೆಕ್ಕಪತ್ರ ಮಂಡಿಸಿದರು.ಮಹಾ ಸೇನಾ ಇಂದ್ರ ಪ್ರತಿಭಾ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು, ದಿವ್ಯಾ ವೀರೇಂದ್ರ ಶ್ರದ್ಧಾಂಜಲಿ ಅರ್ಪಣೆ ಮಾಡಿದರು. ಪ್ರಮೋದ್ ಕುಮಾರ್ ಅಭಿನಂದಿತರ ಪಟ್ಟಿ ಓದಿ ಕಾರ್ಯಕ್ರಮ ನಡೆಸಿಕೊಟ್ಟರು. ಕೋಶಾಧಿಕಾರಿ ವಿಜಯ ಕುಮಾರಿ ಇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿಶ್ಚಿತ ಪ್ರಾರ್ಥನೆ ಮಾಡಿದರು, ಹರಿಶ್ಚಂದ್ರ ಇಂದ್ರ ಕಾರ್ಯಕ್ರಮ ನಿರೂಪಿಸಿದರು. ಸುಜ್ಞಾನ ಇಂದ್ರ ಧನ್ಯವಾದ ಸಮರ್ಪಿಸಿದರು.

ಬಿ. ಪ್ರಮೋದ್ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

Article Image

ಬಿ. ಪ್ರಮೋದ್ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

ಬೆಂಗಳೂರು, ಆ. 30: ರಾ‌ಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾಮರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಹಾಸನ ಜಿಲ್ಲೆ ಸಕಲೇಶಪುರ ಉಪ-ವಿಭಾಗದ ಡಿವೈಎಸ್‌ಪಿ ಆಗಿರುವ ಬಿ. ಪ್ರಮೋದ್ ಕುಮಾರ್‌ರವರಿಗೆ ಮಾನ್ಯ ರಾ‌ಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ-ಗಣರಾಜ್ಯೋತ್ಸವ ದಿನಾಚರಣೆ-2023ನ್ನು ನೀಡಿ ಗೌರವಿಸಿರುತ್ತಾರೆ.

ಪಿ. ವೀರೇಂದ್ರ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

Article Image

ಪಿ. ವೀರೇಂದ್ರ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

ಬೆಂಗಳೂರು, ಆ. 30: ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾಮರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಬೆಂಗಳೂರು ಕೆಎಲ್‌ಎ ಡಿವೈಎಸ್‌ಪಿ ಆಗಿರುವ ಪಿ. ವೀರೇಂದ್ರ ಕುಮಾರ್‌ರವರಿಗೆ ಪೋಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ-ಗಣರಾಜ್ಯೋತ್ಸವ ದಿನಾಚರಣೆ-2023ನ್ನು ನೀಡಿ ಗೌರವಿಸಿರುತ್ತಾರೆ.

ಸಾವಿರ ಕಂಬದ ಬಸದಿಗೆ ಬಂದ ಐರಾವತ

Article Image

ಸಾವಿರ ಕಂಬದ ಬಸದಿಗೆ ಬಂದ ಐರಾವತ

ಮೂಡುಬಿದಿರೆ: ಪ್ರಾಣಿ ಪ್ರಿಯರ ಸಂಘಟನೆ "ಪೇಟಾ"ದ ಮುತುವರ್ಜಿಯಲ್ಲಿ ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಆಕೆಯ ಪುತ್ರಿ ರಾಶಾ ತಾದಾನಿ ಕೊಡುಗೆಯಾಗಿ ನೀಡಿದ "ಐರಾವತ" ಜೈನಕಾಶಿ ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಯ ಆವರಣಕ್ಕೆ ಶುಕ್ರವಾರ ಸೇರಿಕೊಂಡಿದೆ. ಧಾರ್ಮಿಕ ಕೇಂದ್ರಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಪಳಗಿಸಿದ ಆನೆಗಳನ್ನು ಬಳಸಿ ಅವುಗಳಿಗೆ ತನ್ನ ಕುಟುಂಬದೊಂದಿಗೆ ಕಾಡಿನ ಸಹಜ ಬದುಕನ್ನು ಕಸಿದುಕೊಂಡು ಹಿಂಸೆ ನೀಡಿದಂತಾಗುತ್ತದೆ ಎಂದು ಅದರ ವಿರುದ್ಧ ನೈಜ್ಯ ಆನೆಗಳನ್ನೇ ಹೋಲುವ ಮೆಕ್ಯಾನಿಕಲ್ ಆನೆಗಳನ್ನು ಪ್ರೋತ್ಸಾಹಿಸಿ ಎನ್ನುತ್ತಿರುವ ಪೇಟಾ ಇಂಡಿಯಾದ ಮುಂಬೈ ಮೂಲದ ಪ್ರೇರಣೆಯಿಂದ ಬಾಲಿವುಡ್ ತಾರಾ ಕುಟುಂಬದ ಕೊಡುಗೆಯಾಗಿ ಈ ಐರಾವತ ಒದಗಿ ಬಂದಿದೆ. ಜೈನಕಾಶಿಯಲ್ಲಿ ಚಾತುರ್ಮಾಸ ನಿರತ 108 ಗುಲಾಬ್ ಭೂಷಣ ಮುನಿ ಮಹಾರಾಜರು ನೂತನ ಐರಾವತವನ್ನು ಅನಾವರಣಗೊಳಿಸಿದರು. ಪಟ್ಟಾಭಿಷೇಕ ರಜತ ಮಹೋತ್ಸವ ಸಂಭ್ರಮದಲ್ಲಿರುವ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ , ಪಟ್ನಶೆಟ್ಟಿ ಸುಧೇಶ್ ಕುಮಾರ್, ಎಂ ಬಾಹುಬಲಿ ಪ್ರಸಾದ್, ಪೇಟಾ ಮುಂಬೈ ಘಟಕದ ಪದಾಧಿಕಾರಿಗಳಾದ ಅನುಷ್ಕಾ ಯಾದವ್, ಸುಧಾಕರ್ ರಾವ್ ಕರ್ನಾಲ್, ಶುಭಂ ಅಗರ್ವಾಲ್, ರೋಹನ್ ಸರ್ವಪ್ರಿಯ, ಮಹೆಕ್ ಜುನೇಜಾ ಸಹಿತ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. ದೇಶದಲ್ಲೇ ಮೊದಲ ಬಸದಿಗೆ ಐರಾವತ! ಐತಿಹಾಸಿಕ ಸಾವಿರ ಕಂಬದ ಬಸದಿಯಲ್ಲಿ ನೆಲೆ ಕಂಡಿರುವ ಮೆಕ್ಯಾನಿಕಲ್ ಆನೆ ಐರಾವತ ದೇಶದಲ್ಲೇ ಮೊದಲ ಬಾರಿಗೆ ಜೈನ ಬಸದಿಗೆ ಬಂದಂತಾಗಿದೆ. ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಮೊದಲ ಬಸದಿ ಎನ್ನುವ ಹಿರಿಮೆ ಸಾವಿರ ಕಂಬದ ಬಸದಿಗೆ ಲಭಿಸಿದೆ. ಪೇಟಾ ಧಾರ್ಮಿಕ ಸಂಸ್ಥೆಗಳಿಗೆ ಒದಗಿಸುತ್ತಿರುವ 12 ನೆಯ ಹಾಗೂ ಮಂಗಳೂರು ವಲಯಕ್ಕೆ ದೊರೆತ ಮೊದಲ ಐರಾವತ ಇದಾಗಿದೆ. ಮೂರು ಮೀಟರ್ ಎತ್ತರ 800 ಕೆಜಿ ಭಾರ ಈ ಮೆಕ್ಯಾನಿಕಲ್ ಐರಾವತವನ್ನು ರಬ್ಬರ್, ಫೈಬರ್, ಮೆಟಲ್, ಮೆಶ್, ಫೋಮ್, ಕಬ್ಬಿಣ ಹಾಗೂ ಐದು ಮೋಟಾರುಗಳ ನೆರವಿನಿಂದ ನಿರ್ಮಿಸಲಾಗಿದೆ. ವಿದ್ಯುತ್ ಸಂಪರ್ಕ ನೀಡಿ ಅದನ್ನು ನೈಜ್ಯ ಆನೆಯಂತೆ ಬಳಸಿಕೊಳ್ಳಲು ಸಾಧ್ಯವಿದೆ. ಚಕ್ರಗಳ ನೆರವಿನಿಂದ ರಸ್ತೆಯಲ್ಲೂ ಒಡಾಡಿಬಹುದಾಗಿದೆ. 2023ರಲ್ಲಿ ಇಂತಹ ಸಾಹಸಕ್ಕೆ ಮುಂದಾದ ಪೇಟಾ ದಕ್ಷಿಣ ಭಾರತದ ಹಲವೆಡೆ ಮೆಕ್ಯಾನಿಕಲ್ ಆನೆಗಳನ್ನು ಹಸ್ತಾಂತರಿಸಿದೆ.

ನ್ಯಾಯವಾದಿ ಶ್ವೇತಾ ಕೆ. ಅವರ ನೂತನ ಕಚೇರಿ ಉದ್ಘಾಟನೆ

Article Image

ನ್ಯಾಯವಾದಿ ಶ್ವೇತಾ ಕೆ. ಅವರ ನೂತನ ಕಚೇರಿ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ನ್ಯಾಯವಾದಿ ಮತ್ತು ನೋಟರಿ ಶ್ವೇತಾ ಕೆ. ಅವರ ನೂತನ ಕಚೇರಿಯು ಸ್ವರಾಜ್ಯ ಮೈದಾನದ ಮುಂಭಾಗದಲ್ಲಿರುವ ಕೋರ್ಟ್ ರಸ್ತೆಯ ಶೆಟ್ಟೀಸ್ ರಾಮಪ್ರಸಾದ್ ಕಾಂಪ್ಲೆಕ್ಸ್‌ನಲ್ಲಿ ಆ. 29ರಂದು ಅಪರಾಹ್ನ ಉದ್ಘಾಟನೆಗೊಂಡಿತು. ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯಕುಮಾರ್ ಅವರು ದೀಪ ಪ್ರಜ್ವಲನದ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ., ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ., ನ್ಯಾಯವಾದಿಗಳಾದ ಎಂ. ಆರ್. ಬಲ್ಲಾಳ್, ಕೆ.ಆರ್. ಪಂಡಿತ್, ದಿವಿಜೇಂದ್ರ, ಎಂ.ಎಸ್‌. ತಂತ್ರಿ, ಕಟ್ಟಡದ ಮಾಲೀಕ ಪಾಲಡ್ಕ ಹರಿಪ್ರಸಾದ್ ಶೆಟ್ಟಿ, ಹಿರಿಯ ಉದ್ಯಮಿ ಕೆ. ಶ್ರೀಪತಿ ಭಟ್, ಪ್ರಭಾತ್ ಸಿಲ್ಸ್‌ನ ಪ್ರಭಾಚಂದ್ರ ಜೈನ್‌, ರಾಜವರ್ಮ ಬೈಲಂಗಡಿ, ಟೆಂಪಲ್ ಟೌನ್ ರೋಟರಿ ಅಧ್ಯಕ್ಷ ಹರೀಶ್‌ ಎಂ.ಕೆ.. ನಿಕಟಪೂರ್ವ ಅಧ್ಯಕ್ಷ ಪೂರ್ಣಚಂದ್ರ ಜೈನ್‌ ಮತ್ತಿತರರು ಉಪಸ್ಥಿತರಿದ್ದರು. ನ್ಯಾಯವಾದಿ ಶ್ವೇತಾ ಕೆ. ಮತ್ತು ಪ್ರಮಯಿ ಅತಿಥಿಗಳನ್ನು ಗೌರವಿಸಿದರು. ಸಾಹಿಲ್ ಕಾರ್ಯಕ್ರಮ ನಿರೂಪಿಸಿದರು.

ದಶಲಕ್ಷಣ ಪರ್ವ

Article Image

ದಶಲಕ್ಷಣ ಪರ್ವ

ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ (ರಿ.) ಹಿರಿಯಂಗಡಿ, ಕಾರ್ಕಳದಲ್ಲಿ ದಿನಾಂಕ 28.08.2025ನೇ ಗುರುವಾರದಿಂದ 06.09.2025ನೇ ಶನಿವಾರದ ಪರ್ಯಂತ ಆಶ್ರಮದ ಜಿನ ಮಂದಿರದ ಪ್ರಾಂಗಣದಲ್ಲಿ ಪ್ರತಿನಿತ್ಯ ಸಂಜೆ ಗಂಟೆ 6.00ರಿಂದ ಪರಮಪೂಜ್ಯ 108 ಮುನಿಶ್ರೀ ಮಹಿಮಾಸಾಗರ ಮುನಿ ಮಹಾರಾಜರ ಆಶೀರ್ವಾದ ಪೂರ್ವಕ ಹಾಗೂ ಕಾರ್ಕಳ ಶ್ರೀ ಜೈನ ಮಠದ ರಾಜಗುರು ಧ್ಯಾನಯೋಗಿ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಶಲಕ್ಷಣ ಪರ್ವ ಸಮಾರಂಭವು ಪೂಜೆ, ಭಜನೆ ಉಪನ್ಯಾಸ, ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ವಿ.ಸೂ. ಈ ಪುಣ್ಯ ದಿನಗಳಲ್ಲಿ ತಾವು ನೀಡಿದ ಅಮೂಲ್ಯ ದಾನವನ್ನು ಸ್ವೀಕರಿಸಲಾಗುವುದು.

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Article Image

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ ಪರಂಪರೆ ಹಾಗೂ ಹೆಗ್ಗಡೆಯವರ ಬಹುಮುಖಿ ಸಮಾಜಸೇವಾ ಕಾರ್ಯಗಳನ್ನು ಬೆಂಬಲಿಸಿ ಸಕ್ರಿಯ ಸಹಕಾರ ನೀಡುವುದು ಸಮಗ್ರ ಜೈನಸಮಾಜದ ಕರ್ತವ್ಯವಾಗಿದೆ ಎಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಕಾರ್ಕಳ ಸೀಮೆಯ ಜೈನ ಬಾಂಧವರೊಂದಿಗೆ ಶನಿವಾರ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರನ್ನು ಗೌರವಿಸಿ ಶುಭ ಹಾರೈಸಿದರು. ಕೆಸರಾದ ನೀರನ್ನು ಮತ್ತೆ ತಿಳಿಯಾಗಿ ಪರಿಶುದ್ಧಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಪಪ್ರಚಾರ, ಆರೋಪಗಳಲೆಲ್ಲ ದೂರವಾಗಲಿ. ಹೆಗ್ಗಡೆಯವರಿಗೆ ಎಲ್ಲಾ ದೈವ-ದೇವರುಗಳು ದೀರ್ಘಾಯುರಾರೋಗ್ಯವನ್ನಿತ್ತು ಇನ್ನಷ್ಟು ಲೋಕಕಲ್ಯಾಣ ಕಾರ್ಯಗಳನ್ನು ಮಾಡುವಂತೆ ಹರಸಲೆಂದು ಸ್ವಾಮೀಜಿ ಪ್ರಾರ್ಥಿಸಿದರು. ಕಾರ್ಕಳ ಸೀಮೆಯ ಎಲ್ಲಾ ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುರೋಹಿತರು ತಂದ ಪ್ರಸಾದವನ್ನು ಹೆಗ್ಗಡೆಯವರಿಗೆ ಅರ್ಪಿಸಿದರು. ಸ್ವಾಮೀಜಿಯವರು ಕಾರ್ಕಳ ಮಠದ ಬಸದಿಯ ವಿಶೇಷ ಪ್ರಸಾದವನ್ನು ಹೆಗ್ಗಡೆಯವರಿಗೆ ನೀಡಿ ಶುಭ ಹಾರೈಸಿದರು. ಕಾರ್ಕಳದ ಡಾ. ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ಸತ್ಯಕ್ಕೆ ಸದಾ ಜಯವಿದೆ. ಮಾತುಬಿಡ ಮಂಜುನಾಥ ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಸತ್ಯ ಪ್ರಕಟವಾಗುವುದರೊಂದಿಗೆ ಆರೋಪಿಗಳಿಗೆ ಶಿಕ್ಷೆಯಾಗಲಿ. ಹೆಗ್ಗಡೆಯವರ ಜೊತೆ ನಾವೆಲ್ಲ ಸದಾ ಪೂರ್ಣ ಬೆಂಬಲ ನೀಡಲು ಸಿದ್ಧರು, ಬದ್ಧರು ಎಂದು ಅವರು ಭರವಸೆ ನೀಡಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಶಿರ್ತಾಡಿಯ ಎಸ್.ಡಿ. ಸಂಪತ್ ಸಾಮ್ರಾಜ್ಯ, ಸುದರ್ಶನ ಜೈನ್ ಬಂಟ್ವಾಳ, ಪುಷ್ಪರಾಜ ಜೈನ್, ಮಂಗಳೂರು, ಕುಲದೀಪ್, ಚೌಟರ ಅರಮನೆ, ಮೂಡಬಿದ್ರೆ, ಅಂಡಾರು ಮಹಾವೀರ ಹೆಗ್ಡೆ, ಅನಂತ್ರಾಜ ಪೂವಣಿ, ಶಿಶುಪಾಲ ಜೈನ್, ಮೋಹನ ಪಡಿವಾಳ್, ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ, ಗುಣವರ್ಮ ಜೈನ್, ಕಾರ್ಕಳ, ನೇಮಿರಾಜ ಆರಿಗಾ ಮೊದಲಾದವರು ಇದ್ದರು. ತಮ್ಮ ಬಗ್ಗೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಸಮಾಜ ಬಾಂಧವರ ಭಕ್ತಿ-ಗೌರವ, ಅಭಿಮಾನ ಸದಾ ಇದೇ ರೀತಿ ಇರಲೆಂದು ಹಾರೈಸಿ, ಹೆಗ್ಗಡೆಯವರು ಎಲ್ಲರಿಗೂ ಶುಭ ಹಾರೈಸಿದರು. ಕಾರ್ಕಳ ಸೀಮೆಯಿಂದ ಸುಮಾರು ಮುನ್ನೂರು ಮಂದಿ ಶ್ರಾವಕರು-ಶ್ರಾವಕಿಯರು ಆಗಮಿಸಿದರು.

ಕತ್ತೋಡಿಯ ಹಿರಿಯರಾದ ಕೆ. ಜಗತ್ಪಾಲ ಮುದ್ಯರು ಇನ್ನಿಲ್ಲ

Article Image

ಕತ್ತೋಡಿಯ ಹಿರಿಯರಾದ ಕೆ. ಜಗತ್ಪಾಲ ಮುದ್ಯರು ಇನ್ನಿಲ್ಲ

ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಕತ್ತೋಡಿ ಮನೆಯ ಹಿರಿಯ ಸದಸ್ಯರು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ, ಪ್ರಗತಿಪರ ಕೃಷಿಕರು ಆಗಿದ್ದ ಕೆ. ಜಗತ್ಪಾಲ ಮುದ್ಯ (95ವ) ಇವರು ಇಂದು ಮಧ್ಯಾಹ್ನ ನಿಧನ ಹೊಂದಿದರು. ಇವರು ಪತ್ನಿ ಕಮಲಾಜಿ, ಪುತ್ರ ಶ್ರೇಯಾಂಸ, ಪುತ್ರಿಯರಾದ ಶೈಲಶ್ರೀ, ಸೌರಭ ಹಾಗೂ ಸಹೋದರರು ಸಹೋದರಿಯರನ್ನು ಮತ್ತು ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್

Article Image

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ವತಿಯಿಂದ ಜೈನ್ ಮಿಲನ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಆಟಿಡೂರ ತಮ್ಮನದ ಲೇಸ್ ಕಾರ್ಯಕ್ರಮ ಭಾನುವಾರ ಸಂಜೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಸುಮಾರು 65ಕ್ಕೂ ಅಧಿಕ ಬಗೆಯ ಆಟಿಯ ಖಾದ್ಯಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಸಭಾ ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ಜೈನಬಾಂಧವರು ಆಟಿಡೊರ ತಮ್ಮನದ ಲೇಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಭಾರತೀಯ ಜೈನ್ ಮಿಲನ್ ವಲಯ 8ರ ಮಂಗಳೂರು ವಿಭಾಗದ ನಿಕಟಪೂರ್ವ ಅಧ್ಯಕ್ಷ ಪುಷ್ಪರಾಜ್ ಜೈನ್ ಉದ್ಘಾಟಿಸಿದರು. ಪದಪ್ರದಾನದ ಪೌರೋಹಿತ್ಯವನ್ನು ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ಸುದರ್ಶನ ಜೈನ್ ಪಂಜಿಕಲ್ಲು ವಹಿಸಿದ್ದರು. ಅಧ್ಯಕ್ಷತೆಯನ್ನು ಜೈನ್ ಮಿಲನ್ ಬಂಟ್ವಾಳ ಅಧ್ಯಕ್ಷ ಮಧ್ವರಾಜ್ ಜೈನ್ ಪಂಜಾಲು ವಹಿಸಿದ್ದರು. ನೂತನ ಸಾಲಿನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ರಾಜೇಂದ್ರ ಜೈನ್, ಕಾರ್ಯದರ್ಶಿಯಾಗಿ ಜಯಕೀರ್ತಿ ವೈ.ಎಸ್., ಕೋಶಾಧಿಕಾರಿಯಾಗಿ ಪ್ರವೀಣ್ ಕುಮಾರ್ ಬಸ್ತಿಪಡ್ಡು, ಉಪಾಧ್ಯಕ್ಷರಾಗಿ ತೇಜ್ ಪಾಲ್ ಜೈನ್, ಡಾ. ಸೀಮಾ ಸುದೀಪ್, ಅರ್ಕಕೀರ್ತಿ ಹೆಗ್ಡೆ, ಹರ್ಷರಾಜ್ ಬಲ್ಲಾಳ್, ವಿನಯಚಂದ್ರ ಜೈನ್, ಜೊತೆ ಕಾರ್ಯದರ್ಶಿಗಳಾಗಿ ಹರ್ಷೇಂದ್ರ ಹೆಗ್ಡೆ, ಸಂಧ್ಯಾ ಸಿದ್ಧಕಟ್ಟೆ, ಚಂದನಾ ಬೃಜೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸನ್ಮತಿ ಜಯಕೀರ್ತಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯಕುಮಾರ್, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೇಯಾಂಸ್ ಜೈನ್ ಸಹಿತ ಸಂಚಾಲಕರ ತಂಡ, ಕಾರ್ಯಕಾರಿ ಸಮಿತಿಯ ಅಧಿಕಾರ ಸ್ವೀಕರಿಸಿತು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಡ್ ಉಳಿಪ್ಪಾಡಿ ಮಾತನಾಡಿ, ಜೈನರು ಸಮಾಜದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುವುದರ ಮೂಲಕ ಗೌರವಾನ್ವಿತ ಸ್ಥಾನಮಾನದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಶುಭ ಹಾರೈಸಿದರು. ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಸರ್ವ ಸಮಾಜದ ಪ್ರೀತಿಗೆ ಮಾನ್ಯರಾದ ಜೈನರು ಸಾಮಾಜಿಕವಾಗಿ ಗೌರವಾನ್ವಿತರಾದ ಸ್ಥಾನದಲ್ಲಿದ್ದಾರೆ. ಜೈನ ಆಹಾರ ಪದ್ಧತಿಯಿಂದ ತೊಡಗಿ, ಮುನಿಗಳು ನೀಡಿದ ಸಂದೇಶಗಳು ಪ್ರಸ್ತುತವಾಗಿವೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಅಶೋಕ್ ಜೈನ್ ಮಾತನಾಡಿ, ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬ ಕುರಿತು ವಿವರಿಸಿದರು. ಈ ಸಂದರ್ಭ ಹಿರಿಯರನ್ನು ಗೌರವಿಸಲಾಯಿತು ನೂತನ ಅಧ್ಯಕ್ಷ ರಾಜೇಂದ್ರ ಜೈನ್ ಮುಂದಿನ ಯೋಜನೆಗಳ ಕುರಿತು ವಿವರಿಸಿದರು. ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ನಿರ್ದೇಶಕ ಪ್ರಮೋದ್ ಕುಮಾರ್ ವೇಣೂರು ಶುಭ ಹಾರೈಸಿದರು. ಮಂಗಳೂರು ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ನೂತನ ಕಾರ್ಯದರ್ಶಿ ಜಯಕೀರ್ತಿ ವೈ.ಎಸ್. ವಂದಿಸಿದರು.

ಮೂಡುಬಿದಿರೆ: ರತ್ನತ್ರಯ ಸೂತ್ರ ಧಾರಣೆ ಮತ್ತು ಬಸದಿಗಳಲ್ಲಿ ವಿಶೇಷ ಪೂಜೆ

Article Image

ಮೂಡುಬಿದಿರೆ: ರತ್ನತ್ರಯ ಸೂತ್ರ ಧಾರಣೆ ಮತ್ತು ಬಸದಿಗಳಲ್ಲಿ ವಿಶೇಷ ಪೂಜೆ

ಮೂಡುಬಿದಿರೆ: ಇಲ್ಲಿಯ ಶ್ರೀ ಜೈನ ಮಠದಲ್ಲಿ ಆ. 09ರಂದು ನೂಲ ಹುಣ್ಣಿಮೆ ಶ್ರಾವಣದ ದಿನ ಆಚರಿಸುವ ರತ್ನತ್ರಯ ಸೂತ್ರ ಧರಿಸುವ ಹಬ್ಬವನ್ನು ಆಚರಿಸಲಾಯಿತು. ಕಾಶಿಯ 18 ಬಸದಿಗಳಲ್ಲಿ ವಿಶೇಷ ಪೂಜೆ, ಹವನ ಮೂಲಕ ಶ್ರಾವಕರು ರತ್ನತ್ರಯ ಸೂತ್ರ ಧರಿಸಿದರು. ಆಚಾರ್ಯ ಗುಲಾಬ್ ಭೂಷಣ ಮುನಿರಾಜ್ ಉಪಸ್ಥಿತರಿದ್ದರು. ಧರ್ಮ ನಿರತರಾದವರಿಗೆ ರಕ್ಷಣೆ ನೀಡುವ ಭಾವನೆ ಮಾಡುವ ದಿನ ಎಂದು ಇಂದು ಶ್ರೀ ಮಠದಲ್ಲಿ ಹವನದ ಬಳಿಕ ಜನಿವಾರ ಧಾರಣೆ ಸಂದರ್ಭದಲ್ಲಿ ಮೂಡುಬಿದಿರೆ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯವರ್ಯ ಮಹಾಸ್ವಾಮೀಜಿ ತಮ್ಮ ಅನುಗ್ರಹ ಆಶೀರ್ವಾದದಲ್ಲಿ ತಿಳಿಸಿದರು. ಅಪರಾಹ್ನ ಶ್ರೀ ಮಠದ ಶಾಂತಿ ಭವನದಲ್ಲಿ ಶಾಂತಿ ಚಕ್ರ ಆರಾಧನೆಯ 16ನೇ ಆರಾಧನೆ ಸಮಾಪನಗೊಂಡಿತು. ಆಚಾರ್ಯರ ಭಟ್ಟಾರಕರ ಪಾದ ಪೂಜೆ ಆರತಿ ಮಾಡಿ ಭಕ್ತವೃಂದ ಧರ್ಮಲಾಭಗಳಿಸಿದರು. ಅಭಯ ಚಂದ್ರ ಜೈನ್, ತಿಲಕ್ ಪ್ರಸಾದ್, ದರ್ಶನ್ ಶೆಟ್ಟಿ, ಸಂಜಯಂತ ಕುಮಾರ್, ಸುದೇಶ್ ಬೆಟ್ ಕೇರಿ, ಶ್ವೇತಾ ಜೈನ್ ಸೂರಜ್, ಮೊದಲಾದವರು ಉಪಸ್ಥಿತರಿದ್ದರು. ಉ.ಪ್ರ, ಮಹಾರಾಷ್ಟ್ರ, ಮ.ಪ್ರ, ಇಂದೂರಿನ ನೂರಾರು ಸಂಖ್ಯೆಯ ಭಕ್ತರು ಶ್ರೀಗಳಿಂದ ಜನಿವಾರ ಹಾಗೂ ರಕ್ಷಾ ಸೂತ್ರ ಪಡೆದರು.

ಮೂಡುಬಿದಿರೆಯಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣೆ, ಯೋಜನೆ, ತರಬೇತಿ, ಚರ್ಚಾ ಗೋಷ್ಠಿ

Article Image

ಮೂಡುಬಿದಿರೆಯಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣೆ, ಯೋಜನೆ, ತರಬೇತಿ, ಚರ್ಚಾ ಗೋಷ್ಠಿ

ಮಂಗಳೂರು ಜಿಲ್ಲಾ ಪಂಚಾಯತ್ ತೋಟಗಾರಿಕಾ ಇಲಾಖೆ, ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರ, ರೈತ ಜನ್ಮಯ ರೈತ ಉತ್ಪಾದಕರ ಕಂಪನಿ, ಮೂಡುಬಿದರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿಗಳ ಜಂಟಿ ಸಹಭಾಗಿತ್ವದಲ್ಲಿ ತೋಟಗಾರಿಕೆ ಪಿತಾಮಹ ದಿ. ಡಾ. ಎಂ.ಎಚ್. ಮರಿಗೌಡ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕೆ ಬೆಳೆಗಳಲ್ಲಿ ಸಂಸ್ಕರಣೆ, ಯೋಜನೆ, ತರಬೇತಿ ಹಾಗೂ ಚರ್ಚಾ ಗೋಷ್ಠಿ ಆಗಸ್ಟ್ 8ರಂದು ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಲ್ಪವೃಕ್ಷ ಕ್ಕೆ ನೀರು ಎರೆದು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಬಾಹುಬಲಿ ಪ್ರಸಾದ್ ಮಾತನಾಡಿ ಕೃಷಿಕರಿಗೆ ನಮ್ಮ ಸೊಸೈಟಿ ಉತ್ತೇಜನವನ್ನು ನೀಡುತ್ತಿದೆ ಆ ಎಲ್ಲಾ ಸೌಲಭ್ಯಗಳನ್ನು ಕೃಷಿಕರು ಉಪಯೋಗಿಸಿಕೊಳ್ಳಬೇಕೆಂದು ಕೇಳಿಕೊಂಡರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ. ಅವರು ತೋಟಗಾರಿಮೋವಾಬಕೆ ಬೆಳೆಗಳ ಸಂಸ್ಕರಣೆ, ಯೋಜನೆಗಳ ಬಗ್ಗೆ ತರಬೇತಿಯನ್ನು ನೀಡಿದರು. ಆರಂಭದಲ್ಲಿ ಕೃಷಿ ವಿಚಾರ ವಿನಿಮಯ ಕೇಂದ್ರದ ಹಿರಿಯ ಸದಸ್ಯರಾದ ರಾಜವಮ೯ ಬೈಲಂಗಡಿಯವರು ಪ್ರಸ್ಥಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಎಂಸಿಎಸ್ ಬ್ಯಾಂಕಿನ ಕಾಯ೯ನಿವಾಕರಾದ ರಘುವೀರ್ ಕಾಮತ್, ಕೃಷಿ ವಿಚಾರ ಕೇಂದ್ರದ ಅಧ್ಯಕ್ಷ ಅಭಯ ಕುಮಾರ್, ರೈತಜನ್ಯ ಸಂಸ್ಥೆಯ ಅಧ್ಯಕ್ಷ ಲಿಯೋ ವಾಲ್ಟರ್ ನಜ್ರೆತ್, ಹಾಜರಿದ್ದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ. ಅವರು ಸ್ವಾಗತಿಸಿ ವಂದಿಸಿದರು. ಸದಾನಂದ ನಾರಾವಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

Article Image

ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಮಹಿಳಾ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು( ಗ್ರಾ)ಮತ್ತು ಇನ್ನರ್ ವೀಲ್ ಕ್ಲಬ್ ಇವರ ಸಹಯೋಗದೊಂದಿಗೆ ದ.ಕ.ಜಿ.ಪ. ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೈನ್ ಇದರ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪುಚ್ಚೇರಿ ಕಟ್ಟೆ ಅಂಗನವಾಡಿ ಕಾರ್ಯಕರ್ತೆ ವಿಜಯರವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ ಕಾರಿಗಿ ಇವರು ಸ್ತನ್ಯಪಾನ ಸಪ್ತಾಹವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಸ್ತನ್ಯಪಾನದ ಮಹತ್ವ ಹಾಗೂ ಎಲ್ಲಾ ಮಹಿಳೆಯರಿಗೆ ಇದರ ಅರಿವನ್ನು ಮೂಡಿಸುವಲ್ಲಿ ಆರೋಗ್ಯ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಜವಾಬ್ದಾರಿಗಳನ್ನು ತಿಳಿಸುತ್ತಾ ಇನ್ನರ್ ವೀಲ್ ಕ್ಲಬ್ ನ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆಯಾಗಿರುವ ನೋಟರಿ ನ್ಯಾಯವಾದಿಗಳಾದ ಶ್ವೇತ ಜೈನ್ ಸ್ತನ್ಯಪಾನವು ಹೇಗೆ ಶಿಶುವಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂಬುದನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ಎದೆ ಹಾಲಿನಿಂದ ತಾಯಿಗೆ ಮತ್ತೆ ಮಗುವಿಗೆ ಆಗುವ ಪ್ರಯೋಜನಗಳು ಎದೆ ಹಾಲು ಉಣಿಸುವಿಕೆಗೆ ಕುಟುಂಬ ಹಾಗೂ ಸಮಾಜದ ಪ್ರೋತ್ಸಾಹದ ಅಗತ್ಯತೆ, ಸ್ವಚ್ಛತಾ ಕ್ರಮಗಳು, ಪಾಲಿಸಬೇಕಾದ ಆಹಾರ ಕ್ರಮಗಳು ಮುಂತಾದ ಸವಿವರ ಮಾಹಿತಿಯನ್ನು ನೀಡಿದರು. ಪುರಸಭಾ ಸದಸ್ಯರಾದ ಪುರಂದರ ದೇವಾಡಿಗರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷೆತೆ ಇದ್ದ ಪುರಸಭಾ ಸದಸ್ಯರಾದ ಶಕುಂತಲಾ ದೇವಾಡಿಗರವರು ಕಾರ್ಯಕ್ರಮದ ಆಯೋಜನೆ ಹಾಗೂ ಯಶಸ್ಸಿನ ಬಗ್ಗೆ ಸಂತೋಷ ವ್ಯಕ್ತಪಡಿಸಿ ಶುಭ ಹಾರೈಸಿದರು. ಇನ್ನರ್ ವೀಲ್ ಕ್ಲಬ್ ವತಿಯಿಂದ ಆಗಮಿಸಿದ ಎಲ್ಲಾ ತಾಯಂದಿರಿಗೆ ಪ್ರೋತ್ಸಾಹದಾಯಕ ಸ್ಮರಣಿಕೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ಅನಿತಾ ಪೃಥ್ವಿರಾಜ್, ಸಂಯೋಜಕಿ ಸುಜಾತ ಜೈನ್, ಶಾಲಿನಿ ನಾಯಕ್, ಪ್ರಕಾಶಿನಿ ಹೆಗ್ಡೆ, ಸುಜಯ ವೇದ ಕುಮಾರ್, ರತ್ನ ಪರಾಡ್ಕರ್, ವೀಣಾ ಜೈನ್, ಸ್ವಾತಿ ಬೋರ್ಕರ್ ಉಪಸ್ಥಿತರಿದ್ದರು. ಹಿರಿಯ ಮೇಲ್ವಿಚಾರಕಿ ಕಾತ್ಯಾಯಿನಿ ಶಾಲಾ ಸಹ ಶಿಕ್ಷಕಿ ಪ್ಲಾವಿಯಾ ಅಂಗನವಾಡಿ ಕಾರ್ಯಕರ್ತೆಯರಾದ ಸುಮತಿ, ವಿಜಯ, ಹೇಮಾವತಿ, ನಿರ್ಮಲ, ಪ್ರಿಯದರ್ಶಿನಿ ಎಸ್ ಜೈನ್, ವಿದ್ಯಾ, ಸಹಾಯಕಿ ಮಂಜವ್ವ, ಆರೋಗ್ಯ ಇಲಾಖೆಯ ಸಿಬ್ಬಂದಿ ಅನ್ನಪೂರ್ಣ ಬಾಲ ವಿಕಾಸ ಸಮಿತಿ ಸದಸ್ಯರು, ತಾಯಂದಿರು, ಪುಟಾಣಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಮೇಲ್ವಿಚಾರಕಿಯಾದ ಕಾತ್ಯಾಯಿನಿಯವರು ಎಲ್ಲರನ್ನು ಸ್ವಾಗತಿಸಿ ಪ್ರಿಯದರ್ಶಿನಿ ಎಸ್ ಜೈನ್ ನಿರೂಪಿಸಿ, ಸುಮತಿ ಧನ್ಯವಾದವಿತ್ತರು.

ದಕ್ಷಿಣ ಭಾರತ ಜೈನ ಸಭಾ ಸಾಂಗ್ಲಿ ಇದರ ಹುಬ್ಬಳ್ಳಿ ವಿಭಾಗೀಯ ನೂತನ ಪದಾಧಿಕಾರಿಗಳು

Article Image

ದಕ್ಷಿಣ ಭಾರತ ಜೈನ ಸಭಾ ಸಾಂಗ್ಲಿ ಇದರ ಹುಬ್ಬಳ್ಳಿ ವಿಭಾಗೀಯ ನೂತನ ಪದಾಧಿಕಾರಿಗಳು

ದಕ್ಷಿಣ ಭಾರತ ಜೈನ ಸಭೆ ಸಾಂಗ್ಲಿ ಇದು ಜೈನ ಸಮುದಾಯದ ಅತ್ಯಂತ ಪ್ರತಿಷ್ಠಿತ ಮತ್ತು ಬಹು ರಾಜ್ಯಗಳ ಜೈನರ ಪ್ರಾತಿನಿಧಿಕ ಸಂಸ್ಥೆ ಎಂದೇ ಕರೆಯಲ್ಪಡುವ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿವಿಧ ರೀತಿಯಲಿ ಸೇವೆಸಲ್ಲಿಸುತ್ತಿರುವ ಶತಮಾನದ ಇತಿಹಾಸ ಹೊಂದಿರುವ ಒಂದು ಬೃಹತ್ ಸಂಸ್ಥೆ. ಈ ಸಂಸ್ಥೆಯು ಹುಬ್ಬಳ್ಳಿ ವಿಭಾಗೀಯ ಆಡಳಿತ ಮಂಡಳಿಯನ್ನು ಹೊಂದಿದೆ. ಹುಬ್ಬಳ್ಳಿಯಲ್ಲಿ ದಿಗಂಬರ ಜೈನ ಬೋರ್ಡಿಂಗ ಶಾಖೆಯ ಮೂಲಕ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿಕೊಂಡದ್ದು ಇದಕ್ಕಾಗಿ ನೂತನವಾಗಿ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ತ್ರೈವಾರ್ಷಿಕ ಅಧಿವೇಶನದಲ್ಲಿ ನಡೆಯಿತು. ಈ ವಿಭಾಗೀಯ ಪದಾಧಿಕಾರಿಗಲ್ಲಿ ಟ್ರಸ್ಟಿಯಾಗಿ ಹುಬ್ಬಳ್ಳಿ ನಗರದ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಆರ್. ಟಿ. ಅಣ್ಣಿಗೇರಿ, ಉಪಾಧ್ಯಕ್ಷರಾಗಿ ನವಲಗುಂದದ ಸಮಾಜದ ಮುಖಂಡರಾದ ಬಾಹುಬಲಿ ಬಸ್ತಿ, ಮಹಾಮಂತ್ರಿಯಾಗಿ ಹುಬ್ಬಳ್ಳಿಯ ಪ್ರಸಿದ್ದ ವ್ಯಾಪಾರೋದ್ಯಮಿ ಭರತರಾಜ ಆರ್ ಬೀಳಗಿ, ಮಹಿಳಾ ಮಹಾಮಂತ್ರಿಯಾಗಿ ಹಿರಿಯ ಧರ್ಮಾನುರಾಗಿ ಹಿರಿಯ ಶ್ರಾವಕಿ ಪಂಕಜಾ ಎಮ್. ಸೂಜಿ ಇವರು ಆಯ್ಕೆಯಾಗಿದ್ದಾರೆ. ಎಸ್. ಆರ್. ಮಲ್ಲಸಮುದ್ರ

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

Article Image

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಆಗಸ್ಟ್ 03 ರಂದು ಸುಳ್ಯ ದಲ್ಲಿ ನಡೆದಿದ್ದು, ಸಾಹಿತ್ಯ ಕೃಷಿಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ ನೂಜಿಬಾಳ್ತಿಲದ ಧರಣೇoದ್ರ ಇಂದ್ರ ಮತ್ತು ಮಂಜುಳಾರವರ ಸುಪುತ್ರರಾಗಿರುತ್ತಾರೆ.

ರಾಜಸ್ಥಾನದ, ಜೈಪುರ: ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಲಾಸ್ಯರಾಜ್

Article Image

ರಾಜಸ್ಥಾನದ, ಜೈಪುರ: ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಲಾಸ್ಯರಾಜ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿನಿಯಾದ ಲಾಸ್ಯರಾಜ್ ಇವಳು ರಾಜಸ್ಥಾನದ ಜೈಪುರದಲ್ಲಿ ನಡೆದ ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾಳೆ. ಇವಳು ವೀರವನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್. ಬಿ. ನರೇಂದ್ರ ಕುಮಾರ್ ಇವರ ಮೊಮ್ಮಗಳು ಹಾಗೂ ಸಿದ್ಧಾಂತ್ ಕೀರ್ತಿರಾಜ್ ಮತ್ತು ಸೌಭಾಗ್ಯ ಇವರ ಪುತ್ರಿ. ಇವರಿಗೆ ಎಸ್. ಡಿ.ಎಂ ಶಿಕ್ಷಣ ಸಂಸ್ಥೆಗಳ ಕ್ರೀಡಾ ಕಾರ್ಯದರ್ಶಿಗಳು ಹಾಗೂ ವಾಲಿಬಾಲ್ ತರಬೇತುದಾರರಾದ ರಮೇಶ್ ಹೆಚ್ ಇವರು ಸಹಕರಿಸಿ ಮಾರ್ಗದರ್ಶನವನ್ನು ನೀಡಿದರು.

ನವನಗರ ಸೇವಾ ಸಂಘಕ್ಕೆ ಕಾರ್ಯಧ್ಯಕ್ಷರ ನೇಮಕ

Article Image

ನವನಗರ ಸೇವಾ ಸಂಘಕ್ಕೆ ಕಾರ್ಯಧ್ಯಕ್ಷರ ನೇಮಕ

ಹುಬ್ಬಳ್ಳಿ ನವನಗರದ ಅಲ್ಪಸಂಖ್ಯಾತ ಜೈನ ಸೇವಾ ಸಂಘದ ಕಾರ್ಯಧ್ಯಕ್ಷರಾಗಿ ಅಶೋಕ ಯೋಗಪ್ಪನವರ ಇವರನ್ನು ಸಂಘದ ಅಧ್ಯಕ್ಷರಾದ ಶಾಂತರಾಜ ಮಲ್ಲಸಮುದ್ರ ಇವರು ನೇಮಕ ಮಾಡಿದ್ದಾರೆ. ಇತ್ತೀಚೆಗೆ ನಡೆದ ಸಂಘದ ವಾರ್ಷಿಕ ಸರ್ವಸಾದಾರಣ ಸಭೆಯಲ್ಲಿ ಸರ್ವನುಮತದಿಂದ ಇವರನ್ನು ಆಯ್ಕೆ ಮಾಡಲಾಗಿದೆ. ಅಶೋಕ ಯೋಗಪ್ಪನವರ ಇವರು ಎರಡು ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ 37 ವರ್ಷ ದಕ್ಷ ಪ್ರಾಮಾಣಿಕವಾಗಿ ಸುದೀರ್ಘ ಸೇವೆ ಸಲ್ಲಿಸಿ ಸಹಾಯಕ ನಿರ್ದೇಶಕರಾಗಿ ವಯೋನಿವೃತ್ತಿ ಹೊಂದಿದರು. ಕಳೆದ 12 ವರ್ಷಗಳಿಂದ ಸಮಾಜದ ಎಲ್ಲ ಕಾರ್ಯಗಳಲ್ಲಿ ಸಂಘದ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದು ಧಾರ್ಮಿಕ ಚಟುವಟಿಕೆಯಲ್ಲಿ ಕ್ರೀಯಾಶೀಲವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಎಸ್ ಆರ್ ಮಲ್ಲಸಮುದ್ರ

ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ವಯೋನಿವೃತಿ

Article Image

ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ವಯೋನಿವೃತಿ

ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು. ‌ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ವಹಿಸಿದ್ದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಇವರು ಆಗಮಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ. ರವಿಕುಮಾರ್, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್, ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ, ಡಾ| ಸಂತೋಷ್ ಗೌಡ, ಡಾ| ಯತೀಶ್, ಡಾ| ವಿನಯ್ ಕುಮಾರ್, ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ, ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು., ಜಾನುವಾರು ಅಧಿಕಾರಿಗಳವರಾದ ನಾಗಶಯನ, ಪ್ರಶಾಂತ್ ಕುಮಾರ್ ಮತ್ತು ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು.

ರಾಜರತ್ನ ಕೆ. ನಿಧನ

Article Image

ರಾಜರತ್ನ ಕೆ. ನಿಧನ

ಧಾರ್ಮಿಕ ಮುಖಂಡ, ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಕೊಡಂಗೆ ಮನೆ, ಹಿರಿಯ ಮುತ್ಸದಿ ಶ್ರೀ ರಾಜರತ್ನ ಕೆ (74), ಇವರು 2025ನೇ ಜುಲೈ 24 ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ರಾಜೇಂದ್ರ ಜೈನ್ ಮತ್ತು ಸೊಸೆ, ಪುತ್ರಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಹಾಗೂ ಅಳಿಯ ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮಾನ್ಯರು ಬಂಟ್ವಾಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಮ್ಯಾನೇಜರ್ ಆಗಿ ಸುಮಾರು 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ್ದರು. ಸಮಾಜದ ಎಲ್ಲ ವರ್ಗದ ಜನರ ಧಾರ್ಮಿಕ, ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ ಪ್ರೀತಿಪಾತ್ರರಾಗಿ ಜನಾನುರಾಗಿಯಾಗಿದ್ದರು. ಬಾಳ್ತಿಲ ಗ್ರಾಮದ ಆದರ್ಶ ಪ್ರಗತಿಪರ ಕೃಷಿಕರಾಗಿ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿಯೂ ಹಲವಾರು ಜನಪರ ಕಾಳಜಿಯಿಂದ ಸೇವೆ ಸಲ್ಲಿಸಿದ ಅವರು ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ಟ್ರಸ್ಟಿಯಾಗಿದ್ದರು. ಜೈನ್ ಮಿಲನ್, ಪಂಚಕಲ್ಯಾಣದಂತಹ ಕಾರ್ಯಕ್ರಮಗಳಲ್ಲಿ ಪ್ರೇರಕರಾಗಿ ಕಾರ್ಯನಿರ್ವಹಿಸಿದ್ದರು.

ಮಹಿಳೆಯರ ಸೇವಾ ಸಾಧನೆ ಸ್ತುತ್ಯರ್ಹ- ಅನಿತಾ ಸುರೇಂದ್ರ ಕುಮಾರ್

Article Image

ಮಹಿಳೆಯರ ಸೇವಾ ಸಾಧನೆ ಸ್ತುತ್ಯರ್ಹ- ಅನಿತಾ ಸುರೇಂದ್ರ ಕುಮಾರ್

ಮೂಡುಬಿದಿರೆ: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಮತ್ತು ಸಾಧನೆಯ ಮೂಲಕ ಸ್ತುತ್ಯರ್ಹ ಕಾರ್ಯ ಮಾಡುತ್ತಿದ್ದಾರೆ. ಇಂತಹ ಸೇವೆ, ಸಾಧನೆಗಳು ನಿರಂತರ ಮುಂದುವರಿಯಲಿ ಎಂದು ಭಾರತೀಯ ಜೈನ್ ಮಿಲನ್ ನ ಉಪಾಧ್ಯಕ್ಷೆಯೂ ಆಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ನುಡಿದರು. ಜು. 21ರಂದು ಸಂಜೆ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆದ ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನೂತನ ಅಧ್ಯಕ್ಷೆ ನ್ಯಾಯವಾದಿ ಶ್ವೇತಾ ಜೈನ್, ಕಾರ್ಯದರ್ಶಿ ಅನಿತಾ ಪಿ. ಶೆಟ್ಟಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಮೂಡುಬಿದಿರೆಯ ಇನ್ನರ್ ವೀಲ್ ಕ್ಲಬ್ ಕಳೆದ 35 ವರ್ಷಗಳಿಂದ ಗೈದಿರುವ ಸೇವೆ ಸಾಧನೆಗಳನ್ನು ಗಮನಿಸುತ್ತಾ ಬಂದಿದ್ದೇನೆ. ವಿದ್ಯಾಗಿರಿ, ನಿಶ್ಮಿತಾ ಟವರ್ ಬಳಿಯ ಬಸ್ ತಂಗುದಾಣ, ಇನ್ನರ್ ವೀಲ್ ಕ್ಲಬ್ ವೃತ್ತಗಳು ಮೂಡುಬಿದಿರೆಯಲ್ಲಿ ಕ್ಲಬ್ ಹಮ್ಮಿಕೊಂಡಿರುವ ಸೇವೆಯ ಪ್ರತೀಕವಾಗಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕ್ಲಬ್‌ನ ಎಲ್ಲಾ ಹಿರಿಯ ಸದಸ್ಯೆಯರು ಅಭಿನಂದನೀಯರು ಎಂದು ನುಡಿದರು. ಇನ್ನರ್ ವೀಲ್ ಕ್ಲಬ್ ಜಿಲ್ಲಾ ಉಪಾಧ್ಯಕ್ಷೆ ರಜನಿ ಭಟ್ ಅವರು ಮಾತನಾಡಿ ಒಂದು ಹೆಜ್ಜೆ ಮುಂದೆ ಹೋಗಿ ಮಾದರಿ ನಾಯಕತ್ವ ಈ ವರ್ಷ ಇನ್ನರ್ ವೀಲ್ ಕ್ಲಬ್‌ನ ಧ್ಯೇಯವಾಕ್ಯವಾಗಿದ್ದು ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನ ನೂತನ ಅಧ್ಯಕ್ಷೆ ಶ್ವೇತಾ ಜೈನ್ ಒಂದು ಹೆಜ್ಜೆ ಮುಂದೆ ಹೋಗಿ 33 ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು ಶ್ಲಾಘಿಸಿ ಶುಭ ಕೋರಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಹಗಡೆಯವರು ಮಾತನಾಡಿ ಸ್ನೇಹ ಮತ್ತು ಸೇವೆ ಇನ್ನರ್ ವೀಲ್ ಕ್ಲಬ್‌ನ ಧ್ಯೇಯವಾಗಿದ್ದು ಈ ಆಶಯದೊಂದಿಗೆ ನಡೆಯುವ ಕ್ಲಬ್‌ನ ಎಲ್ಲಾ ಚಟುವಟಿಕೆಗಳಿಗೆ ಪೂರ್ಣ ಬೆಂಬಲ ನೀಡುವ ಭರವಸೆಯಿತ್ತರು. ನೂತನ ಅಧ್ಯಕ್ಷೆ ಶ್ವೇತಾ ಜೈನ್ ಅವರು ಮಾತನಾಡಿ ಕ್ಲಬ್‌ನ ಹಿರಿಯ ಸದಸ್ಯೆಯರಾದ ಶಾಲಿನಿ ನಾಯಕ್, ಜಯಶ್ರೀ ಅಮರನಾಥ ಶೆಟ್ಟಿ, ಪ್ರಕಾಶಿನಿ ಹೆಗ್ಡೆ ಮುಂತಾದವರ ಪಾರದರ್ಶಕ ನಾಯಕತ್ವ ತಮಗೆ ಮಾದರಿಯಾಗಿದ್ದು, ತಮ್ಮ ಕಕ್ಷಿದಾರರಿಗೆ ಯಾವುದೇ ತೊಂದರೆಯಾಗದಂತೆ ವಕೀಲ ವೃತ್ತಿಯನ್ನು ಮುಂದುವರಿಸಿ, ಕ್ಲಬ್‌ ಮುಖಾಂತರ ಹಮ್ಮಿಕೊಳ್ಳುವ ಎಲ್ಲಾ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಭರವಸೆಯಿತ್ತರು. ಸೇವಾ ಕಾರ್ಯಕ್ರಮದ ಅಂಗವಾಗಿ ದ್ವಿತೀಯ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ಕುಸುಮಾ ಅವರಿಗೆ ರೂ. 15 ಸಾವಿರ ಸಹಾಯಧನ, ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರೂ. 10 ಸಾವಿರದ ಪುಸ್ತಕಗಳು, ಮೂಡುಬಿದಿರೆ ಪ್ರೆಸ್ ಕ್ಲಬ್ ನೂತನ ಕಟ್ಟಡ ನಿರ್ಮಾಣಕ್ಕೆ ರೂ. 10 ಸಾವಿರ ಕೊಡುಗೆ ಹಾಗೂ ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ನ ಹಸಿ ಮತ್ತು ಒಣ ಕಸ ಸಂಗ್ರಹಣಾ ವ್ಯವಸ್ಥೆಗೆ ರೂ. 5ಸಾವಿರ ಮೌಲ್ಯದ ಸಾಮಗ್ರಿ ವಿತರಿಸಲಾಯಿತು. ಇನ್ನರ್ ವೀಲ್ ಕ್ಲಬ್ ಜಿಲ್ಲಾ ಸಂಪಾದಕಿ ದೀಪಾ ಭಂಡಾರಿ, ಐ.ಎಸ್.ಒ. ಸಹನಾ ಭಟ್ ಉಪಸ್ಥಿತರಿದ್ದರು. ಬಿಂದಿಯಾ ಶೆಟ್ಟಿ ಸ್ವಾಗತಿಸಿದರು. ಅನಿತಾ ಪ. ಶೆಟ್ಟಿ ಸೇವಾ ಕಾರ್ಯಗಳ ವಿವರ ನೀಡಿದರು. ಅಪೇಕ್ಷಾ ಪೂರ್ಣಚಂದ್ರ ಜೈನ್ ಪ್ರಾರ್ಥಿಸಿದರು. ತರೀನಾ ಪಿಂಟೋ ನಿರೂಪಿಸಿದ ಕಾರ್ಯಕ್ರಮದಲ್ಲಿ ನಿಶ್ಮಿತಾ ನಾಗರಾಜ್ ವಂದಿಸಿದರು.

ಮೂಡುಬಿದಿರೆ: ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ

Article Image

ಮೂಡುಬಿದಿರೆ: ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ

ಧರ್ಮ ಬಂಧು, ಶ್ರೀ ದಿಗಂಬರ ಜೈನ ಮಠದಲ್ಲಿ ಪ.ಪೂ ಆಚಾರ್ಯ ೧0೮ ಗುಲಾಬ್ ಭೂಷಣ ಮುನಿ ಮಹಾರಾಜ್ ಉಪಸ್ಥಿತಿ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾ ಚಾರ್ಯವರ್ಯ ಮಹಾಸ್ವಾಮೀಜಿ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ ಗಂಟೆ 2.00 ರಿಂದ 20.07.2025 ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ ಜರುಗಿತು. ಆಚಾರ್ಯರ ಉಪಸ್ಥಿತಿಯಲ್ಲಿ ಪ್ರವಚನ ನೀಡಿದ ಪ.ಪೂ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಪ್ರತಿ ಸಂಸಾರಿ ಜೀವಿಗಳು ದರ್ಶನಾವರಣಿಯ ಜ್ಞಾನಾವರಣಿಯ ವೇದನಿಯ, ಮೋಹನೀಯ, ಆಯು, ನಾಮ,ಗೋತ್ರ ಅಂತರಾಯ ಎಂಬ ಎಂಟು ಕರ್ಮಗಳನ್ನು ನಾಶ ಮಾಡ ದ ಹೊರತು ಮುಕ್ತಿ ಸಿಗದು ಮುಕ್ತಿ ಸಿಗಲು ಉತ್ತಮ ಮನಸ್ಸು ರತ್ನತ್ರಯ ಅವಲಂಬನೆ ಮುಖ್ಯ ಇಂದಿನ ಆರಾಧನೆ ಮೂಲ ಎಂಟು ಕರ್ಮ ದ ಭೇದ ಗಳಾದ 148 ಕರ್ಮ ನಾಶ ಪಡಿಸಿದ ಸಿದ್ದ ಭಗವಂತರ ಗುಣಗಾನ ಎಂದು ಆಶೀರ್ವಾದ ನೀಡಿದರು ಬಳಿಕ ಆಚಾರ್ಯರ ಸ್ವಾಮೀಜಿ, ಗಳ ಪಾದಪೂಜೆ, ಆರತಿ ಜರುಗಿತು.

ಡಾ. ಅಭೀಷ್ ಹೆಗ್ಡೆಯರಿಗೆ ಪ್ರಥಮ ಬಹುಮಾನ

Article Image

ಡಾ. ಅಭೀಷ್ ಹೆಗ್ಡೆಯರಿಗೆ ಪ್ರಥಮ ಬಹುಮಾನ

ಮಂಗಳೂರು: ಏಪ್ರಿಲ್ 2025ರಲ್ಲಿ ಕೋಲ್ಕತ್ತಾದಲ್ಲಿ ನಡೆದ ವಾರ್ಷಿಕ ಯುರೊಲಿಥಿಯಾಸಿಸ್ ಸಮ್ಮೇಳನದಲ್ಲಿ ಸಲಹೆಗಾರರ ರಸಪ್ರಶ್ನೆಯಲ್ಲಿ ಮಂಗಳೂರಿನ ಮೂತ್ರ ಶಾಸ್ತ್ರತಜ್ಞ ಡಾ. ಅಭೀಷ್ ಹೆಗ್ಡೆರವರು ಪ್ರಥಮ ಬಹುಮಾನ ಪಡೆದಿರುತ್ತಾರೆ. ಇವರು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀ ಯ ಕಾಲೇಜಿನ ಮೂತ್ರ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುತ್ತಾರೆ.

ಶ್ರೀ ದಿಗಂಬರ ಜೈನ ಮಠದಲ್ಲಿ ಕರ್ಮ ದಹನ ಆರಾಧನಾ ಕಾರ್ಯಕ್ರಮ

Article Image

ಶ್ರೀ ದಿಗಂಬರ ಜೈನ ಮಠದಲ್ಲಿ ಕರ್ಮ ದಹನ ಆರಾಧನಾ ಕಾರ್ಯಕ್ರಮ

ಮೂಡಬಿದಿರೆ: ಶ್ರೀ ದಿಗಂಬರ ಜೈನ ಮಠದಲ್ಲಿ ನಾಳೆ (ಜು.20) ಪ.ಪೂ ಆಚಾರ್ಯ ೧0೮ ಗುಲಾಬ್ ಭೂಷಣ ಮುನಿ ಮಹಾರಾಜ್‌ರ ಸಾನ್ನಿಧ್ಯದಲ್ಲಿ, ಜಗದ್ಗುರು ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಉಪಸ್ಥಿತಿಯಲ್ಲಿ ಮಧ್ಯಾಹ್ನ 2.00 ರಿಂದ ವಿಶೇಷ ಅಭಿಷೇಕ ಕರ್ಮ ದಹನ ಆರಾಧನೆ, ಆಚಾರ್ಯರ ಪ್ರವಚನ, ಸ್ವಾಮೀಜಿಗಳವರ ಆಶೀರ್ವಚನ ಆಚಾರ್ಯರ ಪಾದಪೂಜೆ, ಆರತಿ ಈ ಎಲ್ಲಾ ಕಾರ್ಯಕ್ರಮಗಳು ಜರುಗಲಿದೆ.

ವೇಣೂರು: ನೂತನ ಪದಾಧಿಕಾರಿಗಳ ಪದಗ್ರಹಣ

Article Image

ವೇಣೂರು: ನೂತನ ಪದಾಧಿಕಾರಿಗಳ ಪದಗ್ರಹಣ

ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಯಾತ್ರಿ ನಿವಾಸದಲ್ಲಿ ಜು. 13ರಂದು ನಡೆಯಿತು. ಸಭಾ ಕಾರ್ಯಕ್ರಮ ಪ್ರಾರಂಭವಾಗುವ ಮೊದಲು ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಭ| ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಮತ್ತು ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ಜಿನವಾಣಿ ಮಹಿಳಾ ಸಮಾಜದ ಅಧ್ಯಕ್ಷರಾದ ಸುಮನಾಜಿ ಡಿ. ಅಧಿಕಾರಿ ಹಾಗೂ ಮೂಡಬಿದ್ರಿ ಸರ್ವಮಂಗಳ ಜೈನ ಮಹಿಳಾ ಸಮಾಜದ ಅಧ್ಯಕ್ಷರಾದ ಮಂಜುಳಾ ಯಶೋಧರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಅಧ್ಯಕ್ಷರಾಗಿ ಸುನೀತಾ ಶಾಂತಿಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿ ದೀಪಶ್ರೀ ಜೈನ್ ಮತ್ತು ಕೋಶಾಧಿಕಾರಿಯಾಗಿ ಸುಕನ್ಯ ಬಲ್ಲಾಳ್ ಆಯ್ಕೆಯಾದರು. ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಮಹಿಳಾ ಒಕ್ಕೂಟದ ನಿರ್ದೇಶಕರಾದ ಸರೋಜ ಗುಣಪಾಲ್ ಜೈನ್ ವಹಿಸಿದ್ದರು. ಗೌರವ ಉಪಸ್ಥಿತಿಯನ್ನು ಬ್ರಾಹ್ಮಿ ಜೈನ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷರಾದ ಪ್ರಸನ್ನ ಆರ್. ಹೆಗ್ಡೆ ಹಾಗೂ ರಾಜೇಶ್ವರಿ ವಿ.ಅಧಿಕಾರಿ ವಹಿಸಿದ್ದರು. ವಾರ್ಷಿಕ ಗತ ಸಭೆಯ ವರದಿಯನ್ನು ನಿರ್ಗಮಿತ ಕಾರ್ಯದರ್ಶಿಗಳಾದ ಆಶಾಲತಾ ಮಂಡಿಸಿದರು. ಹಾಗೆಯೇ ನಿರ್ಗಮಿತ ಕೋಶಾಧಿಕಾರಿ ವಾಣಿ ವೃಷಭರಾಜ್ ಲೆಕ್ಕ ಪತ್ರ ಮಂಡಿಸಿದರು. ನಿರ್ಗಮಿತ ಅಧ್ಯಕ್ಷರಾದ ಸರೋಜಾ ಗುಣಪಾಲ್ ಜೈನ್ ನೂತನ ಅಧ್ಯಕ್ಷರಾದ ಸುನೀತಾ ಶಾಂತಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪದ್ಮಲತಾ ಮತ್ತು ಸುನೀತಾ ಬಲ್ಲಾಳ್ ಪ್ರಾರ್ಥಿಸಿ, ನಿರ್ಗಮಿತ ಜತೆ ಕಾರ್ಯದಶಿಗಳಾದ ಮಮತಾ ಪ್ರಸಾದ್ ಸ್ವಾಗತಿಸಿದರು. ನೂತನ ಕಾರ್ಯದರ್ಶಿಗಳಾದ ದೀಪಶ್ರೀ ಜೈನ್ ಧನ್ಯವಾದವಿತ್ತರು. ಸಂಧ್ಯಾ ಸುಕುಮಾರ್, ಆಶಾಲತಾ ಜೈನ್‌ರವರು ಕಾರ್ಯಕ್ರಮ ನಿರೂಪಿಸಿದರು.

ಸತ್ತೂರು, ಧಾರವಾಡ: ಡಾ. ನಿರಂಜನ್ ಕುಮಾರ್ ಅವರಿಗೆ ಜಾಗತಿಕ ಶ್ರೇಷ್ಠತೆ ಮತ್ತು ಗೌರವ ಪ್ರಧಾನ

Article Image

ಸತ್ತೂರು, ಧಾರವಾಡ: ಡಾ. ನಿರಂಜನ್ ಕುಮಾರ್ ಅವರಿಗೆ ಜಾಗತಿಕ ಶ್ರೇಷ್ಠತೆ ಮತ್ತು ಗೌರವ ಪ್ರಧಾನ

ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರಿಗೆ ಟೈಮ್ಸ್ ಆಫ್ ಇಂಡಿಯಾ ಮತ್ತು ವಿಜಯ ಕರ್ನಾಟಕ ಸಮೂಹ ಮಾಧ್ಯಮಗಳು, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಡಾ. ನಿರಂಜನ್ ಕುಮಾರ್ ಅವರ ಮಹತ್ವದ ಕೊಡುಗೆಗಳನ್ನು ಪರಿಗಣಿಸಿ ಜಾಗತಿಕ ಶ್ರೇಷ್ಠತೆಯ ಪ್ರಮಾಣಪತ್ರವನ್ನು ನೀಡಿ ಗೌರವಿಸಿವೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ ಅವರು ಡಾ. ನಿರಂಜನ್ ಕುಮಾರ್ ಅವರ ಪರವಾಗಿ ಈ ಪ್ರತಿಷ್ಠಿತ ಜಾಗತಿಕ ಶ್ರೇಷ್ಠತೆಯ ಗೌರವವನ್ನು ಮಲೇಷ್ಯಾದ ಮ್ಯಾಪ್ಸ್ ಗ್ರುಪ್‌ನ ಸಂಸ್ಥಾಪಕರಾದ ದಾತುಕ್ ಎಂ.ಎ.ಪಿ. ಸಿಗರನ್ ಮತ್ತು ಇತರ ಗಣ್ಯರಿಂದ ಸ್ವೀಕರಿಸಿದರು. ಈ ಪ್ರಶಸ್ತಿಯನ್ನು ಜುಲೈ 13, 2025 ರಂದು ಮಲೇಷ್ಯಾದ ಕೌಲಾಲಂಪುರದ ರಾಯಲ್ ಚುಲಾನ್‌ನಲ್ಲಿ ನಡೆದ ಕರ್ನಾಟಕ ಜಾಗತಿಕ ಸಾಧಕರ ಅಂತರರಾಷ್ಟ್ರೀಯ ಆಚರಣೆಯ ಸಂದರ್ಭದಲ್ಲಿ ನೀಡಲಾಯಿತು.

ತೋವಿನಕೆರೆ ಜೈನ ಮಂದಿರದಲ್ಲಿ ಚಾತುರ್ಮಾಸ

Article Image

ತೋವಿನಕೆರೆ ಜೈನ ಮಂದಿರದಲ್ಲಿ ಚಾತುರ್ಮಾಸ

ತೋವಿನಕೆರೆ: ಗ್ರಾಮದ ಚಂದ್ರನಾಥ ದೇವಾಲಯದಲ್ಲಿ ದಿಗಂಬರ ಜೈನ ಮುನಿ ಪಾಯಸಾಗರ ಮುನಿ ಚಾತುರ್ಮಾಸ ಕೈಗೊಂಡಿದ್ದು, ಇಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಜುಲೈ 14ರಿಂದ ಇಲ್ಲಿ ಚಾತುರ್ಮಾಸ ಆಚರಣೆ ಕೈಗೊಂಡಿದ್ದಾರೆ. ಅಕ್ಟೋಬರ್ 21ರವರೆಗೆ ಮುಂದುವರೆಯುತ್ತದೆ. 20ರಂದು ಮಂಗಳ ಕಳಸ ಪ್ರತಿಷ್ಠಾಪನೆ ಸಲುವಾಗಿ ವಿಶೇಷ ಸಮಾರಂಭ ದೇವಾಲಯದ ಅವರಣದಲ್ಲಿ ನಡೆಯುತ್ತದೆ ಎಂದು ಚಂದ್ರನಾಥ ಸ್ವಾಮಿ ದಿಗಂಬರ ಜೈನ ಸಂಘದವರು ತಿಳಿಸಿದ್ದಾರೆ. ಪ್ರತಿ ದಿನ ಸಂಜೆ 6ರಿಂದ ಮುನಿಗಳಿಂದ ಉಪನ್ಯಾಸ ಹಾಗೂ ಭಕ್ತರಿಂದ ಅರತಿ ಕಾರ್ಯಕ್ರಮ ನಡೆಯುತ್ತದೆ.

ರಚನಾ ಎಸ್.ಡಿ. ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Article Image

ರಚನಾ ಎಸ್.ಡಿ. ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಕಾರ್ಕಳ: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2025ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಡಾ.ಎನ್. ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 2017-2020 ನೇ ಸಾಲಿನ ಬಿಕಾಂ ವಿದ್ಯಾರ್ಥಿನಿ ರಚನಾ ಎಸ್.ಡಿ. ತೇರ್ಗಡೆಯಾಗಿದ್ದಾರೆ. ಇವರು ಮೂಡಬಿದ್ರೆಯ ಧೀರಜ್ ಎಸ್.ಎಮ್. ಮತ್ತು ಪದ್ಮಜಾ ಶೆಟ್ಟಿಯವರ ಪುತ್ರಿ, ರಚನಾ ಎಸ್.ಡಿ. ಮಂಗಳೂರಿನ ಕೆಎನ್‌ಡಿಸಿ ಆಂಡ್ ಅಸೋಸಿಯೆಶನ್‌ನಲ್ಲಿ ಸಿಎ ಪ್ರಾಯೋಗಿಕ ತರಬೇತಿಯನ್ನು ಪಡೆದಿರುತ್ತಾರೆ.

ತುಮಕೂರು ವಿಶ್ವ ವಿದ್ಯಾಲಯದಿಂದ ನಾಡೋಜ ಹಂಪಾನಾ ಸರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Article Image

ತುಮಕೂರು ವಿಶ್ವ ವಿದ್ಯಾಲಯದಿಂದ ನಾಡೋಜ ಹಂಪಾನಾ ಸರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಸಂಶೋಧಕ ನಾಡೋಜ, ಹಂ.ಪ ನಾಗರಾಜಯ್ಯ ಭಾಷಾ ವಿಜ್ಞಾನಿ, ಗ್ರಂಥ ಸಂಪಾದಕ, ಶ್ರೇಷ್ಠವಾಗ್ಮಿ, ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದವರು. 1936ರ ಅಕ್ಟೋಬರ್ 7ರಂದು ಕೋಲಾರ ಜಿಲ್ಲೆ (ಚಿಕ್ಕಬಳ್ಳಾಪುರ ಜಿಲ್ಲೆ) ಗೌರಿಬಿದನೂರು ತಾಲೂಕಿನ ಹಂಪಸಂದ್ರದಲ್ಲಿ ಜನನ. ಪ್ರಾಥಮಿಕ ವಿದ್ಯಾಭ್ಯಾಸ ಹಂಪಸಂದ್ರದಲ್ಲಿ, ಪ್ರೌಢ ಹಾಗೂ ಕಾಲೇಜು ಶಿಕ್ಷಣ ಗೌರಿಬಿದನೂರಿನಲ್ಲಿ, ಪಡೆದ ಇವರು ಕಲಾ ಪದವಿ ಹಾಗೂ ಕಲಾ ಸ್ನಾತಕೋತ್ತರ ಪದವಿಗಳನ್ನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪಡೆದರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು ಅಂದಿನಿಂದಲೂ ಮೈಸೂರು ದಸರಾ ಬಗ್ಗೆ ವಿಶೇಷವಾದ ಗೌರವ, ಪ್ರೀತಿ. ನಾಡೋಜ ಹಂ.ಪ ನಾಗರಾಜಯ್ಯ ಸಾಹಿತ್ಯ ಲೋಕದ ವಿಶೇಷ ಆಸ್ತಿ, ಹಂಪನ ಎಂಬ ಕಾವ್ಯ ನಾಮದಿಂದ ಹೆಸರಾಗಿರುವ ಇವರು, ನಾಡೋಜ ಎಂಬ ಕೀರ್ತಿ ಭಾಷಾ ವಿಜ್ಞಾನಿ, ಕಾದಂಬರಿ ಕಾರ, ಕಾವ್ಯ, ಇತಿಹಾಸ, ಭಾಷಾ ಶಾಸ್ತ್ರ, ಜೈನ ಸಾಹಿತ್ಯ ಇನ್ನಿತರ ಕೃತಿಗಳನ್ನು ರಚಿಸಿರುವವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಇವರ ಕೊಡುಗೆ ಅಪಾರ. (ಜೆ.ರಂಗನಾಥ ತುಮಕೂರು)

First Previous

Showing 2 of 8 pages

Next Last