Article Image

ಡಾ. ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

Article Image

ಡಾ. ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

ಮೈಸೂರಿನ ಆಚಾರ್ಯ ಗುರುಕುಲದ ಕುಲ ಸಚಿವರು ಹಾಗೂ ಖ್ಯಾತ ವಾಗ್ಮಿಗಳು ಶಿಕ್ಷಣ ತಜ್ಞರು, ವಿದ್ಯಾರ್ಥಿ ಪೋಷಕ ಆಪ್ತ ಸಮಾಲೋಚಕರಾದ ವಿದ್ಯಾ ವಾಚಸ್ಪತಿ ಡಾ ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಮಹಾತ್ಮ ಗಾಂಧಿ ನ್ಯಾಷನಲ್ ಸರ್ವೀಸ್ ಪುರಸ್ಕಾರ 2025 ಲಭಿಸಿದೆ.

ಶಾಂತಿನಾಥ ಪಾಯಪ್ಪ ಕುರನಿರವರು ಪಿ.ಎಸ್.‌ಐ ಆಗಿ ಆಯ್ಕೆ

Article Image

ಶಾಂತಿನಾಥ ಪಾಯಪ್ಪ ಕುರನಿರವರು ಪಿ.ಎಸ್.‌ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ನಿವಾಸಿಯಾಗಿರುವ ಶಾಂತಿನಾಥ ಪಾಯಪ್ಪ ಕುರನಿರವರು ಪೋಲೀಸ್‌ ಸಬ್ ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆ‌ಯ್ಕೆಯಾಗಿರುತ್ತಾರೆ. ಇವರು 132‌ ರಾಂಕ್ ಪಡೆದಿರುತ್ತಾರೆ. ಇವರು ಪಾಯಪ್ಪ ಕುರನಿ ಮತ್ತು ಸುಜಾತ ಕುರನಿ ದಂಪತಿಗಳ ಪುತ್ರ.

ರತ್ನತ್ರಯ ಜೈನ ಮಿಲನ್: ಮಾಸಿಕ ಸಭಾ ವರದಿ

Article Image

ರತ್ನತ್ರಯ ಜೈನ ಮಿಲನ್: ಮಾಸಿಕ ಸಭಾ ವರದಿ

ರತ್ನತ್ರಯ ಜೈನ ಮಿಲನ ಮಾಸಿಕ ಸಭೆಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವು ಅತಿಥಿಗಳಿಂದ ದೀಪಪ್ರಜ್ವಲನೆ ಪ್ರಾರಂಭಗೊಂಡು ಮುಖ್ಯ ಅತಿಥಿಗಳಾದ ನೀರಜ ನಾಗೇಂದ್ರ ಕುಮಾರ ದಶಲಕ್ಷಣಗಳ (ಕ್ಷಮಾ, ಮಾರ್ದವ, ಆರ್ಜವ, ಶೌಚ, ಸತ್ಯ, ಸಂಯಮ, ತಪ, ತ್ಯಾಗ, ಅಕಿಂಚನ್ಯ ಮತ್ತು ಬ್ರಹ್ಮಚರ್ಯ) ಮಹತ್ವದ ಕುರಿತು ಉಪನ್ಯಾಸ ನೀಡಿದರು. ಉಷಾರಾಣಿ ‘ಉತ್ತಮ ಕ್ಷಮಾ’ ಎಂಬ ವಿಷಯದ ಕುರಿತು ವಿಶದವಾದ ಭಾಷಣ ಮಾಡಿದರು. ಸುಖಾನಂದ ಅವರು, ನಡೆಯಲಿರುವ ಜಾತಿಗಣತಿಯ ಸಂದರ್ಭದಲ್ಲಿ ‘ಜೈನ - ದಿಗಂಬರ’ ಎಂದು ನಮೂದಿಸಲು ಸದಸ್ಯರಿಗೆ ಸಲಹೆ ನೀಡಿದರು. ಅನಂತಕುಮಾರಿ ಪದ್ಮರಾಜ್ ಅವರು ಆತ್ಮೀಯ ಸ್ವಾಗತ ಭಾಷಣ ಮಾಡಿದರು. ಬಳಿಕ ಮಾಲಿನಿ ಬ್ರಹ್ಮಣ್ಣ ರತ್ನತ್ರಯ ಮಿಲನದ ಉದ್ದೇಶವನ್ನು ವಿವರಿಸಿದರು. ಪೂರ್ಣಿಮಾ ಜಯಂತ್ ಪರ್ವವಾಚನ ಮಾಡಿದರು. ಸೆಪ್ಟೆಂಬರ್ ತಿಂಗಳಲ್ಲಿ ವಿವಾಹ ವಾರ್ಷಿಕೋತ್ಸವ ಹಾಗು ಹುಟ್ಟುಹಬ್ಬ ಆಚರಿಸಿಕೊಂಡ ಸದಸ್ಯರಿಗೆ ಮಹಾವೀರ ಕುಮಾರ್ ಅವರು ಹಾರ್ದಿಕ ಶುಭಾಶಯ ಕೋರಿದರು. ರಾಣಿ ಪ್ರಫುಲ್ಲ ಅವರು ಅತಿಥಿಗಳ ಪರಿಚಯ ಮಾಡಿಕೊಟ್ಟರು. ಬಳಿಕ ಸಭಾಧ್ಯಕ್ಷರಾದ ನವೀನ್ ಕುಮಾರ್ ಗುಬ್ಬಿ ಅಧ್ಯಕ್ಷರ ನುಡಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಆತಿಥ್ಯವನ್ನು ಪದ್ಮ ಸೂರಿಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಷಾರಾಣಿ, ನೀರಜ ನಾಗೇಂದ್ರ ಕುಮಾರ, ಪ್ರೇಮ, ಸುಖಾನಂದ ಹಾಗು ರತ್ನತ್ರಯ ಜೈನ ಮಿಲನ ಅಧ್ಯಕ್ಷರಾದ ನವೀನ್ ಕುಮಾರ್ ಗುಬ್ಬಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನಂತಕುಮಾರಿಯವರು ನಿರೂಪಿಸಿ. ಶ್ವೇತಾ ನವೀನ್ ಕುಮಾರ್ ಅವರ ವಂದನಾರ್ಪಣೆಯೊಂದಿಗೆ ಸಭೆ ಸಮಾರೋಪಗೊಂಡಿತು.

ಶಿಕ್ಷಕ ಲಕ್ಷ್ಮಣ್ ಮಲ್ಲಸಮುದ್ರಗೆ : ಶಿಕ್ಷಣ ಸೇವಾ ರತ್ನ ಪ್ರಶಸ್ತಿ

Article Image

ಶಿಕ್ಷಕ ಲಕ್ಷ್ಮಣ್ ಮಲ್ಲಸಮುದ್ರಗೆ : ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ಇವರು ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷನ್ ಇವರ ಜನ್ಮದಿನಾಚರಣೆ ಮತ್ತು ಶಿಕ್ಷಕ ದಿನಾಚರಣೆಯ ಅಂಗವಾಗಿ ಕೊಡಮಾಡುವ ರಾಜ್ಯಮಟ್ಟದ "ಶಿಕ್ಷಣ ಸೇವಾ ರತ್ನ" ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕ ಲಕ್ಷ್ಮಣ್ ಮಲ್ಲಸಮುದ್ರಇವರು ಭಾಜನರಾಗಿದ್ದಾರೆ. ಲಕ್ಷ್ಮಣ್ ರವರು ಕಳೆದ 35 ವರ್ಷಗಳಿಂದ ಶಿಕ್ಷಕರಾಗಿ ಅತ್ಯತ್ತಮ ಸೇವೆ ಸಲ್ಲಿಸುತ್ತಿದ್ದು ಸಹಸ್ರಾರು ಮಕ್ಕಳ ಬಾಳಲ್ಲಿ ಬೆಳಕಾಗಿದ್ದಾರೆ. ಇವರು ಮಕ್ಕಳಿಗೆ ಕೇವಲ ಅಕ್ಷರಗಳನ್ನು ಭೋದನೆ ಮಾಡಿಲ್ಲ ಅವರು ವಿದ್ಯಾರ್ಥಿಗಳಿಗೆ ಬದುಕುವ ರೀತಿಯನ್ನು ಕಲಿಸಿ ಅವರ ಭವಿಷ್ಯವನ್ನು ರೂಪಿಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರು ಕಾಡ ಕಲ್ಲನ್ನು ಸುಂದರ ಮೂರ್ತಿಯನ್ನಾಗಿ ಮಾಡುವ ಶಿಲ್ಪಿಗಳಿದ್ದಹಾಗೆ ಇದು ಶಿಕ್ಷಕರಿಂದ ಮಾತ್ರ ಸಾಧ್ಯ ಈ ಕಾರಣಕ್ಕೆ ಶಿಕ್ಷಕರ ಬಗ್ಗೆ ಅಪಾರವಾದ ಗೌರವ ಅಭಿಮಾನ ಇರುವದು ಸಹಜ. ಪ್ರಸ್ತುತ ಗದಗ ಜಿಲ್ಲೆ ಶಿರಹಟ್ಟಿ ತಾಲೂಕ ಲಕ್ಷ್ಮೇಶ್ವರ ದಲ್ಲಿ ಸೇವೆ ಸಲ್ಲಿಸುತ್ತಿದ್ದು, ಇಲ್ಲಿನ ಶಾಲೆಯೊಂದರಲ್ಲಿ ಸ್ಥಳೀಯರ ಸಹಕಾರ ಸಹಾಯದಿಂದ ಸುಂದರವಾದ ಕೊಠಡಿಗಳನ್ನು ನಿರ್ಮಿಸಿ ಅದರ ಆವರಣದಲ್ಲಿ ಕೈದೋಟ ಹೂವಿನ ಗಿಡಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಿದ್ದಾರೆ. ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು, ರಾಷ್ಟ್ರಪ್ರೇಮ, ಸಹಬಾಳ್ವೆ ಸಮಾನತೆಯ ತಿಳುವಳಿಕೆ ನೀಡಿ ಮಕ್ಕಳ ಮನದಲ್ಲಿ ಹೆಮ್ಮೆಯ ಶಿಕ್ಷಕರಾಗಿ ರುಪುಗೊಂಡಿದ್ದಾರೆ. ಇವರ ಅತ್ಯುತ್ತಮ ಸೇವೆಯನ್ನು ಗಮನಿಸಿದ ಕರ್ನಾಟಕ ಪ್ರೆಸ್ ಕ್ಲಬ್ ಪ್ರಸಕ್ತ ಸಾಲಿನಲ್ಲಿ "ಶಿಕ್ಷಣ ಸೇವಾ ರತ್ನ ಪ್ರಶಸ್ತಿ" ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ದಿನಾಂಕ 24-9-2025 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 3-30 ಕ್ಕೆ ಜರುಗಲಿದ್ದು ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರು, ಮಂತ್ರಿಗಳು ಶಾಸಕರು, ಸಂಸದರು ಗಣ್ಯರು ಭಾಗವಹಿಸಲಿದ್ದಾರೆ. ತನ್ನಿಮಿತ್ಯ ಇವರ ಸಂಕ್ಷಿಪ್ತ ಪರಿಚಯ : ದಿನಾಂಕ: 22-05-1966 ರಂದು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ಹರ್ಲಾಪುರ ಗ್ರಾಮದಲ್ಲಿ ರಾಮಣ್ಣ ಮತ್ತು ಸಾವಿತ್ರಮ್ಮ ದಂಪತಿಗಳ ನಾಲ್ಕು ಮಕ್ಕಳಲ್ಲಿ ಕೊನೆಯವರಾಗಿ ಜನಿಸಿದರು. (ಜೈನ ಸಮಾಜದ ಗಣ್ಯರೂ, ಹಿರಿಯ ಬರಹಗಾರರು ಸಾಮಾಜಿಕ ಕಾರ್ಯಕರ್ತರು ಆದ ಶ್ರೀ ಶಾಂತರಾಜ ಮಲ್ಲಸಮುದ್ರ ಇವರು ಇವರ ಹಿರಿಯ ಸಹೋದರ). ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ, ಮಾಧ್ಯಮಿಕ ಶಿಕ್ಷಣ, ಕಾಲೇಜ್ ಶಿಕ್ಷಣ ಹಾಗೂ ಶಿಕ್ಷಕ ತರಬೇತಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ಪಟ್ಟಣದಲ್ಲಿ ಮುಗಿಸಿದರು. ಹಾಸನ ಜಿಲ್ಲೆ ಶ್ರವಣಬೆಳಗೊಳದ ಶ್ರೀಮಠವು ನಡೆಸುವ ಶ್ರೀ ಅಂಬಿಕಾ ಶಾಲೆಯಲ್ಲಿ ಶಿಕ್ಷಕ ವೃತ್ತಿ ಪ್ರಾರಂಭಿಸಿ ಇಲ್ಲಿ 10-06-1990 ರಿಂದ 04-01-1999 ರ ವರೆಗೆ ಇಲ್ಲಿ ಸೇವೆ ಸಲ್ಲಿಸಿದ್ದಾರೆ. ನಂತರ 1999ರಲ್ಲಿ ಹಾಸನ ಜಿಲ್ಲೆಯ ಶಿಕ್ಷಣ ಇಲಾಖೆಯಲ್ಲಿ ಸರಕಾರಿ ಶಾಲಾ ಶಿಕ್ಷಕರಾಗಿ ನಿಯುಕ್ತಿಗೊಂಡು ದಿನಾಂಕ 05.01.1999 ರಿಂದ 07-07-2000 ರವರೆಗೆ ಸ .ಹಿ. ಪ್ರಾಥಮಿಕ ಶಾಲೆ ಬಿ ಹೊನ್ನೆನಹಳ್ಳಿ ಹೋಂ.ಬಾಗೂರು. ತಾಲೂಕು ಚನ್ನರಾಯಪಟ್ಟಣ ಇಲ್ಲಿ ಸೇವೆ ನಂತರ 08.07.2000 ರಿಂದ 07.03.2003 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಿ ಹೊನ್ನೇನಹಳ್ಳಿ ಬೆಕ್ಕ ಹೋಬಳಿ ಕ್ಲಸ್ಟರ್ ಶ್ರವಣಬೆಳಗೊಳ ಜಿಲ್ಲಾ ಹಾಸನ ಇಲ್ಲಿಗೆ ವರ್ಗಾವಣೆ ಗೊಂಡರು. ಮುಂದೆ ಹಾಸನ ಜಿಲ್ಲೆಯಿಂದ ಗದಗ ಜಿಲ್ಲೆಗೆ ವರ್ಗಾವಣೆಗೊಂದು ದಿ. 08.03.2003 ರಿಂದ 18.06.2008 ರವರೆಗೆ ಸರ್ಕಾರಿ ಹಿರಿಯ ಗಂಡು ಮಕ್ಕಳ ಶಾಲೆ ಸೂರಣಗಿ ತಾಲೂಕು. ಶಿರಹಟ್ಟಿ ಜಿಲ್ಲಾ ಗದಗ ಇಲ್ಲಿ ನಂತರ 18.06.2008ರಿಂದ 03.09.2013ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆದರಹಳ್ಳಿ ತಾ. ಲಕ್ಷ್ಮೇಶ್ವರ ಜಿಲ್ಲೆ ಗದಗ ನಂತರ 04.09.2013ರಿಂದ ಇಲ್ಲಿಯವರೆಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಡಾಕ್ಟರ್ ಬಿ ಆರ್ ಅಂಬೇಡ್ಕರ್ ನಗರ ಲಕ್ಷ್ಮೇಶ್ವರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು ಸೇವೆ 35 ವರ್ಷಗಳ ಸುದೀರ್ಘ ಸೇವೆಯಲ್ಲಿ ಜೀವನದುದ್ದಕ್ಕೂ ಆದರ್ಶ ಮತ್ತು ಶಿಸ್ತು ಮೈಗೂಡಿಸಿಕೊಂಡ ಇವರು ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿ ಆದರ್ಶಪ್ರಾಯರಾಗಿದ್ದಾರೆ. ಇತರ ಸಾಮಾಜಿಕ ಚಟುವಟಿಕೆಗಳು: ಪ್ರತಿ ವರ್ಷ ದಸರಾ ಸಂಧರ್ಭದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನ ಲಕ್ಷ್ಮೇಶ್ವರದಲ್ಲಿ ಐದು ವರ್ಷದಿಂದ ಪುರಾಣ ಪ್ರವಚನ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಸುಮಾರು ಹತ್ತು ವರ್ಷದಿಂದ ಬಿ.ಎಲ್.ಓ. (ಬೂತ್ ಲೆವೆಲ್ ಆಫೀಸರ್) ಅಂತ ಕಂದಾಯ ಇಲಾಖೆಯ ಜೊತೆಗೆ ಅಂದರೆ ಹೊಸದಾಗಿ ಮತದಾರರನ್ನು ಮತ ಪಟ್ಟಿಗೆ ಸೇರಿಸುವುದು, ತಿದ್ದುಪಡೆ ಮಾಡುವುದು, ಬೇರೆ ಕಡೆ ವರ್ಗಾವಣೆ ಆದರೆ ವರ್ಗಾವಣೆ ಮಾಡುವುದು ಇತ್ಯಾದಿ ಶಿಕ್ಷಣ ಇಲಾಖೆಯ ಕೆಲಸದ ಜೊತೆಗೆ ಕಂದಾಯ ಇಲಾಖೆಯ ಕೆಲಸವನ್ನು ಕೂಡ ಮಾಡುವ ಮೂಲಕ ಎಲ್ಲಾ ಸರಕಾರಿ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ. ಏತನ್ಮದ್ಯ ದಿನಾಂಕ 15.05.1995 ರಂದು ಸ್ವಗ್ರಾಮದವರೇ ಆದ ಶಿಕ್ಷಕಿ ಸಾವಿತ್ರಿ ಇವರೊಂದಿಗೆ ವಿವಾಹವಾಗಿದ್ದು ಈ ಶಿಕ್ಷಕ ದಂಪತಿಗಳು ಒಂದೇ ಜಿಲ್ಲೆ ಯಲ್ಲಿ ಕಳೆದ ಕೆಲವು ವರ್ಷಗಳಿಂದ ಸೇವೆಯಲ್ಲಿದ್ದಾರೆ. ಇವರ ಸಾಧನೆಯ ಹಿಂದೆ ಇವರ ಪತ್ನಿಯ ಸಹಕಾರ ಪ್ರೋತ್ಸಾಹ ಬಹುಮಟ್ಟಿಗೆ ಕಾರಣವಾಗಿದೆ ಎನ್ನಬಹುದು. ಇವರಿಗೆ ಇಬ್ಬರು ಪುತ್ರರು ಇದ್ದು ಓರ್ವ ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಇನ್ನೊರ್ವ ವೈದ್ಯಕೀಯ ಶಿಕ್ಷಣ ಪಡೆಯಲು ಪ್ರವೇಶ ಪರೀಕ್ಷೆ ಬರುತ್ತಿದ್ದಾನೆ. ಇವರ ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿ ಇನ್ನೂ ಹಲವಾರು ಪ್ರಶಸ್ತಿ ಸಮ್ಮಾನಗಳು ಸಿಗಲಿ. ಶಾಂತರಾಜ ಮಲ್ಲಸಮುದ್ರ ಲೇಖಕರು

ಡಾ. ಅಜಿತಪ್ರಸಾದ ಇವರು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ

Article Image

ಡಾ. ಅಜಿತಪ್ರಸಾದ ಇವರು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ

ಕರ್ನಾಟಕ ವಿದ್ಯಾವರ್ಧಕ ಸಂಘವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರು ಮಹಾಸಾಧಕರಿಗೆ ಗೌರವ ಉಪಾಧ್ಯಕ್ಷರನ್ನಾಗಿ ನೇಮಿಸಿ ತನ್ನ ಘನತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಇವರಲ್ಲಿ ಪ್ರಮುಖರಾದ ಡಾ. ಅಜಿತಪ್ರಸಾದ ಇವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆ ಬೆಟ್ಟದಷ್ಟು. ಜೆ.ಎಸ್.ಎಸ್. ಸಂಸ್ಥೆಯ ಮೂಲಕ ಶ್ರೇಷ್ಠ ಗುಣಮಟ್ಟದ ಶಿಕ್ಷಣ ಕೊಡುವದಕ್ಕೆ ಅಪಾರವಾಗಿ ಶ್ರಮಿಸಿದ್ದಾರೆ. ಈಗಲೂ ಅದೇ ದಾರಿಯಲ್ಲಿ ಮುನ್ನಡೆದಿದ್ದಾರೆ. ನಮ್ಮ ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟಿನ ಗೌರವಾಧ್ಯಕ್ಷರಾದ ಇವರು ಸಾಹಿತ್ಯದ ಚಟುವಟಿಕೆಗಳನ್ನು ಅಭಿವೃದ್ಧಿ ಮಾಡುವಲ್ಲಿ ಸಲಹೆ ಮಾರ್ಗದರ್ಶನ ನೀಡುತ್ತ ಪ್ರೋತ್ಸಾಹಿಸುತ್ತಿದ್ದಾರೆ. ಪ್ರಸ್ತುತ 130 ವರ್ಷಗಳ ಇತಿಹಾಸ ಹೊಂದಿದ ಕರ್ನಾಟಕದ ಹೆಮ್ಮೆಯ ಮತ್ತು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ ಮಾಡಿ ಗೌರವಿಸಿದ್ದು ಸಮಾಜಕ್ಕೆ ಅವರ ಶಿಷ್ಯ ಬಳಗಕ್ಕೆ, ಅಭಿಮಾನಿಗಳಿಗೆ ಬಾರೀ ಸಂತೋಷವನ್ನುಂಟುಮಾಡಿದೆ. ಎಸ್. ಆರ್. ಮಲ್ಲಸಮುದ್ರ

ಮಂಜುನಾಥ ಕಡಹಟ್ಟಿರವರು ಪಿ.ಎಸ್.ಐ ಆಗಿ ಆಯ್ಕೆ

Article Image

ಮಂಜುನಾಥ ಕಡಹಟ್ಟಿರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ರಾಯಬಾಗ್‌ ತಾಲೂಕಿನ ಯಲ್ಪರಟ್ಟಿ ನಿವಾಸಿಯಾಗಿರುವ ಮಂಜುನಾಥ ಕಡಹಟ್ಟಿರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ಸುಲೋಚನ ಮತ್ತು ರಾಮಪ್ಪ ದಂಪತಿಗಳ ಪುತ್ರ.

ರೋಹಿತ್‌ ರಾಜಗೌಡ ಪಾಟೀಲರವರು ಪಿ.ಎಸ್.ಐ ಆಗಿ ಆಯ್ಕೆ

Article Image

ರೋಹಿತ್‌ ರಾಜಗೌಡ ಪಾಟೀಲರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ರಾಯಬಾಗ ತಾಲೂಕಿನ ಮೊರಬ ಗ್ರಾಮದ ನಿವಾಸಿಯಾಗಿರುವ ರೋಹಿತ್‌ ರಾಜಗೌಡ ಪಾಟೀಲ್‌ರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ರಾಜಗೌಡ ಪಾಟೀಲ ಮತ್ತು ಭಾರತಿ ರಾಜಗೌಡ ಪಾಟೀಲ ದಂಪತಿಗಳ ಪುತ್ರ.

ಅಮಿತ್‌ ಭಗವಂತ್‌ ಹರವಿರವರು ಪಿ.ಎಸ್.ಐ ಆಗಿ ಆಯ್ಕೆ

Article Image

ಅಮಿತ್‌ ಭಗವಂತ್‌ ಹರವಿರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ರಾಯಬಾಗ್ ತಾಲೂಕಿನ ಹಾರೊಗೇರಿ ನಿವಾಸಿಯಾಗಿರುವ ಅಮಿತ್‌ ಭಗವಂತ್‌ ಹರವಿರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ಭಗವಂತ್‌ ಹರವಿ ಮತ್ತು ಸುನಂದ ಹರವಿ ದಂಪತಿಗಳ ಪುತ್ರ.

ಅಭಿಷೇಕ್‌ ಅಣ್ಣಾಸಾಹೇಬ್‌ ಸುಲ್ತಾಣ್ಣವರ್‌ರವರು ಪಿ.ಎಸ್.ಐ ಆಗಿ ಆಯ್ಕೆ

Article Image

ಅಭಿಷೇಕ್‌ ಅಣ್ಣಾಸಾಹೇಬ್‌ ಸುಲ್ತಾಣ್ಣವರ್‌ರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ಚಿಕ್ಕೋಡಿ ತಾಲೂಕಿನ ಪಟ್ಟಣಕುಡಿ ನಿವಾಸಿಯಾಗಿರುವ ಅಭಿಷೇಕ್‌ ಅಣ್ಣಾಸಾಹೇಬ್‌ ಸುಲ್ತಾಣ್ಣವರ್‌ರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ಅಣ್ಣಾಸಾಹೇಬ್‌ ಮತ್ತು ಶೀಲಾ ದಂಪತಿಗಳ ಪುತ್ರ.

ಮೂಡುಬಿದಿರೆ: ಚೌಟರ ಅರಮನೆಯ ಉಷಾ ಜಯವೀರ್ ನಿಧನ

Article Image

ಮೂಡುಬಿದಿರೆ: ಚೌಟರ ಅರಮನೆಯ ಉಷಾ ಜಯವೀರ್ ನಿಧನ

ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಯ ದಿ. ಜಯವೀರ್ ಅವರ ಪತ್ನಿ ಮುಳಿಬೆಟ್ಟು ಮನೆತನದ ಉಷಾ ಜಯವೀರ್ (78ವ) ಅವರು ಸೆ.17ರಂದು ಸಾವಿರ ಕಂಬದ ಬಸದಿ ಬಳಿಯ ತಮ್ಮ ಮನೆಯಲ್ಲಿ ನಿಧನರಾದರು. ಇವರು ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

ಮೂಡುಬಿದಿರೆ: ಶ್ರೀ ಧವಲಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

Article Image

ಮೂಡುಬಿದಿರೆ: ಶ್ರೀ ಧವಲಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಶ್ರೀ ಧವಲಾ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಇನ್ನರ್ ವೀಲ್ ಕ್ಲಬ್‌ ಮೂಡುಬಿದಿರೆ, ಲಯನ್ಸ್ ಕ್ಲಬ್ ಮೂಡುಬಿದಿರೆ ಮತ್ತು ರೋಟರಿ ಕ್ಲಬ್‌ ಮೂಡುಬಿದಿರೆ ಟೆಂಪಲ್ ಟೌನ್‌ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಾಲೇಜಿನ ಎ.ವಿ. ಹಾಲ್‌ನಲ್ಲಿ ಸೆ. 17ರಂದು ಜರಗಿತು. ಶಿಬಿರವನ್ನು ಉದ್ಘಾಟಿಸಿದ ಡಿಜೆವಿವಿ ಸಂಘದ ಕಾರ್ಯದರ್ಶಿ ಅಬಿಜಿತ್ ಎಂ. ಶುಭ ಹಾರೈಸಿದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಜೈನ್ ಅವರು ಮಾತನಾಡಿ ಎಷ್ಟೇ ಹಣವಿದ್ದರೂ ರಕ್ತದ ಉತ್ಪಾದನೆ ಸಾಧ್ಯವಿಲ್ಲ. ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ರಕ್ತದ ಅವಶ್ಯಕತೆಯನ್ನು ಅರಿತು ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದೆ ಬರಬೇಕಾಗಿರುವುದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದರು. ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆಯವರು ಮಾತನಾಡಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಇಂದು ಎಲ್ಲಾ ಕಡೆ ಕಾಣಿಸುತ್ತಿದ್ದು ಆಸ್ಪತ್ರೆ ಸೇರಿರುವ ವ್ಯಕ್ತಿ ಬದುಕಿ ಉಳಿದು ಬರಬೇಕಾದರೆ ರಕ್ತದ ಅಗತ್ಯವಿದೆ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಾರ್ಶ್ವನಾಥ ಅಜ್ರಿಯವರು ಮಾತನಾಡಿ ರಕ್ತದಾನಿ ಒಬ್ಬ ಸೈಲೆಂಟ್ ಹೀರೋ, ಯಾಕೆಂದರೆ ತಾನು ನೀಡಿರುವ ರಕ್ತ ಯಾರಿಗೆ ಸೇರುತ್ತದೆ ಎಂಬುದೂ ಆತನಿಗೆ ತಿಳಿದಿರುವುದಿಲ್ಲ. ಅಂತೆಯೇ ವೈಯಕ್ತಿಕ ಲಾಭ, ಅಭಿಲಾಷೆಗಳೂ ರಕ್ತದಾನದ ಸಂದರ್ಭ ಆತನಲ್ಲಿ ಇರುವುದಿಲ್ಲ ಎಂದರು. ಟೆಂಪಲ್ ಟೌನ್‌ ರೋಟರಿ ಅಧ್ಯಕ್ಷ ಹರೀಶ್ ಎಂ.ಕೆ., ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ವೆನ್ಲಾಕ್ ಆಸ್ಪತ್ರೆಯ ಬ್ಲಡ್‌ ಬ್ಯಾಂಕ್‌ನ ವಿದ್ಯಾ, ಆಂಟನಿ, ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಖಾದರ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮೂರೂ ಕ್ಲಬ್‌ಗಳ ಕಾರ್ಯದರ್ಶಿ ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎನ್ನೆಸ್ಸೆಸ್ ಅಧಿಕಾರಿ ಮಲ್ಲಿಕಾ ರಾವ್ ಸ್ವಾಗತಿಸಿದರು. ಶ್ರೇಯಾ ನಿರೂಪಿಸಿದ ಕಾರ್ಯಕ್ರಮದಲ್ಲಿ ರಶ್ಮಿ ವಂದಿಸಿದರು.

ತೌಳವ ಇಂದ್ರ ಸಮಾಜ(ರಿ)ದಿಂದ ಧರ್ಮಸ್ಥಳದಲ್ಲಿ ಶಾಂತಿ ಚಕ್ರ ಆರಾಧನೆ ಮತ್ತು ಲಕ್ಷಾಧಿಕ ಜಾಪ್ಯಮಂತ್ರ ಪಠನೆ

Article Image

ತೌಳವ ಇಂದ್ರ ಸಮಾಜ(ರಿ)ದಿಂದ ಧರ್ಮಸ್ಥಳದಲ್ಲಿ ಶಾಂತಿ ಚಕ್ರ ಆರಾಧನೆ ಮತ್ತು ಲಕ್ಷಾಧಿಕ ಜಾಪ್ಯಮಂತ್ರ ಪಠನೆ

ತೌಳವ ಇಂದ್ರ ಸಮಾಜದ ಸದಸ್ಯರಿಂದ ಲೋಕ ಶಾಂತ್ಯರ್ಥವಾಗಿ ಧರ್ಮಸ್ಥಳದ ಭ l ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶಾಂತಿ ಚಕ್ರ ಆರಾಧನೆ, ಸಾಮೂಹಿಕ ಜಾಪ್ಯಾ ಮಂತ್ರ ಹಾಗೂ ಪೂಜಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಬೆಳಗ್ಗೆ 7 ಗಂಟೆಗೆ ಆರಾಧನಾ ಪೂಜಾ ಕಾರ್ಯಕ್ರಮಗಳು ಪ್ರಾರಂಭಗೊಂಡವು,ತದನಂತರ ಲಕ್ಷಾಧೀಕ ಶಾಂತಿ ಮಂತ್ರ ಪಠಣ ಕಾರ್ಯ ಸಾಮೂಹಿಕವಾಗಿ ಮಾಡಲಾಯಿತು. ನೆರೆದಿರುವ ಸುಮಾರು ಇನ್ನೂರಕ್ಕೂ ಮಿಕ್ಕಿದ ಸಮಾಜ ಬಾಂಧವರುಗಳು ಬೇರೆಬೇರೆ ಊರುಗಳಿಂದ (ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ) ಬಂದು ಸಕ್ರಿಯವಾಗಿ ಭಾಗವಹಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಬೆಂಬಲವನ್ನು ನೀಡಿದರು. ನಂತರ ನಡೆದ ಸರಳ ಸಮಾರಂಭದಲ್ಲಿ ಸಮಾಜ ಬಾಂಧವರಿಂದ ಸನ್ಮಾನ ಹಾಗೂ ಬೇರೆ ಬೇರೆ ಬಸದಿಗಳ ಪ್ರಸಾದ ಸ್ವೀಕರಿಸಿ ಮಾತನಾಡಿದ ಪೂಜ್ಯ ಖಾವಂದರು "ಇಂದ್ರ ಸಮಾಜದವರು ಯಾವತ್ತೂ ನಮ್ಮೊಡನೆ ಇದ್ದು ಕ್ಷೇತ್ರದ ಎಲ್ಲಾ ಕಾರ್ಯಗಳಿಗೆ ಬೆಂಬಲ ನೀಡುತ್ತಾರೆ. ಹಿರಿಯರ ಪುರೋಹಿತರ ಆಶೀರ್ವಾದ ಸದಾ ಸಕಾರಾತ್ಮಕವಾಗಿರಲಿ" ಎಂದು ಎಲ್ಲರನ್ನು ಅಭಿನಂದಿಸಿದರು. ಹೇಮಾವತಿ ಹೆಗ್ಗಡೆಯವರು ಮತ್ತು ಹರ್ಷೇಂದ್ರ ಕುಮಾರ್ ಹೆಗ್ಗಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಬೆಳ್ತಂಗಡಿ ಬಸದಿಗೆ ಭೇಟಿ

Article Image

ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಬೆಳ್ತಂಗಡಿ ಬಸದಿಗೆ ಭೇಟಿ

ಉಜಿರೆ: ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸೆ. 21 ರಂದು ಭಾನುವಾರ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥ ಕ್ಷೇತ್ರಕ್ಕೆ ಆಗಮಿಸಲಿದ್ದು ಕೀರ್ತಿಶೇಷ ಕಿನ್ಯಮ್ಮ ಯಾನೆ ಗುಣವತಿಅಮ್ಮ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ 700 ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸಲಿದ್ದಾರೆ ಎಂದು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್ ತಿಳಿಸಿದ್ದಾರೆ. ಬಸದಿಯ ಆಡಳಿತ ಮೊಕ್ತೇಸರರಾಗಿದ್ದ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿಅಮ್ಮನವರ ವಾರ್ಷಿಕ ಸ್ಮರಣಾರ್ಥ ಪೂರ್ವಾಹ್ನ ಗಂಟೆ ಏಳರಿಂದ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ 108 ಕಲಶಾಭಿಷೇಕ, ಮೂರು ಬಸದಿಗಳಲ್ಲಿ ನವಕಲಶಾಭಿಷೇಕ, ಮಹಾಪೂಜೆ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ಅಲಂಕಾರಪೂಜೆ ನಡೆಯಲಿದೆ. ಅಪರಾಹ್ನ ಮೂರು ಗಂಟೆಯಿಂದ ಪೂಜ್ಯ ಸ್ವಾಮೀಜಿಯವರಿಂದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ನಡೆಯಲಿದೆ. ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್ ಅಧ್ಯಕ್ಷತೆ ವಹಿಸುವರು.

ಶಟಲ್ ಬ್ಯಾಡ್ಮಿಂಟನ್: ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ಮನಸ್ವಿ ಎಂ.ವಿ. ರಾಜ್ಯಮಟ್ಟಕ್ಕೆ ಆಯ್ಕೆ

Article Image

ಶಟಲ್ ಬ್ಯಾಡ್ಮಿಂಟನ್: ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ಮನಸ್ವಿ ಎಂ.ವಿ. ರಾಜ್ಯಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಮಂಗಳೂರಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪದವಿ ಪೂರ್ವ ಕಾಲೇಜಿನ ಮನಸ್ವಿ ಎಂ.ವಿ. ವಿನ್ನರ್ ಆಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮೈಸೂರಿನ ವಿಜಯನಗರದ ವೀರೇಂದ್ರ ಕುಮಾರ್‌ ಎಂ. ಎನ್‌. ಮತ್ತು ಅನುಪಮ ಎಸ್.‌ ಇವರ ಪುತ್ರಿ.

ಡಾ. ಅಪ್ಪಣ್ಣ ಹಂಜೆ ಅವರಿಗೆ ಈಶ್ವರಜ್ಞಾನ ಗುರುರತ್ನ ಪ್ರಶಸ್ತಿ

Article Image

ಡಾ. ಅಪ್ಪಣ್ಣ ಹಂಜೆ ಅವರಿಗೆ ಈಶ್ವರಜ್ಞಾನ ಗುರುರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ.) ಗದಗ ಗ್ರಾಮೀಣ ವಿಭಾಗ ಮತ್ತು ಹುಲಕೋಟಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ‘ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಹಾಗೂ ಎನ್.ಎಸ್.ಎಸ್. ಘಟಕದ ಸಂಯೋಜಕ ಡಾ. ಅಪ್ಪಣ್ಣ ಹಂಜೆ ಅವರನ್ನು ‘ಈಶ್ವರಜ್ಞಾನ ಗುರುರತ್ನ’ ಪ್ರಶಸ್ತಿಯಿಂದ ಗೌರವಿಸಿವೆ. ಇವರು 20 ವರ್ಷಗಳ ಬೋಧನಾ ಅನುಭವ ಹೊಂದಿದ್ದು, ಪ್ರಾಚೀನ ಸಮಾಜ, ಧರ್ಮ, ಇತಿಹಾಸ, ಸಂಸ್ಕೃತಿ, ವಾಸ್ತುಕಲೆ, ಶಿಲ್ಪಕಲೆ, ಶಾಸನಗಳು, ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ಸಂಶೋಧನ ಅಧ್ಯಯನ ಕೈಗೊಂಡು 12ಕ್ಕೂ ಹೆಚ್ಚು ಕೃತಿಗಳು, 150ಕ್ಕೂ ಹೆಚ್ಚು ಸಂಶೋಧನ ಲೇಖನಗಳನ್ನು ಪ್ರಕಟಿಸಿದ್ದಾರೆ. ಬೀದರ ಜಿಲ್ಲೆಯ ಜೈನ ಶಾಸನಗಳು, ಲಕ್ಕುಂಡಿಯ ಬಸದಿಗಳು, ಅಣ್ಣಿಗೇರಿಯ ಜೈನ ದೇಸಗತಿ ಮನೆತನ, ಬೆಳಗಾವಿಯ ಕಮಲ ಬಸದಿ, ಕರ್ನಾಟಕದ ಬಸದಿಗಳು, ಶಾಸನ ಸಾಹಿತ್ಯದಲ್ಲಿ ಜೀವನ ಮೌಲ್ಯ ಕೃತಿಗಳು ವಸ್ತುನಿಷ್ಠ ಸಂಶೋಧನ ಅಧ್ಯಯನ ಗೌರವಕ್ಕೆ ಪಾತ್ರವಾಗಿವೆ. ಡಾ. ಅಪ್ಪಣ್ಣ ಅವರು ಗದಗ ಜಿಲ್ಲೆಯ ದೇಸಗತಿ ಮನೆತನಗಳು, ದಾಖಲೆ ಪತ್ರಗಳ ಶೋಧನೆ ಮತ್ತು ಸಂರಕ್ಷಣೆ, ಕರ್ನಾಟಕ ಏಕೀಕರಣ ಚಳುವಳಿ ಹಾಗೂ ಐತಿಹಾಸಿಕ ದಾಖಲೆಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನ ಸೇರಿದಂತೆ ಹಲವು ವಿಚಾರ ಸಂಕಿರಣ ಮತ್ತು ಕಾರ್ಯಾಗಾರಗಳನ್ನು ಏರ್ಪಡಿಸಿದ್ದು, ಕೆಲವು ಸಂಸ್ಮರಣ ಕೃತಿಗಳು, ನಿಯತಕಾಲಿಕೆಗಳು, ಪತ್ರಿಕೆಗಳ ಸಂಪಾದಕ ಮಂಡಳಿ ಸದಸ್ಯರಾಗಿ, ಕರ್ನಾಟಕ ಪುರಾತತ್ವ ಮತ್ತು ಸಾಹಿತ್ಯ ಪರಿಷತ್ತು, ಗದಗ ಜಿಲ್ಲಾ ದಿಗಂಬರ ಜೈನ ಸಂಘ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಜೈನ ಸಾಹಿತ್ಯ ಸಂಸ್ಕೃತಿ ಅಧ್ಯಯನ ಕೇಂದ್ರಗಳ ಸಲಹಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಮಾನ್ಯತಾ ಕೇಂದ್ರ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಹಾಮಾನಾ ಸಂಶೋಧನ ಕೇಂದ್ರದಲ್ಲಿ ಪಿಎಚ್.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದಾರೆ. ಇವರು ಸಂಶೋಧನೆ, ಅಧ್ಯಯನ, ಪ್ರಕಟಣೆ ಕ್ಷೇತ್ರಗಳಲ್ಲಿ ಕೈಗೊಳ್ಳುತ್ತಿರುವ ಸಾಧನೆ, ಕೊಡುಗೆಗಳಿಗೆ ನಾಡಿನ ಹಲವು ಸಂಘ-ಸಂಸ್ಥೆಗಳಿಂದ ಶ್ರೀ ಹುಯಿಲಗೋಳ ನಾರಾಯಣರಾವ ಸ್ಮಾರಕ ಪ್ರಶಸ್ತಿ, ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ ಪ್ರಶಸ್ತಿ, ಆಚಾರ್ಯ 108 ಶ್ರೀ ಬಾಹುಬಲಿ ಕನ್ನಡ ಸಾಹಿತ್ಯ ಪ್ರಶಸ್ತಿ, ಜಯಲಕ್ಷ್ಮಮ್ಮ ಬಿ.ಎಸ್. ಸಣ್ಣಯ್ಯ ದತ್ತಿ ಪ್ರಶಸ್ತಿ, ಆದರ್ಶ ಜೈನ ಯುವ ಪ್ರಶಸ್ತಿ, ಜ್ಞಾನಶ್ರೀ ಪ್ರಶಸ್ತಿ, ಬಾಹುಬಲಿ ಸಿದ್ಧಶ್ರೀ ಪ್ರಶಸ್ತಿ, ಜ್ಞಾನೇಶ್ವರ ಆದರ್ಶ ಶಿಕ್ಷಕ ಪ್ರಶಸ್ತಿ, ಬೆಳ್ಳಿ ಸಂಭ್ರಮ ಪ್ರಶಸ್ತಿ, ಸಾಹಿತ್ಯ ಸಿರಿ ಪ್ರಶಸ್ತಿಗಳ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರನ್ನು ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಕಾರ್ಕಳ: ದತ್ತಿನಿಧಿ ಪ್ರಶಸ್ತಿ ಪ್ರದಾನ ಶ್ರೀ ಬಾಹುಬಲಿ ಶ್ರಾವಿಕಾಶ್ರಮ ದಾನಶಾಲೆ

Article Image

ಕಾರ್ಕಳ: ದತ್ತಿನಿಧಿ ಪ್ರಶಸ್ತಿ ಪ್ರದಾನ ಶ್ರೀ ಬಾಹುಬಲಿ ಶ್ರಾವಿಕಾಶ್ರಮ ದಾನಶಾಲೆ

2025 - 26ನೇ ಸಾಲಿನಲ್ಲಿ ಜರುಗಿದ ಧಾರ್ಮಿಕ ಪಾಠ ಪರೀಕ್ಷೆ, ಶೈಕ್ಷಣಿಕದಲ್ಲಿ ಉನ್ನತ ಸ್ಥಾನ ಹೊಂದಿದ, ನಾಯಕತ್ವ ಗುಣವುಳ್ಳ, ಹೊಂದಾಣಿಕೆ ಹೊಂದಿದ ಒಬ್ಬ ವಿದ್ಯಾರ್ಥಿನಿಯನ್ನು ಹೇಮಾವತಿ ಅಮ್ಮನವರ ನೇತೃತ್ವದ ಆಡಳಿತ ಮಂಡಳಿಯ ಸದಸ್ಯರು ಆಯ್ಕೆ ಮಾಡಿ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತದೆ.ಈ ಪ್ರಯುಕ್ತ ಶ್ರೀ ಬಾಹುಬಲಿ ಶ್ರಾವಿಕಾಶ್ರಮ ದಾನ ಶಾಲೆ, ಕಾರ್ಕಳ ಇಲ್ಲಿಯ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಪದ್ಮಮಾಲಿನಿ ಕೆ.ಎ., ಇಡಕಿಣಿ, ಕಳಸ ಇವರಿಗೆ ಶ್ರವಣಬೆಳಗೊಳ ಪ.ಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಧತ್ತಿನಿಧಿ ಪ್ರಶಸ್ತಿ ನೀಡಲಾಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾದ ಅಜಿತ್ ಕುಮಾರ್ ಕೊಕ್ರಡಿ, ಆಶ್ರಮದ ಆಡಳಿತ ಮಂಡಳಿಯ ಮಾಲತಿ ವಸಂತ್ ರಾಜ್, ಸುಮಾಲಿನಿ ವಿಜಯ್ ಕುಮಾರ್ ಅಜ್ರಿ, ಕಾರ್ಯದರ್ಶಿಗಳಾದ ಶಿಶುಪಾಲ್ ಪುವಣಿ ಹಾಗೂ ಜಯಲಕ್ಷ್ಮಿ ಅಜಿತ್ ಕುಮಾರ್ ರವರು, ಕಾರ್ಕಳ ಜೈನಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬರವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ವೇದಿಕೆಯಲ್ಲಿರುವವರು ಪದ್ಮಮಾಲಿನಿಯವರಿಗೆ, ದತ್ತಿನಿಧಿ ಪ್ರಶಸ್ತಿ ಪತ್ರ, ಶಾಲು, ಹಾರ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಯಿತು. ಹಾಗೆಯೇ ದಶಲಕ್ಷಣ ಪರ್ವದ ಆರಂಭದಂದು ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ ದಾನಶಾಲೆ, ಕಾರ್ಕಳ ಇವರ ಪಾವನ ಸಾನಿಧ್ಯದಲ್ಲಿ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟನೆಗೊಂಡಿತು ಹಾಗೆಯೇ ಮಂಗಲ ಪ್ರವಚನವನ್ನು ದಯಪಾಲಿಸಿದರು. ಶೈಕ್ಷಣಿಕ ಮತ್ತು ಧಾರ್ಮಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪೂಜ್ಯ ಸ್ವಾಮೀಜಿಯವರಿಂದ ನೀಡಲಾಯಿತು ಈ ಸುಸಂದರ್ಭದಲ್ಲಿ ಪರಮಪೂಜ್ಯ 108 ಮುನಿಶ್ರೀ ಮಹಿಮಾ ಸಾಗರ ಮುನಿ ಮಹಾರಾಜರು ಮಕ್ಕಳ ಮೇಲಿನ ಅಭಿಮಾನದಿಂದ ಹತ್ತು ದಿನದ ಭೋಜನ ವ್ಯವಸ್ಥೆಯನ್ನು ಮಾಡಿಸಿರುತ್ತಾರೆ.

ದಿಗಂಬರ್ ಜೈನ್ ಮಹಾಸಮಿತಿ ದೆಹಲಿಯ ಕಾರ್ಯಾಧ್ಯಕ್ಷರ ಭೇಟಿ

Article Image

ದಿಗಂಬರ್ ಜೈನ್ ಮಹಾಸಮಿತಿ ದೆಹಲಿಯ ಕಾರ್ಯಾಧ್ಯಕ್ಷರ ಭೇಟಿ

ದಿಗಂಬರ್ ಜೈನ್ ಮಹಾಸಮಿತಿ, ದೆಹಲಿ ಇದರ ಕಾರ್ಯಾಧ್ಯಕ್ಷರು ಬಿಪಿನ್ ಸುಮಾರ್ ಜೈನ್ ಸರಫ್, ದಿನಾಂಕ 12.09.2025ನೇ ಶುಕ್ರವಾರ ಹಾಸನಕ್ಕೆ ಭೇಟಿ ನೀಡಿದರು. ಕಾರ್ಯಕ್ರಮವನ್ನು ಹಾಸನದ ದೆಹಲಿ ದಿಗಂಬರ ಜೈನ್ ಸಮಿತಿಯ ಸಂಚಾಲಕರಾದ ಹೆಚ್.ಎನ್‌., ಅಭಿನಂದನ್‌ರವರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಜೈನ ಮಹಾಸಮಿತಿಯ ಕಾರ್ಯಾಧ್ಯಕ್ಷರು ಸಮಿತಿಯು 50 ವರ್ಷಗಳ ಹಿಂದೆ 1976ರಲ್ಲಿ ಸ್ಥಾಪಿತವಾಗಿದ್ದು ಶ್ರೀ 108 ವಿದ್ಯಾನಂದ ಮುನಿಮಹರಾಜರ ಆಶೀರ್ವಾದದಿಂದ ಪ್ರಾರಂಭವಾಗಿರುತ್ತದೆ. ಸಮಿತಿಯ ಸಮನ್ವಯ ಸದ್ಭಾವನೆ ಮತ್ತು ಸಂಘಟನೆಯ ಪ್ರತಿಬಿಂಬವಾಗಿರುತ್ತದೆ. ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಜೈನ ಸಾಮಾಜಿಕ ಕಲ್ಯಾಣ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಗಳನ್ನು ಹಂಚಿಕೊಳ್ಳು ಸಮಾಜದ ಹಿತದೃಷ್ಠಿಯಿಂದ ಸರಪಳಿ ಸಧಿಸಬಹುದಾಗಿರುತ್ತದೆ. ಸಮಾಜದ ಬಡವರಿಗೆ, ಮಕ್ಕಳಿಗೆ, ಅವಶ್ಯಕತೆ ಇರುವ ಸವಲತ್ತುಗಳನ್ನು ಪೂರೈಸಲಾಗುತ್ತದೆ. ಹಾಸನದ ಜೈನ ಬಾಂಧವರು ಈ ಸಂಸ್ಥೆಯ ಅಜೀವ ಸದಸ್ಯತ್ವ ಪಡೆದುಕೊಳ್ಳಬೇಕೆಂದು ವಿನಂತಿಸಿದರು. ಹಾಸನ ಜೈನ ಸಂಘದ ಅಧ್ಯಕ್ಷರಾದ ಹೆಚ್‌.ಬಿ. ಶಾಂತೀಶ್, ಕರ್ನಾಟಕ ಜೈನ ಅಸೋಸಿಯೇಷನ್‌ ಹಾಸನದ ಪ್ರತಿನಿಧಿ ಹೆಚ್.ಬಿ.ನಾಗೇಂದ್ರಯ್ಯ, ಜೈನ ಸಹಕಾರ ಮಂಡಳಿಯ ಅಧ್ಯಕ್ಷರಾದ ಸುಕುಮಾ‌ ಮತ್ತು ಮಹಾವೀರ ಭವನದ ಅಧ್ಯಕ್ಷರಾದ ಎಂ. ಧನ್‌ ಪಾಲ್ ಮತ್ತು ಕಾಳಲಾದೇವಿ ಮಹಿಳಾ ಸಮಾಜದ ಅಧ್ಯಕ್ಷರಾದ ಸುಪ್ರಭ ಅಭಿನಂದನ್ ಇವರುಗಳು ಮಾತನಾಡಿ ಸಮಿತಿಯ ಸದಸ್ಯರಾಗಿ ಬೆಂಬಲಿಸುವುದಾಗಿ ತಿಳಿಸಿದರು. ಹಾಸನ ವಿಭಾಗಕ್ಕೆ ಹೆಚ್.ಎನ್. ಅಭಿನಂದನ್‌ ರವರು ಸಂಚಾಲಕ ಸಂರಕ್ಷಕರಾಗಿರುತ್ತಾರೆ ಎಂದು ಕಾರ್ಯಾಧ್ಯಕ್ಷರು ತಿಳಿಸಿದರು. ಹಾಸನದ ಬಾಹುಬಲಿ ಭವನದಲ್ಲಿ ಜೈನ ಸಮಾಜದ ಪ್ರಮುಖರು ಭಾಗವಹಿಸಿದ್ದರು. ಸಭೆಯು ರಂಜಿತ ಸಮಂತ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಸಂಚಾಲಕರಾದ ಅಭಿನಂದನ್‌ರವರು ಸಭೆಗೆ ಆಗಮಿಸಿದ್ದ ಅತಿಥಿಗಳು ಮತ್ತು ಗಣ್ಯರಿಗೆ ಸ್ವಾಗತವನ್ನು ಕೋರಿದರು. ಅಭಿನಂದನ್‌ರವರು ಆಗಮಿಸಿದ್ದ ಅತಿಥಿಗಳಿಗೆ ಗೌರವ ಸಮರ್ಪಿಸಿದರು. ವಂದನಾರ್ಪಣೆ ಮಾಡಿದರು.

ಕವಿ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನಕ್ಕೆ ರಾಷ್ಟ್ರೀಯ ಪುರಸ್ಕಾರ

Article Image

ಕವಿ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನಕ್ಕೆ ರಾಷ್ಟ್ರೀಯ ಪುರಸ್ಕಾರ

ಕವಿ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನಕ್ಕೆ 2025 ನೇ ಸಾಲಿನ ರಾಷ್ಟ್ರ ಮಟ್ಟದ “ಕಾವ್ಯ ಸಿರಿ” ಪ್ರಶಸ್ತಿಗೆ ಆಯ್ಕೆಯಾಗಿದೆ. ಹೈದರಬಾದಿನ ರಾಷ್ಟ್ರೀಯ ಕನ್ನಡ ಸಾಹಿತ್ಯ ಬಳಗ ಪ್ರತಿ ವರ್ಷ ಕನ್ನಡ ಕವನ ಸಂಕಲನಗಳಿಗೆ ರಾಷ್ಟ್ರ ಮಟ್ಟದ ಕಾವ್ಯ ಸಿರಿ ಪ್ರಶಸ್ತಿಯನ್ನು ನೀಡಲಾಗುತ್ತ ಬಂದಿದ್ದು ಈ ವರ್ಷ ಸಾಗರದ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ, ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪ್ರಸಾದ್ ಅವರು ತಿಳಿಸಿದ್ದಾರೆ. ಸಾಗರದ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಟಿ.ಸ್ವಾಮಿಯವರು ಕಳೆದ ಹಲವು ದಶಕಗಳ ಕಾಲ ಶೈಕ್ಷಣಿಕ ಸಾಹಿತ್ಯ, ಸಾಂಸ್ಕೃತಿಕ ಸಾಮಾಜಿಕ ಕ್ಷೇತ್ರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿರುವ ಇವರು, ಈಗಾಗಲೇ 30 ಕ್ಕೂ ಹೆಚ್ಚಿನ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿರುವ ಇವರು ಸ್ಥಳೀಯ ಜಿಲ್ಲೆ ರಾಜ್ಯ ಮಟ್ಟದ ಅನೇಕ ಪತ್ರಿಕೆಗಳಲ್ಲಿ ತಮ್ಮ ಬರಹಗಳನ್ನು ಪ್ರಕಟಿಸಿದ್ದಾರೆ. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ವಿವಿಧ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಬಂದಿರುವ ಇವರು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದಾರೆ. ಸಾಂಸ್ಕೃತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಹಿತ್ಯ, ಜಾನಪದ ಸಾಹಿತ್ಯದಲ್ಲಿ ಇವರು ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರವರ್ಧನ್ ಜೈನ್ ಪ್ರಥಮ

Article Image

ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರವರ್ಧನ್ ಜೈನ್ ಪ್ರಥಮ

ಇತ್ತೀಚೆಗೆ ಮುಂಬೈನಲ್ಲಿ ನಡೆದ ಹೈರೋಕ್ಸ್ ದೇಹ ಸಧೃಢತೆಯ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಜೈನ ಸಮುದಾಯದ ಏಕೈಕ ಸ್ಪರ್ಧಿ ಪ್ರವರ್ಧನ್ ಜೈನ್ ರವರು ವಿಜಯಿಯಾಗಿದ್ದಾರೆ. ಈ ಸ್ಪರ್ಧೆಯು ಎಂಟು ಕಿ.ಮೀ. ಓಟ ಹಾಗೂ ಎಂಟು ವಿವಿಧ ಬಗೆಯ ದೈಹಿಕ ಸ್ಪರ್ಧೆಗಳನ್ನು ಒಳಗೊಂಡಿದ್ದು ಅತ್ಯಂತ ಕಡಿಮೆ ಸಮಯದಲ್ಲಿ ಪೂರೈಸುವ ಸ್ಪರ್ಧಿ ವಿಜೇತರಾಗುತ್ತಾರೆ. ಇವರು ಕುತ್ಲೂರು ಪದ್ಮಾಂಬಾ ನಿಲಯ ಪಾರ್ಶ್ವನಾಥ ಜೈನ್ ಹಾಗೂ ವಾಗೀಶ್ವರಿ ದಂಪತಿಗಳ ಪುತ್ರರಾಗಿದ್ದಾರೆ.

ಕಾರ್ಕಳ : ದಶಲಕ್ಷಣ ಪರ್ವ ಆಚರಣೆ

Article Image

ಕಾರ್ಕಳ : ದಶಲಕ್ಷಣ ಪರ್ವ ಆಚರಣೆ

ಕಾರ್ಕಳ ಹಿರಿಯಂಗಡಿ ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮದಲ್ಲಿ ದಿನಾಂಕ 28.08.2025 ನೇ ಗುರುವಾರದಿಂದ ದಿನಾಂಕ 06.09.2025 ನೇ ಶನಿವಾರದವರೆಗೆ ಪರಮ ಪೂಜ್ಯ 108 ಮುನಿಶ್ರೀ ಮಹಿಮಾಸಾಗರ ಮುನಿ ಮಹಾರಾಜರ ಆಶೀರ್ವಾದಪೂರ್ವಕ ಹಾಗೂ ಕಾರ್ಕಳ ದಾನಶಾಲಾ ಜೈನ ಮಠದ ರಾಜಗುರು ಧ್ಯಾನ ಯೋಗಿ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಶಲಕ್ಷಣ ಪರ್ವವನ್ನು ಶ್ರದ್ಧಾ ಭಕ್ತಿಯಿಂದ ಪ್ರತಿ ವರ್ಷದಂತೆ ಆಚರಿಸಲಾಯಿತು. ಉತ್ತಮ ಕ್ಷಮಾಧರ್ಮದಂದು ಯುವ ನ್ಯಾಯವಾದಿಗಳಾದ ಸುವೃತ್ ಕುಮಾರ್ ಹಾಗೂ ಸಮಾಜದ ಹಿರಿಯರು ದೀಪ ಬೆಳಗಿಸುವುದರ ಮೂಲಕ 10 ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರತಿದಿನ ಸಂಜೆ ಜಿನಪೂಜೆ, ಭಜನೆ, ಮಹಾಮಂಗಳಾರತಿ, ವಿದ್ವಾಂಸರಿಂದ ಉಪನ್ಯಾಸ, ತತ್ವಾರ್ಥ ಸೂತ್ರವಾಚನ, ನಿಲಯದ ವಿದ್ಯಾರ್ಥಿಗಳಿಂದ ಭಾಷಣ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕೊನೆಯ ದಿನವಾದ ದಿನಾಂಕ 06.09.2025 ನೇ ಶನಿವಾರ ಉತ್ತಮ ಬ್ರಹ್ಮಚರ್ಯ ಧರ್ಮದ ಆಚರಣೆಯಂದು ಆಶ್ರಮದ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಎಂಕೆ ವಿಜಯಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕೋಶಾಧಿಕಾರಿಗಳಾದ ಎಸ್ ಅನಂತರಾಜ್ ಪೂವಣಿ ಮತ್ತು ಆಶ್ರಮದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸನ್ಮತ್ ಕುಮಾರ್ ನಾರಾವಿ ಇವರ ಗೌರವ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಆರಂಭದಲ್ಲಿ ಯೋಗರಾಜ್ ಶಾಸ್ತ್ರಿ ಇವರು ಸ್ವಾಗತಿಸಿದರು. ಪರ್ವದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನಡೆಸಲಾದ ಧಾರ್ಮಿಕ ಮತ್ತು ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಆಶ್ರಮದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ವತಿಯಿಂದ 7 ನೇ, 10 ನೇ ಮತ್ತು ದ್ವಿತೀಯ ಪಿಯುಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪುರಸ್ಕರಿಸಲಾಯಿತು. ಧಾರ್ಮಿಕ ಗುರುಗಳಾದ ಯೋಗರಾಜ್ ಶಾಸ್ತ್ರಿ ಇವರು ತತ್ವಾರ್ಥಸೂತ್ರ ಪಠಿಸಿದರು. ವಿದ್ಯಾರ್ಥಿ ಹಿತೇಶ್ ಪ್ರಾರ್ಥಿಸಿದರು. ಅನ್ವಿತ್ ಎಚ್ ಎಸ್ ವರದಿ ಮಂಡಿಸಿದರು. ಶ್ರವಣ್ ವಿದ್ಯಾರ್ಥಿ ಭಾಷಣ ನೆರವೇರಿಸಿದರು. ಆಶ್ರಮದ ಮೇಲ್ವಿಚಾರಕರಾದ ವೀರೇಂದ್ರ ಜೈನ್ ಧನ್ಯವಾದ ಸಮರ್ಪಿಸಿದರು. ತೀರ್ಥನ್ ಇವರು ಕಾರ್ಯಕ್ರಮ ನಿರೂಪಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Article Image

ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ : ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ದಿ. ನೇಮಿರಾಜು ಜೈನ್ ಮತ್ತು ಪುಷ್ಪಾವತಿ ದಂಪತಿಗಳ ಎರಡನೇ ಪುತ್ರಿಯಾಗಿ ಜನಿಸಿದ ಆರತಿ ಕುಮಾರಿ ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಬಳಿಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಹಂಬಲದೊಂದಿಗೆ 1994ರಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗಾಧಿಬನೂರು ಎಂಬಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುತ್ತಾರೆ. 1997ರಲ್ಲಿ ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವಂತಹ ವಿದ್ಯಾಸಂಸ್ಥೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಟ್ಟಡೆಗೆ ಕರ್ತವ್ಯಕ್ಕೆ ಹಾಜರಾಗಿರುತಗತ್ತಾರೆ. ವಿದ್ಯಾರ್ಥಿ ಸಾಗರದಲ್ಲಿ ಪ್ರೀತಿ ಆದರ್ಶಗಳ ನೆಚ್ಚಿನ ಶಿಕ್ಷಕಿಯಾಗಿ, ಶಿಕ್ಷಕ ವೃಂದದವರ ಮಧ್ಯೆ ಆತ್ಮೀಯ ಸಹೋದ್ಯೋಗಿಯಾಗಿ, ಇಲಾಖಾಧಿಕಾರಿಗಳ ಮೆಚ್ಚುಗೆಯ ನೌಕರಳಾಗಿ, ಊರ ವಿದ್ಯಾಭಿಮಾನಿಗಳ ಪೋಷಕರ ಮನಗೆದ್ದು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುತ್ತಾರೆ. ಇವರು ಸರಕಾರಿ ನೌಕರರ ಸಂಘದಲ್ಲಿ ಪದಾಧಿಕಾರಿಯಾಗಿ 2 ಬಾರಿ ರಾಜ್ಯ ಪರಿಷತ್ ಸದಸ್ಯೆಯಾಗಿ ಪ್ರಸ್ತುತ ಕ್ರೀಡಾ ಮತ್ತು ಸಾಂಸ್ಕೃತಿಕ ಸದಸ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್-2 ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸತ್ತಿದ್ದಾರೆ. ಇವರು ವಲಯ ಮಟ್ಟದ ಪಂದ್ಯಾಟ ಹಾಗೂ ಕ್ರೀಡಾಕೂಟಕ್ಕೆ ನೋಡೆಲ್ ಆಗಿ, ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸದಸ್ಯರಾಗಿ ಹಾಗೂ ಉಪಾಧ್ಯಕ್ಷರಾಗಿ 2 ಬಾರಿ ಸೇವೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ 2 ಬಾರಿ ರಾಜ್ಯ ಪರಿಷತ್ ಸದಸ್ಯರಾಗಿ ಸೇವೆ, ಭಾರತ ಸೇವಾದಳ ಜಿಲ್ಲಾ ಸಮಿತಿಯಲ್ಲಿ ಸದಸ್ಯರಾಗಿ ಪ್ರಸ್ತುತ ಕಾರ್ಯದರ್ಶಿಯಾಗಿ, ಭಾರತ ಸೇವಾದಳದ ತಾಲೂಕು ಮಟ್ಟದ ರ‍್ಯಾಲಿ ಹಾಗೂ ಜಿಲ್ಲಾ ಮಟ್ಟದ ರ‍್ಯಾಲಿಯ ಸಂಯೋಜಕರಾಗಿಯೂ ಸೇವೆ ಸಲ್ಲಿಸಯತ್ತಿದ್ದಾರೆ. ಇವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸುದೀರ್ಘ 31 ವರ್ಷಗಳ ಸೇವೆ, ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗಿದೆ.

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

Article Image

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

ತೌಳವ ಇಂದ್ರ ಸಮಾಜ(ರಿ). ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಇತ್ತೀಚೆಗೆ ಮೂಡಬಿದಿರೆ ಶ್ರೀ ಧವಳ ಕಾಲೇಜ್ ನ ಸಭಾಂಗಣದಲ್ಲಿ ನಡೆಯಿತು. "2009ರಲ್ಲಿ ಸಮಾಜ ಮುಖಿ ಚಿಂತನೆಯ ಇಂದ್ರ ಬಂಧುಗಳ ಶ್ರಮದಲ್ಲಿ,ಸಮಸ್ತ ಇಂದ್ರ ವರ್ಗದವರನ್ನು ಒಗ್ಗೂಡಿಸಿ, ಸಂಘ ಸ್ಥಾಪನೆಯಾಯಿತು ಮತ್ತು ಕಳೆದ ಹಲವಾರು ವರ್ಷಗಳಲ್ಲಿ ಸಂಘಟನೆಯು ಪೂಜಾಪಾಠಗಳ ತರಬೇತಿ, ಹಿರಿಯ ಪುರೋಹಿತರ ಸನ್ಮಾನ, ವಿದ್ಯಾರ್ಥಿ ಪುರಸ್ಕಾರ, ಕ್ರೀಡಾಕೂಟ, ಸಾಮೂಹಿಕ ಮೃತ್ಯುಂಜಯ ಆರಾಧನೆ, ಸಾಧಕರ ಸನ್ಮಾನ, ವಿದ್ಯಾರ್ಥಿ ವೇತನ ನೀಡಿಕೆ, ಆಟಿಕೂಟ, ಪ್ರವಾಸ, ಉಚಿತ ಆರೋಗ್ಯ ಶಿಬಿರ, ಸಾಮೂಹಿಕ ಉಪನಯನ ಸಂಸ್ಕಾರ ಹಾಗೂ ವೃತೋಪದೇಶಗಳು ಮುಂತಾದ ಪರಸ್ಪರ ಬಾಂಧವ್ಯ ಸಂವರ್ಧನೆಯ ಕೆಲಸ ಕಾರ್ಯಗಳನ್ನು ಮಾಡಿದೆ." ಎಂದು ಪ್ರಾಸ್ತಾವಿಕ ಭಾಷಣವನ್ನು ಸಂಘದ ಉಪಾಧ್ಯಕ್ಷರಾದ ಪ್ರೊ.ಅಕ್ಷಯ ಕುಮಾರ್ ಮಳಲಿಯವರು ಬಳಿಕ ಅತಿಥಿಗಳನ್ನೂ ಸ್ವಾಗತಿಸಿದರು. ಹಿರಿಯ ಪುರೋಹಿತರಾದ ಮಿತ್ರಸೇನ ಇಂದ್ರ ಮುಂಡಾಜೆ,ನೆರೆಂಕಿ ಸುಭಾಶ್ಚಂದ್ರ ಇಂದ್ರ, ಆನಂತರಾಜ ಇಂದ್ರ ಬಂಟ್ವಾಳ, ಹಾಗೂ ಶ್ಯಾಮರಾಜ ಇಂದ್ರ, ನೇರೆಂಕಿ ಅವರುಗಳನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಎಂ. ಜ್ಞಾನಚಂದ್ರ ಇಂದ್ರರವರು ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲರನ್ನು ಸ್ಮರಿಸುತ್ತಾ, ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ಪ್ರತಿ ವರ್ಷದಂತೆ ಎಸ್ ಎಸ್ ಎಲ್ ಸಿ ಮತ್ತು ಪಿ. ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಶಸ್ತ ವರ್ಷದಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು. ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿ ವಿವಿಧ ಉನ್ನತ ಹುದ್ದೆಯನ್ನು ಅಲಂಕರಿಸಿರುವ ಸಮಾಜ ಬಾಂಧವರನ್ನು ಅಭಿನಂದಿಸಲಾಯಿತು. ಅನಂತರ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಕಾರ್ಯಕ್ರಮ ನಡೆಯಿತು. ಅರ್ಕಕೀರ್ತಿ ಇಂದ್ರರವರು ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷ ಧರಣೇಂದ್ರ ಇಂದ್ರರು ತಮ್ಮ ಮುಂದಿನ ಯೋಜನೆಗಳನ್ನು ಪ್ರಸ್ತಾಪಿಸಿದರು. ಕಾರ್ಯದರ್ಶಿ ಅಭಯ ಕುಮಾರ್ ಬಿ. ವಾರ್ಷಿಕ ವರದಿ ಓದಿದರು, ಸುವಿಧಿ ಇಂದ್ರ ಲೆಕ್ಕಪತ್ರ ಮಂಡಿಸಿದರು.ಮಹಾ ಸೇನಾ ಇಂದ್ರ ಪ್ರತಿಭಾ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು, ದಿವ್ಯಾ ವೀರೇಂದ್ರ ಶ್ರದ್ಧಾಂಜಲಿ ಅರ್ಪಣೆ ಮಾಡಿದರು. ಪ್ರಮೋದ್ ಕುಮಾರ್ ಅಭಿನಂದಿತರ ಪಟ್ಟಿ ಓದಿ ಕಾರ್ಯಕ್ರಮ ನಡೆಸಿಕೊಟ್ಟರು. ಕೋಶಾಧಿಕಾರಿ ವಿಜಯ ಕುಮಾರಿ ಇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿಶ್ಚಿತ ಪ್ರಾರ್ಥನೆ ಮಾಡಿದರು, ಹರಿಶ್ಚಂದ್ರ ಇಂದ್ರ ಕಾರ್ಯಕ್ರಮ ನಿರೂಪಿಸಿದರು. ಸುಜ್ಞಾನ ಇಂದ್ರ ಧನ್ಯವಾದ ಸಮರ್ಪಿಸಿದರು.

ಬಿ. ಪ್ರಮೋದ್ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

Article Image

ಬಿ. ಪ್ರಮೋದ್ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

ಬೆಂಗಳೂರು, ಆ. 30: ರಾ‌ಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾಮರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಹಾಸನ ಜಿಲ್ಲೆ ಸಕಲೇಶಪುರ ಉಪ-ವಿಭಾಗದ ಡಿವೈಎಸ್‌ಪಿ ಆಗಿರುವ ಬಿ. ಪ್ರಮೋದ್ ಕುಮಾರ್‌ರವರಿಗೆ ಮಾನ್ಯ ರಾ‌ಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ-ಗಣರಾಜ್ಯೋತ್ಸವ ದಿನಾಚರಣೆ-2023ನ್ನು ನೀಡಿ ಗೌರವಿಸಿರುತ್ತಾರೆ.

ಪಿ. ವೀರೇಂದ್ರ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

Article Image

ಪಿ. ವೀರೇಂದ್ರ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

ಬೆಂಗಳೂರು, ಆ. 30: ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾಮರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಬೆಂಗಳೂರು ಕೆಎಲ್‌ಎ ಡಿವೈಎಸ್‌ಪಿ ಆಗಿರುವ ಪಿ. ವೀರೇಂದ್ರ ಕುಮಾರ್‌ರವರಿಗೆ ಪೋಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ-ಗಣರಾಜ್ಯೋತ್ಸವ ದಿನಾಚರಣೆ-2023ನ್ನು ನೀಡಿ ಗೌರವಿಸಿರುತ್ತಾರೆ.

ಸಾವಿರ ಕಂಬದ ಬಸದಿಗೆ ಬಂದ ಐರಾವತ

Article Image

ಸಾವಿರ ಕಂಬದ ಬಸದಿಗೆ ಬಂದ ಐರಾವತ

ಮೂಡುಬಿದಿರೆ: ಪ್ರಾಣಿ ಪ್ರಿಯರ ಸಂಘಟನೆ "ಪೇಟಾ"ದ ಮುತುವರ್ಜಿಯಲ್ಲಿ ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಆಕೆಯ ಪುತ್ರಿ ರಾಶಾ ತಾದಾನಿ ಕೊಡುಗೆಯಾಗಿ ನೀಡಿದ "ಐರಾವತ" ಜೈನಕಾಶಿ ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಯ ಆವರಣಕ್ಕೆ ಶುಕ್ರವಾರ ಸೇರಿಕೊಂಡಿದೆ. ಧಾರ್ಮಿಕ ಕೇಂದ್ರಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಪಳಗಿಸಿದ ಆನೆಗಳನ್ನು ಬಳಸಿ ಅವುಗಳಿಗೆ ತನ್ನ ಕುಟುಂಬದೊಂದಿಗೆ ಕಾಡಿನ ಸಹಜ ಬದುಕನ್ನು ಕಸಿದುಕೊಂಡು ಹಿಂಸೆ ನೀಡಿದಂತಾಗುತ್ತದೆ ಎಂದು ಅದರ ವಿರುದ್ಧ ನೈಜ್ಯ ಆನೆಗಳನ್ನೇ ಹೋಲುವ ಮೆಕ್ಯಾನಿಕಲ್ ಆನೆಗಳನ್ನು ಪ್ರೋತ್ಸಾಹಿಸಿ ಎನ್ನುತ್ತಿರುವ ಪೇಟಾ ಇಂಡಿಯಾದ ಮುಂಬೈ ಮೂಲದ ಪ್ರೇರಣೆಯಿಂದ ಬಾಲಿವುಡ್ ತಾರಾ ಕುಟುಂಬದ ಕೊಡುಗೆಯಾಗಿ ಈ ಐರಾವತ ಒದಗಿ ಬಂದಿದೆ. ಜೈನಕಾಶಿಯಲ್ಲಿ ಚಾತುರ್ಮಾಸ ನಿರತ 108 ಗುಲಾಬ್ ಭೂಷಣ ಮುನಿ ಮಹಾರಾಜರು ನೂತನ ಐರಾವತವನ್ನು ಅನಾವರಣಗೊಳಿಸಿದರು. ಪಟ್ಟಾಭಿಷೇಕ ರಜತ ಮಹೋತ್ಸವ ಸಂಭ್ರಮದಲ್ಲಿರುವ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ , ಪಟ್ನಶೆಟ್ಟಿ ಸುಧೇಶ್ ಕುಮಾರ್, ಎಂ ಬಾಹುಬಲಿ ಪ್ರಸಾದ್, ಪೇಟಾ ಮುಂಬೈ ಘಟಕದ ಪದಾಧಿಕಾರಿಗಳಾದ ಅನುಷ್ಕಾ ಯಾದವ್, ಸುಧಾಕರ್ ರಾವ್ ಕರ್ನಾಲ್, ಶುಭಂ ಅಗರ್ವಾಲ್, ರೋಹನ್ ಸರ್ವಪ್ರಿಯ, ಮಹೆಕ್ ಜುನೇಜಾ ಸಹಿತ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. ದೇಶದಲ್ಲೇ ಮೊದಲ ಬಸದಿಗೆ ಐರಾವತ! ಐತಿಹಾಸಿಕ ಸಾವಿರ ಕಂಬದ ಬಸದಿಯಲ್ಲಿ ನೆಲೆ ಕಂಡಿರುವ ಮೆಕ್ಯಾನಿಕಲ್ ಆನೆ ಐರಾವತ ದೇಶದಲ್ಲೇ ಮೊದಲ ಬಾರಿಗೆ ಜೈನ ಬಸದಿಗೆ ಬಂದಂತಾಗಿದೆ. ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಮೊದಲ ಬಸದಿ ಎನ್ನುವ ಹಿರಿಮೆ ಸಾವಿರ ಕಂಬದ ಬಸದಿಗೆ ಲಭಿಸಿದೆ. ಪೇಟಾ ಧಾರ್ಮಿಕ ಸಂಸ್ಥೆಗಳಿಗೆ ಒದಗಿಸುತ್ತಿರುವ 12 ನೆಯ ಹಾಗೂ ಮಂಗಳೂರು ವಲಯಕ್ಕೆ ದೊರೆತ ಮೊದಲ ಐರಾವತ ಇದಾಗಿದೆ. ಮೂರು ಮೀಟರ್ ಎತ್ತರ 800 ಕೆಜಿ ಭಾರ ಈ ಮೆಕ್ಯಾನಿಕಲ್ ಐರಾವತವನ್ನು ರಬ್ಬರ್, ಫೈಬರ್, ಮೆಟಲ್, ಮೆಶ್, ಫೋಮ್, ಕಬ್ಬಿಣ ಹಾಗೂ ಐದು ಮೋಟಾರುಗಳ ನೆರವಿನಿಂದ ನಿರ್ಮಿಸಲಾಗಿದೆ. ವಿದ್ಯುತ್ ಸಂಪರ್ಕ ನೀಡಿ ಅದನ್ನು ನೈಜ್ಯ ಆನೆಯಂತೆ ಬಳಸಿಕೊಳ್ಳಲು ಸಾಧ್ಯವಿದೆ. ಚಕ್ರಗಳ ನೆರವಿನಿಂದ ರಸ್ತೆಯಲ್ಲೂ ಒಡಾಡಿಬಹುದಾಗಿದೆ. 2023ರಲ್ಲಿ ಇಂತಹ ಸಾಹಸಕ್ಕೆ ಮುಂದಾದ ಪೇಟಾ ದಕ್ಷಿಣ ಭಾರತದ ಹಲವೆಡೆ ಮೆಕ್ಯಾನಿಕಲ್ ಆನೆಗಳನ್ನು ಹಸ್ತಾಂತರಿಸಿದೆ.

ನ್ಯಾಯವಾದಿ ಶ್ವೇತಾ ಕೆ. ಅವರ ನೂತನ ಕಚೇರಿ ಉದ್ಘಾಟನೆ

Article Image

ನ್ಯಾಯವಾದಿ ಶ್ವೇತಾ ಕೆ. ಅವರ ನೂತನ ಕಚೇರಿ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ನ್ಯಾಯವಾದಿ ಮತ್ತು ನೋಟರಿ ಶ್ವೇತಾ ಕೆ. ಅವರ ನೂತನ ಕಚೇರಿಯು ಸ್ವರಾಜ್ಯ ಮೈದಾನದ ಮುಂಭಾಗದಲ್ಲಿರುವ ಕೋರ್ಟ್ ರಸ್ತೆಯ ಶೆಟ್ಟೀಸ್ ರಾಮಪ್ರಸಾದ್ ಕಾಂಪ್ಲೆಕ್ಸ್‌ನಲ್ಲಿ ಆ. 29ರಂದು ಅಪರಾಹ್ನ ಉದ್ಘಾಟನೆಗೊಂಡಿತು. ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯಕುಮಾರ್ ಅವರು ದೀಪ ಪ್ರಜ್ವಲನದ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ., ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ., ನ್ಯಾಯವಾದಿಗಳಾದ ಎಂ. ಆರ್. ಬಲ್ಲಾಳ್, ಕೆ.ಆರ್. ಪಂಡಿತ್, ದಿವಿಜೇಂದ್ರ, ಎಂ.ಎಸ್‌. ತಂತ್ರಿ, ಕಟ್ಟಡದ ಮಾಲೀಕ ಪಾಲಡ್ಕ ಹರಿಪ್ರಸಾದ್ ಶೆಟ್ಟಿ, ಹಿರಿಯ ಉದ್ಯಮಿ ಕೆ. ಶ್ರೀಪತಿ ಭಟ್, ಪ್ರಭಾತ್ ಸಿಲ್ಸ್‌ನ ಪ್ರಭಾಚಂದ್ರ ಜೈನ್‌, ರಾಜವರ್ಮ ಬೈಲಂಗಡಿ, ಟೆಂಪಲ್ ಟೌನ್ ರೋಟರಿ ಅಧ್ಯಕ್ಷ ಹರೀಶ್‌ ಎಂ.ಕೆ.. ನಿಕಟಪೂರ್ವ ಅಧ್ಯಕ್ಷ ಪೂರ್ಣಚಂದ್ರ ಜೈನ್‌ ಮತ್ತಿತರರು ಉಪಸ್ಥಿತರಿದ್ದರು. ನ್ಯಾಯವಾದಿ ಶ್ವೇತಾ ಕೆ. ಮತ್ತು ಪ್ರಮಯಿ ಅತಿಥಿಗಳನ್ನು ಗೌರವಿಸಿದರು. ಸಾಹಿಲ್ ಕಾರ್ಯಕ್ರಮ ನಿರೂಪಿಸಿದರು.

ದಶಲಕ್ಷಣ ಪರ್ವ

Article Image

ದಶಲಕ್ಷಣ ಪರ್ವ

ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ (ರಿ.) ಹಿರಿಯಂಗಡಿ, ಕಾರ್ಕಳದಲ್ಲಿ ದಿನಾಂಕ 28.08.2025ನೇ ಗುರುವಾರದಿಂದ 06.09.2025ನೇ ಶನಿವಾರದ ಪರ್ಯಂತ ಆಶ್ರಮದ ಜಿನ ಮಂದಿರದ ಪ್ರಾಂಗಣದಲ್ಲಿ ಪ್ರತಿನಿತ್ಯ ಸಂಜೆ ಗಂಟೆ 6.00ರಿಂದ ಪರಮಪೂಜ್ಯ 108 ಮುನಿಶ್ರೀ ಮಹಿಮಾಸಾಗರ ಮುನಿ ಮಹಾರಾಜರ ಆಶೀರ್ವಾದ ಪೂರ್ವಕ ಹಾಗೂ ಕಾರ್ಕಳ ಶ್ರೀ ಜೈನ ಮಠದ ರಾಜಗುರು ಧ್ಯಾನಯೋಗಿ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಶಲಕ್ಷಣ ಪರ್ವ ಸಮಾರಂಭವು ಪೂಜೆ, ಭಜನೆ ಉಪನ್ಯಾಸ, ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ವಿ.ಸೂ. ಈ ಪುಣ್ಯ ದಿನಗಳಲ್ಲಿ ತಾವು ನೀಡಿದ ಅಮೂಲ್ಯ ದಾನವನ್ನು ಸ್ವೀಕರಿಸಲಾಗುವುದು.

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Article Image

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ ಪರಂಪರೆ ಹಾಗೂ ಹೆಗ್ಗಡೆಯವರ ಬಹುಮುಖಿ ಸಮಾಜಸೇವಾ ಕಾರ್ಯಗಳನ್ನು ಬೆಂಬಲಿಸಿ ಸಕ್ರಿಯ ಸಹಕಾರ ನೀಡುವುದು ಸಮಗ್ರ ಜೈನಸಮಾಜದ ಕರ್ತವ್ಯವಾಗಿದೆ ಎಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಕಾರ್ಕಳ ಸೀಮೆಯ ಜೈನ ಬಾಂಧವರೊಂದಿಗೆ ಶನಿವಾರ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರನ್ನು ಗೌರವಿಸಿ ಶುಭ ಹಾರೈಸಿದರು. ಕೆಸರಾದ ನೀರನ್ನು ಮತ್ತೆ ತಿಳಿಯಾಗಿ ಪರಿಶುದ್ಧಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಪಪ್ರಚಾರ, ಆರೋಪಗಳಲೆಲ್ಲ ದೂರವಾಗಲಿ. ಹೆಗ್ಗಡೆಯವರಿಗೆ ಎಲ್ಲಾ ದೈವ-ದೇವರುಗಳು ದೀರ್ಘಾಯುರಾರೋಗ್ಯವನ್ನಿತ್ತು ಇನ್ನಷ್ಟು ಲೋಕಕಲ್ಯಾಣ ಕಾರ್ಯಗಳನ್ನು ಮಾಡುವಂತೆ ಹರಸಲೆಂದು ಸ್ವಾಮೀಜಿ ಪ್ರಾರ್ಥಿಸಿದರು. ಕಾರ್ಕಳ ಸೀಮೆಯ ಎಲ್ಲಾ ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುರೋಹಿತರು ತಂದ ಪ್ರಸಾದವನ್ನು ಹೆಗ್ಗಡೆಯವರಿಗೆ ಅರ್ಪಿಸಿದರು. ಸ್ವಾಮೀಜಿಯವರು ಕಾರ್ಕಳ ಮಠದ ಬಸದಿಯ ವಿಶೇಷ ಪ್ರಸಾದವನ್ನು ಹೆಗ್ಗಡೆಯವರಿಗೆ ನೀಡಿ ಶುಭ ಹಾರೈಸಿದರು. ಕಾರ್ಕಳದ ಡಾ. ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ಸತ್ಯಕ್ಕೆ ಸದಾ ಜಯವಿದೆ. ಮಾತುಬಿಡ ಮಂಜುನಾಥ ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಸತ್ಯ ಪ್ರಕಟವಾಗುವುದರೊಂದಿಗೆ ಆರೋಪಿಗಳಿಗೆ ಶಿಕ್ಷೆಯಾಗಲಿ. ಹೆಗ್ಗಡೆಯವರ ಜೊತೆ ನಾವೆಲ್ಲ ಸದಾ ಪೂರ್ಣ ಬೆಂಬಲ ನೀಡಲು ಸಿದ್ಧರು, ಬದ್ಧರು ಎಂದು ಅವರು ಭರವಸೆ ನೀಡಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಶಿರ್ತಾಡಿಯ ಎಸ್.ಡಿ. ಸಂಪತ್ ಸಾಮ್ರಾಜ್ಯ, ಸುದರ್ಶನ ಜೈನ್ ಬಂಟ್ವಾಳ, ಪುಷ್ಪರಾಜ ಜೈನ್, ಮಂಗಳೂರು, ಕುಲದೀಪ್, ಚೌಟರ ಅರಮನೆ, ಮೂಡಬಿದ್ರೆ, ಅಂಡಾರು ಮಹಾವೀರ ಹೆಗ್ಡೆ, ಅನಂತ್ರಾಜ ಪೂವಣಿ, ಶಿಶುಪಾಲ ಜೈನ್, ಮೋಹನ ಪಡಿವಾಳ್, ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ, ಗುಣವರ್ಮ ಜೈನ್, ಕಾರ್ಕಳ, ನೇಮಿರಾಜ ಆರಿಗಾ ಮೊದಲಾದವರು ಇದ್ದರು. ತಮ್ಮ ಬಗ್ಗೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಸಮಾಜ ಬಾಂಧವರ ಭಕ್ತಿ-ಗೌರವ, ಅಭಿಮಾನ ಸದಾ ಇದೇ ರೀತಿ ಇರಲೆಂದು ಹಾರೈಸಿ, ಹೆಗ್ಗಡೆಯವರು ಎಲ್ಲರಿಗೂ ಶುಭ ಹಾರೈಸಿದರು. ಕಾರ್ಕಳ ಸೀಮೆಯಿಂದ ಸುಮಾರು ಮುನ್ನೂರು ಮಂದಿ ಶ್ರಾವಕರು-ಶ್ರಾವಕಿಯರು ಆಗಮಿಸಿದರು.

ಕತ್ತೋಡಿಯ ಹಿರಿಯರಾದ ಕೆ. ಜಗತ್ಪಾಲ ಮುದ್ಯರು ಇನ್ನಿಲ್ಲ

Article Image

ಕತ್ತೋಡಿಯ ಹಿರಿಯರಾದ ಕೆ. ಜಗತ್ಪಾಲ ಮುದ್ಯರು ಇನ್ನಿಲ್ಲ

ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಕತ್ತೋಡಿ ಮನೆಯ ಹಿರಿಯ ಸದಸ್ಯರು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ, ಪ್ರಗತಿಪರ ಕೃಷಿಕರು ಆಗಿದ್ದ ಕೆ. ಜಗತ್ಪಾಲ ಮುದ್ಯ (95ವ) ಇವರು ಇಂದು ಮಧ್ಯಾಹ್ನ ನಿಧನ ಹೊಂದಿದರು. ಇವರು ಪತ್ನಿ ಕಮಲಾಜಿ, ಪುತ್ರ ಶ್ರೇಯಾಂಸ, ಪುತ್ರಿಯರಾದ ಶೈಲಶ್ರೀ, ಸೌರಭ ಹಾಗೂ ಸಹೋದರರು ಸಹೋದರಿಯರನ್ನು ಮತ್ತು ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್

Article Image

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ವತಿಯಿಂದ ಜೈನ್ ಮಿಲನ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಆಟಿಡೂರ ತಮ್ಮನದ ಲೇಸ್ ಕಾರ್ಯಕ್ರಮ ಭಾನುವಾರ ಸಂಜೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಸುಮಾರು 65ಕ್ಕೂ ಅಧಿಕ ಬಗೆಯ ಆಟಿಯ ಖಾದ್ಯಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಸಭಾ ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ಜೈನಬಾಂಧವರು ಆಟಿಡೊರ ತಮ್ಮನದ ಲೇಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಭಾರತೀಯ ಜೈನ್ ಮಿಲನ್ ವಲಯ 8ರ ಮಂಗಳೂರು ವಿಭಾಗದ ನಿಕಟಪೂರ್ವ ಅಧ್ಯಕ್ಷ ಪುಷ್ಪರಾಜ್ ಜೈನ್ ಉದ್ಘಾಟಿಸಿದರು. ಪದಪ್ರದಾನದ ಪೌರೋಹಿತ್ಯವನ್ನು ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ಸುದರ್ಶನ ಜೈನ್ ಪಂಜಿಕಲ್ಲು ವಹಿಸಿದ್ದರು. ಅಧ್ಯಕ್ಷತೆಯನ್ನು ಜೈನ್ ಮಿಲನ್ ಬಂಟ್ವಾಳ ಅಧ್ಯಕ್ಷ ಮಧ್ವರಾಜ್ ಜೈನ್ ಪಂಜಾಲು ವಹಿಸಿದ್ದರು. ನೂತನ ಸಾಲಿನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ರಾಜೇಂದ್ರ ಜೈನ್, ಕಾರ್ಯದರ್ಶಿಯಾಗಿ ಜಯಕೀರ್ತಿ ವೈ.ಎಸ್., ಕೋಶಾಧಿಕಾರಿಯಾಗಿ ಪ್ರವೀಣ್ ಕುಮಾರ್ ಬಸ್ತಿಪಡ್ಡು, ಉಪಾಧ್ಯಕ್ಷರಾಗಿ ತೇಜ್ ಪಾಲ್ ಜೈನ್, ಡಾ. ಸೀಮಾ ಸುದೀಪ್, ಅರ್ಕಕೀರ್ತಿ ಹೆಗ್ಡೆ, ಹರ್ಷರಾಜ್ ಬಲ್ಲಾಳ್, ವಿನಯಚಂದ್ರ ಜೈನ್, ಜೊತೆ ಕಾರ್ಯದರ್ಶಿಗಳಾಗಿ ಹರ್ಷೇಂದ್ರ ಹೆಗ್ಡೆ, ಸಂಧ್ಯಾ ಸಿದ್ಧಕಟ್ಟೆ, ಚಂದನಾ ಬೃಜೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸನ್ಮತಿ ಜಯಕೀರ್ತಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯಕುಮಾರ್, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೇಯಾಂಸ್ ಜೈನ್ ಸಹಿತ ಸಂಚಾಲಕರ ತಂಡ, ಕಾರ್ಯಕಾರಿ ಸಮಿತಿಯ ಅಧಿಕಾರ ಸ್ವೀಕರಿಸಿತು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಡ್ ಉಳಿಪ್ಪಾಡಿ ಮಾತನಾಡಿ, ಜೈನರು ಸಮಾಜದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುವುದರ ಮೂಲಕ ಗೌರವಾನ್ವಿತ ಸ್ಥಾನಮಾನದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಶುಭ ಹಾರೈಸಿದರು. ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಸರ್ವ ಸಮಾಜದ ಪ್ರೀತಿಗೆ ಮಾನ್ಯರಾದ ಜೈನರು ಸಾಮಾಜಿಕವಾಗಿ ಗೌರವಾನ್ವಿತರಾದ ಸ್ಥಾನದಲ್ಲಿದ್ದಾರೆ. ಜೈನ ಆಹಾರ ಪದ್ಧತಿಯಿಂದ ತೊಡಗಿ, ಮುನಿಗಳು ನೀಡಿದ ಸಂದೇಶಗಳು ಪ್ರಸ್ತುತವಾಗಿವೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಅಶೋಕ್ ಜೈನ್ ಮಾತನಾಡಿ, ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬ ಕುರಿತು ವಿವರಿಸಿದರು. ಈ ಸಂದರ್ಭ ಹಿರಿಯರನ್ನು ಗೌರವಿಸಲಾಯಿತು ನೂತನ ಅಧ್ಯಕ್ಷ ರಾಜೇಂದ್ರ ಜೈನ್ ಮುಂದಿನ ಯೋಜನೆಗಳ ಕುರಿತು ವಿವರಿಸಿದರು. ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ನಿರ್ದೇಶಕ ಪ್ರಮೋದ್ ಕುಮಾರ್ ವೇಣೂರು ಶುಭ ಹಾರೈಸಿದರು. ಮಂಗಳೂರು ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ನೂತನ ಕಾರ್ಯದರ್ಶಿ ಜಯಕೀರ್ತಿ ವೈ.ಎಸ್. ವಂದಿಸಿದರು.

First Previous

Showing 2 of 8 pages

Next Last