Article Image

ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮಗಳು

Article Image

ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮಗಳು

ಚಿಕ್ಕಮಗಳೂರು: ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರ ಪೆನುಗೊಂಡ ದಿಗಂಬರ ಜೈನ ಮಹಾಸಂಸ್ಥಾನ ಮಠ ಶ್ರೀ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತೀ ಭಾನುವಾರ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ. ಪೂಜಾ ವಿವರ ಬೆಳಿಗ್ಗೆ 8-00 ಕ್ಕೆ : ಜಿನೇಶ್ವರರ ಪಂಚಾಮೃತ ಅಭಿಷೇಕ, 09-30 ಕ್ಕೆ : ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪಂಚಾಮೃತ ಅಭಿಷೇಕ ಮತ್ತು ಆರಾಧನೆ, ಸಂಜೆ 6-30 ಕ್ಕೆ : ಅಷ್ಠಾವದಾನ ಸೇವೆ, ಷೋಡಶೋಪಚಾರ ಪೂಜೆ, 7-30 ಕ್ಕೆ : ಮಹಾಮಂಗಳಾರತಿ ನಡೆಯಲಿದೆ.

ಅನಂತ ಪಾರ್ಶ್ವ ಜೈನ್ ಮಿಲನ್ ಪದಗ್ರಹಣ ಮತ್ತು ಬಸ್ ನಿಲ್ದಾಣ ಉದ್ಘಾಟನೆ

Article Image

ಅನಂತ ಪಾರ್ಶ್ವ ಜೈನ್ ಮಿಲನ್ ಪದಗ್ರಹಣ ಮತ್ತು ಬಸ್ ನಿಲ್ದಾಣ ಉದ್ಘಾಟನೆ

ಕುಪ್ಪೆ ಪದವು:- ಅನಂತ ಪಾರ್ಶ್ವ ಜೈನ್ ಮಿಲನಿನ ಪದಗ್ರಹಣ ಮತ್ತು ನಮ್ಮ ಮಿಲನ ಸದಸ್ಯರಾದ ಅಜಿತ್ ಕುಮಾರ್ ಜೈನ್ ರವರು ಸಾರ್ವಜನಿಕರಿಗೆ ಬಸ್ ನಿಲ್ದಾಣವನ್ನು ನಿರ್ಮಿಸಿದರು, ಮಂಗಳೂರು ವಲಯ -8 ರ ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್‌ ಜೈನ್‌ರವರು ಉದ್ಘಾಟಿಸಿದರು. ಅನಂತ್ ರಾಜ ಸಭಾಭವನದಲ್ಲಿ ದಿನಾಂಕ 29-6-2025 ಸಂಜೆ 3 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಿತು. ಜಯರಾಜ್ ಕಂಬಳಿ, ವಲಯ ನಿರ್ದೇಶಕರು ಹೊಸ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಮಾಡಿದರು. ಸುದರ್ಶನ್ ಜೈನ್, ಉಪಾಧ್ಯಕ್ಷರು ಮಂಗಳೂರು ವಲಯ-8. ಕುಪ್ಪೆಪದ ಜೈನ್ ಮಿಲನ್ ಸಣ್ಣದಾದರು ಅಚ್ಚುಕಟ್ಟಾಗಿ ಎಲ್ಲಾ ಕೆಲಸಗಳನ್ನು ಒಳ್ಳೆಯ ರೀತಿಯಲ್ಲಿ ನಿರ್ವಹಿಸುತ್ತಾ ಒಳ್ಳೆ ಹೆಸರನ್ನು ಗಳಿಸಿದ್ದಾರೆ ಎಂದು ಶ್ಲಾಘಿಸಿದರು. ವೇದಿಕೆಯಲ್ಲಿ ಪುಷ್ಪರಾಜ್ ಜೈನ್, ಸುಭಾಷ್ ಚಂದ್ರ ಜೈನ್, ಶ್ವೇತಾ ಜೈನ್, ಡಾ। ಸುದೀಪ್ ಜೈನ್, ಭೋಜರಾಜ್ ಜೈನ್, ಅಧ್ಯಕ್ಷ ಸ್ವರ್ಣ ಲತಾ ಅಜಿತ್, ಹರ್ಷ ಲತಾ, ವನಿತಾ ಭೋಜರಾಜ ಜೈನ ಹಾಗೂ ಪದಗ್ರಹಣ ಸ್ವೀಕರಿಸಿದ ಧೀರಜ್ ಜೈನ ಮತ್ತು ಕಾರ್ತಿಕ್ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವಿತಾ ಪ್ರಾರ್ಥನೆ ಮಾಡಿದರು. ಅನ್ವಿತ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು. ಅದ್ವಿತ ಮತ್ತು ಅಶ್ವಿತ ಶಾಂತಿ ಮಂತ್ರವನ್ನು ಪಟಿಸಿ ಸಭೆಯನ್ನು ಮುಕ್ತಾಯ ಗೊಳಿಸಿದರು.

ಗಾನವಿ ಡಿ. ಅವರಿಗೆ ಪಿಎಚ್.ಡಿ ಪದವಿ

Article Image

ಗಾನವಿ ಡಿ. ಅವರಿಗೆ ಪಿಎಚ್.ಡಿ ಪದವಿ

ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and Biological Activity Studies of Some Simple and Fused Nitrogenous Heterocycles) ಎಂಬ ಶೀರ್ಷಿಕೆಯಲ್ಲಿ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಪ್ರೊ. ಭೋಜ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಮಂಡಿಸಿದ್ದಾರೆ. ಸಮರ್ಥ ಶೋಧನಾ ಕಾರ್ಯಕ್ಕೆ ಬೆಂಗಳೂರು ಸಿಟಿ ಯುನಿವರ್ಸಿಟಿಯ ರಸಾಯನ ಶಾಸ್ತ್ರ ವಿಭಾಗದ ಸೀನಿಯರ್ ಪ್ರೊಪೆಸರ್ ಡಾ. ಹರಿಪ್ರಸಾದ್ ಎಸ್. ಇವರ ಸಮ್ಮುಖದಲ್ಲಿ ಡಾ. ಗಾನವಿ ಡಿ. ಅವರಿಗೆ ದಿನಾಂಕ 11 ಜುಲೈ 2025 ರಂದು ಪಿಎಚ್.ಡಿ ಪದವಿ ನೀಡಲಾಯಿತು. ಉಜಿರೆಯ ಲಲಿತನಗರದ ನಿವಾಸಿಯಗಿರುವ ಇವರು ಧರ್ಮಸ್ಥಳದ ದೇವಸ್ಥಾನ ಕಚೇರಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಯ ಜೈನ್ ಅವರ ಧರ್ಮಪತ್ನಿ.

ಭಾರತೀಯ ಜೈನ್ ಮಿಲನ್ ವಲಯ-8 ಸಭೆ

Article Image

ಭಾರತೀಯ ಜೈನ್ ಮಿಲನ್ ವಲಯ-8 ಸಭೆ

ತಾ. 22.06.2025ನೇ ಭಾನುವಾರ ಜೈನ್ ಮಿಲನ್ ಪುತ್ತೂರು ಶಾಖೆ ಮತ್ತು ಜೈನ್ ಮಿಲನ್ ಇಚ್ಲಂಪಾಡಿ ಶಾಖೆ ಜಂಟಿಯಾಗಿ ಪುತ್ತೂರು ಭ. ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪುತ್ತೂರು ಮಿಲನ್ ಅತಿಥೇಯತ್ವದಲ್ಲಿ ಜರಗಿತು. ಜಂಟಿ ಮಿಲನ್ ಸಭೆಯು ಸತೀಶ್ ಪಡಿವಾಳ್ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ವಲಯ ನಿರ್ದೇಶಕರಾದ ರಾಜಶ್ರೀ ಎಸ್. ಹೆಗ್ಡೆ, ಮುಖ್ಯ ಅತಿಥಿಯಾಗಿ ಡಾ| ಮಹಾವೀರ್ ಜೈನ್, ಡಾ| ಅಶೋಕ್ ಪಡಿವಾಳ್, ಅಜಿತ್ ಪ್ರಸಾದ್ ರೈ, ಕಾರ‍್ಯದರ್ಶಿ ರಾಜೇಶ್ ಕುಮಾರ್ ವಿ. ಇಚ್ಲಂಪಾಡಿ ಜೈನ್ ಮಿಲನ್ ಅಧ್ಯಕ್ಷರು ಹೇಮಾವತಿ ಮಹವೀರ್, ಕಾರ‍್ಯದರ್ಶಿ ದೀವಿಕ ರವೀಂದ್ರ ಜೈನ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳು ಬಸದಿ ದರ್ಶನ ಕ್ರಮ ಮತ್ತು ಮಹತ್ವವನ್ನು ಅರ್ಥಪೂರ್ಣವಾಗಿ ಸಭೆಗೆ ತಿಳಿಸಿದರು. ಪುತ್ತೂರು ಜೈನ ಮಿಲನ್ ವತಿಯಿಂದ ಡಾಕ್ಟರೇಟ್ ಪದವಿ ಮಹಾವೀರ್ ಜೈನ್ ಇಚ್ಲಂಪಾಡಿ ಹಾಗೂ ಪ್ರಗತಿಪರ ಕೃಷಿಕರಾದ ಅಜಿತ್ ಪ್ರಸಾದ್ ರೈ ಅವರನ್ನು ಗೌರವಿಸಲಾಯಿತು. ಪುತ್ತೂರು ಹಾಗೂ ಇಚ್ಲಂಪಾಡಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮದುವೆ ದಿನ ಹಾಗೂ ಹುಟ್ಟುಹಬ್ಬ ಆಚರಿಸಿಕೊಂಡವರಿಗೆ ಹೂ ನೀಡಿ ಗೌರವಿಸಲಾಯಿತು. ಕಾರ‍್ಯಕ್ರಮವು ಬೆಳಿಗ್ಗೆ 10ರಿಂದ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಮದ್ಯಾಹ್ನ 2.00 ಗಂಟೆಗೆ ಶಾಂತಿಮಂತ್ರದೊಂದಿಗೆ ಮುಕ್ತಾಯವಾಯಿತು.

ವೇಣೂರಿನ ಮಹಾವೀರ ನಗರದ ಪ್ರಸಾದ್‌ ಕ್ಲಿನಿಕ್‌ ನ ಖ್ಯಾತ ವೈದ್ಯರಾದ ಡಾ. ಕೆ. ಆರ್.‌ ಪ್ರಸಾದ್‌ರವರು ನಿಧನ

Article Image

ವೇಣೂರಿನ ಮಹಾವೀರ ನಗರದ ಪ್ರಸಾದ್‌ ಕ್ಲಿನಿಕ್‌ ನ ಖ್ಯಾತ ವೈದ್ಯರಾದ ಡಾ. ಕೆ. ಆರ್.‌ ಪ್ರಸಾದ್‌ರವರು ನಿಧನ

ಬೆಳ್ತಂಗಡಿ ತಾಲೂಕಿನ ಪೆರಿಂಜೆ, ಬಡಕೋಡಿಗುತ್ತು ನಿವಾಸಿ, ವೇಣೂರಿನ ಮಹಾವೀರ ನಗರದ "ಪ್ರಸಾದ್‌ ಕ್ಲಿನಿಕ್‌" ನ ಖ್ಯಾತ ವೈದ್ಯರಾದ ಡಾ. ಕೆ. ಆರ್.‌ ಪ್ರಸಾದ್‌ (75ವ) ಇವರು ಜು.04ರಂದು ನಿಧನ ಹೊಂದಿದರು. ಇವರು ಪತ್ನಿ, ಇಬ್ಬರು ಪುತ್ರರನ್ನು ಹಾಗೂ ಅಪಾರ ಬಂಧು- ವರ್ಗವನ್ನು ಅಗಲಿದ್ದಾರೆ. ಇವರು ಕೃಷಿಕರಾಗಿದ್ದು, ವೇಣೂರಿನಲ್ಲಿ ಹಲವು ದಶಕಗಳಿಂದ ವೈದ್ಯಕೀಯ ಸೇವೆ ನೀಡಿ, ಜನಪ್ರಿಯ ವೈದ್ಯರಾಗಿ ಜನರ ಪ್ರೀತಿ - ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅಲ್ಲದೇ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು

ಮಹಾವೀರ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಿಗೆ ಗೌರವ ಸನ್ಮಾನ

Article Image

ಮಹಾವೀರ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಿಗೆ ಗೌರವ ಸನ್ಮಾನ

ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ ಹುಬ್ಬಳ್ಳಿ- ಧಾರವಾಡ, ಕರ್ನಾಟಕ ವಿಶ್ವವಿದ್ಯಾಲಯದ ಜೈನ ಅಧ್ಯಯನ ಪೀಠ ಸಲಹಾ ಸಮಿತಿ ಇವುಗಳ ಸಂಯುಕ್ತ ಸಹಯೋಗದಲ್ಲಿ ಮಾಸಿಕ ಉಪನ್ಯಾಸ ಮಾಲಿಕೆ ದಿವ್ಯವಾಣಿ ೪ ಜೈನ ದರ್ಶನದಲ್ಲಿ ಅನೇಕಾಂತವಾದಕುರಿತು ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಚಾರ್ಯ ಡಾ. ಭರಮಪ್ಪ ಭಾವಿ ಇವರಿಂದ ಉಪನ್ಯಾಸ ಜರುಗಿತು. ಇದೇ ಸಂಧರ್ಭದಲ್ಲಿ ಮಹಾವೀರ ಶಿಕ್ಷಣ ಸಂಸ್ಥೆಗೆ ನೂತನವಾಗಿ ಇತ್ತೀಚಿಗೆ ಆಯ್ಕೆಯಾದ ಪದಾಧಿಕಾರಿಗಳನ್ನು ಹಾಗೂ ಧಾರವಾಡ ಜೈನ ಮಿಲನ್ ಅಧ್ಯಕ್ಷರಾಗಿ ಆಯ್ಕೆಯಾದ ಜಿನ್ನಪ್ಪ ಕುಂದಗೋಳ ಇವರನ್ನು ನವನಗರದ ನವಗ್ರಹ ಸಭಾ ಭವನದಲ್ಲಿ ಗೌರವ ಸನ್ಮಾನಮಾಡಿ ಅಭಿನಂದಿಸಲಾಯಿತು. ನವನಗರದ ಅಲ್ಪಸಂಖ್ಯಾತ ಜೈನ ಸೇವಾ ಸಂಘ ಈ ಸಂಸ್ಥೆಯೂ ಕೂಡಾ ಸನ್ಮಾನಿಸಿ ಗೌರವಿಸಿದರು. ಐದು ದಶಕಗಳಿಂದ ಹುಬ್ಬಳ್ಳಿಯಲ್ಲಿ ಸಮಾಜದ ಪ್ರತಿಷ್ಠಿತ ಈ ಸಂಸ್ಥೆ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರವಾದ ಸಾಧನೆ ಮಾಡಿದೆ, ಪ್ರಸಕ್ತ ಅವಧಿಯಲ್ಲಿ ಅಧ್ಯಕ್ಷರಾದ ಆರ್ ಟಿ ತವನಪ್ಪನವರ, ಉಪಾಧ್ಯಕ್ಷರಾದ ಆರ್ ಟಿ ಅಣ್ಣಿಗೇರಿ ಕಾರ್ಯದರ್ಶಿ ವಿಮಲ ತಾಳಿಕೋಟಿ ಹಾಗೂ ಇತರರು ಅವಿರೋಧವಾಗಿ ಆಯ್ಕೆಯಾಗಿದ್ದು ಇವರ ಅವಧಿಯಲ್ಲಿ ಸಂಸ್ಥೆ ಸರ್ವತೋಮುಖ ಅಭಿವೃದ್ಧಿ ಹೊಂದಲಿ ಇನ್ನು ಹೆಚ್ಚು ಹೆಚ್ಚು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲಿ ಮತ್ತು ಧಾರವಾಡ ಜೈನ ಮಿಲನ್ ಜೈನ ಸಂಸ್ಕೃತಿ ಪರಂಪರೆಗೆ ಧರ್ಮಪ್ರಭಾವನೆ ಕೊಡುಗೆ ನೀಡಲಿ ಎಂದು ಶುಭ ಹಾರೈಸಿ ಸತ್ಕರಿಸಲಾಯಿತು. ಸತ್ಕಾರ ಸಮಾರಂಭದಲ್ಲಿ ಟ್ರಸ್ಟ್ ಅಧ್ಯಕ್ಷ ಡಾ. ಜಿನದತ್ತ ಹಡಗಲಿ, ಉಪಾಧ್ಯಕ್ಷ ಡಾ. ಭರಮಪ್ಪ ಭಾವಿ, ಕಾರ್ಯದರ್ಶಿ ಶಾಂತರಾಜ ಮಲ್ಲಸಮುದ್ರ, ನಿರ್ದೇಶಕರಾದ ಧರಣೇoದ್ರ ಜವಳಿ, ಡಾ ಆರ್ ಎ ಬಾಳಿಕಾಯಿ, ತನುಜಾ ರೋಖಡೆ, ಶ್ರೀಧರ ಬಸ್ತಿ, ಡಾ. ಪ್ರತಿಭಾ ಹಳಿಂಗಳಿ, ಸಂಘಟನಾ ಕಾರ್ಯದರ್ಶಿಗಳಾದ ಶಾಂತರಾಜ ಹದಳಗಿ, ಸುಜಾತಾ ಹಡಗಲಿ, ಅಜಿತ್ ಹವಳಣ್ಣವರ, ನವನಗರ ಜೈನ ಸೇವಾ ಸಂಘದ ಉಪಾಧ್ಯಕ್ಷ ಅಜಿತ್ ಉಪಾಧ್ಯ ಕಾರ್ಯದರ್ಶಿ ಜೆ ಎ ಪಾಟೀಲ್ ಖಜಾಂಚಿ ರವಿ ರಾಯಪ್ಪನವರ ಸದಸ್ಯರಾದ ಬಿ ಎಸ್ ವರೂರ, ಡಿ ಆರ್ ಚೌದರಿ ಪ್ರಭು ಹಜಾರೆ, ಶುಭಮ್ ಬಸ್ತಿ, ಬಾಹುಬಲಿ ಹೊಂಬಣ್ಣವರ, ಆಂಬೊಜಿ, ರತ್ನಾಕರ ಪಾಟೀಲ ಮತ್ತು ಬಹುರೂಪಿಣಿ ಮಹಿಳಾ ಮಂಡಳದ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನವನಗರದ ಬಹುರೂಪಿಣಿ ಮಹಿಳಾಮಂಡಲದ ಮತ್ತು ಗೋಕುಲ ರಸ್ತೆಯ ಸನ್ಮತಿ ಮಹಿಳಾ ಮಂಡಳದ ತಂಡಗಳಿಂದ ಜಿನಭಜನೆ ಜರುಗಿತು ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಪಾಲ ಬೋಗಾರ ಇವರು ತಾವು ರಚಿಸಿದ "ಪಿಂಛಿ" ಕವನ ಸಂಕಲದ ಪುಸ್ತಕದ ವಿತರಿಸಿದರು. ಪ್ರಾರಂಭದಲ್ಲಿ ಶೋಭಾ ವರೂರ ಇವರಿಂದ ಪ್ರಾರ್ಥನೆ ಶಾಂತರಾಜ ಮಲ್ಲಸಮುದ್ರ ಇವರಿಂದ ಸ್ವಾಗತ ಕೊನೆಯಲ್ಲಿ ಮಹಾವೀರ ದೊದ್ದಮನಿ ಇವರು ವಂದಿಸಿದರು ತನುಜಾ ರೋಖಡೆ ಕಾರ್ಯಕ್ರಮ ನಿರೂಪಿಸಿದರು. ವರದಿ : ಶಾಂತರಾಜ ಮಲ್ಲಸಮುದ್ರ

ಪರಾಗ್ ಜೈನ್ ರಾ ಹೊಸ ಮುಖ್ಯ

Article Image

ಪರಾಗ್ ಜೈನ್ ರಾ ಹೊಸ ಮುಖ್ಯ

ಹೊಸದಿಲ್ಲಿ: ‘ಆಪರೇಷನ್ ಸಿಂದೂರ’ ಸೇನಾ ಕಾರ್ಯಾಚರಣೆ ಯಶಸ್ಸಿನಲ್ಲಿ ಮಹತ್ವದ ಪಾತ್ರವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಗುಪ್ತಚರ ಸಂಸ್ಥ ‘ರಾ’ ಮುಖ್ಯಸ್ಥರನ್ನಾಗಿ ಕೇಂದ್ರ ಸರಕಾರ ನೇಮಿಸಿದೆ. ‘ರಾ’ ಹಾಲಿ ಮುಖ್ಯಸ್ಥ ರವಿ ಸಿನ್ಹಾ ಅವರು ಜೂನ್ 30ರಂದು ನಿವೃತ್ತಿ ಹೊಂದಲಿದ್ದಾರೆ. ಸದ್ಯ ‘ರಾ’ದ ವೈಮಾನಿಕ ಸಂಶೋಧನಾ ಕೇಂದ್ರದ ಮುಖ್ಯಸ್ಥರಾಗಿರುವ ಪರಾಗ್ ಅವರು ಜುಲೈ 1ರಂದು ‘ರಾ’ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಇವರ ಅಧಿಕಾರ ಅವಧಿ ಎರಡು ವರ್ಷ ಇರಲಿದೆ. ಪರಾಗ್ 1989ನೇ ಸಾಲಿನ ಪಂಜಾಬ್ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಗುಪ್ತಚರ ಇಲಾಖೆಯಲ್ಲಿ ಮಾನವ ಬುದ್ಧಿಮತ್ತೆ ಹಾಗೂ ಕೃತಕ ಬುದ್ಧಿಮತ್ತೆಯನ್ನು ಪರಿಣಾಮಕಾರಿಯಾಗಿ ಸಂಯೋಜಿಸಿ ಬಳಸುವಲ್ಲಿ ಪರಿಣತಿ ಹೊಂದಿದ್ದಾರೆ.

ನಾರಾವಿ: ಸನ್ಮಾನ ಕಾರ್ಯಕ್ರಮ

Article Image

ನಾರಾವಿ: ಸನ್ಮಾನ ಕಾರ್ಯಕ್ರಮ

ನಾರಾವಿ ಜೈನ್‌ ಮಿಲನ್‌ ವತಿಯಿಂದ ಹೊಸ್ಮಾರು ಸಿದ್ಧರವನ ಕೂಟ ಬಸದಿಯಲ್ಲಿ ಕರಿಮಣೇಲು ಗುತ್ತು, ಕೆ. ಸನತ್‌ ಕುಮಾರ್‌ ಸೇಮಿತ, ಮರೋಡಿ ಗಾಳಿವನ ಎನ್.‌ ಕೆ. ಆರಿಗ, ರತ್ನರಾಜ್‌ ಆರಿಗ ಮತ್ತು ಲಲಿತಮ್ಮ (ಹೊಸ್ಮಾರು ಪ್ರೇಮ್‌ ಕುಮಾರ್‌ರವರ ತಾಯಿ) ಹಾಗೂ ಅಳಿಯೂರಿನ 102 ವರ್ಷದ ಹಿರಿಯ ಜೈನ ಮಹಿಳೆ, ನಾರಾವಿ ನಿರೀಕ್ಷಾ ಜಯವರ್ಮ ಇವರುಗಳನ್ನು ಊರಿನ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಕಾರ್ಕಳ: ಪೂಜಾ ಕಾರ್ಯಕ್ರಮ

Article Image

ಕಾರ್ಕಳ: ಪೂಜಾ ಕಾರ್ಯಕ್ರಮ

ಕಾರ್ಕಳ: ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರಿನ ಭ| 1008 ಶ್ರೀ ಅನಂತನಾಥ ಸ್ವಾಮಿ ಸನ್ನಿಧಿಯಲ್ಲಿ ನಾಳೆ (ಜೂ.24) ಮಂಗಳವಾರದಂದು ವರ್ಷಂಪ್ರತಿ ನಡೆಯುವ ಶ್ರೀ ಬ್ರಹ್ಮಯಕ್ಷ ದೇವರ ಸ್ಥಂಭಾರೋಹನ ಪೂಜಾ ಕಾರ್ಯಕ್ರಮವು ಜರಗಲಿರುವುದು ಕಾರ್ಯಕ್ರಮ: ದಿನಾಂಕ 24-06-2025ನೇ ಮಂಗಳವಾರ ಬೆಳಿಗ್ಗೆ ಗಂಟೆ 9.15ರಿಂದ ವಿಮಾನಶುದ್ಧಿ ಬೆಳಿಗ್ಗೆ ಗಂಟೆ 11.55ರಿಂದ ಶ್ರೀ ಬ್ರಹ್ಮಯಕ್ಷ ದೇವರಿಗೆ ಕಲಾರೋಪಣೆ ಮಧ್ಯಾಹ್ನ ಗಂಟೆ 12.30ಕ್ಕೆ ಲಕ್ಷ ಹೂವಿನ ಪೂಜೆ ಮಧ್ಯಾಹ್ನ ಗಂಟೆ 1.00ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ರಾತ್ರಿ ಗಂಟೆ 9.00ಕ್ಕೆ ವಿಶೇಷ ಮಂಗಳಾರತಿ, ಸ್ಥಂಭಾರೋಹಣ.

ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನೆ

Article Image

ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನೆ

ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ಸರಕಾರಿ ನಿವೃತ್ತಿ ನೌಕರರ ಸಂಘ ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಆದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳ, ಬಾಹುಬಲಿ ಪ್ರಸಾದ್, ಉಪಸ್ಥಿತರಿದ್ದರು.

ದ ಕ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ

Article Image

ದ ಕ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ

ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ದಿಗಂಬರ ಜೈನ ಮಠ ಮೂಡುಬಿದ್ರೆ ಇವರ ಪಾವನ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರವು ಮೂಡಬಿದ್ರೆ ಜೈನ್ ಮಠದ ಶ್ರೀ ಭಟ್ಟಾರಕರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಿದರು. ಶಿಬಿರದಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳ ಅವರು ದ ಕ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್, ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಬಸದಿಯ ಆಡಳಿತ ಮಂಡಳಿಯ ಸಂಚಾಲಕರು ಡಾ. ಕೆ. ಜಯಕೀರ್ತಿ ಜೈನ್, ಶ್ರೀ ಜೈನ್ ಮಠದ ಸಲಹಾ ಸಮಿತಿ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್, ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿಗಳು ಭಾಗವಸಿದ್ದರು. ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳರವರನ್ನು ಪೂಜ್ಯ ಸ್ವಾಮೀಜಿಯವರು ಸನ್ಮಾನಿಸಿದರು, ಜಿನೇಂದ್ರ ಕೋಟ್ಯಾನ್, ಡಾ. ಕೆ. ಜಯಕೀರ್ತಿ ಜೈನ್ ರವರನ್ನು ಪೂಜ್ಯ ಸ್ವಾಮೀಜಿಯವರು ಅಭಿನಂದಿಸಿದರು. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುರೋಹಿತರು ಹಾಗೂ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪುರೋಹಿತರುಗಳಿಗೆ ಧಾರ್ಮಿಕ ಪ್ರಮಾಣ ಪತ್ರವನ್ನು ನೀಡಲಾಯಿತು. ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಬಾಹುಬಲಿ ಪ್ರಸಾದ್ ವಂದನಾರ್ಪಣೆ ಸಲ್ಲಿಸಿ, ಸೌಮ್ಯಶ್ರೀ ಪ್ರಾoಶುಪಾಲರು ಸ್ವಸ್ತಿಶ್ರೀ ಪದವಿ ಪೂರ್ವ ವಸತಿ ಕಾಲೇಜು ಮೂಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

ತುಮಕೂರು ಟಿ.ಎನ್. ಅಜಿತ್ ಜೈನ್ ರವರು ನಿಧನ

Article Image

ತುಮಕೂರು ಟಿ.ಎನ್. ಅಜಿತ್ ಜೈನ್ ರವರು ನಿಧನ

ತುಮಕೂರು ನಗರ ಅಗ್ರಹಾರದಲ್ಲಿ ವಾಸವಾಗಿದ್ದ ತುಮಕೂರಿನ ಹೆಸರಾಂತ ಸನ್ಮತಿ ಪೇಂಟ್ಸ್ ಮಾಲೀಕರಾದ, ಹಿರಿಯ ವಾಣಿಜ್ಯೋದ್ಯಮಿ ಟಿ.ಎನ್. ಅಜಿತ್ ಜೈನ್ ರವರು ಇಂದು (ಜೂ.13) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು. ಇವರು ಪತ್ನಿ ಶಾಂತಲಾ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪರಮಪೂಜ್ಯ ಯುಗಳ ಮನಿ ಮಹಾರಾಜರ ಸಂಘಪತಿಗಳಾಗಿದ್ದ ಇವರು ಧಾರ್ಮಿಕ, ಸಾಮಾಜಿಕ ವ್ಯವಹಾರಿಕ, ಇಂಜಿನಿಯರಿಂಗ್, ಶೈಕ್ಷಣಿಕ ಹಾಗೂ ಧರ್ಮ ಪ್ರಭಾವನೆಗೆ ಮಾಡಿದ ಶ್ರೇಷ್ಠ ಸೇವೆ ಹಾಗೂ ಸತ್ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ವೈ. ಡಿ.ರತ್ನಾಕರವರಿಗೆ ಸನ್ಮಾನ

Article Image

ವೈ. ಡಿ.ರತ್ನಾಕರವರಿಗೆ ಸನ್ಮಾನ

ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಯುವ ರತ್ನ ಪ್ರಶಸ್ತಿಯ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ಪುಟ್ಟೇನ ಹಳ್ಳಿಯ ಸಿದ್ಧಾಂಥ ಧಾರ್ಮಿಕ ಪತ್ರಿಕೆಯ ಸಂಪಾದಕರಾದ ವೈ. ಡಿ.ರತ್ನಾಕರವರಿಗೆ ಸಂಘದ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿನ ಗಣ್ಯರು ಪ್ರಶಸ್ತಿನೀಡಿ ಸನ್ಮಾನಿಸಿದರು.

ಮಹಾವೀರ ಜೈನ್‌ ಇಚ್ಲಂಪಾಡಿ ಇವರಿಗೆ ಪಿ.ಹೆಚ್.ಡಿ ಪದವಿ

Article Image

ಮಹಾವೀರ ಜೈನ್‌ ಇಚ್ಲಂಪಾಡಿ ಇವರಿಗೆ ಪಿ.ಹೆಚ್.ಡಿ ಪದವಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್‌ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ. ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ "ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ. ಇವರು ಧಾರ್ಮಿಕ ಉಪನ್ಯಾಸಕ, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್‌ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಆಗಿದ್ದರು.

ಕರಿಮಣೇಲು ಗುತ್ತು ಸನತ್ ಕುಮಾರ್ ಸೇಮಿತ ಅವರಿಗೆ ಸನ್ಮಾನ

Article Image

ಕರಿಮಣೇಲು ಗುತ್ತು ಸನತ್ ಕುಮಾರ್ ಸೇಮಿತ ಅವರಿಗೆ ಸನ್ಮಾನ

ನಾರಾವಿ ಜೂ. 7: ನಾರಾವಿ ರಾಮೇರುಗುತ್ತು ಪದ್ಮರಾಜ ಅಧಿಕಾರಿ ಮತ್ತು ಕರಿಮಣೇಲುಗುತ್ತು ಅನಂತಮತಿಯವರ ದ್ವಿತೀಯ ಪುತ್ರರಾದ ಕರಿಮಣೇಲುಗುತ್ತು ಕೆ. ಸನತ್ ಕುಮಾರ್ ಸೇಮಿತರವರ 96ನೇ ಹುಟ್ಟುಹಬ್ಬದ ಪ್ರಯುಕ್ತ ಭ| ಶ್ರೀ ೧೦೦೮ ಧರ್ಮನಾಥ ಸ್ವಾಮಿಯಲ್ಲಿ ನವಗ್ರಹ ಶಾಂತಿ ಮತ್ತು ಪದ್ಮಾವತಿ ಅಮ್ಮನವರಿಗೆ ಲಕ್ಷ ಹೂವಿನಪೂಜೆ ನಡೆದು ಬಳಿಕ ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳು, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಮತ್ತು ಬಸದಿಯ ಆಡಳಿತ ಮಂಡಳಿಯ ಸರ್ವ ಸದಸ್ಯರ ಸಮ್ಮುಖದಲ್ಲಿ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಊರ-ಪರವೂರ ಗಣ್ಯರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

ಡಾ. ಜೀವಂಧ‌ರ್ ಬಳ್ಳಾಲ್ ಅವರಿಗೆ ಸಮ್ಮಾನ

Article Image

ಡಾ. ಜೀವಂಧ‌ರ್ ಬಳ್ಳಾಲ್ ಅವರಿಗೆ ಸಮ್ಮಾನ

ಕೊಡಿಯಾಲ್‌ಬೈಲ್‌: ಭಾರತೀಯ ಜೈನ್ ಮಿಲನ್ ಮಂಗಳೂರು ಆಶ್ರಯದಲ್ಲಿ ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಡಾ| ಜೀವಂಧ‌ರ್ ಬಳ್ಳಾಲ್ ಅವರನ್ನು ಸಮ್ಮಾನಿಸಲಾಯಿತು. ಭಾರತೀಯ ಜೈನ್ ಮಿಲನ್ ಮಂಗಳೂರು ಇದರ ಅಧ್ಯಕ್ಷ ರತ್ನಾಕರ ಜೈನ್, ಪ್ರಮುಖರಾದ ಸುದರ್ಶನ್ ಜೈನ್, ಸುಕುಮಾ‌ರ್ ಬಳ್ಳಾಲ್, ಮಿಲನ್, ವೈಶಾಲಿ ಪಡಿವಾಳ್, ಪುಷ್ಪರಾಜ್ ಜೈನ್, ಸನತ್ ಕುಮಾರ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

ವೇಣೂರು: ವಾರ್ಷಿಕ ಮಹೋತ್ಸವ

Article Image

ವೇಣೂರು: ವಾರ್ಷಿಕ ಮಹೋತ್ಸವ

ವೇಣೂರು: ಭಗವಾನ್‌ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ವಾರ್ಷಿಕ ಮಹೋತ್ಸವವು ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಪರಮ ಪೂಜ್ಯ "ಭಾರತಭೂಷಣ" ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ದಿನಾಂಕ 1-06-2025ನೇ ಆದಿತ್ಯವಾರದಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಲಿರುವುದು.

ಹೊಂಬುಜ: ಶ್ರುತ ಪಂಚಮಿ ಆಚರಣೆ

Article Image

ಹೊಂಬುಜ: ಶ್ರುತ ಪಂಚಮಿ ಆಚರಣೆ

ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪೂರ್ವ ಪರಂಪರೆಯಂತೆ ನಡೆದುಕೊಂಡು ಬಂದಿರುವ 'ಶ್ರುತ ಪಂಚಮಿ ಮಹೋತ್ಸವ' ವನ್ನು ಮೇ. 31, 2025ರ ಶನಿವಾರದಂದು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ನೆರವೇರಲಿದೆ. ಅಂದು 8 ವರ್ಷ ಮೇಲ್ಪಟ್ಟ ಜೈನ ಬಾಲಕ-ಬಾಲಕಿಯರಿಗೆ ಸಾಮೂಹಿಕ ವ್ರತೋಪದೇಶ ಹಾಗೂ ಎರಡರಿಂದ ಮೂರು ವರ್ಷದ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ವಿಶೇಷ ಜಿನಪೂಜೆಯೊಂದಿಗೆ ಶಾಸ್ತ್ರಗಳನ್ನು ಪೂಜಿಸಿ, ಪಠಿಸಿ ಜಿನವಾಣಿಗೆ ಭಕ್ತಿಭಾವದ ನಮನ ಸಲ್ಲಿಸಲಾಗುವುದು. ಸದ್ಧರ್ಮ ಬಾಂಧವರು ಈ ಪೂಜಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ. ವ್ರತೋಪದೇಶ ಹಾಗೂ ಅಕ್ಷರಾಭ್ಯಾಸದಲ್ಲಿ ಭಾಗವಹಿಸುವವರು ಶ್ರೀಮಠದ ಆಡಳಿತ ಕಾರ್ಯಾಲಯದಲ್ಲಿ ಸಂಪರ್ಕಿಸಬೇಕಾಗಿ ವಿನಂತಿ. ಸಂಪರ್ಕ: 08185-262722, 9481453653, 9483801460

ಕು. ಸಾನ್ವಿ ಮಲ್ಲಸಮುದ್ರಗೆ ಅಮೇರಿಕ ಅಧ್ಯಕ್ಷರಿಂದ ಶ್ರೇಷ್ಠ ಶೈಕ್ಷಣಿಕ ಅವಾರ್ಡ್

Article Image

ಕು. ಸಾನ್ವಿ ಮಲ್ಲಸಮುದ್ರಗೆ ಅಮೇರಿಕ ಅಧ್ಯಕ್ಷರಿಂದ ಶ್ರೇಷ್ಠ ಶೈಕ್ಷಣಿಕ ಅವಾರ್ಡ್

ಅಮೇರಿಕಾದ ಟೆಕ್ಸಾಸ್ ರಾಜ್ಯದ ಹೂಸ್ಟನ್ ನಗರದಲ್ಲಿ 5 ನೇ ತರಗತಿಯಲ್ಲಿ ಓದುತ್ತಿರುವ ಧಾರವಾಡದ ಲೇಖಕ ಶಾಂತರಾಜ ಮಲ್ಲಸಮುದ್ರ ಇವರ ಮೊಮ್ಮಗಳಾದ *ಕುಮಾರಿ ಸಾನ್ವಿ ಸೂರಜ ಮಲ್ಲಸಮುದ್ರ* ಇವಳಿಗೆ 2024 ಶೈಕ್ಷಣಿಕ ವರ್ಷದಲ್ಲಿ "President's award for educational excellence" ದೊರೆತಿದೆ. ಶಿಕ್ಷಣದಲ್ಲಿ ಸರ್ವಾ0ಗೀಣ ಉತ್ತಮ ಪ್ರಗತಿ ಮತ್ತು ಹಿರಿಮೆಯನ್ನು ಗುರುತಿಸಿ ಕೊಡುತ್ತಿರುವ ಈ ಪ್ರತಿಷ್ಠಿತ ಅವಾರ್ಡ್ ಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ದಿನಾಂಕ 23-5-2024 ರಂದು ಪ್ರದಾನ ಮಾಡಲಾಯಿತು. ಇವಳು ಶಿಕ್ಷಣದಲ್ಲಿ ಮಾತ್ರವಲ್ಲ ಅತ್ಯಂತ ಸಾಹಸದ ಕ್ರೀಡೆಯಾದ "ಈಜು" (swimming ) ನಲ್ಲೂ ಓಲಂಪಿಕ್ ಆಯ್ಕೆಗಾಗಿ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾಳೆ. ಈಗಾಗಲೇ ಈ ಕ್ರೀಡೆಯಿಂದ ಹಲವು ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾಳೆ. ಭಾರತ ದೇಶದ ಹೆಮ್ಮೆ ಮತ್ತು ಪ್ರತಿಷ್ಠೆಯನ್ನು ಹೆಚ್ಚಿಸಿದ ಕು. ಸಾನ್ವಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ನಿಮ್ಮೆಲ್ಲರ ಪ್ರೋತ್ಸಾಹ ಶುಬೇಚ್ಚೆ ಆಶೀರ್ವಾದ ಇರಲೆಂದು ಅಪೇಕ್ಷಿಸುತ್ತೇವೆ.

ವಿಮಲ ತಾಳಿಕೋಟಿ -ಸೇವಾರತ್ನ

Article Image

ವಿಮಲ ತಾಳಿಕೋಟಿ -ಸೇವಾರತ್ನ

ಸಿಂಗಾಪುರ: ಬೆಂಗಳೂರಿನ ಸುಹಾಸ್ತಿ ಯುವ ಜೈನ ಮಿಲನ್ ಸಂಘಟನೆಯು ಸಿಂಗಾಪುರದಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಅಂತರ ರಾಷ್ಟ್ರೀಯ ಜೈನ ಮಿಲನ್ ಸದಸ್ಯರ ಸಮಾವೇಶ "ಜಿನ ಸಮ್ಮಿಲನ"ದಲ್ಲಿ ಹುಬ್ಬಳ್ಳಿಯ ಸಮಾಜ ಸೇವಾಕರ್ತ ವಿಮಲ್ ತಾಳಿಕೋಟಿ ಅವರಿಗೆ, ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಸೇವೆಗಾಗಿ "ಸೇವಾರತ್ನ" ಪ್ರಶಸ್ತಿಯನ್ನು ನೀಡಿ ಅಭಿನಂದಿಸಿ ಗೌರವಿಸಲಾಯಿತು. ನವಗ್ರಹ ತೀರ್ಥ, ವರೂರಿನ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕರು, ಆರತಿಪುರ ಜೈನ ಮಠದ ಸ್ವಸ್ತಿಶ್ರೀ ಸಿದ್ಧಾಂತ ಕೀರ್ತಿ ಭಟ್ಟಾರಕರು, ಅಖಿಲ ಭಾರತ ಜೈನ ಮಿಲನ್ ಕಾರ್ಯಧ್ಯಕ್ಷ ಡಿ. ಸುರೇಂದ್ರಕುಮಾರ, ಅನಿತಾ ಸುರೇಂದ್ರಕುಮಾರ್, ಸುಹಾಸ್ತಿ ಜೈನ ಮಿಲನ್ ನ ಚಿತ್ತ ಜಿನೇಂದ್ರ ವಜ್ರ ಕುಮಾರ್, ಜಿನೇಂದ್ರ ಕಣಗಾವಿ ಯುವರಾಜ್ ಜೈನ್, ಮಾಳ ಹರ್ಷೇಂದ್ರ ಉಪಸ್ಥಿತರಿದ್ದರು. ಕರ್ನಾಟಕದಿಂದ 250ಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಸಿಂಗಪುರದ ಜೈನ್ ಸಮಾಜ ಅತ್ಯುತ್ತಮ ಸಹಕಾರ ನೀಡಿದರು. ಶಾಂತಿನಾಥ ಕೆ ಹೋತಪೇಟಿ

ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪನಾ ಮಹೋತ್ಸವ

Article Image

ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪನಾ ಮಹೋತ್ಸವ

ಸಹ್ಯಾದ್ರಿಯ ತಪ್ಪಲಿನಲ್ಲಿರುವ ಮಲೆನಾಡಿನ ಸುಂದರ ನಗರ ಶಿವಮೊಗ್ಗದ ಮಹಾವೀರ ನಗರದಲ್ಲಿರುವ ‌ಭಗವಾನ್‌ 1008 ಶ್ರೀ ಆದಿನಾಥ ಸ್ವಾಮಿ ಜಿನಮಂದಿರದಲ್ಲಿ ಮಾನ ಸ್ಥಂಭೋಪರಿ 24 ತೀರ್ಥಂಕರರ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪನೆ, ನೂತನ ಶಿಲಾಮಯ ಗರ್ಭಗುಡಿಯಲ್ಲಿ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಹಾಗೂ ಮಹಾಮಾತೆ ಶ್ರೀ ಜ್ವಾಲಾಮಾಲಿನೀ ದೇವಿ ಮತ್ತು ಕ್ಷೇತ್ರಪಾಲ ಪ್ರತಿಷ್ಠಾಪನೆ, ನಾಗ ಪ್ರತಿಷ್ಠೆ ಮುಂತಾದ ಕಾರ್ಯಕ್ರಮಗಳನ್ನು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಮಾರ್ಗದರ್ಶನ ಹಾಗೂ ನೇತೃತ್ವ ಮತ್ತು ನಾಡಿನ ಸಮಸ್ತ ಭಟ್ಟಾರಕ ಶ್ರೀಗಳವರ ಪಾವನ ಸಾನ್ನಿಧ್ಯದಲ್ಲಿ ಇಂದಿನಿಂದ (ಮೇ. 28) ಮೊದಲ್ಗೊಂಡು ಮೇ. 30ರವರೆಗೆ ಮೂರು ದಿನಗಳ ಕಾಲ ವೈಭವಪೂರ್ಣವಾಗಿ ಜರುಗಲಿದೆ.

'ಭುವನವಾಹಿನಿ' ಅಂಕಣಕಾರ ಎಂ.ರತ್ನ ಕುಮಾರ್ ರಿಗೆ ಕ.ಸಾ.ಪ. ಸನ್ಮಾನ

Article Image

'ಭುವನವಾಹಿನಿ' ಅಂಕಣಕಾರ ಎಂ.ರತ್ನ ಕುಮಾರ್ ರಿಗೆ ಕ.ಸಾ.ಪ. ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ 'ಹಿರಿಯ ಕವಿ ಮನೆ ಭೇಟಿ' ಸರಣಿ ಕಾರ್ಯಕ್ರಮದನ್ವಯ ಈ ಬಾರಿ ಕನ್ನಡದ ದೈನಿಕಗಳಾದ ನವ ಭಾರತ, ಉದಯವಾಣಿ, ಹೊಸದಿಗಂತ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುವ ಜೈನ ಮಾಸಿಕ 'ಭುವನವಾಹಿನಿ' ಪತ್ರಿಕೆಯ ಅಂಕಣಕಾರರಾಗಿರುವ ಹಿರಿಯ ಕನ್ನಡ, ತುಳು ಸಾಹಿತಿ ರತ್ನ ಕುಮಾರ್ ಎಂ. ಅವರ ಮನೆಗೆ ಭೇಟಿ ನೀಡಿ ಅವರನ್ನು ಹಾರ, ಶಾಲು, ಪೇಟ, ಶ್ರೀಫಲಾದಿಗಳನ್ನು ಸಮರ್ಪಿಸಿ, ಸನ್ಮಾನಿಸಿ, ಪುಸ್ತಕ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರತ್ನ ಕುಮಾರರು, ತಾನು ಬೆಳೆದು ಬಂದ ಹಾದಿಯನ್ನು ಹಂಚಿಕೊಂಡು "ಭಾಷೆ, ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ. ಸಾಹಿತಿಗಳಂತೂ ಹೊಸ ದೃಷ್ಟಿ, ಹೊಸ ಸೃಷ್ಟಿಯೊಂದಿಗೆ ಹೊಸ ಕೊಡುಗೆಗಳನ್ನು ನೀಡುತ್ತಲೇ ಇರಬೇಕು. ಹಿರಿಯ ಕವಿಗಳನ್ನು ಮನೆಗೇ ಬಂದು ಆತ್ಮೀಯವಾಗಿ ಸನ್ಮಾನಿಸುವ ಪರಿಷತ್ತಿನ ಕಾರ್ಯಕ್ರಮ ಅಭಿನಂದನೀಯ" ಎಂದು ನುಡಿದರು. ಘಟಕದ ಅಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣಕರ್ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ತಿನ ರತ್ನಾವತಿ ಜೆ. ಬೈಕಾಡಿಯವರು ಪ್ರಾರ್ಥಿಸಿದರು. ಕ. ಸಾ. ಪ. ಕೇಂದ್ರ ಮಾರ್ಗದರ್ಶನ ಸಮಿತಿ ಸದಸ್ಯ ಡಾ. ಮುರಲೀ ಮೋಹನ್ ಚೂಂತಾರ್ ಪ್ರಸ್ತಾವಿಸಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಗಣೇಶ ಪ್ರಸಾದಜೀ ರತ್ನ ಕುಮಾರ್ ರ ಬದುಕು ಬರಹಗಳ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮದಲ್ಲಿ ಪರಿಷತ್ತಿನ ಮಹಿಳಾ ಪ್ರತಿನಿಧಿ ಡಾ. ಮೀನಾಕ್ಷಿ ರಾಮಚಂದ್ರ, ಜಿಲ್ಲಾ ಪ್ರತಿನಿಧಿ ಸನತ್ ಕುಮಾರ್ ಜೈನ್, ರತ್ನ ಕುಮಾರ್ ರ ಪತ್ನಿ ಎಂ. ಎನ್. ಇಂದಿರಾ, ಪುತ್ರ ಅಜಿತ ಕುಮಾರ್, ಸೊಸೆ ಪ್ರದೀಪ್ತಾ ಅಜಿತ್, ಮೊಮ್ಮಕ್ಕಳು ಮತ್ತು ರತ್ನ ಕುಮಾರ್ ರ ಅಭಿಮಾನಿ ವೃಂದದವರು ಉಪಸ್ಥಿತರಿದ್ದರು. ಗೌರವ ಕೋಶಾಧಿಕಾರಿ ಸುಬ್ರಾಯ ಭಟ್ ವಂದಿಸಿದರು.

ಹಿರಿಯ ಸಂಶೋಧಕ ಡಾ. S. D. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Article Image

ಹಿರಿಯ ಸಂಶೋಧಕ ಡಾ. S. D. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ದಿನಾಂಕ 16.5.25ರಂದು ವಿಶೇಷ ಪೂಜೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸಂಶೋಧಕರೂ ಡಾ. ಹಾಮಾನಾ ಸಂಶೋಧನಾ ಕೇಂದ್ರ ಉಜಿರೆಯ ನಿರ್ದೇಶಕರೂ ಅದ ಡಾ. S. D. ಶೆಟ್ಟಿ ಹಾಗೂ ಸುಗುಣ ಶೆಟ್ಟಿ ದಂಪತಿಗಳನ್ನು ಅವರ ಸಾಧನೆ ಮತ್ತು ಮದುವೆಯ 50ನೇ ವರ್ಷದ ಪ್ರಯುಕ್ತ ಶ್ರೀ ಕ್ಷೇತ್ರ ಚಂದ್ರಪುರ ಆಡಳಿತ ಮಂಡಳಿಯ ಪರವಾಗಿ ಸಮಿತಿ ಸಂಚಾಲಕರು ಡಾ. ಜಯಕೀರ್ತಿ ಜೈನ್ ನೇತೃತ್ವದಲ್ಲಿ ಗೌರವಿಸಲಾಯಿತು. ಉಪಾಧ್ಯಕ್ಷ ಶ್ರೀ ಜಿನರಾಜ ಪೂವಣಿ ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕೊಕ್ಕಡ ಶಾಖೆಯ ಪ್ರಬಂಧಕರಾದ ಪಿ. ಅತೀಶಯ ಜೈನ್, ರಾಣಿ ಕಾಳಲಾ ದೇವಿ ಜೈನ್ ಮಹಿಳಾ ಸಮಾಜದ ರಕ್ಷಾ ಪುರೋಹಿತರಾದ ಅರಹಂತ ಇಂದ್ರ, ಜಿನೇಶ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

ಜೈನ್ ಮಿಲನ್ ಬಂಟ್ವಾಳ ಮತ್ತು ಜೈನ್ ಮಿಲನ್ ಮೂಡುಬಿದ್ರಿ ಇದರ ಜಂಟಿ ಮಾಸಿಕ ಸಭೆ

Article Image

ಜೈನ್ ಮಿಲನ್ ಬಂಟ್ವಾಳ ಮತ್ತು ಜೈನ್ ಮಿಲನ್ ಮೂಡುಬಿದ್ರಿ ಇದರ ಜಂಟಿ ಮಾಸಿಕ ಸಭೆ

ಬಂಟ್ವಾಳ : ಜೈನ್ ಮಿಲನ್ ಬಂಟ್ವಾಳ ಮತ್ತು ಜೈನ್ ಮಿಲನ್ ಮೂಡುಬಿದ್ರಿ ಇದರ ಜಂಟಿ ಮಾಸಿಕ ಸಭೆ ಹಾಗೂ ಡಾ. ಪ್ರಭಾಚಂದ್ರ ಜೈನ್ ರವರ ಅಭಿನಂದನಾ ಕಾರ್ಯಕ್ರಮ ದಿನಾಂಕ 4/5/2025ನೇ ಆದಿತ್ಯವಾರ ಸಿದ್ಧಕಟ್ಟೆ ನಲ್ಲೂರಂಗಡಿ ಬಸದಿಯ ಸ್ವಸ್ತಿಕ್ ಸಭಾಭವನದಲ್ಲಿ ನಡೆಯಿತು. ಜೈನ್ ಮಿಲನ್ ಬಂಟ್ವಾಳದ ಅಧ್ಯಕ್ಷರಾದ ಮಧ್ವರಾಜ್ ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಮಾರು ನಾಲ್ಕೂವರೆ ದಶಕಗಳಿಂದ ಸಿದ್ಧಕಟ್ಟೆಯಲ್ಲಿ ಜನಪ್ರಿಯ ವೈದ್ಯರಾಗಿರುವ ಪ್ರಭಾಚಂದ್ರ ಜೈನ್ ಇವರನ್ನು ಉಭಯ ಜೈನ್ ಮಿಲನ್‌ಗಳ ವತಿಯಿಂದ ಸನ್ಮಾನಿಸಲಾಯಿತು. ಡಾ. ಪ್ರಭಾಚಂದ್ರ ಜೈನ್ ಇವರನ್ನು ಸನ್ಮಾನಿಸಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಮಾತನಾಡುತ್ತಾ ಡಾ. ಪ್ರಭಾ ಚಂದ್ರ ಜೈನ್ ಕೇವಲ ವೈದ್ಯರು ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಸರಳ ಸಜ್ಜನಿಕೆಯ ವ್ಯಕ್ತಿತ್ವದವರು, ಇವರ ಅಭಿನಂದನಾ ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದರು. ನಲ್ಲೂರoಗಡಿ ಬಸದಿಯ ಮೊಕ್ತೇಸರರು ಮತ್ತು ಮಾಜಿ ಮಂತ್ರಿಗಳಾದ ಕೆ. ಅಭಯಚಂದ್ರ ಜೈನ್ ಮಾತನಾಡಿ ಜೈನ್ ಮಿಲನ್ ಗಳು ಸಮಾಜಕ್ಕೆ ಮಾದರಿಯಾದ ಕೆಲಸವನ್ನು ಮಾಡುತ್ತಿದೆ, ಸಿದ್ದಕಟ್ಟೆಯಲ್ಲಿ ಡಾ. ಪ್ರಭಾಚಚಂದ್ರ ಜೈನ್‌ರವರ ಆರೋಗ್ಯ ಸೇವೆಯನ್ನು ಪಡೆಯದ ವ್ಯಕ್ತಿಗಳಿಲ್ಲ ಅವರು ಕೇವಲ ವೈದ್ಯರಾಗಿರದೆ , ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು . ಭಾರತೀಯ ಜೈನ್ ಮಿಲನ್ ವಲಯ 8ರ ಉಪಾಧ್ಯಕ್ಷರಾದ ಸುದರ್ಶನ್ ಜೈನ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೂಡಬಿದ್ರೆಯ ನಿವೃತ್ತ ಕನ್ನಡ ಅಧ್ಯಾಪಕರಾದ ಶ್ರೀಧರ್ ಜೈನ್ ಅಭಿನಂದನ ಭಾಷಣ ಮಾಡಿದರು. ಡಾ. ಸುದೀಪ್ ಸಿದ್ದಕಟ್ಟೆ ಸನ್ಮಾನ ಪತ್ರವನ್ನು ವಾಚಿಸಿದರು. ರಶ್ಮಿತ ಯುವರಾಜ್ ಜೈನ್ ಅನಿಸಿಕೆಯನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಸುಭಾಶ್ಚಂದ್ರ ಜೈನ್, ಜಯರಾಜ ಕಂಬಳಿ, ರಾಜೇಶ್ ಕುಮಾರ್, ಪುಷ್ಪರಾಜ್, ಶಶಿಕಲಾ ಮತ್ತು ಗೀತಾ ಜಿನ ಚಂದ್ರ ಉಪಸ್ಥಿತರಿದ್ದರು. ಸಿದ್ಧಕಟ್ಟೆಯ ಶ್ರೀ ಅನಂತಪದ್ಮ ಮಹಿಳಾ ಸಂಘ, ಸ್ವಸ್ತಿಕ್ ಯುವಜನ ಸಂಘ, ಮೂಡಬಿದ್ರೆಯ ಸರ್ವಮಂಗಳ ಮಹಿಳಾ ಸಂಘದ ಅಧ್ಯಕ್ಷರು ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಶಾ ಸುಧಾಕರ್ ಮತ್ತು ಅರ್ಪಿತ ಪ್ರಾಣೇಶ್ ಪ್ರಾರ್ಥಿಸಿದರು. ಉದಯ್ ಕುಮಾರ್ ಜೈನ್ ಸ್ವಾಗತಿಸಿ ನಿರಂಜನ್ ಕುಮಾರ್ ಧನ್ಯವಾದ ನೀಡಿದರು. ಭರತ್ ಕುಮಾರ್ ಮತ್ತು ಸುಪ್ರಿಯ ಕಾರ್ಯಕ್ರಮ ನಿರೂಪಿಸಿದರು.

ವೀರೇಂದ್ರ ಕುಮಾರ್ ಬೇಗೂರ್ ಅವರಿಗೆ ಗೌರವ ಸನ್ಮಾನ

Article Image

ವೀರೇಂದ್ರ ಕುಮಾರ್ ಬೇಗೂರ್ ಅವರಿಗೆ ಗೌರವ ಸನ್ಮಾನ

ಜೈನಧರ್ಮ ಸಿದ್ಧಾಂತದ ಬಗ್ಗೆ ವೀರೇಂದ್ರ ಕುಮಾರ್ ಬೇಗೂರ್ ರವರು ಶಾಸನೋಕ್ತ ಮಾಹಿತಿಯ ಉಪನ್ಯಾಸವನ್ನು ದಿನಾಂಕ 10 -5- 2025 ಶನಿವಾರ ಹಾಗೂ 11-5-2025 ರ ಭಾನುವಾರ ನೀಡಿದರು. ಐತಿಹಾಸಿಕ ಜ್ಞಾನವನ್ನು ಪ್ರಶಂಸಿಸಿ ತ್ರಿಲೋಕ ಜೈನ್ ಮಿಲನ್ ಹಾಗೂ ಹಾಸನದ ಜೈನ ಸಮಾಜದ ವತಿಯಿಂದ ಗೌರವ ಸನ್ಮಾನ ಮಾಡಲಾಯಿತು. ತ್ರಿಲೋಕ್ ಜೈನ್ ಮಿಲನ್ ಹಾಸನದವರು ಈಎರಡೂ ದಿನದ ಕಾರ್ಯಕ್ರಮವನ್ನು ಹಿರಿಯ ಶ್ರಾವಕ ಶ್ರಾವಕೀಯರಿಗಾಗಿ ಹಾಸನ ಜೈನ್ ಭವನದಲ್ಲಿ ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಾಣಿ ರತ್ನಾಕರ್ ರವರು ನಿರ್ವಹಿಸಿದರು. ವೀರೇಂದ್ರ ಕುಮಾರ್ ಬೇಗೂರ್ ಮಿಲನ್ ವತಿಯಿಂದ ಡಾ. ಅಶ್ವಿನ್ ಕುಮಾರ್ ರವರು ಗೌರವಿಸಿದರು.

ಮೂಡುಬಿದಿರೆ: ಶ್ರೀ ದಿಗಂಬರ ಜೈನ ಮಠದಲ್ಲಿ ಸಾಮೂಹಿಕ ಪ್ರಾರ್ಥನೆ

Article Image

ಮೂಡುಬಿದಿರೆ: ಶ್ರೀ ದಿಗಂಬರ ಜೈನ ಮಠದಲ್ಲಿ ಸಾಮೂಹಿಕ ಪ್ರಾರ್ಥನೆ

ನಮ್ಮ ರಾಷ್ಟ್ರದ ಯುದ್ಧ ಸನ್ನಿವೇಶದ ಸಂದರ್ಭದಲ್ಲಿ ಜೈನ ಕಾಶಿ ಶ್ರೀ ದಿಗಂಬರ ಜೈನ ಮಠದಲ್ಲಿ 11.5.2025 ರಂದು ಬೆಳಿಗ್ಗೆ 8.45ಕ್ಕೆ ಸಾಮೂಹಿಕ ಪ್ರಾರ್ಥನೆಯನ್ನು ಮಾಡಲಾಯಿತು ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ, ಉಪಸ್ಥಿತಿಯಲ್ಲಿ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ ಕ್ಷೀರ ಅಭಿಷೇಕ ನೆರವೇರಿಸಿ, ಪಟ್ಟದ ಮಹಾ ಮಾತೆ ಅಭಿಷ್ಟವರ ಪ್ರಧಾಯಿನಿ ಯಕ್ಷಿ ಕೂಷ್ಮಾoಡಿನೀದೇವಿ, ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಮಾಡಿ, ಯುದ್ಧ ಸಂಧರ್ಭ ಎಲ್ಲಾ ಭಯೋತ್ಪದನೆ ದೂರವಾಗಲಿ ಸರ್ವ ಧರ್ಮಿಯರು ಸರ್ವ ಭಾಷೆಯವರು ನಾವೆಲ್ಲರೂ ಐಕ್ಯತೆಯಿಂದ ಭಾರತ ದೇಶದ ವಿಜಯ ಪ್ರಾಪ್ತಿಗಾಗಿ ಪ್ರಾರ್ಥಿಸೋಣ ಲೋಕದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಯಾಗಲಿ ಇಂತಹ ವಿಷಮ ಸ್ಥಿತಿಯಲ್ಲಿ ರಾಷ್ಟ್ರ ಧರ್ಮದ ಏಕತೆಗಾಗಿ ಶ್ರಮಿಸೋಣ ಭಾರತ ಸರಕಾರ ಹಾಗೂ ಸೈನಿಕರ ಆತ್ಮ ಸ್ಥೈರ್ಯ ಹೆಚ್ಚಿಸೋಣ ಎಂದು ಶ್ರೀ ಗಳವರು ನುಡಿದರು ಅಭಯ ಚಂದ್ರ ಜೈನ್, ದಯಾನಂದ ಪೈ, ವಿಜಯ ಕುಮಾರ್, ಬಾಹುಬಲಿ ಪ್ರಸಾದ್, ಎ ಗುಣಪಾಲ್ ಹೆಗ್ಡೆ, ಗುಣಪಾಲ್ ಮುದ್ಯ ನಿರಂಜನ್, ರಾಘವೇಂದ್ರ ಭಂಡಾರ್ಕರ್, ಶ್ರೀಧರ್ ಅರಮನೆ, ವೃoದ ರಾಜೇಂದ್ರ, ಶ್ವೇತಾ ಜೈನ್ ,ವೀಣಾ, ಸುದಾ, ಮಂಜುಳಾ ಅಭಯ ಚಂದ್ರ ಮೊದಲಾದವರಿದ್ದರು ವರದಿ: ಸಂಜಯಂತ ಕುಮಾರ್ ಶೆಟ್ಟಿ ವ್ಯವಸ್ಥಾಪಕರು, ಸ್ವಸ್ತಿಶ್ರೀ ಭಟ್ಟಾರಕ ನಗರ, ಶ್ರೀ ದಿಗಂಬರ ಜೈನ ಮಠ ಮೂಡುಬಿದಿರೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Article Image

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಯನ್ನು ದಿನಾಂಕ 8.5.25 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ನಡೆಸಲಾಯಿತು.. ಈ ಸಂದರ್ಭದಲ್ಲಿ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದರು.

ಧಾರವಾಡ: ಸಾಂಸ್ಕೃತಿಕ ಕಾರ್ಯಕ್ರಮ

Article Image

ಧಾರವಾಡ: ಸಾಂಸ್ಕೃತಿಕ ಕಾರ್ಯಕ್ರಮ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಅಲೈಡ ಹೆಲ್ತ್ ಸೈನ್ಸಸ್ ವಿಭಾಗದವರಿಂದ “ಪರ್ವ 2025” ಅನ್ನು “ದಿ ಫ್ರಾಸ್ಟಿವಲ್ - ವಿಂಟರ್ಸ್ ಸಿಂಫನಿ” ಎಂಬ ಧ್ಯೇಯೆಯೊಂದಿಗೆ ಎರಡು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿದರು. ಪದ್ಮಲತಾ ನಿರಂಜನ್ ಮತ್ತು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ ಅವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ, ವಿದ್ಯಾರ್ಥಿಗಳು ಸೃಜನಶೀಲತೆಯಿಂದ ಏನು ಬೇಕಾದರೂ ಸಾಧಿಸಬಹುದು. ಎಲ್ಲಾ ಆರೋಗ್ಯ ವೃತ್ತಿಪರರು ರೋಗಿಗಳನ್ನು ನೋಡಿಕೊಳ್ಳಲು ಉತ್ತಮ ಮನಸ್ಸಿನಿಂದ ಕೆಲಸ ಮಾಡಬೇಕು ಪೂರ್ಣ ಸಮರ್ಪಣೆ ಮತ್ತು ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ನಿಮ್ಮ ಜ್ಞಾನ ಮತ್ತು ನವೀನ ಕೌಶಲ್ಯಗಳನ್ನು ನವೀಕರಿಸುತ್ತಿರಬೇಕು. ಅಭಿವೃದ್ಧಿ ಒಳ್ಳೆಯ ಉದ್ದೇಶಕ್ಕಾಗಿ ನಡೆಯಬೇಕು. ಶಿಸ್ತಿನಿಂದ ಎಸ್.ಡಿ.ಎಂ. ಹೆಸರು ಮತ್ತು ಖ್ಯಾತಿಯನ್ನು ಜಾಗತಿಕವಾಗಿ ಮುಂದೆ ತರಬೇಕು. ರೋಗಿಯ ಸುರಕ್ಷತೆ ಮತ್ತು ಉತ್ತಮ ಅಭ್ಯಾಸಗಳು ವಿದ್ಯಾರ್ಥಿಗಳ ಮೂಲ ಉದ್ದೇಶ. ಬುದ್ಧಿವಂತ ವ್ಯಕ್ತಿಯಾಗುವುದಕ್ಕಿಂತ ಜ್ಞಾನವುಳ್ಳ ವ್ಯಕ್ತಿಯಾಗುವುದು ಹೆಚ್ಚು ಮುಖ್ಯ ಎಂದು ಹೇಳಿದರು. ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗ್ಡೆ, ಅಲೈಡ್ ಹೆಲ್ತ್ ಸೈನ್ಸಸ್‌ನ ಸಂಯೋಜಕರಾದ ಡಾ. ವಿದ್ಯಾ ಎಸ್. ಪಾಟೀಲ್ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸೂರಜ್ ಮತ್ತು ಎಲ್ಹಾಮ್ ಖಾನ್ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಅತಿಥಿಗಳನ್ನು ಸ್ವಾಗತಿಸಿದರು. ಆಂಜೆಲ್ ಬ್ಲಿಸ್ಸಿ ವಂದನಾರ್ಪಣೆ ಸಲ್ಲಿಸಿದರು.

ವೇಣೂರು: ಬಾಹುಬಲಿ ಸಭಾಭವನದಲ್ಲಿ ಸಾಮೂಹಿಕ ವೃತೋಪದೇಶ

Article Image

ವೇಣೂರು: ಬಾಹುಬಲಿ ಸಭಾಭವನದಲ್ಲಿ ಸಾಮೂಹಿಕ ವೃತೋಪದೇಶ

ಉಜಿರೆ: ಸಮ್ಯಕ್‌ದರ್ಶನ, ಸಮ್ಯಕ್‌ಜ್ಞಾನ ಮತ್ತು ಸಮ್ಯಕ್‌ಚಾರಿತ್ರ್ಯಂ ಎಂಬ ರತ್ನತ್ರಯ ಧರ್ಮದ ಪಾಲನೆಯೊಂದಿಗೆ ರಾಗ-ದ್ವೇಷ ರಹಿತನಾದ ವೀತರಾಗ ಭಗವಂತನ ಶ್ರದ್ಧಾ-ಭಕ್ತಿಯ ಧ್ಯಾನದಿಂದ ಮೋಕ್ಷ ಪ್ರಾಪ್ತಿ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ವೇಣೂರಿನಲ್ಲಿ ಬಾಹುಬಲಿ ಸಭಾಭವನದಲ್ಲಿ ಬಾಹುಬಲಿ ಯುವಜನ ಸಂಘ, ದಿಗಂಬರ ಜೈನತೀರ್ಥಕ್ಷೇತ್ರ ಸಮಿತಿ ಹಾಗೂ ಬ್ರಾಹ್ಮಿ ಮಹಿಳಾ ಮಂಡಲದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಸಾಮೂಹಿಕ ವೃತೋಪದೇಶ ಸಮಾರಂಭದಲ್ಲಿ 53 ಮಂದಿ ಬಾಲಕರು ಮತ್ತು ಬಾಲಕಿಯರಗೆ ವೃತೋಪದೇಶ ನೀಡಿ ಆಶೀರ್ವದಿಸಿದರು. ವೃತ ಸ್ವೀಕಾರದಿಂದ ವರ್ತನೆಗಳ ಪರಿವರ್ತನೆ ಹಾಗೂ ಸುಧಾರಣೆಯಾಗುತ್ತದೆ. ಮನ, ವಚನ, ಕಾಯದಿಂದ ಪರಿಶುದ್ಧರಾಗಿ ದೇವರು, ಗುರುಗಳು ಮತ್ತು ಶಾಸ್ತçದಲ್ಲಿ ಅಚಲ ನಂಬಿಕೆ ಇಟ್ಟು ನಿತ್ಯವೂ ಜಪ, ತಪ, ಧ್ಯಾನದ ಮೂಲಕ ಆತ್ಮನಿಗಂಟಿದ ಸಕಲ ಪಾಪ ಕರ್ಮಗಳ ಕೊಳೆ ಕಳೆದುಕೊಂಡಾಗ ಮೋಕ್ಷ ಪ್ರಾಫ್ತಿಯಾಗುತ್ತದೆ. ನಿತ್ಯವೂ ಪಂಚಾಣುವೃತಗಳ ಪಾಲನೆ ಮಾಡಬೇಕು. ನೀರನ್ನು ಸೋಸಿ ಕುಡಿಯಬೇಕು ಹಾಗೂ ರಾತ್ರಿ ಭೋಜನ ತ್ಯಾಗ ಮಾಡಿ “ಬದುಕು ಮತ್ತು ಬದುಕಲು ಬಿಡು” ಎಂಬ ತತ್ವದೊಂದಿಗೆ ಸಾತ್ವಿಕ ಜೀವನ ನಡೆಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಜನಿವಾರ ಎಂಬುದು ರತ್ನತ್ರಯ ಧರ್ಮ ಧಾರಣೆಯ ಸಂಕೇತ. ಬೀಗದ ಕೀ ಹಾಕಲು ಅಥವಾ ಬೆನ್ನು ತುರಿಸಲು ಅದನ್ನು ಬಳಸಬಾರದು ಎಂದು ಅವರು ಕಿವಿಮಾತು ಹೇಳಿದರು. ಮಾತಾ-ಪಿತರನ್ನು ಹಾಗೂ ಗುರು-ಹಿರಿಯರನ್ನು ಗೌರವಿಸಿ ಎಲ್ಲರೊಂದಿಗೂ ಪ್ರೀತಿ-ವಿಶ್ವಾಸದೊಂದಿಗೆ ಆದರ್ಶ ಜೀವನ ನಡೆಸಬೇಕು ಎಂದು ಸ್ವಾಮೀಜಿ ಹೇಳಿದರು. ಎಲ್ಲರಿಗೂ ಜನಿವಾರ ವಿತರಿಸಿ, ಸಾಮೂಹಿಕವಾಗಿ ಪಂಚನಮಸ್ಕಾರ ಮಂತ್ರ ಪಠಣ ನಡೆಸಲಾಯಿತು.

ನಾರಾವಿಯಲ್ಲಿ ಅದ್ದೂರಿಯಾಗಿ ನಡೆದ ಭ. ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣ ಮಹೋತ್ಸವ

Article Image

ನಾರಾವಿಯಲ್ಲಿ ಅದ್ದೂರಿಯಾಗಿ ನಡೆದ ಭ. ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣ ಮಹೋತ್ಸವ

ನಾರಾವಿ: ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣ ಮಹೋತ್ಸವವು ಅತ್ಯಂತ ಅದ್ದೂರಿಯಾಗಿ ನೆರೆವೇರಿತು. ಜಿನ ಭಗವಂತರಿಗೆ ಶ್ರಾವಕ ಬಂಧುಗಳು ಹಾಗೂ ಮಕ್ಕಳು ಜಿನಭಿಷೇಕ ಮಾಡುವುದರ ಮೂಲಕ ಪುಣ್ಯ ಪಡೆದುಕೊಂಡರು. ಜೈನ ಯುವಜನ ಸಂಘದ ಪದಾಧಿಕಾರಿಗಳು ಕಾರ್ಯಕ್ರಮ ಆಯೋಜಿಸಿದ್ದರು. ಆಡಳಿತ ಸಮಿತಿ ನಾರಾವಿ ಹಾಗೂ ಜೈನ್ ಮಿಲನ್ ನಾರಾವಿ ಮತ್ತು ಊರ ಹಾಗೂ ಪರವೂರ ಶ್ರಾವಕ ಬಂಧುಗಳ ಸಹಕಾರದಿಂದ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

First Previous

Showing 3 of 8 pages

Next Last