Article Image

ಜಿನ ಸಹಸ್ರನಾಮ ಮತ್ತು ಭಕ್ತಾಮರ ಪುಂಜ ಅರ್ಘ್ಯ

Article Image

ಜಿನ ಸಹಸ್ರನಾಮ ಮತ್ತು ಭಕ್ತಾಮರ ಪುಂಜ ಅರ್ಘ್ಯ

ಅಳಿಯೂರು: ಇಲ್ಲಿನ ಆದಿನಾಥ ಸ್ವಾಮಿ ಬಸದಿಯಲ್ಲಿ ನಾಳೆ (ಫೆ. 26) ಮಧ್ಯಾಹ್ನ 2.00ರಿಂದ‌ ಭಗವಾನ್‌ ಶ್ರೀ ಆದಿನಾಥ ಸ್ವಾಮಿಯ ಮೋಕ್ಷ ಕಲ್ಯಾಣ ಪರ್ವ ದಿನದ ಪ್ರಯುಕ್ತ ಶ್ರೀ ಜ್ವಾಲಾಮಾಲಿನಿ ಮಹಿಳಾ ಸಂಘದ ವತಿಯಿಂದ ಜಿನ ಸಹಸ್ರನಾಮ ಮತ್ತು ಭಕ್ತಾಮರ ಪುಂಜ ಅರ್ಘ್ಯ ನಡೆಯಲಿದೆ. ಹಾಗೂ ಸಂಜೆ ಗಂಟೆ 6.30ಕ್ಕೆ ಆರತಿ ಮತ್ತು ಜಿನಭಜನೆ ಕಾ‍ರ್ಯಕ್ರಮ ಜರಗಲಿದೆ.

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

Article Image

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯು ಊರ ಹಾಗೂ ಪರವೂರ ದಾನಿಗಳಿಂದ ಜೀರ್ಣೋದ್ಧಾರಗೊಂಡಿದ್ದು, ಧಾಮ ಸಂಪ್ರೋಕ್ಷಣ ಮಹೋತ್ಸವವು ಫೆ. 28 (ಶುಕ್ರವಾರ) ಹಾಗೂ ಮಾರ್ಚ್ 1 (ಶನಿವಾರ) ಮತ್ತು 2 ರಂದು (ಭಾನುವಾರ) ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ ಎಂದು ಬಸದಿಯ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಹೆಗ್ಡೆ, ಎರ್ಮೆದೋಡಿ ಗುತ್ತು ಮತ್ತು ಕಾರ್ಯದರ್ಶಿ ಸುರೇಶ್ ಕುಮಾರ್, ಉಜಿರೆ ತಿಳಿಸಿದ್ದಾರೆ. ಫೆ:28: ಶುಕ್ರವಾರ: ಬೆಳಿಗ್ಗೆ ಗಂಟೆ 8 ರಿಂದ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ. ಅಪರಾಹ್ನ ಗಂಟೆ 2.30ರಿಂದ ನಾಂದಿಮಂಗಲ ಪೂಜಾವಿಧಾನ, ಕ್ಷೇತ್ರಪಾಲ ಪ್ರತಿಷ್ಠೆ, ನಾಗಪ್ರತಿಷ್ಠೆ, ಭಗವಾನ್ ಆದಿನಾಥ ಸ್ವಾಮಿಗೆ 24 ಕಲಶ ಅಭಿಷೇಕ, ಮಹಾಪೂಜೆ ಮಾ. 1: ಶನಿವಾರ: ಬೆಳಿಗ್ಗೆ 8 ಗಂಟೆಯಿಂದ ನಿತ್ಯವಿಧಿ ಸಹಿತ ವಾಸ್ತು ಪೂಜಾವಿಧಾನ, ನವಗ್ರಹ ಶಾಂತಿ, ಅಪರಾಹ್ನ ಗಂಟೆ 2 ರಿಂದ ಪದ್ಮಾವತಿ ದೇವಿಗೆ ರಜತಕವಚ ಸಮರ್ಪಣೆ, ಆರಾಧನೆ, ಲಕ್ಷ ಹೂವಿನ ಪೂಜೆ, ಭಗವಾನ್ ಆದಿನಾಥ ಸ್ವಾಮಿಗೆ ೫೪ ಕಲಶ ಅಭಿಷೇಕ, ಮಹಾಪೂಜೆ ಮಾ. 2: ಭಾನುವಾರ: ಬೆಳಿಗ್ಗೆ ಗಂಟೆ 8 ರಿಂದ ಧಾಮ ಸಂಪ್ರೋಕ್ಷಣೆ, ಭಗವಾನ್ ಆದಿನಾಥ ಸ್ವಾಮಿ ಪ್ರತಿಷ್ಠೆ, ಶಿಖರಾರೋಹಣ. ಅಪರಾಹ್ನ ಗಂಟೆ 3.30 ರಿಂದ ಭಕ್ತಾಮರ ಆರಾಧನೆ. ಭಗವಾನ್ ಆದಿನಾಥ ಸ್ವಾಮಿಗೆ 108 ಕಲಶ ಅಭಿಷೇಕ, ಮಹಾಪೂಜೆ, ತೋರಣ ವಿಸರ್ಜನೆ. ಸೇವಾಕರ್ತೃಗಳು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬಸ್ಥರು. ಪ್ರತಿಷ್ಠಾಚಾರ್ಯ ಬೆಳ್ತಂಗಡಿ ಜಯರಾಜ ಇಂದ್ರರು, ಪುಷ್ಪರಾಜ ಇಂದ್ರರು ಮತ್ತು ಸ್ಥಳ ಪುರೋಹಿತ ವೃಷಭರಾಜ ಇಂದ್ರರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸುವರು. ಧಾರ್ಮಿಕ ಸಭೆ: ಮಾ. 2 ರಂದು ಭಾನುವಾರ ಸಂಜೆ 5 ಗಂಟೆಯಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸುವರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಕಿಶೋರ್ ಹೆಗ್ಡೆ: ಮೊ: 9148659620

ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ

Article Image

ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ

ಭಾರತೀಯ ಜೈನ್ ಮಿಲನ್ ವಲಯ 8, ಮಂಗಳೂರು ವಿಭಾಗ ಇದರ ಆಶ್ರಯದಲ್ಲಿ ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ ಹಾಗೂ ಜಿನ ಭಜನ ವಿಜೇತ ತಂಡಗಳಿಗೆ ಪುರಸ್ಕಾರ ಸಮಾರಂಭ ಮತ್ತು ಮಾಹಿತಿ ಕಾರ್ಯಕ್ರಮವು ದಿನಾಂಕ 23- 2 -2025 ಆದಿತ್ಯವಾರ ಅಪರಾಹ್ನ 3.30ಕ್ಕೆ ಸರಿಯಾಗಿ ಕುಪ್ಪೆಪದವು ಅನಂತರಾಜ್ ಸಭಾಭವನದಲ್ಲಿ ನಡೆಯಿತು. ಪ್ರಾರಂಭದಲ್ಲಿ ನೇರೆಂಕಿ ಪಾರ್ಶ್ವನಾಥ್ ಮೂಡಬಿದ್ರೆ ಇವರು ಜೈನ ಬಸದಿಗಳ ದಾಖಲೀಕರಣದ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿವರಣೆಯೊಂದಿಗೆ ನಡೆಸಿಕೊಟ್ಟರು. ಬಳಿಕ ನಡೆದ ಮಾಸಿಕ ಸಭೆಯಲ್ಲಿ ನೇರಂಕಿ ಪಾರ್ಶ್ವನಾಥ್ ಇವರನ್ನು ಸನ್ಮಾನಿಸಲಾಯಿತು . ವಿಜೇತ ಜಿನಭಜನಾ ತಂಡಗಳಾದ ಅನಂತ ಶ್ರೀ ಜನಭಜನಾ ತಂಡ ಬಜಗೋಳಿ, ಬ್ರಾಹ್ಮಿ ಜಿನಭಜನಾ ತಂಡ ಮೂಡಬಿದ್ರೆ , ಸಮ್ಯಕ್ತ ಜಿನಭಜನಾ ತಂಡ, ಬಂಟ್ವಾಳ, ಅನಂತಪಾರ್ಶ್ವ ಜಿನಭಜನಾ ತಂಡ ಕುಪ್ಪೆ ಪದವು ಇದರ ಸದಸ್ಯರನ್ನು ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ. ಉಜ್ವಲ ಕಂಬಳಿ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಭಾಗ 8ರ ಉಪಾಧ್ಯಕ್ಷರಾದ ಸುದರ್ಶನ್ ಜೈನ್ ವಹಿಸಿದ್ದರು. ಮಧ್ವರಾಜ್ ಜೈನ್ ಅಧ್ಯಕ್ಷರು ಬಂಟ್ವಾಳ ಜೈನ್ ಮಿಲನ್, ಸ್ವರ್ಣ ಲತಾ ಅಜಿತ್ ಕುಮಾರ್ ಅಧ್ಯಕ್ಷರು ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆ ಪದವು ಉಪಸ್ಥಿತರಿದ್ದರು. ಜೈನ್ ಮಿಲನ್ ವಲಯ 8ರ ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಜೈನ್ ಜಿನಭಜನಾ ತಂಡಗಳಿಗೆ ಪುರಸ್ಕಾರ ನೀಡಿ ಅಭಿನಂದಿಸಿದರು. ವಲಯ ನಿರ್ದೇಶಕರಾದ ಸೋಮಶೇಖರ್ ಶೆಟ್ಟಿ, ಪ್ರಮೋದ್ ಕುಮಾರ್, ಶ್ರೀವರ್ಮ ಅಜ್ರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಡಾ. ಸುದೀಪ್ ಕುಮಾರ್ ಮಾಜಿ ಅಧ್ಯಕ್ಷರು, ಜೈನ್ ಮಿಲನ್ ಬಂಟ್ವಾಳ, ಭೋಜರಾಜ ಜೈನ್ ಸ್ಥಾಪಕ ಅಧ್ಯಕ್ಷರು ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆಪದವು ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಿಲನ್ ಕಾರ್ಯದರ್ಶಿಗಳಾದ ಭರತ್ ಕುಮಾರ್, ಹರ್ಷ ಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅನ್ವಿತಾ ಜೈನ್ ಸ್ವಾಗತಿಸಿ, ಸುಪ್ರಿಯಾ ಭರತ್ ಧನ್ಯವಾದ ನೀಡಿದರು. ಕಾಂಚನಶ್ರೀ, ನಿಶ್ಚಿತಾ ಜೈನ್ ಸನ್ಮಾನ ಪತ್ರವನ್ನು ಓದಿದರು. ಮಂಗಳೂರು ವಿಭಾಗ ಕಾರ್ಯದರ್ಶಿ, ವೀರ್ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು. ಜೈನ್ ಮಿಲನ್ ಕುಪ್ಪೆಪದವು ಆತಿಥ್ಯವನ್ನು ವಹಿಸಿದ್ದರು.

ಹಂ.ಪ. ನಾಗರಾಜಯ್ಯ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ

Article Image

ಹಂ.ಪ. ನಾಗರಾಜಯ್ಯ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ

ಉಡುಪಿ, ಫೆ. 24: ಮಾಹೆ ವಿ.ವಿ.ಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡುವ ಟಿ. ವಿಮಲಾ ಪೈ ಪ್ರಾಯೋಜಿತ 2024ನೇ ಸಾಲಿನ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಹಿರಿಯ ಸಾಹಿತಿ ಪ್ರೊ| ಹಂ.ಪ. ನಾಗರಾಜಯ್ಯ(ಹಂಪನಾ) ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲ. ರೂ., ಪಾರಿತೋಷಕ, ಪ್ರಶಸ್ತಿಪತ್ರ ಒಳಗೊಂಡಿದೆ. ಮಾ.23ರಂದು ಗೋವಿಂದ ಪೈ ಸಂಶೋಧನ ಸಂಪುಟದ ದ್ವಿತೀಯ ಭಾಗದ ಬಿಡುಗಡೆ ಕಾರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಸಮಿತಿ ಸದಸ್ಯರಾದ ಡಾ| ತಾಳ್ತಜೆ ವಸಂತ ಕುಮಾರ್, ಡಾ| ಕೆ. ಚಿನ್ನಪ್ಪ ಗೌಡ, ಡಾ| ಪ್ರಭಾಕರ ಜೋಷಿ, ಡಾ| ಕಿಶೋರಿ ನಾಯಕ್‌, ಡಾ| ಎಸ್. ಪಾಡೀಗಾರ್ ಸಹಕರಿಸಿದ್ದಾರೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಪದವಿ ಪ್ರದಾನ

Article Image

ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಪದವಿ ಪ್ರದಾನ

ಜಮಖಂಡಿಯ ೧೦೦೮ ಶ್ರೀ ಪಾರ್ಶ್ವನಾಥ ದಿಗಂಬರ ಜೈನ್ ಮಂದಿರದ ಅರ್ಚಕರಾದ ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಜಿಂಜರ್ ವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಪಂಚಕಲ್ಯಾಣ ಪ್ರತಿಷ್ಠ ಮಹಾಮಹೋತ್ಸವದಲ್ಲಿ “ಸಾಧನ ರತ್ನ” ಪ್ರಶಸ್ತಿಯನ್ನು ಹಾಗೂ ಜೈನ್ ಇಂಡಿಯನ್ ಟಿ.ವಿ ವತಿಯಿಂದ “ಕರ್ನಾಟಕ ಪುರೋಹಿತ ರತ್ನ” ಎಂಬ ಪದವಿಯನ್ನು ನೀಡಿ ಗೌರವಿಸಲಾಗಿದೆ. ಇವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ: ಪ್ರತಿಷ್ಠ ರತ್ನ, ಪ್ರತಿಷ್ಠ ಶಿರೋಮಣಿ, ಪ್ರತಿಷ್ಠ ಬಾಸ್ಕರ, ಪ್ರತಿಷ್ಠ ಪ್ರವೀಣ, ಪಂಡಿತರತ್ನ, ವಾಣಿಭೂಷಣ, ಪ್ರತಿಷ್ಠಾಚಾರ್ಯ.

ಮೈಸೂರು: ವಾರ್ಷಿಕ ಪೂಜಾ ಮಹೋತ್ಸವ

Article Image

ಮೈಸೂರು: ವಾರ್ಷಿಕ ಪೂಜಾ ಮಹೋತ್ಸವ

ಮೈಸೂರು: ಇಲ್ಲಿಯ ಶ್ರೀ ಆದಿನಾಥ ತೀರ್ಥಂಕರ ಸೇವಾ ಸಮಿತಿಯವರ ಆಶ್ರಯದಲ್ಲಿ ಶ್ರೀ ೧೦೦೮ ಆದಿನಾಥ ತೀರ್ಥಂಕರರ ಮೋಕ್ಷ ಕಲ್ಯಾಣ ಜಿನರಾತ್ರಿ ವಾರ್ಷಿಕ ಪೂಜಾ ಮಹೋತ್ಸವ ಆಚರಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಆದಿನಾಥ ಸಭಾಂಗಣ ಶ್ರೀ ಕ್ಷೇತ್ರ ಶ್ರೀರಂಗ ಪಟ್ಟಣದಲ್ಲಿ ದಿನಾಂಕ 27-02-2025ನೇ ಗುರುವಾರದಂದು ನಡೆಯಲಿದೆ. ಪಾವನ ಸಾನ್ನಿಧ್ಯ, ಆಶೀರ್ವಚನ: ಪ.ಪೂ. ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಶ್ರೀ ಕ್ಷೇತ್ರ ಕನಕಗಿರಿ ಅಧ್ಯಕ್ಷತೆ: ಬಿ.ಎಸ್. ಸಂತೋಷ್ ಕುಮಾರ, ಅಧ್ಯಕ್ಷರು, ಶ್ರೀ ಆದಿನಾಥ ಸೇವಾ ಟ್ರಸ್ಟ್, ಮೈಸೂರು ಉಪನ್ಯಾಸ: ಪಂಪ ಮಹಾಕವಿ ವಿರಚಿತ ಆದಿ ಪುರಾಣ ಉಪನ್ಯಾಸಕರು: ಡಾ. ಹೆಚ್.ಪಿ. ಮೋಹನ ಕುಮಾರ ಶಾಸ್ತ್ರಿ, ಕುಲಸಚಿವರು, ಆಚಾರ್ಯ ಗುರುಕುಲ, ಮೈಸೂರು ದಿವ್ಯ ಉಪಸ್ಥಿತಿ: ಪ್ರತಿಷ್ಟಾಚಾರ್ಯ ಎಸ್. ಎಂ. ಸನ್ಮತಿಕುಮಾರ ಶಾಸ್ತ್ರಿ, ಶ್ರೀರಂಗ ಪಟ್ಟಣ ಕ್ಷೇತ್ರ ಸಂರಕ್ಷಕರು ಮತ್ತು ಶ್ರಾವಿಕಭೂಷಣೆ ಪದ್ಮಲತಾ ಸನ್ಮತಿಕುಮಾರ, ಶ್ರೀ ಕ್ಷೇತ್ರ ಶ್ರೀ ರಂಗ ಪಟ್ಟಣ, ಮಂಡ್ಯ ಜಿಲ್ಲೆ.

ಕಾರ್ಕಳ: ಭಾರತೀಯ ಜೈನ್‌ ಮಿಲನಿನ ಮಾಸಿಕ ಸಭೆ

Article Image

ಕಾರ್ಕಳ: ಭಾರತೀಯ ಜೈನ್‌ ಮಿಲನಿನ ಮಾಸಿಕ ಸಭೆ

ಕಾರ್ಕಳ: ಇಲ್ಲಿಯ ಭಾರತೀಯ ಜೈನ್‌ ಮಿಲನಿನ ಫೆಬ್ರವರಿ ತಿಂಗಳ ಮಾಸಿಕ ಸಭೆಯು ನಾಳೆ (ಫೆ.23) ಹಿರಿಯಂಗಡಿಯಲ್ಲಿರುವ ಶ್ರೀ ಮಹಾವೀರ ಭವನದಲ್ಲಿ ನಡೆಯಲಿದೆ. ಚಾವಡಿ ಚರ್ಚೆ: ವಿಷಯ: ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಆಧುನಿಕತೆ ನಡೆಸಿಕೊಡುವವರು: ಮುನಿರಾಜ ರೆಂಜಾಳ ಭಾಗವಹಿಸುವವರು: ಮಹಾವೀರ ಜೈನ್‌ ಇಚಲಂಪಾಡಿ, ನಿರಂಜನ್‌ ಅಳಿಯೂರು, ಅಜಿತ್‌ ಕುಮಾರ್‌ ಜೈನ್‌ ಕೊಕ್ರಾಡಿ, ಶ್ವೇತಾ ಜೈನ್‌ ಮೂಡುಬಿದಿರೆ.

ವಿಟ್ಲ: ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ

Article Image

ವಿಟ್ಲ: ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ

ಶ್ರೀ ಕ್ಷೇತ್ರ ವಿಟ್ಲದಲ್ಲಿ ಫೆಬ್ರವರಿ 13 ರಿಂದ ಫೆ. 17ರವರೆಗೆ ನಡೆಯುತ್ತಿರುವ ಭ|| 1008 ಚಂದ್ರನಾಥ ಸ್ವಾಮಿ ಬಸದಿಯ ಪಂಚಕಲ್ಯಾಣ ಮಹೋತ್ಸವದಲ್ಲಿ ದಿನಾಂಕ 16-02-2025ರ ಭಾನುವಾರದಂದು ಸಂಜೆ 7.00 ಗಂಟೆಗೆ ಮಂಗಳೂರು ಜೈನ ಸಮಾಜ ಅರ್ಪಿಸುವ “ ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ” ಜರುಗಲಿದೆ. ಸಾಹಿತ್ಯ ಮತ್ತು ನಿರ್ದೇಶನ: ಸುಕುಮಾರ್ ಬಲ್ಲಾಳ್ ಮಂಗಳೂರು ನೃತ್ಯ ನಿರ್ದೇಶನ: ವಿಧುಷಿ ಶಾಶ್ವತಿ ಸಚಿನ್ ಮಂಗಳೂರು ರಂಗ ನಿರ್ವಹಣೆ ಹಾಗೂ ಸಂಯೋಜನೆ: ಸಚಿನ್ ಜೈನ್ ಮಂಗಳೂರು ಸಂಗೀತ: ಜಿನಗಾನ ವಿಶಾರದೆ ಜಯಶ್ರೀ ಡಿ. ಜೈನ್ ಹೊರನಾಡು ವಿಶೇಷ ಆಕರ್ಷಣೆ: ನವಿಲು ಬಸದಿಯಲ್ಲಿ ನವಿಲು ನೃತ್ಯ ಪುಟ್ಟ ಮಕ್ಕಳಿಂದ ಸಮವಸರಣ ನಿರ್ಮಾಣ ಒಂದೇ ವೇದಿಕೆಯಲ್ಲಿ ನೂರು ಶ್ರಾವಕ-ಶ್ರಾವಕಿಯರ ಅಭೂತಪೂರ್ವ ಪ್ರದರ್ಶನ.

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಗೆ ಪದವಿ

Article Image

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಗೆ ಪದವಿ

ಶ್ರೀ ಧ ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯೂಷ್ ಸಚಿವರಾದ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಇವರಿಂದ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಪದವಿಯನ್ನು ಪಡೆದರು. ಇವರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಹಾಗೂ ರತ್ನಶ್ರೀ ದಂಪತಿ ಪುತ್ರ. ಇವರು ಇದೇ ಕಾಲೇಜಿನಲ್ಲಿ ಎಮ್. ಡಿಗೆ (ಸ್ನಾತಕೋತ್ತರ ಪದವಿ) ಪ್ರವೇಶಾತಿಯನ್ನು ಪಡೆದಿದ್ದಾರೆ.

ಅಬ್ಯಾಕಸ್ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಷಡ್ಜ

Article Image

ಅಬ್ಯಾಕಸ್ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಷಡ್ಜ

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ಬಾಲ್ಯದಲ್ಲಿಯೇ ಅತ್ಯಂತ ಅದ್ಬುತ ಪ್ರತಿಭಾವಂತ ಪುಟ್ಟ ಬಾಲಕ ಷಡ್ಜ ಹುಬ್ಬಳ್ಳಿಯಲ್ಲಿ ಎಜು ಸ್ಮಾರ್ಟ್ ಕೇರ್ "ಅಬ್ಯಾಕಸ್" ( ಅಂಕಗಣಿತದ ಕೌಶಲ್ಯ) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಬೆಂಗಳೂರಿನಲ್ಲಿಯೂ ಪ್ರಥಮ ಬಹುಮಾನ ತನ್ನದಾಗಿರಿಸಿಕೊಂಡಿದ್ದಾನೆ. ಇದೀಗ ಮುಂಬೈಯಲ್ಲಿ ಕಳೆದ ವಾರ ನಡೆದ 17ನೇ ರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದುಕೊಂಡು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ, ಅಬ್ಯಾಕಸ್ ಮತ್ತು ಗ್ರೇಡಿಂಗ್ ಪರೀಕ್ಷೆಯಲ್ಲಿ "ಅಚೀವರ್ " ಪ್ರಶಸ್ತಿ ಪಡೆದ ಈ ಬಾಲಕ ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾನೆ. ಇವನು ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ ನ ಸದಸ್ಯರು ಧರ್ಮನುರಾಗಿಗಳೂ ಆದ ಶಿಲ್ಪಾ ವಿಜಯಕುಮಾರ ಕಾಶಿನ ಅವರ ಮೊಮ್ಮಗ, ಉಪನ್ಯಾಸಕಿ ಭಾಗ್ಯಶ್ರೀ ಮತ್ತು ಭಾರತೀಯ ಅಂಚೆ ಇಲಾಖೆಯ ಉದ್ಯೋಗಿ ಜೀವಂಧರ ಕಾಶಿನರವರ ಪುತ್ರ, ಪ್ರಭಾ ನಾಯಕ್ ಇವರು ಷಡ್ಜನಿಗೆ ಮಾರ್ಗದರ್ಶಕರಾಗಿ ಪ್ರೇರಣೆ ಪ್ರೋತ್ಸಾಹ ನೀಡಿದ್ದಾರೆ. ಶಾಂತರಾಜ ಮಲ್ಲಸಮುದ್ರ

ಇಂಡಿಯನ್ ವುಮೆನ್ ನೆಟ್‌ವಕ್‌೯ನ 2025-26ನೇ ಸಾಲಿನ ಅಧ್ಯಕ್ಷೆಯಾಗಿ ಪದ್ಮಿನಿ ಎಸ್. ನವಲಗೂಂದ ಆಯ್ಕೆ

Article Image

ಇಂಡಿಯನ್ ವುಮೆನ್ ನೆಟ್‌ವಕ್‌೯ನ 2025-26ನೇ ಸಾಲಿನ ಅಧ್ಯಕ್ಷೆಯಾಗಿ ಪದ್ಮಿನಿ ಎಸ್. ನವಲಗೂಂದ ಆಯ್ಕೆ

ಇಂಡಿಯನ್ ವುಮೆನ್ ನೆಟ್‌ವಕ್‌೯ (ಸಿಐಐ-ಐಡಬ್ಲ್ಯುಎನ್) ಕರ್ನಾಟಕ, 2025-26ನೇ ಸಾಲಿನ ಅಧ್ಯಕ್ಷೆಯಾಗಿ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಪೂರ್ವ ವಿದ್ಯಾರ್ಥಿನಿ ಪದ್ಮಿನಿ ಎಸ್. ನವಲಗೂಂದ ಅವರ ನೇಮಕವನ್ನು ಫೆಬ್ರವರಿ 5, 2025 ರಂದು ಬೆಂಗಳೂರಿನಲ್ಲಿ ನಡೆದ ವಾರ್ಷಿಕ ಸಮ್ಮೇಳನದಲ್ಲಿ ಘೋಷಿಸಿದೆ. ಸ್ವೀಕಾರ ಭಾಷಣದಲ್ಲಿ, ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿ, ಮಹಿಳಾ ವೃತ್ತಿಪರರಿಗೆ ಬೆಂಬಲಾತ್ಮಕ ಪರಿಸರವನ್ನು ನಿರ್ಮಿಸಲು ತಮ್ಮ ಬದ್ಧತೆಯನ್ನು ವಿವರಿಸುತ್ತಾ, ಮುಂದಿನ ವರ್ಷದ ದೃಷ್ಟಿಕೋನವನ್ನು ಹಂಚಿಕೊಂಡರು. ಇವರು, ಹುಬ್ಬಳ್ಳಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಪೂರ್ವ ವಿದ್ಯಾರ್ಥಿನಿ, ಪ್ರಸ್ತುತ ಬೋಶ್ ಗ್ಲೋಬಲ್ ಸಾಫ್ಟ್‌ವೇರ್ ಟೆಕ್ನಾಲಜೀಸ್ ಲಿಮಿಟೆಡ್‌ನಲ್ಲಿ ಉತ್ಪನ್ನ ಅನುಕೂಲತೆ ಅಧಿಕಾರಿ. ಡಿಟ್ರಾಯಿಟ್ನಲ್ಲಿ 2024ನೇ ಸಾಲಿನಲ್ಲಿ ಆಟೋಮೋಟಿವ್ ವುಮೆನ್ ಆಫ್ ದ ಇಯರ್ ಪ್ರಶಸ್ತಿಯನ್ನು ಪಡೆದಿರುವ ಪ್ರಥಮ ಭಾರತೀಯ ಮಹಿಳೆ. ಅವರು ಮಹಿಳಾ ನೆಟ್‌ವಕ್‌೯ಗೆ ಸಹಾಯ ಮಾಡುವ ಹಲವಾರು ಉಪಕ್ರಮಗಳನ್ನು ಚಲಾಯಿಸುವಲ್ಲಿ ವಿಶಾಲ ಅನುಭವವನ್ನು ಹೊಂದಿರುವ ನಾಯಕಿಯಾಗಿರುತ್ತಾರೆ.

ಬಜಿರೆ: ಬಸದಿಯಲ್ಲಿ ವಾರ್ಷಿಕ ಪೂಜಾ ಮಹೋತ್ಸವ

Article Image

ಬಜಿರೆ: ಬಸದಿಯಲ್ಲಿ ವಾರ್ಷಿಕ ಪೂಜಾ ಮಹೋತ್ಸವ

ಉಜಿರೆ: ವೇಣೂರು ಬಳಿ ಇರುವ ಬಜಿರೆ ಗ್ರಾಮದ ಹಲ್ಲಂದೋಡಿ ಬಸದಿ ಭಗವಾನ್ ವರ್ಧಮಾನ ಸ್ವಾಮಿ ಸನ್ನಿಧಿಯಲ್ಲಿ ಇದೇ 26 ರಂದು ಭಾನುವಾರ ವಾರ್ಷಿಕ ಪೂಜಾಮಹೋತ್ಸವ ನಡೆಯಲಿದೆ ಎಂದು ಬಸದಿಯ ಬಿ. ಶಶಿಕುಮಾರ್ ಇಂದ್ರ ತಿಳಿಸಿದ್ದಾರೆ. ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಭಾನುವಾರ ಬೆಳಿಗ್ಗೆ ಏಳು ಗಂಟೆಯಿಂದ ವಿಮಾನಶುದ್ಧಿ, ಶಾಂತಿ ಹೋಮದ ಬಳಿಕ 108 ಕಲಶ ಅಭಿಶೇಕ ನಡೆಯಲಿದೆ. ಅಪರಾಹ್ನ ಎರಡು ಗಂಟೆಯಿಂದ ಕಲಿಕುಂಡಯಂತ್ರಾರಾಧನೆ, ಅಷ್ಟಾವಧಾನ ಪೂಜೆ ನಡೆಯಲಿದೆ. ಸಂಜೆ ಗಂಟೆ 5.30 ರಿಂದ ಪದ್ಮಾವತಿ ಅಮ್ಮನವರಿಗೆ ಲಕ್ಷಹೂವಿನ ಪೂಜೆ ನಡೆಯಲಿದೆ. ಬಳಿಕ ಮೂಡಬಿದ್ರೆಯ ಪೂಜ್ಯ ಚಾರುಕೀರ್ತಿ ಭಟ್ಟಾರಕಸ್ವಾಮೀಜಿ ಮಂಗಲಪ್ರವಚನ ನೀಡುವರು.

ನಿತಿನ್ ಹೆಚ್.ಪಿ. ರವರಿಗೆ 'ಸಂಸ್ಕೃತಿ ಸಂರಕ್ಷಕ' ಗೌರವ

Article Image

ನಿತಿನ್ ಹೆಚ್.ಪಿ. ರವರಿಗೆ 'ಸಂಸ್ಕೃತಿ ಸಂರಕ್ಷಕ' ಗೌರವ

ಕೋಲ್ಕತಾ, ಡಿಸೆಂಬರ್ 30, 2024: ಐಟಿ ತಂತ್ರಜ್ಞ, ಜೈನ ಸಂಶೋಧಕ ಹಾಗೂ www.jainheritagecentres.com (ಜೈನ್ ಹೆರಿಟೇಜ್ ಸೆಂಟರ್ಸ್.ಕಾಂ) ನ ಸಂಸ್ಥಾಪಕರು ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ನಿತಿನ್ ಹೆಚ್.ಪಿ. ರವರ "ಜೈನಧರ್ಮದ ಸಂರಕ್ಷಣೆ ಮತ್ತು ಸಂವರ್ಧನೆ"ಯ ಕಾರ್ಯವನ್ನು ಗುರುತಿಸಿ, ಶ್ರೀ ಭಾರತವಾರ್ಷೀಯ ದಿಗಂಬರ ಜೈನ ತೀರ್ಥಸಂರಕ್ಷಿಣಿ ಮಹಾಸಭಾದ ಪಶ್ಚಿಮ ಬಂಗಾಳ ವಿಭಾಗವು "ಸಂಸ್ಕೃತಿ ಸಂರಕ್ಷಕ" ಎಂಬ ಬಿರುದನ್ನು ನೀಡಿ ಗೌರವಿಸಿದೆ. ಕೋಲ್ಕತ್ತಾದ ಬಡಾ ಬಜಾರ್ ನ ಜೈನಭವನದಲ್ಲಿ 30 ಡಿಸೆಂಬರ್ 2024ರಂದು ನಡೆದ ವಿಶೇಷ ಸಮಾರಂಭದಲ್ಲಿ ಇವರನ್ನು ಸತ್ಕರಿಸಿ ಸನ್ಮಾನಿಸಲಾಯಿತು. ನಿತಿನ್ ರವರು ಕರ್ನಾಟಕ ವಲ್ಲದೇ ಭಾರತದ ಇತರ ರಾಜ್ಯಗಳ ಅದರಲ್ಲೂ ವಿಶೇಷವಾಗಿ ಪಶ್ಚಿಮ ಬಂಗಾಳ ರಾಜ್ಯದ ಜೈನ ಪರಂಪರೆ ಕೇಂದ್ರಗಳಿಗೆ ಕ್ಷೇತ್ರಕಾರ್ಯವನ್ನು ಕೈಗೊಂಡು ಪಶ್ಚಿಮ ಬಂಗಾಳದಲ್ಲಿ ಜೈನಧರ್ಮದ ಕುರಿತು ಕಳೆದ ಎರಡು ವರ್ಷಗಳಿಂದ ವಿಶೇಷ ಸಂಶೋಧನೆಯನ್ನು ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ದಿಗಂಬರ ಜೈನ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ ರಾಜ್ ಕುಮಾರ್ ಸೇಠಿ, ಮಹಾಸಭಾದ ಪಶ್ಚಿಮ ಬಂಗಾಳ ವಿಭಾಗದ ಪದಾಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

10ನೇ ವರ್ಷದ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Article Image

10ನೇ ವರ್ಷದ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ವೇಣೂರು: ಇಲ್ಲಿನ ಶ್ರೀ ಬಾಹುಬಲಿ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಜೈನ ಭಾಂಧವರಿಗಾಗಿ 10ನೇ ವರ್ಷದ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು “ಶ್ರೀ ಬಾಹುಬಲಿ ಟ್ರೋಫಿ 2025” ಬಾಹುಬಲಿ ಬೆಟ್ಟದ ಬಳಿ ಇರುವ “ಇಂದ್ರ ಗ್ರೌಂಡ್”ನಲ್ಲಿ ಜ. 04ರಂದು ನಡೆಯಿತು. ಮೂಡುಬಿದಿರೆ ಶ್ರೀ ಜೈನ ಮಠದ ಭಾರತಭೂಷಣ ಪ. ಪೂ. ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪಾವನ ಸಾನ್ನಿಧ್ಯವಹಿಸಿ, ಕ್ರೀಡೆಯ ಬಗ್ಗೆ ಇರುವ ಅಭಿಮಾನವನ್ನು ವ್ಯಕ್ತಪಡಿಸಿ ಆಶೀರ್ವಚನವನ್ನಿತ್ತರು. ಕಾರ್ಯಕ್ರಮದ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಜೈನ್ ನೆರವೇರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ, ದ.ಕ, ಜೈನ್ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷರಾದ ವಿನಯ್ ಹೆಗ್ಡೆ ನಾರಾವಿ ವಹಿಸಿದ್ದರು. ಮುಖ್ಯ ಅತಿಥಿಗಳಾದ ವೇಣೂರಿನ ಪದ್ಮಾಂಬ ಸಮೂಹ ಸಂಸ್ಥೆಗಳ ಮಾಲಕರಾದ ಜಿನರಾಜ್ ಜೈನ್, ಜೈನ್ ಮಿಲನ್ ಅಧ್ಯಕ್ಷರಾದ ಸುಕುಮಾರ್ ಜೈನ್, ಬಾಹುಬಲಿ ಯುವಜನ ಸಂಘದ ಅಧ್ಯಕ್ಷರಾದ ಪ್ರಭಾಚಂದ್ರ ಜೈನ್, ಶಮಂತ್ ಕುಮಾರ್ ಜೈನ್ ಕಳೆಂಜಿರೋಡಿ ಪಡಂಗಡಿ, ಸತ್ಯಪ್ರಸಾದ್ ವಿ. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ| ಕೆ. ರವೀಂದ್ರನಾಥ್ ಪ್ರಸಾದ್, ಡಾ. ಜಯಕೀರ್ತಿಜೈನ್, ಸತೀಶ್ ಕೊಂಬ, ಜಿನರಾಜ್ ಜೈನ್ ಅವರನ್ನು ಸನ್ಮಾನಿಸಲಾಯಿತು. ನಿಧಿ, ಸುಶ್ಮಿತಾ, ಋತ್ವಿರವರು ಪ್ರಾರ್ಥಿಸಿದರು. ನಿಧಿರವರು ಸ್ವಾಗತಿಸಿ, ಮಹಾವೀರ ಜೈನ್ ಮೂಡುಕೋಡಿಗುತ್ತುರವರು ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ನಡೆದು. ಜ. 05ರಂದು ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿನಯ ಕುಮಾರ್ ಜೈನ್‌ರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಪ್ರಶಾಂತ್ ಕರಿಮುಗೇರು, ಸಂಭಾಷಣೆ ಉದಯಕುಮಾರ್, ಜಿನರಾಜ್ ಜೈನ್, ಸುದತ್ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸನ್ಮತ್‌ರಾಜ್ ನಿರೂಪಿಸಿದರು. ವಿಜೇತರ ಪಟ್ಟಿ: ಪ್ರಥಮ ಬಹುಮಾನ: ಬಳಂಜ ಟೀಮ್ ದ್ವಿತೀಯ ಬಹುಮಾನ: ಜೈನ್ ಫ್ರೆಂಡ್ಸ್ ಮೂಡುಬಿದಿರೆ ತೃತೀಯ ಬಹುಮಾನ: ಶ್ರೀ ಬಾಹುಬಲಿ ವೇಣೂರು ಚತುರ್ಥ ಬಹುಮಾನ: ಅರ್ವ ಟೀಮ್

ಮಲೆನಾಡು ಜೈನ್ ಮಿಲನ್ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಶೃಂಗೇರಿ ಚಿನಿವಾರ್ ರಾಜಶೇಖರಯ್ಯ ಜನ್ಮ ಶತಮಾನೋತ್ಸವ

Article Image

ಮಲೆನಾಡು ಜೈನ್ ಮಿಲನ್ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಶೃಂಗೇರಿ ಚಿನಿವಾರ್ ರಾಜಶೇಖರಯ್ಯ ಜನ್ಮ ಶತಮಾನೋತ್ಸವ

ನ.16: ಮೇಲ್ಕಂಡ ಸಂಸ್ಥೆಯ ಆಶ್ರಯದಲ್ಲಿ ಶೃಂಗೇರಿ ಸ್ವಾತಂತ್ರ್ಯ ಹೋರಾಟಗಾರ ಶೃಂಗೇರಿ ಚಿನಿವಾಶ್ ರಾಜಶೇಖರಯ್ಯನವರ ಜನ್ಮ ಶತಮಾನೋತ್ಸವವನ್ನು ಶೃಂಗೇರಿ ಬಸದಿ ಆವರಣದಲ್ಲಿ ಆಚರಿಸಲಾಯಿತು. ಚಿನಿವಾಶ್ ರಾಜಶೇಖರಯ್ಯನವರ ಮಗಳು ಕೀರ್ತಿಲತಾ ಮಲ್ಲಪ್ರಸಾದ್ ಶ್ರೀಯುತರ ಸ್ಮರಣಾರ್ಥ ಹತ್ತು ಜನ ಫಲಾನುಭವಿಗಳಿಗೆ ತಲಾ ಹತ್ತು ಸಾವಿರ ರೂ. ಸಹಾಯಧನ ನೀಡಿದರು. ಮಿಲನ್‌ನ ಅಧ್ಯಕ್ಷ ಶ್ರೇಣಿಕ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಶಿಲ್ಪಾರವಿ ಹಾಗೂ ಪ್ರವೀಣ್ ಪೂಜಾರಿ ಅತಿಥಿಗಳಾಗಿ ಆಗಮಿಸಿದ್ದರು. ಜೇಸಿ ಟ್ರೈನರ್ ಎನ್. ಪಿ. ಪಾಂಡುರಂಗ ರಾಜಶೇಖರಯ್ಯನವರ ಗುಣಗಾನ ಮಾಡಿದರು. ಕೀರ್ತಿಲತಾ ಪ್ರಾಸ್ತಾವಿಕ ಭಾಷಣ ಮಾಡಿದರು. ಡಾ| ನಿರಂಜನ್ ಸ್ವಾಗತಿಸಿ ಶುಭಾಶ್ಚಂದ್ರ ವಂದಿಸಿದರು ನಂತರ ಜೈನ ಬಸದಿಯಲ್ಲಿ ಮಿಲನ್ ಸದಸ್ಯರು ಶ್ರದ್ಧಾಭಕ್ತಿಯೊಂದಿಗೆ ದೀಪೋತ್ಸವ ಆಚರಿಸಿದು. ಶಶಿಪ್ರಭಾ ಶಾಂತಕುಮಾರ್ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮವನ್ನು ಶ್ರಾವಕಿಯರು ನಡೆಸಿಕೊಟ್ಟರು.

ಮಂಗಳೂರು ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ

Article Image

ಮಂಗಳೂರು ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ

ಉಜಿರೆ: ಸಾಹಿತ್ಯಕ್ಕೂ ಸಂಗೀತಕ್ಕೂ ಅವಿನಾಭಾವ ಸಂಬಂಧವಿದ್ದು, ಅಂತರಾತ್ಮದಲ್ಲಿ ದೇವರನ್ನು ಸ್ಮರಿಸಿ ಧ್ಯಾನ ಮಾಡಿ ರಾಗ, ತಾಳ, ಲಯ ಬದ್ಧವಾಗಿ ಭಜನೆ ಹಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ಮಕ್ಕಳಿಗೂ, ನಿತ್ಯವೂ ಭಜನೆ ಹಾಡುವ ಸಂಸ್ಕಾರವನ್ನು ನೀಡಿದರೆ ಅವರು ಧರ್ಮದ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡಿದಂತಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಭಾರತೀಯ ಜೈನ್‌ಮಿಲನ್ ನೇತೃತ್ವದಲ್ಲಿ ಬೆಳ್ತಂಗಡಿ ಜೈನ್‌ಮಿಲನ್ ಶಾಖೆಯ ಸಹಯೋಗದೊಂದಿಗೆ ಆಯೋಜಿಸಿದ ಮಂಗಳೂರು ವಿಭಾಗಮಟ್ಟದ ಜಿನಭಜನಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಭಜನೆಯನ್ನು ಸ್ಪರ್ಧೆಗಾಗಿ ಕಲಿಯದೆ ಮನೆಯಲ್ಲಿ ನಿತ್ಯವೂ ಸಹಜವಾಗಿ ಭಜನೆ ಹಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಸೋಲು-ಗೆಲುವಿನ ಬಗ್ಯೆ ಚಿಂತಿಸದೆ ಎಲ್ಲರೂ ಸ್ಪರ್ಧೆಯಲ್ಲಿ ಭಾಗವಹಿಸಿ ಭಜನಾ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಹೇಳಿದರು. ಸಾಧ್ಯವಾದರೆ ಮಕ್ಕಳೆ ಸಾಹಿತ್ಯ ರಚನೆ ಮಾಡಿ ರಾಗ, ಭಾವ, ತಾಳ ಸಂಯೋಜನೆಯೊAದಿಗೆ ಭಜನೆ ಹಾಡುವ ಅಭ್ಯಾಸ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಇಂದು(ಸೋಮವಾರ) ಹೆಗ್ಗಡೆಯವರ 76ನೆ ಜನ್ಮದಿನ ಆಚರಣೆಗಾಗಿ ನಿರೀಕ್ಷಾ ಹೊಸ್ಮಾರು ಜನ್ಮದಿನದ ಶುಭಾಶಯ ಕೋರುವ ಹಾಡೊಂದನ್ನು ಸುಶ್ರಾವ್ಯವಾಗಿ ಹಾಡಿದರು. ಜೈನ್‌ಮಿಲನ್ ವತಿಯಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳನ್ನು ಗೌರವಪೂರ್ವಕವಾಗಿ ಅರ್ಪಿಸಲಾಯಿತು. ಭಾರತೀಯ ಜೈನ್‌ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ಅನಿತಾ ಸುರೇಂದ್ರಕುಮಾರ್, ಉಜಿರೆಯ ಸೋನಿಯಾ ಯಶೋವರ್ಮ, ಪೂರನ್‌ವರ್ಮ, ಪೆರಿಂಜೆ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನದ ಆಡಳಿತಮೊಕ್ತೇಸರ ಜೀವಂಧರಕುಮಾರ್, ಭಾರತೀಯ ಜೈನ್‌ಮಿಲನ್ ವಲಯ 8 ರ ಕಾರ್ಯಾಧ್ಯಕ್ಷ ಪ್ರಸನ್ನಕುಮಾರ್, ಮೂಡಬಿದ್ರೆಯ ನೋಟರಿ ಶ್ವೇತಾ ಜೈನ್, ಕಾರ್ಕಳದ ಶಶಿಕಲಾ ಹೆಗ್ಡೆ, ವೇಣೂರು ಜೈನತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣಕುಮಾರ್ ಇಂದ್ರ ಮತ್ತು ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್‌ಕುಮಾರ್ ಜೈನ್ ಹಾಗೂ ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ಡಾ. ನವೀನ್ ಕುಮಾರ್ ಜೈನ್ ಉಪಸ್ಥಿತರಿದ್ದರು. ಸುದರ್ಶನ್‌ಜೈನ್ ಬಂಟ್ವಾಳ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಜಿರೆಯ ಬಿ. ಸೋಮಶೇಖರ ಶೆಟ್ಟಿ ಧನ್ಯವಾದವಿತ್ತರು. ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಉಪನ್ಯಾಸಕಿ ದಿವ್ಯಾ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು. ಭಜನಾ ಸ್ಪರ್ಧೆಯಲ್ಲಿ ಹಿರಿಯರ ವಿಭಾಗದಲ್ಲಿ ೪೫ ತಂಡಗಳು ಹಾಗೂ ಕಿರಿಯರ ವಿಭಾಗದಲ್ಲಿ 32 ತಂಡಗಳು ಸೇರಿದಂತೆ ಒಟ್ಟು ಐದುನೂರಕ್ಕೂ ಮಿಕ್ಕಿ ಸ್ಪರ್ಧಿಗಳು ಭಾಗವಹಿಸಿದರು.

ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವ: ಮಕ್ಕಿಮನೆ ಕಲಾವೃಂದದಿಂದ ಸಾಂಸ್ಕ್ರತಿಕ ಕಾರ್ಯಕ್

Article Image

ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವ: ಮಕ್ಕಿಮನೆ ಕಲಾವೃಂದದಿಂದ ಸಾಂಸ್ಕ್ರತಿಕ ಕಾರ್ಯಕ್

ರಿಪ್ಪನ್ ಪೇಟೆ: ಅತಿಶಯ ಶ್ರೀ ಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾ ಸನ್ನಿಧಿಯಲ್ಲಿ ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಯವರ ನೇತೃತ್ವದಲ್ಲಿ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಶನಿವಾರ (16-11-2024) ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು ಎಲ್ಲರ ಮೆಚ್ಚುಗೆ ಪಡೆಯಿತು. ಅನನ್ಯ ರಂಜನಿ, ನೀಶ್ಮಾ ಜೈನ್, ದೀಪ್ತಿ ಜೈನ್, ಅರೀಕಾ ಜೈನ್, ಜಯಂತಿ ಜೈನ್, ಅನಘ ಜೈನ್, ಅವನಿ ಜೈನ್, ಅರುಹ ಜೈನ್, ಈಯಾ ಜೈನ್ ಭಾಗವಹಿಸಿದರು. ವಾಣಿಶ್ರೀ ಜೈನ್ ಕಾರ್ಯಕ್ರಮ ನಿರೂಪಿಸಿದರು. ರತ್ವಿಕ್ ಜೈನ್, ಪ್ರಪುಲ್ಲ ಜೈನ್, ಸನ್ಮತ್ ರಾಜ್ ಜೈನ್ ಸಹಕರಿಸಿದರು. ಈ ಸಂದರ್ಭದಲ್ಲಿ 105 ಶಿವಮತಿ ಮಾತಾಜಿ ಮತ್ತು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿ ಹಾಗೂ ಶ್ರೀ ಕ್ಷೇತ್ರ ಸೋಂದಾ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಮಹಾಸ್ವಾಮಿಯವರು ಉಪಸ್ಥಿತರಿದ್ದು ಎಲ್ಲ ಕಲಾವಿದರನ್ನು ಆಶಿರ್ವದಿಸಿ ಗೌರವಿಸಿದರು .

ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Article Image

ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಅವರಿಗೆ 2024 ನೇಯ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಾಪ್ತವಾಗಿದೆ. ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಿಲಾಗಿದೆ. ನವೆಂಬರ್ ಒಂದರಂದು ಕರ್ನಾಟಕ ರಾಜ್ಯೋತ್ಸವದ ಶುಭಾವಸರದಲ್ಲಿ ಮಂಗಳೂರಿನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಈ ಪುರಸ್ಕಾರವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಯುವರಾಜ ಜೈನ್ ಅವರಿಗೆ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ

Article Image

ಯುವರಾಜ ಜೈನ್ ಅವರಿಗೆ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ

ಯುವರಾಜ ಜೈನ್ ಅವರಿಗೆ ಮಾನ್ಯತೆ ಪಡೆದ ಅನುದಾನ ರಹಿತ ಸಂಘ ಕರ್ನಾಟಕ (RECOGNISED UNAIDED PRIVAT SCHOOLS ASSOCIATION OF KARNATAKA) ರುಪ್ಸಾ ಇವರು ಕೊಡಮಾಡುವ 2024-25 ನೇ ಸಾಲಿನ 'ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ' ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಇವರಿಗೆ ನೀಡಲಾಯಿತು. ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟ್ರದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಶ್ರೀಯುತರು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕ್ರತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ. ಕಳೆದ ಮೂರು ದಶಕಗಳಿಂದ ಶಿಕ್ಷಣ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಇತ್ತೀಚೆಗೆ ಅಗಲಿದ ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ನುಡಿ ನಮನ

Article Image

ಇತ್ತೀಚೆಗೆ ಅಗಲಿದ ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ನುಡಿ ನಮನ

ಮೂಡುಬಿದಿರೆ, ಶ್ರೀ ದಿಗಂಬರ ಜೈನ ವಿದ್ಯಾವರ್ಧಕ ಸಂಘ(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜೈನ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 21-10-2024 ನೇ‌ ಸೋಮವಾರದಂದು ಇತ್ತೀಚೆಗೆ ಅಗಲಿದ ಯಶಸ್ವಿ ಹಿರಿಯ ಉದ್ಯಮಿ, ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ನುಡಿ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿ.ಜೆ.ವಿ.ಸಂಘ(ರಿ.) ಹಾಗೂ ಕಾಲೇಜಿನ ಗೌರವಾನ್ವಿತ ಸಂಚಾಲಕರಾದ ಕೆ. ಹೇಮರಾಜ್ ಇವರು ಜ್ಯೋತಿಯನ್ನು ಬೆಳಗಿಸುವ ಮೂಲಕ ರತನ್ ಟಾಟಾ ಅವರಿಗೆ ಗೌರವವನ್ನು ಸಮರ್ಪಿಸಿದರು. ನಂತರ ಮಾತನಾಡುತ್ತಾ " ದೇಶ ಕಂಡ ಅಪರೂಪದ, ಅಗ್ರಗಣ್ಯ ವಾಣಿಜ್ಯೋದ್ಯಮಿ ಹಾಗೂ ಮಾನವತಾವಾದಿಗಳಲ್ಲಿ ರತನ್ ಟಾಟಾ ಒಬ್ಬರಾಗಿದ್ದಾರೆ. ನನ್ನ ಬದುಕು ಎಂದಿಗೂ ಭಾರತದ ಅಭಿವೃದ್ಧಿಗಾಗಿ ಮುಡಿಪು ಎಂದು ಹೇಳುತ್ತಾ ತಮ್ಮ ಲಾಭದ ಅರುವತ್ತು ಶೇಕಡಾ ಸಂಪತ್ತನ್ನು ಚಾರಿಟೇಬಲ್ ಟ್ರಸ್ಟ್ ಗಳಿಗಾಗಿ ಖರ್ಚು ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸೇವಾ ಮನೋಭಾವವನ್ನು ಮೆರೆದವರು ಇವರಾಗಿದ್ದಾರೆ. ಆದುದರಿಂದ ವಿದ್ಯಾರ್ಥಿಗಳೆಲ್ಲರೂ ರತನ್ ಟಾಟಾ ಅವರ ಸರಳ ಜೀವನ, ಸಾಧನೆ ಹಾಗೂ ಗೈದ ಸೇವೆಯನ್ನು ತಮ್ಮ ಜೇವನದಲ್ಲಿ ಅಳವಡಿಸಿಕೊಂಡು, ಅವರನ್ನು ಮಾದರಿಯಾಗಿ ಇಟ್ಟುಕೊಂಡು ಅವರಂತೆ ಆಗಲು ಕನಸನ್ನು ಕಂಡು ಅದಕ್ಕಾಗಿ ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಚಾರ್ಯರಾದ ಡಾI ಪ್ರಭಾತ್ ಬಲ್ನಾಡು ಇವರು ರತನ್ ಟಾಟಾ ಇವರ ಸಾಧನೆಯನ್ನು ವಿವರಿಸುತ್ತಾ ಸುಮಾರು 150 ದೇಶಗಳಲ್ಲಿ ತಮ್ಮ ಕಂಪೆನಿಯನ್ನು ಸ್ಥಾಪಿಸಿ, ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗದಾತರಾಗಿ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ವಿದ್ಯಾರ್ಥಿಗಳಾದ ನೀವೂ ಕೂಡ ಇನ್ನೊಬ್ಬರಿಗೆ ಉದ್ಯೋಗ ನೀಡುವ ಮಟ್ಟದಲ್ಲಿ ಬೆಳೆಯಬೇಕು. ರತನ್ ಟಾಟಾ ಅವರು ತಮ್ಮ ಆದಾಯದ ನೂರಕ್ಕೆ ನೂರು ಶೇಕಡಾ ತೆರಿಗೆ ಕಟ್ಟುವ ಮೂಲಕ ಬಹಳ ಶುಭ್ರ ಹಾಗೂ ಪ್ರಾಮಾಣಿಕವಾಗಿ ಧ್ರುವ ನಕ್ಷತ್ರದಂತೆ ಬೆಳಗಿದ್ದಾರೆ ಹಾಗೂ ಭಾರತದ ಕೀರ್ತಿಯನ್ನು ಬಾನೆತ್ತರಕ್ಕೆ ಏರಿಸಿದ್ದಾರೆ ಎಂದು ಹೇಳುತ್ತಾ ನುಡಿ ನಮನವನ್ನು ಸಮರ್ಪಿಸಿದರು. ನಂತರ ಸಭೆಯಲ್ಲಿ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಡಿ.ಜೆ ಅನುದಾನಿತ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ, ಡಿ. ಜೆ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ವೀಣಾ, ಕಾಲೇಜಿನ ನಿಕಟಪೂರ್ವ ಪ್ರಾಚಾರ್ಯರಾದ ಮಧುಕರ್ ಸಾಲಿನ್ಸ್, ಸಹ ಸಂಸ್ಥೆಗಳ ಉಪನ್ಯಾಸಕರು, ಕಾಲೇಜಿನ ಉಪನ್ಯಾಸಕರು - ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿ ನಾಯಕರು ಶ್ರೀ ರತನ್ ಟಾಟಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು ಹಾಗೂ ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕರಾದ ಮಹಾವೀರ್ ಎಂ. ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಮಯಿ ಜೈನ್ ಆಯ್ಕೆ

Article Image

ಪ್ರಮಯಿ ಜೈನ್ ಆಯ್ಕೆ

ಪ್ರಮಯಿ ಜೈನ್, ಎಸ್‌ಡಿಎಂ ಕಾನೂನು ಕಾಲೇಜಿನ 2ನೇ ಬಿಬಿಎ, ಎಲ್‌ಎಲ್‌ಬಿ ವಿದ್ಯಾರ್ಥಿನಿ 2024-25ರ ಅಂತರ ವಿಶ್ವವಿದ್ಯಾಲಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಬ್ಯಾಡ್ಮಿಂಟನ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ ನೇಮಕ

Article Image

ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ ನೇಮಕ

ಬೆಳ್ತಂಗಡಿ: ಕರ್ನಾಟಕ ಸರ್ಕಾರಿ ನಿವೃತ್ತರ ಸಂಘ ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಸಂಘಟನಾ ಕಾರ್ಯದರ್ಶಿಯಾಗಿ ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ ಅವರನ್ನು ನೇಮಕಗೊಳಿಸಿದ್ದಾರೆ. ಡಾ. ಕೆ. ಜಯಕೀರ್ತಿ ಜೈನ್ ಕರ್ನಾಟಕ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಯಾಗಿ, 25 ವರ್ಷ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಪಶು ವೈದ್ಯಕೀಯ ಪರಿವೀಕ್ಷಕರಾಗಿ, ಸಂಘದಲ್ಲಿ 35 ವರ್ಷ ಜಿಲ್ಲಾಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸರ್ಕಾರದಿಂದ ಸಮನ್ವಯಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮಹಾವೀರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ, ಶ್ರೀಕ್ಷೇತ್ರ ಚಂದ್ರಪುರ, ಶಿಶಿಲ ಆಡಳಿತ ಮಂಡಳಿಯ ಸಂಚಾಲಕರಾಗಿ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಯುವರಾಜ ಜೈನ ಅವರಿಗೆ ಸಿರಿಪುರ ಪ್ರಶಸ್ತಿ

Article Image

ಯುವರಾಜ ಜೈನ ಅವರಿಗೆ ಸಿರಿಪುರ ಪ್ರಶಸ್ತಿ

ಮೂಡುಬಿದಿರೆ : ಮೂಡುಬಿದಿರೆ ಪೂನೆಚ್ಚಾರಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಸಮಿತಿಯಿಂದ ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಶಾರದಾ ಮಹೋತ್ಸವದ ಸಂದರ್ಭದಲ್ಲಿ ಪ್ರತಿಷ್ಠಿತ "ಸಿರಿಪುರ ಪ್ರಶಸ್ತಿ-2024"ನ್ನು ಎಕ್ಸಲೆಂಟ್ ವಿದ್ಯಾರ್ಥಿ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ ಅವರಿಗೆ ನೀಡಲಾಯಿತು. ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಶ್ರೀಯುತರು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ. ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಹಿರಿಯ ಕಲಾವಿದರಾದ ಎಮ್. ಆರ್. ಬಾಳಿಕಾಯಿ ಇವರಿಗೆ ಗೌರವ ಪಿಆರ್‌ಟಿ ಕಲಾಪ್ರಶಸ್ತಿ

Article Image

ಹಿರಿಯ ಕಲಾವಿದರಾದ ಎಮ್. ಆರ್. ಬಾಳಿಕಾಯಿ ಇವರಿಗೆ ಗೌರವ ಪಿಆರ್‌ಟಿ ಕಲಾಪ್ರಶಸ್ತಿ

ಹಿರಿಯ ಕಲಾವಿದರಿಗೆ ಪಿ ಆರ್ ತಿಪ್ಪೇಸ್ವಾಮಿ ಪ್ರತಿಷ್ಠಾನ (ರಿ), ಮೈಸೂರು ಇವರು ಕೊಡಮಾಡುವ “ಗೌರವ ಪಿಆರ್‌ಟಿ ಕಲಾಪ್ರಶಸ್ತಿ” ಗೆ ಧಾರವಾಡದ ಹಿರಿಯ ಕಲಾವಿದರಾದ ಮಹಾವೀರ ರಾಯಪ್ಪ ಬಾಳಿಕಾಯಿ ಇವರು ಭಾಜನರಾಗಿದ್ದಾರೆ. ಮೈಸೂರಿನ ಶ್ರೀ ಕಲಾನಿಕೇತನ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ದಿನಾಂಕ 20-09-2024ರಂದು ಜರುಗಿದ ಹಿರಿಯ ಕಲಾವಿದ ಶ್ರೀ ಪಿ.ಆರ್. ತಿಪ್ಪೇಸ್ವಾಮಿ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಮಹಾವೀರ ರಾಯಪ್ಪ ಬಾಳಿಕಾಯಿ ಇವರಿಗೆ ಪ್ರದಾನ ಮಾಡಿದರು. ಈ ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ. ಇವರಿಗೆ 1995ರಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ ಪ್ರಶಸ್ತಿ, 2007ರಲ್ಲಿ ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿ, 2017ರಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ನೀಡುವ ಜೀವಮಾನ ಸಾಧಕ ಸನ್ಮಾನ, 2012-13ರ ನಾಡೋಜ ಆರ್. ಎಮ್. ಹಡಪದ ಪ್ರಶಸ್ತಿ, 2010ರಲ್ಲಿ ಕಲಾಗುರು ಶ್ರೀ ಡಿ. ವಿ. ಹಾಲಭಾವಿ ಗೌರವ ಪ್ರಶಸ್ತಿ, 2016ರಲ್ಲಿ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಇಂತಹ ವ್ಯಕ್ತಿತ್ವವನ್ನು ಹೊಂದಿರುವ ಎಮ್. ಆರ್. ಬಾಳಿಕಾಯಿ ಅವರ ಕಲಾ ಸೇವೆಯನ್ನು ಗುರುತಿಸಿ ಧಾರವಾಡದ ಚಿತ್ರಕಲಾ ಶಿಲ್ಪಿ ಶ್ರೀ ಡಿ. ವಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಚಿತ್ರಕಲಾ ಪ್ರಪಂಚದಲ್ಲಿ ಜೀವಮಾನ ಸಾಧನೆಗಾಗಿ ಪ್ರತಿಷ್ಠಿತ “ಕುಂಚ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿ 2023” ನ್ನು ದಿನಾಂಕ 28-11-2023ರಂದು ನೀಡಿ ಗೌರವಿಸಲಾಗಿದೆ.

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಸಾಂಸ್ಕ್ರತಿಕ ವೈಭವ

Article Image

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಸಾಂಸ್ಕ್ರತಿಕ ವೈಭವ

ಮಠದಕಣಿ ಯ ಶ್ರೀ ವೀರಭದ್ರ - ಮಹಾಮಾಯಿ ದೇವಸ್ಥಾನದ ನವರಾತ್ರಿ ಮಹೋತ್ಸವದಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್ 47ನೇ ವಾರ್ಷಿಕೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಭಾನುವಾರ (6-10-2024) ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಎಲ್ಲರ ಮೆಚ್ಚುಗೆ ಪಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕಿರುತೆರೆ ನಟಿ, ಭರತನಾಟ್ಯ ಕಲಾವಿದೆ ತನ್ವಿ ರಾವ್ ರವರಿಗೆ ಮಕ್ಕಿಮನೆ ಕಲಾವೃಂದದ ಗೌರವ ಪ್ರಶಸ್ತಿ "ಕರುನಾಡ ಕಲಾ ಸಿರಿ" ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ವೇತಾ ಜೈನ್ ವಕೀಲರು ಮೂಡುಬಿದಿರೆ, ಅಶೋಕ್ ಎ. ಮಂಗಳೂರು, ಸಂಪತ್ ಜೈನ್ ಮುಂಡೂರು, ಬಾಲಕೃಷ್ಣ ಕಲ್ಬಾವಿ, ಲೋಕಯ್ಯ ಶೆಟ್ಟಿಗಾರ, ವಿಶ್ವನಾಥ್ ಶೆಟ್ಟಿಗಾರ, ಸುದೇಶ್ ಜೈನ್ ಮಕ್ಕಿಮನೆ ಮೊದಲಾದವರು ಉಪಸ್ಥಿತರಿದ್ದರು, ಗೌರವ್ ಶೆಟ್ಟಿಗಾರ, ಕೃತಿ ಸನಿಲ್, ಪೆರಣಾ ಜೆ, ಶ್ರೇಯಾ ಭಟ್, ಅಪೇಕ್ಷಾ ಎ, ಸಾನಿಧ್ಯ ಜೈನ್, ನಯನಾ ಮೊದಲಾದವರು ಸಹಕರಿಸಿದರು. ಶ್ರಾವ್ಯ ಕಿಶೋರ್, ಪಾರ್ಥನಾ ರೋಹಿತ್, ರಿಮಾ ಜಗನ್ನಾಥ್, ವಂಸತ್ ನಾಯ್ಕ್, ಆಶಿಶ್ ಅಂಚನ್ ಅವರನ್ನು ಸನ್ಮಾನಿಸಲಾಯಿತು. ಶ್ರೇಯಾ ದಾಸ್ ಹಾಗೂ ಅರ್ಚಿತ್ ಜೈನ್ ನಿರೂಪಿಸಿದರು.

ಶ್ರೀ ಕ್ಷೇತ್ರ ನವಗ್ರಹ ತೀರ್ಥದಲ್ಲಿ ನವರಾತ್ರಿಯ ವೈಭವ

Article Image

ಶ್ರೀ ಕ್ಷೇತ್ರ ನವಗ್ರಹ ತೀರ್ಥದಲ್ಲಿ ನವರಾತ್ರಿಯ ವೈಭವ

ಪರಮ ಪೂಜ್ಯ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜರ ಮಾರ್ಗದರ್ಶನದಲ್ಲಿ, ಆರ್ಯಿಕಾ ಸಂಘ ಉಪಸ್ಥಿತಿಯಲ್ಲಿ, ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕರ ನಿರ್ದೇಶನದಲ್ಲಿ ವರೂರು ನವಗ್ರತೀರ್ಥದಲ್ಲಿ ಲೋಕಕಲ್ಯಾಣ ಭಾವನೆಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ವಿವಿಧ ಹವನ, ಶ್ರೀ ಜಿನರ ಆರಾಧನೆ,, ವಿಶೇಷ ಪೂಜೆ, ಅಭಿಷೇಕ, ಮಾತೆ ಪದ್ಮಾವತಿ ಅಮ್ಮನವರ ವಿಶೇಷ ಅಲಂಕಾರ, ಷೋಡಶೋಪಚಾರ ಪೂಜೆಗಳು ವೈಭವದಿಂದ ನಡೆಯುತ್ತಿದ್ದು ಜನ ಶ್ರದ್ಧೆ ಭಕ್ತಿಗಳಿಂದ ಭಾಗವಹಿಸುತ್ತಿದ್ದಾರೆ. ನವದಿನಗಳ ಸಂಭ್ರಮಕ್ಕೆ ಮೊದಲ ದಿನದಂದು ಹುಬ್ಬಳ್ಳಿ ಜೈನ ಸಮಾಜ ಅಧ್ಯಕ್ಷ ರಾಜೇಂದ್ರ ಬೀಳಗಿ,ಉಪಾಧ್ಯಕ್ಷ ವಿಮಲ್ ತಾಳಿಕೋಟಿ, ಜೈನ ಬೋರ್ಡಿಂಗ್ ಅಧ್ಯಕ್ಷ ವಿದ್ಯಾಧರ ಪಾಟೀಲ ಬಸ್ತಿ ಪರಿವಾರ ದೇವೇಂದ್ರ ಕಾಗಿನವರು ಮತ್ತಿತರರು ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.

ಸರ್ವಮಂಗಳ ಜೈನ ಮಹಿಳಾ ಸಂಘ (ರಿ.) ನ ಮಾಸಿಕ ಸಭೆ

Article Image

ಸರ್ವಮಂಗಳ ಜೈನ ಮಹಿಳಾ ಸಂಘ (ರಿ.) ನ ಮಾಸಿಕ ಸಭೆ

ಮೂಡಬಿದಿರೆ: ಸರ್ವಮಂಗಳ ಜೈನ ಮಹಿಳಾ ಸಂಘ (ರಿ.) ನ ಮಾಸಿಕ ಸಭೆಯು ಅ. 2 ರಂದು ಶೆಟ್ರ ಬಸದಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಸನ್ನಿಧಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಕ್ಷೀರಾಭಿಷೇಕ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ಪೂಜೆಯೊಂದಿಗೆ ಪ್ರಾರಂಭವಾಯಿತು. ತದನಂತರ ಮಹಾತ್ಮಾ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಬಗ್ಗೆ ಮಾತ್ರವಲ್ಲದೆ ಜೈನ ಧರ್ಮದ ತತ್ವಗಳನ್ನು ಪಾಲಿಸಿದ್ದರಿಂದ ಅವರು ಮಹಾತ್ಮಾರಾದರು ಎನ್ನುವುದನ್ನು ಸುಧಾ ಪಾರ್ಶ್ವನಾಥ್ ಅವರು ಮನಮುಟ್ಟುವಂತೆ ತಿಳಿಸಿಕೊಟ್ಟರು. ನಂತರ ಆದಿನಾಥ ವೈಭವ ವಿಶ್ವ ದಾಖಲೆಯ ಸಂದರ್ಭದಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದವರಿಗೆ ಆದಿನಾಥ ವೈಭವದ ಕವಯತ್ರಿ ಮೂಡಬಿದಿರೆಯ ವೀಣಾ ರಘಚಂದ್ರ ಶೆಟ್ಟಿಯವರು ಸ್ಮರಣಿಕೆ ವಿತರಣೆ ಮಾಡಿದರು. ಸರ್ವಮಂಗಳದ ಅಧ್ಯಕ್ಷೆಯಾದ ಮಂಜುಳ ಯಶೋಧರ್ ರವರು ಎಲ್ಲರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ, ಕಾರ್ಯದರ್ಶಿ ಆರತಿ ಮಹಾವೀರ್ ವಂದನಾರ್ಪಣೆ ಗೈದರು

ಪುತ್ತೂರು: ಮಂಗಳೂರು ವಿಭಾಗದ ಮಿಲನ್ ಪದಾಧಿಕಾರಿಗಳ ಕಾರ್ಯಗಾರ

Article Image

ಪುತ್ತೂರು: ಮಂಗಳೂರು ವಿಭಾಗದ ಮಿಲನ್ ಪದಾಧಿಕಾರಿಗಳ ಕಾರ್ಯಗಾರ

ಪುತ್ತೂರು: ಭಾರತೀಯ ಜೈನ್ ಮಿಲನ್ ವಲಯ - 8 ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ವಿಭಾಗದ ಎಲ್ಲಾ ಮಿಲನ್ ಪದಾಧಿಕಾರಿಗಳ ಕಾರ್ಯಗಾರವು ಪುತ್ತೂರು ಜೈನ್ ಮಿಲನ್ ಆತಿಥೇಯದಲ್ಲಿ ಮಹಾವೀರ ವೆಂಚರ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸೋನಿಯ ಯಶೋವರ್ಮ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಭಾರತೀಯ ಜೈನ್ ಮಿಲನ್ ವಲಯ - 8 ರ ಕಾರ್ಯಾಧ್ಯಕ್ಷ ಪ್ರಸನ್ನಕುಮಾರ್ ಉಡುಪಿ, ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇಂಜಿನಿಯರ್ ಹಾಗೂ ಉದ್ಯಮಿ ವಿ.ಕೆ ಜೈನ್ ಪುತ್ತೂರು, ಭಾರತೀಯ ಜೈನ್ ಮಿಲನ್ ವಲಯ -8 ರ ಉಪಾಧ್ಯಕ್ಷ ಜಿತೇಶ್ ಜೈನ್ ಮಂಗಳೂರು ಭಾಗವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಲಯದ ಎಲ್ಲಾ ನಿರ್ದೇಶಕರುಗಳು, ಸುಭಾಶ್ಚಂದ್ರ ಜೈನ್ ಕಾರ್ಯದರ್ಶಿ ವಲಯ-8 ಮತ್ತು ಪುತ್ತೂರು ಜೈನ್ ಮಿಲನ್ ಅಧ್ಯಕ್ಷ ಸತೀಶ್ ಪಡಿವಾಳ್, ಕಾರ್ಯದರ್ಶಿ ರಾಜೇಶ್ ಕುಮಾರ್ ಪಿ, ಕೋಶಾಧಿಕಾರಿ ನರೇಂದ್ರ ಪಡಿವಾಳ್ ಆಸೀನರಾಗಿದ್ದರು.. ವಲಯ - 8ರ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿ, ಜೈನ್ ಮಿಲನ್ ಪುತ್ತೂರು ಅಧ್ಯಕ್ಷ ಸತೀಶ್ ಪಡಿವಾಳ್ ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ್ ಕುಮಾರ್ ಪಿ. ವಂದಿಸಿದರು. ಕಾರ್ಯಕ್ರಮದಲ್ಲಿ ಸುಮಾರು 125 ಜಿನ ವೀರ, ವೀರಾಂಗನೆಯವರು ಭಾಗವಹಿಸಿದ್ದರು.

ಹೊಂಬುಜ: ಶರನ್ನವರಾತ್ರಿ ವಿಜಯದಶಮಿ ಉತ್ಸವ

Article Image

ಹೊಂಬುಜ: ಶರನ್ನವರಾತ್ರಿ ವಿಜಯದಶಮಿ ಉತ್ಸವ

ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ನೇತೃತ್ವ, ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ದಿನವನ್ನು ಪರಂಪರೆಯಂತೆ ಧಾರ್ಮಿಕ ವಿಧಿಪೂರ್ವಕವಾಗಿ ನೆರವೇರಿಸಲಾಗುವುದು. ನಿನ್ನೆ (ಅ. 03) ಗುರುವಾರದಂದು-ಶರನ್ನವರಾತ್ರಿ ಪ್ರಾರಂಭಗೊಂಡು (ಘಟಸ್ಥಾಪನೆ) ಅ. 09 ಬುಧವಾರ- ಸರಸ್ವತಿ ಪೂಜೆ, (ಮೂಲಾ ನಕ್ಷತ್ರ) ಅ. 10 ಗುರುವಾರ-ಜೀವದಯಾಷ್ಟಮಿ ಪೂಜೆ, ಅ. 11 ಶುಕ್ರವಾರ-ಮಹಾನವಮಿ (ಆಯುಧಪೂಜೆ) ಅ. 12 ಶನಿವಾರ-ವಿಜಯದಶಮಿ, ಬನ್ನಿಮಂಟಪಕ್ಕೆ ಶ್ರೀದೇವಿ, ಪಲ್ಲಕ್ಕಿ ಉತ್ಸವ, ಸ್ವಸ್ತಿಶ್ರೀಗಳವರ ಸಿಂಹಾಸನಾರೋಹಣ ಹಾಗೂ ಶ್ರೀಗಳವರ ಪಾದಪೂಜೆ ನೆರವೇರಲಿದೆ. ಹೊಂಬುಜ ಜೈನ ಮಠದ ಅಧೀನ ಕ್ಷೇತ್ರಗಳಾದ ಶ್ರೀಕ್ಷೇತ್ರ ಕುಂದಾದ್ರಿ, ವರಂಗ ಹಾಗೂ ಹಟ್ಟಿಯಂಗಡಿ ಜಿನಮಂದಿರಗಳಲ್ಲಿ ಶರನ್ನವರಾತ್ರಿ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ನೆರವೇರಲಿವೆ. ಭಕ್ತವೃಂದದವರು ಶರನ್ನವರಾತ್ರಿ ಉತ್ಸವಗಳಲ್ಲಿ ಪಾಲ್ಗೊಂಡು ಪುಣ್ಯಭಾಗಿಗಳಾಗುವಂತೆ ಆಡಳಿತಾಧಿಕಾರಿಗಳು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮೊ: 9481453653, 9483801460.

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Article Image

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವೇಣೂರು, ಅ. 2: ಗಾಂಧಿ ಜಯಂತಿ ಪ್ರಯುಕ್ತ ಭ| ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ವೇಣೂರು ವಲಯ ಅರಣ್ಯ ಇಲಾಖೆ ವತಿಯಿಂದ ಶ್ರೀ ದಿಗಂಬರ ಜೈ ತೀರ್ಥ ಕ್ಷೇತ್ರ ಸಮಿತಿ ವೇಣೂರು ಇವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಯಾತ್ರಿ ನಿವಾಸದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರ್ ತಮ್ಮ ಮನೆ ಅಲ್ಲದೆ ತಾವಿರುವ ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕದಲ್ಲಿ ಅರಣ್ಯ ಇಲಾಖೆ ವತಿಯಿಂದ ಇವರು ನೀಡಿದ ಸಹಕಾರವನ್ನು ಸ್ಮರಿಸುತ್ತಾ ಇವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವತಿಯಿಂದ ಕಾರ್ಯದರ್ಶಿಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ ಸನ್ಮಾನಿಸಿದರು. ವಲಯದ ಎಲ್ಲ ಉಪ ಅರಣ್ಯಾಧಿಕಾರಿಗಳಾದ ಸುನಿಲ್, ಹರಿಪ್ರಸಾದ್, ಇಬ್ರಾಹಿಂ, ಸುರೇಶ್ ಮತ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿಗಳು ಮತ್ತು ತೀರ್ಥಕ್ಷೇತ್ರ ಸಮಿತಿಯ ಸಿಬ್ಬಂದಿಗಳಾದ ವೈ. ಜಯರಾಜ್, ದೀಪಶ್ರೀ ಉಪಸ್ಥಿತರಿದ್ದರು. ವಿ. ಪ್ರವೀಣ್ ಕುಮಾರ್ ಇಂದ್ರರವರು ಸ್ವಾಗತಿಸಿದರು. ತೀರ್ಥಕ್ಷೇತ್ರ ಸಮಿತಿಯ ಜೊತೆ ಕಾರ್ಯದರ್ಶಿಗಳಾದ ಮಹಾವೀರ್ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಗೈದರು.

First Previous

Showing 5 of 8 pages

Next Last