Article Image

ಮಾಲತಿ ವಸಂತರಾಜ್ ಕಾರ್ಕಳ ಇವರಿಗೆ ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ

Article Image

ಮಾಲತಿ ವಸಂತರಾಜ್ ಕಾರ್ಕಳ ಇವರಿಗೆ ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ

ಮಂಡ್ಯ: ಆಚಾರ್ಯ ಗುರುಕುಲ ಮಹಾ ವಿದ್ಯಾಲಯ, ಮೈಸೂರು, ಮತ್ತು ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠ, ಮಂಡ್ಯ ಜಿಲ್ಲೆ ಹಾಗೂ ಭಾರತ ದಿಗಂಬರ ಜೈನ ಜೈನ ಅರ್ಚಕ ಸಂಘ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಆಚಾರ್ಯ ಗುರುಕುಲ ಮಹಾ ವಿದ್ಯಾಲಯದ ಆರನೇ ಘಟಿಕೋತ್ಸವ, ಮಹಾಕವಿ ರತ್ನಾಕರವರ್ಣಿ ಸಾಹಿತ್ಯ ಪ್ರಸಾರ 1280ನೇ ದಿನ ಮನದ ನಿತ್ಯೋತ್ಸವ ಸಂಭ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಉಪಾದಿ ಪ್ರಶಸ್ತಿ ಪ್ರದಾನ ಸಮಾರಂಭವು ಪರಮ ಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಸ್ವಾಮೀಜಿಗಳವರ ಪಾವನ ಸಾನಿಧ್ಯದಲ್ಲಿ ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠದ “ಸನ್ಮತಿ” ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಶ್ರಾಂತ ಭೋಧಕರಾದ ಮಾಲತಿ ವಸಂತರಾಜ್ ಕಾರ್ಕಳ ಇವರ ಶೈಕ್ಷಣಿಕ ಕ್ಷೇತ್ರದ ಸೇವೆಯ ಪರಿಗಣನೆಯ ಮೇಲೆ "ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ"ಯನ್ನು ನೀಡಿ ಸನ್ಮಾನಿಲಾಯಿತು.

ಪ್ರತಿಷ್ಠಾಚಾರ್ಯ ಪದ್ಮಪ್ರಭ ಇಂದ್ರ ಇವರಿಗೆ “ಶಾಸ್ತ್ರಿ ಉಪಾದಿ” ಪದವಿ ಪ್ರದಾನ

Article Image

ಪ್ರತಿಷ್ಠಾಚಾರ್ಯ ಪದ್ಮಪ್ರಭ ಇಂದ್ರ ಇವರಿಗೆ “ಶಾಸ್ತ್ರಿ ಉಪಾದಿ” ಪದವಿ ಪ್ರದಾನ

ಮಂಡ್ಯ: ಆಚಾರ್ಯ ಗುರುಕುಲ ಮಹಾ ವಿದ್ಯಾಲಯ, ಮೈಸೂರು, ಮತ್ತು ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠ, ಮಂಡ್ಯ ಜಿಲ್ಲೆ ಹಾಗೂ ಭಾರತ ದಿಗಂಬರ ಜೈನ ಜೈನ ಅರ್ಚಕ ಸಂಘ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಆಚಾರ್ಯ ಗುರುಕುಲ ಮಹಾ ವಿದ್ಯಾಲಯದ ಆರನೇ ಘಟಿಕೋತ್ಸವ, ಮಹಾಕವಿ ರತ್ನಾಕರವರ್ಣಿ ಸಾಹಿತ್ಯ ಪ್ರಸಾರ 1280ನೇ ದಿನ ಮನದ ನಿತ್ಯೋತ್ಸವ ಸಂಭ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಉಪಾದಿ ಪ್ರಶಸ್ತಿ ಪ್ರದಾನ ಸಮಾರಂಭವು ಪರಮ ಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಸ್ವಾಮೀಜಿಗಳವರ ಪಾವನ ಸಾನಿಧ್ಯದಲ್ಲಿ ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠದ “ಸನ್ಮತಿ” ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾಚಾರ್ಯ ಪದ್ಮಪ್ರಭ ಇಂದ್ರ ಅಳದಂಗಡಿ ಇವರ ಜೈನ ಆಗಮ ಶಾಶ್ತç ಸಂಕೃತಿ ಅಧ್ಯಯನ ಜ್ಞಾನಕ್ಕಾಗಿ “ಶಾಸ್ತ್ರಿ ಉಪಾದಿ” ಪದವಿ ಪ್ರದಾನ ಮಾಡಿ ಸನ್ಮಾನಿಲಾಯಿತು.

ಶ್ವೇತಾ ದಿಲೀಪ್ ನಾರಾವಿ ಇವರಿಗೆ ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ

Article Image

ಶ್ವೇತಾ ದಿಲೀಪ್ ನಾರಾವಿ ಇವರಿಗೆ ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ

ಮಂಡ್ಯ: ಆಚಾರ್ಯ ಗುರುಕುಲ ಮಹಾ ವಿದ್ಯಾಲಯ, ಮೈಸೂರು, ಮತ್ತು ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠ, ಮಂಡ್ಯ ಜಿಲ್ಲೆ ಹಾಗೂ ಭಾರತ ದಿಗಂಬರ ಜೈನ ಜೈನ ಅರ್ಚಕ ಸಂಘ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಆಚಾರ್ಯ ಗುರುಕುಲ ಮಹಾ ವಿದ್ಯಾಲಯದ ಆರನೇ ಘಟಿಕೋತ್ಸವ, ಮಹಾಕವಿ ರತ್ನಾಕರವರ್ಣಿ ಸಾಹಿತ್ಯ ಪ್ರಸಾರ 1280ನೇ ದಿನ ಮನದ ನಿತ್ಯೋತ್ಸವ ಸಂಭ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಉಪಾದಿ ಪ್ರಶಸ್ತಿ ಪ್ರದಾನ ಸಮಾರಂಭವು ಪರಮ ಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಸ್ವಾಮೀಜಿಗಳವರ ಪಾವನ ಸಾನಿಧ್ಯದಲ್ಲಿ ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠದ “ಸನ್ಮತಿ” ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ವೇತಾ ದಿಲೀಪ್ ನಾರಾವಿ ಇವರ ಧಾರ್ಮಿಕ ಕ್ಷೇತ್ರದ ಪರಿಗಣನೆಯ ಮೇಲೆ “ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ”ಯನ್ನು ನೀಡಿ ಸನ್ಮಾನಿಲಾಯಿತು.

ಬೆಂಗಳೂರು: ಜಿನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ

Article Image

ಬೆಂಗಳೂರು: ಜಿನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ

ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿಯು ಕುಟುಂಬ ಕೌನ್ಸಿಲರ್ ಪ್ರಾಕ್ಟಿಸ್ ಮಾಡುತ್ತಿರುವ ಜನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಿದೆ. ಡಾ. ಮಂಜುಳಾ ವಿ. ಅವರ ಮಾರ್ಗದರ್ಶನದಲ್ಲಿ "Process of Emotion regulation in relation to Attachment and Mindfulness traits during Gottman's Dreams & within & Conflict intervention psychology" ಎಂಬ ವಿಷಯ ಮೇಲೆ ಮಂಡಿಸಿದ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿ ಲಭಿಸಿದೆ. ಜಿನಶ್ರೀ ಅವರು ಭಾರತದ ರಾಷ್ಟ್ರೀಯ ಗ್ರಂಥಾಲಯ ಕೊಲ್ಕತ್ತಾದ ಮಾಜಿ ಮಹಾನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕರಾದ ಡಾ. ಪಿ. ವೈ. ರಾಜೇಂದ್ರ ಕುಮಾರ್ ಅವರ ಪುತ್ರಿಯಾಗಿದ್ದು, ಸಿಸ್ಕೊ, ಎಚ್‌ಪಿ, ವಿಪ್ರೊ ಕಂಪನಿಗಳಲ್ಲಿ 17 ವರ್ಷಗಳ ಕಾಲ ಸಾಫ್ಟ್ವೇರ್ ಎಂಜಿನಿಯರ್ ಮತ್ತು ತಾಂತ್ರಿಕ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. MA ಸೈಕಾಲಜಿ (IGNOU), MBA (SISII ಕ್ಯಾಲಿಫೋರ್ನಿಯಾ), MS (IIITB ಬೆಂಗಳೂರು) ಮತ್ತು BE(BIT, ಬೆಂಗಳೂರು)ನಲ್ಲಿ ಪದವಿ ಪಡೆದಿದ್ದಾರೆ.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಇವರಿಗೆ ಗೌರವ ಸನ್ಮಾನ

Article Image

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಇವರಿಗೆ ಗೌರವ ಸನ್ಮಾನ

ಧರ್ಮಸ್ಥಳ: ಮಕ್ಕಳನ್ನು ದೇವರ ಮಕ್ಕಳೆಂದು ಭಾವಿಸುತ್ತಾ, ಹಲವಾರು ಕಾರ್ಯಕ್ರಮ ಸಂಘಟನೆ, ಸೇವಾ ಚಟುವಟಿಕೆ, ಸಂಘ ಸಂಸ್ಥೆಗಳ ಸ್ಥಾಪನೆ, ಸಾವಿರಾರು ಕಲಾವಿದರಿಗೆ ಬೆಳಕಾದ ವಿಷಯಕ್ಕಾಗಿ ಆಮಂತ್ರಣ ಪರಿವಾರದ ಮುಖ್ಯಸ್ಥ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಜು.21 ರಂದು ಸನ್ಮಾನ ಕಾರ್ಯಕ್ರಮ ನಡೆಯಿತು. ಧರ್ಮಸ್ಥಳ ನೇತ್ರಾವತಿ ಬಳಿಯ ಪ್ರಣವ್ ಸಭಾಂಗಣದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಮಂತ್ರಣ ಸಂಸ್ಥೆಯವರು ಸೇರಿ ಈ ಸನ್ಮಾನ ನೆರವೇರಿಸಿದರು. ಈ ಸಮಾರಂಭದಲ್ಲಿ ಹಿರಿಯರಾದ ಬಿ. ಭುಜಬಲಿ ಧರ್ಮಸ್ಥಳ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಸಂಪತ್ ಬಿ. ಸುವರ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್. ಪ್ರಕಾಶ್ ಶೆಟ್ಟಿ, ಉದ್ಯಮಿ ಲ| ನಿತ್ಯಾನಂದ ನಾವರ, ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ಪ್ರೀತಮ್ ಧರ್ಮಸ್ಥಳ, ಡಾ. ದೀಪಾಲಿ ಡೊಂಗ್ರೆ, ಗ್ರಾ.ಪಂ ಉಪಾಧ್ಯಕ್ಷರಾದ ಶ್ರೀನಿವಾಸ ರಾವ್ ಧರ್ಮಸ್ಥಳ, ವಿದ್ಯಾಧರ್ ಜೈನ್ ಉಪ್ಪಿನಂಗಡಿ, ಬೆಳ್ತಂಗಡಿ ಜೆಸಿಐ ಮಂಜುಶ್ರೀ ಅಧ್ಯಕ್ಷರಾದ ರಂಜಿತ್ ಹೆಚ್.ಡಿ., ಪ್ರಣವ್ ಸಭಾಂಗಣ ಮಾಲಕರಾದ ಸುರೇಂದ್ರ ಪ್ರಭು, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಶ್ರೀದೇವಿ ಸಚಿನ್, ಬೇಬಿ ಪೂಜಾರಿ ಪುನ್ಕೆತ್ಯಾರು, ಶಾರದ ಶೆಟ್ಟಿ ಅಳದಂಗಡಿ, ಸದಾನಂದ ಬಿ.ಕುದ್ಯಾಡಿ, ಅರುಣ್ ಜೈನ್ ಅಳದಂಗಡಿ, ರಂಜನ್ ನೆರಿಯ, ಸ್ನೇಕ್ ಪ್ರಕಾಶ್ ಶೆಟ್ಟಿ ಧರ್ಮಸ್ಥಳ, ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಹರೀಶ್ ವೈ ಚಂದ್ರಮ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಪ್ರಧಾನ ಸಂಚಾಲಕ ಅಭಿಷೇಕ್ ಬಜಗೋಳಿ, ಅಧ್ಯಕ್ಷರಾದ ನಿರೀಕ್ಷಿತಾ ಮಂಗಳೂರು, ಉಪಾಧ್ಯಕ್ಷೆ ವಿಂಧ್ಯಾ ಎಸ್.ರೈ ಕಡೇಶಿವಾಲಯ, ನಿರ್ದೇಶಕರುಗಳಾದ ಚೇತನ್ ಕುಮಾರ್ ಅಮೈ, ಸ್ವಾತಿ ಸೂರಜ್ ಶಿಶಿಲ, ಆರ್.ಜೆ ಇಂದ್ರ ಕುಂದಾಪುರ, ಆಶಾ ಅಡೂರು, ವಿದ್ಯಾಶ್ರೀ ಅಡೂರ್ ಸ್ವಾತೀ ಕುಲಾಲ್ ಕಡ್ತಲ, ಕವಿತಾ ದಿನೇಶ್ ಕಟೀಲು, ಪ್ರಜ್ಞಾ ವಾಣಿಗೋರೆ ಕಾರ್ಕಳ, ಕೇಶವ ನೆಲ್ಯಾಡಿ, ಪರ್ಣಶಾ ಗೋಖಲೆ, ಹೇಮಾ ಜಯರಾಮ್ ರೈ ಕುರಿಯ, ಸುಶ್ಮೀತಾ ಮೂಡಬಿದ್ರೆ, ಹೆಚ್. ಕೆ. ನಯನಾಡು, ಪ್ರಸಾದ್ ನಾಯಕ್ ಕಾರ್ಕಳ ಮುಂತಾದವರು ಉಪಸ್ಥಿತರಿದ್ದರು.

ಡಾ. ನೀರಜಾ ನಾಗೇಂದ್ರ ಕುಮಾರ್ ಅವರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ

Article Image

ಡಾ. ನೀರಜಾ ನಾಗೇಂದ್ರ ಕುಮಾರ್ ಅವರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ

ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್‌ನವರು ಹಲವು ಖ್ಯಾತ ವೈದ್ಯರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಜೂನ್ 25ರಂದು ಸಂಜೆ 6 ಗಂಟೆಗೆ ನಯನ ಸಭಾಂಗಣದಲ್ಲಿ ಜರುಗಿದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸನ್ಮಾನ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಡಾ. ನೀರಜಾ ನಾಗೇಂದ್ರ ಕುಮಾರ್ ಅವರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಿದರು.

ದೂರದರ್ಶನದ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ

Article Image

ದೂರದರ್ಶನದ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ

ದೂರದರ್ಶನ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಮಹಾವೀರ ಹಾಗೂ ಆರತಿರವರ ಪುತ್ರಿ ಉದಯೋನ್ಮುಖ ಭರತನಾಟ್ಯ ಕಲಾವಿದೆ ಅನನ್ಯ ರಂಜನಿ ಆಯ್ಕೆಯಾಗಿದ್ದಾರೆ. ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್, ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿದ್ದಾರೆ. ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು, ಉಜಿರೆಯ ಎಸ್. ಡಿ ಎಂ. ಕಾಲೇಜಿನಲ್ಲಿ ಅಂತಿಮ ವಿಜ್ಞಾನ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅಷ್ಟಾಹ್ನಿಕ ಪೂಜಾ ಕಾರ್ಯಕ್ರಮ

Article Image

ಅಷ್ಟಾಹ್ನಿಕ ಪೂಜಾ ಕಾರ್ಯಕ್ರಮ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಕಾರ್ಕಳದ ಪರಮಪೂಜ್ಯ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಶುಭ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಭಾನುವಾರ ಅಷ್ಟಾಹ್ನಿಕ ಪೂಜೆ ಕಾರ್ಯಕ್ರಮ ಪ್ರಾರಂಭವಾಯಿತು. ಸುಗುಣ ಎಸ್.ಡಿ. ಶೆಟ್ಟಿ ಉಜಿರೆ ಅವರ ಮಗಳು ಪ್ರಗತಿ ರಾಜಿತ್ ಶೆಟ್ಟಿ, ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು, ಕೊಲ್ಲಾಪುರ ಸಮೀಪ ಉದ್ಗಾವ್‌ನಲ್ಲಿ ಆಚಾರ್ಯ ಶ್ರೀ 108 ವಿಶುದ್ದ ಸಾಗರಮುನಿ ಮಹಾರಾಜರಿಂದ ನಂದೀಶ್ವರ ಮಂಟಪಕ್ಕೆ ಲಘು ಪಂಚ ಕಲ್ಯಾಣ ನಡೆಯಿತು. ಆಷಾಢ ಮಾಸದ ಅಷ್ಟಾಹ್ನಿಕ ಪರ್ವದ ಮೊದಲ ಅಷ್ಟಮಿಯ ದಿನದಂದು ಬೆಳಗ್ಗೆ 10.30ಕ್ಕೆ ಜಿನ ಮಂದಿರದಲ್ಲಿ ವಿಶೇಷ ಆರಾಧನೆ ಹಾಗೂ ವಿಶೇಷ ಪೂಜೆಗಳು ನೆರವೇರಿದ ನಂತರ ವಿರಾಜಮಾನಗೊಂಡಿದೆ. ಈ ಪುಣ್ಯ ಕಾರ್ಯದಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದರು. ಉಜಿರೆ ಎಸ್.ಡಿ. ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಹುಬ್ಬಳ್ಳಿ: ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ ಅಸ್ತಿತ್ವಕ್ಕೆ

Article Image

ಹುಬ್ಬಳ್ಳಿ: ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ ಅಸ್ತಿತ್ವಕ್ಕೆ

ಹುಬ್ಬಳ್ಳಿ-ಧಾರವಾಡ ಅವಳಿನಗರಗಳಲ್ಲಿ ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಪ್ರಿಯ ಸಮಾನ ಮನಸ್ಕರು ಕೂಡಿ ಸಂಘಟಿಸಿರುವ "ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ (ರಿ.) ಜೂನ್ 26 ರಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿತು. ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಸಂಬಂಧಿತ ನಾನಾ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶ ಹೊಂದಿರುವ ಟ್ರಸ್ಟಿಗೆ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತಪ್ರಸಾದ ಗೌರವ ಅಧ್ಯಕ್ಷರಾಗಿದ್ದು ಇತರ ಪದಾಧಿಕಾರಿಗಳು ಈ ಮುಂದಿನವರಾಗಿದ್ದಾರೆ. ಡಾ. ಜಿನದತ್ತ ಹಡಗಲಿ(ಅಧ್ಯಕ್ಷರು), ಡಾ. ಭರಮಪ್ಪ ಭಾವಿ(ಉಪಾಧ್ಯಕ್ಷರು), ಶಾಂತಿನಾಥ ಕೆ. ಹೋತಪೇಟಿ(ಪ್ರಧಾನ ಕಾರ್ಯದರ್ಶಿ), ಶಾಂತರಾಜ ಮಲ್ಲಸಮುದ್ರ(ಕಾರ್ಯದರ್ಶಿ), ಮಂಜುನಾಥ ಚವಡಣ್ಣವರ(ಖಜಾಂಚಿ), ಧರಣೇಂದ್ರ ಜವಳಿ, ರಾಯಪ್ಪ ಬಾಳಿಕಾಯಿ, ಮಹಾವೀರ ಉಪಾಧ್ಯೆ, ಶ್ರೀಧರ ಬಸ್ತಿ, ಪ್ರತಿಭಾ ಕಾಗೆ, ತನುಜಾ ರೋಖಡೆ(ಕಾರ್ಯಕಾರಿಣಿ ಸದಸ್ಯರು). ಹೆಚ್ಚಿನ ಮಾಹಿತಿಗೆ: 9945719235, 9980897979, 8762235112ಗಳಿಗೆ ಸಂಪರ್ಕಿಸಬಹುದು. ಶಾಂತಿನಾಥ ಕೆ. ಹೋತಪೇಟಿ (ಪ್ರಧಾನ ಕಾರ್ಯದರ್ಶಿ): 9980897979

ಮಂಗಳೂರು ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

Article Image

ಮಂಗಳೂರು ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

ಮಿತವಾದ ವ್ಯಾಯಾಮ, ಮಿತವಾದ ಆಹಾರ ಪದ್ಧತಿಯನ್ನು ರೂಢಿಸಿಕೊಂಡಾಗ ಉತ್ತಮ ಆರೋಗ್ಯ ಪಡೆಯಬಹುದು ಎಂದು ಕೆ. ಎಂ.ಸಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ| ದಿತೇಶ್ ಎಂ. ಅವರು ಹೇಳಿದರು. ಇವರು ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್ ಶಾಲೆಯ ವರ್ಧಮಾನ ಸಿದ್ದಾರ್ಥ ಸಭಾಂಗಣದಲ್ಲಿ ಭಾರತೀಯ ಜೈನ್ ಮಿಲನ್ ಮಂಗಳೂರು ಇದರ ಮಾಸಿಕ ಸಭೆಯ ಸಂದರ್ಭದಲ್ಲಿ ಹೃದಯದ ಆರೋಗ್ಯ ಕಾಪಾಡುವುದು ಹೇಗೆ? ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಬಳಿಕ ಎನ್. ಜಗತ್ಪಾಲ್, ಸುಮತಿ ದಂಪತಿಯನ್ನು ಸಮ್ಮಾನಿಸಲಾಯಿತು. ದ.ಕ. ಜೈನ್ ಮಿಲನ್ ನಿರ್ದೇಶಕ ಸುಕುಮಾರ ಬಳ್ಳಾಲ್, ಸುರೇಶ್ ಬಳ್ಳಾಲ್, ಪುಷ್ಪರಾಜ್ ಜೈನ್, ಕಾರ್ಯದರ್ಶಿ ವೈಶಾಲಿ ಪಡಿವಾಲ್, ಪ್ರಮುಖರಾದ ನಿರ್ಮಲ್ ಕುಮಾರ್, ಮಹಾವೀರ ಪ್ರಸಾದ್, ಸನತ್ ಕುಮಾರ್ ಜೈನ್, ಸಂತೋಷ್ ಕುಮಾರ್ ಜೈನ್ ಉಪಸ್ಥಿತರಿದ್ದರು ಮಂಗಳೂರು ಭಾರತೀಯ ಜೈನ್ ಮಿಲನ್ ಅಧ್ಯಕ್ಷರಾದ ರತ್ನಾಕರ್ ಜೈನ್ ಸ್ವಾಗತಿಸಿದರು. ರಾಜೇಶ್ ಎಂ. ಸಮ್ಮಾನಿತರನ್ನು ಪರಿಚಯಿಸಿದರು. ಪ್ರಿಯಾ ಸುದೇಶ್ ನಿರೂಪಿಸಿ, ವಂದಿಸಿದರು.

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ

Article Image

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಕರಿಮಣೇಲು ಮಾಗಣೆಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ಇವರು ಹೃದಯಾಘಾತದಿಂದ ಇಂದು(ಜೂ. 12) ಮುಂಜಾನೆ ನಿಧನ ಹೊಂದಿದರು. ಇವರು ಪತ್ನಿ, ಪುತ್ರ ಮತ್ತು ಪುತ್ರಿ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ. ಇವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕದ ಮಾಧ್ಯಮ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 2000 ಇಸವಿಯ ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಮಸ್ತಕಾಭಿಷೇಕದ ದೃಶ್ಯಗಳನ್ನು ವಿದ್ಯುನ್ಮಾನಗಳ ಮೂಲಕ ಪ್ರಚಾರ ಪಡಿಸುವ ವಿಧಾನವನ್ನು ಮೊತ್ತಮೊದಲಿಗೆ ಈ ಪರಿಸರದಲ್ಲಿ ಪ್ರಚಾರ ಪಡಿಸಿದ ಹೆಗ್ಗಳಿಕೆ ಇವರದು. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಶಿಶಿಲ ಬಸದಿಯಲ್ಲಿ ಕಲ್ಯಾಣ ಮಂದಿರ ಆರಾಧನೆ

Article Image

ಶಿಶಿಲ ಬಸದಿಯಲ್ಲಿ ಕಲ್ಯಾಣ ಮಂದಿರ ಆರಾಧನೆ

ಶಿಶಿಲ ಗ್ರಾಮದಲ್ಲಿರುವ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ಭಾನುವಾರ ಲೋಕಾಕಲ್ಯಾಣಕ್ಕಾಗಿ ಕಲ್ಯಾಣ ಮಂದಿರ ಆರಾಧನೆ ಹಾಗೂ ಪದ್ಮಾವತಿ ಅಮ್ಮನವರ ವಿಶೇಷ ಪೂಜೆಯು ಪ್ರತಿಷ್ಠಾಚಾರ್ಯ ಜಯರಾಜ ಇಂದ್ರ ಹಾಗೂ ಸಹಪುರೋಹಿತರ ಸಹಕಾರದಲ್ಲಿ ನಡೆಯಿತು. ದಾನಿಗಳಾದ ವಿಜಯಕುಮಾರ್, ಕಣಿಯೂರು, ಸುರೇಂದ್ರ ಹೆಗ್ಡೆ ಮತ್ತು ಉಜಿರೆಯ ಶಶಿಪ್ರಭಾ ಅವರನ್ನು ಗೌರವಿಸಲಾಯಿತು. ಬಸದಿಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸರ್ವಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜದ ಸದಸ್ಯರು ಸಕ್ರಿಯ ಸಹಕಾರ ನೀಡಿದರು.

ಗೀತಾ ಅಜೀತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ 'ಶ್ರೇಷ್ಠತಾ ಪ್ರಶಸ್ತಿ'

Article Image

ಗೀತಾ ಅಜೀತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ 'ಶ್ರೇಷ್ಠತಾ ಪ್ರಶಸ್ತಿ'

ಸುಮಾರು ಎರಡು ದಶಕಗಳಿಂದ ಎಲ್.ಐ.ಸಿ ಯಲ್ಲಿ ಸಲಹೆಗಾರರಾಗಿ ಮತ್ತು ಸಲಹೆಗಾರರಿಗೆ ತರಬೇತುಗಾರರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ಗೀತಾ ಅಜಿತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ ಧಾರವಾಡ ವಿಭಾಗದ ಶ್ರೇಷ್ಠತಾ ಪ್ರಶಸ್ತಿ( Excellence Award ) ದೊರೆಕಿದೆ. ಹೈದ್ರಾಬಾದ್ ನ ಹಿರಿಯ ವಿಭಾಗೀಯ ಅಧಿಕಾರಿ ಜಯಸಿಂಹನ್, ಧಾರವಾಡದ ಹಿರಿಯ ವಿಭಾಗೀಯ ವ್ಯವಸ್ಥಾಪಕ ಬಿ.ಎಸ್ ಚಕ್ರವರ್ತಿ, ಮಾರ್ಕೆಟಿಂಗ್ ಮ್ಯಾನೇಜರ್ ಪದ್ಮಪ್ರಭಾ ಶಂಕರ ಮತ್ತು ಮಹೇಶ್ ಹುನ್ಸವಾಡಕರ್ ಇವರೆಲ್ಲರ ಸಮ್ಮುಖದಲ್ಲಿ ಜೂ. 6ರಂದು ಪ್ರಶಸ್ತಿ ಪ್ರದಾನ ಮಾಡಿದರು.

ಸಾಹಿತಿ ರವಿರಾಜ್‌ರವರಿಗೆ ಸನ್ಮಾನ

Article Image

ಸಾಹಿತಿ ರವಿರಾಜ್‌ರವರಿಗೆ ಸನ್ಮಾನ

ಭಾರತೀಯ ಜೈನ್ ಮಿಲನ್ ಮೂಡಬಿದ್ರೆ ಶಾಖೆಯ ಮಾಸಿಕ ಸಭೆಯಲ್ಲಿ ಸಾಹಿತಿ, ಕವಿ, ಸಂಗೀತಗಾರ “ಕಲಾಭೂಷಣ” ಎಂ. ರವಿರಾಜ್ ಅವರನ್ನು ಸನ್ಮಾನಿಸಲಾಯಿತು. ಮೂಡಬಿದ್ರೆಯ ಎಂ.ಸಿ.ಎಸ್ ಬ್ಯಾಂಕಿನ ಕಲ್ಪವೃಕ್ಷ ಸಭಾಭವನದಲ್ಲಿ ಜರುಗಿದ ಸಮಾರಂಭದಲ್ಲಿ ಶಾಖಾ ಅಧ್ಯಕ್ಷರಾದ ಆನಡ್ಕ ದಿನೇಶ್ ಕುಮಾರ್, ವಲಯಾಧಿಕಾರಿಗಳಾದ ಜಯರಾಜ್ ಕಂಬಳಿ, ವಕೀಲರಾದ ಎಂ. ಬಾಹುಬಲಿ ಪ್ರಸಾದ್, ವಕೀಲೆ ಶ್ವೇತಾ ಜೈನ್ ಮತ್ತಿತರರು ಹಾಜರಿದ್ದರು. ಸನ್ಮಾನ ಸ್ವೀಕರಿಸಿದ ರವಿರಾಜ್‌ರವರು ತಾನು 52 ವರ್ಷಗಳ ಹಿಂದೆ ರಚಿಸಿದ “ಮಹಾವೀರ ವಿದ್ಯಾಲಯ ಚರಿತೆ” ಎಂಬ ಕಥನ ಕಾವ್ಯವನ್ನು ವಾಚಿಸಿದರು.

ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡಬಿದ್ರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್

Article Image

ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡಬಿದ್ರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್

ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ ಇವರು ಶಾಲಾ ಮಕ್ಕಳಿಗಾಗಿ ಪ್ರತಿ ವರ್ಷವೂ ಆಯೋಜಿಸುವ ರಾಷ್ಟ್ರಮಟ್ಟದ ಯುವ ವಿಜ್ಞಾನಿ ಕಾರ್ಯಕ್ರಮ ‘ಯುವಿಕ’ಗೆ ಈ ಬಾರಿ ಎಕ್ಸಲೆಂಟ್ ಮೂಡುಬಿದಿರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್ ಆಯ್ಕೆಗೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಯನ್ನು ಗೈದಿದ್ದಾರೆ. ಇಸ್ರೋ’ ನ ವಿವಿಧ ಕೇಂದ್ರಗಳಲ್ಲಿ ಎರಡು ವಾರಗಳ ಕಾಲ ಜರಗುವ 'ಯುವಿಕ-2024' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ಬಾರಿ ದೇಶದ ಎಲ್ಲಾ ರಾಜ್ಯಗಳಿಂದ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 85,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಕಾಂಕ್ಷಿಗಳಾಗಿ ಅರ್ಜಿಯನ್ನು ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮೂರು ವರುಷಗಳ ಶೈಕ್ಷಣಿಕ ಸಾಧನೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ವೈಜ್ಞಾನಿಕ, ಕ್ರೀಡಾ ಸಾಧನೆಗಳು, ಒಲಂಪಿಯಾಡ್ ತತ್ಸಮಾನ ಸ್ಪರ್ಧೆಗಳಲ್ಲಿ ಪಡೆದ ರ‍್ಯಾಂಕ್ ಜೊತೆಗೆ ಮುಖ್ಯವಾಗಿ ಇಸ್ರೋ ಆಯೋಜಿಸುವ ಆನ್‌ಲೈನ್ ರಸಪ್ರಸ್ನೆಯಲ್ಲಿ ವಿದ್ಯಾರ್ಥಿಯ ಪಲಿತಾಂಶ ಇವೆಲ್ಲವನ್ನು ಮಾನದಂಡವನ್ನಾಗಿರಿಸಿ 250 ಮಂದಿ ವಿದ್ಯಾರ್ಥಿಗಳನ್ನು ಪ್ರಸಕ್ತ ಸಾಲಿನ ‘ಯುವಿಕ’ಗೆ ಆಯ್ಕೆ ಮಾಡಲಾಗಿದ್ದು ಈ ಪಟ್ಟಿಯಲ್ಲಿ 12 ಮಂದಿಗಳಲ್ಲಿ ರಾಜ್ಯ ಪಠ್ಯಕ್ರಮ ಭೋಧಿಸುವ ಶಿಕ್ಷಣ ಸಂಸ್ಥೆಯಿಂದ ಆಯ್ಕೆಯಾಗಿ ಭಾಗವಹಿಸಿದ ಕರ್ನಾಟಕದ ಏಕೈಕ ವಿದ್ಯಾರ್ಥಿನಿ ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೌಲ್ಯ ವೈ. ಆರ್. ಜೈನ್ ಆಗಿರುವುದು ಶಿಕ್ಷಣ ಕಾಶಿ ಎನಿಸಿದ ಮೂಡುಬಿದಿರೆಗೆ ವಿಶೇಷ ಮೆರಗನ್ನು ತಂದಿದೆ ಈಗಾಗಲೇ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ ಕಾರ್ಯಕ್ರಮದಲ್ಲಿ ವಿಜ್ಞಾನ ಮಾದರಿ ತಯಾರಿ, ಜಿಲ್ಲಾ ರಾಜ್ಯ ಮಟ್ಟದ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆಯ ಜೊತೆಗೆ ರಾಷ್ಟ್ರ, ರಾಜ್ಯಮಟ್ಟದ ಅಟಲ್ ಮಾರಥಾನ್, ಇನ್‌ಸ್ಪಾಯರ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿನೂತನವಾದ ಸಂಶೋಧನಾತ್ಮಕ ಮಾದರಿಗಳನ್ನು ಪ್ರಸ್ತುತ ಪಡಿಸುವ ಮೂಲಕ ಗಮನ ಸೆಳೆದಿರುವ ಈ ಪ್ರತಿಭೆ ಮೂಡುಬಿದಿರೆಯ ಪ್ರತಿಷ್ಠಿತ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಇವರ ಸುಪುತ್ರಿಯಾಗಿದ್ದಾಳೆ.

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ಮೇ 30 ರಂದು ಧರ್ಮಸ್ಥಳದಲ್ಲಿ ರಜತ ಮಹೋತ್ಸವ ಸಮಾರಂಭ

Article Image

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ಮೇ 30 ರಂದು ಧರ್ಮಸ್ಥಳದಲ್ಲಿ ರಜತ ಮಹೋತ್ಸವ ಸಮಾರಂಭ

ಉಜಿರೆ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭ ಇದೇ 30 ರಂದು ಗುರುವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ ಎಂದು ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಬೆಂಗಳೂರಿನ ಪದ್ಮಿನಿ ಪದ್ಮರಾಜ್ ರವರು ತಿಳಿಸಿದ್ದಾರೆ. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಸೇವೆ, ಸಾಧನೆ ಬಗ್ಗೆ ಅವರು ಧರ್ಮಸ್ಥಳದಲ್ಲಿ ಮಾಹಿತಿ ನೀಡಿದರು. ಮೇ 30 ರಂದು ಗುರುವಾರ ಪೂರ್ವಾಹ್ನ ಹತ್ತು ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸುವರು. ಹೇಮಾವತಿ ವೀ. ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಖ್ಯಾತ ಹೃದ್ರೋಗ ತಜ್ಞರಾದ ಬೆಂಗಳೂರಿನ ಡಾ. ವಿಜಯಲಕ್ಷ್ಮೀ ಬಾಳೆಕುಂದ್ರೀಯವರು ಮತ್ತು ಚಲನಚಿತ್ರ ನಟಿ ಪದ್ಮಜಾ ರಾವ್ ರವರು ಶುಭಾಶಂಸನೆ ಮಾಡುವರು. ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ, ಬೆಳಗಾವಿಯ ಸುಮನ್ ಪತ್ರಾವಳಿ, ಮೂಡಬಿದ್ರೆಯ ವೀಣಾ ಶೆಟ್ಟಿ, ಬೆಂಗಳೂರಿನ ಸುರೀಮಾ ಯಶವಂತ್, ಹುಣಸೂರಿನ ಛಾಯಾ ಮತ್ತು ಮೈಸೂರಿನ ಕುಮಾರಿ ಅನನ್ಯಾ ಅವರನ್ನು ಸನ್ಮಾನಿಸಲಾಗುವುದು. ರಾಜ್ಯದಲ್ಲಿರುವ ಜೈನ ಮಹಿಳಾ ಒಕ್ಕೂಟದ ಎಲ್ಲಾ ಶಾಖೆಗಳಿಂದ ಸುಮಾರು ಒಂದು ಸಾವಿರ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದು ಸಿದ್ಧತೆಗಳು ಭರದಿಂದ ನಡೆಯುತ್ತಿವೆ ಎಂದು ಪದ್ಮಿನಿ ಪದ್ಮರಾಜ್ ರವರು ಮಾಹಿತಿ ನೀಡಿದರು.

ನಿಧನ: ಕಟ್ಟೆಮನೆ ಉದಯ್ ಕುಮಾರ್

Article Image

ನಿಧನ: ಕಟ್ಟೆಮನೆ ಉದಯ್ ಕುಮಾರ್

ಪುಂಜಾಲಕಟ್ಟೆ: ಇಲ್ಲಿಯ ಕಟ್ಟೆಮನೆ ಉದಯ್ ಕುಮಾರ್ (77ವ) ಇವರು ಮೇ 21 ರಂದು ರಾತ್ರಿ ನಿಧನ ಹೊಂದಿದರು. ಇವರು ಪತ್ನಿ ಮತ್ತು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು- ವರ್ಗವನ್ನು ಅಗಲಿದ್ದಾರೆ

ನಿಧನ: ಗುರುವಾಯನಕೆರೆ ಶಕ್ತಿನಗರದ ಧನಂಜಯ ಇಂದ್ರ

Article Image

ನಿಧನ: ಗುರುವಾಯನಕೆರೆ ಶಕ್ತಿನಗರದ ಧನಂಜಯ ಇಂದ್ರ

ಗುರುವಾಯನಕೆರೆ ಶಕ್ತಿನಗರದ ಧನಂಜಯ ಇಂದ್ರ(72ವ) ಇವರು ಇಂದು (ಮೇ. 19) ಬೆಳಗ್ಗೆ ನಿಧನ ಹೊಂದಿದರು. ಇವರು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ಬಸದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಓರ್ವ ಮಗ, ಸೊಸೆ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

Article Image

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

ಭಾರತೀಯ ಜೈನ್ ಮಿಲನ್ ಮೂಡುಬಿದಿರೆಯ ಮಾಸಿಕ ಸಭೆ ವಾಲ್ಪಾಡಿ ಬಸದಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀಪಾಲ್ ಎಸ್. ರವರು ತಮ್ಮ ಧರ್ಮಪತ್ನಿ ಮತ್ತು ಮಾತೃಶ್ರೀಯವರ ಸ್ಮರಣೆಯಲ್ಲಿ ಕೊಡಮಾಡುವ "ವಜ್ರಶ್ರೀ ಅರ್ಚಕ ಪುರಸ್ಕಾರ"ವನ್ನು ಅಳಿಯೂರು ಬಸದಿಯ ಹಿರಿಯ ಅರ್ಚಕರಾದ ರತ್ನವರ್ಮ ಇಂದ್ರರ ಸೇವೆಯನ್ನು ಗುರುತಿಸಿ, ರತ್ನವರ್ಮ ಇಂದ್ರ ಹಾಗೂ ವಿನಯ ದಂಪತಿಯನ್ನು ಶಾಲು, ಫಲಕಾಣಿಕೆ, ಸನ್ಮಾನ ಪತ್ರ ಹಾಗೂ ನಗದು ಪುರಸ್ಕಾರದೊಂದಿಗೆ ಜೈನ್ ಮಿಲನ್ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಮಿಲನ್ ಅಧ್ಯಕ್ಷ ದಿನೇಶ್ ಕುಮಾರ್ ಆನಡ್ಕ, ಶ್ವೇತಾ ಜೈನ್, ಪ್ರಭಾಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.

ವೇಣೂರು: ಸುರಭಿ ಮನೆ ಶ್ರೀಮತಿ ವಸಂತಿ ನಿಧನ

Article Image

ವೇಣೂರು: ಸುರಭಿ ಮನೆ ಶ್ರೀಮತಿ ವಸಂತಿ ನಿಧನ

ಬೆಳ್ತಂಗಡಿ ತಾಲೂಕಿನ ವೇಣೂರು, ಬಜಿರೆ ಗ್ರಾಮದ ಸುರಭಿ ಮನೆ ನಿವಾಸಿ, ಬಿ. ರತ್ನವರ್ಮ ಇಂದ್ರರ ಧರ್ಮಪತ್ನಿ ಶ್ರೀಮತಿ ವಸಂತಿ (76ವ) ಇವರು ಇಂದು (ಎ.1) ನಿಧನ ಹೊಂದಿದರು. ಇವರು ಮಕ್ಕಳಾದ ಪ್ರಮೋದ್ ಕುಮಾರ್, ಶುಭ, ಮತ್ತು ಪೂರ್ಣಿಮಾ, ಸವಿತ, ಸುಧೀರ್ ಕುಮಾರ್ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಡಾ. ಪ್ರಭಾತ್ ಬಲ್ನಾಡು ಪ್ರಾಂಶುಪಾಲರಾಗಿ ಪದೋನ್ನತಿ

Article Image

ಡಾ. ಪ್ರಭಾತ್ ಬಲ್ನಾಡು ಪ್ರಾಂಶುಪಾಲರಾಗಿ ಪದೋನ್ನತಿ

ಮೂಡುಬಿದಿರೆಯ 52 ವರ್ಷಗಳ ಇತಿಹಾಸವನ್ನು ಹೊಂದಿರುವ ಜೈನ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಪ್ರಭಾತ್ ಬಲ್ನಾಡು ಪೇಟೆಯವರು ಪದೋನ್ನತಿ ಹೊಂದಿದ್ದಾರೆ. 1999ರಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆಯಲ್ಲಿ ಉಪನ್ಯಾಸ ವೃತ್ತಿ ಆರಂಭಿಸಿದ ಇವರು ಕಳೆದ 22 ವರ್ಷಗಳಿಂದ ಜೈನ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯಕ್ಷಗಾನ ಕಲಾವಿದರಾಗಿ, ಸಂಘಟಕರಾಗಿ, ಆಕಾಶವಾಣಿ ಹಾಗೂ ಟಿವಿ ಮಾಧ್ಯಮಗಳ ಸಂಪನ್ಮೂಲ ವ್ಯಕ್ತಿಯಾಗಿ, ಇತಿಹಾಸ ಸಂಶೋಧಕರಾಗಿ, ಲೇಖಕರಾಗಿ, ಜೆಸಿಐ ತರಬೇತುದಾರರಾಗಿ, ಅಧ್ಯಕ್ಷರಾಗಿ ಹತ್ತಾರು ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಇವರು ಹಿರಿಯ ಯಕ್ಷಗಾನ ಸಂಘಟಕ ಮರ್ಕಂಜದ ಯುವರಾಜ ಜೈನ್ ಮತ್ತು ಪ್ರಸನ್ನ ದಂಪತಿಗಳ ಪುತ್ರ.

ಹಾಸನ: ಡಾ. ಎಸ್. ಎ. ನಿತಿನ್ ನೇಮಕ

Article Image

ಹಾಸನ: ಡಾ. ಎಸ್. ಎ. ನಿತಿನ್ ನೇಮಕ

ಬೆಂಗಳೂರಿನ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಸದಸ್ಯರನ್ನಾಗಿ ಡಾ.ಎಸ್.ಎ ನಿತಿನ್ ಅವರನ್ನು ನೇಮಕ ಮಾಡಲಾಗಿದೆ. ಇವರು ಪ್ರಸ್ತುತ ನಗರದ ರಾಜೀವ್ ಗಾಂಧಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಉಪಾಧ್ಯಕ್ಷರಾಗಿ ಸೂರಜ್ ಜೈನ್ ಮಾರ್ನಾಡ್ ಆಯ್ಕೆ

Article Image

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಉಪಾಧ್ಯಕ್ಷರಾಗಿ ಸೂರಜ್ ಜೈನ್ ಮಾರ್ನಾಡ್ ಆಯ್ಕೆ

ಕಳೆದ ಅನೇಕ ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸೂರಜ್ ಜೈನ್ ಅವರು ಇದೀಗ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ. ಈ ಹಿಂದೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾಗಿಯು ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಅದೇ ರೀತಿ ಅನೇಕ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರು ಮೂಡುಬಿದಿರೆ ತಾಲೂಕಿನ ಮಾರ್ನಾಡಿನವರು

ಅಮೇರಿಕಾದ ಹಾರ್ವರ್ಡ್ ಯೂನಿವರ್ಸಿಟಿಗೆ ಪ್ರದೀಪ್ ಜೈನ್ ಬಲ್ನಾಡು ಪೇಟೆ

Article Image

ಅಮೇರಿಕಾದ ಹಾರ್ವರ್ಡ್ ಯೂನಿವರ್ಸಿಟಿಗೆ ಪ್ರದೀಪ್ ಜೈನ್ ಬಲ್ನಾಡು ಪೇಟೆ

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರೇಟೆಜಿಕ್ ಲೀಡರಶಿಪ್ ಪ್ರೋಗ್ರಾಮ್ ಗೆ (strategic Leadership ) ಸುಳ್ಯ ತಾಲೂಕು ಮರ್ಕಂಜದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ ಯಾಗಿದ್ದು ಇದರಲ್ಲಿ ಭಾಗವಹಿಸಲು ಶನಿವಾರ ಅಮೆರಿಕದ ಬೋಸ್ಟನ್ ಗೆ ತೆರಳಿದ್ದಾರೆ. ಇದೇ ಸಂದರ್ಭ ಅವರು ಅಮೆರಿಕದ ನ್ಯೂಯಾರ್ಕ್ ಮತ್ತು ವಾಷಿಂಗ್ಟನಿಗೂ ಭೇಟಿ ನೀಡಲಿದ್ದಾರೆ. ದೇಶದಾದ್ಯಂತ 25 ರಾಜ್ಯಗಳಲ್ಲಿ 750 ಶಾಖೆಗಳನ್ನು ಹೊಂದಿರುವ ಉಜ್ಜಿವನ್ ಬ್ಯಾಂಕ್ ಇದರ ಹೌಸಿಂಗ್ ಲೋನ್ ವಿಭಾಗದ ರಾಷ್ಟ್ರಮಟ್ಟದ ವ್ಯವಹಾರ ಮುಖ್ಯಸ್ಥರಾಗಿರುವ ಇವರು ಸುಳ್ಯ ತಾಲೂಕು ಬಲ್ನಾಡು ಪೇಟೆ ಬಸದಿಯ ಆಡಳಿತ ಮುಕ್ತೆಸರರಾದ ಮತ್ತು ಯಕ್ಷಗಾನ ಸಂಘಟಕರಾದ ಮರ್ಕಂಜ ಯುವರಾಜ ಜೈನ್ ಮತ್ತು ಪ್ರಸನ್ನ ದಂಪತಿಗಳ ಕಿರಿಯ ಪುತ್ರರಾಗಿದ್ದಾರೆ.

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

Article Image

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

SCDCC ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಮುಲ್ಕಿ ಅರಮನೆಯ ವತಿಯಿಂದ ಎಂ ಗೌತಮ್ ಜೈನ್ ಹಾಗೂ ಪವಿತ್ರೇಶ್ ಗೌರವಾರ್ಪಣೆ ಸಲ್ಲಿಸಿದರು.

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

Article Image

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ನ್ಯೂ ಪಡಿವಾಳ್ ಮಾಲಕ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆಯಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ಅಧ್ಯಕ್ಷರಿಲ್ಲದೇ ಇದ್ದ ಮೂಡಾ ಕ್ಕೆ ಇದೀಗ ಹೊಸ ಸಾರಥಿಯ ನೇಮಕವಾಗಿರುತ್ತದೆ.

ಹಿರಿಯ ಸಾಹಿತಿ ನಾಗರಾಜ್ ಪೂವಣಿ ನಿಧನ

Article Image

ಹಿರಿಯ ಸಾಹಿತಿ ನಾಗರಾಜ್ ಪೂವಣಿ ನಿಧನ

ಹಿರಿಯ ಸಾಹಿತಿ, ಬರಹಗಾರರು, ನಾ ವುಜಿರೆ ಎಂದೇ ಪ್ರಸಿದ್ಧಿ ಹೊಂದಿದ್ದ ಎಸ್‌ಡಿಎಂ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಪ್ರೋಫೆಸರ್, ನಾಗರಾಜ್ ಪೂವಣಿ (84 ವ). ಇವರು ಇಂದು (ಮಾ. 11) ನಿಧನ ಹೊಂದಿದರು. ಇವರು ಪತ್ನಿ ಸರಸ್ವತಿ ನಾ ವುಜಿರೆ ಮತ್ತು ಪುತ್ರ ಪಾಶ್ವನಾಥ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

Article Image

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

ಹೊಸದಿಲ್ಲಿ ಮಾ. 8: ಕಾರ್ಕಳದ ಶ್ರದ್ಧಾ ಜೈನ್, ತಾಂಜಾನಿಯಾದ ಕಿಲಿ ಪೌಲ್ ಸಹಿತ ಸಾಮಾಜಿಕ ಜಾಲತಾಣಗಳ ಮೂಲಕ ಜನಮನ ಗೆದ್ದಿರುವ ಒಟ್ಟು 20 ಕ್ಷೇತ್ರಗಳ 23 ಯುವ ಕ್ರಿಯೇಟರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ದೇಶದ ಪ್ರಪ್ರಥಮ 'ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ'ಯನ್ನು ಪ್ರದಾನ ಮಾಡಿದರು. ಅತ್ಯಂತ ಸೃಜನಶೀಲ ಮಹಿಳಾ ಕ್ರಿಯೇಟರ್ ವಿಭಾಗದಲ್ಲಿ 'ಅಯ್ಯೋ ಶ್ರದ್ಧಾ' ಎಂದೇ ಖ್ಯಾತರಾಗಿರುವ ಕನ್ನಡತಿ ಶ್ರದ್ಧಾ ಜೈನ್ ಅವರು ಪ್ರಶಸ್ತಿ ಪಡೆದರು. ಇವರಲ್ಲದೆ ಪಂಖ್ತಿ ಪಾಂಡೆ, ಕೀರ್ತಿಕಾ ಗೋವಿಂದಸ್ವಾಮಿ, ಗಾಯಕಿ ಮೈಥಿಲಿ ಠಾಕೂರ್, ಮಲ್ಹಾರ್ ಕಳಂಬೆ ಸಹಿತ ಹಲವು ಯುವ ಪ್ರತಿಭೆಗಳ ಜತೆಗೆ ಮೂವರು ಅಂತರಾಷ್ಟ್ರೀಯ ಕ್ರಿಯೇಟರ್‌ಗಳಿಗೆ ಕೂಡ ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ, ನಾವೆಲ್ಲರೂ ಭಾರತದಲ್ಲೇ ರೂಪಿಸೋಣ, ಜಗತ್ತಿಗಾಗಿ ರೂಪಿಸೋಣ ಎಂದ ಪ್ರಧಾನಿ, ಭಾರತದ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುವಂತೆ ಮತ್ತು ನಾರಿ ಶಕ್ತಿಯ ಥೀಮ್‌ನೊಂದಿಗೆ ಕಂಟೆಂಟ್ ರೂಪಿಸುವಂತೆ ಪ್ರಶಸ್ತಿ ಪುರಸ್ಕೃತರಿಗೆ ಕರೆ ನೀಡಿದರು.'ಅಯ್ಯೋ ಶ್ರದ್ಧಾ ಕಾರ್ಕಳ ತಾಲೂಕಿನ ಬಜಗೋಳಿ ವರ್ಧಮಾನ ಜೈನ್ ಹಾಗೂ ದಿ.ಸುಶೀಲಾ ದಂಪತಿಯ ಇಬ್ಬರು ಪುತ್ರಿಯರಲ್ಲಿ ಶ್ರದ್ಧಾ ಒಬ್ಬರು. 'ಅಯ್ಯೋ ಶ್ರದ್ಧಾ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಪ್ರಸ್ತುತ ಬೆಂಗಳೂರಿನಲ್ಲಿದ್ದಾರೆ. ಪ್ರಶಸ್ತಿ ಸ್ವೀಕರಿಸುವ ವೇಳೆ ಶ್ರದ್ಧಾ, ಎಷ್ಟೇ ಒತ್ತಡದ ಪರಿಸ್ಥಿತಿ ಇದ್ದರೂ ನಾವು ಭಾರತೀಯರು ನಗುವ ಮಾರ್ಗವನ್ನು ಕಂಡುಕೊಳ್ಳುತ್ತಲೇ ಇರುತ್ತೇವೆ ಎಂದರು.

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

Article Image

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಸುಪ್ರೀತ್ ಜೈನ್ ಅವರನ್ನು ಆಯ್ಕೆ ಮಾಡಲಾಗಿದೆ. ಇವರು ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಪತ್ರಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾಧ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು.

ಆಚಾರ್ಯ ಶ್ರೀ ವಿದ್ಯಾಸಾಗರ ಮುನಿಮಹಾರಾಜರ ಸಮಾಧಿಮರಣ

Article Image

ಆಚಾರ್ಯ ಶ್ರೀ ವಿದ್ಯಾಸಾಗರ ಮುನಿಮಹಾರಾಜರ ಸಮಾಧಿಮರಣ

ಚತ್ತೀಸ್‌ಗಢದ, ಚಂದ್ರಗಿರಿತೀರ್ಥ ಡೊಂಗರಗಢದಲ್ಲಿ ಆಧ್ಯಾತ್ಮ ಕವಿ, ಲೇಖಕ, ವಿಮರ್ಶಕ, ಪ್ರಾಥಃಸ್ಮರಣೀಯ ದಿಗಂಬರ ಜೈನ ಸರೋವರದ ರಾಜಹಂಸ, ಈ ಶತಮಾನದ ಶ್ರೇಷ್ಠ ತಪಸ್ವಿ ಸಂತಶಿರೋಮಣಿ ಆಚಾರ್ಯ ಶ್ರೀ ವಿದ್ಯಾಸಾಗರ ಮುನಿಮಹಾರಾಜರು ಇಂದು(ಫೆ.18) ಬೆಳಗಿನಜಾವ 2.30ಕ್ಕೆ ಸಮಾಧಿಮರಣ ಹೊಂದಿದರು. ಕರ್ನಾಟಕದ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದಲ್ಲಿ ಶ್ರೀಮತಿದೇವಿ ಹಾಗೂ ಮಲ್ಲಪ್ಪಾಜಿಯವರ ಸುಪುತ್ರರಾಗಿ ಜನಿಸಿ ಆಚಾರ್ಯ ದೇಷಭೂಷಣ ಮಹಾರಾಜರಿಂದ ಪ್ರಭಾವಿತರಾಗಿ ಜೈನ ಮುನಿಯಾದರು. ಕಾಲಕ್ರಮೇಣ ಇವರ ತಂದೆ-ತಾಯಿ, ಇಬ್ಬರು ಸಹೋದರರು ಹಾಗೂ ಇಬ್ಬರು ಸಹೋದರಿಯರು ಕೂಡ ಜೈನ ದೀಕ್ಷೆಪಡೆದು ಜಿನನ ಮಾರ್ಗವನ್ನು ಹಿಡಿದು ನಡೆದರು. ಆಚಾರ್ಯರೊಟ್ಟಿಗೆ ಸದಾಕಾಲ ಸಾವಿರಕ್ಕೂ ಹೆಚ್ಚು ಅವರ ಶಿಷ್ಯರು ದೇಶದಾದ್ಯಂತ ವಿಹಾರ ಮಾಡಿ ಜಿನಧರ್ಮದ ಪ್ರಸಾರ ಹಾಗೂ ಧರ್ಮಜ್ಞಾನವನ್ನು ಪ್ರಸರಿಸಿದರು ಆಚಾರ್ಯರ ‘ಮೂಕ ಮಾಟಿ’ ಎಂಬ ಗ್ರಂಥವು ಜಗತ್ತಿನ ಎಲ್ಲ ಭಾಷೆಗಳಲ್ಲಿ ಪ್ರಕಟಿತವಾಗಿದ್ದು ಅದರೊಟ್ಟಿಗೆ ‘ತೋತಾ ಕ್ಯೂ ರೋತಾ’ ಹಾಗೂ ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ.

First Previous

Showing 7 of 8 pages

Next Last