Article Image

ಕಾರ್ಕಳ: ಭಗವಾನ್ ೧೦೦೮ ಶ್ರೀ ಆದಿನಾಥ ಸ್ವಾಮಿಯ ನಿರ್ಮಾಣ ಕಲ್ಯಾಣ ಮಹೋತ್ಸವ

Article Image

ಕಾರ್ಕಳ: ಭಗವಾನ್ ೧೦೦೮ ಶ್ರೀ ಆದಿನಾಥ ಸ್ವಾಮಿಯ ನಿರ್ಮಾಣ ಕಲ್ಯಾಣ ಮಹೋತ್ಸವ

ಶ್ರೀ ಕರ್ನಾಟಕ ಜೈನ ಪುರೋಹಿತ ಸಂಘ ಕಾರ್ಕಳ, ಇದರ ವತಿಯಿಂದ ಭಗವಾನ್ ೧೦೦೮ ಶ್ರೀ ಆದಿನಾಥ ಸ್ವಾಮಿಯ ನಿರ್ಮಾಣ ಕಲ್ಯಾಣ ಮಹೋತ್ಸವವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಆ ಸಂದರ್ಭದಲ್ಲಿ ಹಿರಿಯ ಪುರೋಹಿತರಿಗೆ ಗೌರವ ಸಮರ್ಪಣಾ ಸಮಾರಂಭ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮಗಳು ನಡೆದವು.

ನರಸಿಂಹರಾಜಪುರ: ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ನರಸಿಂಹರಾಜಪುರ: ವಾರ್ಷಿಕ ರಥಯಾತ್ರಾ ಮಹೋತ್ಸವ

ಶ್ರೀ ಕ್ಷೇತ್ರ ಸಿಂಹನಗದ್ದೆ ಅತಿಶಯ ಮಹಾಕ್ಷೇತ್ರದಲ್ಲಿ ಭಗವಾನ್ ಶ್ರೀ ೧೦೦೮ ಚಂದ್ರಪ್ರಭ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಜ್ವಾಲಾಮಾಲಿನಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಪ.ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಮಾರ್ಗದರ್ಶನ ಹಾಗೂ ಪಾವನ ಸಾನ್ನಿಧ್ಯದಲ್ಲಿ ಇದೇ ಬರುವ ದಿನಾಂಕ 21-03-2025ರಿಂದ ಮೊದಲ್ಗೊಂಡು ದಿನಾಂಕ 25-03-2025ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಜಿನ ಸಹಸ್ರನಾಮ ಮತ್ತು ಭಕ್ತಾಮರ ಪುಂಜ ಅರ್ಘ್ಯ

Article Image

ಜಿನ ಸಹಸ್ರನಾಮ ಮತ್ತು ಭಕ್ತಾಮರ ಪುಂಜ ಅರ್ಘ್ಯ

ಅಳಿಯೂರು: ಇಲ್ಲಿನ ಆದಿನಾಥ ಸ್ವಾಮಿ ಬಸದಿಯಲ್ಲಿ ನಾಳೆ (ಫೆ. 26) ಮಧ್ಯಾಹ್ನ 2.00ರಿಂದ‌ ಭಗವಾನ್‌ ಶ್ರೀ ಆದಿನಾಥ ಸ್ವಾಮಿಯ ಮೋಕ್ಷ ಕಲ್ಯಾಣ ಪರ್ವ ದಿನದ ಪ್ರಯುಕ್ತ ಶ್ರೀ ಜ್ವಾಲಾಮಾಲಿನಿ ಮಹಿಳಾ ಸಂಘದ ವತಿಯಿಂದ ಜಿನ ಸಹಸ್ರನಾಮ ಮತ್ತು ಭಕ್ತಾಮರ ಪುಂಜ ಅರ್ಘ್ಯ ನಡೆಯಲಿದೆ. ಹಾಗೂ ಸಂಜೆ ಗಂಟೆ 6.30ಕ್ಕೆ ಆರತಿ ಮತ್ತು ಜಿನಭಜನೆ ಕಾ‍ರ್ಯಕ್ರಮ ಜರಗಲಿದೆ.

“ಕರ್ನಾಟಕದ ಪ್ರಾಣೋಪಾಸಕ” ಆಲೂರು ವೆಂಕಟರಾವ ಅವರ 61ನೇ ಪುಣ್ಯಸ್ಮರಣೆ ಕಾರ್ಯಕ್ರಮ

Article Image

“ಕರ್ನಾಟಕದ ಪ್ರಾಣೋಪಾಸಕ” ಆಲೂರು ವೆಂಕಟರಾವ ಅವರ 61ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಅವರ 61ನೇ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು (ಫೆ. 25)ನಗರದ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಸರಳ, ಸುಂದರವಾಗಿ ಸಂಪನ್ನಗೊಂಡಿತು. ಕಾರ್ಯಕ್ರಮದ ಮೊದಲು ವಿಶೇಷ ಅತಿಥಿಗಳಾಗಿ ಆಗಮಿಸಿದ್ದ ಪ್ರೇಸ್‌ ಇನ್ಫಾರ್ಮೇಶನ ಬ್ಯೂರೊ ಭಾರತ ಸರ್ಕಾರದ ನಿವೃತ್ತ ಪ್ರಿನ್ಸಿಪಲ್ ಡಿ. ಜಿ.ಮನೀಶ ದೇಸಾಯಿಯವರು ಹಾಗೂ ಇತರ ಗಣ್ಯರು ಭವನದ ಆವರಣದೊಳಗಿರುವ ಆಲೂರು ವೆಂಕಟರಾವ ಅವರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಪಣೆ ಮಾಡಿ ನಮನ ಸಲ್ಲಿಸಿದರು. ಮನೀಶ ದೇಸಾಯಿಯವರು ಮಾತನಾಡಿ ಕನ್ನಡದ ಮೂಲ ಕೃಷಿಕ ಆಲೂರು ವೆಂಕಟರಾವ ಅವರ ಹೆಸರಿನ ಮಾತ್ರದಿಂದಲೇ ಪುಳಕಿತಗೊಂಡ ಆ ಕಾಲದ ವಿದ್ಯಾರ್ಥಿಗಳಾದ ನಾವು ಅವರನ್ನು ನೋಡಿರದಿದ್ದರು. ಅವರ ಕನ್ನಡದ ಕಾವ್ಯಗಳಿಂದ ಪ್ರೇರಿತರಾಗಿ ಸಾಧನೆಕೇರಿಯಲ್ಲಿ ಸರ್‌ಕ್ಯೂಲೇಟಿಂಗ್‌ ಲೈಬ್ರರಿ ಪ್ರಾರಂಭಿಸಿ ಅಲ್ಲಿ ಕರ್ನಾಟಕ ಗತವೈಭವ, ಲೋಕಮಾನ್ಯ ತಿಲಕರ ಕನ್ನಡ ಗೀತಾರಹಸ್ಯ ಕನ್ನಡ ಅನುವಾದ ಹಾಗೂ ಇನ್ನಿತರ ಮಹತ್ವದ ಕನ್ನಡ ಕೃತಿಗಳನ್ನು ಸಂಗ್ರಹಿಸಿ ವಿತರಿಸಿದ್ದು ಇಂದಿಗೂ ನನ್ನ ನೆನಪಿನಲ್ಲಿದೆ ಎಂದು ಆಲೂರರ ಕನ್ನಡ ಕಟ್ಟುವ ಕಾರ್ಯಗಳನ್ನು ಸ್ಮರಿಸಿಕೊಂಡರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಪ್ರಾಧ್ಯಾಪಕ, ಸಾಹಿತಿ, ಡಾ. ಜಿನದತ್ತ ಹಡಗಲಿಯವರು ಮಾತನಾಡಿ, ಒಂದು ಕಾಲಕ್ಕೆ ವೈಭವಯುತ ಸಾಮ್ರಾಜ್ಯವೆಂದೇ ಗುರುತಿಸಿಕೊಂಡಿದ್ದ ವಿಜಯನಗರದ ಹಂಪಿಯ ಭಗ್ನಾವಶೇಷಗಳು, ಪಳೆಯುಳಿಕೆಗಳು ತಮ್ಮ ಹೃದಯವನ್ನು ಕಲಕಿ ಬಿಟ್ಟಾಗ ತೀವ್ರ ಹತಾಶೆಯನ್ನುಭವಿಸಿದ ಆಲೂರರು ಆ ದಿನವನ್ನು ತಮ್ಮ ಜೀವನದಲ್ಲಿ ಕ್ರಾಂತಿ ಮಾಡಿದ ದಿನವೆಂದೇ ಭಾವಿಸುತ್ತಾರೆ. ಆ ಕ್ಷಣದಿಂದ ವಿಜಯನಗರದ ಪುನರುತ್ಥಾನ, ಕನ್ನಡ ಕರ್ನಾಟಕತ್ವ, ಕರ್ನಾಟಕ ಏಕೀಕರಣಗಳ ಹೊಸ ಹೊಳಪುಗಳನ್ನು ಕಂಡು ಅವುಗಳ ಸಾಕ್ಷಾತ್ಕಾರವಾಗಿ ಪಣತೊಡುತ್ತಾರೆ. ವಂಗಭಂಗ ಚಳುವಳಿಯ ಕಾವು ಇವರನ್ನು ತಟ್ಟಿ ಮತ್ತಷ್ಟು ದು:ಖವಾಗಿ ನಿಸ್ವಾರ್ಥ ಭಾವನೆಯಿಂದ ಈ ನಾಡು ನನ್ನ ಮನೆ, ಈ ದೇಶ ನನ್ನ ಕುಟುಂಬವೆಂಬ ಸೂತ್ರವನ್ನು ಮೂಲವಾಗಿಸಿಕೊಂಡು ತಮ್ಮ ಹೊರಾಟಕ್ಕೆ ಶ್ರೀಕಾರ ಹಾಕುತ್ತಾರೆ. ಕನಾಟಕ ವಿದ್ಯಾವರ್ಧಕ ಸಂಘ, ವಾಗ್ಬೂಷಣ ಪತ್ರಿಕೆಯ ಸಂಪಾದಕತ್ವ ಮುಂತಾದವುಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಾರೆ, ಧಾರವಾಡದಲ್ಲಿ 1907ರಲ್ಲಿ ಮೊದಲಬಾರಿ ಕನ್ನಡ ಗ್ರಂಥಕರ್ತರ ಸಮ್ಮೇಳನ ನಡೆಸುತ್ತಾರೆ ಇದರ ಮುಂದುವರಿಕೆಯಾಗಿ ಜರುಗಿದ 3ನೇಯ ಸಮ್ಮೇಳನವು ಈ ನಾಡಿನ ಪ್ರತಿಷ್ಠಿತ ಸಂಸ್ಥೆ “ಕನ್ನಡ ಸಾಹಿತ್ಯ ಪರಿಷತ್ತಿನ" ಹುಟ್ಟಿಗೆ ನಾಂದಿಯಾಗುತ್ತದೆ. ಕರ್ನಾಟಕ ಗತವೈಭವ, ಕರ್ನಾಟಕ ವೀರರತ್ನಗಳಂತಹ ಪುಸ್ತಕಗಳನ್ನು ಪ್ರಕಟಿಸಿ ಮಲಗಿದ ಕನ್ನಡಿಗರತ್ತ ಚಾಟಿ ಬೀಸುತ್ತಾರೆ. ಆಲೂರರ ಇಂಥ ಕ್ರಾಂತಿಕಾರಿ ಹೆಜ್ಜೆಗಳನ್ನು ಸರಿಯಾಗಿಯೇ ಗುರುತಿಸಿದ ವರಕವಿ ಬೇಂದ್ರೆ ಅಲೂರರನ್ನು “ಕರ್ನಾಟಕ ಪ್ರಾಣೋಪಾಸಕ"ರೆಂದು ಹೆಮ್ಮೆಯಿಂದ ಕೊಂಡಾಡುತ್ತಾರೆ. ಹೀಗೆ ಆಲೂರುರೆಂದರೆ ಅದೊಂದು ಕನ್ನಡ ಗುಡಿಯ ಗೋಪೂರವಾಗಿದ್ದು ಕನ್ನಡಗಿರಲ್ಲರ ಪ್ರಾತ: ಸ್ಮರಣೀಯರಾಗಿದ್ದಾರೆ ಎಂದು ಡಾ. ಜಿನದತ್ತ ಹಡಗಲಿಯವರು ಆಲೂರರ ಸಾಧನೆಗಳನ್ನು ಸ್ಮರಿಸಿಕೊಂಡರು. ಟ್ರಸ್ಟ್ ಅಧ್ಯಕ್ಷ ಡಾ. ಪ್ರಮೋದ ಗಾಯಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಎಚ್. ಎ ಕಾಖಂಡಕಿ, ಕವಿ ನರಸಿಂಹ ಪರಾಂಜಪೆ, ಎಸ್.ಎಮ್ ದೇಶಪಾಂಡೆ, ಎಮ್. ಎಮ್ ಚಿಕ್ಕಮಠ, ರಮೇಶ ಪರ್ವತಿಕರ, ಅನಿಲ ಕಾಖಂಡಕಿ, ಮುರಳಿ ಹುಯಿಲಗೋಳ, ಭಾರತಿ ದೇಸಾಯಿ, ಶ್ರೀಕಾಂತ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು. ಗೀತಾ ಆಲೂರ ಪ್ರಾರ್ಥಿಸಿದರು. ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಟ್ರಸ್ಟಿ ಡಾ. ದೀಪಕ ಆಲೂರ ಕಾರ್ಯಕ್ರಮ ನಿರೂಪಿಸಿದರು, ಶ್ರೀನಿವಾಸ ವಾಡಪ್ಪಿ ವಂದಿಸಿದರು.

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

Article Image

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯು ಊರ ಹಾಗೂ ಪರವೂರ ದಾನಿಗಳಿಂದ ಜೀರ್ಣೋದ್ಧಾರಗೊಂಡಿದ್ದು, ಧಾಮ ಸಂಪ್ರೋಕ್ಷಣ ಮಹೋತ್ಸವವು ಫೆ. 28 (ಶುಕ್ರವಾರ) ಹಾಗೂ ಮಾರ್ಚ್ 1 (ಶನಿವಾರ) ಮತ್ತು 2 ರಂದು (ಭಾನುವಾರ) ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ ಎಂದು ಬಸದಿಯ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಹೆಗ್ಡೆ, ಎರ್ಮೆದೋಡಿ ಗುತ್ತು ಮತ್ತು ಕಾರ್ಯದರ್ಶಿ ಸುರೇಶ್ ಕುಮಾರ್, ಉಜಿರೆ ತಿಳಿಸಿದ್ದಾರೆ. ಫೆ:28: ಶುಕ್ರವಾರ: ಬೆಳಿಗ್ಗೆ ಗಂಟೆ 8 ರಿಂದ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ. ಅಪರಾಹ್ನ ಗಂಟೆ 2.30ರಿಂದ ನಾಂದಿಮಂಗಲ ಪೂಜಾವಿಧಾನ, ಕ್ಷೇತ್ರಪಾಲ ಪ್ರತಿಷ್ಠೆ, ನಾಗಪ್ರತಿಷ್ಠೆ, ಭಗವಾನ್ ಆದಿನಾಥ ಸ್ವಾಮಿಗೆ 24 ಕಲಶ ಅಭಿಷೇಕ, ಮಹಾಪೂಜೆ ಮಾ. 1: ಶನಿವಾರ: ಬೆಳಿಗ್ಗೆ 8 ಗಂಟೆಯಿಂದ ನಿತ್ಯವಿಧಿ ಸಹಿತ ವಾಸ್ತು ಪೂಜಾವಿಧಾನ, ನವಗ್ರಹ ಶಾಂತಿ, ಅಪರಾಹ್ನ ಗಂಟೆ 2 ರಿಂದ ಪದ್ಮಾವತಿ ದೇವಿಗೆ ರಜತಕವಚ ಸಮರ್ಪಣೆ, ಆರಾಧನೆ, ಲಕ್ಷ ಹೂವಿನ ಪೂಜೆ, ಭಗವಾನ್ ಆದಿನಾಥ ಸ್ವಾಮಿಗೆ ೫೪ ಕಲಶ ಅಭಿಷೇಕ, ಮಹಾಪೂಜೆ ಮಾ. 2: ಭಾನುವಾರ: ಬೆಳಿಗ್ಗೆ ಗಂಟೆ 8 ರಿಂದ ಧಾಮ ಸಂಪ್ರೋಕ್ಷಣೆ, ಭಗವಾನ್ ಆದಿನಾಥ ಸ್ವಾಮಿ ಪ್ರತಿಷ್ಠೆ, ಶಿಖರಾರೋಹಣ. ಅಪರಾಹ್ನ ಗಂಟೆ 3.30 ರಿಂದ ಭಕ್ತಾಮರ ಆರಾಧನೆ. ಭಗವಾನ್ ಆದಿನಾಥ ಸ್ವಾಮಿಗೆ 108 ಕಲಶ ಅಭಿಷೇಕ, ಮಹಾಪೂಜೆ, ತೋರಣ ವಿಸರ್ಜನೆ. ಸೇವಾಕರ್ತೃಗಳು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬಸ್ಥರು. ಪ್ರತಿಷ್ಠಾಚಾರ್ಯ ಬೆಳ್ತಂಗಡಿ ಜಯರಾಜ ಇಂದ್ರರು, ಪುಷ್ಪರಾಜ ಇಂದ್ರರು ಮತ್ತು ಸ್ಥಳ ಪುರೋಹಿತ ವೃಷಭರಾಜ ಇಂದ್ರರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸುವರು. ಧಾರ್ಮಿಕ ಸಭೆ: ಮಾ. 2 ರಂದು ಭಾನುವಾರ ಸಂಜೆ 5 ಗಂಟೆಯಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸುವರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಕಿಶೋರ್ ಹೆಗ್ಡೆ: ಮೊ: 9148659620

ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ

Article Image

ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ

ಭಾರತೀಯ ಜೈನ್ ಮಿಲನ್ ವಲಯ 8, ಮಂಗಳೂರು ವಿಭಾಗ ಇದರ ಆಶ್ರಯದಲ್ಲಿ ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ ಹಾಗೂ ಜಿನ ಭಜನ ವಿಜೇತ ತಂಡಗಳಿಗೆ ಪುರಸ್ಕಾರ ಸಮಾರಂಭ ಮತ್ತು ಮಾಹಿತಿ ಕಾರ್ಯಕ್ರಮವು ದಿನಾಂಕ 23- 2 -2025 ಆದಿತ್ಯವಾರ ಅಪರಾಹ್ನ 3.30ಕ್ಕೆ ಸರಿಯಾಗಿ ಕುಪ್ಪೆಪದವು ಅನಂತರಾಜ್ ಸಭಾಭವನದಲ್ಲಿ ನಡೆಯಿತು. ಪ್ರಾರಂಭದಲ್ಲಿ ನೇರೆಂಕಿ ಪಾರ್ಶ್ವನಾಥ್ ಮೂಡಬಿದ್ರೆ ಇವರು ಜೈನ ಬಸದಿಗಳ ದಾಖಲೀಕರಣದ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿವರಣೆಯೊಂದಿಗೆ ನಡೆಸಿಕೊಟ್ಟರು. ಬಳಿಕ ನಡೆದ ಮಾಸಿಕ ಸಭೆಯಲ್ಲಿ ನೇರಂಕಿ ಪಾರ್ಶ್ವನಾಥ್ ಇವರನ್ನು ಸನ್ಮಾನಿಸಲಾಯಿತು . ವಿಜೇತ ಜಿನಭಜನಾ ತಂಡಗಳಾದ ಅನಂತ ಶ್ರೀ ಜನಭಜನಾ ತಂಡ ಬಜಗೋಳಿ, ಬ್ರಾಹ್ಮಿ ಜಿನಭಜನಾ ತಂಡ ಮೂಡಬಿದ್ರೆ , ಸಮ್ಯಕ್ತ ಜಿನಭಜನಾ ತಂಡ, ಬಂಟ್ವಾಳ, ಅನಂತಪಾರ್ಶ್ವ ಜಿನಭಜನಾ ತಂಡ ಕುಪ್ಪೆ ಪದವು ಇದರ ಸದಸ್ಯರನ್ನು ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ. ಉಜ್ವಲ ಕಂಬಳಿ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಭಾಗ 8ರ ಉಪಾಧ್ಯಕ್ಷರಾದ ಸುದರ್ಶನ್ ಜೈನ್ ವಹಿಸಿದ್ದರು. ಮಧ್ವರಾಜ್ ಜೈನ್ ಅಧ್ಯಕ್ಷರು ಬಂಟ್ವಾಳ ಜೈನ್ ಮಿಲನ್, ಸ್ವರ್ಣ ಲತಾ ಅಜಿತ್ ಕುಮಾರ್ ಅಧ್ಯಕ್ಷರು ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆ ಪದವು ಉಪಸ್ಥಿತರಿದ್ದರು. ಜೈನ್ ಮಿಲನ್ ವಲಯ 8ರ ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಜೈನ್ ಜಿನಭಜನಾ ತಂಡಗಳಿಗೆ ಪುರಸ್ಕಾರ ನೀಡಿ ಅಭಿನಂದಿಸಿದರು. ವಲಯ ನಿರ್ದೇಶಕರಾದ ಸೋಮಶೇಖರ್ ಶೆಟ್ಟಿ, ಪ್ರಮೋದ್ ಕುಮಾರ್, ಶ್ರೀವರ್ಮ ಅಜ್ರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಡಾ. ಸುದೀಪ್ ಕುಮಾರ್ ಮಾಜಿ ಅಧ್ಯಕ್ಷರು, ಜೈನ್ ಮಿಲನ್ ಬಂಟ್ವಾಳ, ಭೋಜರಾಜ ಜೈನ್ ಸ್ಥಾಪಕ ಅಧ್ಯಕ್ಷರು ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆಪದವು ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಿಲನ್ ಕಾರ್ಯದರ್ಶಿಗಳಾದ ಭರತ್ ಕುಮಾರ್, ಹರ್ಷ ಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅನ್ವಿತಾ ಜೈನ್ ಸ್ವಾಗತಿಸಿ, ಸುಪ್ರಿಯಾ ಭರತ್ ಧನ್ಯವಾದ ನೀಡಿದರು. ಕಾಂಚನಶ್ರೀ, ನಿಶ್ಚಿತಾ ಜೈನ್ ಸನ್ಮಾನ ಪತ್ರವನ್ನು ಓದಿದರು. ಮಂಗಳೂರು ವಿಭಾಗ ಕಾರ್ಯದರ್ಶಿ, ವೀರ್ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು. ಜೈನ್ ಮಿಲನ್ ಕುಪ್ಪೆಪದವು ಆತಿಥ್ಯವನ್ನು ವಹಿಸಿದ್ದರು.

ಮೂಡುಬಿದಿರೆ: ಪ್ರಥಮ ವಾರ್ಷಿಕೋತ್ಸವ

Article Image

ಮೂಡುಬಿದಿರೆ: ಪ್ರಥಮ ವಾರ್ಷಿಕೋತ್ಸವ

ಮೂಡಬಿದಿರೆ: ಸಂಪೂರ್ಣ ಜೀರ್ಣೋದ್ಧಾರಗೊಂಡ ಶ್ರೀ ಶಾಂತಿನಾತ ಸ್ವಾಮಿ ಬಸದಿ, ಹಿರೇ ಅಮ್ಮನವರ ಬಸದಿ ಹಾಗೂ ಮೇಗಿನ ನೆಲೆಯ ಚತುರ್ವಿಂಶತಿ ತೀರ್ಥಂಕರರ ಬಸದಿ, ದ್ವಜಾಸ್ತಂಭ ಮತ್ತು ಚಂದ್ರಶಾಲೆ ಇದರ ಧಾಮ ಸಂಪ್ರೋಕ್ಷಣೆ ಹಾಗೂ ಪ್ರತಿಷ್ಠಾ ಮಹೋತ್ಸವವು ತಾ. 10.02.2024 ರಿಂದ 16.02.2024ರ ಪರ್ಯಂತ ವೈಭವಯುತವಾಗಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಂಡ ಮಹೋತ್ಸವದ ಪ್ರಥಮ ವಾರ್ಷಿಕೋತ್ಸವವು ಮೂಡಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತ ಭೂಷಣ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ನಾಳೆ (ಫೆ. 26) ಧಾಮ‍್ಕ ವಿಧಿವಿಧಾನಗಳೊಂದಿಗೆ ಜರಗಲಿರುವುದು.

ಹಂ.ಪ. ನಾಗರಾಜಯ್ಯ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ

Article Image

ಹಂ.ಪ. ನಾಗರಾಜಯ್ಯ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ

ಉಡುಪಿ, ಫೆ. 24: ಮಾಹೆ ವಿ.ವಿ.ಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡುವ ಟಿ. ವಿಮಲಾ ಪೈ ಪ್ರಾಯೋಜಿತ 2024ನೇ ಸಾಲಿನ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಹಿರಿಯ ಸಾಹಿತಿ ಪ್ರೊ| ಹಂ.ಪ. ನಾಗರಾಜಯ್ಯ(ಹಂಪನಾ) ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲ. ರೂ., ಪಾರಿತೋಷಕ, ಪ್ರಶಸ್ತಿಪತ್ರ ಒಳಗೊಂಡಿದೆ. ಮಾ.23ರಂದು ಗೋವಿಂದ ಪೈ ಸಂಶೋಧನ ಸಂಪುಟದ ದ್ವಿತೀಯ ಭಾಗದ ಬಿಡುಗಡೆ ಕಾರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಸಮಿತಿ ಸದಸ್ಯರಾದ ಡಾ| ತಾಳ್ತಜೆ ವಸಂತ ಕುಮಾರ್, ಡಾ| ಕೆ. ಚಿನ್ನಪ್ಪ ಗೌಡ, ಡಾ| ಪ್ರಭಾಕರ ಜೋಷಿ, ಡಾ| ಕಿಶೋರಿ ನಾಯಕ್‌, ಡಾ| ಎಸ್. ಪಾಡೀಗಾರ್ ಸಹಕರಿಸಿದ್ದಾರೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಪದವಿ ಪ್ರದಾನ

Article Image

ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಪದವಿ ಪ್ರದಾನ

ಜಮಖಂಡಿಯ ೧೦೦೮ ಶ್ರೀ ಪಾರ್ಶ್ವನಾಥ ದಿಗಂಬರ ಜೈನ್ ಮಂದಿರದ ಅರ್ಚಕರಾದ ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಜಿಂಜರ್ ವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಪಂಚಕಲ್ಯಾಣ ಪ್ರತಿಷ್ಠ ಮಹಾಮಹೋತ್ಸವದಲ್ಲಿ “ಸಾಧನ ರತ್ನ” ಪ್ರಶಸ್ತಿಯನ್ನು ಹಾಗೂ ಜೈನ್ ಇಂಡಿಯನ್ ಟಿ.ವಿ ವತಿಯಿಂದ “ಕರ್ನಾಟಕ ಪುರೋಹಿತ ರತ್ನ” ಎಂಬ ಪದವಿಯನ್ನು ನೀಡಿ ಗೌರವಿಸಲಾಗಿದೆ. ಇವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ: ಪ್ರತಿಷ್ಠ ರತ್ನ, ಪ್ರತಿಷ್ಠ ಶಿರೋಮಣಿ, ಪ್ರತಿಷ್ಠ ಬಾಸ್ಕರ, ಪ್ರತಿಷ್ಠ ಪ್ರವೀಣ, ಪಂಡಿತರತ್ನ, ವಾಣಿಭೂಷಣ, ಪ್ರತಿಷ್ಠಾಚಾರ್ಯ.

ಮೈಸೂರು: ವಾರ್ಷಿಕ ಪೂಜಾ ಮಹೋತ್ಸವ

Article Image

ಮೈಸೂರು: ವಾರ್ಷಿಕ ಪೂಜಾ ಮಹೋತ್ಸವ

ಮೈಸೂರು: ಇಲ್ಲಿಯ ಶ್ರೀ ಆದಿನಾಥ ತೀರ್ಥಂಕರ ಸೇವಾ ಸಮಿತಿಯವರ ಆಶ್ರಯದಲ್ಲಿ ಶ್ರೀ ೧೦೦೮ ಆದಿನಾಥ ತೀರ್ಥಂಕರರ ಮೋಕ್ಷ ಕಲ್ಯಾಣ ಜಿನರಾತ್ರಿ ವಾರ್ಷಿಕ ಪೂಜಾ ಮಹೋತ್ಸವ ಆಚರಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಆದಿನಾಥ ಸಭಾಂಗಣ ಶ್ರೀ ಕ್ಷೇತ್ರ ಶ್ರೀರಂಗ ಪಟ್ಟಣದಲ್ಲಿ ದಿನಾಂಕ 27-02-2025ನೇ ಗುರುವಾರದಂದು ನಡೆಯಲಿದೆ. ಪಾವನ ಸಾನ್ನಿಧ್ಯ, ಆಶೀರ್ವಚನ: ಪ.ಪೂ. ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಶ್ರೀ ಕ್ಷೇತ್ರ ಕನಕಗಿರಿ ಅಧ್ಯಕ್ಷತೆ: ಬಿ.ಎಸ್. ಸಂತೋಷ್ ಕುಮಾರ, ಅಧ್ಯಕ್ಷರು, ಶ್ರೀ ಆದಿನಾಥ ಸೇವಾ ಟ್ರಸ್ಟ್, ಮೈಸೂರು ಉಪನ್ಯಾಸ: ಪಂಪ ಮಹಾಕವಿ ವಿರಚಿತ ಆದಿ ಪುರಾಣ ಉಪನ್ಯಾಸಕರು: ಡಾ. ಹೆಚ್.ಪಿ. ಮೋಹನ ಕುಮಾರ ಶಾಸ್ತ್ರಿ, ಕುಲಸಚಿವರು, ಆಚಾರ್ಯ ಗುರುಕುಲ, ಮೈಸೂರು ದಿವ್ಯ ಉಪಸ್ಥಿತಿ: ಪ್ರತಿಷ್ಟಾಚಾರ್ಯ ಎಸ್. ಎಂ. ಸನ್ಮತಿಕುಮಾರ ಶಾಸ್ತ್ರಿ, ಶ್ರೀರಂಗ ಪಟ್ಟಣ ಕ್ಷೇತ್ರ ಸಂರಕ್ಷಕರು ಮತ್ತು ಶ್ರಾವಿಕಭೂಷಣೆ ಪದ್ಮಲತಾ ಸನ್ಮತಿಕುಮಾರ, ಶ್ರೀ ಕ್ಷೇತ್ರ ಶ್ರೀ ರಂಗ ಪಟ್ಟಣ, ಮಂಡ್ಯ ಜಿಲ್ಲೆ.

ಕಾರ್ಕಳ: ಭಾರತೀಯ ಜೈನ್‌ ಮಿಲನಿನ ಮಾಸಿಕ ಸಭೆ

Article Image

ಕಾರ್ಕಳ: ಭಾರತೀಯ ಜೈನ್‌ ಮಿಲನಿನ ಮಾಸಿಕ ಸಭೆ

ಕಾರ್ಕಳ: ಇಲ್ಲಿಯ ಭಾರತೀಯ ಜೈನ್‌ ಮಿಲನಿನ ಫೆಬ್ರವರಿ ತಿಂಗಳ ಮಾಸಿಕ ಸಭೆಯು ನಾಳೆ (ಫೆ.23) ಹಿರಿಯಂಗಡಿಯಲ್ಲಿರುವ ಶ್ರೀ ಮಹಾವೀರ ಭವನದಲ್ಲಿ ನಡೆಯಲಿದೆ. ಚಾವಡಿ ಚರ್ಚೆ: ವಿಷಯ: ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಆಧುನಿಕತೆ ನಡೆಸಿಕೊಡುವವರು: ಮುನಿರಾಜ ರೆಂಜಾಳ ಭಾಗವಹಿಸುವವರು: ಮಹಾವೀರ ಜೈನ್‌ ಇಚಲಂಪಾಡಿ, ನಿರಂಜನ್‌ ಅಳಿಯೂರು, ಅಜಿತ್‌ ಕುಮಾರ್‌ ಜೈನ್‌ ಕೊಕ್ರಾಡಿ, ಶ್ವೇತಾ ಜೈನ್‌ ಮೂಡುಬಿದಿರೆ.

ಪಂಚಕಲ್ಯಾಣ ಮಹೋತ್ಸವ

Article Image

ಪಂಚಕಲ್ಯಾಣ ಮಹೋತ್ಸವ

ಸಾಗರ ತಾಲೂಕಿನ ಸುಳ್ಳಳ್ಳಿ ಅಂಚೆ, ಆವಿಗೆಯಲ್ಲಿ ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿಯ ಜಿನ - ಚೈತ್ಯಾಲಯವನ್ನು ನೂತನವಾಗಿ ನಿರ್ಮಿಸಿದ್ದು, ಇದರ ಪಂಚಕಲ್ಯಾಣ ಮಹೋತ್ಸವ ಮತ್ತು ಮಾನಸ್ತಂಭೋಪರಿ ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಹಾಗೂ ಕನಕಗಿರಿ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಕಂಬದಹಳ್ಳಿ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಹೊಂಬುಜ ಶ್ರೀ ಜೈನ ಮಠದ ಪ.ಪೂ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹಾಗೂ ನರಸಿಂಹರಾಜಪುರ ಶ್ರೀ ಜೈನ ಮಠದ ಪ.ಪೂ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಇವರುಗಳ ದಿವ್ಯ ಸಾನ್ನಿಧ್ಯದಲ್ಲಿ ಇಂದಿನಿಂದ (ಫೆ.17) ಪ್ರಾರಂಭಗೊಂಡು ದಿನಾಂಕ 21-02-2025ನೇ ಶುಕ್ರವಾರದವರೆಗೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಟ್ಲ: ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ

Article Image

ವಿಟ್ಲ: ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ

ಶ್ರೀ ಕ್ಷೇತ್ರ ವಿಟ್ಲದಲ್ಲಿ ಫೆಬ್ರವರಿ 13 ರಿಂದ ಫೆ. 17ರವರೆಗೆ ನಡೆಯುತ್ತಿರುವ ಭ|| 1008 ಚಂದ್ರನಾಥ ಸ್ವಾಮಿ ಬಸದಿಯ ಪಂಚಕಲ್ಯಾಣ ಮಹೋತ್ಸವದಲ್ಲಿ ದಿನಾಂಕ 16-02-2025ರ ಭಾನುವಾರದಂದು ಸಂಜೆ 7.00 ಗಂಟೆಗೆ ಮಂಗಳೂರು ಜೈನ ಸಮಾಜ ಅರ್ಪಿಸುವ “ ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ” ಜರುಗಲಿದೆ. ಸಾಹಿತ್ಯ ಮತ್ತು ನಿರ್ದೇಶನ: ಸುಕುಮಾರ್ ಬಲ್ಲಾಳ್ ಮಂಗಳೂರು ನೃತ್ಯ ನಿರ್ದೇಶನ: ವಿಧುಷಿ ಶಾಶ್ವತಿ ಸಚಿನ್ ಮಂಗಳೂರು ರಂಗ ನಿರ್ವಹಣೆ ಹಾಗೂ ಸಂಯೋಜನೆ: ಸಚಿನ್ ಜೈನ್ ಮಂಗಳೂರು ಸಂಗೀತ: ಜಿನಗಾನ ವಿಶಾರದೆ ಜಯಶ್ರೀ ಡಿ. ಜೈನ್ ಹೊರನಾಡು ವಿಶೇಷ ಆಕರ್ಷಣೆ: ನವಿಲು ಬಸದಿಯಲ್ಲಿ ನವಿಲು ನೃತ್ಯ ಪುಟ್ಟ ಮಕ್ಕಳಿಂದ ಸಮವಸರಣ ನಿರ್ಮಾಣ ಒಂದೇ ವೇದಿಕೆಯಲ್ಲಿ ನೂರು ಶ್ರಾವಕ-ಶ್ರಾವಕಿಯರ ಅಭೂತಪೂರ್ವ ಪ್ರದರ್ಶನ.

ಬೆಳ್ತಂಗಡಿ: ವಾರ್ಷಿಕ ಸಮಾರಂಭ

Article Image

ಬೆಳ್ತಂಗಡಿ: ವಾರ್ಷಿಕ ಸಮಾರಂಭ

ಶ್ರೀ ಅತಿಶಯ ಕ್ಷೇತ್ರ ಪರುಷಗುಡ್ಡೆ ಬಸದಿಯ 1008 ಭ|| ಶ್ರೀ ಪಾಶ್ವ೯ನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವದ ಹಾಗೂ ಶ್ರೀ ಪದ್ಮಾವತೀ ಅಮ್ಮನವರ ಬಿಂಬ ಪ್ರತಿಷ್ಠಾ ಮಹೋತ್ಸವದ ವಾರ್ಷಿಕೋತ್ಸವ ಸಮಾರಂಭವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮಾರ್ಗದರ್ಶನ ಮತ್ತು ಆಶೀರ್ವಾದಗಳೊಂದಿಗೆ ಜರಗಲಿರುವುದು ಹಾಗೂ ಬೆಳಿಗ್ಗೆ 10.00ಗಂಟೆಗೆ ಚತುರ್ವಿಂಶತಿ ತೀರ್ಥಂಕರರ ಚರಣ ಕೂಟಗಳ ದರ್ಶನದ ದಾರಿಯನ್ನು ಲೋಕಾರ್ಪಣೆ ಮಾಡಲಿರುವರು ಹಾಗೂ ಶಾಸಕರ ಅನುದಾನದಿಂದ ಬಸದಿಗೆ ಪ್ರವೇಶಿಸುವ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆಯನ್ನು ಶಾಸಕರಾದ ಹರೀಶ್ ಪೂಂಜಾರವರು ನೆರವೇರಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಗೆ ಪದವಿ

Article Image

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಗೆ ಪದವಿ

ಶ್ರೀ ಧ ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯೂಷ್ ಸಚಿವರಾದ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಇವರಿಂದ ಧರ್ಮಸ್ಥಳದ ಡಾ. ಚಿರನ್ವಿ ಜೈನ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಪದವಿಯನ್ನು ಪಡೆದರು. ಇವರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಹಾಗೂ ರತ್ನಶ್ರೀ ದಂಪತಿ ಪುತ್ರ. ಇವರು ಇದೇ ಕಾಲೇಜಿನಲ್ಲಿ ಎಮ್. ಡಿಗೆ (ಸ್ನಾತಕೋತ್ತರ ಪದವಿ) ಪ್ರವೇಶಾತಿಯನ್ನು ಪಡೆದಿದ್ದಾರೆ.

ನಲ್ಲೂರು ಜಗತ್ಪಾಲ ಕಡಂಬರಿಗೆ ಸನ್ಮಾನ

Article Image

ನಲ್ಲೂರು ಜಗತ್ಪಾಲ ಕಡಂಬರಿಗೆ ಸನ್ಮಾನ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ 'ಹಿರಿಯ ರೆಡೆಗೆ ಸಾಹಿತ್ಯ ನಡಿಗೆ' ಕಾರ್ಯಕ್ರಮದಲ್ಲಿ ಬಜಗೋಳಿ ನಲ್ಲೂರು ಜಗತ್ಪಾಲ ಕಡಂಬರಿಗೆ ಕನ್ನಡ ನಾಡು ನುಡಿಗೆ ಸಲ್ಲಿಸಿದ ಸೇವೆಗಾಗಿ ನಲ್ಲೂರು ಗುಣಲಲಿತ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಕಳ ತಾಲೂಕು ಸಮ್ಮೇಳನದ ಸಭಾಧ್ಯಕ್ಷರಾದ ಕೆ ಗುಣಪಾಲ ಕಡಂಬ, ಕ.ಸಾ.ಪ. ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಉದ್ಯಮಿ ಬಜಗೋಳಿ ಡಾ ರವೀಂದ್ರ ಶೆಟ್ಟಿ, ನಿತ್ಯಾನಂದ ಪೈ, ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ರೂಪ ರವೀಂದ್ರ ಶೆಟ್ಟಿ, ನಲ್ಲೂರು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ನಾಗೇಶ್, ದೇವದಾಸ ಕೆರೆಮನೆ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಅಬ್ಯಾಕಸ್ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಷಡ್ಜ

Article Image

ಅಬ್ಯಾಕಸ್ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಷಡ್ಜ

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ಬಾಲ್ಯದಲ್ಲಿಯೇ ಅತ್ಯಂತ ಅದ್ಬುತ ಪ್ರತಿಭಾವಂತ ಪುಟ್ಟ ಬಾಲಕ ಷಡ್ಜ ಹುಬ್ಬಳ್ಳಿಯಲ್ಲಿ ಎಜು ಸ್ಮಾರ್ಟ್ ಕೇರ್ "ಅಬ್ಯಾಕಸ್" ( ಅಂಕಗಣಿತದ ಕೌಶಲ್ಯ) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಬೆಂಗಳೂರಿನಲ್ಲಿಯೂ ಪ್ರಥಮ ಬಹುಮಾನ ತನ್ನದಾಗಿರಿಸಿಕೊಂಡಿದ್ದಾನೆ. ಇದೀಗ ಮುಂಬೈಯಲ್ಲಿ ಕಳೆದ ವಾರ ನಡೆದ 17ನೇ ರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದುಕೊಂಡು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ, ಅಬ್ಯಾಕಸ್ ಮತ್ತು ಗ್ರೇಡಿಂಗ್ ಪರೀಕ್ಷೆಯಲ್ಲಿ "ಅಚೀವರ್ " ಪ್ರಶಸ್ತಿ ಪಡೆದ ಈ ಬಾಲಕ ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾನೆ. ಇವನು ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ ನ ಸದಸ್ಯರು ಧರ್ಮನುರಾಗಿಗಳೂ ಆದ ಶಿಲ್ಪಾ ವಿಜಯಕುಮಾರ ಕಾಶಿನ ಅವರ ಮೊಮ್ಮಗ, ಉಪನ್ಯಾಸಕಿ ಭಾಗ್ಯಶ್ರೀ ಮತ್ತು ಭಾರತೀಯ ಅಂಚೆ ಇಲಾಖೆಯ ಉದ್ಯೋಗಿ ಜೀವಂಧರ ಕಾಶಿನರವರ ಪುತ್ರ, ಪ್ರಭಾ ನಾಯಕ್ ಇವರು ಷಡ್ಜನಿಗೆ ಮಾರ್ಗದರ್ಶಕರಾಗಿ ಪ್ರೇರಣೆ ಪ್ರೋತ್ಸಾಹ ನೀಡಿದ್ದಾರೆ. ಶಾಂತರಾಜ ಮಲ್ಲಸಮುದ್ರ

ಇಂಡಿಯನ್ ವುಮೆನ್ ನೆಟ್‌ವಕ್‌೯ನ 2025-26ನೇ ಸಾಲಿನ ಅಧ್ಯಕ್ಷೆಯಾಗಿ ಪದ್ಮಿನಿ ಎಸ್. ನವಲಗೂಂದ ಆಯ್ಕೆ

Article Image

ಇಂಡಿಯನ್ ವುಮೆನ್ ನೆಟ್‌ವಕ್‌೯ನ 2025-26ನೇ ಸಾಲಿನ ಅಧ್ಯಕ್ಷೆಯಾಗಿ ಪದ್ಮಿನಿ ಎಸ್. ನವಲಗೂಂದ ಆಯ್ಕೆ

ಇಂಡಿಯನ್ ವುಮೆನ್ ನೆಟ್‌ವಕ್‌೯ (ಸಿಐಐ-ಐಡಬ್ಲ್ಯುಎನ್) ಕರ್ನಾಟಕ, 2025-26ನೇ ಸಾಲಿನ ಅಧ್ಯಕ್ಷೆಯಾಗಿ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಪೂರ್ವ ವಿದ್ಯಾರ್ಥಿನಿ ಪದ್ಮಿನಿ ಎಸ್. ನವಲಗೂಂದ ಅವರ ನೇಮಕವನ್ನು ಫೆಬ್ರವರಿ 5, 2025 ರಂದು ಬೆಂಗಳೂರಿನಲ್ಲಿ ನಡೆದ ವಾರ್ಷಿಕ ಸಮ್ಮೇಳನದಲ್ಲಿ ಘೋಷಿಸಿದೆ. ಸ್ವೀಕಾರ ಭಾಷಣದಲ್ಲಿ, ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿ, ಮಹಿಳಾ ವೃತ್ತಿಪರರಿಗೆ ಬೆಂಬಲಾತ್ಮಕ ಪರಿಸರವನ್ನು ನಿರ್ಮಿಸಲು ತಮ್ಮ ಬದ್ಧತೆಯನ್ನು ವಿವರಿಸುತ್ತಾ, ಮುಂದಿನ ವರ್ಷದ ದೃಷ್ಟಿಕೋನವನ್ನು ಹಂಚಿಕೊಂಡರು. ಇವರು, ಹುಬ್ಬಳ್ಳಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಪೂರ್ವ ವಿದ್ಯಾರ್ಥಿನಿ, ಪ್ರಸ್ತುತ ಬೋಶ್ ಗ್ಲೋಬಲ್ ಸಾಫ್ಟ್‌ವೇರ್ ಟೆಕ್ನಾಲಜೀಸ್ ಲಿಮಿಟೆಡ್‌ನಲ್ಲಿ ಉತ್ಪನ್ನ ಅನುಕೂಲತೆ ಅಧಿಕಾರಿ. ಡಿಟ್ರಾಯಿಟ್ನಲ್ಲಿ 2024ನೇ ಸಾಲಿನಲ್ಲಿ ಆಟೋಮೋಟಿವ್ ವುಮೆನ್ ಆಫ್ ದ ಇಯರ್ ಪ್ರಶಸ್ತಿಯನ್ನು ಪಡೆದಿರುವ ಪ್ರಥಮ ಭಾರತೀಯ ಮಹಿಳೆ. ಅವರು ಮಹಿಳಾ ನೆಟ್‌ವಕ್‌೯ಗೆ ಸಹಾಯ ಮಾಡುವ ಹಲವಾರು ಉಪಕ್ರಮಗಳನ್ನು ಚಲಾಯಿಸುವಲ್ಲಿ ವಿಶಾಲ ಅನುಭವವನ್ನು ಹೊಂದಿರುವ ನಾಯಕಿಯಾಗಿರುತ್ತಾರೆ.

ವರಂಗ: ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವರಂಗ: ವಾರ್ಷಿಕ ರಥಯಾತ್ರಾ ಮಹೋತ್ಸವ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವರಂಗದಲ್ಲಿರುವ ಭಗವಾನ್ ಶ್ರೀ 1008 ನೇಮಿನಾಥ ಸ್ವಾಮಿ ಬಸದಿಯ ವಾರ್ಷಿಕ ರಥಯಾತ್ರಾ ಮಹೋತ್ಸವವು ಪರಮ ಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ ಮತ್ತು ಪಾವನ ಸಾನ್ನಿಧ್ಯದಲ್ಲಿ ನಾಳೆ (ಫೆ.13) ಯಿಂದ ಪ್ರಾರಂಭಗೊಂಡು ಫೆ.17ರವರೆಗೆ ನೆರವೇರಲಿದೆ.

ಕೈಬೀಸಿ ಕರೆಯುತ್ತಿದೆ ವೈಭವೋಪೇತ ವಿಟ್ಲದ ಬಸದಿ

Article Image

ಕೈಬೀಸಿ ಕರೆಯುತ್ತಿದೆ ವೈಭವೋಪೇತ ವಿಟ್ಲದ ಬಸದಿ

ತುಳುನಾಡಿನ ಜೈನರಿಗೆ ಈಗ ಧಾರ್ಮಿಕವಾಗಿ ಸುವರ್ಣಯುಗ. ಹಲವಾರು ಬಸದಿಗಳು ಅಳಿವಿನಂಚಿನಲ್ಲಿದ್ದರೂ ಕಲ್ಲರಳಿ ಹೂವಾಗಿ ಧರ್ಮೀಯರ ಧರ್ಮದ ಪ್ರಭಾವನೆಯನ್ನು ಬಿತ್ತಿ, ಅಂಕುರವನ್ನಾಗಿಸಿ, ಸಸಿಯಾಗಿ, ಹೆಮ್ಮರವಾಗಲು ನಿಮಿತ್ತವಾಗಿದೆ. ಭವ್ಯಾತಿಭವ್ಯ ಬಸದಿಗಳು ಜೀರ್ಣೋದ್ಧಾರಗೊಂಡು ಜಿನಧರ್ಮದ ಸಾರತತ್ವವಾದ ಬದುಕು ಬದುಕಲು ಬಿಡು, ಅಹಿಂಸಾ ಪರಮೋ ಧರ್ಮಃ ಎಂದು ಸಾರಿ ಸಾರಿ ಮಾರ್ದನಿಸುತ್ತಿದೆ. ಇದೀಗ ಬಂಟ್ವಾಳದ ತಾಲ್ಲೂಕಿನ ವಿಟ್ಲದ ಚಂದ್ರನಾಥ ಸ್ವಾಮಿ ಬಸದಿಗೆ ಎಂಟು ಶತಮಾನಗಳ ಭವ್ಯ ಇತಿಹಾಸವಿದೆ. ಧರ್ಮಸ್ಥಳದ ಅಂದಿನ ಸ್ವರ್ಗೀಯ ಧರ್ಮಾಧಿಕಾರಿಗಳಾದ ಮಂಜಯ್ಯ ಹೆಗ್ಗಡೆಯವರು ಹಾಗೂ ಪುಟ್ಟಸ್ವಾಮಿ ಸಹೋದರರು ಜೊತೆಸೇರಿ ಜೀರ್ಣೋದ್ಧಾರವಾಗಿದ್ದ ಬಸದಿ ಇಂದು ಪುನಃ ಶಿಥಿಲಾವಸ್ಥೆಗೆ ತಲುಪಿದಾಗ ಪುಟ್ಟಸ್ವಾಮಿಯವರ ಪುತ್ರ ವಿನಯ ಕುಮಾರ್ ಅವರು ಮುಂದಡಿ ಇಟ್ಟಾಗ ಎಡಬಲಗಳಲ್ಲಿ ಜೋಡೆತ್ತಿನಂತೆ ಭುಜಕ್ಕೆ ಭುಜ ಕೊಟ್ಟು, ಹೆಜ್ಜೆಯ ಮೇಲೆ ಹೆಜ್ಜೆ ಇಟ್ಟವರು ವಿನಯಕುಮಾರ್ ಅವರ ಸುಪುತ್ರ ಎಂ. ಜಿತೇಶ್ ಜೈನ್ ಹಾಗೂ ಇವರ ಆಪ್ತ ಸ್ನೇಹಿತ ದರ್ಶನ್ ಜೈನ್ ಅವರುಗಳು. ಧರೆಗೆ ಅತಿಶಯವೆನಿಪ ಭವ್ಯ ಜಿನಮಂದಿರದ ನಿರ್ಮಾಣಕ್ಕೆ ಕಾರಣೀಭೂತರಾಗಿ ಭವ್ಯ ಧಾರ್ಮಿಕ ಪರಂಪರೆಗೆ ನಾಂದಿ ಹಾಡಿ ಅಸಂಖ್ಯಾತ ಯುವಪಡೆಗೆ ಮಾದರಿಯಾದರು. ಸ್ವರ್ಗ ಲೋಕದ ಅಕೃತ್ರಿಮ ಚೈತ್ಯಾಲಯದಂತೆ ವಿಟ್ಲ ಬಸದಿ ಈಗ ಕಂಗೊಳಿಸುತ್ತಿದೆ. ಅಸದಳವಾದ ಶಿಲ್ಪ ಕೆತ್ತನೆಗಳು, ಕಾಷ್ಠದ ಕೆತ್ತನೆಗಳು , ಕನ್ನಡಿಯಂತೆ ಜಗಮಗಿಸುವ ನೆಲ, ನವಿಲಿನಿಂತೆ ಶೋಭಸುವ ತಾಮ್ರ ಕವಚವನ್ನು ಹೊಂದಿದ ಮಾಡು ( ಸೂರು ) , ಇದು ಸಾಕ್ಷಾತ್ ಮಯೂರವೊಂದು ತನ್ನ ರೆಕ್ಕೆಯನ್ನು ಹರಡಿ ಜಿನಭಕ್ತಿಯಲ್ಲಿ ಲೀನವಾದಂತೆ ತೋರುತ್ತಿದೆ. ಹಸಿರ ಹೊದಿಕೆಯನ್ನು ಹೊಂದಿದ ಬಸದಿಯ ಸೂರು ಜಿನಧರ್ಮದ ಪ್ರಗತಿಯನ್ನು ಸೂಚಿಸುತ್ತಿದೆ. ತಿಳಿ ಮೆಂತ್ಯ ಬಣ್ಣದ ಗೋಡೆಗಳು, ಅದರಲ್ಲಿ ಸುಂದರವಾದ ಕೆತ್ತನೆಗಳು, ಪ್ರವೇಶದ್ವಾರದಲ್ಲೇ ಮೇಲ್ಗಡೆ ಹುಲಿ ದನ ಒಂದೇ ಹೊಂಡದಿಂದ ನೀರು ಕುಡಿಯವ ಅದ್ಭುತ ಮೈತ್ರಿಯ ಸಂದೇಶ ಸಾರುವ ಚಿತ್ರ ಪಟ್ಟಿಕೆಗಳು ಕಾಷ್ಠದಲ್ಲಿ ಅರಳಿ ಸೊಬಗ ಬೀರಿದೆ. ಮುಂದಕ್ಕೆ ಅಡಿ ಇಟ್ಟಂತೆ ಎದುರಲ್ಲಿ ಮರದ ಕೆತ್ತನೆಯ ಅರಹಂತ ದೇವನ ಪ್ರತಿಮೆ ಗೋಚರವಾಗಿ ಇಗೋ ನಿನ್ನ ಮನದ ಕಷಾಯವನ್ನು ತೊರೆದು ಭಗವಂತನ ದರ್ಶನ ಮಾಡು ಎಂಬಂತೆ ಸಾರುತ್ತಿದೆ. ಮುಂದಕ್ಕೆ ಅಡಿ ಇಟ್ಟಂತೆ ಭಗವಾನ್ ಚಂದ್ರನಾಥ ಸ್ವಾಮಿ, ಭಗವಾನ್ ಮಹಾವೀರ ಸ್ವಾಮಿಯ ದರ್ಶನವಾಗುತ್ತದೆ. ಇಡೀ ಬಸದಿಯೇ ಸಮವಸರಣದ ರೂಪ ಪಡೆದು ಜಿನಭಗವಂತನು ಸಮವಸರಣದಲ್ಲಿ ದಿವ್ಯಧ್ವನಿ ನೀಡುತ್ತಿರುವಂತೆ ಭಾಸವಾಗಿ ನಮ್ಮ ಕಿವಿಗಳೆರಡು ಆ ದಿವ್ಯಧ್ವನಿಯನ್ನು ಆಘ್ರಾಣಿಸಲು ಹೊತೊರೆಯುವಂತೆ ಭಾಸವಾಗುತ್ತದೆ. ನೋಡಲು ಬನ್ನಿರಿ ಚಂದ್ರೇಶನ ಓ ವಿಟ್ಲದಲಿ ನಿಂತಿಹ ದೇವನ ಸುಮತಿಯ ಬೋಧಿಪ ಮಹಾವೀರನ ಸುಮತಿಯ ಬೋಧಿಪ ಮಹಾವೀರನ ಹಾಗಾದರೆ ತಡವೇಕೆ ಬಂಧುಗಳೇ, ವಿಟ್ಲದತ್ತ ಧಾವಿಸೋಣ. ದಿನಾಂಕ 13.02.2025 ರಿಂದ 17.02.2025 ರವರೆಗಿನ ಪಂಚಕಲ್ಯಾಣವೆಂಬ ಜಲದಲ್ಲಿ ಮಿಂದೇಳೋಣ. ಧನ್ಯರಾಗೋಣ. ನಿರಂಜನ್ ಜೈನ್ ಕುದ್ಯಾಡಿ

ಪಾಣೆಮಂಗಳೂರು: 72ನೇ ವಾರ್ಷಿಕೋತ್ಸವ

Article Image

ಪಾಣೆಮಂಗಳೂರು: 72ನೇ ವಾರ್ಷಿಕೋತ್ಸವ

ಶ್ರೀ ಕ್ಷೇತ್ರ ಪಾಣೇರ್ ಭ|| 1008 ಶ್ರೀ ಅನಂತನಾಥ ತೀರ್ಥಂಕರ ಜಿನ ಚೈತ್ಯಾಲಯದ 72ನೇ ವಾರ್ಷಿಕೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಡಾ|| ಭಾರತ ಭೂಷಣ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ ಹಾಗೂ ಶುಭಾಶೀರ್ವಾದಗಳೊಂದಿಗೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಸಹಕಾರದೊಂದಿಗೆ ದಿನಾಂಕ 14-02-2025ನೇ ಶುಕ್ರವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಾರ್ಷಿಕ ಮಹೋತ್ಸವ

Article Image

ವಾರ್ಷಿಕ ಮಹೋತ್ಸವ

ಬೆಳ್ತಂಗಡಿ ತಾಲೂಕಿನ ಪೆರಿಂಜೆಯಲ್ಲಿರುವ ಶ್ರೀ ಪುಷ್ಪದಂತ ಸ್ವಾಮಿ ಬಸದಿಯ ವಾರ್ಷಿಕ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನಮಠದ ಪ. ಪೂ. ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಜಿಯವರ ದಿವ್ಯ ಸಾನ್ನಿಧ್ಯದಲ್ಲಿ ತೋರಣ ಮುಹೂರ್ತ, ವಿಮಾನಶುದ್ಧಿ, ನವಗ್ರಹ ಶಾಂತಿ 24 ಕಲಶ ಅಭಿಷೇಕ ಹಾಗೂ ಮಹೋತ್ಸವದೊಂದಿಗೆ ಫೆ. 14ರಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಟ್ಲ ಬಸದಿಯ ಪಂಚಕಲ್ಯಾಣ

Article Image

ವಿಟ್ಲ ಬಸದಿಯ ಪಂಚಕಲ್ಯಾಣ

ಹಚ್ಚ ಹಸಿರ ಪ್ರಕೃತಿಯ ಮಡಿಲಲ್ಲಿ ಗರಿಗೆದರಿ ನಿಂತ ನವಿಲನಾಕಾರದ ಹೊದಿಕೆಯಿರುವ ಸುರ ಸುಂದರ ಜಿನಮಂದಿರ ತಲೆ ಎತ್ತಿ ನಿಂತು ಕೈ ಬೀಸಿ ಕರೆಯುತಿದೆ ಪಂಚಕಲ್ಯಾಣ ಮಹೋತ್ಸವಕೆ...... ತುಳುನಾಡು ಒಂದು ಕಾಲದಲ್ಲಿ ಜೈನ ಬಂಧುಗಳಿಂದಲೇ ತುಂಬಿಹೋಗಿತ್ತು. ನೂರಾರು ಎಕರೆ ಭೂಮಾಲಕರುಗಳಾಗಿ ಬಸದಿಗಳನ್ನು, ದೇವಸ್ಥಾನಗಳನ್ನು, ದೈವಾಲಯ, ನಾಗಾಲಯಗಳ ನಿರ್ಮಾಣ ಮಾಡಿ ಭವ್ಯ ಪರಂಪರೆಯ ಹರಿಕಾರರಾಗಿ ಜೈನರು ಧಾರ್ಮಿಕ, ಸಾಮಾಜಿಕ ಪರಂಪರೆಗೆ ಅಭೂತಪೂರ್ವ ಕಾಣಿಕೆ ನೀಡಿದ್ದಾರೆ. ಭೂಮಂಡಲದಲ್ಲೇ ಅತಿಶಯವೆನಿಪ ತುಳುನಾಡಿನ ಸಾಂಸ್ಕೃತಿಕ, ರಾಜಕೀಯ, ಧಾರ್ಮಿಕ, ಸಾಮಾಜಿಕ ಪರಂಪರೆಗಳಿಗೆ ಜೈನರಸರು ನೀಡಿದ ಕೊಡುಗೆ ಅಸದೃಶವಾಗಿದೆ. ಸಮನ್ವತೆಯ ಹರಿಕಾರರಾಗಿ ಧರ್ಮ ಸೌರಭವನ್ನು ತುಳುನಾಡಿನ ಮೂಲ ಮಣ್ಣಿನಲ್ಲಿ ಬೆರೆಸಿ ಕೋಮು ಸಾಮರಸ್ಯದ ಸೊಬಗನ್ನು ವಿಶ್ವದಾದ್ಯಂತ ಪಸರಿಸಿದವರು ಜೈನ ಅರಸರೇ ಆಗಿದ್ದಾರೆ. ರಾಣಿ ಅಬ್ಬಕ್ಕ, ರಾಣಿ ಚೆನ್ನಾಭೈರಾದೇವಿ, ಬಂಗರಸರು, ಚೌಟರು, ಅಜಿಲರು, ಭೈರವರಸರು ಈ ತುಳುನಾಡಿಗೆ ನೀಡಿದ ಕೊಡುಗೆ ಶತಶತಮಾನ ಕಳೆದರೂ ಘಮಲನ್ನು ಈಗಲೂ ದಶದಿಕ್ಕುಗಳಿಗೂ ಪಸರಿಸುತ್ತಿದೆ ಹಾಗೂ ಚಿರಸ್ಥಾಯಿಯಾಗಿದೆ. ಈ ನಿಟ್ಟಿನಲ್ಲಿ ಈ ತುಳುನಾಡು ಜೈನರಸರಿಗೆ ಋಣಿಯಾಗಿದೆ. ವಿಟ್ಲದ ಜೈನರ ಪೇಟೆಯ ಬಸದಿ ತುಳುನಾಡಿನಲ್ಲಿ ಜೈನ ಸಂಖ್ಯೆ ಪ್ರಾಬಲ್ಯದ ಕಡೆಯಲ್ಲಿ ಜೈನ ಎಂಬ ಪದವನ್ನು ಸೇರಿಸಿಯೇ ಜೈನ ಪೇಟೆ, ಜೈನ ಬೀದಿ, ಜೈನ ಕೇರಿ, ಜೈನ ಪಟ್ಟಣ, ಜೈನ ಗ್ರಾಮ ಎಂಬ ನಾಮದ ಹಲವು ಊರುಗಳು ತುಳುನಾಡಿನಲ್ಲಿ ಇಂದಿಗೂ ಇದೆ. ಹಲವು ಕಡೆಗಳಲ್ಲಿ ಜೈನರ ಪ್ರಾಬಲ್ಯ ಕಡಿಮೆಯಾದಂತೆ ಜೈನರ ಹೆಸರಿನ ಊರುಗಳ ಹೆಸರುಗಳೂ ಕೂಡ ಬದಲಾದವು, ಕೆಲವು ಉಳಿದುಕೊಂಡಿವೆ. ಹಚ್ಚ ಹಸುರಿನ ಕಾನನದ ಮಧ್ಯೆ ವಿಟ್ಲ ಎಂಬ ಊರು ಜಗತ್ತಿನ ಆಗುಹೋಗುಗಳಿಗೆ ಸಾಕ್ಷಿಯಾಗಿ ನಿಂತಿದೆ. ಒಂದು ಕಾಲದಲ್ಲಿ ಜೈನರಸರ ಆಳ್ವಿಕೆ ಒಳಪಟ್ಟ ವಿಟ್ಲವು ಜೈನರೇ ಅಧಿಕವಾಗಿ ಇದ್ದ ಕಾಲ ಒಂದಿತ್ತು. ಆಗಿನ ಸಮಯದಲ್ಲಿ ಜೈನ್ ಪೇಟೆ ಎಂಬ ಊರಲ್ಲಿ ಭವ್ಯವಾದ ಜೈನರ ಬಸದಿಯೊಂದು ಶ್ರಾವಕರ ಪೂಜೆ ಪುನಸ್ಕಾರಗಳಿಂದ ರತ್ನತ್ರಯದ ಸಂದೇಶವನ್ನು ಸಾರುತ್ತಾ ಇತ್ತು. ಕಾಲಚಕ್ರ ಉರುಳಿದಂತೆ ಜೈನರಸರ ಆಳ್ವಿಕೆ ಕೊನೆಗೊಂಡಿತು. ಪರಕೀಯರ ಗುಲಾಮತನದ ಆಡಳಿತ ಜಾರಿಗೊಂಡಿತು. ಆದರೂ ಆ ಕಾಲಚಕ್ರದ ಹೊಡೆತಕ್ಕೆ ನಲುಗದೇ ಮುನ್ನುಗ್ಗಿದರು. ಬ್ರಿಟಿಷರ ನಿರಂಕುಶ ಆಡಳಿತದ ಕಾರ್ಮೋಡ ಇದ್ದರೂ ಧರ್ಮಸ್ಥಳದ ಅಂದಿನ ಧರ್ಮಾಧಿಕಾರಿಗಳಾದ ಮಂಜಯ್ಯ ಹೆಗ್ಗಡೆಯವರು ಹಾಗೂ ಇವರ ಸಹೋದರ ಪುಟ್ಟಸ್ವಾಮಿಯವರು ಜೊತೆ ಸೇರಿ 1940ರಲ್ಲಿ ಹಳೆಯ ಬಸದಿಯನ್ನ ಭವ್ಯವಾಗಿ, ದೊಡ್ಡದಾಗಿ ಮರು ನಿರ್ಮಸಿ ಐತಿಹಾಸಿಕ ಪಂಚಕಲ್ಯಾಣ ನೆರವೇರಿಸಿದರು. ಕಾಲಗತಿಸಿದಂತೆ ನೂರಾರು ಎಕರೆಗಳಷ್ಟು ಭೂಮಾಲಿಕತ್ವವನ್ನು ಹೊಂದಿದ್ದ ಜೈನರು ಭೂಮಸೂದೆ ಕಾನೂನಿನಲ್ಲಿ ಭೂಮಿಗಳನ್ನು ಕಳೆದುಕೊಂಡು ಅಕ್ಷರಶಃ ನಿರ್ಗತಿಕರಾದರು. ಜೈನರ ಸಂಖ್ಯೆ ಇಳಿಮುಖವಾಯಿತು. ಬಸದಿಗಳ ಸಾವಿರಾರು ಎಕರೆ ಭೂಮಿ ಅನ್ಯರ ಪಾಲಾಯಿತು. ಇಂದು ವಿಟ್ಲದ ಜೈನ್ ಪೇಟೆಯಲ್ಲಿ ಒಂದೇ ಒಂದು ಜೈನ ಕುಟುಂಬ ಇಲ್ಲದಿರುವುದು ವಿಪರ್ಯಾಸವೇ ಸರಿ. ಅಂದು ಬಸದಿಯನ್ನು ಪುನರುತ್ಥಾನಗೊಳಿಸಿದವರಲ್ಲಿ ಓರ್ವರಾದ ಪುಟ್ಟಸ್ವಾಮಿಯ ಸುಪುತ್ರ ಡಿ. ವಿನಯಕುಮಾರ್ ಅವರು ಇಂದು ವಿಟ್ಲದ ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರರಾಗಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಗಳ ಗೌರವಾಧ್ಯಕ್ಷತೆಯಲ್ಲಿ ಡಿ. ವಿನಯ್ ಕುಮಾರ್ ಇವರ ಸುಪುತ್ರ ಜಿತೇಶ್ ಎಂ ಇವರ ಅಧ್ಯಕ್ಷತೆಯಲ್ಲಿ, ಅವರ ಮಿತ್ರ ದರ್ಶನ್ ಜೈನ್‌ರವರ ಸಾರಥ್ಯದಲ್ಲಿ ಹಾಗೂ ಊರಪರವೂರ ಬಂಧುಗಳ ಸಹಕಾರದೊಂದಿಗೆ ವಿಟ್ಲದ ಭಗವಾನ್ ಚಂದ್ರನಾಥ ಸ್ವಾಮಿಯ ಬಸದಿ ಸಂಪೂರ್ಣ ಶಿಲಾಮಯ ರೂಪದಲ್ಲಿ ಮರುನಿರ್ಮಾಣಗೊಂಡು ವೈಭವದ ಪಂಚಕಲ್ಯಾಣಕ್ಕೆ ಅಣಿಯಾಗಿದೆ. ಇಲ್ಲಿ ಭಗವಾನ್ ಚಂದ್ರನಾಥ ಸ್ವಾಮಿ, ಭಗವಾನ್ ಮಹಾವೀರ ಸ್ವಾಮಿ, ದೇವಿ ಪದುಮಾಂಬೆ, ದೇವಿ ಜ್ವಾಲಾಮಾಲಿನಿ ಪೂಜೆಗೊಳ್ಳುತ್ತಿದ್ದಾರೆ. ವೈಭವದ ಪಂಚಕಲ್ಯಾಣವು 13.02.2025 ರಿಂದ 17.02.2025 ರವರೆಗೆ ಮೂಡುಬಿದಿರೆ ಜೈನ ಮಠದ ಪೂಜ್ಯ ಸ್ವಾಮೀಜಿಯವರ ಪಾವನ ಸಾನ್ನಿಧ್ಯ, ಮಾರ್ಗದರ್ಶನದೊಂದಿಗೆ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳ ನೇತೃತ್ವದಲ್ಲಿ, ಜಯಶ್ರೀ ಡಿ ಜೈನ್ ಅವರ ಭಕ್ತಿ ಸಂಗೀತದೊಂದಿಗೆ ವೈಭವವಾಗಿ ನಡೆಯಲಿದೆ. ಬಸದಿಗೆ ಧನಸಹಾಯಮಾಡಬಹುದು BANK - CANARA BANK NAME - SHREE CHANDRANATHA DEVARA BASADI TRUST A / c NO - 0631101136681 IFSC - CNRB0000631 BRANCH - Mangalure gandhinagar, CANARA BANK ಮಾಹಿತಿಗಾಗಿ ಸಂಪರ್ಕಿಸಿ - 9448545982, 8197809007 ನಿರಂಜನ್ ಜೈನ್ ಕುದ್ಯಾಡಿ

ವಾರ್ಷಿಕೋತ್ಸವ ಕಾರ್ಯಕ್ರಮ

Article Image

ವಾರ್ಷಿಕೋತ್ಸವ ಕಾರ್ಯಕ್ರಮ

ಕಾರ್ಕಳ: ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ನಿರ್ಮಾಣಗೊಂಡ ಶ್ರೀ ಜೈನ ಮಠದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಕಾರ್ಯಕ್ರಮವು ನಾಳೆ(ಜ.26) ಜರುಗಲಿದೆ. ನರಸಿಂಹರಾಜಪುರ, ಶ್ರೀ ಸಿಂಹನಗದ್ದೆ ಬಸ್ತಿಮಠದ ಪ.ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ, ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

Article Image

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ, ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

ವೇಣೂರು: ಬಜಿರೆ ಹಲ್ಲಂದೋಡಿ ಬಸದಿ ಭಗವಾನ್ 1008 ಶ್ರೀ ವರ್ಧಮಾನ ಸ್ವಾಮಿ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ ವಾರ್ಷಿಕ ಪೂಜಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ “ಭಾರತಭೂಷಣ” ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಆಶೀರ್ವಚನಗಳೊಂದಿಗೆ 108 ಕಲಶ ಮಹಾಭಿಷೇಕ, ಕಲಿಕುಂಡ ಯಂತ್ರಾರಾಧನೆ, ಶ್ರೀ ಸರ್ವಾಹ್ಣಯಕ್ಷ ಅಷ್ಟಾವಧಾನ ಪೂಜೆ, ಮಹೋತ್ಸವ, ಮಹಾಪೂಜೆ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಲಕ್ಷ ಹೂವಿನ ಪೂಜೆ ಮುಂತಾದ ಧರ್ಮಕಾರ್ಯಗಳೊಂದಿಗೆ ನಾಳೆ(ಜ.26) ನೆರವೇರಲಿದೆ.

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

Article Image

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

ವೇಣೂರು: ಬಜಿರೆ ಹಲ್ಲಂದೋಡಿ ಬಸದಿ ಭಗವಾನ್ 1008 ಶ್ರೀ ವರ್ಧಮಾನ ಸ್ವಾಮಿ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ ವಾರ್ಷಿಕ ಪೂಜಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ “ಭಾರತಭೂಷಣ” ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಆಶೀರ್ವಚನಗಳೊಂದಿಗೆ 108 ಕಲಶ ಮಹಾಭಿಷೇಕ, ಕಲಿಕುಂಡ ಯಂತ್ರಾರಾಧನೆ, ಶ್ರೀ ಸರ್ವಾಹ್ಣಯಕ್ಷ ಅಷ್ಟಾವಧಾನ ಪೂಜೆ, ಮಹೋತ್ಸವ, ಮಹಾಪೂಜೆ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಲಕ್ಷ ಹೂವಿನ ಪೂಜೆ ಮುಂತಾದ ಧರ್ಮಕಾರ್ಯಗಳೊಂದಿಗೆ ನಾಳೆ(ಜ.26) ನೆರವೇರಲಿದೆ.

ಪೂಜಾ ಕಾರ್ಯಕ್ರಮಗಳು

Article Image

ಪೂಜಾ ಕಾರ್ಯಕ್ರಮಗಳು

ಕಾರ್ಕಳ ತಾಲೂಕಿನ ಬಜಗೋಳಿ ಧರ್ಮಶಾಲೆ ತೀರ್ಥಕ್ಷೇತ್ರದಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ, ಭಗವಾನ್ ಶ್ರೀ ಮುನಿಸುವ್ರತ ಸ್ವಾಮಿ ಮಂದಿರದ ವಾರ್ಷಿಕೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಹಾಗೂ ದಿವ್ಯ ನೇತೃತ್ವದಲ್ಲಿ ಭಗವಾನ್ ಶ್ರೀ ಮುನಿಸುವ್ರತ ಸ್ವಾಮಿಯ ವಿಶೇಷ ಉತ್ಸವ, ಅಭಿಷೇಕ, ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕವು ವಿವಿಧ ಧಾರ್ಮಿಕ ವಿಧಿ- ವಿಧಾನಗಳೊಂದಿಗೆ ನಾಳೆ(ಜ.26) ಜರುಗಲಿದೆ.

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ

Article Image

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿಮೂರ್ತಿಗೆ ಫೆ. 2 ರಂದು ಭಾನುವಾರ ಬೆಳಿಗ್ಯೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು. ಇದಕ್ಕೆ ಪೂರ್ವಭಾವಿಯಾಗಿ ಫೆ. ಒಂದರಂದು ಶನಿವಾರ ಬೆಳಿಗ್ಗೆ ಗಂಟೆ 9 ರಿಂದ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನಶುದ್ಧಿ ಷೋಡಶ ಕಲಶಾಭಿಷೇಕ ಮತ್ತು ಸಂಜೆ ನಾಲ್ಕು ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

ಬಜಿರೆ: ಬಸದಿಯಲ್ಲಿ ವಾರ್ಷಿಕ ಪೂಜಾ ಮಹೋತ್ಸವ

Article Image

ಬಜಿರೆ: ಬಸದಿಯಲ್ಲಿ ವಾರ್ಷಿಕ ಪೂಜಾ ಮಹೋತ್ಸವ

ಉಜಿರೆ: ವೇಣೂರು ಬಳಿ ಇರುವ ಬಜಿರೆ ಗ್ರಾಮದ ಹಲ್ಲಂದೋಡಿ ಬಸದಿ ಭಗವಾನ್ ವರ್ಧಮಾನ ಸ್ವಾಮಿ ಸನ್ನಿಧಿಯಲ್ಲಿ ಇದೇ 26 ರಂದು ಭಾನುವಾರ ವಾರ್ಷಿಕ ಪೂಜಾಮಹೋತ್ಸವ ನಡೆಯಲಿದೆ ಎಂದು ಬಸದಿಯ ಬಿ. ಶಶಿಕುಮಾರ್ ಇಂದ್ರ ತಿಳಿಸಿದ್ದಾರೆ. ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಭಾನುವಾರ ಬೆಳಿಗ್ಗೆ ಏಳು ಗಂಟೆಯಿಂದ ವಿಮಾನಶುದ್ಧಿ, ಶಾಂತಿ ಹೋಮದ ಬಳಿಕ 108 ಕಲಶ ಅಭಿಶೇಕ ನಡೆಯಲಿದೆ. ಅಪರಾಹ್ನ ಎರಡು ಗಂಟೆಯಿಂದ ಕಲಿಕುಂಡಯಂತ್ರಾರಾಧನೆ, ಅಷ್ಟಾವಧಾನ ಪೂಜೆ ನಡೆಯಲಿದೆ. ಸಂಜೆ ಗಂಟೆ 5.30 ರಿಂದ ಪದ್ಮಾವತಿ ಅಮ್ಮನವರಿಗೆ ಲಕ್ಷಹೂವಿನ ಪೂಜೆ ನಡೆಯಲಿದೆ. ಬಳಿಕ ಮೂಡಬಿದ್ರೆಯ ಪೂಜ್ಯ ಚಾರುಕೀರ್ತಿ ಭಟ್ಟಾರಕಸ್ವಾಮೀಜಿ ಮಂಗಲಪ್ರವಚನ ನೀಡುವರು.

ನಿತಿನ್ ಹೆಚ್.ಪಿ. ರವರಿಗೆ 'ಸಂಸ್ಕೃತಿ ಸಂರಕ್ಷಕ' ಗೌರವ

Article Image

ನಿತಿನ್ ಹೆಚ್.ಪಿ. ರವರಿಗೆ 'ಸಂಸ್ಕೃತಿ ಸಂರಕ್ಷಕ' ಗೌರವ

ಕೋಲ್ಕತಾ, ಡಿಸೆಂಬರ್ 30, 2024: ಐಟಿ ತಂತ್ರಜ್ಞ, ಜೈನ ಸಂಶೋಧಕ ಹಾಗೂ www.jainheritagecentres.com (ಜೈನ್ ಹೆರಿಟೇಜ್ ಸೆಂಟರ್ಸ್.ಕಾಂ) ನ ಸಂಸ್ಥಾಪಕರು ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ನಿತಿನ್ ಹೆಚ್.ಪಿ. ರವರ "ಜೈನಧರ್ಮದ ಸಂರಕ್ಷಣೆ ಮತ್ತು ಸಂವರ್ಧನೆ"ಯ ಕಾರ್ಯವನ್ನು ಗುರುತಿಸಿ, ಶ್ರೀ ಭಾರತವಾರ್ಷೀಯ ದಿಗಂಬರ ಜೈನ ತೀರ್ಥಸಂರಕ್ಷಿಣಿ ಮಹಾಸಭಾದ ಪಶ್ಚಿಮ ಬಂಗಾಳ ವಿಭಾಗವು "ಸಂಸ್ಕೃತಿ ಸಂರಕ್ಷಕ" ಎಂಬ ಬಿರುದನ್ನು ನೀಡಿ ಗೌರವಿಸಿದೆ. ಕೋಲ್ಕತ್ತಾದ ಬಡಾ ಬಜಾರ್ ನ ಜೈನಭವನದಲ್ಲಿ 30 ಡಿಸೆಂಬರ್ 2024ರಂದು ನಡೆದ ವಿಶೇಷ ಸಮಾರಂಭದಲ್ಲಿ ಇವರನ್ನು ಸತ್ಕರಿಸಿ ಸನ್ಮಾನಿಸಲಾಯಿತು. ನಿತಿನ್ ರವರು ಕರ್ನಾಟಕ ವಲ್ಲದೇ ಭಾರತದ ಇತರ ರಾಜ್ಯಗಳ ಅದರಲ್ಲೂ ವಿಶೇಷವಾಗಿ ಪಶ್ಚಿಮ ಬಂಗಾಳ ರಾಜ್ಯದ ಜೈನ ಪರಂಪರೆ ಕೇಂದ್ರಗಳಿಗೆ ಕ್ಷೇತ್ರಕಾರ್ಯವನ್ನು ಕೈಗೊಂಡು ಪಶ್ಚಿಮ ಬಂಗಾಳದಲ್ಲಿ ಜೈನಧರ್ಮದ ಕುರಿತು ಕಳೆದ ಎರಡು ವರ್ಷಗಳಿಂದ ವಿಶೇಷ ಸಂಶೋಧನೆಯನ್ನು ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ದಿಗಂಬರ ಜೈನ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ ರಾಜ್ ಕುಮಾರ್ ಸೇಠಿ, ಮಹಾಸಭಾದ ಪಶ್ಚಿಮ ಬಂಗಾಳ ವಿಭಾಗದ ಪದಾಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

First Previous

Showing 10 of 20 pages

Next Last