Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಕಬಡ್ಡಿ ಪಂದ್ಯಾಟ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಕಬಡ್ಡಿ ಪಂದ್ಯಾಟ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಪರಮ ಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಂಡಿದ್ದು. “ರಾಜರ್ಷಿ ಚಿನ್ನದ ಹೆಜ್ಜೆ” ಎಂಬ ಶೀರ್ಷಿಕೆಯಲ್ಲಿ ಪರ್ಯಾಯ ಫಲಕವನ್ನು ನೀಡುತಿದ್ದೇವೆ. ಏ. 06ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾ ನಿಯಮಗಳು ಮತ್ತು ಸೂಚನೆ: * ತಂಡದಲ್ಲಿ 7 + 3 ಆಟಗಾರರಿಗೆ ಅವಕಾಶವಿದ್ದು ಕೊನೆಯ ಸಮಯದಲ್ಲಿ ಆಟಗಾರರ ಬದಲಾವಣೆಗೆ ಯಾವುದೇ ಅವಕಾಶ ಇರುವುದಿಲ್ಲ. * ಪಂದ್ಯಗಳನ್ನು ಅಗ್ ಮಾದರಿಯಲ್ಲಿ ಪಂದ್ಯಗಳನ್ನು ಮತ್ತು ಸುಸಜ್ಜಿತ ಮ್ಯಾಟ್ ಗಳಲ್ಲಿ ಅಡಿಸಲಾಗುವುದು. * ಪಂದ್ಯಗಳ ವಿಜೇತರಿಗೆ ಪ್ರಥಮ, ದ್ವಿತೀಯ, ತ್ರಿತೀಯ ಮತ್ತು ಚತುರ್ಥ ಬಹುಮಾನ ಮತ್ತು ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು. * ಉತ್ತಮ ರೈಡರ್, ಡಿಫೆಂಡರ್ ಮತ್ತು ಅಲೌಂಡರ್ ಗಳಿಗೆ ಅಕರ್ಷಕ ಟ್ರೋಫಿಗಳನ್ನು ನೀಡಲಾಗುವುದು. * ಒಂದು ತಂಡದಲ್ಲಿ ಆಡಿದ ಆಟಗಾರರು ಬೇರೆ ತಂಡದಲ್ಲಿ ಅಡುವಂತಿಲ್ಲ. * ಅಸಭ್ಯವಾಗಿ ವರ್ತಿಸಿದ ತಂಡವನ್ನು ಪಂದ್ಯಾವಳಿಯಿಂದ ಹೊರಗಿಡಲಾಗುವುದು * ನಿರ್ಣಾಯಕರು ಹಾಗೂ ಆಯೋಜಕರ ತೀರ್ಮಾನವೇ ಅಂತಿಮ. * ತಂಡಗಳ ಸೇರ್ಪಡೆ ನಿಗದಿತ ದಿನಾಂಕ 30-03-2025 ರ ಒಳಗೆ ನೋಂದಾಯಿಸಿಕೊಳ್ಳಬೇಕು. * ತಂಡಗಳಿಗೆ ಪ್ರವೇಶ ಶುಲ್ಕ ತಲಾ 2000/- ರೂಗಳು ಆಗಿರುತ್ತದೆ. ಸ್ಥಳ : ಪೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು ಸಂಯೋಜಕರು: ಮಹಾವೀರ್ ಬಿ ಜೆ ಜೈನ್, ದಿಲೀಪ್ ಜೈನ್, ರೋಹಿತ್‌ ಜೈನ್, ಅಭಿನಂದನ್ ಜೈನ್ ಬಿದರೂರು, ಸುಧೀರ್ ಜೈನ್ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 9611403305, 9483691093

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಥ್ರೋ ಬಾಲ್‌ ಪಂದ್ಯಾಟ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಥ್ರೋ ಬಾಲ್‌ ಪಂದ್ಯಾಟ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ಥ್ರೋ ಬಾಲ್‌ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ತಂಡದ ದಾಖಲಾತಿ ಮತ್ತು ಕ್ರೀಡಾ ನಿಯಮಗಳು * ಪ್ರತಿ ತಂಡದಲ್ಲಿ ಏಳು ಜನ ಆಟಗಾರರನ್ನು ಮತ್ತು ಮೂರು ಜನ ಬದಅ ಆಟಗಾರರನ್ನು ಹೊಂದಿರಬೇಕು. * ತಂಡವನ್ನು ದಿನಾಂಕ 30 ಮಾರ್ಚ್ 2025 ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು. * ಒಂದು ತಂಡಕ್ಕೆ ಪ್ರವೇಶ ಶುಲ್ಕ 1000/- ರೂ ಅಗಿರುತ್ತದೆ. * ಒಬ್ಬ ಆಟಗಾರರಿಗೆ ಒಂದು ತಂಡದಲ್ಲಿ ಮಾತ್ರ ಅಡಲು ಅವಕಾಶವಿರುತ್ತದೆ. * ವಿಜೇತ ತಂಡಗಳಿಗೆ ವಿಶೇಷ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ಏರುತ್ತದೆ. * ನಿರ್ಣಾಯಕರ ಮತ್ತು ಆಯೋಜಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ. ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು, ಸಂಯೋಜಕರು: ಅರ್ಹನ್ ಜೈನ್, ತನುಜ ಜೈನ್, ಕವಿತ ಮಂಜಯ್ಯ ಜೈನ್, ವೃಷಭ್ ಜೈನ್ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: 9481252358, 9036109108

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಆಶು ಭಾಷಣ ಸ್ಪರ್ಧೆ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಆಶು ಭಾಷಣ ಸ್ಪರ್ಧೆ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಆಶು ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯ ಸಾಮಾನ್ಯ ನಿಯಮಗಳು: * ಕನಿಷ್ಠ ನಿಮಿಷ ಹಾಗೂ ಗರಿಷ್ಠ 5 ನಿಮಿಷಗಳ ಸಮಯಾವಕಾಶ ನೀಡಲಾಗುವುದು. * 4 ನಿಮಿಷವಾದಾಗ ಒಂದು ಎಚ್ಚರಿಕೆಯ ಬೆಲ್ ನೀಡಲಾಗುವುದು. * ಭಾಷಣವು ಕನ್ನಡದಲ್ಲಿ ಮಾತ್ರ ಇರಬೇಕು * ಸ್ಪರ್ಧೆಯಲ್ಲಿ ಭಾಗವಹಿಸುವವರು ನೊಂದಾಯಿಸಲು ಕೊನೆಯ ದಿನಾಂಕ: 30-03-2025 ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು, ಸಂಯೋಜಕರು: ಮಂಜಯ್ಯ ಜೈನ್ ಮಳ್ಳೋಡಿ, ಪುಟ್ಟಸ್ವಾಮಿ ಜೈನ್, ಉದಂಕ ಜೈನ್, ಸಂತೋಷ ಬಿ.ವಿ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: 9611555108, 9480565905

ಹೂವಿನ ಹಡಗಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಪನ್ನ

Article Image

ಹೂವಿನ ಹಡಗಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಪನ್ನ

ವಿಜಯನಗರ ಜಿಲ್ಲೆ, ಹೂವಿನ ಹಡಗಲಿ ಪಟ್ಟಣದ ಪಾರ್ಶ್ವನಾಥ ಜಿನ ಮಂದಿರದ ಶ್ರೀ ಪಾರ್ಶ್ವನಾಥ ಸಭಾ ಮಂಟಪದಲ್ಲಿ ಶ್ರೀ ಜ್ವಾಲಾಮಾಲಿನಿ ಮಹಿಳಾ ಸಮಾಜ ಹಾಗೂ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಸಹಭಾಗಿತ್ವದಲ್ಲಿ ಮಾ. 08ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದೀಪ ಪ್ರಜ್ವಲನಿಯ ಮೂಲಕ ಉದ್ಘಾಟಿಸಲಾಯಿತು. ಶ್ರೀ ಜ್ವಾಲಾಮಾಲಿನಿ ಮಹಿಳಾ ಸಮಾಜದ ಅಧ್ಯಕ್ಷರಾದ ಎಂ.ಡಿ. ಪದ್ಮಾವತಿ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಮಹಿಳಾ ಸಾಧಕೀಯರಾದ ಮಹಾವೀರ ಅಲ್ಪಸಂಖ್ಯಾತರ ಪತಿನ ಸಹಕಾರ ಸಂಘದ ಪುಷ್ಪವತಿ ಪಾರ್ಶ್ವನಾಥ ರೇವಡಿ, ಶಿಲ್ಪ ಸಂತೋಷ ಸೂಗುರು, ನಾಗ ಮಂಜುಳಾ ಜೈನ್‌ರನ್ನು ಸನ್ಮಾನಿಸಲಾಯಿತು. ಚಂಪರಾಯಪ್ಪ ಹೊಳಲು ಸ್ವಾಗತಿಸಿದರು. ಅನುಷಾ ಮಯೂರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಮೇಘ ಭಾಗೇಶ್ ಜೈನರ್ ವಂದಿಸಿದರು.

ಡಾ. ಹೆಚ್.ಎ.ಪಾಶ್ವ೯ನಾಥ್ ಅವರಿಗೆ ಪ್ರೊ.ಎಚ್ಚೆಸ್ಕೆ ಶತಮಾನೋತ್ಸವ ಪ್ರಶಸ್ತಿ ಪ್ರದಾನ

Article Image

ಡಾ. ಹೆಚ್.ಎ.ಪಾಶ್ವ೯ನಾಥ್ ಅವರಿಗೆ ಪ್ರೊ.ಎಚ್ಚೆಸ್ಕೆ ಶತಮಾನೋತ್ಸವ ಪ್ರಶಸ್ತಿ ಪ್ರದಾನ

ಗ್ರಾಮಾಂತರ ಬುದ್ಧಿ ಜೀವಿಗಳ ಬಳಗ (ಕೆ.ಆರ್.ನಗರ) ಸಂಸ್ಥೆಯು ತನ್ನ 40ನೇ ವಾಷಿ೯ಕೋತ್ಸವ ಹಾಗೂ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದ ಅಂಗವಾಗಿ ಫೆ.23ರಂದು ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರಗಳಲ್ಲಿನ ಅತ್ಯಮೂಲ್ಯ ಕೊಡುಗೆಗಳನ್ನು ಪರಿಗಣಿಸಿ ಹಿರಿಯ ಸಾಹಿತಿಗಳು ಹಾಗೂ ರಂಗಭೂಮಿ ಕಲಾವಿದರು ಆಗಿರುವ ಡಾ. ಹೆಚ್.ಎ. ಪಾಶ್ವ೯ನಾಥ್ ಅವರಿಗೆ ಪ್ರೊ, ಎಚ್ಚೆಸ್ಕೆ ಶತಮಾನೋತ್ಸವ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿಯವರು ಪ್ರದಾನಮಾಡಿ ಗೌರವಿಸಿದರು. ಇವರು‌ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುತ್ತಾರೆ.

ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆ

Article Image

ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆ

ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆಯು ಇಂದಿನಿಂದ ಪ್ರಾರಂಭಗೊಂಡು ದಿನಾಂಕ 13-03-2025ನೇ ಗುರುವಾರದವರೆಗೆ ಜರಗಲಿರುವುದು. ದಿನಾಂಕ 13-03-2025ನೇ ಗುರುವಾರ ರಾತ್ರಿ ಗಂಟೆ 9.00ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ಸಂಚಾರಿ ಚಿಕ್ಕಮೇಳದ ಸಹಯೋಗದೊಂದಿಗೆ ಊರ-ಪರವೂರ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ "ಕದಂಬ ಕೌಶಿಕ" ಎಂಬ ಕನ್ನಡ ಯಕ್ಷಗಾನ ಬಯಲಾಟ ಜರಗಲಿದೆ.

ಸರಗೂರು:ಅಷ್ಟಾಹ್ನಿಕ ಪೂಜೆ

Article Image

ಸರಗೂರು:ಅಷ್ಟಾಹ್ನಿಕ ಪೂಜೆ

ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಬಸದಿಯಲ್ಲಿ ಶ್ರೀ ನಂದೀಶ್ವರ ಅಷ್ಟಾಹ್ನಿಕ ಪರ್ವದ ಮೊದಲ ದಿನದ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ, ಆರಾಧನೆಗಳು ನಡೆದವು. ಸಮಾಜದ ಮುಖಂಡರಾದ ಸೋಮಪ್ರಭ ಸೇರಿದಂತೆ ಜೈನ ಸಮಾಜದ ಮುಖಂಡರುಗಳು, ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಜೈನ ಮಹಿಳಾ ಸಂಘಟನೆಗಳು ಮುಖಂಡರುಗಳು, ಶ್ರಾವಕ-ಶ್ರಾವಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. -ಜೆ ರಂಗನಾಥ ತುಮಕೂರು

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ದಿನಾಂಕ 11-03-2025 ಮಂಗಳವಾರದಿಂದ ಮೊದಲ್ಗೊಂಡು 15-03-2025ರ ಶನಿವಾರದವರೆಗೆ ಜರುಗಲಿದೆ. ದಿನಾಂಕ 14-03-2025ರ ಶುಕ್ರವಾರ ರಾತ್ರಿ ಗಂಟೆ 7-00ರಿಂದ ಭಗವಾನ್‌ ಶ್ರೀ ೧೦೦೮ ಬಾಹುಬಲಿ ಸ್ವಾಮಿ ಸನ್ನಿಧಿಯಲ್ಲಿ ರಥಯಾತ್ರಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಜರಗಲಿರುವುದು. ರಾತ್ರಿ ಗಂಟೆ 7-30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ: ಆಶೀರ್ವಚನ: ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಶ್ರೀ ಜೈನ ಮಠ ಮೂಡುಬಿದಿರೆ ಅಧ್ಯಕ್ಷತೆ: ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ, ಉಪಾಧ್ಯಕ್ಷರು, ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ವೇಣೂರು ಮುಖ್ಯ ಅತಿಥಿಗಳು: ಕೆ. ಅಭಯಚಂದ್ರ ಜೈನ್‌, ಮಾಜಿ ಸಚಿವರು, ಕರ್ನಾಟಕ ಸರಕಾರ ಪ್ರತಿಭಾ ಪುರಸ್ಕಾರ: 2024ರ ಎಸ್.ಎಸ್.‌ಎಲ್‌.ಸಿ. ಮತ್ತು ಪಿ.ಯು.ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ: 90 ವರ್ಷ ದಾಟಿದ ಹಿರಿಯ ಶ್ರಾವಕ/ಶ್ರಾವಕಿಯರಿಗೆ. ಯಾತ್ರಿ ನಿವಾಸದಲ್ಲಿ ನೂತನ ಶ್ರುತ ಭಂಡಾರ (ಸ್ವಾಧ್ಯಾಯ ಕೇಂದ್ರ) ಉದ್ಘಾಟನಾ ಸಮಾರಂಭ: ಸಂಜೆ ಗಂಟೆ 6-00ಕ್ಕೆ ಪಾವನ ಸಾನ್ನಿಧ್ಯ: ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಶ್ರೀ ಜೈನ ಮಠ ಮೂಡುಬಿದಿರೆ ಉಪಸ್ಥಿತಿ: ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ ಉದ್ಘಾಟನೆ: ಕೆ. ಅಭಯಚಂದ್ರ ಜೈನ್‌, ಮಾಜಿ ಸಚಿವರು, ಕರ್ನಾಟಕ ಸರಕಾರ

ರತ್ನತ್ರಯ ಜೈನ ಮಿಲನ್ ಮಾಸಿಕ ಸಭೆಯ ವರದಿ

Article Image

ರತ್ನತ್ರಯ ಜೈನ ಮಿಲನ್ ಮಾಸಿಕ ಸಭೆಯ ವರದಿ

ದಿನಾಂಕ 07-03-2025 ಶುಕ್ರವಾರದಂದು ರತ್ನತ್ರಯ ಜೈನ ಮಿಲನ್‌ನ ಮಾಸಿಕ ಸಭೆಯನ್ನು ಆನ್‌ಲೈನ್‌ಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಪ್ರೇಮಕುಮಾರಿ, ಸುಖಾನಂದ, ರತ್ನತ್ರಯ ಜೈನ ಮಿಲನ ಅಧ್ಯಕ್ಷರಾದ ನವೀನ್ ಕುಮಾರ್ ಗುಬ್ಬಿ ಇವರು ಉಪಸ್ಥಿತರಿದ್ದರು. ಪಂಚ ನಮಸ್ಕಾರ ಪಠಣೆ ಮತ್ತು ಆರ್. ಎಸ್. ಭಾಮ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ವೀಣಾ ಅರಿಹಂತ್ ಅವರು ರತ್ನತ್ರಯ ಮಿಲನಿನ ಉದ್ದೇಶವನ್ನು ತಿಳಿಸಿದರು. ಪದ್ಮಸೂರಿ ಅವರು ಹಿಂದಿನ ಸಭೆಯ ವರದಿಯನ್ನು ಮಂಡಿಸಿದರು. ಪೂರ್ಣಿಮಾ ಜಯಂತರವರು ಮಾರ್ಚ್ ತಿಂಗಳ ಪರ್ವವಾಚನ ಮಾಡಿದರು. ಸುನೀತಾ ಸುಂದರರಾಜ್ ಅವರು ಕಳೆದ ತಿಂಗಳಲ್ಲಿ ವಿವಾಹ ವಾರ್ಷಿಕ ಹಾಗೂ ಹುಟ್ಟುಹಬ್ಬ ಆಚರಿಸಿಕೊಂಡ ರತ್ನತ್ರಯ ಮಿಲನ ಸದಸ್ಯರಿಗೆ ಶುಭ ಕೋರಿದರು. ರಾಣಿ ಪ್ರಫುಲ್ಲ ಅವರು ಅತಿಥಿಗಳ ಪರಿಚಯ ಮಾಡಿದರು. ಮುಖ್ಯ ಅತಿಥಿಗಳಾಗಿಭಾಗವಹಿಸಿದ್ದ ಸಿ. ಪಿ. ಉಷಾ ರಾಣಿಯವರು ವೀರ್ ಚಂದ್ ಗಾಂಧಿಯವರ ಬದುಕು ಮತ್ತು ಸಾಧನೆಗಳ ಕುರಿತು ಉಪನ್ಯಾಸ ಮಾಡಿದರು. ನವೀನ್ ಕುಮಾರ್ ಗುಬ್ಬಿಯವರು ಅಧ್ಯಕ್ಷರ ನುಡಿಗಳನ್ನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಅನಂತ ಕುಮಾರಿ ಅವರು ನಡೆಸಿಕೊಟ್ಟರು. ಶೋಭಿತ ನವೀನಕುಮಾರ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ವೇಣೂರು: ಮಹಿಳಾ ದಿನಾಚರಣೆ ಆಚರಣೆ

Article Image

ವೇಣೂರು: ಮಹಿಳಾ ದಿನಾಚರಣೆ ಆಚರಣೆ

ಬೆಳ್ತಂಗಡಿ ತಾಲೂಕು, ವೇಣೂರಿನ ಬ್ರಾಹ್ಮೀ ಜೈನ ಮಹಿಳಾ ಸಂಘದ ವತಿಯಿಂದ ಮಹಿಳಾ ದಿನಾಚರಣೆಯನ್ನು ಮಾರ್ಚ್ 8ರಂದು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟಣೆಯನ್ನು ಹಿರಿಯರು ಆದ ವೇಣೂರಿನ ಸುನಂದಾದೇವಿ ಬಿ. ಪಿ. ಇಂದ್ರರವರು ನೆರವೇರಿಸಿದರು. ‌ ಮುಖ್ಯ ಭಾಷಣಕಾರರಾಗಿ ಬೆಳ್ತಂಗಡಿಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಉಷಾ ನಾಯಕ್‌ರವರು ಆಗಮಿಸಿ, ಮಹಿಳೆಯರು ತನ್ನ ಕುಟುಂಬದೊಂದಿಗೆ ಮತ್ತು ಸಮಾಜದಲ್ಲಿ ನಿರ್ವಹಿಸುವ ವಿವಿಧ ಪಾತ್ರಗಳ ಬಗ್ಗೆ ವಿವರಿಸಿದರು. ಮಹಿಳೆ ಎಂದೂ ಕುಗ್ಗಬಾರದು ಸವಾಲುಗಳನ್ನು ತಾಳ್ಮೆಯಿಂದ ಎದುರಿಸಬೇಕು ಎಂದು ಹೇಳಿದರು. ಬ್ರಾಹ್ಮೀ ಜೈನ ಮಹಿಳಾ ಸಂಘದ ಕೋಶಾಧಿಕಾರಿಯಾದ ವಾಣಿಶ್ರೀ ವೃಷಭರಾಜ್‌ರವರು ಮಹಿಳೆಯರ ಉದಾಹರಣೆ ಮೂಲಕ ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ನಂತರ ಬ್ರಾಹ್ಮೀ ಜೈನ ಮಹಿಳಾ ಸಂಘದ ಹಿರಿಯ ಸದಸ್ಯರಾದ ಸುನಂದಾ ಭರತ್‌ರಾಜ್‌ ಮತ್ತು ಶಶಿಪ್ರಭಾ ಸುರೇಶ್‌ ಆರಿಗರವರನ್ನು ಮಹಿಳಾ ದಿನಾಚರಣೆ ವಿಶೇಷವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬ್ರಾಹ್ಮೀ ಜೈನ ಮಹಿಳಾ ಸಂಘದ ಅದ್ಯಕ್ಷರು ಮತ್ತು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ನಿರ್ದೇಶಕಿಯಾಗಿರುವ ಸರೋಜಾ ಗುಣಪಾಲ್‌‌ ಜೈನ್‌ರವರು ಮಹಿಳಾ ದಿನಾಚರಣೆ ಸಂಕ್ಷಿಪ್ತ ಮಾಹಿತಿ ನೀಡಿದರು. ಗೌರವ ಉಪಸ್ಥಿತಿಯನ್ನು ಬ್ರಾಹ್ಮೀ ಜೈನ ಮಹಿಳಾ ಸಂಘದ ಸ್ಥಾಪಕ ಅಧ್ಯಕ್ಷರಾದ ಪ್ರಸನ್ನ ಆರ್.‌ ಹೆಗ್ಡೆರವರು ವಹಿಸಿದ್ದರು. ದೀಪಶ್ರೀ ಕತ್ತೋಡಿ ಮತ್ತು ಪ್ರಿಯಾಲತಾ ಮೂಡುಕೋಡಿರವರು ಪ್ರಾರ್ಥಿಸಿ, ಕಾರ್ಯದರ್ಶಿ ಆಶಾಲತಾ ಜೈನ್‌ ಸ್ವಾಗತಿಸಿದರು. ಮಮತಾ ಪ್ರಸಾದ್‌ ಜೈನ್‌ರವರು ವಂದಿಸಿದರು. ಕಾರ್ಯಕ್ರಮವನ್ನು ಸಂಧ್ಯಾ ಸುಕುಮಾರ್‌ ಜೈನ್‌ರವರು ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ವೇಣೂರು: ಬಾಹುಬಲಿ ಬೆಟ್ಟದ ರಥೋತ್ಸವದಂದು ವಿದ್ಯಾರ್ಥಿವೇತನ

Article Image

ವೇಣೂರು: ಬಾಹುಬಲಿ ಬೆಟ್ಟದ ರಥೋತ್ಸವದಂದು ವಿದ್ಯಾರ್ಥಿವೇತನ

ವೇಣೂರು: ಬೆಳ್ತಂಗಡಿ ತಾಲೂಕು, ವೇಣೂರು ಭ| ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ಮಾ.14ರಂದು ಜರಗಲಿರುವುದು. ಅಂದು ರಾತ್ರಿ 7.30ರಿಂದ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಜೈನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ದಿ| ಡಾ| ಪಿ. ಅಂತಪ್ಪ ಆಳ್ವ ರವರ ಸ್ಮರಣಾರ್ಥ ಪತ್ನಿ ಮತ್ತು ಮಕ್ಕಳು ಪಂಜಾಲಬೈಲು ವೇಣೂರು ಹಾಗೂ ಬಡಕೋಡಿ ಹೊಸಮನೆ ದಿ| ಪಿ. ಆದಿರಾಜ ಶೆಟ್ಟಿ ಹಾಗೂ ಶ್ರೀಮತಿ ದಿ| ಶಾರದಾದೇವಿಯವರ ಸ್ಮರಣಾರ್ಥ ಮಕ್ಕಳಿಂದ ಹಾಗೂ ಮಾರಗುತ್ತು ದಿ|ವಿಜಯರಾಜ ಅಧಿಕಾರಿಯವರ ಸ್ಮರಣಾರ್ಥ ಪತ್ನಿ ರಾಜೇಶ್ವರಿ ವಿ.ಅಧಿಕಾರಿ ಹಾಗೂ ಶ್ರೀ ಅಕ್ಷಯ ಕುಮಾರ್ ಕಂಬಳಿ ಮತ್ತು ಮಕ್ಕಳು ಜಿನಪದ ಬೆಳಾಲುರಸ್ತೆ ಉಜಿರೆ ಇವರಿಂದ ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಹ ಪ್ರತಿಭಾವಂತ ಜೈನ ವಿದ್ಯಾರ್ಥಿಗಳು 2024ನೇ ಸಾಲಿನ ಪಿ.ಯು.ಸಿ. ಹಾಗೂ ಎಸ್.ಎಸ್.ಎಲ್.ಸಿ. ಅಂಕಪಟ್ಟಿಯ ಜೆರಾಕ್ಸ್‌ ನೊಂದಿಗೆ ಅರ್ಜಿಯನ್ನು ಕಾರ್ಯದರ್ಶಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ಯಾತ್ರಿ ನಿವಾಸ ಶ್ರೀ ಮಹಾವೀರ ನಗರ ವೇಣೂರು-574242 ಇವರಿಗೆ ಕಳುಹಿಸಿಕೊಡುವಂತೆ ವಿನಂತಿಸಲಾಗಿದೆ. ಅರ್ಜಿದಾರರು ಸರಿಯಾದ ವಿಳಾಸ ಹಾಗೂ ಮೊಬೈಲ್ ನಂಬರ್ ನಮೂದಿಸಬೇಕು. ಮಾರ್ಚ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಛೇರಿ ಮೊಬೈಲ್ ನಂ: 9606356288

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ವಾಲಿಬಾಲ್‌ ಪಂದ್ಯಾಟ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ವಾಲಿಬಾಲ್‌ ಪಂದ್ಯಾಟ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ರಾಜ್ಯಮಟ್ಟದ ವಾಲಿಬಾಲ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯ ನಿಯಮಗಳು : * ಪ್ರತಿ ತಂಡದಲ್ಲಿ ಆರು ಜನ ಆಟಗಾರರು ಹಾಗೂ ಮೂರು ಜನ ಆಟಗಾರರು ಪರ್ಯಾಯ ಆಟಗಾರರಾಗಿ ಅಟವಾಡಲು ಅವಕಾಶವಿರುತ್ತದೆ. * ಒಬ್ಬ ಆಟಗಾರನಿಗೆ ಒಂದು ತಂಡದಲ್ಲಿ ಮಾತ್ರ ಆಡಲು ಅವಕಾಶವಿರುತ್ತದೆ. * ನಿರ್ಣಾಯಕರ ಮತ್ತು ಆಯೋಜಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ. * ತಂಡದ ಹೆಸರನ್ನು ನೋಂದಾಯಿಸಲು ಕೊನೆಯ ದಿನಾಂಕ 30 ಮಾರ್ಚ್ 2025 ಆಗಿರುತ್ತದೆ. * ವಿಜೇತ ತಂಡಗಳಿಗೆ ವಿಶೇಷ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ಏರುತ್ತದೆ. * ಒಂದು ತಂಡಕ್ಕೆ ಪ್ರವೇಶ ಶುಲ್ಕ 1000/- ರೂ ಆಗಿರುತ್ತದೆ. ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು, ಸಂಯೋಜಕರು: ದರ್ಶನ್ ಜೈನ್ ಮಾರಲಗೋಡು, ಅಮೃತ ಜೈನ್ ಬಿದರೂರು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : ಸೋಹನ್ ಜೈನ್, ಸಂತೋಷ್ ಡಿ ಜೈನ್ 9035943205 94807 22321

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ರಂಗೋಲಿ ಪಂದ್ಯಾಟ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ರಂಗೋಲಿ ಪಂದ್ಯಾಟ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಜೈನ ಮಹಿಳೆಯರಿಗೆ ಏ. 06ರಂದು ರಾಜ್ಯಮಟ್ಟದ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯ ನಿಯಮಗಳು : * ಸ್ಪರ್ಧೆಯಲ್ಲಿ ಭಾಗವಹಿಸುವವರು ಸಮಯಕ್ಕೆ ಸರಿಯಾಗಿ ಸ್ಥಳದಲ್ಲಿ ಹಾಜರಿರಬೇಕು. * ರಂಗೋಲಿ ಸ್ಪರ್ಧೆಯ ಕಾಲಾವಧಿ ಒಂದು ಗಂಟೆ. * ರಂಗೋಲಿಯು ಜೈನ ಧರ್ಮದ ಸಂದೇಶವನ್ನು ಸಾರುವ ಅಂಶಗಳನ್ನು ಹೊಂದಿರಬೇಕು. * ಸ್ಪರ್ಧಿಗಳು ತಮ್ಮ ಹೆಸರನ್ನು ಗೂಗಲ್ ಅಂಕ್ ಅಥವಾ ಅಯೋಜಕರಲ್ಲಿ ನೊಂದಾಯಿಸಬೇಕು. * ರಂಗೋಲಿ ಜಡಿಸುವವರು ನಿಗದಿಪಡಿಸಿದ 3 X 3 ಅಡಿ ಜಾಗದಲ್ಲೆ ಜಡಿಸಬೇಕು. * ರಂಗೋಲಿ ಬಿಡಿಸಲು ಬೇಕಾದ ವಸ್ತುಗಳನ್ನು ಸ್ಪರ್ಧಿಗಳೇ ತರತಕ್ಕದ್ದು. * ತೀರ್ಪುಗಾರರ ಆಯ್ಕೆಯ ಅನುಸಾರ ಪ್ರಥಮ, ದ್ವಿತೀಯ, ಮತ್ತು ತೃತೀಯ ಫಲಿತಾಂಶ ಘೋಷಿಸಲಾಗುವುದು. * ತರಕಾಲ, ಹೂವು, ಹರಳು ಮತ್ತು ಕಾಳು ಬೆಳೆ ಸೇರಿದಂತೆ ವಿಶೇಷ ವಸ್ತುಗಳನ್ನು ಸೌಂದರ್ಯಕ್ಕಾಗಿ ಬಳಸಬಹುದು. * ಸ್ಪರ್ಧೆಯಲ್ಲಿ ಭಾಗವಹಿಸುವವರು ನೊಂದಾಯಿಸಲು ಕೊನೆಯ ದಿನಾಂಕ: 30-03-2025 ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜಿನಗರ, ಬೆಂಗಳೂರು, ಸಂಯೋಜಕರು: ಪೂಜಾ ದರ್ಶನ್ ಜೈನ್, ಸಂಗೀತ ವಜ್ರ ಕುಮಾರ್, ಸಂಧ್ಯಾ ಉದಂಕ ಜೈನ್, ಪ್ರಜ್ವಲ್ ಜೈನ್ ಜೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: 7406434903 7892973503

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಚಿತ್ರಕಲೆ ಸ್ಪರ್ಧೆ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಚಿತ್ರಕಲೆ ಸ್ಪರ್ಧೆ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ನಿಯಮಗಳು : * ಚಿತ್ರಕಲೆಯು 4 ವಿಭಾಗಗಳಲ್ಲಿ ಇರುತ್ತದೆ (ಚಿಣ್ಣರ, ಬಾಲ್ಯ, ಕಿಶೋರ & ಯುವ) ಚಿಣ್ಣರ 1 ರಿಂದ 4 ನೇ ತರಗತಿ, ಬಾಲ್ಯ 5 ರಿಂದ 7 ನೇ ತರಗತಿ, ಕಿಶೋರ 8 ರಿಂದ 10 ನೇ ತರಗತಿ & ಯುವ PUC ನಂತರ. * ಸ್ಪರ್ಧಿಗಳು ತಮ್ಮ ಹೆಸರನ್ನು ಗೂಗಲ್ ಅಂಕ್ ಮೂಲಕ ನೋಂದಾಯಿಸಬೇಕಾಗಿ ವಿನಂತಿ. * ಚಿತ್ರ ಕಲೆಯು ಜೈನ ಧರ್ಮದ ಬಗ್ಗೆ ಇರಬೇಕು ಹಾಗೂ ಚಿತ್ರ ಬಿಡಿಸಲು ಕಾಲಾವಕಾಶ 1 ಗಂಟೆ. * ಚಿತ್ರಕಲೆಯು ಕ್ರೆಯಾನ್ಸ್, ಸ್ಟೇಟ್ಟೆನ್ & ವಾಟರ್ ಕಲರ್ ಯಾವುದಾದರೂ ಮಾಡಬಹುದು. * A3 ಡ್ರಾಯಿಂಗ್ ಶೀಟ್ ನಲ್ಲಿ ಚಿತ್ರವನ್ನು ಬಿಡಿಸಬೇಕು ಮತ್ತು ಶೀಟನ್ನು ಸ್ಥಳದಲ್ಲಿಯೇ ಒದಗಿಸಲಾಗುತ್ತದೆ. * ಚಿಣ್ಣರ ವಿಭಾಗಕ್ಕೆ ಚಿತ್ರವನ್ನು ಕೊಡಲಾಗುತ್ತದೆ, ಕಲಲಿಂಗ್ ಮಾಡಬೇಕು. * ತೀರ್ಪುಗಾರರ ಆಯ್ಕೆಯ ಅನುಸಾರ ಫಲಿತಾಂಶವನ್ನು ಘೋಷಿಸಲಾಗುತ್ತದೆ. * ಸ್ಪರ್ಧಾಳುಗಳು ನೋಂದಾಯಿಸಲು ಕೊನೆಯ ದಿನಾಂಕ: 30-03-2025. ಸ್ಥಳ : ಪೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜಿನಗರ, ಬೆಂಗಳೂರು, ಸಂಯೋಜಕರು: ಸಂದೇಶ್ ಜೈನ್, ತೇಜಪ್ಪ ಜೈನ್, ಅಭಿಷೇಕ್ ಜೈನ್, ರಚನಾ ಜಿನೇಂದ್ರ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 8105077689 9483596608

ಸವಣಾಲು: ಧಾಮ ಸಂಪ್ರೋಕ್ಷಣ ವೈಭವ

Article Image

ಸವಣಾಲು: ಧಾಮ ಸಂಪ್ರೋಕ್ಷಣ ವೈಭವ

ಉಜಿರೆ: ಆಧ್ಯಾತ್ಮವೇ ಭಾರತದ ಆತ್ಮವಾಗಿದ್ದು ಪರಿಶುದ್ಧ ಶ್ರದ್ಧಾ-ಭಕ್ತಿಯಿಂದ ದೇವರ ಸೇವೆ ಮಾಡಿದಾಗ ಸರ್ವಶಕ್ತನಾದ ಭಗವಂತನು ನಮ್ಮ ಎಲ್ಲಾ ಕಷ್ಟಗಳನ್ನು ಪರಿಹರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು. ಅವರು ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಆದಿನಾಥಸ್ವಾಮಿ ಬಸದಿಯಲ್ಲಿ ಭಾನುವಾರ ಧಾಮ ಸಂಪ್ರೋಕ್ಷಣ ಸಂದರ್ಭದಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಎಲ್ಲರಲ್ಲಿಯೂ ದೇವರನ್ನು ಕಂಡು ಗೌರವಿಸುವ ಸಂಸ್ಕೃತಿ ನಮ್ಮದಾಗಿದೆ. ನಂಬಿಕೆಗಿಂತಲೂ ಜಿಜ್ಞಾಸೆ ಹಾಗೂ ಅನ್ವೇಷಣಾ ಪ್ರವೃತ್ತಿಯಿಂದಾಗಿ ಕಷ್ಟ ಬಂದಾಗ ಆರ್ತರಾಗಿ ಪರಿಹಾರಕ್ಕಾಗಿ ನಾವು ದೇವರ ಭಕ್ತಿ ಮಾಡುತ್ತೇವೆ. ದೇವರ ಅನುಗ್ರಹದಿಂದ ನಮ್ಮ ಇಷ್ಟಾರ್ಥಗಳು ಈಡೇರುತ್ತವೆ. ಕರ್ಮ ಸಿದ್ಧಾಂತವನ್ನು ನಂಬುವ ನಾವು ತಾಳ್ಮೆಯಿಂದ ಧರ್ಮದ ಮರ್ಮವನ್ನರಿತು ಆಚರಿಸಿದಾಗ ಜೀವನ ಪಾವನವಾಗುತ್ತದೆ. ನಮ್ಮ ಹಿರಿಯರು, ಸಾಧು-ಸಂತರು ಇದನ್ನು ಸಾಧಿಸಿ ತೋರಿಸಿದ್ದಾರೆ ಎಂದು ಹೇಳಿದ ಅವರು ಜೈನರ ತ್ಯಾಗ, ಅಹಿಂಸೆ, ಅಪರಿಗ್ರಹ ಮೊದಲಾದ ತತ್ವ-ಸಿದ್ಧಾಂತಗಳಿಂದ ಶಾಂತಿ-ಸಾಮರಸ್ಯದ ಬದುಕು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಪಡುಬಿದ್ರೆ ಬೀಡು ರತ್ನಾಕರ ರಾಜ್ ಅರಸು, ರಕ್ಷಿತ್ ಶಿವರಾಂ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಶುಭಾಶಂಸನೆ ಮಾಡಿದರು. ವಿಶಿಷ್ಠ ಸೇವೆ-ಸಾಧನೆ ಮಾಡಿದ ವೇಣೂರಿನ ಪ್ರವೀಣಕುಮಾರ್ ಇಂದ್ರ ಮತ್ತು ಉಜಿರೆಯ ಸುರೇಶ್‌ಕುಮಾರ್ ಅವರನ್ನು ಗೌರವಿಸಲಾಯಿತು. ಪ್ರತಿಷ್ಠಾಚಾರ್ಯರಾದ ಬೆಳ್ತಂಗಡಿಯ ಕೆ. ಜಯರಾಜ ಇಂದ್ರ, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಬಿ. ರಾಜಶೇಖರ ಅಜ್ರಿ, ಬಸದಿ ಸಮಿತಿಯ ಕೋಶಾಧಿಕಾರಿ ಚಾಮರಾಜ ಸೇಮಿತ, ವೃಷಭರಾಜ ಇಂದ್ರ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ ಮಾತನಾಡಿ, ಸ್ವಧರ್ಮದಲ್ಲಿ ಜೀವಿಸಿ, ಪರಧರ್ಮವನ್ನು ಪ್ರೀತಿಸುವ ಜೈನರು ಗುಣಗಳ ಆರಾಧಕರಾಗಿದ್ದು ಸರ್ವಧರ್ಮೀಯರೊಂದಿಗೂ ಶಾಂತಿ-ಸಾಮರಸ್ಯದ ಜೀವನ ನಡೆಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಬಸದಿಯ ಸೇವೆಯಲ್ಲಿ ಜನರ ಶ್ರದ್ಧಾ-ಭಕ್ತಿಯ ಪರಿಶ್ರಮವನ್ನು ಶ್ಲಾಘಿಸಿ, ಅಭಿನಂದಿಸಿದರು. ಕಿಶೋರ್‌ಹೆಗ್ಡೆ ಎರ್ಮೆತ್ತೋಡಿಗುತ್ತು ಸ್ವಾಗತಿಸಿದರು. ಮುಂಡೂರುಗುತ್ತು ಆಕರ್ಷ್ ಜೈನ್ ಧನ್ಯವಾದವಿತ್ತರು. ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು. ಧಾರ್ಮಿಕ ವಿಧಿ-ವಿಧಾನಗಳು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಭಾನುವಾರದ ಪೂಜೆಯ ಸೇವಾಕರ್ತೃಗಳಾಗಿ ಪುಣ್ಯಭಾಗಿಗಳಾದರು. ಭಗವಾನ್ ಆದಿನಾಥ ಸ್ವಾಮಿಯ ಪ್ರತಿಷ್ಠೆ, ಶಿಖರಾರೋಹಣ, ಭಕ್ತಾಮರ ಆರಾಧನೆ, ೧೦೮ ಕಲಶ ಅಭಿಷೇಕದ ಬಳಿಕ ಮಹಾಪೂಜೆ ನಡೆಯಿತು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ನಿರೀಕ್ಷಾ ಜೈನ್ ಹೊಸ್ಮಾರು ಇವರು ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಬೆಂಗಳೂರಿನ ಕುಬೇರ ಜೈನ್ ಮಿಲನ್ ನ 180ನೇ ವಾರ್ಷಿಕ ಸಭೆ

Article Image

ಬೆಂಗಳೂರಿನ ಕುಬೇರ ಜೈನ್ ಮಿಲನ್ ನ 180ನೇ ವಾರ್ಷಿಕ ಸಭೆ

ಇಂದಿನ ಜಾಗತೀಕರಣ ಹಾಗೂ ಉಧಾರಿಕರಣದ ಕಾಲಘಟ್ಟದಲ್ಲಿ ಸಂಸ್ಕೃತಿ, ಸಂಸ್ಕಾರ, ಶಾಂತಿ ಮತ್ತು ಅಹಿಂಸೆಗಳ ಸಂರಕ್ಷಣೆಯ ಹಿನ್ನೆಲೆಯಲ್ಲಿ ಕಾಲಕ್ಕೆ ತಕ್ಕಂತೆ ನಾವು ಬದಲಾವಣೆ ಕಾಣುವುದು ಅಗತ್ಯವಾಗಿದೆ ಎಂದು ಧಾರವಾಡದ ಎಸ್‌.ಡಿ.ಎಂ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ನಿರಂಜನ್ ಕುಮಾರ್ ತಿಳಿಸಿದರು. ಅವರು ಆಂಧ್ರ ಪ್ರದೇಶದ ಸತ್ಯ ಸಾಯಿ ಜಿಲ್ಲೆ, ಪೆನುಗೊಂಡೇ ಪಟ್ಟಣದ ಶ್ರೀ ಅಜಿತನಾಥ ತೀರ್ಥಂಕರ ಬಸದಿ ಆವರಣದಲ್ಲಿ ನಡೆದ ಬೆಂಗಳೂರಿನ ಕುಬೇರ ಜೈನ್ ಮಿಲನ್ ನ 180ನೇ ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಶ್ರೀ ಧರ್ಮಸ್ಥಳ ಧರ್ಮೊತ್ತನ ಟ್ರಸ್ಟ ನಿಂದ ಶ್ರೀ ಅಜಿತನಾಥ ಬಸದಿ ಜೀರ್ಣೋದ್ಧಾರಗೊoಡು ಹೊಸ ರೂಪ ಕಂಡಿದೆ, ಜೈನ ಧರ್ಮ ಚಿಕ್ಕ ಧರ್ಮವಾದರೂ ಸುರಕ್ಷಿತ ಹಾಗೂ ವಿಶಿಷ್ಟ ಧರ್ಮವಾಗಿದೆ, ನಮ್ಮ ಧರ್ಮ ಶ್ರಮಣ ಪರಂಪರೆ ಹೊಂದಿದೆ, ಇತ್ತೀಚಿನ ದಿನಗಳಲ್ಲಿ ವಿಶ್ವದಲ್ಲಿ ಅಶಾಂತಿ, ಹಿಂಸೆ, ರಕ್ತಪಾತ, ತಾಂಡವ ಮಾಡುತ್ತಿದ್ದು ಯುದ್ಧದ ಕಾರ್ಮೋಡ ಕವಿದಿದೆ. ಬದಲಾವಣೆ ಇಂದು ಅಗತ್ಯವಾಗಿದ್ದು ಇವಕ್ಕೆಲ್ಲ ಶಾಂತಿ ಮತ್ತು ಅಹಿಂಸೆಗೆ ಪೂರಕವಾಗಿರುವ ಜೈನ ಧರ್ಮದ ಸಿದ್ಧಾಂತಗಳು ಅಗತ್ಯ ಎಂದರು. ಯಾವುದೇ ಕಾರ್ಯಕ್ಕೆ ನಾವು ಹೊಂದಿಕೊಳ್ಳುವ ಭಾವನೆ, ಭೂಮಿಯ ಮೇಲೆ ಬದುಕುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು. ಡಾ ಪದ್ಮಲತ ನಿರಂಜನ್ ಮಾತನಾಡಿ ಎಲ್ಲರಿಗೂ ಪ್ರೀತಿಸುವ ಶಕ್ತಿ ನೀಡಲಿ ಎಂದು ಹಾರೈಸಿ ಭಕ್ತಿಗೀತೆ ಹಾಡಿದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೇ ಪದ್ಮಿನಿ ಪದ್ಮರಾಜ್ ಮಾತನಾಡಿ ಭಾರತೀಯ ಜೈನ ಮಿಲನ್ ಹಾಗೂ ಜೈನ ಮಹಿಳಾ ಒಕ್ಕೂಟಗಳು ಧರ್ಮಸ್ಥಳದ ಧರ್ಮಕಾರ್ಯಗಳು ಪ್ರಶಂಸನಿಯ, ಧರ್ಮ ಸಂಸ್ಕಾರ ಕಾರ್ಯಗಳನ್ನು ಅಳವಡಿಸಿಕೊಳ್ಳುವಂತೆ ಸಮಾಜ ಬಂದುಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಅಮರಾಪುರ ಜೈನ ಸಮಾಜದ ಅಧ್ಯಕ್ಷ ಪದ್ಮರಾಜ್, ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷ ಕೆ. ಜೆ. ಎ. ಮಂಜುನಾಥ್ ಯುವರಾಜ್, ನಾಗಕುಮಾರ್ ಸಂಜು, ಮಂಜು, ಅಮರಾಪುರ ಚಂದ್ರಿಕೀರ್ತಿ, ಅಮರಾಪುರ ಅನಿಲ್, ಬೆಂಗಳೂರಿನ ಕುಬೇರ ಜೈನ್ ಮಿಲನ್ ಅಧ್ಯಕ್ಷರು, ಪದಾಧಿಕಾರಿಗಳು, ಅಮರಾಪುರ, ಪೆನಗೊಂಡೆ, ಜೈನ್ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಜೈನ ಸಮಾಜದ ಮುಖಂಡರುಗಳು, ವಿವಿಧ ಮಹಿಳಾ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು. ಇಸ್ರೋ ಅಜಿತ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪುರೋಹಿತ್ ಕೋಮಲ್ ಕುಮಾರ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಜೆ ರಂಗನಾಥ- ತುಮಕೂರು

ತುಂಗಭದ್ರ ಪ್ರೌಢಶಾಲೆಯಲ್ಲಿ ಎಸ್.ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ

Article Image

ತುಂಗಭದ್ರ ಪ್ರೌಢಶಾಲೆಯಲ್ಲಿ ಎಸ್.ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಮತ್ತು ಶ್ರೀ ಜ್ವಾಲಮಾಲಿನಿ ಮಹಿಳಾ ಸಮಾಜ ಹೂವಿನಡಗಲಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತುಂಗಭದ್ರ ಪ್ರೌಢಶಾಲೆಯಲ್ಲಿ ಎಸ್.ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ, ಪರೀಕ್ಷೆ ಹೇಗೆ ಬರೆಯಬೇಕು, ಅದನ್ನು ಹೀಗೆ ಎದುರಿಸಬೇಕು ಎಂಬ ಬಗ್ಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಯಿತು. ಪರೀಕ್ಷೆಯಲ್ಲಿ ಫೇಲಾದರೂ ವಿದ್ಯಾರ್ಥಿಗಳಲ್ಲಿರುವ ಸದಾವಕಾಶಗಳು, ಇನ್ನಿತರ ವಿಚಾರಗಳನ್ನು ಹಾಗೂ ಯಾವುದೇ ಅನಾಹುತಗಳಿಗೆ ಎಡೆ ಮಾಡಿಕೊಡದಂತೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಜ್ವಾಲಾಮಾಲಿನಿ ಮಹಿಳಾ ಸಮಾಜದ ಅಧ್ಯಕ್ಷ ಎಂ. ಡಿ. ಪದ್ಮಾವತಿ, ಉಪಾಧ್ಯಕ್ಷರಾದ ಜಯಶ್ರೀ ಮಂಜುನಾಥ್ ಜೈನ, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಕಾರ್ಯಕಾರಿ ಸಮಿತಿಯ ಸೀಮಾ ಪ್ರಶಾಂತ್ ಹೊಳಲು ಕಾರ್ಯದರ್ಶಿ ಚಂಪಾರಾಯಪ್ಪ ಹೊಳಲು, ಖಜಾಂಚಿ ಮೇಘ ಬಾಗೇಶ ಜೈನರ್, ಸದಸ್ಯರಾದ ಪದ್ಮ ಅಜಿತ್ ಹೊಳಲು, ವೈಶಾಲಿ ಅಮಿತ್ ಹೊಳಲು, ಭಾಗವಹಿಸಿದ್ದರು ಇದೇ ಸಂದರ್ಭದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳಿಗೆ ಪೆನ್ಸಿಲ್ ಗಳನ್ನು ವಿತರಿಸಲಾಯಿತು. ಜೆ ರಂಗನಾಥ- ತುಮಕೂರು

ವೇಣೂರು: ಮುನಿಮಹಾರಾಜರ ಪುರಪ್ರವೇಶ

Article Image

ವೇಣೂರು: ಮುನಿಮಹಾರಾಜರ ಪುರಪ್ರವೇಶ

ಪರಮ ಪೂಜ್ಯ ವಾತ್ಸಲ್ಯಮೂರ್ತಿ ಗಣಾಧರ ಆಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಸತ್ಗಂಗ ಸಮೇತರಾಗಿ ವೇಣೂರು ಶ್ರೀ ಬಾಹುಬಲಿ ಕ್ಷೇತ್ರಕ್ಕೆ ಇಂದು ಬೆಳಿಗ್ಗೆ 8.00ಗಂಟೆಗೆ ಪುರಪ್ರವೇಶ ಗೈದಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು, ಕಾರ್ಯದರ್ಶಿಗಳಾದ ವಿ. ಪ್ರವೀಣ್‌ ಕುಮಾರ್‌ ಇಂದ್ರ, ಕೋಶಾಧಿಕಾರಿಗಳಾದ ಜಯರಾಜ್‌ ಕಂಬಳಿ ಮತ್ತು ಸಮಿತಿಯ ಎಲ್ಲಾ ಸದಸ್ಯರು ಹಾಗೂ ಸಮಸ್ತ ಶ್ರಾವಕ-ಶ್ರಾವಕಿಯರು ಪಾಲ್ಗೊಂಡಿದ್ದರು. ಮುನಿಮಹಾರಾಜರುಗಳು ಇಂದು ಸಂಜೆ 4.00ಗಂಟೆಗೆ ವೇಣೂರಿನಿಂದ ಪೆರಿಂಜೆ ಬಸದಿಗೆ ವಿಹಾರ ಹೊರಡಲಿದ್ದಾರೆ.

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ

Article Image

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ

ಕರಂಬಾರು ಗುತ್ತು ಪ್ರಸನ್ನ ಹೆಗ್ಡೆ ಹಾಗೂ ನವೀನ್ ಲೋಬೋ ಮಾಲಕತ್ವದ SKY ELECTRICALS SERVICE ಹಾಗೂ PRIME ASSOCIATE ಅಳದಂಗಡಿ ಶಾಖೆ ಉದ್ಘಾಟನೆಯು ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ಬಳಿಯ ಪಾವನಿ ಕಾಂಪ್ಲೆಕ್ಸ್ ನಲ್ಲಿ ಫೆ.28ರಂದು ನಡೆಯಿತು. ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಆಸುಪಾಸಿನ ಲೈನ್ ಮೆನ್ ಗಳನ್ನು ಸನ್ಮಾನಿಸುವುದರ ಮೂಲಕ ಮಾಲಕ ಪ್ರಸನ್ನ ಹೆಗ್ಡೆ ಮಾದರಿ ಕಾರ್ಯಕ್ರಮಕ್ಕೆ ನಾಂದಿ ಹಾಡಿದರು. ಸರಿಸುಮಾರು 20 ಮಂದಿ ಮೆಸ್ಕಾಂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಇದೇ ಕಾರ್ಯಕ್ರಮದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಪ್ರಸಾದ್ ಅಜಿಲರು, ಉದ್ಯಮಿಗಳಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಡಾ. ಶಶಿಧರ್ ಡೋಂಗ್ರೆ, ಯೋಗೀಶ್ ನಡಕ್ಕರ, ಅಶ್ವಿನ್ ಪಿರೇರಾ ಮೂಡುಬಿದಿರೆ, ರವಿಪ್ರಸಾದ್ ಶೆಟ್ಟಿ ಮೂಡುಬಿದಿರೆ, ಸಂದೀಪ್ ಕುಮಾರ್ ಮೆಸ್ಕಾಂ ಇಂಜಿನಿಯರ್, ಗ್ರಾಮಪಂಚಾಯತ್ ಅಧ್ಯಕ್ಷೆ ಸರಸ್ವತಿ, ಗ್ರಾಮ ಪಂಚಾಯತ್ ಅಧಿಕಾರಿ ಪೂರ್ಣಿಮಾ ಜೆ, ನಿತ್ಯಾನಂದ ಶೆಟ್ಟಿ ನೊಚ್ಚ ಭಾಗವಹಿಸಿ ಶುಭಕೋರಿದರು. ಆಮಂತ್ರಣ ವಿಜಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀರಂಗ ಮಯ್ಯ ಸಹಕರಿಸಿದರು.

ಸವಣಾಲು: ಧಾಮ ಸಂಪ್ರೋಕ್ಷಣ ಮಹೋತ್ಸವ

Article Image

ಸವಣಾಲು: ಧಾಮ ಸಂಪ್ರೋಕ್ಷಣ ಮಹೋತ್ಸವ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಆದಿನಾಥಸ್ವಾಮಿ ಬಸದಿಯು ಜೀಣೋದ್ಧಾರಗೊಂಡಿದ್ದು ಶುಕ್ರವಾರ ಬೆಳಿಗ್ಗೆ ಇಂದ್ರಪ್ರತಿಷ್ಠೆ ಹಾಗೂ ತೋರಣ ಮುಹೂರ್ತದೊಂದಿಗೆ ಧಾಮಸಂಪ್ರೋಕ್ಷಣೆಯ ವಿಧಿ-ವಿಧಾನಗಳು ಶುಭಾರಂಭಗೊಂಡವು. ಪ್ರತಿಷ್ಠಾಚಾರ್ಯರಾದ ಬೆಳ್ತಂಗಡಿಯ ಜಯರಾಜ ಇಂದ್ರರು ಇಂದ್ರಪ್ರತಿಷ್ಠೆಯ ವಿಧಿ-ವಿಧಾನಗಳ ಮಹತ್ವವನ್ನು ವಿವರಿಸಿದರು. ಶುಕ್ರವಾರದಿಂದ ಮೂರು ದಿನಗಳಲ್ಲಿ ನಡೆಯುವ ಪೂಜಾಕಾರ್ಯಕ್ರಮಗಳಲ್ಲಿ ಪುರೋಹಿತರು, ಸೇವಾಕರ್ತರು ಹಾಗೂ ಶ್ರಾವಕರು ಮತ್ತು ಶ್ರಾವಕಿಯರು ಮನ, ವಚನ, ಕಾಯದಿಂದ ತ್ರಿಕರಣಪೂರ್ವಕವಾಗಿ ಪರಿಶುದ್ಧರಾಗಿದ್ದು ಶ್ರದ್ಧಾ-ಭಕ್ತಿಯಿಂದ, ವೃತ-ನಿಯಮಗಳ ಪಾಲನೆಯೊಂದಿಗೆ ಭಾಗವಹಿಸಿ ಪುಣ್ಯ ಸಂಚಯ ಮಾಡಿಕೊಳ್ಳಬೇಕು ಎಂದು ಹೇಳಿದರು. ಪ್ರತಿಷ್ಠಾಚಾರ್ಯರುಗಳಾದ ಜಯರಾಜಇಂದ್ರರು ಮತ್ತು ಪುಷ್ಪರಾಜಇಂದ್ರರು, ಸ್ಥಳ ಪುರೋಹಿತರುಗಳಾದ ವೃಷಭರಾಜಇಂದ್ರರ ನೇತೃತ್ವದಲ್ಲಿ ಸಹಪುರೋಹಿತರ ಸಹಭಾಗಿತ್ವದೊಂದಿಗೆ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ, ನಾಂದಿಮಂಗಲ ಪೂಜಾವಿಧಾನ, ಕ್ಷೇತ್ರಪಾಲ ಪ್ರತಿಷ್ಠೆ, ನಾಗಪ್ರತಿಷ್ಠೆ ಹಾಗೂ ಭಗವಾನ್ ಆದಿನಾಥಸ್ವಾಮಿಗೆ ೨೪ ಕಲಶ ಅಭಿಷೇಕ ಹಾಗೂ ಮಹಾಪೂಜೆ ನಡೆಯಿತು. ಕಿಶೋರ್ ಹೆಗ್ಡೆ, ಎರ್ಮೆತ್ತೋಡಿಗುತ್ತು , ಉಜಿರೆಯ ಸುರೇಶ್ ಕುಮಾರ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಇಂದು ಶನಿವಾರ ವಾಸ್ತುಪೂಜಾ ವಿಧಾನ, ನವಗ್ರಹಶಾಂತಿ, ಪದ್ಮಾವತಿದೇವಿಗೆ ರಜತಕವಚ ಸಮರ್ಪಣೆ, ಲಕ್ಷ ಹೂವಿನಪೂಜೆ, ಭಗವಾನ್ ಆದಿನಾಥಸ್ವಾಮಿಗೆ ೫೪ ಕಲಶ ಅಭಿಷೇಕ ಮತ್ತು ಮಹಾಪೂಜೆ ನಡೆಯುತ್ತದೆ. ನಾಳೆ, ಭಾನುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಸೇವಾಕರ್ತೃಗಳಾಗಿದ್ದು ಭಗವಾನ್ ಆದಿನಾಥ ಸ್ವಾಮಿ ಪ್ರತಿಷ್ಠೆ ಹಾಗೂ ೧೦೮ ಕಲಶ ಅಭಿಷೇಕ, ಶಿಖರಾರೋಹಣ, ಭಕ್ತಾಮರ ಆರಾಧನೆ, ಮಹಾಪೂಜೆ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ. ಧಾರ್ಮಿಕ ಸಭೆ: ಸಂಜೆ 5 ಗಂಟೆಗೆ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕಸಭೆಯಲ್ಲಿ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ಹರೀಶ್ ಕುಮಾರ್, ರಕ್ಷಿತ್‌ಶಿವರಾಂ, ಸುಮಂತ್ ಕುಮಾರ್, ಸಂದೀಪ್ ಜೈನ್, ಪ್ರವೀಣ ಕುಮಾರ್ ಇಂದ್ರ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕಾರ್ಕಳ: ಭಗವಾನ್ ೧೦೦೮ ಶ್ರೀ ಆದಿನಾಥ ಸ್ವಾಮಿಯ ನಿರ್ಮಾಣ ಕಲ್ಯಾಣ ಮಹೋತ್ಸವ

Article Image

ಕಾರ್ಕಳ: ಭಗವಾನ್ ೧೦೦೮ ಶ್ರೀ ಆದಿನಾಥ ಸ್ವಾಮಿಯ ನಿರ್ಮಾಣ ಕಲ್ಯಾಣ ಮಹೋತ್ಸವ

ಶ್ರೀ ಕರ್ನಾಟಕ ಜೈನ ಪುರೋಹಿತ ಸಂಘ ಕಾರ್ಕಳ, ಇದರ ವತಿಯಿಂದ ಭಗವಾನ್ ೧೦೦೮ ಶ್ರೀ ಆದಿನಾಥ ಸ್ವಾಮಿಯ ನಿರ್ಮಾಣ ಕಲ್ಯಾಣ ಮಹೋತ್ಸವವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಆ ಸಂದರ್ಭದಲ್ಲಿ ಹಿರಿಯ ಪುರೋಹಿತರಿಗೆ ಗೌರವ ಸಮರ್ಪಣಾ ಸಮಾರಂಭ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮಗಳು ನಡೆದವು.

ನರಸಿಂಹರಾಜಪುರ: ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ನರಸಿಂಹರಾಜಪುರ: ವಾರ್ಷಿಕ ರಥಯಾತ್ರಾ ಮಹೋತ್ಸವ

ಶ್ರೀ ಕ್ಷೇತ್ರ ಸಿಂಹನಗದ್ದೆ ಅತಿಶಯ ಮಹಾಕ್ಷೇತ್ರದಲ್ಲಿ ಭಗವಾನ್ ಶ್ರೀ ೧೦೦೮ ಚಂದ್ರಪ್ರಭ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಜ್ವಾಲಾಮಾಲಿನಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಪ.ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಮಾರ್ಗದರ್ಶನ ಹಾಗೂ ಪಾವನ ಸಾನ್ನಿಧ್ಯದಲ್ಲಿ ಇದೇ ಬರುವ ದಿನಾಂಕ 21-03-2025ರಿಂದ ಮೊದಲ್ಗೊಂಡು ದಿನಾಂಕ 25-03-2025ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಜಿನ ಸಹಸ್ರನಾಮ ಮತ್ತು ಭಕ್ತಾಮರ ಪುಂಜ ಅರ್ಘ್ಯ

Article Image

ಜಿನ ಸಹಸ್ರನಾಮ ಮತ್ತು ಭಕ್ತಾಮರ ಪುಂಜ ಅರ್ಘ್ಯ

ಅಳಿಯೂರು: ಇಲ್ಲಿನ ಆದಿನಾಥ ಸ್ವಾಮಿ ಬಸದಿಯಲ್ಲಿ ನಾಳೆ (ಫೆ. 26) ಮಧ್ಯಾಹ್ನ 2.00ರಿಂದ‌ ಭಗವಾನ್‌ ಶ್ರೀ ಆದಿನಾಥ ಸ್ವಾಮಿಯ ಮೋಕ್ಷ ಕಲ್ಯಾಣ ಪರ್ವ ದಿನದ ಪ್ರಯುಕ್ತ ಶ್ರೀ ಜ್ವಾಲಾಮಾಲಿನಿ ಮಹಿಳಾ ಸಂಘದ ವತಿಯಿಂದ ಜಿನ ಸಹಸ್ರನಾಮ ಮತ್ತು ಭಕ್ತಾಮರ ಪುಂಜ ಅರ್ಘ್ಯ ನಡೆಯಲಿದೆ. ಹಾಗೂ ಸಂಜೆ ಗಂಟೆ 6.30ಕ್ಕೆ ಆರತಿ ಮತ್ತು ಜಿನಭಜನೆ ಕಾ‍ರ್ಯಕ್ರಮ ಜರಗಲಿದೆ.

“ಕರ್ನಾಟಕದ ಪ್ರಾಣೋಪಾಸಕ” ಆಲೂರು ವೆಂಕಟರಾವ ಅವರ 61ನೇ ಪುಣ್ಯಸ್ಮರಣೆ ಕಾರ್ಯಕ್ರಮ

Article Image

“ಕರ್ನಾಟಕದ ಪ್ರಾಣೋಪಾಸಕ” ಆಲೂರು ವೆಂಕಟರಾವ ಅವರ 61ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಅವರ 61ನೇ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು (ಫೆ. 25)ನಗರದ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಸರಳ, ಸುಂದರವಾಗಿ ಸಂಪನ್ನಗೊಂಡಿತು. ಕಾರ್ಯಕ್ರಮದ ಮೊದಲು ವಿಶೇಷ ಅತಿಥಿಗಳಾಗಿ ಆಗಮಿಸಿದ್ದ ಪ್ರೇಸ್‌ ಇನ್ಫಾರ್ಮೇಶನ ಬ್ಯೂರೊ ಭಾರತ ಸರ್ಕಾರದ ನಿವೃತ್ತ ಪ್ರಿನ್ಸಿಪಲ್ ಡಿ. ಜಿ.ಮನೀಶ ದೇಸಾಯಿಯವರು ಹಾಗೂ ಇತರ ಗಣ್ಯರು ಭವನದ ಆವರಣದೊಳಗಿರುವ ಆಲೂರು ವೆಂಕಟರಾವ ಅವರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಪಣೆ ಮಾಡಿ ನಮನ ಸಲ್ಲಿಸಿದರು. ಮನೀಶ ದೇಸಾಯಿಯವರು ಮಾತನಾಡಿ ಕನ್ನಡದ ಮೂಲ ಕೃಷಿಕ ಆಲೂರು ವೆಂಕಟರಾವ ಅವರ ಹೆಸರಿನ ಮಾತ್ರದಿಂದಲೇ ಪುಳಕಿತಗೊಂಡ ಆ ಕಾಲದ ವಿದ್ಯಾರ್ಥಿಗಳಾದ ನಾವು ಅವರನ್ನು ನೋಡಿರದಿದ್ದರು. ಅವರ ಕನ್ನಡದ ಕಾವ್ಯಗಳಿಂದ ಪ್ರೇರಿತರಾಗಿ ಸಾಧನೆಕೇರಿಯಲ್ಲಿ ಸರ್‌ಕ್ಯೂಲೇಟಿಂಗ್‌ ಲೈಬ್ರರಿ ಪ್ರಾರಂಭಿಸಿ ಅಲ್ಲಿ ಕರ್ನಾಟಕ ಗತವೈಭವ, ಲೋಕಮಾನ್ಯ ತಿಲಕರ ಕನ್ನಡ ಗೀತಾರಹಸ್ಯ ಕನ್ನಡ ಅನುವಾದ ಹಾಗೂ ಇನ್ನಿತರ ಮಹತ್ವದ ಕನ್ನಡ ಕೃತಿಗಳನ್ನು ಸಂಗ್ರಹಿಸಿ ವಿತರಿಸಿದ್ದು ಇಂದಿಗೂ ನನ್ನ ನೆನಪಿನಲ್ಲಿದೆ ಎಂದು ಆಲೂರರ ಕನ್ನಡ ಕಟ್ಟುವ ಕಾರ್ಯಗಳನ್ನು ಸ್ಮರಿಸಿಕೊಂಡರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಪ್ರಾಧ್ಯಾಪಕ, ಸಾಹಿತಿ, ಡಾ. ಜಿನದತ್ತ ಹಡಗಲಿಯವರು ಮಾತನಾಡಿ, ಒಂದು ಕಾಲಕ್ಕೆ ವೈಭವಯುತ ಸಾಮ್ರಾಜ್ಯವೆಂದೇ ಗುರುತಿಸಿಕೊಂಡಿದ್ದ ವಿಜಯನಗರದ ಹಂಪಿಯ ಭಗ್ನಾವಶೇಷಗಳು, ಪಳೆಯುಳಿಕೆಗಳು ತಮ್ಮ ಹೃದಯವನ್ನು ಕಲಕಿ ಬಿಟ್ಟಾಗ ತೀವ್ರ ಹತಾಶೆಯನ್ನುಭವಿಸಿದ ಆಲೂರರು ಆ ದಿನವನ್ನು ತಮ್ಮ ಜೀವನದಲ್ಲಿ ಕ್ರಾಂತಿ ಮಾಡಿದ ದಿನವೆಂದೇ ಭಾವಿಸುತ್ತಾರೆ. ಆ ಕ್ಷಣದಿಂದ ವಿಜಯನಗರದ ಪುನರುತ್ಥಾನ, ಕನ್ನಡ ಕರ್ನಾಟಕತ್ವ, ಕರ್ನಾಟಕ ಏಕೀಕರಣಗಳ ಹೊಸ ಹೊಳಪುಗಳನ್ನು ಕಂಡು ಅವುಗಳ ಸಾಕ್ಷಾತ್ಕಾರವಾಗಿ ಪಣತೊಡುತ್ತಾರೆ. ವಂಗಭಂಗ ಚಳುವಳಿಯ ಕಾವು ಇವರನ್ನು ತಟ್ಟಿ ಮತ್ತಷ್ಟು ದು:ಖವಾಗಿ ನಿಸ್ವಾರ್ಥ ಭಾವನೆಯಿಂದ ಈ ನಾಡು ನನ್ನ ಮನೆ, ಈ ದೇಶ ನನ್ನ ಕುಟುಂಬವೆಂಬ ಸೂತ್ರವನ್ನು ಮೂಲವಾಗಿಸಿಕೊಂಡು ತಮ್ಮ ಹೊರಾಟಕ್ಕೆ ಶ್ರೀಕಾರ ಹಾಕುತ್ತಾರೆ. ಕನಾಟಕ ವಿದ್ಯಾವರ್ಧಕ ಸಂಘ, ವಾಗ್ಬೂಷಣ ಪತ್ರಿಕೆಯ ಸಂಪಾದಕತ್ವ ಮುಂತಾದವುಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಾರೆ, ಧಾರವಾಡದಲ್ಲಿ 1907ರಲ್ಲಿ ಮೊದಲಬಾರಿ ಕನ್ನಡ ಗ್ರಂಥಕರ್ತರ ಸಮ್ಮೇಳನ ನಡೆಸುತ್ತಾರೆ ಇದರ ಮುಂದುವರಿಕೆಯಾಗಿ ಜರುಗಿದ 3ನೇಯ ಸಮ್ಮೇಳನವು ಈ ನಾಡಿನ ಪ್ರತಿಷ್ಠಿತ ಸಂಸ್ಥೆ “ಕನ್ನಡ ಸಾಹಿತ್ಯ ಪರಿಷತ್ತಿನ" ಹುಟ್ಟಿಗೆ ನಾಂದಿಯಾಗುತ್ತದೆ. ಕರ್ನಾಟಕ ಗತವೈಭವ, ಕರ್ನಾಟಕ ವೀರರತ್ನಗಳಂತಹ ಪುಸ್ತಕಗಳನ್ನು ಪ್ರಕಟಿಸಿ ಮಲಗಿದ ಕನ್ನಡಿಗರತ್ತ ಚಾಟಿ ಬೀಸುತ್ತಾರೆ. ಆಲೂರರ ಇಂಥ ಕ್ರಾಂತಿಕಾರಿ ಹೆಜ್ಜೆಗಳನ್ನು ಸರಿಯಾಗಿಯೇ ಗುರುತಿಸಿದ ವರಕವಿ ಬೇಂದ್ರೆ ಅಲೂರರನ್ನು “ಕರ್ನಾಟಕ ಪ್ರಾಣೋಪಾಸಕ"ರೆಂದು ಹೆಮ್ಮೆಯಿಂದ ಕೊಂಡಾಡುತ್ತಾರೆ. ಹೀಗೆ ಆಲೂರುರೆಂದರೆ ಅದೊಂದು ಕನ್ನಡ ಗುಡಿಯ ಗೋಪೂರವಾಗಿದ್ದು ಕನ್ನಡಗಿರಲ್ಲರ ಪ್ರಾತ: ಸ್ಮರಣೀಯರಾಗಿದ್ದಾರೆ ಎಂದು ಡಾ. ಜಿನದತ್ತ ಹಡಗಲಿಯವರು ಆಲೂರರ ಸಾಧನೆಗಳನ್ನು ಸ್ಮರಿಸಿಕೊಂಡರು. ಟ್ರಸ್ಟ್ ಅಧ್ಯಕ್ಷ ಡಾ. ಪ್ರಮೋದ ಗಾಯಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಎಚ್. ಎ ಕಾಖಂಡಕಿ, ಕವಿ ನರಸಿಂಹ ಪರಾಂಜಪೆ, ಎಸ್.ಎಮ್ ದೇಶಪಾಂಡೆ, ಎಮ್. ಎಮ್ ಚಿಕ್ಕಮಠ, ರಮೇಶ ಪರ್ವತಿಕರ, ಅನಿಲ ಕಾಖಂಡಕಿ, ಮುರಳಿ ಹುಯಿಲಗೋಳ, ಭಾರತಿ ದೇಸಾಯಿ, ಶ್ರೀಕಾಂತ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು. ಗೀತಾ ಆಲೂರ ಪ್ರಾರ್ಥಿಸಿದರು. ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಟ್ರಸ್ಟಿ ಡಾ. ದೀಪಕ ಆಲೂರ ಕಾರ್ಯಕ್ರಮ ನಿರೂಪಿಸಿದರು, ಶ್ರೀನಿವಾಸ ವಾಡಪ್ಪಿ ವಂದಿಸಿದರು.

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

Article Image

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯು ಊರ ಹಾಗೂ ಪರವೂರ ದಾನಿಗಳಿಂದ ಜೀರ್ಣೋದ್ಧಾರಗೊಂಡಿದ್ದು, ಧಾಮ ಸಂಪ್ರೋಕ್ಷಣ ಮಹೋತ್ಸವವು ಫೆ. 28 (ಶುಕ್ರವಾರ) ಹಾಗೂ ಮಾರ್ಚ್ 1 (ಶನಿವಾರ) ಮತ್ತು 2 ರಂದು (ಭಾನುವಾರ) ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ ಎಂದು ಬಸದಿಯ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಹೆಗ್ಡೆ, ಎರ್ಮೆದೋಡಿ ಗುತ್ತು ಮತ್ತು ಕಾರ್ಯದರ್ಶಿ ಸುರೇಶ್ ಕುಮಾರ್, ಉಜಿರೆ ತಿಳಿಸಿದ್ದಾರೆ. ಫೆ:28: ಶುಕ್ರವಾರ: ಬೆಳಿಗ್ಗೆ ಗಂಟೆ 8 ರಿಂದ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ. ಅಪರಾಹ್ನ ಗಂಟೆ 2.30ರಿಂದ ನಾಂದಿಮಂಗಲ ಪೂಜಾವಿಧಾನ, ಕ್ಷೇತ್ರಪಾಲ ಪ್ರತಿಷ್ಠೆ, ನಾಗಪ್ರತಿಷ್ಠೆ, ಭಗವಾನ್ ಆದಿನಾಥ ಸ್ವಾಮಿಗೆ 24 ಕಲಶ ಅಭಿಷೇಕ, ಮಹಾಪೂಜೆ ಮಾ. 1: ಶನಿವಾರ: ಬೆಳಿಗ್ಗೆ 8 ಗಂಟೆಯಿಂದ ನಿತ್ಯವಿಧಿ ಸಹಿತ ವಾಸ್ತು ಪೂಜಾವಿಧಾನ, ನವಗ್ರಹ ಶಾಂತಿ, ಅಪರಾಹ್ನ ಗಂಟೆ 2 ರಿಂದ ಪದ್ಮಾವತಿ ದೇವಿಗೆ ರಜತಕವಚ ಸಮರ್ಪಣೆ, ಆರಾಧನೆ, ಲಕ್ಷ ಹೂವಿನ ಪೂಜೆ, ಭಗವಾನ್ ಆದಿನಾಥ ಸ್ವಾಮಿಗೆ ೫೪ ಕಲಶ ಅಭಿಷೇಕ, ಮಹಾಪೂಜೆ ಮಾ. 2: ಭಾನುವಾರ: ಬೆಳಿಗ್ಗೆ ಗಂಟೆ 8 ರಿಂದ ಧಾಮ ಸಂಪ್ರೋಕ್ಷಣೆ, ಭಗವಾನ್ ಆದಿನಾಥ ಸ್ವಾಮಿ ಪ್ರತಿಷ್ಠೆ, ಶಿಖರಾರೋಹಣ. ಅಪರಾಹ್ನ ಗಂಟೆ 3.30 ರಿಂದ ಭಕ್ತಾಮರ ಆರಾಧನೆ. ಭಗವಾನ್ ಆದಿನಾಥ ಸ್ವಾಮಿಗೆ 108 ಕಲಶ ಅಭಿಷೇಕ, ಮಹಾಪೂಜೆ, ತೋರಣ ವಿಸರ್ಜನೆ. ಸೇವಾಕರ್ತೃಗಳು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬಸ್ಥರು. ಪ್ರತಿಷ್ಠಾಚಾರ್ಯ ಬೆಳ್ತಂಗಡಿ ಜಯರಾಜ ಇಂದ್ರರು, ಪುಷ್ಪರಾಜ ಇಂದ್ರರು ಮತ್ತು ಸ್ಥಳ ಪುರೋಹಿತ ವೃಷಭರಾಜ ಇಂದ್ರರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸುವರು. ಧಾರ್ಮಿಕ ಸಭೆ: ಮಾ. 2 ರಂದು ಭಾನುವಾರ ಸಂಜೆ 5 ಗಂಟೆಯಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸುವರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಕಿಶೋರ್ ಹೆಗ್ಡೆ: ಮೊ: 9148659620

ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ

Article Image

ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ

ಭಾರತೀಯ ಜೈನ್ ಮಿಲನ್ ವಲಯ 8, ಮಂಗಳೂರು ವಿಭಾಗ ಇದರ ಆಶ್ರಯದಲ್ಲಿ ಬಂಟ್ವಾಳ ಜೈನ್ ಮಿಲನ್ ಮತ್ತು ಶ್ರೀ ಅನಂತಪಾರ್ಶ್ವ ಜೈನ್ ಮಿಲನ್, ಕುಪ್ಪೆಪದವು ಇವುಗಳ ಜಂಟಿ ಮಾಸಿಕ ಸಭೆ ಹಾಗೂ ಜಿನ ಭಜನ ವಿಜೇತ ತಂಡಗಳಿಗೆ ಪುರಸ್ಕಾರ ಸಮಾರಂಭ ಮತ್ತು ಮಾಹಿತಿ ಕಾರ್ಯಕ್ರಮವು ದಿನಾಂಕ 23- 2 -2025 ಆದಿತ್ಯವಾರ ಅಪರಾಹ್ನ 3.30ಕ್ಕೆ ಸರಿಯಾಗಿ ಕುಪ್ಪೆಪದವು ಅನಂತರಾಜ್ ಸಭಾಭವನದಲ್ಲಿ ನಡೆಯಿತು. ಪ್ರಾರಂಭದಲ್ಲಿ ನೇರೆಂಕಿ ಪಾರ್ಶ್ವನಾಥ್ ಮೂಡಬಿದ್ರೆ ಇವರು ಜೈನ ಬಸದಿಗಳ ದಾಖಲೀಕರಣದ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿವರಣೆಯೊಂದಿಗೆ ನಡೆಸಿಕೊಟ್ಟರು. ಬಳಿಕ ನಡೆದ ಮಾಸಿಕ ಸಭೆಯಲ್ಲಿ ನೇರಂಕಿ ಪಾರ್ಶ್ವನಾಥ್ ಇವರನ್ನು ಸನ್ಮಾನಿಸಲಾಯಿತು . ವಿಜೇತ ಜಿನಭಜನಾ ತಂಡಗಳಾದ ಅನಂತ ಶ್ರೀ ಜನಭಜನಾ ತಂಡ ಬಜಗೋಳಿ, ಬ್ರಾಹ್ಮಿ ಜಿನಭಜನಾ ತಂಡ ಮೂಡಬಿದ್ರೆ , ಸಮ್ಯಕ್ತ ಜಿನಭಜನಾ ತಂಡ, ಬಂಟ್ವಾಳ, ಅನಂತಪಾರ್ಶ್ವ ಜಿನಭಜನಾ ತಂಡ ಕುಪ್ಪೆ ಪದವು ಇದರ ಸದಸ್ಯರನ್ನು ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ. ಉಜ್ವಲ ಕಂಬಳಿ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಭಾಗ 8ರ ಉಪಾಧ್ಯಕ್ಷರಾದ ಸುದರ್ಶನ್ ಜೈನ್ ವಹಿಸಿದ್ದರು. ಮಧ್ವರಾಜ್ ಜೈನ್ ಅಧ್ಯಕ್ಷರು ಬಂಟ್ವಾಳ ಜೈನ್ ಮಿಲನ್, ಸ್ವರ್ಣ ಲತಾ ಅಜಿತ್ ಕುಮಾರ್ ಅಧ್ಯಕ್ಷರು ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆ ಪದವು ಉಪಸ್ಥಿತರಿದ್ದರು. ಜೈನ್ ಮಿಲನ್ ವಲಯ 8ರ ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಜೈನ್ ಜಿನಭಜನಾ ತಂಡಗಳಿಗೆ ಪುರಸ್ಕಾರ ನೀಡಿ ಅಭಿನಂದಿಸಿದರು. ವಲಯ ನಿರ್ದೇಶಕರಾದ ಸೋಮಶೇಖರ್ ಶೆಟ್ಟಿ, ಪ್ರಮೋದ್ ಕುಮಾರ್, ಶ್ರೀವರ್ಮ ಅಜ್ರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಡಾ. ಸುದೀಪ್ ಕುಮಾರ್ ಮಾಜಿ ಅಧ್ಯಕ್ಷರು, ಜೈನ್ ಮಿಲನ್ ಬಂಟ್ವಾಳ, ಭೋಜರಾಜ ಜೈನ್ ಸ್ಥಾಪಕ ಅಧ್ಯಕ್ಷರು ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆಪದವು ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಿಲನ್ ಕಾರ್ಯದರ್ಶಿಗಳಾದ ಭರತ್ ಕುಮಾರ್, ಹರ್ಷ ಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅನ್ವಿತಾ ಜೈನ್ ಸ್ವಾಗತಿಸಿ, ಸುಪ್ರಿಯಾ ಭರತ್ ಧನ್ಯವಾದ ನೀಡಿದರು. ಕಾಂಚನಶ್ರೀ, ನಿಶ್ಚಿತಾ ಜೈನ್ ಸನ್ಮಾನ ಪತ್ರವನ್ನು ಓದಿದರು. ಮಂಗಳೂರು ವಿಭಾಗ ಕಾರ್ಯದರ್ಶಿ, ವೀರ್ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು. ಜೈನ್ ಮಿಲನ್ ಕುಪ್ಪೆಪದವು ಆತಿಥ್ಯವನ್ನು ವಹಿಸಿದ್ದರು.

ಮೂಡುಬಿದಿರೆ: ಪ್ರಥಮ ವಾರ್ಷಿಕೋತ್ಸವ

Article Image

ಮೂಡುಬಿದಿರೆ: ಪ್ರಥಮ ವಾರ್ಷಿಕೋತ್ಸವ

ಮೂಡಬಿದಿರೆ: ಸಂಪೂರ್ಣ ಜೀರ್ಣೋದ್ಧಾರಗೊಂಡ ಶ್ರೀ ಶಾಂತಿನಾತ ಸ್ವಾಮಿ ಬಸದಿ, ಹಿರೇ ಅಮ್ಮನವರ ಬಸದಿ ಹಾಗೂ ಮೇಗಿನ ನೆಲೆಯ ಚತುರ್ವಿಂಶತಿ ತೀರ್ಥಂಕರರ ಬಸದಿ, ದ್ವಜಾಸ್ತಂಭ ಮತ್ತು ಚಂದ್ರಶಾಲೆ ಇದರ ಧಾಮ ಸಂಪ್ರೋಕ್ಷಣೆ ಹಾಗೂ ಪ್ರತಿಷ್ಠಾ ಮಹೋತ್ಸವವು ತಾ. 10.02.2024 ರಿಂದ 16.02.2024ರ ಪರ್ಯಂತ ವೈಭವಯುತವಾಗಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಂಡ ಮಹೋತ್ಸವದ ಪ್ರಥಮ ವಾರ್ಷಿಕೋತ್ಸವವು ಮೂಡಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತ ಭೂಷಣ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ನಾಳೆ (ಫೆ. 26) ಧಾಮ‍್ಕ ವಿಧಿವಿಧಾನಗಳೊಂದಿಗೆ ಜರಗಲಿರುವುದು.

ಹಂ.ಪ. ನಾಗರಾಜಯ್ಯ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ

Article Image

ಹಂ.ಪ. ನಾಗರಾಜಯ್ಯ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ

ಉಡುಪಿ, ಫೆ. 24: ಮಾಹೆ ವಿ.ವಿ.ಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡುವ ಟಿ. ವಿಮಲಾ ಪೈ ಪ್ರಾಯೋಜಿತ 2024ನೇ ಸಾಲಿನ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಹಿರಿಯ ಸಾಹಿತಿ ಪ್ರೊ| ಹಂ.ಪ. ನಾಗರಾಜಯ್ಯ(ಹಂಪನಾ) ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲ. ರೂ., ಪಾರಿತೋಷಕ, ಪ್ರಶಸ್ತಿಪತ್ರ ಒಳಗೊಂಡಿದೆ. ಮಾ.23ರಂದು ಗೋವಿಂದ ಪೈ ಸಂಶೋಧನ ಸಂಪುಟದ ದ್ವಿತೀಯ ಭಾಗದ ಬಿಡುಗಡೆ ಕಾರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಸಮಿತಿ ಸದಸ್ಯರಾದ ಡಾ| ತಾಳ್ತಜೆ ವಸಂತ ಕುಮಾರ್, ಡಾ| ಕೆ. ಚಿನ್ನಪ್ಪ ಗೌಡ, ಡಾ| ಪ್ರಭಾಕರ ಜೋಷಿ, ಡಾ| ಕಿಶೋರಿ ನಾಯಕ್‌, ಡಾ| ಎಸ್. ಪಾಡೀಗಾರ್ ಸಹಕರಿಸಿದ್ದಾರೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಪದವಿ ಪ್ರದಾನ

Article Image

ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಪದವಿ ಪ್ರದಾನ

ಜಮಖಂಡಿಯ ೧೦೦೮ ಶ್ರೀ ಪಾರ್ಶ್ವನಾಥ ದಿಗಂಬರ ಜೈನ್ ಮಂದಿರದ ಅರ್ಚಕರಾದ ಪಂಡಿತ್ ಬಾಹುಬಲಿ ಉಪಾಧ್ಯರವರಿಗೆ ಜಿಂಜರ್ ವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಪಂಚಕಲ್ಯಾಣ ಪ್ರತಿಷ್ಠ ಮಹಾಮಹೋತ್ಸವದಲ್ಲಿ “ಸಾಧನ ರತ್ನ” ಪ್ರಶಸ್ತಿಯನ್ನು ಹಾಗೂ ಜೈನ್ ಇಂಡಿಯನ್ ಟಿ.ವಿ ವತಿಯಿಂದ “ಕರ್ನಾಟಕ ಪುರೋಹಿತ ರತ್ನ” ಎಂಬ ಪದವಿಯನ್ನು ನೀಡಿ ಗೌರವಿಸಲಾಗಿದೆ. ಇವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ: ಪ್ರತಿಷ್ಠ ರತ್ನ, ಪ್ರತಿಷ್ಠ ಶಿರೋಮಣಿ, ಪ್ರತಿಷ್ಠ ಬಾಸ್ಕರ, ಪ್ರತಿಷ್ಠ ಪ್ರವೀಣ, ಪಂಡಿತರತ್ನ, ವಾಣಿಭೂಷಣ, ಪ್ರತಿಷ್ಠಾಚಾರ್ಯ.

ಮೈಸೂರು: ವಾರ್ಷಿಕ ಪೂಜಾ ಮಹೋತ್ಸವ

Article Image

ಮೈಸೂರು: ವಾರ್ಷಿಕ ಪೂಜಾ ಮಹೋತ್ಸವ

ಮೈಸೂರು: ಇಲ್ಲಿಯ ಶ್ರೀ ಆದಿನಾಥ ತೀರ್ಥಂಕರ ಸೇವಾ ಸಮಿತಿಯವರ ಆಶ್ರಯದಲ್ಲಿ ಶ್ರೀ ೧೦೦೮ ಆದಿನಾಥ ತೀರ್ಥಂಕರರ ಮೋಕ್ಷ ಕಲ್ಯಾಣ ಜಿನರಾತ್ರಿ ವಾರ್ಷಿಕ ಪೂಜಾ ಮಹೋತ್ಸವ ಆಚರಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಆದಿನಾಥ ಸಭಾಂಗಣ ಶ್ರೀ ಕ್ಷೇತ್ರ ಶ್ರೀರಂಗ ಪಟ್ಟಣದಲ್ಲಿ ದಿನಾಂಕ 27-02-2025ನೇ ಗುರುವಾರದಂದು ನಡೆಯಲಿದೆ. ಪಾವನ ಸಾನ್ನಿಧ್ಯ, ಆಶೀರ್ವಚನ: ಪ.ಪೂ. ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಶ್ರೀ ಕ್ಷೇತ್ರ ಕನಕಗಿರಿ ಅಧ್ಯಕ್ಷತೆ: ಬಿ.ಎಸ್. ಸಂತೋಷ್ ಕುಮಾರ, ಅಧ್ಯಕ್ಷರು, ಶ್ರೀ ಆದಿನಾಥ ಸೇವಾ ಟ್ರಸ್ಟ್, ಮೈಸೂರು ಉಪನ್ಯಾಸ: ಪಂಪ ಮಹಾಕವಿ ವಿರಚಿತ ಆದಿ ಪುರಾಣ ಉಪನ್ಯಾಸಕರು: ಡಾ. ಹೆಚ್.ಪಿ. ಮೋಹನ ಕುಮಾರ ಶಾಸ್ತ್ರಿ, ಕುಲಸಚಿವರು, ಆಚಾರ್ಯ ಗುರುಕುಲ, ಮೈಸೂರು ದಿವ್ಯ ಉಪಸ್ಥಿತಿ: ಪ್ರತಿಷ್ಟಾಚಾರ್ಯ ಎಸ್. ಎಂ. ಸನ್ಮತಿಕುಮಾರ ಶಾಸ್ತ್ರಿ, ಶ್ರೀರಂಗ ಪಟ್ಟಣ ಕ್ಷೇತ್ರ ಸಂರಕ್ಷಕರು ಮತ್ತು ಶ್ರಾವಿಕಭೂಷಣೆ ಪದ್ಮಲತಾ ಸನ್ಮತಿಕುಮಾರ, ಶ್ರೀ ಕ್ಷೇತ್ರ ಶ್ರೀ ರಂಗ ಪಟ್ಟಣ, ಮಂಡ್ಯ ಜಿಲ್ಲೆ.

First Previous

Showing 10 of 21 pages

Next Last