Article Image

ಎಕ್ಸಲೆಂಟ್: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ

Article Image

ಎಕ್ಸಲೆಂಟ್: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ

2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು 100% ಫಲಿತಾಂಶವನ್ನು ದಾಖಲಿಸುವುದರೊಂದಿಗೆ ಆದಿತ್ಯ ಆರ್. ಪುಣಚಿತ್ತಾಯ 620 ಅಂಕ ಗಳಿಸಿ ರಾಜ್ಯಕ್ಕೆ ಆರನೇ ಸ್ಥಾನವನ್ನು ಪಡೆದಿರುತ್ತಾರೆ. ಉಳಿದಂತೆ ಭಾರ್ಗವ ಭಟ್ (614), ಪೂರ್ಣಚಂದ್ರ ವಿ. (614), ಪೂರ್ವಿಕ್ (607), ತುಷಾರ್ (607), ಅಭಿಷೇಕ್ ಎಂ.ಸಿ. (605), ಹಿಮಧ್ವನಿ (601), ಕರಾಂಶು (601), ಕೃತಿಕಾ ಕಾಮತ್ (600), ಪವನ್ ಕಲ್ಯಾಣ್ (601) ಅಂಕವನ್ನು ಗಳಿಸಿರುತ್ತಾರೆ. ಅದೇ ರೀತಿ ವರುಣ್ ಆರ್. (599), ದ್ರುವ ಡೋಂಗ್ರೆ (598), ಯಶ್ ಭಿಡೆ (597), ಯಶಸ್ವಿನಿ ಎಸ್. (597), ಧನುಷ್ ಎಸ್. (595), ಪ್ರತೀಶ್ ಗೌಡ (595), ಶೆಝಾ ಶಕೀರ್ (595), ತನೀಷ್ ಜೈನ್ (595), ತನ್ಮಯಿ ಕೋರಿ (595), ಸಂಜೀತ್ ವೈ (594), ಅಕ್ಷರಾ (592), ಚೇತನ್ ಜೆ. (592), ಪ್ರೇರಣಾ (592), ಮೌಲ್ಯಾ ವೈ ಆರ್ ಜೈನ್ (591), ಡಿ. ಎಂ. ತನೀಷ್ (591), ಭವೇಶ್ ಜೆ. (589), ಅನ್ವಿತಾ ಕಾಮತ್ (588), ಉದಯ ಇ. (588), ಆರುಷ್ ಸಿ. (586), ಸುಜಲ್ ಶೆಟ್ಟಿ (586), ಪರಾಶ್ ಸಚಿನ್ (586), ಮೋನಿಷಾ ಆರ್. (582), ಪೂಜಿತ್ ಎಸ್. (582), ಪ್ರಾರ್ಥನಾ ಆರ್. (581), ತನನ್ ಗೌಡ (581), ಕಾರ್ತಿಕ್ ಸತ್ಯಪ್ಪ (580), ಅಂಕಗಳನ್ನು ಪಡೆಯುವುದರೊಂದಿಗೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಮತ್ತೊಮ್ಮೆ ಗುಣಮಟ್ಟದ ಶಿಕ್ಷಣವನ್ನು ಸಾಬೀತುಪಡಿಸಿದೆ. ಹಾಜರಾದ 161 ವಿದ್ಯಾರ್ಥಿಗಳಲ್ಲಿ 105 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಅಮೋಘ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ, ಮುಖ್ಯ ಶಿಕ್ಷಕರ ಹಾಗೂ ಶಿಕ್ಷಕರ ಈ ಸಾಧನೆಗೆ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಯಾದ ರಶ್ಮಿತಾ ಜೈನ್, ಆಡಳಿತ ನಿರ್ದೇಶಕರಾದ ಡಾ. ಸಂಪತ್ ಕುಮಾರ್ ಹಾಗೂ ಶೈಕ್ಷಣಿಕ ನಿರ್ದೇಶಕರಾದ ಪುಷ್ಪರಾಜ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿಯಲ್ಲಿ ಶೇಕಡ 100 ಫಲಿತಾಂಶ

Article Image

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿಯಲ್ಲಿ ಶೇಕಡ 100 ಫಲಿತಾಂಶ

ಧರ್ಮಸ್ಥಳ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಲಭಿಸಿದ್ದು, ಒಟ್ಟು 54 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳಿಗೆ ಏ+ ಹಾಗೂ 20 ವಿದ್ಯಾರ್ಥಿಗಳಿಗೆ ಏ ಗ್ರೇಡ್ ಲಭಿಸಿದ್ದು ಒಟ್ಟಾರೆಯಾಗಿ 29 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ಪ್ರಥಮ ದರ್ಜೆ, ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಅತ್ಯಧಿಕ 618 ಅಂಕಗಳೊಂದಿಗೆ ಶೇಕಡ 100 ಫಲಿತಾಂಶ ಲಭ್ಯವಾಗಿದ್ದು, ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಮತ್ತು ಹೆತ್ತವರಿಗೆ ಬಹಳ ಸಂತಸ ನೀಡಿದೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ. ವಿ. ಸಂತಸ ವ್ಯಕ್ತಪಡಿಸಿದ್ದಾರೆ. ಸಾಧನೆ ಮಾಡಿರುವ ಮಕ್ಕಳ ವಿವರ ಇಂತಿವೆ: ಹಂಸಿನಿ ಭಿಡೆ-618(98.9%), ಆಶಿತಾ-606(97%), ಭಾರ್ಗವಿ-604(96.6%), ಶ್ರಿವತ್ಸ ಯು.-598(95.7%), ಸುಮಿತ್ ಎಸ್.-597(95.5%), ಚಿನ್ಮಯಿ-596(95.4%), ಸುಶಾನ್-596(95.4%), ಸಮನ್ವಿ ಪಿ.-593(94.9%), ಅನ್ವಿತಾ ಹೆಬ್ಬಾರ್ ಎಮ್-586(93.8%), ಅಶ್ವಿಜ್-578(92.5%), ದೀಕ್ಷಾ-578(92.5%), ಸಾನ್ವಿ ಜೈನ್-570(91.2%), ಚಿನ್ನಮ್ಮ-569(91%), ಜೆಸ್ವಿನ್ ಕೆ. ಜೆ.-567(90.7%), ಅನಘಾ ಎಮ್.ಡಿ-558(89.3%), ಕುಶಾಲ್ ಆರಾಧ್ಯ-558(89.3%), ಅನಿಕಾ ಪಿ.-557(89.1%), ದೀಕ್ಷಾ ರೋಸ್-555(88.8%), ನಿಶಾಂತ್-547(87.5%), ಪೂರ್ವಿಕಾ ಆರ್.-547(87.5%), ಜೆಸ್ನಾ ಎಮ್. ಡಿ.-546(87.4%), ಆದಿತ್ಯಾ ಎಚ್. ಎಸ್.-544(87%), ರೇವಂತ್ ಮನೋಹರ್ ರಾವ್-543(86.9%), ಅಭಿಜ್ನಾನ್ ಎ. ಶೆಟ್ಟಿ-542(86.7%), ಅಪೇಕ್ಷಾ- 542(86.7%), ಅಶ್ವಲ್ ಹೆಬ್ಬಾರ್ ಎಮ್.-540(86.4%), ಪವಿತ್ರಾ ಜೈನ್-537 (85.9%), ಹರ್ಷಿತಾ ವಿ. ಆರ್.-533(85.3%), ನಿವೇದ್ಯಾ ಆರ್. ಬಿ.-533(85.3%).

ಮೂಡುಬಿದಿರೆ: ಎಕ್ಸಲೆಂಟ್ ಎಜುಕೇಶನ್ ಫೌಂಡೇಶನ್, 1 ಕೋಟಿ ರೂ. ವಿದ್ಯಾರ್ಥಿವೇತನ

Article Image

ಮೂಡುಬಿದಿರೆ: ಎಕ್ಸಲೆಂಟ್ ಎಜುಕೇಶನ್ ಫೌಂಡೇಶನ್, 1 ಕೋಟಿ ರೂ. ವಿದ್ಯಾರ್ಥಿವೇತನ

ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡುತ್ತಿರುವ ಮೂಡುಬಿದಿರೆಯ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿದ್ಯಾಸಂಸ್ಥೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆಯುವ ಆರ್ಥಿಕವಾಗಿ ಹಿಂದುಳಿದಿರುವ, ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸುಮಾರು 1 ಕೋಟಿ ರೂ ವಿದ್ಯಾರ್ಥಿವೇತನವನ್ನು ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಘೋಷಿಸಿದ್ದಾರೆ. ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಲು ಉದ್ದೇಶಿಸಿರುವ ಬಡ ಹಾಗೂ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡುವ ಉದ್ದೇಶದಿಂದ 10ನೇ ತರಗತಿಯಲ್ಲಿ 98% ಹಾಗೂ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಗೆ ವಿದ್ಯಾರ್ಥಿವೇತನದ ಮೂಲಕ ಶಿಕ್ಷಣ ನೀಡಲು ಸಂಸ್ಥೆ ತೀರ್ಮಾನಿಸಿದೆ ಈ ಅವಕಾಶವನ್ನು ಪ್ರತಿಭಾವಂತ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬಹುದು. ಸಂಸ್ಥೆಯು ಪಿಯುಸಿ ಶಿಕ್ಷಣದ ಜೊತೆಗೆ ಮೆಡಿಕಲ್ ಹಾಗೂ ಉನ್ನತ ತಾಂತ್ರಿಕ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ನೀಟ್/ಜೆಇಇ/ಸಿಇಟಿ/ಸಿಎ ಮುಂತಾದ ತರಬೇತಿಯನ್ನು ಕೊಡಲು ಅತ್ಯುನ್ನತ ತರಬೇತಿ ಕೌಶಲ್ಯವನ್ನು ಪಡೆದಿರುವ ಅಧ್ಯಾಪಕ ವೃಂದವನ್ನು ಹೊಂದಿರುತ್ತದೆ. ಈ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿ ಯು ಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ 20 ರಾಜ್ಯಮಟ್ಟದ ರ‍್ಯಾಂಕ್‌ಗಳಲ್ಲಿ 15 ರ‍್ಯಾಂಕ್‌ಗಳನ್ನು ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ಪಡೆದು ಅದ್ವಿತೀಯ ಸಾಧನೆಯನ್ನು ಮಾಡಿರುತ್ತಾರೆ. ಪ್ರತೀ ವರ್ಷವೂ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಾದ AIIMS, JIPMER, BOMBAY IIT, CHENAI IIT, BMC, MMC ಸೇರುತ್ತಿರುವುದು ಸಂಸ್ಥೆಯು ನೀಡುತ್ತಿರುವ ಅತ್ಯುತ್ತಮ ತರಬೇತಿ ವ್ಯವಸ್ಥೆಗೆ ಅತ್ಯುನ್ನತ ನಿದರ್ಶನವಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಬೋರ್ಡ್, ಐಸಿಎಸ್‌ಐ ಮತ್ತು ಸಿಬಿಎಸ್‌ಇ ನಡೆಸುವ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 98ಕ್ಕಿಂತ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳು ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿವೇತನದ ಮೂಲಕ ಶಿಕ್ಷಣ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೂಡುಬಿದಿರೆ ಕಲ್ಲಬೆಟ್ಟುವಿನ ಸಂಸ್ಥೆಯ ಆಡಳಿತ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಸಂಸ್ಥೆಯ ವೆಬ್‌ಸೈಟ್ – www.excellentmoodbidri.in

ರಜತ ರಥೋತ್ಸವ ಮತ್ತು ಮಹಾಮಸ್ತಕಾಭಿಷೇಕ

Article Image

ರಜತ ರಥೋತ್ಸವ ಮತ್ತು ಮಹಾಮಸ್ತಕಾಭಿಷೇಕ

ಕಾರ್ಕಳ ತಾಲೂಕಿನ ಶಿರ್ಲಾಲು ಬಸದಿಯ ಭಗವಾನ್ ಶ್ರೀ ಅನಂತನಾಥ ಸ್ವಾಮಿಯ ಮತ್ತು ಮಹಾಮಾತೆ ಶ್ರಿ ಪದ್ಮಾವತಿ ದೇವಿಯ ರಜತ ರಥಯಾತ್ರಾ ಮಹೋತ್ಸವ, ಸಿದ್ಧಗಿರಿ ಕ್ಷೇತ್ರದ ಭ|| ಶ್ರೀ ಆದಿನಾಥ ಸ್ವಾಮಿ ಮತ್ತು ಭ|| ಶ್ರೀ ಭರತ ಕೇವಲೀ ಸ್ವಾಮಿ ಹಾಗೂ ಭ|| ಶ್ರೀ ಬಾಹುಬಲಿ ಕೇವಲಿ ಸ್ವಾಮಿ ಜಿನ ಬಿಂಬಗಳಿಗೆ 108 ಕಲಶಗಳಿಂದ ಅಭಿಷೇಕ ಮತ್ತು ಮಸ್ತಕಾಭಿಷೇಕ ಮಹೋತ್ಸವವು ಶ್ರವಣಬೆಳಗೊಳ ಶ್ರೀ ಜೈನ ಮಠದ ಸ್ವರ್ಗೀಯ ಪ. ಪೂ. ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪ್ರೇರಣೆಯೊಂದಿಗೆ, ಕಾರ್ಕಳ ಶ್ರೀ ಜೈನ ಮಠದ ಪ. ಪೂ. ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವದಲ್ಲಿ ಮತ್ತು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತಭೂಷಣ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ಆಶೀರ್ವಚನದೊಂದಿಗೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ದಿನಾಂಕ 8-5-2024ನೇ ಬುಧವಾರ ಮೊದಲ್ಗೊಂಡು 10-5-2024ನೇ ಶನಿವಾರದಂದು ಸಂಪನ್ನಗೊಳ್ಳಲಿರುವುದು. ಅತಿಶಯ ಕ್ಷೇತ್ರ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಪರಿಸರದಲ್ಲಿ ಭ|| ಶ್ರೀ ಆದಿನಾಥ ಸ್ವಾಮಿ ಮತ್ತು ಭ|| ಶ್ರೀ ಭರತ ಕೇವಲೀ ಸ್ವಾಮಿ ಹಾಗೂ ಭ|| ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿಗಳನ್ನು ‘ಧರ್ಮರತ್ನಾಕರ’ ಶಿರ್ಲಾಲು ದೊಡ್ಡಮನೆ ಸ್ವರ್ಗಿಯ ರತ್ನವರ್ಮ ಪೂವಣಿ ದಂಪತಿಗಳು ದಿನಾಂಕ 18-02-2013ರಲ್ಲಿ ಪ್ರತಿಷ್ಠಾಪಿಸಿದ್ದಾರೆ

ವೇಣೂರು, ಮೇ 4: ಮಹಾಮಸ್ತಕಾಭಿಷೇಕ ಸಂಪನ್ನ

Article Image

ವೇಣೂರು, ಮೇ 4: ಮಹಾಮಸ್ತಕಾಭಿಷೇಕ ಸಂಪನ್ನ

ವೇಣೂರು ಫಲ್ಗುಣಿ ತಟದಲ್ಲಿ ನೆಲೆಸಿರುವ ವಿರಾಟ ವಿರಾಗಿ ಭಗವಾನ್ ಬಾಹುಬಲಿ ಸ್ವಾಮಿಗೆ ಫೆ. 22ರಿಂದ ಆರಂಭಗೊಂಡು ಮಾ. 1ರ ವರೆಗೆ ನೆರವೇರಿದ ಮಹಾಮಸ್ತಕಾಭಿಷೇಕದ ಬಳಿಕ ಪ್ರಮುಖ ದಿನಗಳಲ್ಲಿ ನೆರವೇರುವ ಮಸ್ತಕಾಭಿಷೇಕಗಳಲ್ಲಿ ಕೊನೆಯ ಮಹಾಮಸ್ತಕಾಭಿಷೇಕವು ಶನಿವಾರ ರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಸ್ತಕಾಭಿಷೇಕ ಪ್ರಾರಂಭವಾಗುವ ಮೊದಲು ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಹಾಗೂ ಚಾರಿತ್ರ ಚಕ್ರವರ್ತಿ ೧೦೮ ಶಾಂತಿ ಸಾಗರ ಮುನಿಮಹಾರಾಜರ ಆಚಾರ್ಯ ಪದರೋಹಣ, ಆಚಾರ್ಯ ೧೦೮ ವಿದ್ಯಾನಂದ ಮುನಿಮಹಾರಾಜರ ಜನ್ಮ ಶತಾಬ್ಧಿ ನಿಮಿತ್ತ ವೇಣೂರು ಪಾರ್ಶ್ವನಾಥ ಬಸದಿಯಿಂದ ಕಲ್ಲುಬಸದಿವರೆಗೆ ರಜತ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಮೂಡುಬಿದಿರೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವದಲ್ಲಿ, ಪ್ರಥಮ ಕಲಶವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಿದರು. ಪಟ್ಣ ಶೆಟ್ಟಿ ಸುದೇಶ್ ಕುಮಾರ್, ಪಡುಬೀಡು ಕಿನ್ಯಕ್ಕ ಅರಸ ರತ್ನಕರ ಬಲ್ಲಾಳ್, ಸತೀಶ್ ಪಡಿವಾಳ್, ಶ್ರೀಮಂದರ್ ಅರಿಗಾ ಕುಳವಳಿಕೆ ಕಡಬ, ಸಂಜಯಂತ್ ಕುಮಾರ್, ಧನಕೀರ್ತಿ ಬಲಿಪ ಕ್ರಮವಾಗಿ ವಿವಿಧ ಕಲಶ ನೆರವೇರಿಸಿದರು. ಮೂಡುಬಿದಿರೆ ಜೈನ ಮಠದ ವತಿಯಿಂದ ಅಮೆರಿಕಾದಲ್ಲಿ ವೈದ್ಯಕೀಯ ಸೇವೆ ಸಲ್ಲಿಸಿ, ಅಷ್ಟ ಗಂಧ ಅಭಿಷೇಕ ವಹಿಸಿಕೊಂಡ ಡಾ. ವಸಂತ ಕುಮಾರಯ್ಯ ದಂಪತಿ, ಅಜಿಲ ಅರಸರು, ಪ್ರವೀಣ್ ಇಂದ್ರ, ಅಭಯ ಚಂದ್ರ ಜೈನ್, ಪುಷ್ಪರಾಜ್ ಜೈನ್, ಶಿವಪ್ರಸಾದ್ ಅಜಿಲ ಹಾಗೂ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಾನಾ ಮಹಾನೀಯರನ್ನು ಸ್ವಾಮೀಜಿಯವರು ಗೌರವಿಸಿದರು. ಚಂದನ, ಸರ್ವ ಔಷಧ, ಸುಗಂಧ ಕಲಶ, ಕನಕವೃಷ್ಟಿ, ಪುಷ್ಪವೃಷ್ಟಿ ಈ ಬಾರಿಯ ಕೊನೆಯ ಮಸ್ತಕಾಭಿಷೇಕದಂದು ಹೆಚ್ಚುವರಿ ಅಭಿಷೇಕ ಹಮ್ಮಿಕೊಳ್ಳಲಾಗಿತ್ತು. 2036ರಲ್ಲಿ ಮುಂದಿನ ಅಭಿಷೇಕ: ವೇಣೂರಿನಲ್ಲಿ 12 ವರ್ಷಗಳ ಬಳಿಕ ನಡೆದ ತ್ಯಾಗವೀರ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸರ್ವಜನ ಶಾಂತಿಯ ಸಂದೇಶವಾಗಿ ಮೂಡಿಬಂದಿದೆ. 30 ಉಪಸಮಿತಿಗಳ ಅಚ್ಚುಕಟ್ಟಿನ ನಿರ್ವಹಣೆಯೊಂದಿಗೆ 9 ದಿನಗಳು ಇರುಳ ಬೆಳಕಲ್ಲಿ ನಡೆದ ಮಹಾಮಸ್ತಕಾಭಿಷೇಕ ಸ್ವರ್ಣ ಯುಗಕ್ಕೆ ಸಾಕ್ಷಿಯಾಗಿತ್ತು. ಬಳಿಕ ಪ್ರಮುಖ ದಿನಗಳಲ್ಲಿ ನೆರವೇರಿದ ಅಭಿಷೇಕದ ಕೊನೆಯ ಪ್ರಕ್ರಿಯೆ ಮೇ 4ರಂದು ಸಂಪನ್ನಗೊಂಡಿತು. ಮುಂದೆ ವೇಣೂರಿನ ವಿರಾಟ ವಿರಾಗಿಗೆ 2036ರಲ್ಲಿ ಮಹಾಮಸ್ತಕಾಭಿಷೇಕ ನೆರವೇರಲಿದೆ.

ನಾರಾವಿ ಬಸದಿ: ಧಾಮಸಂಪ್ರೋಕ್ಷಣಾ ಮತ್ತು ಪ್ರತಿಷ್ಠಾ ಮಹೋತ್ಸವ

Article Image

ನಾರಾವಿ ಬಸದಿ: ಧಾಮಸಂಪ್ರೋಕ್ಷಣಾ ಮತ್ತು ಪ್ರತಿಷ್ಠಾ ಮಹೋತ್ಸವ

ತಮ್ಮ ಪ್ರದೇಶದ ಮಠದ ಭಟ್ಟಾರಕರ ಅನುಮತಿ ಇಲ್ಲದೆ ಶ್ರಾವಕರು ಯಾವುದೇ ಸಂಪ್ರದಾಯ, ಪೂಜಾವಿಧಾನ, ಧಾರ್ಮಿಕ ಸಂಪ್ರದಾಯ ಬದಲಾಯಿಸಬಾರದು ಎಂದು ಮೂಡಬಿದಿರೆ ಶ್ರೀ ಜೈನ ಮಠದ ಪರಮ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಗಳವರು ಭಾನುವಾರ(ಮೇ 5) ನಾರಾವಿ ಬಸದಿಯಲ್ಲಿ ಜಿನಬಿಂಬ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಮಂಗಲ ಪ್ರವಚನ ನೀಡಿದರು. ನಿರ್ಮಲ ಮನಸ್ಸಿನಿಂದ ದೇವರಪೂಜೆ, ಗುರುಗಳ ಸೇವೆ ಮಾಡಿ, ಸ್ವಾಧ್ಯಾಯದ ಮೂಲಕ ತಮ್ಮ ವರ್ತನೆಯಲ್ಲಿ ಪರಿವರ್ತನೆ ಮಾಡಿಕೊಳ್ಳಬೇಕು. ಪಂಚೇಂದ್ರಿಯಗಳನ್ನು ಸತ್ಕಾರ್ಯಗಳಲ್ಲಿ ಬಳಸಿ ಪುಣ್ಯ ಸಂಚಯ ಮಾಡಿಕೊಳ್ಳಬೇಕು ಎಂದು ಕಾರ್ಕಳ ಶ್ರೀ ಜೈನ ಮಠದ ಪರಮ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಿದರು. ಧಾರ್ಮಿಕ ಉಪನ್ಯಾಸ ನೀಡಿದ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳರವರು ಮಾತನಾಡಿ, ಧಾಮಸಂಪ್ರೋಕ್ಷಣೆ ಸಂದರ್ಭದಲ್ಲಿ ನಮ್ಮನ್ನು ನಾವು ಶುದ್ಧಿಕರಿಸಿಕೊಳ್ಳಬೇಕು. ಆಚಾರ್ಯರುಗಳು ಬರೆದ ಧಾರ್ಮಿಕ ಗ್ರಂಥಗಳ ಸ್ವಾಧ್ಯಾಯ ಮಾಡಿ, ಮಕ್ಕಳಿಗೂ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು ಎಂದು ಸಲಹೆ ನೀಡಿದರು. ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ ಅಹಿಂಸೆ ಮತ್ತು ತ್ಯಾಗ ಜೈನಧರ್ಮದ ವಿಶೇಷ ತತ್ವಗಳಾಗಿದ್ದು ಎಲ್ಲರೂ ಇದನ್ನು ಅನುಸರಿಸಬೇಕು. ಧರ್ಮದ ಚೌಕಟ್ಟಿನೊಳಗೆ ಪುರುಷಾರ್ಥಗಳನ್ನು ಸಾಧಿಸಬೇಕು ಎಂದು ಸಲಹೆ ನೀಡಿದರು. ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ, ಮಂಗಳೂರಿನ ಪುಷ್ಪರಾಜ ಜೈನ್, ಬಂಟ್ವಾಳದ ಸುದರ್ಶನ ಜೈನ್ ಮತ್ತು ನಿವೃತ್ತ ಪ್ರಾಂಶುಪಾಲರಾದ ರಾಜವೀರ ಇಂದ್ರ ಶುಭಾಶಂಸನೆ ಮಾಡಿದರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಅಧ್ಯಕ್ಷತೆ ವಹಿಸಿದ್ದರು. ರಾಜವೀರ ಜೈನ್ ಸ್ವಾಗತಿಸಿದರು. ಕರುಣಾಕರ ಜೈನ್ ಧನ್ಯವಾದವಿತ್ತರು. ನಿರಂಜನ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ಭವ್ಯ ಅಗ್ರೋದಕ ಮೆರವಣಿಗೆ: ಅರಸಕಟ್ಟೆಯಿಂದ ನಾರಾವಿ ಬಸದಿವರೆಗೆ ಮೂರು ಕಿ.ಮೀ. ದೂರ ನಡೆದ ಭವ್ಯ ಮೆರವಣಿಗೆಯಲ್ಲಿ 24 ತೀರ್ಥಂಕರರ ಬಿಂಬಗಳನ್ನು ಬಸದಿಗೆ ತರಲಾಯಿತು. ನಾರಾವಿ, ಹೊಸ್ಮಾರು, ರೆಂಜಾಳ, ಅಳದಂಗಡಿ, ಈದು, ನೂರಾಳಬೆಟ್ಟು ಮೊದಲಾದ 24 ಗ್ರಾಮಗಳ ಶ್ರಾವಕರು-ಶ್ರಾವಕಿಯರು ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದರು. ಬಸದಿಯಲ್ಲಿ ಭಗವಾನ್ ಧರ್ಮನಾಥ ಸ್ವಾಮಿಯ ಪ್ರತಿಷ್ಠೆ, ಶಿಖರಾರೋಹಣ, ಭಗವಾನ್ ಚಂದ್ರನಾಥ ಸ್ವಾಮಿಯ ಪ್ರತಿಷ್ಠೆ, ಶಾಂತಿಚಕ್ರ ಆರಾಧನೆ, 24 ತೀರ್ಥಂಕರರ ಆರಾಧನೆ, ಅಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ರಕ್ತೇಶ್ವರಿ ದೈವದ ನೇಮ ನಡೆಯಿತು.

ನಾರಾವಿ ಬಸದಿ: ಜಿನಬಿಂಬ ಪ್ರತಿಷ್ಠಾ ಮಹೋತ್ಸವದ ಎರಡನೇ ದಿನ

Article Image

ನಾರಾವಿ ಬಸದಿ: ಜಿನಬಿಂಬ ಪ್ರತಿಷ್ಠಾ ಮಹೋತ್ಸವದ ಎರಡನೇ ದಿನ

ಬಸದಿಗೆ ಹೋಗಿ ದೇವರದರ್ಶನ ಮಾಡಿ, ವೃತ-ನಿಯಮಗಳೊಂದಿಗೆ ಜಪ, ತಪ, ಧ್ಯಾನ ಮಾಡಿದಾಗ ಆರೋಗ್ಯ ಸುಧಾರಣೆಯೊಂದಿಗೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ನಾರಾವಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾಮಹೋತ್ಸವ ಸಂದರ್ಭ ಆಯೋಜಿಸಿದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾನ, ಧರ್ಮಾದಿ ಸತ್ಕಾರ್ಯಗಳಿಗೆ ಅಂತಸ್ತು, ಸಂಪತ್ತಿನ ಇತಿ-ಮಿತಿ ಇರುವುದಿಲ್ಲ. ಶ್ರಾವಕರು, ಶ್ರಾವಕಿಯರು ಹಾಗೂ ಉದಾರ ದಾನಿಗಳು ಶ್ರದ್ಧಾ, ಭಕ್ತಿಯೊಂದಿಗೆ ತನು, ಮನ, ಧನದೊಂದಿಗೆ ನೀಡಿದ ದಾನ ಮತ್ತು ಸಕ್ರಿಯ ಸಹಕಾರದಿಂದ ಬಸದಿಯು ಆಕರ್ಷಕವಾಗಿ ಮೂಡಿ ಬಂದಿದೆ. ಬಸದಿಗೆ ಬಂದಾಗ ಇಲ್ಲಿ ಸ್ವಲ್ಪ ಹೊತ್ತು ಇದ್ದು ಧ್ಯಾನ, ಪ್ರಾರ್ಥನೆ, ಜಪ-ತಪ ಮಾಡುವ ಪ್ರೇರಣೆ ಸಿಗುತ್ತದೆ. ಇಂತಹ ಪವಿತ್ರ ಶ್ರದ್ಧಾ ಕೇಂದ್ರಗಳಿಂದ ಜೈನಧರ್ಮದ ಅಹಿಂಸೆ, ತ್ಯಾಗ, ಸಂಯಮ, ತಾಳ್ಮೆ ಮೊದಲಾದ ಮಾನವೀಯ ಮೌಲ್ಯಗಳೊಂದಿಗೆ ಆದರ್ಶ ಜೀವನ ನಡೆಸಲು ಸ್ಪೂರ್ತಿ, ಪ್ರೇರಣೆ ಸಿಗುತ್ತದೆ. ಜೈನರ ಪ್ರಭಾವದಿಂದ ಅನ್ಯಧರ್ಮಿಯರು ಕೂಡಾ ಮದ್ಯ, ಮಾಂಸ, ಮಧು ತ್ಯಾಗ, ರಾತ್ರಿಭೋಜನ ತ್ಯಾಗ ಮೊದಲಾದವುಗಳನ್ನು ಪಾಲಿಸಿ ಸಾತ್ವಿಕ ಜೀವನ ನಡೆಸುತ್ತಿರುವುದು ಶ್ಲಾಘನೀಯವಾಗಿದೆ. ನಾರಾವಿ ಬಸದಿ ಅತಿಶಯ ಕ್ಷೇತ್ರವಾಗಿ ಬೆಳೆಯಲಿ, ಬೆಳಗಲಿ ಎಂದು ಹೆಗ್ಗಡೆಯವರು ಹಾರೈಸಿದರು. ಆಶೀರ್ವಚನ ನೀಡಿದ ಕಾರ್ಕಳ ಜೈನಮಠದ ಪರಮ ಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು, ಆಚಾರ್ಯ ಪರಂಪರೆಯಿಂದ ದೇವರು, ಗುರುಗಳು ಮತ್ತು ಶಾಸ್ತ್ರದ ಮೂಲಕ ಧರ್ಮಪ್ರಭಾವನೆಯಾಗುತ್ತಿದೆ. ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಬಿಂಬ ಪ್ರತಿಷ್ಠಾಪನೆ ಮಾಡಿದಾಗ ಮಂದಿರದಲ್ಲಿ ಸಾನ್ನಿಧ್ಯ ವೃದ್ಧಿಯೊಂದಿಗೆ ಶ್ರದ್ಧಾ ಕೇಂದ್ರವಾಗಿ ಬೆಳೆಯುತ್ತದೆ, ಬೆಳಗುತ್ತದೆ ಎಂದರು. ಮೂಡಬಿದ್ರೆಯ ವಕೀಲರಾದ ಶ್ವೇತಾ ಜೈನ್, ಧಾರ್ಮಿಕ ಉಪನ್ಯಾಸ ನೀಡಿ, ಧರ್ಮದ ಮರ್ಮವನ್ನರಿತು ನಿತ್ಯವೂ ಅನುಷ್ಠಾನಗೊಳಿಸಬೇಕು. ಆತ್ಮ ಬೇರೆ, ದೇಹ ಬೇರೆ ಎಂಬ ಸತ್ಯವನ್ನರಿತು ದೇವರ ದರ್ಶನ, ಪ್ರಾರ್ಥನೆ, ಧ್ಯಾನ, ಉಪವಾಸ ಮೊದಲಾದ ವೃತ-ನಿಯಮಗಳ ಪಾಲನೆಯೊಂದಿಗೆ ಕರ್ಮನಿರ್ಜರೆ ಮಾಡಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು ಎಂದು ಅವರು ಸಲಹೆ ನೀಡಿದರು. ಕಾರ್ಕಳದ ಹಿರಿಯ ವಕೀಲ ಎಂ. ಕೆ. ವಿಜಯಕುಮಾರ್ ಮಾತನಾಡಿ, ಬಸದಿ ಜೀರ್ಣೋದ್ಧಾರದಿಂದ ಧರ್ಮಜಾಗೃತಿಯೊಂದಿಗೆ ಧರ್ಮಪ್ರಭಾವನೆಯೂ ಆಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಯುವಜನತೆ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಶ್ಲಾಘನೀಯವಾಗಿದೆ. ಜೈನಧರ್ಮ ಸಾರ್ವಕಾಲಿಕ ಧರ್ಮವಾಗಿದ್ದು, ಬಸದಿಗಳ ಜೀರ್ಣೋದ್ಧಾರದಿಂದ ಧರ್ಮಪ್ರಭಾವನೆಯಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಮೂಡಬಿದ್ರೆಯ ನ್ಯಾಯವಾದಿ ಶ್ವೇತಾ ಜೈನ್ ಅವರನ್ನು ಅಭಿನಂದಿಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮೂಡಬಿದ್ರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್, ವಸಂತ ಭಟ್ ನಾರಾವಿ ಉಪಸ್ಥಿತರಿದ್ದರು. ಅರವಿಂದ ಜೈನ್ ಸ್ವಾಗತಿಸಿದರು. ಕರುಣಾಕರ ಜೈನ್ ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದವಿತ್ತರು.

ನಿರಂಜನ ಲಹರಿ ಆಯೋಜಿಸಿರುವ ಭಾಷಣ ಸ್ಪರ್ಧೆ

Article Image

ನಿರಂಜನ ಲಹರಿ ಆಯೋಜಿಸಿರುವ ಭಾಷಣ ಸ್ಪರ್ಧೆ

ನಿರಂಜನ ಲಹರಿಯು “ಭಗವಾನ್ ಮಹಾವೀರ” ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ನಿಯಮಗಳು: 1. 15 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ 2. ಭಾಷಣದ ವೀಡಿಯೋ 5 ನಿಮಿಷದ ಒಳಗಿರಬೇಕು 3. ಮೊಬೈಲ್ ಅಡ್ಡಲಾಗಿ(horizontal) ಹಿಡಿದು ಚಿತ್ರೀಕರಿಸಿರಬೇಕು 4. ವೀಡಿಯೋ ಬಂದ ಕೂಡಲೇ ನಿರಂಜನ ಲಹರಿ ಯೂಟ್ಯೂಬ್ ಗೆ upload ಮಾಡಲಾಗುವುದು 5. ವೀಡಿಯೋ ಜೊತೆ ಪ್ರತ್ಯೇಕವಾಗಿ ಹೆಸರು/ ಊರು/ ನಂಬರ್ ನಮೂದಿಸಬೇಕು 6. ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಾಧಾನಕರ ಬಹುಮಾನ ಇರುತ್ತದೆ. 7. ಅತೀ ಹೆಚ್ಚು ಯೂಟ್ಯೂಬ್ ಲೈಕ್‌ಗೆ ಒಂದು ವಿಶೇಷ ಬಹುಮಾನ ಇರುತ್ತದೆ. 8. ನಿಮ್ಮ ವೀಡಿಯೋಗಳನ್ನು ಹಾಕಿ ಲಿಂಕ್ ಕೊಡಲಾಗುವುದು 9. ಲೈಕ್ ಗಾಗಿ ವೀಡಿಯೋ ಲಿಂಕ್ ಗಳನ್ನು ನೀವೇ ಪ್ರಚಾರ ಮಾಡಬೇಕು 10. ವೀಡಿಯೋಗಳನ್ನು ಕಳುಹಿಸಲು ಕೊನೆಯ ದಿನಾಂಕ - 15.05.2024 11. ಭಾಷಣವು ಕನ್ನಡ ಭಾಷೆಯಲ್ಲಿ ಮಾತ್ರ ಇರಬೇಕು ವೀಡಿಯೋ ಕಳುಹಿಸಬೇಕಾದ ವಾಟ್ಸಾಪ್ ಮತ್ತು ಟೆಲಿಗ್ರಾಂ ನಂಬರ್: 9945563529

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Article Image

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

ಜೈನಧರ್ಮವು ಅತ್ಯಂತ ಪ್ರಾಚೀನ ಮತ್ತು ಶ್ರೇಷ್ಠ ಧರ್ಮವಾಗಿದ್ದು ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬುದು ಜೈನಧರ್ಮದ ಸಾರವಾಗಿದೆ ಎಂದು ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿಮಠದ ಪೂಜ್ಯ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿಗಳವರು ಹೇಳಿದರು. ಅವರು ಶುಕ್ರವಾರ(ಮೇ 3)ನಾರಾವಿಯಲ್ಲಿ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಮಂಗಲ ಪ್ರವಚನ ನೀಡಿದರು. ಜೈನರ ಶ್ರದ್ಧಾಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿದ್ದು, ನಿತ್ಯವೂ ಧರ್ಮದ ಅನುಷ್ಠಾನಕ್ಕೆ ಸ್ಪೂರ್ತಿ, ಪ್ರೇರಣೆ ನೀಡುತ್ತವೆ. ಅಹಿಂಸೆ ಮತ್ತು ತ್ಯಾಗವನ್ನು ಪಾಲಿಸುವವರೆಲ್ಲ ಜೈನರೇ ಆಗುತ್ತಾರೆ. ತೀರ್ಥಂಕರರು ತಮ್ಮ ದಿವ್ಯಧ್ವನಿಯಿಂದ ಧರ್ಮೋಪದೇಶ ನೀಡುವ ಧರ್ಮಸಭೆಯೇ ಸಮವಸರಣವಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಗೆ ಜೈನಧರ್ಮ ಅಪೂರ್ವ ಹಾಗೂ ಅಪಾರ ಕೊಡುಗೆ ನೀಡಿದೆ. ಕಾಲಕಾಲಕ್ಕೆ ಬಸದಿಗಳ ಜೀರ್ಣೋದ್ಧಾರ ಮತ್ತು ಧಾಮಸಂಪ್ರೋಕ್ಷಣೆಯಿಂದ ಸಾನ್ನಿಧ್ಯ ವೃದ್ಧಿಯಾಗಿ ಊರಿನಲ್ಲಿ ಸುಖ-ಶಾಂತಿ, ನೆಮ್ಮದಿ ನೆಲೆಸುತ್ತದೆ. ಆಧ್ಯಾತ್ಮಿಕ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸ್ವಾಮೀಜಿಯವರು ಹೇಳಿದರು. ಆಶೀರ್ವಚನ ನೀಡಿದ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು, ಸಮವಸರಣದ ಪ್ರತೀಕವಾದ ಬಸದಿಗಳು ನಮ್ಮನ್ನು ನಾವು ತಿದ್ದಿಕೊಂಡು ಸುಧಾರಣೆ ಮಾಡಲು ಪ್ರೇರಣೆ ನೀಡುತ್ತವೆ. ಶ್ರದ್ದಾ-ಭಕ್ತಿಯಿಂದ ನಿತ್ಯವೂ ಬಸದಿಗೆ ಹೋಗಿ ಏಕಾಗ್ರತೆಯಿಂದ ದೇವರ ದರ್ಶನ, ಜಪ, ತಪ, ಧ್ಯಾನ ಮಾಡಿದಾಗ ಆತ್ಮಕಲ್ಯಾಣವಾಗುತ್ತದೆ. ಶ್ರಾವಕರು, ಶ್ರಾವಕಿಯರು ಹಾಗೂ ದಾನಿಗಳೆಲ್ಲ ಸೇರಿ ಒಗ್ಗಟ್ಟಿನಿಂದ ಬಸದಿ ಜೀರ್ಣೋದ್ಧಾರ ಮಾಡಿದ ಬಗ್ಗೆ ಸ್ವಾಮೀಜಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ರವರು ಮಾತನಾಡಿ ಜೈನರ ಆಚಾರ-ವಿಚಾರ, ನೇರ ನಡೆ-ನುಡಿ ಹಾಗೂ ನಾಯಕತ್ವ ಗುಣದಿಂದಾಗಿ ಸಮಾಜದಲ್ಲಿ ಜೈನರಿಗೆ ವಿಶೇಷ ಮಾನ್ಯತೆ, ಗೌರವ ಇದೆ. ಜೈನರು ವೃತ-ನಿಯಮಗಳ ಪಾಲನೆಯೊಂದಿಗೆ ಆದರ್ಶ ಹಾಗೂ ಸಾತ್ವಿಕ ಜೀವನ ನಡೆಸುತ್ತಿದ್ದಾರೆ. ಬದುಕು ಮತ್ತು ಬದುಕಲು ಬಿಡು ಎಂಬುದು ಜೈನಧರ್ಮದ ಶ್ರೇಷ್ಠ ತತ್ವವಾಗಿದೆ ಎಂದು ಅವರು ಹೇಳಿದರು. ಶಿಶುಪಾಲ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಜಿರೆಯ ಮಹಾವೀರ ಜೈನ್ ಇಚಿಲಂಪಾಡಿ ಧಾರ್ಮಿಕ ಉಪನ್ಯಾಸ ನೀಡಿದರು. ವೇಣೂರು ಜೈನ ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ, ನಾರಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜವರ್ಮ ಜೈನ್, ಆಡಳಿತ ಸಮಿತಿ ಕಾರ್ಯಾಧ್ಯಕ್ಷ ಪ್ರೇಮ್ ಕುಮಾರ್ ಹೊಸ್ಮಾರು, ಅಧ್ಯಕ್ಷ ನಿರಂಜನ ಅಜ್ರಿ, ಎಂ.ಕೆ. ಆರಿಗ ಮರೋಡಿ ಮತ್ತು ಹರ್ಷೇಂದ್ರ ಕುಮಾರ್ ನೂರಾಳಬೆಟ್ಟು ಉಪಸ್ಥಿತರಿದ್ದರು. ಬಸದಿಯಲ್ಲಿ ಇಂದ್ರ ಪ್ರತಿಷ್ಠೆ, ತೋರಣ ಮುಹೂರ್ತ, ವಿಮಾನಶುದ್ಧಿ, ವಾಸ್ತುಪೂಜೆ, ಕ್ಷೇತ್ರಪಾಲ ಪ್ರತಿಷ್ಠೆ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಈ ಸಂದರ್ಭದಲ್ಲಿ ಸೇವಾಕರ್ತೃಗಳನ್ನು ಮತ್ತು ದಾನಿಗಳನ್ನು ಗೌರವಿಸಲಾಯಿತು. ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ ಕುಮಾರ್ ಜೈನ್ ಸ್ವಾಗತಿಸಿದರು. ಕರುಣಾಕರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ಜೈನ ಶ್ರಾವಕ ಶ್ರಾವಕಿಯರಿಗೆ ಆಯೋಜಿಸಿದ ರಾಜ್ಯ ಮಟ್ಟದ ಸ್ಪರ್ಧೆಗಳ ಫಲಿತಾಂಶ ಪ್ರಕಟ

Article Image

ಜೈನ ಶ್ರಾವಕ ಶ್ರಾವಕಿಯರಿಗೆ ಆಯೋಜಿಸಿದ ರಾಜ್ಯ ಮಟ್ಟದ ಸ್ಪರ್ಧೆಗಳ ಫಲಿತಾಂಶ ಪ್ರಕಟ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಮಾಗಣೆ ಭ|| ೧೦೦೮ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮೇ 3 ರಿಂದ ಮೇ 5 ವರೆಗೆ ನಡೆಯಲಿದೆ. ಈ ಪ್ರಯುಕ್ತ ಜೈನ ಶ್ರಾವಕ, ಶ್ರಾವಕಿಯರಿಗೆ ಆಯೋಜಿಸಿದ ರಾಜ್ಯ ಮಟ್ಟದ ಸ್ಪರ್ಧೆಗಳ ವಿಜೇತರನ್ನು ಆಯ್ಕೆ ಮಾಡಲಾಯಿತು. ವಿಜೇತರ ವಿವರಗಳು ಇಂತಿವೆ : 1. ಧರ್ಮನಾಥ ಸ್ವಾಮಿಯ ಸಂಗೀತ/ಭಜನೆ ಸ್ಪರ್ಧೆ ಪ್ರಥಮ ಬಹುಮಾನ : ನವೀನ್ ಪ್ರಸಾದ್ ಜಾಂಬ್ಳೆ, ಬೆಂಗಳೂರು ದ್ವಿತೀಯ ಬಹುಮಾನ : ಸರ್ವಾರ್ಥ್. ಎಸ್. ಜೈನ್ ,ವೇಣೂರು 2. "ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ" - ಪ್ರಬಂಧ ಸ್ಪರ್ಧೆ ಪ್ರಥಮ ಬಹುಮಾನ : ಅಶ್ವಿಕಾ ಜೈನ್, ನೂರಾಳ್ ಬೆಟ್ಟು ದ್ವಿತೀಯ ಬಹುಮಾನ : ನಾಗರತ್ನ ನಾಗರಾಜ್, ಬೆಂಗಳೂರು ವಿಜೇತರನ್ನು ದಿನಾಂಕ 5 ಮೇ ರಂದು ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು.

ವೇಣೂರು: ಶ್ರೀ ಬಾಹುಬಲಿ ಸ್ವಾಮಿಯ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕ

Article Image

ವೇಣೂರು: ಶ್ರೀ ಬಾಹುಬಲಿ ಸ್ವಾಮಿಯ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕ

ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಹಸನ್ಮುಖಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವು ಫೆ. 22ರಿಂದ ಮಾ. 1ರ ತನಕ ಸಡಗರ, ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿದ್ದು, ತದನಂತರ ಮಾ. 16 ಮತ್ತು ಏ. 13ರಂದು ಮತ್ತೊಮ್ಮೆ ಮಸ್ತಕಾಭಿಷೇಕ ನಡೆದು, ಇದೀಗ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದೊಂದಿಗೆ ಇಂದು ಜರುಗಲಿದೆ.

ನಾರಾವಿ: ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ

Article Image

ನಾರಾವಿ: ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಮಾಗಣೆ ಭ|| 1008 ಶ್ರೀ ಧರ್ಮನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವವು ಕಾರ್ಕಳ ಶ್ರೀ ಜೈನಮಠದ ಪ. ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಮತ್ತು ನಾಡಿನ ಸಮಸ್ತ ಶ್ರೀ ಜೈನ ಮಠದ ಭಟ್ಟಾರಕರುಗಳ ಪಾವನ ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಇಂದಿನಿಂದ(ಮೇ. 3) ಪ್ರಾರಂಭಗೊಂಡು ಮೇ. 5ರತನಕ ಜರುಗಲಿರುವುದು.

ಎಳನೀರು: 20ನೇ ವಾರ್ಷಿಕೋತ್ಸವ

Article Image

ಎಳನೀರು: 20ನೇ ವಾರ್ಷಿಕೋತ್ಸವ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಳನೀರು ಭ|| 1008 ಶ್ರೀ ಆದಿನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಬಿಂಬ ಪ್ರತಿಷ್ಠಾ ಮಹೋತ್ಸವದ 20ನೇ ವಾರ್ಷಿಕೋತ್ಸವವು ದಿನಾಂಕ 30-04-2024 ಮತ್ತು 01-05-2024 ರಂದು ಜರುಗಲಿದೆ. ವಿ.ಸೂ: ದಿನಾಂಕ 01-05-2024ನೇ ಬುಧವಾರ ಸಂಜೆ 7.00 ರಿಂದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದವರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ದೆಹಲಿ: ಜಿನ ಬಸದಿ 24 ತೀರ್ಥಂಕರರ ಪಂಚ ಕಲ್ಯಾಣ-ವಿವಿಧ ಜಿನ ಬಿಂಬಗಳ ಸ್ಥಾಪನೆ

Article Image

ದೆಹಲಿ: ಜಿನ ಬಸದಿ 24 ತೀರ್ಥಂಕರರ ಪಂಚ ಕಲ್ಯಾಣ-ವಿವಿಧ ಜಿನ ಬಿಂಬಗಳ ಸ್ಥಾಪನೆ

ಮುಂಬಯಿ, ಏ.25: ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿಯಲ್ಲಿ 24 ತೀರ್ಥಂಕರರ ಪಂಚ ಕಲ್ಯಾಣವು ರಾಷ್ಟ್ರಸಂತ ೧೦೮ ಉಪಾಧ್ಯಾಯ ಗುಪ್ತಿ ಸಾಗರ ಮುನಿಮಹಾರಾಜರ ಮಾರ್ಗದರ್ಶನ, ಪಾವನ ಸಾನ್ನಿಧ್ಯದಲ್ಲಿ ಮೂಡಬಿದಿರೆ ಶ್ರೀ ದಿಗಂಬರ ಜೈನ ಮಠದ, ಭಾರತ ಭೂಷಣ ಜಗದ್ಗುರು ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಇಂದು ಜರುಗಿತು. ಮೂರು ಆಡಿ ಎತ್ತರದ ಪಂಚ ಲೋಹದ ಇಪ್ಪತ್ತನಾಲ್ಕು ತೀರ್ಥಂಕರರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ, ಮೋಕ್ಷ ಕಲ್ಯಾಣ ಪೂಜೆ, ನಂತರ ದೆಹಲಿ ವಿಶ್ವ ವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಿಂದ ಮೆರವಣಿಗೆ ಮೂಲಕ ಮೂರು ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆಯಿಂದ ಮಧ್ಯಾಹ್ನವರೆಗೂ ದೆಹಲಿ ರಾಣಾಪತ್ ನಗರದ ಬಸದಿಯಲ್ಲಿ ಮೂರ್ತಿ ಸ್ಥಾಪನೆ ಜರುಗಿತು. ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಸ್ತಿಶ್ರೀ ಡಾ|| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರು ಜಿನ ಬಿಂಬ ಸ್ಥಾಪನೆಯಿಂದ ಆತ್ಮಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು, ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ಹೇಳುತ್ತಾ, ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಿ ಹರಸಿದರು. ರಾಷ್ಟ್ರಸಂತ ೧೦೮ ಗುಪ್ತಿ ಸಾಗರ ಮುನಿಮಹಾರಾಜರು ಮೂಡುಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿ ಹರಸಿ ಆಶೀರ್ವಾದಿಸಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ ರಾಷ್ಟ್ರಸಂತ ೧೦೮ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜರು ಶ್ರೀಗಳಿಗೆ ಗೌರವಾನ್ವಿತ ಪ್ರಧಾನ ಮಂತ್ರಿಗಳಿಂದ ಏ.21 ರ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂಪಾಯಿ 100ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದಕ್ಷೇತ್ರ ಫಸ್ಟೇಡ್ ಕವರ್ ನೀಡಿ ಹರಸಿದರು. ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿಯವರು ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಮುನಿಮಹಾರಾಜರ ಆಚಾರ್ಯ ಶತಾಬ್ಧಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣವನ್ನು ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

ಮೂಡುಬಿದಿರೆ: ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಆಚರಣೆ

Article Image

ಮೂಡುಬಿದಿರೆ: ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಆಚರಣೆ

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಜೈನ ಸಮಾಜ ಬಾಂಧವರ ಸಹಕಾರದೊಂದಿಗೆ ಭ| ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಆಚರಣೆಯು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ವಿದ್ಯಾಗಿರಿಯ ಮೋಹಿನಿ ಅಪ್ಪಾಜಿ ನಾಯಕ್ ಸಭಾಭವನದಲ್ಲಿ ಏ.27 (ನಾಳೆ)ರಂದು ಜರಗಲಿರುವುದು.

ಇಜಿಲಂಪಾಡಿ: ಧಾಮ ಸಂಪ್ರೋಕ್ಷಣಾಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

Article Image

ಇಜಿಲಂಪಾಡಿ: ಧಾಮ ಸಂಪ್ರೋಕ್ಷಣಾಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಇಜಿಲಂಪಾಡಿ ಭಗವಾನ್ ೧೦೦೮ ಶ್ರೀ ಅನಂತನಾಥ ಸ್ವಾಮಿ ಬಸದಿಯು ಸಂಪೂರ್ಣ ಶಿಲಾಮಯವಾಗಿ ಜೀಣೋದ್ಧಾರಗೊಂಡು, ಧಾಮ ಸಂಪ್ರೋಕ್ಷಣಾಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಹಾಗೂ ಮಾರ್ಗದರ್ಶನದಲ್ಲಿ, ನಾಡಿನ ಎಲ್ಲಾ ಶ್ರೀ ಮಠದ ಪ.ಪೂ. ಭಟ್ಟಾರಕ ಸ್ವಾಮೀಜಿಗಳವರ ಆರ್ಶೀವಾದಗಳೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ, ದಿನಾಂಕ 26-04-2024ನೇ ಶುಕ್ರವಾರ ಮೊದಲ್ಗೊಂಡು ದಿನಾಂಕ 28-04-2024ನೇ ಭಾನುವಾರ ಪರ್ಯಂತ ಜೈನ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿರುವುದು.

ನರಸಿಂಹರಾಜಪುರ: ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

Article Image

ನರಸಿಂಹರಾಜಪುರ: ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

ಶ್ರೀ ಜ್ವಾಲಾಮಾಲಿನಿ ದೇವಿ ಅತಿಶಯ ಕ್ಷೇತ್ರ ಸಿಂಹನಗದ್ದೆ ನರಸಿಂಹರಾಜಪುರ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸುತ್ತಿರುವ ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ನೀಡಲಾಗುತ್ತಿದೆ. 2024-25ನೇ ಸಾಲಿನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳ ನೋಂದಣಿ ಆರಂಭವಾಗಿದೆ. ಜೈನ ಪೋಷಕರು ಬಾಲಕರನ್ನು ವಿದ್ಯಾಪೀಠದ ಪ್ರವೇಶಕ್ಕೆ ತಮ್ಮ ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳೊಂದಿಗೆ ಸಂಪರ್ಕಿಸಬೇಕಾಗಿ ಅಪೇಕ್ಷಿಸಲಾಗಿದೆ. ಸಂಪರ್ಕ: ಶ್ರೀ ಜ್ವಾಲಾಮಾಲಿನಿ ದೇವಿ ಅತಿಶಯ ಕ್ಷೇತ್ರ ಪೆನುಗೊಂಡೆ ದಿಗಂಬರ ಜೈನ ಮಹಾಸಂಸ್ಥಾನ ಮಠ ಸಿಂಹನಗದ್ದೆ ಬಸ್ತಿಮಠ, ನರಸಿಂಹರಾಜಪುರ - 577134 ಮೊ: 8277741008, 08266220609

ಫಿಜೋಥೆರಪಿ ಪದವಿಯಲ್ಲಿ ಸನ್ನಿಧಿ ಜೈನ್‌ರವರು ಉತ್ತಮ ಅಂಕ

Article Image

ಫಿಜೋಥೆರಪಿ ಪದವಿಯಲ್ಲಿ ಸನ್ನಿಧಿ ಜೈನ್‌ರವರು ಉತ್ತಮ ಅಂಕ

ಬೆಂಗಳೂರು ರಾಜೀವ್ ಗಾಂಧಿ ವೈದ್ಯಕೀಯ ವಿಶ್ವ ವಿದ್ಯಾಲಯ ವ್ಯಾಪ್ತಿಯಲ್ಲಿ ಇರುವ ಮೂಡಬಿದಿರೆಯ ಆಳ್ವಾಸ್ ವೈದ್ಯಕೀಯ ಕಾಲೇಜು, ಫಿಜೋಥೆರಫಿ ವೈದ್ಯಕೀಯ ವಿಭಾಗದ ಡಾಕ್ಟರ್ ಫಿಜೋಥೆರಪಿ ಪದವಿಯಲ್ಲಿ ಸನ್ನಿಧಿ ಜೈನ್‌ರವರು ಉತ್ತಮ ಅಂಕಗಳನ್ನು ಪಡೆದಿದ್ದಾರೆ. ಇವರು ನಾರಾವಿ ಹಂಬಡದ ಸಂಧ್ಯಾ ಮತ್ತು ಮುನಿರಾಜ್ ಜೈನ್ ಇವರ ಸುಪುತ್ರಿ.

ಧರ್ಮಸ್ಥಳ: ವಿಷು ಜಾತ್ರೆ ಸಂಪನ್ನ

Article Image

ಧರ್ಮಸ್ಥಳ: ವಿಷು ಜಾತ್ರೆ ಸಂಪನ್ನ

ಬೆಳ್ತಂಗಡಿ, ಏ. 23: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಎ. 13ರಂದು ಮೊದಲ್ಗೊಂಡು ಎ. 23ರಂದು ಶ್ರೀ ಮಂಜುನಾಥ ಸ್ವಾಮಿಯ ಉತ್ಸವ ಮೂರ್ತಿ ಓಕುಳಿಯಾಗಿ ನೇತ್ರಾವತಿ ನದಿಯಲ್ಲಿ ಅವಭೃಥ ಸ್ನಾನ ಹಾಗೂ ಧ್ವಜಾವರೋಹಣದೊಂದಿಗೆ ಭಕ್ತಿ, ಸಂಭ್ರಮದಿಂದ ವಿಧ್ಯುಕ್ತವಾಗಿ ಸಂಪನ್ನಗೊಂಡಿತು. ಎ.22ರಂದು ರಾತ್ರಿ ಶ್ರೀ ಸ್ವಾಮಿಯ ಮಹಾರಥೋತ್ಸವ ಪ್ರಯುಕ್ತ ದೇವಸ್ಥಾನದ ಒಳಾಂಗಣದಲ್ಲಿ ಉತ್ಸವ ಮೂರ್ತಿಯ ಉಡ್ಕು ಹಾಗೂ ವಿವಿಧ ವಾದ್ಯ ವೈಭವಗಳ ನಾಲ್ಕು ಸುತ್ತು ಬಲಿ ಉತ್ಸವ ನಡೆದು, ಹೊರಾಂಗಣದಲ್ಲಿ ಚೆಂಡೆ, ನಾದಸ್ವರ, ಶಂಖ ಜಾಗಟೆ, ಬ್ಯಾಂಡ್ ವಾಲಗ, ಸರ್ವ ವಾದ್ಯ, ತಟ್ಟಿರಾಯ ಸಹಿತ ಪ್ರದಕ್ಷಿಣೆ ಬಂದು ಬ್ರಹ್ಮ ರಥಕ್ಕೆ ಸುತ್ತು ಪ್ರದಕ್ಷಿಣೆ ಬಂದು ರಥಾರೋಹಣ ನಡೆಯಿತು. ಕ್ಷೇತ್ರದ ಸಕಲ ಬಿರುದಾವಲಿಗಳೊಂದಿಗೆ ಬಸವ, ಎರಡು ಆನೆಗಳು, ಸಹಸ್ರಾರು ಭಕ್ತರು ಮಹೋತ್ಸವದಲ್ಲಿ ಭಾಗಿಗಳಾಗಿದ್ದರು. ರಥಕ್ಕೆ ಭಕ್ತರು ಬಾಳೆಹಣ್ಣು ಎಸೆದು ತಮ್ಮ ಭಕ್ತಿ ಸಮರ್ಪಿಸಿದರು. ಡಾ| ಡಿ.ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಹೆಗ್ಗಡೆ ಕುಟುಂಬಸ್ಥರು, ಸೋನಿಯಾ ವರ್ಮಾ, ಕೆ.ಎನ್.ಜನಾರ್ದನ, ಜನಾರ್ದನ ಎಂ., ಡಾ| ಸತೀಶ್ಚಂದ್ರ ಎಸ್., ಡಾ| ಬಿ.ಎ.ಕುಮಾರ ಹೆಗ್ಡೆ, ಡಾ| ಶ್ರೀನಾಥ್ ಎಂ.ಪಿ., ವೀರು ಶೆಟ್ಟಿ, ಲಕ್ಷ್ಮೀನಾರಾಯಣ ರಾವ್, ಕ್ಷೇತ್ರದ ಅರ್ಚಕವೃಂದ, ಸಿಬ್ಬಂದಿ ಹಾಗೂ ಊರ ಪರವೂರ ಭಕ್ತರು ಪಾಲ್ಗೊಂಡಿದ್ದರು.

ವರಂಗ: ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾವಕಾಶ

Article Image

ವರಂಗ: ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾವಕಾಶ

ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನದಲ್ಲಿ ಶ್ರೀಕ್ಷೇತ್ರ ವರಂಗ ಜೈನ ಮಠದಲ್ಲಿ ನಡೆಯುತ್ತಿರುವ ವಿದ್ಯಾಪೀಠಕ್ಕೆ 2024-25ನೇ ಸಾಲಿನ ಪ್ರವೇಶ ಪ್ರಾರಂಭಿಸಲಾಗಿದ್ದು, 8 ರಿಂದ 10ನೇ ತರಗತಿಯ, ಪದವಿಪೂರ್ವ ಹಾಗೂ ಪದವಿ ವಿದ್ಯಾಭ್ಯಾಸ ಮಾಡಲು ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು. ಮೂಲ ದಾಖಲೆಗಳೊಂದಿಗೆ ಶ್ರೀಮಠದ ಆಡಳಿತ ಮಂಡಳಿಯನ್ನು ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 8762785044, 8123924492, 9481249127, 9481944083,

ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Article Image

ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಭ| ೧೦೦೮ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಇದೇ ಬರುವ ದಿನಾಂಕ 3, 4 ಮತ್ತು 5 ಮೇ 2024 ರಂದು ವಿಜೃಂಭಣೆಯಿಂದ ಜರಗಲಿರುವುದು. ಈ ಪ್ರಯುಕ್ತ ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳ ವಿವರ ಮತ್ತು ನಿಯಮ 1.ಧರ್ಮನಾಥ ಸ್ವಾಮಿಯ ಸಂಗೀತ/ಭಜನೆ ಸ್ಪರ್ಧೆ ಪ್ರಥಮ ಬಹುಮಾನ : 10,000 ನಗದು ಮತ್ತು ಸ್ಮರಣಿಕೆ ದ್ವಿತೀಯ ಬಹುಮಾನ : 8,000 ನಗದು ಮತ್ತು ಸ್ಮರಣಿಕೆ ನಿಯಮಗಳು :- ಧರ್ಮನಾಥ ಸ್ವಾಮಿಯ ಬಗ್ಗೆ ಹಾಡು/ಭಜನೆಯನ್ನು ಒಬ್ಬರೇ ಹಾಡಿ (ಹಿನ್ನೆಲೆ/ಮುನ್ನೆಲೆ) ವಿಡಿಯೋ ಮಾಡಿ ಕಳುಹಿಸಬೇಕು. ಸಾಹಿತ್ಯ ರಚಿಸುವವರು ಮತ್ತು ಗಾಯಕರು ಕಡ್ಡಾಯವಾಗಿ ‌‌ಶ್ರಾವಕ/ಶ್ರಾವಕಿಯರೇ ಆಗಿರಬೇಕು ಮತ್ತು ವಿಡಿಯೋದಲ್ಲಿ ಪ್ರತಿಯೊಬ್ಬರ ಹೆಸರುಗಳನ್ನು ನಮೂದಿಸಬೇಕು. ರಚನೆ ಮತ್ತು ಗಾಯನಕ್ಕೆ ಒಬ್ಬರಿಗೆ ಒಂದೇ ವಿಡಿಯೋಕ್ಕೆ ಮಾತ್ರ ಅವಕಾಶ. ಸಾಹಿತ್ಯ, ಸ್ವರ, ಹಿನ್ನೆಲೆ ಸಂಗೀತ, ಛಾಯಾಗ್ರಹಣ, ಇತ್ಯಾದಿ ಅಂಶಗಳನ್ನು ಪರಿಗಣಿಸಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ನಕಲು ಮಾಡಿದ ಅಥವಾ ಈ ಹಿಂದೆ ಪ್ರಕಟವಾದ ಹಾಡು/ಭಜನೆಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಭಜನೆ/ಸಂಗೀತ ಕನ್ನಡ ಅಥವಾ ಹಿಂದಿ ಭಾಷೆಯಲ್ಲಿರಬೇಕು. 2. ಪ್ರಬಂಧ ಸ್ಪರ್ಧೆ ಪ್ರಥಮ ಬಹುಮಾನ : 3,000 ನಗದು ಮತ್ತು ಸ್ಮರಣಿಕೆ ದ್ವಿತೀಯ ಬಹುಮಾನ : 2000 ನಗದು ಮತ್ತು ಸ್ಮರಣಿಕೆ ನಿಯಮಗಳು :- ಪ್ರಬಂಧದ ವಿಷಯ : "ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ". ಪ್ರಬಂಧವು 900 ಶಬ್ದಗಳನ್ನು ಮೀರಬಾರದು. (ಅಂದಾಜು 2 ಪುಟಗಳು) ಪ್ರಬಂಧವನ್ನು ಕನ್ನಡ ನುಡಿಯಲ್ಲಿ ಟೈಪ್ ಮಾಡಿ PDF ಮಾಡಿ ಕಳುಹಿಸಬೇಕು. ವಿಶೇಷ ಸೂಚನೆಗಳು ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸಲು ಕೊನೆಯ ದಿನಾಂಕ 30 ಎಪ್ರಿಲ್ 2024. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸುವವರು ತಮ್ಮ ಫೋಟೊ, ವಿಳಾಸ, ಹಾಗೂ ಮೊಬೈಲ್ ನಂಬರ್ ನೊಂದಿಗೆ 9481016887 ಈ ವಾಟ್ಸಪ್ ನಂಬರ್ ಗೆ ಅಥವಾ naravibasadi24@gmail.com ಗೆ ಕಳುಹಿಸಬೇಕಾಗಿ ವಿನಂತಿ. ದಿನಾಂಕ 1 ಮೇ 2024 ರಂದು ವಿಜೇತರನ್ನು ಆಯ್ಕೆ ಮಾಡಲಾಗುವುದು ಮತ್ತು ದಿನಾಂಕ 5 ಮೇ 2024 ರಂದು ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿಜೇತರನ್ನು ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಅತುಲ್ ಎಸ್. ಸೇಮಿತ: 9481016887 ಜ್ಞಾನೇಂದ್ರ ಕುಮಾರ್ ಜೈನ್: 9902799196

ಮೂಡುಬಿದಿರೆ: ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವ

Article Image

ಮೂಡುಬಿದಿರೆ: ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವ

ವರ್ಷಂಪ್ರತಿ ಜರುಗುವ ಜಗತ್ಪ್ರಸಿದ್ಧ ತ್ರಿಭುವನ ತಿಲಕ ಚೂಡಾಮಣಿ ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವವು ಎ. 18ರಿಂದ ಪ್ರಾರಂಭಗೊಂಡಿದ್ದು, ಇಂದು (ಏ.23) ಹಿರಿಯ ರಥೋತ್ಸವ ಮತ್ತು ಶ್ರವಣ ಸಂಸ್ಕೃತಿ ಸಮ್ಮೇಳನ ೧೦೮ ಚಾರಿತ್ರ ಚಕ್ರವರ್ತಿ ಶಾಂತಿಸಾಗರ ಮುನಿಮಹಾರಾಜರ ಆಚಾರ್ಯ ಪದಾರೋಹಣ ಶತಾಬ್ಧಿವರ್ಷ ಆಚರಣೆಯು, ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಪಾವನ ಸಾನಿಧ್ಯ ಮತ್ತು ಆಶೀರ್ವಚನದೊಂದಿಗೆ ಜರಗಲಿರುವುದು.

ರಥೋತ್ಸವ ಮತ್ತು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು

Article Image

ರಥೋತ್ಸವ ಮತ್ತು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು

ಸಂಸೆ: ಇಲ್ಲಿಯ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ವಷ೯ಂಪ್ರತಿ ನಡೆಯುವ ಶ್ರೀ ಮನ್ಮಮಹಾರಥೋತ್ಸವದ ಪೂಜಾ ಮಹೋತ್ಸವಗಳು ಕಾಕ೯ಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾಯ೯ವಯ೯ ಮಹಾ ಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಏ. 18ರಿಂದ ಪ್ರಾರಂಭಗೊಂಡು ಏ. 24ರವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿರುವುದು.

ಬೆಳ್ತಂಗಡಿ: ಮಹಾವೀರ ಜಯಂತಿ ಆಚರಣೆ, ಚತುರ್ವಿಂಶತಿ ತೀರ್ಥಂಕರರ ಆರಾಧನೆ

Article Image

ಬೆಳ್ತಂಗಡಿ: ಮಹಾವೀರ ಜಯಂತಿ ಆಚರಣೆ, ಚತುರ್ವಿಂಶತಿ ತೀರ್ಥಂಕರರ ಆರಾಧನೆ

ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಇದೇ 21 ರಂದು ಭಾನುವಾರ ಹತ್ತನೆ ವಾರ್ಷಿಕೋತ್ಸವ, ಚತುರ್ವಿಂಶತಿ (ಇಪ್ಪತ್ತನಾಲ್ಕು) ತೀರ್ಥಂಕರರ ಆರಾಧನೆ, ೧೦೮ ಕಲಶಾಭಿಷೇಕ ಹಾಗೂ ಭಗವಾನ್ ಮಹಾವೀರ ಜಯಂತಿ ಆಚರಣೆ ನಡೆಯಲಿದೆ ಎಂದು ಬಸದಿಯ ಅನುವಂಶೀಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ ಏಳು ಗಂಟೆಯಿಂದ ತೋರಣಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ. ಪೂರ್ವಾಹ್ನ ಗಂಟೆ 8.45 ರಿಂದ ಸಾಮೂಹಿಕ ಚತುರ್ವಿಂಶತಿ (24) ತೀರ್ಥಂಕರರ ಆರಾಧನೆ ನಡೆಯಲಿದೆ. ಭಗವಾನ್ ಮಹಾವೀರ ಸ್ವಾಮಿಗೆ ನವಕಲಶಾಭಿಷೇಕ, ಭಗವಾನ್ ಶಾಂತಿನಾಥ ಸ್ವಾಮಿಗೆ ೧೦೮ ಕಲಶಗಳಿಂದ ಅಭಿಷೇಕ, ನೂತನ ಗಂಧಕುಟಿಯಲ್ಲಿ 24 ತೀರ್ಥಂಕರರ ಬಿಂಬಗಳ ಸ್ಥಾಪನೆ ನಡೆಯಲಿದೆ. ಅಪರಾಹ್ನ 3.00 ಗಂಟೆಗೆ ಹೊಂಬುಜ ಶ್ರೀ ಜೈನಮಠದ ಪ.ಪೂ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಮಹಾವೀರ ಜಯಂತಿ ಆಚರಣೆ ಬಗ್ಗೆ ಮಂಗಲ ಪ್ರವಚನ ನೀಡಲಿದ್ದಾರೆ. ಬಳಿಕ ನೂತನ ಘಂಟಾಮಂಟಪ ಹಾಗೂ ಜಲಧಾರ ಲೋಕಾರ್ಪಣೆಗೊಳ್ಳಲಿದೆ.

ಬೋಳ: ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ

Article Image

ಬೋಳ: ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಶ್ರೀ ವರ್ಧಮಾನ ಸ್ವಾಮಿ ಬಸದಿಯ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಪ.ಪೂ ಮುನಿಶ್ರೀ ೧೦೮ ಅಮರಕೀರ್ತಿ ಮಹಾರಾಜರು, ಪ.ಪೂ. ಮುನಿಶ್ರೀ ೧೦೮ ಅಮೋಘಕೀರ್ತಿ ಮಹಾರಾಜರು ಮತ್ತು ಪ.ಪೂ. ಮುನಿಶ್ರೀ ೧೦೮ ಪ್ರಸಂಗ ಸಾಗರ ಮಹಾರಾಜರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ಮಾರ್ಗದರ್ಶನದಲ್ಲಿ ಏ.22 ರಂದು ನೆರವೇರಲಿರುವುದು.

ಧರ್ಮಸ್ಥಳ: 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Article Image

ಧರ್ಮಸ್ಥಳ: 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ನೆರವೇರುವ ಉಚಿತ ಸಾಮೂಹಿಕ ವಿವಾಹವು ದಿನಾಂಕ 01-05-2024ನೇ ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಜರುಗಲಿರುವುದು. ಈ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಿವಾಹವಾಗಲಿಚ್ಛಿಸುವವರು ದಿನಾಂಕ 25-04-2024ನೇ ಗುರುವಾರದ ಒಳಗಾಗಿ ವಧೂ-ವರರ ಹೆಸರು ದಾಖಲು ಮಾಡಿಸುವುದು. ಬರುವಾಗ ಮಂಡಲ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಯಾ ಕಾರ್ಯದರ್ಶಿಯವರಿಂದ ವಧೂ-ವರರ ಹೆಸರು, ಪ್ರಾಯ, ಹಿರಿಯರ ಒಪ್ಪಿಗೆ ಹಾಗೂ ಅವಿವಾಹಿತನೆಂಬುದಕ್ಕೆ ಅವಶ್ಯ ದೃಢಪತ್ರಿಕೆ ಮತ್ತು ವಧೂ-ವರರ ಇತ್ತೀಚಿನ ಭಾವಚಿತ್ರ 1+1 (ಪಾಸ್‌ಪೋರ್ಟ್ ಅಳತೆ) ತರಬೇಕು. ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆಕಣ ಮತ್ತು ಮಂಗಲಸೂತ್ರವನ್ನು ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ: ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರಿನ ಪ್ರವಚನ ಮಂಟಪದಲ್ಲಿರುವ ಸಾಮೂಹಿಕ ವಿವಾಹ ನೋಂದಣಿ ಕಚೇರಿಯನ್ನು ಸಂಪರ್ಕಿಸಿ: 9663464648/8147263422/08256 - 266644 ಅರ್ಜಿ ಮತ್ತು ಹೆಚ್ಚಿನ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ: www.shridharmasthala.org ವಿ.ಸೂ.: ಯಾವುದೇ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.

ಹೊಂಬುಜ: ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

Article Image

ಹೊಂಬುಜ: ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಶುಭಾಶೀರ್ವಾದದೊಂದಿಗೆ ಜೈನ ಮಠದ ಆಶ್ರಯದಲ್ಲಿ ಸುವ್ಯವಸ್ಥಿತಗೊಂಡಿರುವ ಶ್ರೀ ಕುಂದಕುಂದ ವಿದ್ಯಾಪೀಠವು ಜೈನ ಬಾಂಧವರ ಪ್ರೋತ್ಸಾಹಕ್ಕೆ ಪಾತ್ರವಾಗಿ ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣ ನೀಡುವಲ್ಲಿ ಯಶಸ್ಸುಗಳಿಸಿ ಪ್ರಗತಿ ಪಥದಲ್ಲಿ ಮುನ್ನಡೆದಿದೆ. ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ 5 ರಿಂದ 10ನೇ ತರಗತಿಯವರೆಗಿನ, 2024-25ನೇ ಸಾಲಿನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳ ‌ನೋಂದಣಿ ಆರಂಭವಾಗಿದೆ. ಜೈನ ಪೋಷಕರು/ತಂದೆ ತಾಯಿಯರು ಬಾಲಕರನ್ನು ಈ ವಿದ್ಯಾಸ್ಫೂರ್ತಿ ಸೆಲೆಯ ವಿದ್ಯಾಪೀಠದ ಪ್ರವೇಶಕ್ಕೆ ತಾವು ಹಿಂದಿನ ತರಗತಿಯ ಉತ್ತೀರ್ಣರಾದ ಅಂಕಪಟ್ಟಿ ಹಾಗೂ ಅಲ್ಲಿಯ ಜೈನ ಸಮಾಜದ ಮುಖಂಡರಿಂದ ಪಡೆದ ಪರಿಚಯ ಪತ್ರ, ಮೂಲ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ವಿ.ಸೂ: ಶ್ರೀ ಹೊಂಬುಜ ಪದ್ಮಾವತಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಪರಂಜ್ಯೋತಿ ಆಂಗ್ಲಮಾಧ್ಯಮ ಪ್ರಾಥಮಿಕ ಪಾಠಶಾಲೆಗೆ 8ನೇ ತರಗತಿಯಿಂದ ಅವಕಾಶವಿರುತ್ತದೆ ವ್ಯವಸ್ಥಾಪಕರು, ಶ್ರೀಕುಂದ ಕುಂದ ವಿದ್ಯಾಪೀಠ : 8123924492, 8762180697, 9481249127, 9481944083

ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಬಿಳ್ಕೋಡುಗೆ ಸಮಾರಂಭ

Article Image

ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಬಿಳ್ಕೋಡುಗೆ ಸಮಾರಂಭ

ಸತ್ತೂರು, ಧಾರವಾಡ: ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಏ.16 ರಂದು ಎಸ್.ಡಿ.ಎಂ. ವಿಶ್ವವಿದ್ಯಾಲಯದ ವತಿಯಿಂದ ಬಿಳ್ಕೋಡಲಾಯಿತು. ಸುಮಾರು 13 ವರ್ಷಗಳಿಗಿಂತ ಹೆಚ್ಚು ಕಾಲ ಪ್ರಾಂಶುಪಾಲರು ಮತ್ತು ನರ್ಸಿಂಗ್ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪ್ರೊ. ಡೇವಿಡ್ ಎ. ಕೋಲಾ ಅವರ ಕೊಡುಗೆಗಳನ್ನು ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಶ್ಲಾಘಿಸಿದರು ಮತ್ತು ಎಸ್.ಡಿ.ಎಂ. ನರ್ಸಿಂಗ್ ಕಾಲೇಜಿನ ಬೆಳವಣಿಗೆಗೆ ಅವರ ಸೇವೆ ಅಪಾರ ಕೊಡುಗೆ ನೀಡಿದೆ ಎಂದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ ಕುಮಾರ, ಹಣಕಾಸು ಅಧಿಕಾರಿಯಾದ ವಿ.ಜಿ. ಪ್ರಭು, ಉಪ ಕುಲಸಚಿವರಾದ ಡಾ. ಅಜಂತಾ ಜಿ.ಎ ಸ್. ಅವರು ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಸನ್ಮಾನ ಪತ್ರ, ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು, ವೈದ್ಯಕೀಯ ಅಧೀಕ್ಷಕರು, ಉಪ ವೈದ್ಯಕೀಯ ಅಧೀಕ್ಷಕರು, ಶೂಶ್ರುಷಕ ಅಧೀಕ್ಷಕರು ಮತ್ತು ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನರ್ಸಿಂಗ್ ಕಾಲೇಜಿನ ಹಿರಿಯ ಪ್ರಾಧ್ಯಾಪಕಿಯವರಾದ ಡಾ. ಗಂಗಾಬಾಯಿ ಕುಲಕರ್ಣಿ ಅವರು ಪ್ರೊ. ಡೇವಿಡ್ ಎ. ಕೋಲಾ ಅವರ ಸಮರ್ಪಣಾ ಸೇವೆ ಮತ್ತು ಅವರು ಕಾಲೇಜಿನಲ್ಲಿ ಅನುಸರಿಸಿದ ಶಿಸ್ತು ಬದ್ದತೆಯನ್ನು ಸ್ಮರಿಸಿದರು. ಡಾ. ನಾಗೇಶ ಅಜ್ಜವಾಡಿಮಠ ಅವರು ಸನ್ಮಾನ ಪತ್ರವನ್ನು ವಾಚಿಸಿದರು. ಡಾ. ಪ್ರಸನ್ನ ದೇಶಪಾಂಡೆ ಅತಿಥಿಗಳನ್ನು ಸ್ವಾಗತಿಸಿದರು. ಡಾ. ತಿಲಕ ಜೋಶಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೊ. ಮೆಟಿಲ್ಡಾ ಬಿಜಾಪುರ ವಂದನಾರ್ಪಣೆ ಸಲ್ಲಿಸಿದರು.

ನಾರಾವಿ ಮಾಗಣೆ ಬಸದಿಯಲ್ಲಿ ಪೂಜಾ ಕಾರ್ಯಕ್ರಮ

Article Image

ನಾರಾವಿ ಮಾಗಣೆ ಬಸದಿಯಲ್ಲಿ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ನಾರಾವಿ ಮಾಗಣೆ ಭ| ೧೦೦೮ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಏ.15(ನಾಳೆ )ರಂದು ಶ್ರೀ ಸ್ವಾಮಿಯ ಜಿನ ಬಿಂಬಕ್ಕೆ "ವಜ್ರ ಲೇಪನಾ "ಪ್ರಕ್ರಿಯೆ ಜರುಗಲಿರುವುದು. ಆ ಪ್ರಯುಕ್ತ ಬೆಳಿಗ್ಗೆ 8 ಗಂಟೆಯಿಂದ "ಚೌವ್ವೀಸ ತೀರ್ಥಂಕರ"ರ ಸಾಮೂಹಿಕ ಆರಾಧನಾ ಪೂಜಾ ವಿಧಾನ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಕಳ: ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಪಿ.ಯು.ಸಿ ವಿದ್ಯಾರ್ಥಿಗಳ ಸಾಧನೆ

Article Image

ಕಾರ್ಕಳ: ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಪಿ.ಯು.ಸಿ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ ದಾನಶಾಲೆಯಲ್ಲಿರುವ ಶ್ರೀ ಬಾಹುಬಲಿ ಶ್ರಾವಿಕಾಶ್ರಮದಲ್ಲಿ ವಾಸ್ತವ್ಯವಿದ್ದು, ಹಿರಿಯಂಗಡಿ ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪದವಿಪೂರ್ವ ಕಾಲೇಜಿನ ಪಿ.ಯು.ಸಿ.ಯಲ್ಲಿ ಸಿಂಚನಾ 97% (582-ವಾಣಿಜ್ಯ), ಮಾನ್ಯ 96.8% (581-ವಾಣಿಜ್ಯ), ನಮಿತಾ 96.7% (580-ವಾಣಿಜ್ಯ), ಪ್ರಾಪ್ತಿ 96.5% (579-ವಾಣಿಜ್ಯ), ಅನ್ವೇಶ 96% (578-ವಾಣಿಜ್ಯ), ನಮ್ರತಾ 95.3% (572-ವಾಣಿಜ್ಯ), ಕುಶಿ 91.7% (550-ವಾಣಿಜ್ಯ) ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

First Previous

Showing 17 of 21 pages

Next Last