Article Image

ಆನೆಕೆರೆ ಚತುರ್ಮುಖ ಕೆರೆ ಬಸದಿ ಪಂಚಕಲ್ಯಾಣ ಮಹೋತ್ಸವವು ಇಂದಿನಿಂದ ಪ್ರಾರಂಭ

Article Image

ಆನೆಕೆರೆ ಚತುರ್ಮುಖ ಕೆರೆ ಬಸದಿ ಪಂಚಕಲ್ಯಾಣ ಮಹೋತ್ಸವವು ಇಂದಿನಿಂದ ಪ್ರಾರಂಭ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಐತಿಹಾಸಿಕ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಪಂಚಕಲ್ಯಾಣ ಮಹೋತ್ಸವವು ಇಂದಿನಿಂದ ಪ್ರಾರಂಭಗೊಂಡು ಜ. 22ರ ವರೆಗೆ ನಡೆಯಲಿದೆ. ಸುಮಾರು 5 ಶತಮಾನಗಳಷ್ಟು ಪ್ರಾಚೀನ ಆನೆಕೆರೆ ಬಸದಿ ಐವರು ತೀರ್ಥಂಕರರ ಭವ್ಯ ಬಿಂಬಗಳಿಂದ ಕೂಡಿದೆ. ಚತುರ್ಮುಖ ಬಸದಿಯ ವಾಸ್ತು ಶೈಲಿಯನ್ನು ಹೊಂದಿರುವ ಕೆರೆ ಬಸದಿಯನ್ನು ಭೈರವರಸರ ವಂಶಸ್ಥ ಪಾಂಡ್ಯನಾಥ ಪಾಂಡ್ಯಪ್ಪೊಡೆಯ 16.05.1545ರಲ್ಲಿ ಕಟ್ಟಿಸಿದರು ಎಂದು ಇತಿಹಾಸ ಹೇಳುತ್ತದೆ. 2022ರಲ್ಲಿ ಜೀರ್ಣೋದ್ಧಾರ ಕಾರ್ಯವನ್ನು ಆರಂಭಿಸಿದ್ದು, ಸುಮಾರು 26 ಎಕರೆ ವಿಸ್ತೀರ್ಣದಲ್ಲಿ ಆನೆಕೆರೆ ಬಸದಿಯು ಶೋಭಿಸುತ್ತಿದೆ. ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರೀ ಜೈನಮಠ, ದಾನಶಾಲಾ ಕಾರ್ಕಳ ಇವರ ನೇತೃತ್ವದಲ್ಲಿ ಮತ್ತು ಸಮಸ್ತ ಭಟ್ಟಾರಕರ ಪಾವನ ಸಾನಿಧ್ಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರ ಸಹಕಾರದೊಂದಿಗೆ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಪಂಚಕಲ್ಯಾಣ ಮಹೋತ್ಸವವು ನೂತನ ಶಿಲಾಮಂದಿರಲ್ಲಿ ಆಗಮೋಕ್ತ ವಿಧಿ- ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿದೆ. ನೂತನ ಆನೆಕೆರೆ ಬಸದಿಯು ಸುಂದರವಾದ ಕೆತ್ತನೆಯಲ್ಲಿ ಶಿಲಾಮಯವಾಗಿ ರೂಪುಗೊಂಡ ದ್ವಾರಪಾಲಕರು, ತಿರುಗಿಸಬಹುದಾದಂತಹ ಕಂಬಗಳು, ಪಾಣಿಪೀಠದ ಬುಡದಲ್ಲಿ ಸೂಕ್ಷ್ಮವಾದ ಕೆತ್ತನೆಗಳು, ಶಾಶ್ವತ ವಿದ್ಯುತ್ ದೀಪಾಲಂಕಾರ ಹೀಗೆ ಅನೇಕ ವಿಶೇಷತೆಗಳೊಂದಿಗೆ ಲೋಕಾರ್ಪಣೆಗೆ ಸಿದ್ದವಾಗಿದೆ.

ಚೇತನ್ ಫಣಿರಾಜ್ ಗೆ ಸನ್ಮಾನ

Article Image

ಚೇತನ್ ಫಣಿರಾಜ್ ಗೆ ಸನ್ಮಾನ

ಹಾಸನ: ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಆವರಣದಲ್ಲಿ ಸಹಕಾರ ಭಾರತಿ ಇತ್ತಿಚಿಗೆ ಆಯೋಜಿಸಿದ್ದ ಕ್ರೆಡಿಟ್ ಸೊಸೈಟಿಗಳ ರಾಷ್ಟ್ರೀಯ ಅಧಿವೇಶನದಲ್ಲಿ, 100 ವರ್ಷ ಪೂರೈಸಿರುವ ಕ್ರೆಡಿಟ್ ಸೊಸೈಟಿಗಳ ಸಹಕಾರ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ಹಾಸನದ ಜೈನ ಮಂಡಳಿ ಪತ್ತಿನ ಸಹಕಾರ ಸಂಘಕ್ಕೆ 103 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ರಾಷ್ಟ್ರೀಯ ಒಕ್ಕೂಟದ, ವತಿಯಿಂದ ಸಂಘದ ಅದ್ಯಕ್ಷರಾದ ಹೆಚ್.ಪಿ. ಚೇತನ್ ಫಣಿರಾಜ್ರವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ಸಚಿವರಾದ ಭಗವತ ಕರಾಢ್, ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷರಾದ ಜ್ಯೋತಿಂದರ್ ಮೆಹ್ತಾರವರು ಮತ್ತು ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷರಾದ ದೀನಾನಾಥ್ ಠಾಕೂರ್ ಇತರರು ಉಪಸ್ಥಿತರಿದ್ದರು.

ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

Article Image

ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

ಬೆಂಗಳೂರು: ಇಲ್ಲಿಯ ರತ್ನತ್ರಯ ಜೈನ್ ಮಿಲನಿನ ಮಾಸಿಕ ಸಭೆಯು ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಜ. 6ರಂದು ಜರುಗಿತು. ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲರಾದ ನಾಗಶ್ರೀ ಮುಪ್ಪಾನೆ ಆಗಮಿಸಿದ್ದರು. ಗಣ್ಯರೆಲ್ಲರೂ ಸೇರಿ ದೀಪ ಪ್ರಜ್ವಲನೆ ಮಾಡುವುದರ ಮುಖಾಂತರ ಕಾರ್ಯಕ್ರಮ ಪ್ರಾರಂಭವಾಯಿತು. ಪೂರ್ಣಿಮಾರವರು ಡಿಸೆಂಬರ್ ತಿಂಗಳಲ್ಲಿ ವಿವಾಹ ವಾರ್ಷಿಕೋತ್ಸವ ಹಾಗೂ ಹುಟ್ಟುಹಬ್ಬವನ್ನು ಅಚರಿಸಿಕೊಂಡ ಮಿಲನ್ ಸದಸ್ಯರಿಗೆ ಶುಭಕೋರಿದರು. ಪದ್ಮಾ ಸೂರಿರವರು ಮಿಲನಿನ ನಡಾವಳಿಯನ್ನು ವಾಚಿಸಿದರು. ನಂತರ ಬೆಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದ ಮಿಲನಿನ ಸದಸ್ಯರನ್ನು ಅಭಿನಂದಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಾಗಶ್ರೀ ಮುಪ್ಪಾನೆಯವರು, “ಜೈನ ಧರ್ಮದಲ್ಲಿ ಭಟ್ಟಾರಕ ಮಹತ್ವ, ಜೈನ ಮಠ ಮತ್ತು ಆಸ್ತಿ ಸಂರಕ್ಷಸಿಕೊಳ್ಳುವಲ್ಲಿ ನಮ್ಮ ಪಾತ್ರ” ಎಂಬ ವಿಷಯದ ಬಗ್ಗೆ ಕೂಲಂಕುಷವಾಗಿ ಮಾತನಾಡಿ ಅರಿವು ಮೂಡಿಸಿದರು. ನವೀನ್ ಕುಮಾರ್ ಗುಬ್ಬಿರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಪ್ರೇಮಾ ಸುಖಾನಂದ ಉಪಸ್ಥಿತರಿದ್ದರು. ಅನಂತಕುಮಾರಿರವರು ಸ್ವಾಗತಿಸಿ, ಶ್ವೇತಾ ನವೀನ್ ವಂದಿಸಿದರು. ಧೀರಜ್ ಜೈನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅತಿಥ್ಯವನ್ನು ಪದ್ಮರಾಜ್ ಹಾಗೂ ಅನಂತ ಕುಮಾರಿರವರು ವಹಿಸಿಕೊಂಡಿದ್ದರು.

ಪದ್ಮಾವತಿ ಅಮ್ಮ

Article Image

ಪದ್ಮಾವತಿ ಅಮ್ಮ

ಹಾಸನ ಜಿಲ್ಲೆಯ ಜಾವಗಲ್ ನ ನಿವಾಸಿ ಪದ್ಮಾವತಿ ಅಮ್ಮ (95ವ) ಇವರು ಜ. 8ರಂದು ನಿಧನ ಹೊಂದಿದರು. ಇವರು ಮಕ್ಕಳಾದ ಮರುದೇವಿಯಮ್ಮ, ಧರ್ಮಪಾಲ್ ಎಚ್. ಎ. ಮತ್ತು ಪೂರ್ಣಿಮಾ ಜೈನ್ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಆದಿನಾಥ ಉಪಾಧ್ಯೆಗೆ ಪಿಎಚ್.ಡಿ

Article Image

ಆದಿನಾಥ ಉಪಾಧ್ಯೆಗೆ ಪಿಎಚ್.ಡಿ

ಬೆಳಗಾವಿ: ಗುಲ್ಬರ್ಗಾ ವಿಶ್ವವಿದ್ಯಾಲಯವು ಗಣಿತಶಾಸ್ತ್ರ ವಿಷಯದಲ್ಲಿ ‘ನ್ಯೂಮರಿಕಲ್ ಸ್ಟಡಿ ಆಫ್ ಸ್ಲೈಡರ್ ಆ್ಯಂಡ್ ಸ್ಕ್ವೀಝ್ ಫಿಲ್ಮ್ ಬೇರಿಂಗ್ಸ್ ಲೂಬ್ರಿಕೇಟೆಡ್ ವಿಥ್ ನಾನ್- ನ್ಯೂಟೋನಿಯನ್ ಪ್ಲೂಯಿಡ್’ ಎಂಬ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧಕ್ಕೆ ಆದಿನಾಥ ಚಂದ್ರನಾಥ ಉಪಾಧ್ಯೆ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಮೂಲತಃ ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಆದಿನಾಥ ಉಪಾಧ್ಯೆ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕಲಬುರ್ಗಿಯ ಜಿಲ್ಲೆಯ ಸೇಡಂನ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಡಾ| ಕಾಶೀನಾಥ ಬಿರಾದಾರ ಮಾರ್ಗದರ್ಶಕರಾಗಿದ್ದರು. ಇವರು ತಾಳಿಕೋಟೆಯ ಚಂದ್ರನಾಥ ಜೆ. ಉಪಾಧ್ಯ ಮತ್ತು ವಿಜಯಮಾಲಾ ಚಂದ್ರನಾಥ ಉಪಾಧ್ಯ ದಂಪತಿಗಳ ಪುತ್ರ.

ಆಕರ್ಷಣಿ ಶೈಲೆಂದ್ರ ಕುಮಾರ್

Article Image

ಆಕರ್ಷಣಿ ಶೈಲೆಂದ್ರ ಕುಮಾರ್

ಅಜ್ಜಿಬೆಟ್ಟು ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ನ ಸಮೃದ್ಧಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾಗಿರುವ ಆಕರ್ಷಣಿ ಶೈಲೆಂದ್ರ ಕುಮಾರ್ ಇವರು ಬಂಟ್ವಾಳ ತಾಲೂಕು ಸಂಜೀವಿನಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಎಂ. ಬಾಹುಬಲಿ ಪ್ರಸಾದ್ ಇವರು ಪುನರ್ ಆಯ್ಕೆ

Article Image

ಎಂ. ಬಾಹುಬಲಿ ಪ್ರಸಾದ್ ಇವರು ಪುನರ್ ಆಯ್ಕೆ

ಮೂಡುಬಿದಿರೆ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿ ಲಿ., ಇದರ ಅಧ್ಯಕ್ಷರಾಗಿ “ಸಹಕಾರ ರತ್ನ” ಎಂ. ಬಾಹುಬಲಿ ಪ್ರಸಾದ್ ನ್ಯಾಯವಾದಿ ಇವರು ಎರಡನೇ ಬಾರಿಗೆ ಸರ್ವಾನುಮತದಿಂದ ಪುನರ್ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಕೆ. ಅಭಯಚಂದ್ರ ಜೈನ್, ಅಶೋಕ ಕಾಮತ್ ಎಂ.ಪಿ., ಎಂ. ಜ್ಞಾನೇಶ್ವರ ಕಾಳಿಂಗ ಪೈ, ಜಯರಾಮ ಕೋಟ್ಯಾನ್, ಮನೋಜ್ ಕುಮಾರ್ ಶೆಟ್ಟಿ ಸಿ. ಎಚ್. ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಈಗಾಗಲೇ ಎಂ. ಗಣೇಶ್ ನಾಯಕ್, ಜಾರ್ಜ್ ಮೋನಿಸ್, ಎಂ. ಪದ್ಮನಾಭ ಹಾಗೂ ದಯಾನಂದ ನಾಯ್ಕ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಫೆ. 22ರಿಂದ ಮಾ. 1: ವೇಣೂರು ಭ| ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Article Image

ಫೆ. 22ರಿಂದ ಮಾ. 1: ವೇಣೂರು ಭ| ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವವು ಪರಮಪೂಜ್ಯ ಯುಗಳ ಮುನಿವರ್ಯರಾದ ೧೦೮ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ೧೦೮ ಅಮರಕೀರ್ತಿ ಮುನಿ ಮಹಾರಾಜರ ಪಾವನ ಸಾನಿಧ್ಯ-ಶುಭಾಶೀರ್ವಾದಗಳೊಂದಿಗೆ, ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ʼರಾಜರ್ಷಿʼ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಕಾರ್ಯಾಧ್ಯಕ್ಷತೆಯಲ್ಲಿ ಫೆ. 22ರಿಂದ ಮಾ. 1ರ ತನಕ ಜರಗಲಿದೆ.

ಧರ್ಮದ ಕಾಲಂನಲ್ಲಿ ಜೈನ ಎಂದು ಸೇರಿಸಿ

Article Image

ಧರ್ಮದ ಕಾಲಂನಲ್ಲಿ ಜೈನ ಎಂದು ಸೇರಿಸಿ

ಪಾವಗಡ: ಜೈನ ಧರ್ಮ ವಿಶ್ವಧರ್ಮವಾಗಿದೆ. ವಿಶ್ವದ ಬಹುತೇಕ ವಿಶ್ವವಿದ್ಯಾಲಯಗಳಲ್ಲಿ ಜೈನಪೀಠಗಳಿವೆ. ಇದೊಂದು ಶ್ರೇಷ್ಠ ಅಹಿಂಸಾ ಧರ್ಮವಾಗಿದೆ. ಹಿಂದಿನ ಜನಸಂಖ್ಯೆಗಿಂತ ಈಗ ಜೈನ ಧರ್ಮೀಯರ ಜನಸಂಖ್ಯೆ ಕ್ಷೀಣಿಸುತ್ತಿದೆ. ಧರ್ಮದ ಕಾಲಂನಲ್ಲಿ ಜೈನ ಎಂದು ಬರೆಯುವಂತೆ ಜೈನ ಸಮಾಜದ ಹಿರಿಯ ಮುಖಂಡ ಬ್ರಹ್ಮದೇವಯ್ಯ ಮನವಿ ಮಾಡಿದರು. ತಾಲ್ಲೂಕಿನ ನಿಡಗಲ್ ಬೆಟ್ಟದಲ್ಲಿ ಶ್ರೀಕೃಷ್ಣಹರಣ ಪಾರ್ಶ್ವನಾಥ ತೀರ್ಥಂಕರರ ಜನುಮ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಅವರು ಮಾತನಾಡಿದರು. ಶಳ್ಳಕ್ಕಿರೆ ದಿಗಂಬರ ಜೈನ ಸಮಾಜದ ಅಧ್ಯಕ್ಷ, ಉದ್ಯಮಿ ಹಂಬಣ್ಣನವರು ಕಾರ್ಯಕ್ರಮ ಉದ್ಘಾಟಿಸಿದರು. ನಿಡಗಲ್ ಕಷ್ಟ ಹರಣ ಪಾರ್ಶ್ವನಾಥ ಜನುಮ ದಿನದ ಸಮಿತಿ ಅಧ್ಯಕ್ಷ ಪಿ.ಸುಂದರ ರಾಜಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯದರ್ಶಿ ಆರ್. ಬಿ. ಜಯಣ್ಣ, ಗೌರಿಪುರ ಪಾರ್ಶ್ವನಾಥ್ ಕುಜ ನಾಗಭೂಷಣ್, ಟ್ರಸ್ಟಿ ಆರ್. ಎಸ್ ಕುಬೇರಪ್ಪ, ಭರತ್, ರಾಜು, ಪ್ರದೀಪ್, ಜೈನ್, ಶೈನ್ ಜೈನ್, ತುಮಕೂರು ಜೈನ ಸಮಾಜದ ನಿರ್ದೇಶಕರಾದ ಬ್ರಹ್ಮ ಪ್ರಕಾಶ್, ಮಂಡಿ ನಾಗರಾಜ್, ಸುನಿಲ್ ಅಮರಾಪುರ ಸೇರಿದಂತೆ ಜೈನ ಮಹಿಳಾ ಮಂಡಳಿಗಳು ಭಾಗವಹಿಸಿದ್ದವು. ನಂತರ ದ್ರವ್ಯ ಅಭಿಷೇಕ ಹರಾಜುಗಳ ಪ್ರಕ್ರಿಯೆ ನಡೆಯಿತು.

ಅರ್ಜಿ ಆಹ್ವಾನ

Article Image

ಅರ್ಜಿ ಆಹ್ವಾನ

ರಾಜಸ್ಥಾನ ಸಾಂಗನೇರದಲ್ಲಿರುವ ಶ್ರಮಣ ಸಂಸ್ಕೃತಿ ಸಂಸ್ಥಾನದಲ್ಲಿ ಸಂತ ಶಿರೋಮಣಿ 108 ಆಚಾರ್ಯ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರ ಆಶೀರ್ವಾದ ಮತ್ತು ಮುನಿಪುಂಗವ 108 ಶ್ರೀ ಸುಧಾಸಾಗರ ಮಹಾರಾಜರ ಪ್ರೇರಣೆಯಿಂದ ನಡೆಯುತ್ತಿರುವ ದ್ವಾದಶ ವರ್ಷಿಯ ಕೋರ್ಸ್ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಉತ್ತಮ ಪಂಡಿತರಿಂದ ಗ್ರಂಥ ಸ್ವಾಧ್ಯಾಯ ಮತ್ತು ಪ್ರತಿ ವರ್ಷ ಪರೀಕ್ಷೆ ಬರೆಯ ಬೇಕಾಗುತ್ತದೆ. ಇಲ್ಲಿಯವರೆಗೂ ಹಿಂದಿಯಲ್ಲಿ ನಡೆಯುತ್ತಿದ್ದು, ಪ್ರಥಮ ಬಾರಿಗೆ ಮೈಸೂರಿನಲ್ಲಿ ಪಠ್ಯಕ್ರಮವನ್ನು ಕನ್ನಡಕ್ಕೆ ಅನುವಾದಿಸಿ, ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಎಲ್ಲರಿಗೂ ಈ ಪರೀಕ್ಷೆ ಬರೆಯುವ ಅವಕಾಶವಿದ್ದು, ಪರೀಕ್ಷೆಯನ್ನು ಬರೆಯಲು ಯಾವುದೇ ವ್ಯಾಸಂಗದ ಅರ್ಹತೆ ಮತ್ತು ವಯಸ್ಸಿನ ಮಿತಿ ಇರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-01-2024 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಪ್ನ ಲಕ್ಷ್ಮೀಶ್ ಮೈಸೂರು: 9448254546 / 8660747004

ಡಾ. ಅಜಿತ ಮುರುಗುಂಡೆ

Article Image

ಡಾ. ಅಜಿತ ಮುರುಗುಂಡೆ

ಡಾ. ಅಜಿತ ಮುರುಗುಂಡೆ ಅವರ ಕೃತಿ ಕೆ. ಸಾ. ಪ. ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ. ಕನ್ನಡ ಸಾಹಿತ್ಯ ಪರಿಷತ್ತು ೨೦೨೦ ಎರಡನೇ ಸಾಲಿನ ವಿವಿಧ ದತ್ತಿ ಪ್ರತಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಂಗಳೂರಿನ ಡಾ. ಅಜಿತ ಮುರಗುಂಡೆ ಇವರು ಬರೆದ ‘ರತ್ನಾಕರ ವರ್ಣಿಯ ಹಾಡುಗಳು, ಸಾಹಿತ್ಯ ಮತ್ತು ತಾತ್ವಿಕತೆ’ ಈ ಕೃತಿ ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲ ಶೆಟ್ಟಿ ಡಾ. ಮದನಕೇಸರಿ ಜೈನ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಸ್ತುತ ಇವರು ಯೋಜನೆ ಮತ್ತು ಸಾಂಖ್ಯಿಕ ಸಚಿವರ ವಿಶೇಷ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ

First Previous

Showing 21 of 21 pages

Next Last