Article Image

ಸಾವಿರ ಕಂಬದ ಬಸದಿಗೆ ಬಂದ ಐರಾವತ

Article Image

ಸಾವಿರ ಕಂಬದ ಬಸದಿಗೆ ಬಂದ ಐರಾವತ

ಮೂಡುಬಿದಿರೆ: ಪ್ರಾಣಿ ಪ್ರಿಯರ ಸಂಘಟನೆ "ಪೇಟಾ"ದ ಮುತುವರ್ಜಿಯಲ್ಲಿ ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಆಕೆಯ ಪುತ್ರಿ ರಾಶಾ ತಾದಾನಿ ಕೊಡುಗೆಯಾಗಿ ನೀಡಿದ "ಐರಾವತ" ಜೈನಕಾಶಿ ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಯ ಆವರಣಕ್ಕೆ ಶುಕ್ರವಾರ ಸೇರಿಕೊಂಡಿದೆ. ಧಾರ್ಮಿಕ ಕೇಂದ್ರಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಪಳಗಿಸಿದ ಆನೆಗಳನ್ನು ಬಳಸಿ ಅವುಗಳಿಗೆ ತನ್ನ ಕುಟುಂಬದೊಂದಿಗೆ ಕಾಡಿನ ಸಹಜ ಬದುಕನ್ನು ಕಸಿದುಕೊಂಡು ಹಿಂಸೆ ನೀಡಿದಂತಾಗುತ್ತದೆ ಎಂದು ಅದರ ವಿರುದ್ಧ ನೈಜ್ಯ ಆನೆಗಳನ್ನೇ ಹೋಲುವ ಮೆಕ್ಯಾನಿಕಲ್ ಆನೆಗಳನ್ನು ಪ್ರೋತ್ಸಾಹಿಸಿ ಎನ್ನುತ್ತಿರುವ ಪೇಟಾ ಇಂಡಿಯಾದ ಮುಂಬೈ ಮೂಲದ ಪ್ರೇರಣೆಯಿಂದ ಬಾಲಿವುಡ್ ತಾರಾ ಕುಟುಂಬದ ಕೊಡುಗೆಯಾಗಿ ಈ ಐರಾವತ ಒದಗಿ ಬಂದಿದೆ. ಜೈನಕಾಶಿಯಲ್ಲಿ ಚಾತುರ್ಮಾಸ ನಿರತ 108 ಗುಲಾಬ್ ಭೂಷಣ ಮುನಿ ಮಹಾರಾಜರು ನೂತನ ಐರಾವತವನ್ನು ಅನಾವರಣಗೊಳಿಸಿದರು. ಪಟ್ಟಾಭಿಷೇಕ ರಜತ ಮಹೋತ್ಸವ ಸಂಭ್ರಮದಲ್ಲಿರುವ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ , ಪಟ್ನಶೆಟ್ಟಿ ಸುಧೇಶ್ ಕುಮಾರ್, ಎಂ ಬಾಹುಬಲಿ ಪ್ರಸಾದ್, ಪೇಟಾ ಮುಂಬೈ ಘಟಕದ ಪದಾಧಿಕಾರಿಗಳಾದ ಅನುಷ್ಕಾ ಯಾದವ್, ಸುಧಾಕರ್ ರಾವ್ ಕರ್ನಾಲ್, ಶುಭಂ ಅಗರ್ವಾಲ್, ರೋಹನ್ ಸರ್ವಪ್ರಿಯ, ಮಹೆಕ್ ಜುನೇಜಾ ಸಹಿತ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. ದೇಶದಲ್ಲೇ ಮೊದಲ ಬಸದಿಗೆ ಐರಾವತ! ಐತಿಹಾಸಿಕ ಸಾವಿರ ಕಂಬದ ಬಸದಿಯಲ್ಲಿ ನೆಲೆ ಕಂಡಿರುವ ಮೆಕ್ಯಾನಿಕಲ್ ಆನೆ ಐರಾವತ ದೇಶದಲ್ಲೇ ಮೊದಲ ಬಾರಿಗೆ ಜೈನ ಬಸದಿಗೆ ಬಂದಂತಾಗಿದೆ. ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಮೊದಲ ಬಸದಿ ಎನ್ನುವ ಹಿರಿಮೆ ಸಾವಿರ ಕಂಬದ ಬಸದಿಗೆ ಲಭಿಸಿದೆ. ಪೇಟಾ ಧಾರ್ಮಿಕ ಸಂಸ್ಥೆಗಳಿಗೆ ಒದಗಿಸುತ್ತಿರುವ 12 ನೆಯ ಹಾಗೂ ಮಂಗಳೂರು ವಲಯಕ್ಕೆ ದೊರೆತ ಮೊದಲ ಐರಾವತ ಇದಾಗಿದೆ. ಮೂರು ಮೀಟರ್ ಎತ್ತರ 800 ಕೆಜಿ ಭಾರ ಈ ಮೆಕ್ಯಾನಿಕಲ್ ಐರಾವತವನ್ನು ರಬ್ಬರ್, ಫೈಬರ್, ಮೆಟಲ್, ಮೆಶ್, ಫೋಮ್, ಕಬ್ಬಿಣ ಹಾಗೂ ಐದು ಮೋಟಾರುಗಳ ನೆರವಿನಿಂದ ನಿರ್ಮಿಸಲಾಗಿದೆ. ವಿದ್ಯುತ್ ಸಂಪರ್ಕ ನೀಡಿ ಅದನ್ನು ನೈಜ್ಯ ಆನೆಯಂತೆ ಬಳಸಿಕೊಳ್ಳಲು ಸಾಧ್ಯವಿದೆ. ಚಕ್ರಗಳ ನೆರವಿನಿಂದ ರಸ್ತೆಯಲ್ಲೂ ಒಡಾಡಿಬಹುದಾಗಿದೆ. 2023ರಲ್ಲಿ ಇಂತಹ ಸಾಹಸಕ್ಕೆ ಮುಂದಾದ ಪೇಟಾ ದಕ್ಷಿಣ ಭಾರತದ ಹಲವೆಡೆ ಮೆಕ್ಯಾನಿಕಲ್ ಆನೆಗಳನ್ನು ಹಸ್ತಾಂತರಿಸಿದೆ.

ನ್ಯಾಯವಾದಿ ಶ್ವೇತಾ ಕೆ. ಅವರ ನೂತನ ಕಚೇರಿ ಉದ್ಘಾಟನೆ

Article Image

ನ್ಯಾಯವಾದಿ ಶ್ವೇತಾ ಕೆ. ಅವರ ನೂತನ ಕಚೇರಿ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ನ್ಯಾಯವಾದಿ ಮತ್ತು ನೋಟರಿ ಶ್ವೇತಾ ಕೆ. ಅವರ ನೂತನ ಕಚೇರಿಯು ಸ್ವರಾಜ್ಯ ಮೈದಾನದ ಮುಂಭಾಗದಲ್ಲಿರುವ ಕೋರ್ಟ್ ರಸ್ತೆಯ ಶೆಟ್ಟೀಸ್ ರಾಮಪ್ರಸಾದ್ ಕಾಂಪ್ಲೆಕ್ಸ್‌ನಲ್ಲಿ ಆ. 29ರಂದು ಅಪರಾಹ್ನ ಉದ್ಘಾಟನೆಗೊಂಡಿತು. ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯಕುಮಾರ್ ಅವರು ದೀಪ ಪ್ರಜ್ವಲನದ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ., ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ., ನ್ಯಾಯವಾದಿಗಳಾದ ಎಂ. ಆರ್. ಬಲ್ಲಾಳ್, ಕೆ.ಆರ್. ಪಂಡಿತ್, ದಿವಿಜೇಂದ್ರ, ಎಂ.ಎಸ್‌. ತಂತ್ರಿ, ಕಟ್ಟಡದ ಮಾಲೀಕ ಪಾಲಡ್ಕ ಹರಿಪ್ರಸಾದ್ ಶೆಟ್ಟಿ, ಹಿರಿಯ ಉದ್ಯಮಿ ಕೆ. ಶ್ರೀಪತಿ ಭಟ್, ಪ್ರಭಾತ್ ಸಿಲ್ಸ್‌ನ ಪ್ರಭಾಚಂದ್ರ ಜೈನ್‌, ರಾಜವರ್ಮ ಬೈಲಂಗಡಿ, ಟೆಂಪಲ್ ಟೌನ್ ರೋಟರಿ ಅಧ್ಯಕ್ಷ ಹರೀಶ್‌ ಎಂ.ಕೆ.. ನಿಕಟಪೂರ್ವ ಅಧ್ಯಕ್ಷ ಪೂರ್ಣಚಂದ್ರ ಜೈನ್‌ ಮತ್ತಿತರರು ಉಪಸ್ಥಿತರಿದ್ದರು. ನ್ಯಾಯವಾದಿ ಶ್ವೇತಾ ಕೆ. ಮತ್ತು ಪ್ರಮಯಿ ಅತಿಥಿಗಳನ್ನು ಗೌರವಿಸಿದರು. ಸಾಹಿಲ್ ಕಾರ್ಯಕ್ರಮ ನಿರೂಪಿಸಿದರು.

ದಶಲಕ್ಷಣ ಮಹಾಪರ್ವ ಆಚರಣೆ- ಉದ್ಘಾಟಣಾ ಸಮಾರಂಭ

Article Image

ದಶಲಕ್ಷಣ ಮಹಾಪರ್ವ ಆಚರಣೆ- ಉದ್ಘಾಟಣಾ ಸಮಾರಂಭ

ವೇಣೂರು: ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ಪ್ರತಿವರ್ಷ ನಡೆಯುವ ದಶಲಕ್ಷಣ ಮಹಾಪರ್ವ ಆಚರಣೆಯ ಉದ್ಘಾಟನಾ ಸಮಾರಂಭವು ಆ. 28ರಂದು ನಡೆಯಿತು. ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ಮಧುರಾ ಪಿ. ಅಜಿಲರವರು ನೆರವೇರಿಸಿದರು. ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪಾವನ ಸಾನ್ನಿಧ್ಯ ವಹಿಸಿ ದಶಲಕ್ಷಣ ಮಹಾಪರ್ವದ ಮೊದಲನೇ ದಿನದ ಉತ್ತಮ ಕ್ಷಮಾ ಧರ್ಮದ ಬಗ್ಗೆ ಪ್ರವಚನ ನೀಡುತ್ತಾ, ನಾವು ನಮ್ಮ ಜೀವನದಲ್ಲಿ ಕ್ಷಮಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಕ್ರೋಧವನ್ನು ನಿಗ್ರಹಿಸಿಕೊಳ್ಳಬೇಕು. ಕ್ಷಮಿಸುವ ಗುಣ ದೇವರಗುಣ. ಮನುಷ್ಯನ ಸ್ವಭಾವಗಳಲ್ಲಿ ಕ್ರೋಧವು ಕೂಡ ಒಂದು. ಸಿಟ್ಟು ಬಾರದಿರುವ ಹಾಗೆ ಪ್ರಯತ್ನಿಸೋಣ ಎಂದು ಹೇಳಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಶ್ರೀಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಉಪಾಧ್ಯಕ್ಷರು, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು, ಹಬ್ಬಗಳ ರಾಜ, ದಶಲಕ್ಷಣ ಪರ್ವ, ಆತ್ಮಶುದ್ಧೀಕರಣದ ಪವಿತ್ರ ಹಬ್ಬವೇ ದಶಲಕ್ಷಣ ಮಹಾಪರ್ವ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲರು ಆಗಮಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೂಡುಬಿದಿರೆಯ ಸಂಜಯಂತ್‌ ಕುಮಾರ್‌ ಶೆಟ್ಟಿ, ಶಂಭವ ಕುಮಾರ್‌, ಸುದೇಶ್‌ ಕುಮಾರ್‌ ಮತ್ತಿತರ ಗಣ್ಯರು ಸೇರಿದಂತೆ ಶ್ರಾವಕ-ಶ್ರಾವಕಿಯರು ಪಾಲ್ಗೊಂಡಿದ್ದರು. ಸಮಿತಿಯ ಪ್ರದಾನ ಕಾರ್ಯದರ್ಶಿ ವಿ. ಪ್ರವೀಣ್‌ ಕುಮಾರ್‌ ಇಂದ್ರರವರು ಸ್ವಾಗತಿಸಿದರು. ಅಳದಂಗಡಿ ಅರಮನೆ ಶಿವಪ್ರಸಾದ್‌ ಅಜಿಲರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಸಮಿತಿಯ ಜೊತೆ ಕಾರ್ಯದರ್ಶಿ ಮಹಾವೀರ್‌ ಜೈನ್‌ ಮೂಡುಕೋಡಿರವರು ನಿರೂಪಿಸಿದರು.

ದಶಲಕ್ಷಣ ಪರ್ವ

Article Image

ದಶಲಕ್ಷಣ ಪರ್ವ

ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ (ರಿ.) ಹಿರಿಯಂಗಡಿ, ಕಾರ್ಕಳದಲ್ಲಿ ದಿನಾಂಕ 28.08.2025ನೇ ಗುರುವಾರದಿಂದ 06.09.2025ನೇ ಶನಿವಾರದ ಪರ್ಯಂತ ಆಶ್ರಮದ ಜಿನ ಮಂದಿರದ ಪ್ರಾಂಗಣದಲ್ಲಿ ಪ್ರತಿನಿತ್ಯ ಸಂಜೆ ಗಂಟೆ 6.00ರಿಂದ ಪರಮಪೂಜ್ಯ 108 ಮುನಿಶ್ರೀ ಮಹಿಮಾಸಾಗರ ಮುನಿ ಮಹಾರಾಜರ ಆಶೀರ್ವಾದ ಪೂರ್ವಕ ಹಾಗೂ ಕಾರ್ಕಳ ಶ್ರೀ ಜೈನ ಮಠದ ರಾಜಗುರು ಧ್ಯಾನಯೋಗಿ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಶಲಕ್ಷಣ ಪರ್ವ ಸಮಾರಂಭವು ಪೂಜೆ, ಭಜನೆ ಉಪನ್ಯಾಸ, ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ವಿ.ಸೂ. ಈ ಪುಣ್ಯ ದಿನಗಳಲ್ಲಿ ತಾವು ನೀಡಿದ ಅಮೂಲ್ಯ ದಾನವನ್ನು ಸ್ವೀಕರಿಸಲಾಗುವುದು.

ವೇಣೂರು: ನವೀಕೃತ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Article Image

ವೇಣೂರು: ನವೀಕೃತ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

2000ನೇ ಇಸವಿಯಲ್ಲಿ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದಭ೯ದಲ್ಲಿ ಶ್ರೀ ಬಾಹುಬಲಿ ಸಭಾಭವನವನ್ನು ನಿಮಾ೯ಣ ಮಾಡಿ ಲೋಕಾಪ೯ಣೆ ಮಾಡಲಾಗಿತ್ತು. ಈಗ ಈ ಸಭಾಭವನದ ವ್ಯವಸ್ಥೆಯನ್ನು ಇನ್ನಷ್ಟು ಉನ್ನತೀಕರಿಸಿ ಆಧುನಿಕವಾಗಿ ನವೀಕರಿಸಲಾಗಿದೆ. ದಿನಾಂಕ 22.08.2025ನೇ ಶ್ರಾವಣ ಶುಕ್ರವಾರದ ಶುಭ ಸಂದಭ೯ದಲ್ಲಿ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆಯನ್ನು ಮೂಡುಬಿದ್ರಿ ಶ್ರೀ ಜೈನ ಮಠದ ಪರಮ ಪೂಜ್ಯ ,"ಭಾರತಭೂಷಣ" ಡಾ|ಸ್ವಸ್ತಿಶ್ರೀ ಚಾರುಕೀತಿ೯ ಪಂಡಿತಾಚಾಯ೯ವಯ೯ ಮಹಾಸ್ವಾಮೀಜಿಯವರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ್‌ ಅಜಿಲರ ಉಪಸ್ಥಿತಿಯಲ್ಲಿ, ಕನಾ೯ಟಕ ಸರಕಾರದ ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್‌ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ಸಂದಭ೯ದಲ್ಲಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಹೇಮರಾಜ್‌ ಬೆಳ್ಳಿಬೀಡು, ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಕಾಯ೯ದಶಿ೯ಗಳಾದ ವಿ.ಪ್ರವೀಣ್‌ ಕುಮಾರ್‌ ಇಂದ್ರ ಕೋಶಾಧಿಕಾರಿಗಳಾದ ಪಿ. ಜಯರಾಜ್‌ ಕಂಬ್ಳಿ, ಜತೆ ಕಾಯ೯ದಶಿ೯ಗಳಾದ ಮಹಾವೀರ್‌ ಜೈನ್‌ ಮೂಡುಕೋಡಿ, ಕಾಯ೯ಕಾರಿ ಸಮಿತಿಯ ಸದಸ್ಯರುಗಳಾದ ಬಿ.ರತ್ನವಮ೯ ಇಂದ್ರ, ಪ್ರವೀಣ್‌ ಅಜ್ರಿ, ಸುರೇಶ್‌ ಕುಮಾರ್‌ ಆರಿಗ, ಭರತ್‌ ಕುಮಾರ್‌ ಆರಿಗ, ಶಮಿ೯ತ್‌ ಕುಮಾರ್‌ ಹಾಗೂ ಹಿರಿಯ ಶ್ರಾವಕಿಯಾದ ಗುಣವತಿ ಎ. ಆಳ್ವ ಮತ್ತು ರಾಜ್ಯ ಜೈನ ಮಹಿಳಾ ಒಕ್ಕೂಟದ ನಿದೇ೯ಶಕಿಯಾದ ಸರೋಜಾ ಜಿ.ಜೈನ್‌, ಪುರೋಹಿತ ಸಚಿನ್‌ ಇಂದ್ರ ಮತ್ತಿತರರು ಉಪಸ್ಥಿತರಿದ್ದರು.

ವೇಣೂರು: ದಶಲಕ್ಷಣ ಮಹಾಪರ್ವ ಆಚರಣೆ

Article Image

ವೇಣೂರು: ದಶಲಕ್ಷಣ ಮಹಾಪರ್ವ ಆಚರಣೆ

ಬೆಳ್ತಂಗಡಿ ತಾಲೂಕಿನ ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥ ಸಮಿತಿ (ರಿ.) ವತಿಯಿಂದ ಇತಿಹಾಸ ಪ್ರಸಿದ್ಧ ಭ| ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ಪರಮಪೂಜ್ಯ 'ಭಾರತಭೂಷಣ' ಜಗದ್ಗುರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಶ್ರೀ ದಿಗಂಬರ ಜೈನ ಮಠ ಮೂಡುಬಿದಿರೆ ಇವರ ದಿವ್ಯ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಸಮಿತಿಯ ಅಧ್ಯಕ್ಷರಾದ ಪದ್ಮವಿಭೂಷಣ ರಾಜರ್ಷಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಸಮಿತಿಯ ಉಪಾಧ್ಯಕ್ಷರಾದ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆ ಇವರ ನೇತೃತ್ವದಲ್ಲಿ ಇಂದಿನಿಂದ ಮೊದಲ್ಗೊಂಡು ತಾ. 06-09-2025ನೇ ಶನಿವಾರದವರೆಗೆ ಪ್ರತಿದಿನ ಅಪರಾಹ್ನ ಗಂಟೆ 4-30ರಿಂದ 6-00ರ ವರೆಗೆ ದಶಲಕ್ಷಣ ಮಹಾಪರ್ವ ಆಚರಣೆಯು ಜರುಗಲಿದೆ. ವಿ.ಸೂ: ಪ್ರತೀ ದಿನ ಅಪರಾಹ್ನ ಗಂಟೆ 4-00ರಿಂದ ವೇಣೂರು ಬಸದಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಯಾತ್ರಿ ನಿವಾಸದಲ್ಲಿ ಉಪನ್ಯಾಸ ಕಾರ್ಯಕ್ರಮಗಳು ಇರುತ್ತದೆ.

ಕಲಾವಿದನ ಕೈಚಳಕ: ತೆಂಗಿನಕಾಯಿಯಲ್ಲಿ ಅರಳಿದ ಗಣೇಶ

Article Image

ಕಲಾವಿದನ ಕೈಚಳಕ: ತೆಂಗಿನಕಾಯಿಯಲ್ಲಿ ಅರಳಿದ ಗಣೇಶ

ಒಬ್ಬ ಕಲಾವಿದನ ಕೈಚಳಕದಿಂದ ಅದ್ಬುತ ಕಲೆಗಳು ಸೃಷ್ಟಿಯಾಗುತ್ತವೆ ಹಾಗೂ ಅವರ ಕಲ್ಪನೆಯ ಚಿತ್ರಗಳು ವೈವಿದ್ಯಮಯವಾಗಿ ಮೂಡಿ ಬರುತ್ತವೆ ಹಲವಾರು ಕ್ಷೇತ್ರಗಳಲ್ಲಿ ಇಂಥ ಪ್ರಸಂಗಗಳನ್ನು ನೋಡಬಹುದಾಗಿದೆ. ಇವರಲ್ಲಿ ಬೆಳಗಾವಿ ಜಿಲ್ಲಾ ಬೈಲಹೊಂಗಲ ತಾಲೂಕು ದೇವಲಾಪುರ ಗ್ರಾಮದ ಕುಬೇರ ಮಹಾವೀರ ಲಗಮಣ್ಣವರ ಇವರೂ ಕೂಡಾ ಒಬ್ಬರು. ಇವರು ಅಪ್ಪಟ ಗ್ರಾಮೀಣ ಕಲಾವಿದ, ಅವರ ಮೂಲ ವೃತ್ತಿ ಕೃಷಿ. ಜೊತೆಗೆ ಕೃಷಿಗೆ ಪೂರಕ ಚಟುವಟಿಕೆಯಲ್ಲಿ ತೊಡಗಿಕೊಂಡ ಇವರು ಸೃಜನಶೀಲ ಕಲಾವಿದರಲ್ಲಿ ಅತ್ಯಂತ ಪ್ರಮುಖರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿರುವದರಿಂದ ಸಹಜವಾಗಿ ಇವರಲ್ಲಿ ಪರಿಸರಪ್ರೇಮ ಮೈಗೂಡಿಕೊಂಡಿದೆ. ಇದೀಗ ಗಣೇಶ ಉತ್ಸವ ಬಂದಿದೆ ದೇಶದಾದ್ಯಂತ ಗಣೇಶ ಚತುರ್ಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇವರು ಸಿಪ್ಪೆಸಹಿತ ಇರುವ ಟೆಂಗಿನಕಾಯಿಯಲ್ಲಿ ಸೂಕ್ಷ್ಮವಾಗಿ ಕೆತ್ತನೆ ಮಾಡಿ ಗಣೇಶನ ಮೂರ್ತಿಯನ್ನು ಅತ್ಯಂತ ಸುಂದರವಾಗಿ ತಯಾರಿಸುತ್ತಾರೆ. ಇವುಗಳು ಎಷ್ಟು ಸುಂದರವಾಗಿವೆ ಎಂದರೆ ಇವುಗಳನ್ನು ನೋಡಿದ ತಕ್ಷಣ ಆಕರ್ಷಣೀಯವಾಗಿರುತ್ತವೆ. ಇವರ ಈ ಟೆಂಗಿನಕಾಯಿಯ ಗಣಪತಿಯನ್ನು ಮನೆ ಮನೆಯಲ್ಲಿ ಪ್ರತಿಷ್ಠಾಪಿಸಲು ಜನ ತುಂಬಾ ಉತ್ಸುಕರಾಗಿದ್ದಾರೆ. ಐದು ದಿನಗಳ ಪೂಜೆಯ ನಂತರ ಈ ಮೂರ್ತಿಯನ್ನು ಹೊಲದಲ್ಲಿ ಅಥವಾ ಹಿತ್ತಲಿನಲ್ಲಿ ತೆಗ್ಗು ತೆಗೆದು ಹೂಳುವ ಮುಖಾಂತರ ವಿಸರ್ಜಿಸುತ್ತಾರೆ. ಇದು ಕೆಲವು ದಿನಗಳ ನಂತರ ಮೊಳಕೆಯೊಡೆದು ಮತ್ತೊಂದು ತೆಂಗಿನಗಿಡವಾಗಿ ಬೆಳೆಯುತ್ತದೆ ಎನ್ನುವ ಉದ್ದೇಶವಿರುತ್ತದೆ. ಇದರಿಂದಾಗಿ ಪರಿಸರದ ರಕ್ಷಣೆಯ ಜೊತೆಗೆ ಸಸ್ಯವೃದ್ಧಿಯಾಗುತ್ತದೆ ಎನ್ನುವ ಪರಿಕಲ್ಪನೆ ನಿಜವಾಗಿಯೂ ಅದ್ಭುತವಾದದ್ದು. ಗಣೇಶ ಮಾತ್ರವಲ್ಲ ತೀರ್ಥoಕರರ ಮೂರ್ತಿಯನ್ನು ಕೂಡಾ ಸಿಪ್ಪೆಸಹಿತ ಇರುವ ಟೆಂಗಿನಕಾಯಿ ಯಲ್ಲಿ ಮೂಡಿಸುತ್ತಾರೆ. ಇವರ ಕಲೆಯನ್ನು ಮೆಚ್ಚಿ ದಿಗಂಬರ ಜೈನ ಮುನಿಗಳು ತ್ಯಾಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ ಆಶೀರ್ವದಿಸಿದ್ದಾರೆ. ಇವರದು ಇದೇತರಹದ ಕಲ್ಪನಾ ಲೋಕ, ಗ್ರಾಮೀಣ ಪರಿಸರದಲ್ಲಿ ಅಲ್ಲಿನ ಜನಪದ ಪ್ರಭಾವದಿಂದಾಗಿ ಎತ್ತು, ಚಕ್ಕಡಿ, ಗ್ವಾದಲಿ ಮುಂತಾದ ಕಮತದ ಪರಿಕರಗಳ ಚಿತ್ರಣಗಳನ್ನು ಕಣ್ಣು ಕಟ್ಟುವಂತೆ ತಯಾರಿಸುವದಕ್ಕೆ ಇವರು ಸಿದ್ದ ಹಸ್ತರು. ನಮ್ಮ ಹಳೆಯ ಕಾಲದ ಮನೆಗಳ ಕೂಡುಕುಟುಂಬ ಜೀವನದ ಸೊಗಸನ್ನು ಅರ್ಥ ಮಾಡಿಕೊಂಡವರಿಗೆ ಮಾತ್ರ ನಮ್ಮ ಜಾನಪದ ಸೊಗಡು ಅರ್ಥವಾಗಬಲ್ಲದು ಅಳಿವಿನ ಅಂಚಿನಲ್ಲಿರುವ ಇಂಥ ವಸ್ತುಗಳನ್ನು ತಯಾರಿಸಿ ಕುತೂಹಲ ಮೂಡಿಸುತ್ತಿದ್ದಾರೆ. ಇವರಲ್ಲಿಯ ಕಲಾಪ್ರತಿಭೆಗೆ ಪ್ರೋತ್ಸಾಹ ಹಾಗೂ ಪುರಸ್ಕಾರದ ಅಗತ್ಯವಿದೆ. ಈ ಅದ್ಬುತ ಕಲಾವಿದನ ಕೈಯಿಂದ ಇನ್ನೂ ಹಲವಾರು ಸಾಮಗ್ರಿಗಳು ಮೂಡಿಬರಲಿ, ಸರಕಾರವೂ ಸೇರಿದಂತೆ ಎಲ್ಲರೂ ಇವರ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸಲಿ ಎನ್ನುವ ಆಶಯ ನಮ್ಮದು. ಶಾಂತರಾಜ ಮಲ್ಲಸಮುದ್ರ ಲೇಖಕರು

ಗುರುವಂದನಾ ಕಾರ್ಯಕ್ರಮ

Article Image

ಗುರುವಂದನಾ ಕಾರ್ಯಕ್ರಮ

ಮೂಡುಬಿದಿರೆ: ಪ.ಪೂ. ಆಚಾರ್ಯ 108 ಗುಲಾಬು ಭೂಷಣ ಮುನಿಮಹಾರಾಜರ ಪಾವನ ಸಾನ್ನಿಧ್ಯದಲ್ಲಿ ದಶಲಕ್ಷಣ ಮಹಾಪರ್ವ ಆಚರಣೆ ಹಾಗೂ ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. "ಭಾರತಭೂಷಣ" ಜಗದ್ಗುರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳವರ ಪಟ್ಟಾಭಿಷೇಕ ವರ್ಧಂತಿ ರಜತ ಮಹೋತ್ಸವದ ಪ್ರಯುಕ್ತ ಗುರುವಂದನಾ ಕಾರ್ಯಕ್ರಮವು ದಿನಾಂಕ: 29-08-2025ನೇ ಶುಕ್ರವಾರ 1000 ಕಂಬದ ಬಸದಿ ಆವರಣದಲ್ಲಿ ಜರಗಲಿರುವುದು.

ಜೈನ ವಧು-ವರರ ರಾಜ್ಯಮಟ್ಟದ ಸಮಾವೇಶ

Article Image

ಜೈನ ವಧು-ವರರ ರಾಜ್ಯಮಟ್ಟದ ಸಮಾವೇಶ

ಚಿಗುರು ಆಲ್ ಇಂಡಿಯಾ ವಧು-ವರರ ವೇದಿಕೆಯ ಆಶ್ರಯದಲ್ಲಿ ವಿದ್ಯಾಗಿರಿಯ ಆಳ್ವಾಸ್‌ ನುಡಿಸಿರಿ ವೇದಿಕೆಯಲ್ಲಿ ಭಾನುವಾರ ಸಂಪರ್ಕ-ಪರಿಚಯ ರಾಜ್ಯಮಟ್ಟದ ಜೈನ ವಧು ವರರ ಸಮಾವೇಶ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌ ಸಮಾವೇಶವನ್ನು ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ ಮೋಹನ ಆಳ್ವ ಅವರು ವೆಬ್‌ಸೈಟ್ ಅನಾವರಣಗೊಳಿಸಿದರು. ಸುಭಾಶ್ಚಂದ್ರ ಚೌಟ ಅಧ್ಯಕ್ಷತೆ ವಹಿಸಿದರು. ಸಂಚಾಲಕ ಸಂಪತ್ ಜೈನ್ ಹೊಸ್ಕಾರ್ ಪ್ರಸ್ತಾವನೆಗೈದರು. ಜೈನ ಸಮುದಾಯದ ಪ್ರಮುಖರಾದ ಸಂಪತ್‌ ಶಿಮುಂಜೆಗುತ್ತು, ಭುಜಬಲಿ ಧರ್ಮಸ್ಥಳ, ಪೂರ್ಣಚಂದ್ರ ಜೈನ್‌, ವಿಜಯ ಕುಮಾ‌ರ್‌ ಜೈನ್ ನೂರಾಳ್‌ಬೆಟ್ಟು, ರಕ್ಷಿತ್ ಜೈನ್ ಬಡೆಕಾವುಗುತ್ತು, ಪ್ರಭಾತ್ ಬಲ್ನಾಡ್, ನೇಮಿರಾಜ್ ಅರಿಗ, ಜಿನೇಂದ್ರ ಜೈನ್ ಈದು, ಮಹೇಂದ್ರ ಜೈನ್‌, ಕೆ.ಸಿ. ಧರಣೇಂದ್ರಯ್ಯ, ಜ್ವಾಲ ಪ್ರಸಾದ್, ಆಮಂತ್ರಣ ವೇದಿಕೆ ಜಿಲ್ಲಾ ಉಪಾಧ್ಯಕ್ಷೆ ಅನಿತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Article Image

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ ಪರಂಪರೆ ಹಾಗೂ ಹೆಗ್ಗಡೆಯವರ ಬಹುಮುಖಿ ಸಮಾಜಸೇವಾ ಕಾರ್ಯಗಳನ್ನು ಬೆಂಬಲಿಸಿ ಸಕ್ರಿಯ ಸಹಕಾರ ನೀಡುವುದು ಸಮಗ್ರ ಜೈನಸಮಾಜದ ಕರ್ತವ್ಯವಾಗಿದೆ ಎಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಕಾರ್ಕಳ ಸೀಮೆಯ ಜೈನ ಬಾಂಧವರೊಂದಿಗೆ ಶನಿವಾರ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರನ್ನು ಗೌರವಿಸಿ ಶುಭ ಹಾರೈಸಿದರು. ಕೆಸರಾದ ನೀರನ್ನು ಮತ್ತೆ ತಿಳಿಯಾಗಿ ಪರಿಶುದ್ಧಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಪಪ್ರಚಾರ, ಆರೋಪಗಳಲೆಲ್ಲ ದೂರವಾಗಲಿ. ಹೆಗ್ಗಡೆಯವರಿಗೆ ಎಲ್ಲಾ ದೈವ-ದೇವರುಗಳು ದೀರ್ಘಾಯುರಾರೋಗ್ಯವನ್ನಿತ್ತು ಇನ್ನಷ್ಟು ಲೋಕಕಲ್ಯಾಣ ಕಾರ್ಯಗಳನ್ನು ಮಾಡುವಂತೆ ಹರಸಲೆಂದು ಸ್ವಾಮೀಜಿ ಪ್ರಾರ್ಥಿಸಿದರು. ಕಾರ್ಕಳ ಸೀಮೆಯ ಎಲ್ಲಾ ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುರೋಹಿತರು ತಂದ ಪ್ರಸಾದವನ್ನು ಹೆಗ್ಗಡೆಯವರಿಗೆ ಅರ್ಪಿಸಿದರು. ಸ್ವಾಮೀಜಿಯವರು ಕಾರ್ಕಳ ಮಠದ ಬಸದಿಯ ವಿಶೇಷ ಪ್ರಸಾದವನ್ನು ಹೆಗ್ಗಡೆಯವರಿಗೆ ನೀಡಿ ಶುಭ ಹಾರೈಸಿದರು. ಕಾರ್ಕಳದ ಡಾ. ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ಸತ್ಯಕ್ಕೆ ಸದಾ ಜಯವಿದೆ. ಮಾತುಬಿಡ ಮಂಜುನಾಥ ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಸತ್ಯ ಪ್ರಕಟವಾಗುವುದರೊಂದಿಗೆ ಆರೋಪಿಗಳಿಗೆ ಶಿಕ್ಷೆಯಾಗಲಿ. ಹೆಗ್ಗಡೆಯವರ ಜೊತೆ ನಾವೆಲ್ಲ ಸದಾ ಪೂರ್ಣ ಬೆಂಬಲ ನೀಡಲು ಸಿದ್ಧರು, ಬದ್ಧರು ಎಂದು ಅವರು ಭರವಸೆ ನೀಡಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಶಿರ್ತಾಡಿಯ ಎಸ್.ಡಿ. ಸಂಪತ್ ಸಾಮ್ರಾಜ್ಯ, ಸುದರ್ಶನ ಜೈನ್ ಬಂಟ್ವಾಳ, ಪುಷ್ಪರಾಜ ಜೈನ್, ಮಂಗಳೂರು, ಕುಲದೀಪ್, ಚೌಟರ ಅರಮನೆ, ಮೂಡಬಿದ್ರೆ, ಅಂಡಾರು ಮಹಾವೀರ ಹೆಗ್ಡೆ, ಅನಂತ್ರಾಜ ಪೂವಣಿ, ಶಿಶುಪಾಲ ಜೈನ್, ಮೋಹನ ಪಡಿವಾಳ್, ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ, ಗುಣವರ್ಮ ಜೈನ್, ಕಾರ್ಕಳ, ನೇಮಿರಾಜ ಆರಿಗಾ ಮೊದಲಾದವರು ಇದ್ದರು. ತಮ್ಮ ಬಗ್ಗೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಸಮಾಜ ಬಾಂಧವರ ಭಕ್ತಿ-ಗೌರವ, ಅಭಿಮಾನ ಸದಾ ಇದೇ ರೀತಿ ಇರಲೆಂದು ಹಾರೈಸಿ, ಹೆಗ್ಗಡೆಯವರು ಎಲ್ಲರಿಗೂ ಶುಭ ಹಾರೈಸಿದರು. ಕಾರ್ಕಳ ಸೀಮೆಯಿಂದ ಸುಮಾರು ಮುನ್ನೂರು ಮಂದಿ ಶ್ರಾವಕರು-ಶ್ರಾವಕಿಯರು ಆಗಮಿಸಿದರು.

ಜರ್ಮನ್ ಆಗಿದ್ದರೂ ಜೈನ ಧರ್ಮ ಪಾಲನೆ ಮಾಡುತ್ತಿರುವ ಖ್ಯಾತ ವಿದ್ವಾಂಸ ಹರ್ಮನ್

Article Image

ಜರ್ಮನ್ ಆಗಿದ್ದರೂ ಜೈನ ಧರ್ಮ ಪಾಲನೆ ಮಾಡುತ್ತಿರುವ ಖ್ಯಾತ ವಿದ್ವಾಂಸ ಹರ್ಮನ್

ಜರ್ಮನ್ ಆಗಿದ್ದರೂ ಜೈನ ಧರ್ಮ ಪಾಲನೆ ಮಾಡುತ್ತಿರುವ ಹರ್ಮನ್ ರವರು ಖ್ಯಾತ ವಿದ್ವಾಂಸರಾಗಿದ್ದಾರೆ. ಸಂಸ್ಕೃತ ಭಾಷೆಯನ್ನು ಕಲಿತು ಜೈನ ಧರ್ಮವನ್ನು ಆಳವಾಗಿ ಅಭ್ಯಾಸ ಮಾಡಿ ಇಂಗ್ಲಿಷ್ ಮತ್ತು ಜರ್ಮನ್ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿದ್ದಾರೆ. ಹಲವಾರು ಬಾರಿ ಸಮ್ಮೇದ ಶಿಖರ್ಜಿ, ಶ್ರವಣಬೆಳಗೊಳ ಮುಂತಾದ ಅನೇಕ ಜೈನ ಕ್ಷೇತ್ರಗಳ ದರ್ಶನ ಮಾಡಿದ್ದಾರೆ. ನಾವು ಜರ್ಮನಿಯಲ್ಲಿರುವ ವಿಷಯವನ್ನು ತಿಳಿದು ಅವರ ಮನೆಗೆ ಆಹ್ವಾನಿಸಿದ್ದರು. ಜರ್ಮನಿಯ ಹನೋವರ್ ನಗರದ ಬಳಿ ಸ್ಟ್ಯನ್ ಹುಡೆರ್ ಗ್ರಾಮದಲ್ಲಿ ದಂಪತಿಗಳು ಬಹಳ ಆದರದಿಂದ ನಮ್ಮನ್ನು ಸ್ವಾಗತಿಸಿ ಸತ್ಕರಿಸಿದರು. ಅವರ ಮನೆಯಲ್ಲಿ ಶ್ರವಣಬೆಳಗೊಳ ಹೊಂಬುಜ ಮತ್ತು ಕೊಲ್ಲಾಪುರ ಮಠದ ಭಟ್ಟಾರಕರು ಆಶೀರ್ವದಿಸಿ ಕೊಟ್ಟಿರುವ ಜಿನ ಬಿಂಬಗಳನ್ನು ಇಟ್ಟು ಪೂಜಿಸುತ್ತಿರುವುದನ್ನು ನಮಗೆ ತೋರಿಸಿದರು. ಮೂಡುಬಿದಿರೆ ಪೂಜ್ಯ ಭಟ್ಟಾರಕ ಸ್ವಾಮೀಜಿ ಅವರನ್ನು ಭೇಟಿ ಆಗಿ ಆಶೀರ್ವಾದ ಪಡೆದ ವಿಷಯವನ್ನು ತಿಳಿಸಿದರು. ಅವರ ಸಂಗ್ರಹದಲ್ಲಿ ಕನ್ನಡ ಪುಸ್ತಕಗಳು ಇವೆ.

ಶಿರ್ತಾಡಿಬೀಡು ನರೇಂದ್ರಕುಮಾರ್ ಸ್ಮರಣಾರ್ಥ ಬಸದಿಯಲ್ಲಿ ವಿಶೇಷ ಪೂಜೆ, ಯಕ್ಷಜಿನಗಾನ ವೈಭವ

Article Image

ಶಿರ್ತಾಡಿಬೀಡು ನರೇಂದ್ರಕುಮಾರ್ ಸ್ಮರಣಾರ್ಥ ಬಸದಿಯಲ್ಲಿ ವಿಶೇಷ ಪೂಜೆ, ಯಕ್ಷಜಿನಗಾನ ವೈಭವ

ಉಜಿರೆ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್.ಬಿ. ನರೇಂದ್ರಕುಮಾರ್ ಆ.4 ರಂದು ನಿಧನರಾಗಿದ್ದು ಅವರ ಆತ್ಮಶಾಂತಿಗಾಗಿ ಆಗೋಸ್ಟ್ 20 ರಂದು ಬುಧವಾರ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥ ಕ್ಷೇತ್ರದಲ್ಲಿ ಭಗವಾನ್ ಶಾಂತಿನಾಥಸ್ವಾಮಿ ಸನ್ನಿಧಿಯಲ್ಲಿ 216 ಕಲಶ ಅಭಿಷೇಕ ಮತ್ತು ಪಂಚಾಮೃತ ಅಭಿಷೇಕ ನಡೆಯಿತು. ಯಕ್ಷಜಿನಗಾನ ನಮನ: ಖ್ಯಾತ ಯಕ್ಷಗಾನ ಭಾಗವತರುಗಳಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು, ಚಂದ್ರಶೇಖರ ಆಚಾರ್, ಕುಮಾರಿ ಸಿಂಚನಾ ಮೂಡುಕೋಡಿ ಸುಶ್ರಾವ್ಯವಾಗಿ ಜಿನಭಕ್ತಿಗೀತೆಗಳನ್ನು ಯಕ್ಷಗಾನ ಶೈಲಿಯಲ್ಲಿ ಹಾಡಿದರು. ಕಾವ್ಯಶ್ರೀ ಅಜೇರು ಅವರಿಂದ ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ ಆರಂಭವಾದ ಯಕ್ಷಜಿನಗಾನ ನಮನದಲ್ಲಿ ಉದಯರಾಗ, ಭಗವಾನ್ ಚಂದ್ರನಾಥಸ್ವಾಮಿ ಸ್ತುತಿ, ಜಿನವಾಣಿ ಸ್ತುತಿ, ಶಾಂತಿನಾಥಸ್ವಾಮಿ ಸ್ತುತಿ, ಪಂಚಪರಮೇಷ್ಠಿಗಳ ಸ್ತುತಿ, ಯಕ್ಷಜಿನಗಾನಗಳನ್ನು ಕಲಾವಿದರು ಸುಶ್ರಾವ್ಯವಾಗಿ ಸಾದರಪಡಿಸಿದರು. ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದನದಲ್ಲಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಬಿ. ಜನಾರ್ದನ ತೋಳ್ಪಾಡಿತ್ತಾಯ, ದೇವಾನಂದ ಭಟ್ ಮತ್ತು ಚಂದ್ರಶೇಖರ ಭಟ್ ಸಹಕರಿಸಿದರು. ನಿವೃತ್ತ ತಹಶೀಲ್ದಾರ್ ಹಾಗೂ ಹವ್ಯಾಸಿ ಯಕ್ಷಗಾನ ಕಲಾವಿದರಾದ ಉಜಿರೆಯ ಸುರೇಶ್ ಕುದ್ರೆಂತಾಯ ದಿವಂಗತ ನರೇಂದ್ರ ಕುಮಾರ್ ಜೀವನ-ಸಾಧನೆ ಬಗ್ಯೆ ಸ್ಥಳದಲ್ಲೆ ಕವನ ಒಂದನ್ನು ರಚಿಸಿ ಯಕ್ಷಗಾನ ಶೈಲಿಯಲ್ಲಿ ಹಾಡಿದರು. ನಿವೃತ್ತ ಮುಖ್ಯೋಪಾಧ್ಯಾಯ ಉಜಿರೆಯ ಸೋಮಶೇಖರ ಶೆಟ್ಟಿ ದಿವಂಗತ ನರೇಂದ್ರ ಕುಮಾರ್ ಕ್ರೀಡೆ, ಯಕ್ಷಗಾನ, ಎನ್.ಸಿ.ಸಿ. ಮತ್ತು ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಧನ್ಯತೆಯಿಂದ ಸ್ಮರಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದರು. ಕೊನೆಯಲ್ಲಿ ಒಂಬತ್ತು ಬಾರಿ ಪಂಚನಮಸ್ಕಾರ ಮಂತ್ರವನ್ನು ಸಾಮೂಹಿಕ ಪಠಣ ಮಾಡಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು. ಡಾ. ಶೃತಕೀರ್ತಿರಾಜ ಮತ್ತು ಸಿದ್ಧಾಂತಕೀರ್ತಿ ರಾಜ, ಸಹೋದರಿ ಹಾಗೂ ಕುಟುಂಬಸ್ಥರು ಸಮಾರಂಭದ ಯಶಸ್ವಿಗೆ ಸಹಕರಿಸಿದರು. ಮುನಿರಾಜ ರೆಂಜಾಳ ಕಾರ್ಯಕ್ರಮ ನಿರ್ವಹಿಸಿದರು.

ಕತ್ತೋಡಿಯ ಹಿರಿಯರಾದ ಕೆ. ಜಗತ್ಪಾಲ ಮುದ್ಯರು ಇನ್ನಿಲ್ಲ

Article Image

ಕತ್ತೋಡಿಯ ಹಿರಿಯರಾದ ಕೆ. ಜಗತ್ಪಾಲ ಮುದ್ಯರು ಇನ್ನಿಲ್ಲ

ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಕತ್ತೋಡಿ ಮನೆಯ ಹಿರಿಯ ಸದಸ್ಯರು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ, ಪ್ರಗತಿಪರ ಕೃಷಿಕರು ಆಗಿದ್ದ ಕೆ. ಜಗತ್ಪಾಲ ಮುದ್ಯ (95ವ) ಇವರು ಇಂದು ಮಧ್ಯಾಹ್ನ ನಿಧನ ಹೊಂದಿದರು. ಇವರು ಪತ್ನಿ ಕಮಲಾಜಿ, ಪುತ್ರ ಶ್ರೇಯಾಂಸ, ಪುತ್ರಿಯರಾದ ಶೈಲಶ್ರೀ, ಸೌರಭ ಹಾಗೂ ಸಹೋದರರು ಸಹೋದರಿಯರನ್ನು ಮತ್ತು ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಮೂಡುಬಿದಿರೆ: ಎಕ್ಸಲೆಂಟ್ ನೂತನ ಲಾಂಛನ ಬಿಡುಗಡೆ

Article Image

ಮೂಡುಬಿದಿರೆ: ಎಕ್ಸಲೆಂಟ್ ನೂತನ ಲಾಂಛನ ಬಿಡುಗಡೆ

ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಸಂಸ್ಥೆಗಳ ನೂತನ ಲಾಂಛನವನ್ನು ಮೂಡುಬಿದಿರೆ ತಾಲೂಕಿನ ತಹಶೀಲ್ದಾರ್ ಶ್ರೀಧರ್ ಎಸ್ ಮುಂದಲಮನಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು ಎದುರಾಗುವ ಅನೀರೀಕ್ಷಿತ ಸಮಸ್ಯೆಗಳನ್ನು ಎದುರಿಸಲು ವಿದ್ಯೆ ಸಹಕಾರಿಯಾಗಬಲ್ಲದು ಆದ್ದರಿಂದ ಎಲ್ಲರೂ ವಿದ್ಯಾವಂತರಾಗಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ದೇಹಕ್ಕೆ ಶಿರ ಪ್ರಧಾನವೆಂಬತೆ, ಸಂಸ್ಥೆಯ ಉದ್ದೇಶ, ಸಂಕಲ್ಪ, ಬದ್ಧತೆಗಳ ಸಂದೇಶವನ್ನು ಹೊಂದಿದ ಲಾಂಛನ ಸಂಸ್ಥೆಗೆ ಶಿರೋಭೂಷಣವಿದ್ದಂತೆ, ಬೆಳಕಿನ ಪ್ರತೀಕ ಎಕ್ಸಲೆಂಟಿನ ಲಾಂಛನದಲ್ಲಿ ಪುಸ್ತಕದ ಸಂಸ್ಕಾರ ಜ್ಯೋತಿಯ ಬೆಳಕಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕನ್ನೀವ ಸಂಕಲ್ಪವಿದೆ ಎಂದರು. ವೇದಿಕೆಯಲ್ಲಿ ಮಾಜಿ ಸಚಿವರು ಸಂಸ್ಥೆಯ ಸ್ಥಾಪಕ ಗೌರವಾಧ್ಯಕ್ಷರೂ ಆದ ಅಭಯಚಂದ್ರ ಜೈನ್. ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಉಪಮುಖ್ಯೋಪಾಧ್ಯಾಯ ಜಯಶೀಲ್ ಕಾರ್ಯಕ್ರಮ ನಿರೂಪಿಸಿದರು. ಪ್ರಿಯಾಂಕ ಸ್ವಾಗತಿಸಿದರು. ಪ್ರಮೀಳಾ ಪಿಂಟೋ ವಂದಿಸಿದರು.

ಎಕ್ಸಲೆಂಟ್ ಕಾಲೇಜಿನಲ್ಲಿ ಸ್ವಾತಂತ್ರೋತ್ಸವ

Article Image

ಎಕ್ಸಲೆಂಟ್ ಕಾಲೇಜಿನಲ್ಲಿ ಸ್ವಾತಂತ್ರೋತ್ಸವ

ಮೂಡುಬಿದಿರೆ: ಎಕ್ಸಲೆಂಟ್ ಸ್ವಾತಂತ್ರೋತ್ಸವ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್. ಮುಂದಲಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು. ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು. ಸಂಸ್ಥೆಯ ಗೌರವಾಧ್ಯಕ್ಷರಾದ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊAಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕಿ ಕು.ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್.ಡಿ.ಎಂ ಸ್ವಾತಂತ್ರ್ಯೋತ್ಸವ ಸಂಭ್ರಮ

Article Image

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್.ಡಿ.ಎಂ ಸ್ವಾತಂತ್ರ್ಯೋತ್ಸವ ಸಂಭ್ರಮ

ಉಜಿರೆ, ಆಗಸ್ಟ್ 15: ಸಮೃದ್ಧಿ, ಸುರಕ್ಷತೆ ಮತ್ತು ದಿಟ್ಟ ಹೆಜ್ಜೆಗಳೊಂದಿಗೆ ಮುನ್ನಡೆಯುವ “39;ಹೊಸ ಭಾರತ” ಕಟ್ಟುವ ಘೋಷವಾಕ್ಯದೊಂದಿಗೆ ಎಸ್.ಡಿ.ಎಂ ಕಾಲೇಜಿನ ಶ್ರೀರತ್ನವರ್ಮ ಹೆಗ್ಗಡೆ ಕ್ರೀಡಾಂಗಣವು 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಯಿತು. ಎಸ್.ಡಿ.ಎಂ ಶಾಲೆ, ಪದವಿ ಪೂರ್ವ, ಪದವಿ, ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯ, ತಾಂತ್ರಿಕ ಸೇರಿದಂತೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳ ಸಮಕ್ಷಮದಲ್ಲಿ ನಿವೃತ್ತ ಸೇನಾಧಿಕಾರಿ ಮೇಜರ್ ಜನರಲ್ ಎಂ.ವಿ.ಭಟ್ ಅವರು ಧ್ವಜಾರೋಹಣ ನೆರವೇರಿಸಿದರು. ಎನ್.ಸಿ.ಸಿ. ಕೆಡೆಟ್‌ಗಳಿಂದ ಧ್ವಜವಂದನೆ ನಡೆಯಿತು. ಈ ವೇಳೆ ಎನ್‌ಸಿಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಭಾನುಪ್ರಕಾಶ್, ಎನ್‌ಸಿಸಿ ಆಫಿಸರ್ ಸದಾನಂದ್, ರೋವರ್ ಸ್ಕೌಟ್ ಲೀಡರ್ ಪ್ರಸಾದ್ ಕುಮಾರ್ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್.ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಶ್ವನಾಥ ಪಿ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ ಕುಮಾರ್, ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ, ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ ಕುಮಾರ್ ಮತ್ತಿತರ ಶೈಕ್ಷಣಿಕ ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ ಕಾಲೇಜಿನ ಆಡಳಿತಾಂಗ ಕುಲಸಚಿವರಾದ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದಂತ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಲರಾಮ್ ನಾಯ್ಕ ಮುಖ್ಯ ಅತಿಥಿಯವರಾಗಿ ಧ್ವಜಾರೋಹಣ ಮಾಡಿದರು. ಮುಖ್ಯ ಅತಿಥಿಯವರಾದ ಡಾ. ಬಲರಾಮ್ ನಾಯ್ಕ ಅವರು ಮಾತನಾಡುತ್ತಾ: ದೇಶಕ್ಕೆ ಸ್ವಾತಂತ್ರ್ಯದ ಉಡುಗೊರೆ ತಂದು ಕೊಟ್ಟು ಕ್ರಾಂತಿಕಾರಿ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಜೀವನದಲ್ಲಿ ಗೆಲವು ಸಾಧಿಸಬೇಕೆಂದ್ದಿದರೆ ಭಾರತ ಇತಿಹಾಸವನ್ನು ಮರೆಯಬಾರದು. ಭಾರತದ ಸಂಪತ್ಭರಿತ ಹಾಗೂ ಸಡೃಡ ಸಂಪ್ರಧಾಯವನ್ನು ನಾವೆಲ್ಲರು ಗೌರವಿಸಬೇಕು. ಸಡೃಡ ದೇಶ ನಿರ್ಮಾಣಕ್ಕೆ ಆಂತರಿಕ ದ್ವೇಷ, ಅಸೂಯೆಗಳಂತ ದೌರ್ಬಲ್ಯಗಳಿಂದ ಮುಕ್ತರಾಗಬೇಕು. ಬಲಾಡ್ಯ ದೇಶ ನಿರ್ಮಾಣ ಮತ್ತು ಜನರ ಸಮಸ್ಯೆಗಳಿಗೆ ಆಧುನಿಕ ಕೌಶಲ್ಯ ಮತ್ತು ಜ್ಞಾನದ ಅವಶ್ಯಕವಿದೆ. ನಾವು ವೃತ್ತಿಪರರು ನಿಷ್ಠೆಯಿಂದ ಸೇವೆ ಸಲ್ಲಿಸುವುದರ ಮೂಲಕ ದೇಶ ನಿರ್ಮಾಣದಲ್ಲಿ ಪಾಲ್ಗೊಳ್ಳಬಹುದು. ಇಂದಿನ ಯುವಜನರು ಸರಿಯಾದ ಮಾರ್ಗವನ್ನು ಅನುಸರಿಸದರೊಂದಿಗೆ ತಮ್ಮನ್ನು ದೇಶ ಸೇವೆಗೆ ಅರ್ಪಿಸಿಕೊಳ್ಳಬಹುದು. ಈ ಸಂದರ್ಭದಲ್ಲಿ ಅಂಗ ಸಂಸ್ಥೆಗಳ ಪ್ರಥಮ ವರ್ಷದ ಒಬ್ಬ ಮತ್ತು ಅಂತಿಮ ವರ್ಷದ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಕಿರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ, ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪಕುಲಪತಿಯವರಾದ ವಿ. ಜೀವಂಧರ್ ಕುಮಾರ್, ಹಣಕಾಸು ಅಧಿಕಾರಿಗಳಾದ ವಿ ಜಿ ಪ್ರಭು, ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಸಂಸ್ಥೆಗಳ ಮುಖ್ಯಸ್ಥರು, ಉಪ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದಂತ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಆನಂದ್ ತಾವರಗೇರಿ ಅತಿಥಿಗಳನ್ನು ಸ್ವಾಗತಿಸಿದರು. ಡಾ. ವಿನಾಯಕ್ ಮತ್ತು ಡಾ. ಶ್ರೇಯಾ ಜಿ. ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಕಿರಣ ಕುಮಾರ್ ವಂದನಾರ್ಪಣೆಯನ್ನು ಮಾಡಿದರು.

ಬೋಳಂಬಳ್ಳಿಯಲ್ಲಿ ತೌಳವ ಇಂದ್ರ ಸಮಾಜದ ಬಸದಿ ದರ್ಶನ ಹಾಗೂ ಆಟಿಕೂಟ

Article Image

ಬೋಳಂಬಳ್ಳಿಯಲ್ಲಿ ತೌಳವ ಇಂದ್ರ ಸಮಾಜದ ಬಸದಿ ದರ್ಶನ ಹಾಗೂ ಆಟಿಕೂಟ

ತೌಳವ ಇಂದ್ರ ಸಮಾಜದ 2025ನೆ ವರ್ಷದ ಕ್ಷೇತ್ರ ದರ್ಶನ ಮತ್ತು ಆಟಿ ಕೂಟ ಇತ್ತೀಚೆಗೆ ಕಂಬದಕೋಣೆಯ ಬೋಳಂಬಳ್ಳಿ ಯ ಶ್ರೀ ಪದ್ಮಾವತಿ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ಬಸದಿಗೆ ಬನ್ನಿ ಘೋಷವಾಕ್ಯದ ಅನುಷ್ಠಾನದ ನಿಟ್ಟಿನಲ್ಲಿ ನಗರದಿಂದ ದೂರವಿರುವ ಊರಿನ ಬಸದಿಗಳ ದರ್ಶನ ಪಡೆದು ಅಲ್ಲಿಯ ಪರಿಸರದಲ್ಲಿ ಕ್ರೀಡಾ ಕೂಟ ಹಾಗೂ ಸಭೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು, ಬಸದಿಗಳನ್ನೂ ಸಂದರ್ಶಿಸುವುದೇ ಇದರ ಮೂಲ ಉದ್ದೇಶ. ಈ ಆಚರಣೆಯೇ "ಕ್ಷೇತ್ರದರ್ಶನ ಹಾಗೂ ಆಟಿ ಕೂಟ"ಕಾರ್ಯಕ್ರಮ. "ಜೈನ ಬ್ರಾಹ್ಮಣರ(ಇಂದ್ರ) ಸಮಾಜ ಬಹಳ ಸಣ್ಣ ಸಮುದಾಯ, ಅದರಲ್ಲೂ ತುಳು ಮಾತಾಡುವ ಇಂದ್ರ ಸಮಾಜ ಎನ್ನುವ ಒಂದು ಸಂಘಟನೆ ಇದೆ ಎಂದು ನನಗೆ ತಿಳಿದಿರಲಿಲ್ಲ, ಈ ಜೈನ ಪುರೋಹಿತ ವರ್ಗ ನಮ್ಮ ಕ್ಷೇತ್ರಕ್ಕೆ ಬಂದದ್ದು ನನಗೆ ಬಹಳ ಸಂತಸವಾಗಿದೆ, ಅವರ ಈ ದಿನದ ಎಲ್ಲಾ ಕಾರ್ಯ ಚಟುವಟಿಕೆಗೆ ಇಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಉಪಯೋಗಿಸಬಹುದು, ಮೇಲಾಗಿ ಏನಾದರೂ ವ್ಯವಸ್ಥೆ ಬೇಕಿದ್ದಲ್ಲಿ ಸಂತೋಷದಿಂದ ಪೂರೈಸಲು ಕ್ಷೇತ್ರ ಬದ್ಧವಾಗಿದೆ" ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾತನಾಡಿದ ಬೋಳಂಬಳ್ಳಿ ಶ್ರೀ ಪದ್ಮಾವತಿ ದೇವಿ ಕ್ಷೇತ್ರದ ಜ್ಯೋತಿಷ್ಯರೂ, ಧರ್ಮದರ್ಶಿಯೂ ಆದ ಧರ್ಮರಾಜ್ ಜೈನ್ ರವರು ಸಭೆಗೆ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊ.ಅಕ್ಷಯ ಕುಮಾರ್ ಮಳಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ತೌಳವ ಇಂದ್ರ ಸಂಘಟನೆಯು ಹದಿನೈದು ವರ್ಷಗಳಿಂದ ನಿರಂತರ ಸಮಾಜಮುಖಿ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಂಡು, ಪುರೋಹಿತ ವರ್ಗದವರಿಗೆ ಸ್ವಲ್ಪ ಬಿಡುವುವಿರುವ ಆಟಿ ಮಾಸದಲ್ಲಿ ಇಂಥಹ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದ್ದು, ಈ ವರ್ಷ ಬಹಳ ಹಿಂದಿನ ಪುರಾತನ ಆಳುಪ ಅರಸರ ಕಾಲದಿಂದಲೂ ಪೂಜೆ ಗೊಳ್ಳುತ್ತಿರುವ ಶ್ರೀ ಪದ್ಮಾವತಿ ದೇವಿ ನೆಲೆಸಿರುವ ಬೋಳಂಬಳ್ಳಿ ಬಸದಿಯ ದರ್ಶನ ಮಾಡಿ, ಸ್ಥಳದಲ್ಲಿಯೇ ಸದಸ್ಯರಿಗೆ ಕೆಲ ಕ್ರೀಡೆಗಳನ್ನು ಏರ್ಪಡಿಸಿ ಕ್ಷೇತ್ರದ ಪ್ರಸಾದ ಸ್ವೀಕರಿಸಲು ನಿರ್ಧರಿಸಲಾಯಿತು" ಎಂದರಲ್ಲದೆ ಅತಿಥಿಗಳನ್ನೂ ಸ್ವಾಗತಿಸಿ ಮುಂದುವರಿದು ಕಾರ್ಯಕ್ರಮಕ್ಕೆ ಅನುಮತಿ ನೀಡಿ ಸಹಕರಿಸಿದ ಕ್ಷೇತ್ರದ ಆಡಳಿತ ಮಂಡಳಿಯನ್ನು ಶ್ಲಾಘಿಸಿದರು. ಅನಂತರ ಇನ್ನೋರ್ವ ಅತಿಥಿ ಧರ್ಮರಾಜ ಜೈನ್ ರವರ ಪುತ್ರ ಡಾಕ್ಟರ್ ಆಕಾಶ್ ರಾಜ್ ರವರೂ ಮನೋರಂಜನೆಯ ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸುತ್ತಾ ಸಂಘದ ಚಟುವಟಿಕೆಗಳನ್ನು ಹೊಗಳುತ್ತಾ,ಪುರೋಹಿತರ ಸಂಘಟನೆ ಇಲ್ಲಿಗೆ ಬಂದುದು ನಮ್ಮ ಭಾಗ್ಯ ಎಂದು ತಿಳಿಯುತ್ತೇವೆ ಎಂದರು ಹಾಗು ಮುಂದಕ್ಕೂ ಪ್ರೋತ್ಸಾಹ ನೀಡುವ ಭರವಸೆ ನೀಡಿದರು. ಅನಂತರ ಧರ್ಮರಾಜ ಜೈನ್ ರವರನ್ನು ಶಾಲು, ಹಾರ, ಫಲ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು ಹಾಗೂ ಇಂದ್ರ ಸಮಾಜದ ವತಿಯಿಂದ ಕ್ಷೇತ್ರಕ್ಕೆ ದೇಣಿಗೆಯನ್ನು ನೀಡಲಾಯಿತು. ಕ್ಷೇತ್ರದ ವತಿಯಿಂದ ಹಿರಿಯ ಪುರೋಹಿತರಾದ ಪಡೆಂಗಡಿ ಅರುಣಾ ಕುಮಾರ್ ಇಂದ್ರ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಇಂದ್ರ ಸಮಾಜದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಎರ್ಮಾಳು ಸುಧೀರ್ ಕುಮಾರ್ ಇಂದ್ರರವರನ್ನೂ ಶಾಲುಹಾಕಿ ಅಭಿನಂದಿಸಲಾಯಿತು. ಉಪಾಧ್ಯಕ್ಷರಾದ ದಿವ್ಯಾವಿರೇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ವಾಣಿಶ್ರೀ ಪ್ರಾರ್ಥನೆ ನೆರವೇರಿಸಿದರು. ಕಾರ್ಯದರ್ಶಿ ಅಭಯ ಕುಮಾರ್ ಧನ್ಯವಾದ ಸಮರ್ಪಿಸಿದರು, ಆಹ್ಲಾದ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. ಸುಜಾತ, ಶ್ರೇಯಶ್ರೀ, ಮೇಘನಾರವರು ಕ್ರೀಡಾ ನಿರ್ಣಾಯಕರಾಗಿ ಸಹಕರಿಸಿದರು. ವಿಜೇತರ ಪಟ್ಟಿಯನ್ನು ಸುಜ್ಞಾನ ಇಂದ್ರ ವಾಚಿಸಿದರು. ಶಾಂತಿ ಮಂತ್ರದೊಡನೆ ಕಾರ್ಯಕ್ರಮಕ್ಕೆ ಮುಕ್ತಾಯ ಮಾಡಿ ಪ್ರವಾಸಿ ತಂಡ ಮೂಡುಬಿದಿರೆಗೆ ಹಿಂದಿರುಗಿತು.

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್

Article Image

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ವತಿಯಿಂದ ಜೈನ್ ಮಿಲನ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಆಟಿಡೂರ ತಮ್ಮನದ ಲೇಸ್ ಕಾರ್ಯಕ್ರಮ ಭಾನುವಾರ ಸಂಜೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಸುಮಾರು 65ಕ್ಕೂ ಅಧಿಕ ಬಗೆಯ ಆಟಿಯ ಖಾದ್ಯಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಸಭಾ ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ಜೈನಬಾಂಧವರು ಆಟಿಡೊರ ತಮ್ಮನದ ಲೇಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಭಾರತೀಯ ಜೈನ್ ಮಿಲನ್ ವಲಯ 8ರ ಮಂಗಳೂರು ವಿಭಾಗದ ನಿಕಟಪೂರ್ವ ಅಧ್ಯಕ್ಷ ಪುಷ್ಪರಾಜ್ ಜೈನ್ ಉದ್ಘಾಟಿಸಿದರು. ಪದಪ್ರದಾನದ ಪೌರೋಹಿತ್ಯವನ್ನು ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ಸುದರ್ಶನ ಜೈನ್ ಪಂಜಿಕಲ್ಲು ವಹಿಸಿದ್ದರು. ಅಧ್ಯಕ್ಷತೆಯನ್ನು ಜೈನ್ ಮಿಲನ್ ಬಂಟ್ವಾಳ ಅಧ್ಯಕ್ಷ ಮಧ್ವರಾಜ್ ಜೈನ್ ಪಂಜಾಲು ವಹಿಸಿದ್ದರು. ನೂತನ ಸಾಲಿನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ರಾಜೇಂದ್ರ ಜೈನ್, ಕಾರ್ಯದರ್ಶಿಯಾಗಿ ಜಯಕೀರ್ತಿ ವೈ.ಎಸ್., ಕೋಶಾಧಿಕಾರಿಯಾಗಿ ಪ್ರವೀಣ್ ಕುಮಾರ್ ಬಸ್ತಿಪಡ್ಡು, ಉಪಾಧ್ಯಕ್ಷರಾಗಿ ತೇಜ್ ಪಾಲ್ ಜೈನ್, ಡಾ. ಸೀಮಾ ಸುದೀಪ್, ಅರ್ಕಕೀರ್ತಿ ಹೆಗ್ಡೆ, ಹರ್ಷರಾಜ್ ಬಲ್ಲಾಳ್, ವಿನಯಚಂದ್ರ ಜೈನ್, ಜೊತೆ ಕಾರ್ಯದರ್ಶಿಗಳಾಗಿ ಹರ್ಷೇಂದ್ರ ಹೆಗ್ಡೆ, ಸಂಧ್ಯಾ ಸಿದ್ಧಕಟ್ಟೆ, ಚಂದನಾ ಬೃಜೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸನ್ಮತಿ ಜಯಕೀರ್ತಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯಕುಮಾರ್, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೇಯಾಂಸ್ ಜೈನ್ ಸಹಿತ ಸಂಚಾಲಕರ ತಂಡ, ಕಾರ್ಯಕಾರಿ ಸಮಿತಿಯ ಅಧಿಕಾರ ಸ್ವೀಕರಿಸಿತು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಡ್ ಉಳಿಪ್ಪಾಡಿ ಮಾತನಾಡಿ, ಜೈನರು ಸಮಾಜದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುವುದರ ಮೂಲಕ ಗೌರವಾನ್ವಿತ ಸ್ಥಾನಮಾನದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಶುಭ ಹಾರೈಸಿದರು. ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಸರ್ವ ಸಮಾಜದ ಪ್ರೀತಿಗೆ ಮಾನ್ಯರಾದ ಜೈನರು ಸಾಮಾಜಿಕವಾಗಿ ಗೌರವಾನ್ವಿತರಾದ ಸ್ಥಾನದಲ್ಲಿದ್ದಾರೆ. ಜೈನ ಆಹಾರ ಪದ್ಧತಿಯಿಂದ ತೊಡಗಿ, ಮುನಿಗಳು ನೀಡಿದ ಸಂದೇಶಗಳು ಪ್ರಸ್ತುತವಾಗಿವೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಅಶೋಕ್ ಜೈನ್ ಮಾತನಾಡಿ, ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬ ಕುರಿತು ವಿವರಿಸಿದರು. ಈ ಸಂದರ್ಭ ಹಿರಿಯರನ್ನು ಗೌರವಿಸಲಾಯಿತು ನೂತನ ಅಧ್ಯಕ್ಷ ರಾಜೇಂದ್ರ ಜೈನ್ ಮುಂದಿನ ಯೋಜನೆಗಳ ಕುರಿತು ವಿವರಿಸಿದರು. ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ನಿರ್ದೇಶಕ ಪ್ರಮೋದ್ ಕುಮಾರ್ ವೇಣೂರು ಶುಭ ಹಾರೈಸಿದರು. ಮಂಗಳೂರು ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ನೂತನ ಕಾರ್ಯದರ್ಶಿ ಜಯಕೀರ್ತಿ ವೈ.ಎಸ್. ವಂದಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ಶಸ್ತ್ರಚಿಕಿತ್ಸೆ ಸಮ್ಮೇಳನ- ಹುಬ್ಬಳ್ಳಿ ಧಾರವಾಡ

Article Image

ಕರ್ನಾಟಕ ರಾಜ್ಯ ಮಕ್ಕಳ ಶಸ್ತ್ರಚಿಕಿತ್ಸೆ ಸಮ್ಮೇಳನ- ಹುಬ್ಬಳ್ಳಿ ಧಾರವಾಡ

ಧಾರವಾಡ, 8,9 ಮತ್ತು 10 ಆಗಸ್ಟ್ 2025: ಕರ್ನಾಟಕ ರಾಜ್ಯದ ಮಕ್ಕಳ ಶಸ್ತ್ರಚಿಕಿತ್ಸಕರ ಸಂಘದ (ಐ ಎ ಪಿಎಸ್-ಕೆ.ಎಸ್.ಸಿ.) -20 ನೇ ವಾರ್ಷಿಕ ಸಮ್ಮೇಳನವನ್ನು ಧಾರವಾಡದ ಎಸ್.ಡಿ.ಮ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹುಬ್ಬಳ್ಳಿಯ ಕರ್ನಾಟಕ ವೈದ್ಯಕಿಯ ಮಹಾವಿದ್ಯಾಲಯ (ಕೆ.ಎಂ.ಸಿ) ಜಂಟಿ ಸಹಯೋಗದೊಂದಿಗೆ “ಪೆಸುಕಾನ್ 2025“ ಎಂಬ ಶೀರ್ಷಿಕೆ ಅಡಿಯಲ್ಲಿ ಆಗಸ್ಟ್ 8ರಿಂದ 10ರವರಗೆ, "ಮಕ್ಕಳ ಶಸ್ತ್ರಚಿಕಿತ್ಸೆಯ ಆಯಾಮವನ್ನು ವಿಸ್ತರಿಸುವುದು" ಎಂಬ ಪರಿಕಲ್ಪನೆಯ ಸ್ಪೂರ್ತಿದಾಯಕ ವಿಷಯದೊಂದಿಗೆ ನಡೆಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಕುಲಪತಿಗಳಾದ ಡಿ. ವೀರೇಂದ್ರ ಹೆಗ್ಗಡೆ, ಉಪಕುಲಪತಿ ಡಾ. ನಿರಂಜನ್ ಕುಮಾರ್ ಅವರ ಆಶೀರ್ವಾದದೊಂದಿಗೆ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಆಗಸ್ಟ್ 9 ರಂದು ಎಸ್.ಡಿ.ಮ್ ಆಸ್ಪತ್ರೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಯತೀಂದ್ರ ನಂಜಯ್ಯ, (ಮಕ್ಕಳ ಶಸ್ತ್ರಚಿಕಿತ್ಸಕರು, ರಾಜ್ಯ ಮಟ್ಟಡ ಅಧ್ಯಕ್ಷರು), ಗೌರವಾನ್ವಿತ ಅತಿಥಿಗಳಾಗಿ ಸಾಕೆತ್ ಶೆಟ್ಟಿ, (ನಿರ್ವಾಹಕ ನಿರ್ದೇಶಕ, ಎಸ್.ಡಿ.ಮ್ ), ಡಾ. ವಿಜಯ್ ಕುಲಕರ್ಣಿ (ಪ್ರಾಂಶುಪಾಲರು ಎಸ್.ಡಿ.ಮ್), ಡಾ. ಅನಿಲ್ ಹಲಗೆರಿ ಬಿ, (ಪೆಸುಕಾನ್ 2025 ರ ಅಧ್ಯಕ್ಷರು), ಡಾ. ವಿಜಯ್ ಪೂಜಾರ್ ಸಿ (ಪೆಸುಕಾನ್ 2025, ರ ಸಹ-ಅಧ್ಯಕ್ಷರು), ಡಾ. ಕಿರಣ್ ಎಂ (ಗೌರವಾನ್ವಿತ ರಾಜ್ಯ ಮಟ್ತ್ಟದ ಕಾರ್ಯದರ್ಶಿ, ಐಎಪಿಎಸ್–ಕೆಎಸ್‌ಸಿ), ಡಾ. ಅಕ್ಷಯ್ ಕಲಾವಂತ್ (ಪೆಸುಕಾನ್ 2025, ರ ಸಂಘಟನಾ ಕಾರ್ಯದರ್ಶಿ), ಡಾ. ಪ್ರಶಾಂತ್ ಕೆ ಜುಲ್ಪಿ (ಪೆಸುಕಾನ್ 2025, ಖಜಾಂಚಿ) ಮತ್ತು ಡಾ. ವೆಂಕಟೇಶ್ ಕೆ ಎಲ್,ಬೆಂಗಳೂರು (ಐಎಪಿಎಸ್–ಕೆಎಸ್‌ಸಿಯ ಚುನಾಯಿತ ಅಧ್ಯಕ್ಷರು) ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ಆಗಸ್ಟ್ 8 ರಂದು, ಹುಬ್ಬಳ್ಳಿಯ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಡಾ. ರಾಜಶಂಕರ ಸಂಕಲ್ ಹಾಗೂ ಡಾ ರವೀಂದ್ರ ಖಾಸನಿಸ್ ರವರ ಸಹಯೋಗದೋಂದಿಗೆ ಮಕ್ಕಳ ಮೂತ್ರಪಿಂಡದ ಕಲ್ಲಿನ ಚಿಕಿತ್ಸೆ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಯಿತು. ಆಗಸ್ಟ್ 9 ಮತ್ತು 10 2025 ರಂದು ಎಸ್‌ಡಿಎಂ ಆಸ್ಪತ್ರೆ ಧಾರವಾಡದಲ್ಲಿ ನಡೆದ ಮುಖ್ಯ ಸಮ್ಮೇಳನದಲ್ಲಿ ಮಕ್ಕಳ ಅರ್ಭುಧರೋಗ, ಎದೆಗೂಡಿನ ಮತ್ತು ವಾಯುಮಾರ್ಗ ಶಸ್ತ್ರಚಿಕಿತ್ಸೆ, ಭ್ರೂಣದ ಶಸ್ತ್ರಚಿಕಿತ್ಸೆ ಹಾಗೂ ಲಾಪ್ರೋಸ್ಕೋಪಿ ಮತ್ತು ರೊಬೊಟಿಕ್ ಶಸ್ತ್ರಚಿಕಿತ್ಸೆ ಕುರಿತು ಉಪನ್ಯಾಸ ನೀಡಲಾಯಿತು. ಈ ಕಾರ್ಯಾಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಉಪನ್ಯಾಸಕರು ಮತ್ತು ಪ್ರತಿನಿಧಿಗಳು ಪಾಲ್ಗೊಂಡಿದರು.

ಮೂಡುಬಿದಿರೆ: ರತ್ನತ್ರಯ ಸೂತ್ರ ಧಾರಣೆ ಮತ್ತು ಬಸದಿಗಳಲ್ಲಿ ವಿಶೇಷ ಪೂಜೆ

Article Image

ಮೂಡುಬಿದಿರೆ: ರತ್ನತ್ರಯ ಸೂತ್ರ ಧಾರಣೆ ಮತ್ತು ಬಸದಿಗಳಲ್ಲಿ ವಿಶೇಷ ಪೂಜೆ

ಮೂಡುಬಿದಿರೆ: ಇಲ್ಲಿಯ ಶ್ರೀ ಜೈನ ಮಠದಲ್ಲಿ ಆ. 09ರಂದು ನೂಲ ಹುಣ್ಣಿಮೆ ಶ್ರಾವಣದ ದಿನ ಆಚರಿಸುವ ರತ್ನತ್ರಯ ಸೂತ್ರ ಧರಿಸುವ ಹಬ್ಬವನ್ನು ಆಚರಿಸಲಾಯಿತು. ಕಾಶಿಯ 18 ಬಸದಿಗಳಲ್ಲಿ ವಿಶೇಷ ಪೂಜೆ, ಹವನ ಮೂಲಕ ಶ್ರಾವಕರು ರತ್ನತ್ರಯ ಸೂತ್ರ ಧರಿಸಿದರು. ಆಚಾರ್ಯ ಗುಲಾಬ್ ಭೂಷಣ ಮುನಿರಾಜ್ ಉಪಸ್ಥಿತರಿದ್ದರು. ಧರ್ಮ ನಿರತರಾದವರಿಗೆ ರಕ್ಷಣೆ ನೀಡುವ ಭಾವನೆ ಮಾಡುವ ದಿನ ಎಂದು ಇಂದು ಶ್ರೀ ಮಠದಲ್ಲಿ ಹವನದ ಬಳಿಕ ಜನಿವಾರ ಧಾರಣೆ ಸಂದರ್ಭದಲ್ಲಿ ಮೂಡುಬಿದಿರೆ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯವರ್ಯ ಮಹಾಸ್ವಾಮೀಜಿ ತಮ್ಮ ಅನುಗ್ರಹ ಆಶೀರ್ವಾದದಲ್ಲಿ ತಿಳಿಸಿದರು. ಅಪರಾಹ್ನ ಶ್ರೀ ಮಠದ ಶಾಂತಿ ಭವನದಲ್ಲಿ ಶಾಂತಿ ಚಕ್ರ ಆರಾಧನೆಯ 16ನೇ ಆರಾಧನೆ ಸಮಾಪನಗೊಂಡಿತು. ಆಚಾರ್ಯರ ಭಟ್ಟಾರಕರ ಪಾದ ಪೂಜೆ ಆರತಿ ಮಾಡಿ ಭಕ್ತವೃಂದ ಧರ್ಮಲಾಭಗಳಿಸಿದರು. ಅಭಯ ಚಂದ್ರ ಜೈನ್, ತಿಲಕ್ ಪ್ರಸಾದ್, ದರ್ಶನ್ ಶೆಟ್ಟಿ, ಸಂಜಯಂತ ಕುಮಾರ್, ಸುದೇಶ್ ಬೆಟ್ ಕೇರಿ, ಶ್ವೇತಾ ಜೈನ್ ಸೂರಜ್, ಮೊದಲಾದವರು ಉಪಸ್ಥಿತರಿದ್ದರು. ಉ.ಪ್ರ, ಮಹಾರಾಷ್ಟ್ರ, ಮ.ಪ್ರ, ಇಂದೂರಿನ ನೂರಾರು ಸಂಖ್ಯೆಯ ಭಕ್ತರು ಶ್ರೀಗಳಿಂದ ಜನಿವಾರ ಹಾಗೂ ರಕ್ಷಾ ಸೂತ್ರ ಪಡೆದರು.

ಭಾರತೀಯ ಸೇನೆಯಲ್ಲಿ ವಿಪುಲ ಅವಕಾಶ ನಿವೃತ್ತ ಯೋಧ ಕಾರ್ಗಿಲ್ ವೀರ ನಾಯಕ್ ಲೀಲಾದರ್ ಕಡಂಬೋಡಿ

Article Image

ಭಾರತೀಯ ಸೇನೆಯಲ್ಲಿ ವಿಪುಲ ಅವಕಾಶ ನಿವೃತ್ತ ಯೋಧ ಕಾರ್ಗಿಲ್ ವೀರ ನಾಯಕ್ ಲೀಲಾದರ್ ಕಡಂಬೋಡಿ

ಭಾರತೀಯ ಸೇನೆ ವಿಶ್ವದ ಅತ್ಯಂತ ಶಿಸ್ತಿನ ಮತ್ತು ಶಕ್ತಿಶಾಲಿ ಸೈನ್ಯಗಳಲ್ಲಿ ಒಂದು. ದೇಶದ ರಕ್ಷಣೆಯೊಂದಿಗೆ ಸೇನೆ ತನ್ನ ಸದಸ್ಯರಿಗೆ ವೈವಿಧ್ಯಮಯ ಅವಕಾಶಗಳನ್ನು ವೃತ್ತಿಪರ ಬೆಳವಣಿಗೆ, ಶಿಸ್ತು ಹಾಗೂ ಗೌರವದ ಜೀವನವನ್ನು ಒದಗಿಸುತ್ತದೆ. ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ನಾಯಕ್ ಲೀಲಾದರ್ ಕಡಂಬೋಡಿ ಅವರು ಹೇಳಿದರು. ಮೂಡುಬಿದಿರೆಯ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜರಗಿದ ವೀರ ಯೋಧರಿಗೆ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತೀಯ ಸೇನೆಯಲ್ಲಿ ಇರುವಂತಹ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ, ಕಾರ್ಗಿಲ್ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಯೋಗೇಂದ್ರ ಸಿಂಗ್ ಯಾದವ್ ಅವರ ಹೋರಾಟವನ್ನು ಸ್ಮರಿಸಿದರು. ನಿವೃತ್ತಿಯ ನಂತರವೂ ನಾವೂ ದೈಹಿಕವಾಗಿ ಸದೃಡರಾಗಿದ್ದರೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಗೌರವ ಅವಕಾಶಗಳು ಸಿಗುತ್ತವೆ. ಸೈನಿಕರನ್ನು ಗುರುತಿಸುವ ಕಾರ್ಯಕ್ರಮ ಮುಂದೆ ಕೂಡ ಈ ಸಂಸ್ಥೆಯಿಂದ ನಡೆಯಲಿ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಸೇನೆಗೆ ಸೇರಿ ಈ ಸಂಸ್ಥೆಯಿಂದ ಗೌರವಿಸುವಂತಾಗಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ ಎಲ್ಲರಿಗೂ ಭಗವಂತ ಪ್ರತಿಭೆಯನ್ನು ಕೊಟ್ಟಿದ್ದಾನೆ ಅದನ್ನು ಬಳಸಿಕೊಂಡು ಜೀವನವನ್ನು ರೂಪಿಸಿಕೊಳ್ಳಬೇಕು, ನಾವೆಲ್ಲರೂ ಸುಖ ಶಾಂತಿ ನೆಮ್ಮದಿಯಿಂದ ಇರಲು ಭಾರತೀಯ ಸೇನೆ ಕಾರಣ. ಸೇನೆಗೆ ಸೇರಲು ದೈಹಿಕ ಸಾಮರ್ಥ್ಯ ಬಹುಮುಖ್ಯ. ದೇಶ ಸೇವೆಗೆ ಎಲ್ಲರೂ ಸೇರಬೇಕು. ದೇಶ ಕಾಯುವ ಸೈನಿಕರ ಬಗ್ಗೆ ನಮಗೆ ಗೌರವ ಇರಬೇಕು, ಎಲ್ಲರಲ್ಲೂ ದೇಶ ಪ್ರೇಮವನ್ನು ಹುಟ್ಟಿಸಬೇಕು, ಎಂದು ಹೇಳಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ನಾಯಕ್ ಲೀಲಾಧರ ಕಡಂಬೋಡಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು ವೇದಿಕೆಯಲ್ಲಿ ದೇಶದ ವೀರಯೋಧರ ಸೇವೆಯನ್ನು ಅವರ ತ್ಯಾಗ ಬಲಿದಾನವನ್ನು ನೃತ್ಯದ ಮೂಲಕ ಬಿಂಬಿಸಲಾಯಿತು. ಭಾರತೀಯ ಧೀರ ಯೋಧ ಮೇಜರ್ ಆಶಾರಾಮ್ ತ್ಯಾಗಿ ಅವರ ಹೋರಾಟದ ದೃಶ್ಯ ರೂಪಕವನ್ನು ಅಭಿನಯಿಸಲಾಯಿತು. ಇದೇ ಕಾರ್ಯಕ್ರಮದಲ್ಲಿ ಸಂಸ್ಥೆಯ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಶಿಸ್ತು, ಜವಬ್ದಾರಿ ಹಾಗೂ ರಾಷ್ಟ್ರಭಕ್ತಿ ನೈತಿಕತೆಯ ಮೌಲ್ಯ ಸಾರುವ ಎನ್‌ಸಿಸಿ ಬ್ಯಾರೆಟ್‌ಗಳನ್ನು ನೀಡಲಾಯಿತು. ಶಿಸ್ತು, ಶಾರೀರಿಕ ಕ್ಷಮತೆ ಹಾಗೂ ರಾಷ್ಟ್ರಭಕ್ತಿಯ ಅಭಿವ್ಯಕ್ತಿಗಾಗಿ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಸಂಪತ್‌ಕುಮಾರ್ ಜೈನ್, ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದ ಈ ಕಾರ್ಯಕ್ರಮವನ್ನು ಶಾಶ್ವತ್ ಮತ್ತು ಆರ್ಯನ್ ಶಿಂಧೆ ನಿರೂಪಿಸಿದರು. ದಕ್ಷ ಸ್ವಾಗತಿಸಿ, ಚಾರ್ವಿ ವಂದಿಸಿದರು.

ಮೂಡುಬಿದಿರೆಯಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣೆ, ಯೋಜನೆ, ತರಬೇತಿ, ಚರ್ಚಾ ಗೋಷ್ಠಿ

Article Image

ಮೂಡುಬಿದಿರೆಯಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣೆ, ಯೋಜನೆ, ತರಬೇತಿ, ಚರ್ಚಾ ಗೋಷ್ಠಿ

ಮಂಗಳೂರು ಜಿಲ್ಲಾ ಪಂಚಾಯತ್ ತೋಟಗಾರಿಕಾ ಇಲಾಖೆ, ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರ, ರೈತ ಜನ್ಮಯ ರೈತ ಉತ್ಪಾದಕರ ಕಂಪನಿ, ಮೂಡುಬಿದರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿಗಳ ಜಂಟಿ ಸಹಭಾಗಿತ್ವದಲ್ಲಿ ತೋಟಗಾರಿಕೆ ಪಿತಾಮಹ ದಿ. ಡಾ. ಎಂ.ಎಚ್. ಮರಿಗೌಡ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕೆ ಬೆಳೆಗಳಲ್ಲಿ ಸಂಸ್ಕರಣೆ, ಯೋಜನೆ, ತರಬೇತಿ ಹಾಗೂ ಚರ್ಚಾ ಗೋಷ್ಠಿ ಆಗಸ್ಟ್ 8ರಂದು ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಲ್ಪವೃಕ್ಷ ಕ್ಕೆ ನೀರು ಎರೆದು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಬಾಹುಬಲಿ ಪ್ರಸಾದ್ ಮಾತನಾಡಿ ಕೃಷಿಕರಿಗೆ ನಮ್ಮ ಸೊಸೈಟಿ ಉತ್ತೇಜನವನ್ನು ನೀಡುತ್ತಿದೆ ಆ ಎಲ್ಲಾ ಸೌಲಭ್ಯಗಳನ್ನು ಕೃಷಿಕರು ಉಪಯೋಗಿಸಿಕೊಳ್ಳಬೇಕೆಂದು ಕೇಳಿಕೊಂಡರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ. ಅವರು ತೋಟಗಾರಿಮೋವಾಬಕೆ ಬೆಳೆಗಳ ಸಂಸ್ಕರಣೆ, ಯೋಜನೆಗಳ ಬಗ್ಗೆ ತರಬೇತಿಯನ್ನು ನೀಡಿದರು. ಆರಂಭದಲ್ಲಿ ಕೃಷಿ ವಿಚಾರ ವಿನಿಮಯ ಕೇಂದ್ರದ ಹಿರಿಯ ಸದಸ್ಯರಾದ ರಾಜವಮ೯ ಬೈಲಂಗಡಿಯವರು ಪ್ರಸ್ಥಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಎಂಸಿಎಸ್ ಬ್ಯಾಂಕಿನ ಕಾಯ೯ನಿವಾಕರಾದ ರಘುವೀರ್ ಕಾಮತ್, ಕೃಷಿ ವಿಚಾರ ಕೇಂದ್ರದ ಅಧ್ಯಕ್ಷ ಅಭಯ ಕುಮಾರ್, ರೈತಜನ್ಯ ಸಂಸ್ಥೆಯ ಅಧ್ಯಕ್ಷ ಲಿಯೋ ವಾಲ್ಟರ್ ನಜ್ರೆತ್, ಹಾಜರಿದ್ದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ. ಅವರು ಸ್ವಾಗತಿಸಿ ವಂದಿಸಿದರು. ಸದಾನಂದ ನಾರಾವಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಯಶಸ್ಸಿನ ಬದುಕಿಗೆ ಕೌಶಲಯುತ ಶಿಕ್ಷಣ ಅತ್ಯಗತ್ಯ -ಕೆ ಆರ್ ಪಂಡಿತ್

Article Image

ಯಶಸ್ಸಿನ ಬದುಕಿಗೆ ಕೌಶಲಯುತ ಶಿಕ್ಷಣ ಅತ್ಯಗತ್ಯ -ಕೆ ಆರ್ ಪಂಡಿತ್

ಕಲ್ಲಬೆಟ್ಟು : ಶಿಸ್ತು ಸಂಯಮದ ನಡವಳಿಕೆ ಬೌದ್ಧಿಕ ವಿಕಾಸಕ್ಕೆ ಪೂರಕ. ಸ್ವಯಂಪ್ರೇರಣೆಯಿಂದ ಪ್ರಾಮಾಣಿಕವಾಗಿ ಸಲ್ಲಿಸುವ ಸೇವೆ ಸಾರ್ಥಕ ಬದುಕಿಗೆ, ಸಮಾಜದ ಉನ್ನತಿಗೆ ಸಹಾಯಕ. ಕಠಿಣ ಪರಿಶ್ರಮ ಮತ್ತು ಕೌಶಲಗಳು ಯಶಸ್ಸಿನ ಆಧಾರಸ್ತಂಭಗಳು. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಬೆಳೆವಣಿಗೆ ಸಾಧ್ಯ. ಮನಸಾರೆ ಕಲಿತು ಹೃದಯಪೂರ್ವಕವಾಗಿ ಅನುಷ್ಠಾನ ಮಾಡಿದರೆ ಪ್ರತಿಫಲವೂ ಒಳ್ಳೆಯದಾಗಿರುತ್ತದೆ ಎಂದು ಮೂಡುಬಿದಿರೆ ಹಿರಿಯ ನ್ಯಾಯವಾದಿಗಳಾದ ಕೆ.ಆರ್. ಪಂಡಿತ್ ಹೇಳಿದರು. ಅವರು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ, ಎನ್ಎಸ್ಎಸ್, ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿಯವರು ಮಾತನಾಡುತ್ತ ಹಿರಿಯರ ಅನುಭವದ ಮಾತು ಕಿರಿಯರಿಗೆ ದಾರಿದೀಪ. ಭೂಮಿಯಲ್ಲಿ ಬಿತ್ತಿದ ಬೀಜಕ್ಕೆ  ನೀರು ಗೊಬ್ಬರವನ್ನು ಕೊಟ್ಟು ಬಂದ ಕಳೆಯನ್ನು ಕಾಲಕಾಲಕ್ಕೆ ಕೀಳುತ್ತ ಮುಂದೆ ಫಲವನ್ನು ಪಡೆಯುವಂತೆ ಬದುಕೆಂಬ ತೋಟದಲ್ಲಿ ಗುಣಗಳಿಗೆ ನೀರೆರೆದು ಪೋಷಿಸಿ ದೋಷಗಳನ್ನು ನಿವಾರಿಸಿಕೊಂಡಾಗ ಅರ್ಥಪೂರ್ಣವೂ ಸಮಾಜಕ್ಕೆ ಉಪಯುಕ್ತ ಜೀವನವೂ ನಮ್ಮದಾಗುತ್ತದೆ. ಆ ನಿಟ್ಟಿನಲ್ಲಿ ವಿವಿಧ ಘಟಕಗಳ ಕಾರ್ಯಚಟುವಟಿಕೆಗಳಲ್ಲಿ ಬದ್ಧತೆಯಿಂದ ಪಾಲ್ಗೊಂಡು ಬದುಕನ್ನು ಉಜ್ವಲಗೊಳಿಸಿಕೊಳ್ಳುವಂತೆ ಪ್ರೇರಣೆಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ ಸಮಾಜ ಸೇವೆಯ ಮೂಲಕ ದೇಶದ ಅಭಿವೃದ್ಧಿಯ ಕನಸನ್ನು ಕಾಣಬೇಕಾದರೆ ಶಾಲೆ ಕಾಲೇಜುಗಳಲ್ಲಿ  ವಿವಿಧ ಘಟಕಗಳ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಪಾಲ್ಗೊಳ್ಳಬೇಕು. ನೋಡಿ ಕಲಿ ಮಾಡಿ ತಿಳಿ ತತ್ವವನ್ನು ಅಳವಡಿಸಿಕೊಳ್ಳಬೇಕು. ಇಂದಿನ ಸವಾಲಿನ ಪಾಠಗಳು ಮುಂದಿನ ಸಂತೋಷದ ಬದುಕಿಗೆ ಪ್ರೇರಣೆಯಾಗುತ್ತದೆ. ಇಂದು ಬದುಕಿನಲ್ಲಿ ಮಾಡಿಕೊಳ್ಳುವ ಚಿಕ್ಕ ಬದಲಾವಣೆ ದೊಡ್ಡ ಸಾಧನೆಗೆ ಕಾರಣವಾಗುತ್ತದೆ. ಜೀವನವನ್ನು ಬಂದ ರೀತಿಯಲ್ಲಿ ಸ್ವೀಕರಿಸುವುದು ಒಂದು ಕಲೆ. ಧೈರ್ಯ ಮತ್ತು ಸಾಹಸದ ಬದುಕಿಗೆ ನಮ್ಮನ್ನು ತೆರೆದುಕೊಂಡಾಗ ನೈಜ ಜೀವನ ದರ್ಶನವಾಗುತ್ತದೆ ಎಂದು ನುಡಿದರು. ವೇದಿಕೆಯಲ್ಲಿ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಎನ್ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಮಹೇಂದ್ರ ಜೈನ್, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ತೇಜಸ್ವಿ ಭಟ್, ರೋವರ್ಸ್ ಅಧಿಕಾರಿ ಪ್ರದೀಪ್ ಕೆಪಿ ಮತ್ತು ವಿವಿಧ ಘಟಕಗಳ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ರೆಡ್ ಕ್ರಾಸ್ ಅಧಿಕಾರಿ ಪ್ರಶಾಂತ ಶೆಟ್ಟಿ ಸ್ವಾಗತಿಸಿ, ರೋವರ್ಸ್ ವಿದ್ಯಾರ್ಥಿ ರೇವಣ್ಣ ಸಿದ್ದು ಮತ್ತು ರೆಡ್ ಕ್ರಾಸ್ ವಿದ್ಯಾರ್ಥಿ ಮನ್ನಾ ಭೋಜಕ್ಕ ಅತಿಥಿಗಳನ್ನು ಪರಿಚಯಿಸಿದರು. ಎನ್ ಸಿಸಿ ಕೆಡೆಟ್ ದಿಶಾಂತ್ ಗೌಡ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್ಎಸ್ಎಸ್ ಸ್ವಯಂಸೇವಕಿ ರಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ರೇಂಜರ್ಸ್ ಅಧಿಕಾರಿ ಸಂಧ್ಯಾ ನಾಯಕ್ ವಂದಿಸಿದರು.

ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

Article Image

ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಮಹಿಳಾ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು( ಗ್ರಾ)ಮತ್ತು ಇನ್ನರ್ ವೀಲ್ ಕ್ಲಬ್ ಇವರ ಸಹಯೋಗದೊಂದಿಗೆ ದ.ಕ.ಜಿ.ಪ. ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೈನ್ ಇದರ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪುಚ್ಚೇರಿ ಕಟ್ಟೆ ಅಂಗನವಾಡಿ ಕಾರ್ಯಕರ್ತೆ ವಿಜಯರವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ ಕಾರಿಗಿ ಇವರು ಸ್ತನ್ಯಪಾನ ಸಪ್ತಾಹವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಸ್ತನ್ಯಪಾನದ ಮಹತ್ವ ಹಾಗೂ ಎಲ್ಲಾ ಮಹಿಳೆಯರಿಗೆ ಇದರ ಅರಿವನ್ನು ಮೂಡಿಸುವಲ್ಲಿ ಆರೋಗ್ಯ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಜವಾಬ್ದಾರಿಗಳನ್ನು ತಿಳಿಸುತ್ತಾ ಇನ್ನರ್ ವೀಲ್ ಕ್ಲಬ್ ನ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆಯಾಗಿರುವ ನೋಟರಿ ನ್ಯಾಯವಾದಿಗಳಾದ ಶ್ವೇತ ಜೈನ್ ಸ್ತನ್ಯಪಾನವು ಹೇಗೆ ಶಿಶುವಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂಬುದನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ಎದೆ ಹಾಲಿನಿಂದ ತಾಯಿಗೆ ಮತ್ತೆ ಮಗುವಿಗೆ ಆಗುವ ಪ್ರಯೋಜನಗಳು ಎದೆ ಹಾಲು ಉಣಿಸುವಿಕೆಗೆ ಕುಟುಂಬ ಹಾಗೂ ಸಮಾಜದ ಪ್ರೋತ್ಸಾಹದ ಅಗತ್ಯತೆ, ಸ್ವಚ್ಛತಾ ಕ್ರಮಗಳು, ಪಾಲಿಸಬೇಕಾದ ಆಹಾರ ಕ್ರಮಗಳು ಮುಂತಾದ ಸವಿವರ ಮಾಹಿತಿಯನ್ನು ನೀಡಿದರು. ಪುರಸಭಾ ಸದಸ್ಯರಾದ ಪುರಂದರ ದೇವಾಡಿಗರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷೆತೆ ಇದ್ದ ಪುರಸಭಾ ಸದಸ್ಯರಾದ ಶಕುಂತಲಾ ದೇವಾಡಿಗರವರು ಕಾರ್ಯಕ್ರಮದ ಆಯೋಜನೆ ಹಾಗೂ ಯಶಸ್ಸಿನ ಬಗ್ಗೆ ಸಂತೋಷ ವ್ಯಕ್ತಪಡಿಸಿ ಶುಭ ಹಾರೈಸಿದರು. ಇನ್ನರ್ ವೀಲ್ ಕ್ಲಬ್ ವತಿಯಿಂದ ಆಗಮಿಸಿದ ಎಲ್ಲಾ ತಾಯಂದಿರಿಗೆ ಪ್ರೋತ್ಸಾಹದಾಯಕ ಸ್ಮರಣಿಕೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ಅನಿತಾ ಪೃಥ್ವಿರಾಜ್, ಸಂಯೋಜಕಿ ಸುಜಾತ ಜೈನ್, ಶಾಲಿನಿ ನಾಯಕ್, ಪ್ರಕಾಶಿನಿ ಹೆಗ್ಡೆ, ಸುಜಯ ವೇದ ಕುಮಾರ್, ರತ್ನ ಪರಾಡ್ಕರ್, ವೀಣಾ ಜೈನ್, ಸ್ವಾತಿ ಬೋರ್ಕರ್ ಉಪಸ್ಥಿತರಿದ್ದರು. ಹಿರಿಯ ಮೇಲ್ವಿಚಾರಕಿ ಕಾತ್ಯಾಯಿನಿ ಶಾಲಾ ಸಹ ಶಿಕ್ಷಕಿ ಪ್ಲಾವಿಯಾ ಅಂಗನವಾಡಿ ಕಾರ್ಯಕರ್ತೆಯರಾದ ಸುಮತಿ, ವಿಜಯ, ಹೇಮಾವತಿ, ನಿರ್ಮಲ, ಪ್ರಿಯದರ್ಶಿನಿ ಎಸ್ ಜೈನ್, ವಿದ್ಯಾ, ಸಹಾಯಕಿ ಮಂಜವ್ವ, ಆರೋಗ್ಯ ಇಲಾಖೆಯ ಸಿಬ್ಬಂದಿ ಅನ್ನಪೂರ್ಣ ಬಾಲ ವಿಕಾಸ ಸಮಿತಿ ಸದಸ್ಯರು, ತಾಯಂದಿರು, ಪುಟಾಣಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಮೇಲ್ವಿಚಾರಕಿಯಾದ ಕಾತ್ಯಾಯಿನಿಯವರು ಎಲ್ಲರನ್ನು ಸ್ವಾಗತಿಸಿ ಪ್ರಿಯದರ್ಶಿನಿ ಎಸ್ ಜೈನ್ ನಿರೂಪಿಸಿ, ಸುಮತಿ ಧನ್ಯವಾದವಿತ್ತರು.

ದಕ್ಷಿಣ ಭಾರತ ಜೈನ ಸಭಾ ಸಾಂಗ್ಲಿ ಇದರ ಹುಬ್ಬಳ್ಳಿ ವಿಭಾಗೀಯ ನೂತನ ಪದಾಧಿಕಾರಿಗಳು

Article Image

ದಕ್ಷಿಣ ಭಾರತ ಜೈನ ಸಭಾ ಸಾಂಗ್ಲಿ ಇದರ ಹುಬ್ಬಳ್ಳಿ ವಿಭಾಗೀಯ ನೂತನ ಪದಾಧಿಕಾರಿಗಳು

ದಕ್ಷಿಣ ಭಾರತ ಜೈನ ಸಭೆ ಸಾಂಗ್ಲಿ ಇದು ಜೈನ ಸಮುದಾಯದ ಅತ್ಯಂತ ಪ್ರತಿಷ್ಠಿತ ಮತ್ತು ಬಹು ರಾಜ್ಯಗಳ ಜೈನರ ಪ್ರಾತಿನಿಧಿಕ ಸಂಸ್ಥೆ ಎಂದೇ ಕರೆಯಲ್ಪಡುವ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿವಿಧ ರೀತಿಯಲಿ ಸೇವೆಸಲ್ಲಿಸುತ್ತಿರುವ ಶತಮಾನದ ಇತಿಹಾಸ ಹೊಂದಿರುವ ಒಂದು ಬೃಹತ್ ಸಂಸ್ಥೆ. ಈ ಸಂಸ್ಥೆಯು ಹುಬ್ಬಳ್ಳಿ ವಿಭಾಗೀಯ ಆಡಳಿತ ಮಂಡಳಿಯನ್ನು ಹೊಂದಿದೆ. ಹುಬ್ಬಳ್ಳಿಯಲ್ಲಿ ದಿಗಂಬರ ಜೈನ ಬೋರ್ಡಿಂಗ ಶಾಖೆಯ ಮೂಲಕ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿಕೊಂಡದ್ದು ಇದಕ್ಕಾಗಿ ನೂತನವಾಗಿ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ತ್ರೈವಾರ್ಷಿಕ ಅಧಿವೇಶನದಲ್ಲಿ ನಡೆಯಿತು. ಈ ವಿಭಾಗೀಯ ಪದಾಧಿಕಾರಿಗಲ್ಲಿ ಟ್ರಸ್ಟಿಯಾಗಿ ಹುಬ್ಬಳ್ಳಿ ನಗರದ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಆರ್. ಟಿ. ಅಣ್ಣಿಗೇರಿ, ಉಪಾಧ್ಯಕ್ಷರಾಗಿ ನವಲಗುಂದದ ಸಮಾಜದ ಮುಖಂಡರಾದ ಬಾಹುಬಲಿ ಬಸ್ತಿ, ಮಹಾಮಂತ್ರಿಯಾಗಿ ಹುಬ್ಬಳ್ಳಿಯ ಪ್ರಸಿದ್ದ ವ್ಯಾಪಾರೋದ್ಯಮಿ ಭರತರಾಜ ಆರ್ ಬೀಳಗಿ, ಮಹಿಳಾ ಮಹಾಮಂತ್ರಿಯಾಗಿ ಹಿರಿಯ ಧರ್ಮಾನುರಾಗಿ ಹಿರಿಯ ಶ್ರಾವಕಿ ಪಂಕಜಾ ಎಮ್. ಸೂಜಿ ಇವರು ಆಯ್ಕೆಯಾಗಿದ್ದಾರೆ. ಎಸ್. ಆರ್. ಮಲ್ಲಸಮುದ್ರ

ಹೊಂಬುಜದ ಜೈನ ಮಠಕ್ಕೆ ಕಾಲ್ನಡಿಗೆಯಿಂದ ಶ್ರೀಕ್ಷೇತ್ರ ದರ್ಶನ ಮಾಡುವ ಸಂಕಲ್ಪ ಯಾತ್ರೆ

Article Image

ಹೊಂಬುಜದ ಜೈನ ಮಠಕ್ಕೆ ಕಾಲ್ನಡಿಗೆಯಿಂದ ಶ್ರೀಕ್ಷೇತ್ರ ದರ್ಶನ ಮಾಡುವ ಸಂಕಲ್ಪ ಯಾತ್ರೆ

ಜನರು ದೇವರಿಗೆ ಭಕ್ತಿ ಸಮರ್ಪಣೆ ಮಾಡಲು ವಿವಿಧ ವಿಧಾನಗಳನ್ನು ಅನುಸರಿಸುತ್ತಾರೆ. ಅದರಲ್ಲಿ ಕಾಲ್ನಡಿಗೆಯಿಂದ (ಪಾದಯಾತ್ರೆ) ಯಾತ್ರೆಯನ್ನು ಮಾಡುವ ಮೂಲಕ ದೇವರ ದರ್ಶನ ಮಾಡಿ ಧನ್ಯತಾ ಭಾವ ತೋರುವುದೂ ಕೂಡಾ ಒಂದು. ಈ ಪಾದಯಾತ್ರೆಯ ಉದ್ದೇಶ ದೇವರ ದರ್ಶನ ಮಾತ್ರವಲ್ಲ, ಸಾಧನೆ, ಯುವ ಶಕ್ತಿಯ ಉತ್ಸಾಹ, ಯುವಕರ ಸಂಘಟನೆ, ಧರ್ಮಜಾಗ್ರತಿ, ಸಂಸ್ಕೃತಿ ಮತ್ತು ಪರಂಪರೆಯ ಅನಾವರಣ ಕೂಡಾ ಅಡಗಿದೆ ಎನ್ನಬಹುದು ಜೊತೆಗೆ ಒಗ್ಗಟ್ಟಿನ ಪ್ರದರ್ಶನವೂ ಹೌದು. ಈ ಹಿನ್ನಲೆಯಲ್ಲಿ ಹಾವೇರಿ ಜಿಲ್ಲಾ ಶಿಗ್ಗಾವಿ ತಾಲೂಕ "ಅ ಮ ಕೊಪ್ಪ ಮತ್ತು ದುಂಡಸಿ" ಗ್ರಾಮದ ಜೈನ ಸಮಾಜದ ಯುವಕರು ಪ್ರಶಾಂತ ಬಿಶೆಟ್ಟಿ, ಸಂತೋಷ ಧರಣಪ್ಪನವರ, ಭರತೇಶ ದೀಪಣ್ಣವರ, ಬ್ರಹ್ಮಾನಂದ ಪುಟ್ಟಣ್ಣವರ, ಭರಮಪ್ಪ ದೇ, ಧರನಪ್ಪನವರ, ಧರಣೇಂದ್ರ ಜ ಮನಕಟ್ಟಿ, ಬಾಬು ಭದ್ರಾಪುರ, ಚಂದ್ರು ವೈಗುಡ್ಡಿ ಮುಂತಾದ ಇತರ ಯುವ ಮುಖಂಡರು ಒಂದು ತಂಡವನ್ನು ಕಟ್ಟಿಕೊಂಡು ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ದರ್ಶನ ಮಾಡುವ ಸಂಕಲ್ಪ ಮಾಡಿ ಯಾತ್ರೆಗೆ ಸನ್ನದ್ದರಾದರು. ಪ್ರಾರಂಭದಲ್ಲಿ 20 ಜನರಿದ್ದ ಈ ತಂಡದಲ್ಲಿ ಈಗ ನೂರರ ಸಂಖ್ಯೆ ದಾಟಿದೆ. ಈ ತಂಡವು ಪ್ರತಿವರ್ಷ ಶ್ರಾವಣ ಮಾಸದ ಕೊನೆಯ ಶುಕ್ರವಾರದಂದು ಹೊಂಬುಜದ ಶ್ರೀಕ್ಷೇತ್ರದ ಇಷ್ಟಾರ್ಥ ಫಲಪ್ರದಾಯಿನಿ ಮಹಾಮಾತೆ ಪದ್ಮಾವತಿ ಅಮ್ಮನವರ ದರ್ಶನಮಾಡುವ ಉದ್ದೇಶದಿಂದ ನಾಲ್ಕು ವರ್ಷಗಳಿಂದ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಇದು ಈ ತಂಡದ ನಾಲ್ಕನೇ ವರ್ಷದ ಪಾದಯಾತ್ರೆ. ಇದೇ ಆಗಸ್ಟ್ 17 ರಿಂದ 21 ರವರೆಗೆ ಕೈಗೊಂಡಿದ್ದು ಸುಮಾರು 200 ಕೀ ಮೀ ದಾರಿಯನ್ನು 5 ದಿನಗಳಲ್ಲಿ ಕ್ರಮಿಸಿ ಕ್ಷೇತ್ರವನ್ನು ತಲುಪಲಿದ್ದಾರೆ. ಶ್ರಾವಣ ಮಾಸದ ಕೊನೆಯ ಸಂಪತ್ ಶುಕ್ರವಾರ ದಿ 22ರಂದು ದೇವಿ ದರ್ಶನ ಮಾಡಿ ಪೂಜಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಸಂಕಲ್ಪ ಯಾತ್ರೆಯಲ್ಲಿ ಜಾತ್ಯತೀತವಾಗಿ ಸರ್ವಧರ್ಮದವರು ಕೂಡಾ ಭಾಗೀಗಳಾಗುತ್ತಿರುವದು ವಿಶೇಷವಾಗಿದೆ. ಅತ್ಯಂತ ಶ್ರದ್ದಾ ಭಕ್ತಿಯಿಂದ ದೇವಿ ದರ್ಶನ ಮಾಡಿ ಪಾವನರಾಗಬೇಕೆಂಬ ಉದ್ದೇಶ ಹೊಂದಿದ ಈ ತಂಡದ ಪಾದಯಾತ್ರೆ ಫಲಪ್ರದವಾಗಿ ಯಶಸ್ವಿಯಾಗಲಿ, ಜಗದ್ ರಕ್ಷಕಿ ಮಹಾಮಾತೆಯ ಕೃಪಾಶೀರ್ವಾದ ಎಲ್ಲರ ಮೇಲಿರಲಿ ಹಾಗು ಸಕಲ ಇಷ್ಟಾರ್ಥಗಳು ಈಡೇರಲಿ ಎನ್ನುವ ಆಶಯಗಳೊಂದಿಗೆ ಶುಭ ಹಾರೈಕೆಗಳು ಮತ್ತು ಅಭಿನಂದನೆಗಳು. ವರದಿ: ಶಾಂತರಾಜ ಮಲ್ಲಸಮುದ್ರ

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

Article Image

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಆಗಸ್ಟ್ 03 ರಂದು ಸುಳ್ಯ ದಲ್ಲಿ ನಡೆದಿದ್ದು, ಸಾಹಿತ್ಯ ಕೃಷಿಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ ನೂಜಿಬಾಳ್ತಿಲದ ಧರಣೇoದ್ರ ಇಂದ್ರ ಮತ್ತು ಮಂಜುಳಾರವರ ಸುಪುತ್ರರಾಗಿರುತ್ತಾರೆ.

ರಾಜಸ್ಥಾನದ, ಜೈಪುರ: ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಲಾಸ್ಯರಾಜ್

Article Image

ರಾಜಸ್ಥಾನದ, ಜೈಪುರ: ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಲಾಸ್ಯರಾಜ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿನಿಯಾದ ಲಾಸ್ಯರಾಜ್ ಇವಳು ರಾಜಸ್ಥಾನದ ಜೈಪುರದಲ್ಲಿ ನಡೆದ ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾಳೆ. ಇವಳು ವೀರವನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್. ಬಿ. ನರೇಂದ್ರ ಕುಮಾರ್ ಇವರ ಮೊಮ್ಮಗಳು ಹಾಗೂ ಸಿದ್ಧಾಂತ್ ಕೀರ್ತಿರಾಜ್ ಮತ್ತು ಸೌಭಾಗ್ಯ ಇವರ ಪುತ್ರಿ. ಇವರಿಗೆ ಎಸ್. ಡಿ.ಎಂ ಶಿಕ್ಷಣ ಸಂಸ್ಥೆಗಳ ಕ್ರೀಡಾ ಕಾರ್ಯದರ್ಶಿಗಳು ಹಾಗೂ ವಾಲಿಬಾಲ್ ತರಬೇತುದಾರರಾದ ರಮೇಶ್ ಹೆಚ್ ಇವರು ಸಹಕರಿಸಿ ಮಾರ್ಗದರ್ಶನವನ್ನು ನೀಡಿದರು.

ನವನಗರ ಸೇವಾ ಸಂಘಕ್ಕೆ ಕಾರ್ಯಧ್ಯಕ್ಷರ ನೇಮಕ

Article Image

ನವನಗರ ಸೇವಾ ಸಂಘಕ್ಕೆ ಕಾರ್ಯಧ್ಯಕ್ಷರ ನೇಮಕ

ಹುಬ್ಬಳ್ಳಿ ನವನಗರದ ಅಲ್ಪಸಂಖ್ಯಾತ ಜೈನ ಸೇವಾ ಸಂಘದ ಕಾರ್ಯಧ್ಯಕ್ಷರಾಗಿ ಅಶೋಕ ಯೋಗಪ್ಪನವರ ಇವರನ್ನು ಸಂಘದ ಅಧ್ಯಕ್ಷರಾದ ಶಾಂತರಾಜ ಮಲ್ಲಸಮುದ್ರ ಇವರು ನೇಮಕ ಮಾಡಿದ್ದಾರೆ. ಇತ್ತೀಚೆಗೆ ನಡೆದ ಸಂಘದ ವಾರ್ಷಿಕ ಸರ್ವಸಾದಾರಣ ಸಭೆಯಲ್ಲಿ ಸರ್ವನುಮತದಿಂದ ಇವರನ್ನು ಆಯ್ಕೆ ಮಾಡಲಾಗಿದೆ. ಅಶೋಕ ಯೋಗಪ್ಪನವರ ಇವರು ಎರಡು ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ 37 ವರ್ಷ ದಕ್ಷ ಪ್ರಾಮಾಣಿಕವಾಗಿ ಸುದೀರ್ಘ ಸೇವೆ ಸಲ್ಲಿಸಿ ಸಹಾಯಕ ನಿರ್ದೇಶಕರಾಗಿ ವಯೋನಿವೃತ್ತಿ ಹೊಂದಿದರು. ಕಳೆದ 12 ವರ್ಷಗಳಿಂದ ಸಮಾಜದ ಎಲ್ಲ ಕಾರ್ಯಗಳಲ್ಲಿ ಸಂಘದ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದು ಧಾರ್ಮಿಕ ಚಟುವಟಿಕೆಯಲ್ಲಿ ಕ್ರೀಯಾಶೀಲವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಎಸ್ ಆರ್ ಮಲ್ಲಸಮುದ್ರ

First Previous

Showing 4 of 20 pages

Next Last