Article Image

ದಿಗಂಬರ್ ಜೈನ್ ಮಹಾಸಮಿತಿ ದೆಹಲಿಯ ಕಾರ್ಯಾಧ್ಯಕ್ಷರ ಭೇಟಿ

Article Image

ದಿಗಂಬರ್ ಜೈನ್ ಮಹಾಸಮಿತಿ ದೆಹಲಿಯ ಕಾರ್ಯಾಧ್ಯಕ್ಷರ ಭೇಟಿ

ದಿಗಂಬರ್ ಜೈನ್ ಮಹಾಸಮಿತಿ, ದೆಹಲಿ ಇದರ ಕಾರ್ಯಾಧ್ಯಕ್ಷರು ಬಿಪಿನ್ ಸುಮಾರ್ ಜೈನ್ ಸರಫ್, ದಿನಾಂಕ 12.09.2025ನೇ ಶುಕ್ರವಾರ ಹಾಸನಕ್ಕೆ ಭೇಟಿ ನೀಡಿದರು. ಕಾರ್ಯಕ್ರಮವನ್ನು ಹಾಸನದ ದೆಹಲಿ ದಿಗಂಬರ ಜೈನ್ ಸಮಿತಿಯ ಸಂಚಾಲಕರಾದ ಹೆಚ್.ಎನ್‌., ಅಭಿನಂದನ್‌ರವರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಜೈನ ಮಹಾಸಮಿತಿಯ ಕಾರ್ಯಾಧ್ಯಕ್ಷರು ಸಮಿತಿಯು 50 ವರ್ಷಗಳ ಹಿಂದೆ 1976ರಲ್ಲಿ ಸ್ಥಾಪಿತವಾಗಿದ್ದು ಶ್ರೀ 108 ವಿದ್ಯಾನಂದ ಮುನಿಮಹರಾಜರ ಆಶೀರ್ವಾದದಿಂದ ಪ್ರಾರಂಭವಾಗಿರುತ್ತದೆ. ಸಮಿತಿಯ ಸಮನ್ವಯ ಸದ್ಭಾವನೆ ಮತ್ತು ಸಂಘಟನೆಯ ಪ್ರತಿಬಿಂಬವಾಗಿರುತ್ತದೆ. ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಜೈನ ಸಾಮಾಜಿಕ ಕಲ್ಯಾಣ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಗಳನ್ನು ಹಂಚಿಕೊಳ್ಳು ಸಮಾಜದ ಹಿತದೃಷ್ಠಿಯಿಂದ ಸರಪಳಿ ಸಧಿಸಬಹುದಾಗಿರುತ್ತದೆ. ಸಮಾಜದ ಬಡವರಿಗೆ, ಮಕ್ಕಳಿಗೆ, ಅವಶ್ಯಕತೆ ಇರುವ ಸವಲತ್ತುಗಳನ್ನು ಪೂರೈಸಲಾಗುತ್ತದೆ. ಹಾಸನದ ಜೈನ ಬಾಂಧವರು ಈ ಸಂಸ್ಥೆಯ ಅಜೀವ ಸದಸ್ಯತ್ವ ಪಡೆದುಕೊಳ್ಳಬೇಕೆಂದು ವಿನಂತಿಸಿದರು. ಹಾಸನ ಜೈನ ಸಂಘದ ಅಧ್ಯಕ್ಷರಾದ ಹೆಚ್‌.ಬಿ. ಶಾಂತೀಶ್, ಕರ್ನಾಟಕ ಜೈನ ಅಸೋಸಿಯೇಷನ್‌ ಹಾಸನದ ಪ್ರತಿನಿಧಿ ಹೆಚ್.ಬಿ.ನಾಗೇಂದ್ರಯ್ಯ, ಜೈನ ಸಹಕಾರ ಮಂಡಳಿಯ ಅಧ್ಯಕ್ಷರಾದ ಸುಕುಮಾ‌ ಮತ್ತು ಮಹಾವೀರ ಭವನದ ಅಧ್ಯಕ್ಷರಾದ ಎಂ. ಧನ್‌ ಪಾಲ್ ಮತ್ತು ಕಾಳಲಾದೇವಿ ಮಹಿಳಾ ಸಮಾಜದ ಅಧ್ಯಕ್ಷರಾದ ಸುಪ್ರಭ ಅಭಿನಂದನ್ ಇವರುಗಳು ಮಾತನಾಡಿ ಸಮಿತಿಯ ಸದಸ್ಯರಾಗಿ ಬೆಂಬಲಿಸುವುದಾಗಿ ತಿಳಿಸಿದರು. ಹಾಸನ ವಿಭಾಗಕ್ಕೆ ಹೆಚ್.ಎನ್. ಅಭಿನಂದನ್‌ ರವರು ಸಂಚಾಲಕ ಸಂರಕ್ಷಕರಾಗಿರುತ್ತಾರೆ ಎಂದು ಕಾರ್ಯಾಧ್ಯಕ್ಷರು ತಿಳಿಸಿದರು. ಹಾಸನದ ಬಾಹುಬಲಿ ಭವನದಲ್ಲಿ ಜೈನ ಸಮಾಜದ ಪ್ರಮುಖರು ಭಾಗವಹಿಸಿದ್ದರು. ಸಭೆಯು ರಂಜಿತ ಸಮಂತ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಸಂಚಾಲಕರಾದ ಅಭಿನಂದನ್‌ರವರು ಸಭೆಗೆ ಆಗಮಿಸಿದ್ದ ಅತಿಥಿಗಳು ಮತ್ತು ಗಣ್ಯರಿಗೆ ಸ್ವಾಗತವನ್ನು ಕೋರಿದರು. ಅಭಿನಂದನ್‌ರವರು ಆಗಮಿಸಿದ್ದ ಅತಿಥಿಗಳಿಗೆ ಗೌರವ ಸಮರ್ಪಿಸಿದರು. ವಂದನಾರ್ಪಣೆ ಮಾಡಿದರು.

ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭ

Article Image

ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭ

ಮಂಗಳೂರಿನ ಧವಳ ಕೋ-ಆಪರೇಟಿವ್‌ ಸೊಸೈಟ (ರಿ.), ಇದರ ಆಶ್ರಯದಲ್ಲಿ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ 300 ವರ್ಷಗಳ ಮೊದಲೇ ಸ್ವಾತಂತ್ರ್ಯದ ವೀರ ಕಹಳೆಯನ್ನು ಮೊಳಗಿಸಿ, ವಸಾಹತುಶಾಹಿಗಳ ಆಕ್ರಮಣವನ್ನು ನಾಲ್ಕು ದಶಕಗಳಕಾಲ ಹಿಮ್ಮೆಟ್ಟಿದ ಮೊಟ್ಟಮೊದಲ ಭಾರತೀಯ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ! ಅಚಲ ಧೈರ್ಯದ ಕಾರಣಕ್ಕೆ ಅವಳನ್ನು 'ಅಭಯ ರಾಣಿ' ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭವು ಮಂಗಳೂರಿನ ಜೈನ್ ಬೋರ್ಡಿಂಗ್ ಸಿದ್ಧಾರ್ಥ ಸಭಾಭವನದಲ್ಲಿ ಸೆ. 21ರಂದು ಭಾನುವಾರ, ಸಂಜೆ 4.30ಕ್ಕೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅತ್ಯಾಧುನಿಕ ನೇತ್ರ ಚಿಕಿತ್ಸೆ ಧಾರವಾಡದಲ್ಲಿ

Article Image

ಅತ್ಯಾಧುನಿಕ ನೇತ್ರ ಚಿಕಿತ್ಸೆ ಧಾರವಾಡದಲ್ಲಿ

ಎಸ್‌ಡಿಎಮ್ ವಿಶ್ವವಿದ್ಯಾಲಯ ಧಾರವಾಡದ, ಎಸ್‌ಡಿಎಮ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗದಲ್ಲಿ 01.09.2025 ರಂದು ಅತ್ಯಾಧುನಿಕ ಕೋರ್ನಿಯಲ್ ಟೊಪೋಗ್ರಾಫಿ ಯಂತ್ರ ಹಾಗೂ ಸ್ಪೆಕ್ಯುಲರ್ ಮೈಕ್ರೋಸ್ಕೋಪ್ ಉಪಕರಣಗಳನ್ನು ಮಾನ್ಯ ಉಪ ಕುಲಪತಿಗಳಾದ ಹಾಗೂ ಪ್ರಸಿದ್ಧ ಪ್ಲಾಸ್ಟಿಕ್ ಸರ್ಜನ್ ಡಾ. ನಿರಂಜನ್ ಕುಮಾರ್ ಅವರು ಉದ್ಘಾಟಿಸಿದರು. ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ. ಅನುಪಮಾ ಎಸ್. ದೇಸಾಯಿ ಅವರು ಉಪಕರಣಗಳ ಉಪಯೋಗಗಳನ್ನು ವಿವರಿಸುತ್ತಾ ಕೋರ್ನಿಯಾ ಮೇಲ್ಮೆöÊ ನಿಖರ ನಕ್ಷೆ ತಯಾರಿಸಲು ನೆರವಾಗುತ್ತವೆ. ಕ್ಯಾರಟೊಕೋನಸ್, ಅಸ್ಟಿಗ್ಮಾಟಿಸಂ, ರೆಫ್ರಾಕ್ಟಿವ್ ಶಸ್ತ್ರಚಿಕಿತ್ಸೆ, ಡ್ರೈ ಐ ರೋಗಗಳ ತಪಾಸಣೆಗೆ ಸಹಾಯಕವಾಗುತ್ತವೆ” ಎಂದರು ತಿಳಿಸಿದರು. ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ ಮಾತನಾಡುತ್ತ ಈ ಸೌಲಭ್ಯದಿಂದ ಧಾರವಾಡ ಹಾಗೂ ಸುತ್ತಮುತ್ತಲಿನ ಜನತೆಗೆ ಜಾಗತಿಕ ಮಟ್ಟದ ನೇತ್ರ ಚಿಕಿತ್ಸಾ ಸೇವೆ ಲಭ್ಯವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಹಣಕಾಸು ಅಧಿಕಾರಿಗಳಾದ ವಿ.ಜಿ. ಪ್ರಭು, ಎಸ್.ಡಿ.ಎಮ್. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎಮ್. ಶೆಟ್ಟರ್, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗಡೆ, ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಮಗ್ದುಮ್ ಕಿಲ್ಲೇದಾರ್, ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಡಾ. ಶಂಕರಗೌಡಾ ಪಾಟೀಲ್ ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Article Image

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥಕ್ಷೇತ್ರದಲ್ಲಿ ಶನಿವಾರ ಚಂದನ ಷಷ್ಠಿ ನೋಂಪಿ ವಿಧಾನದ ಉದ್ಯಾಪನಾ ಕಾರ್ಯಕ್ರಮ ವಿಧಿ-ವಿಧಾನಗಳೊಂದಿಗೆ ಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಮೂರೂ ಬಸದಿಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಬಳಿಕ ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದ ಬಳಿಕ ಸಾಮೂಹಿಕ ಅಷ್ಟವಿಧಾರ್ಚನೆ ಪೂಜೆ ನಡೆಯಿತು. ಚಂದ್ರಪ್ರಭ ತೀರ್ಥಂಕರರ ಪೂಜೆ, ಭಗವಾನ್ ಶಾಂತಿನಾಥ ಸ್ವಾಮಿ ಪೂಜೆ, ನವದೇವತೆಗಳ ಪೂಜೆ, ಪಂಚಪರಮೇಷ್ಠಿಗಳ ಪೂಜೆ, ಕ್ಷೇತ್ರಪಾಲಪೂಜೆ, ಪದ್ಮಾವತಿ ದೇವಿಪೂಜೆ, ಬ್ರಹ್ಮಯಕ್ಷ ಪೂಜೆ, ಭಗವಾನ್ ಬಾಹುಬಲಿ ಸ್ವಾಮಿ ಪೂಜೆ ಮತ್ತು ಶ್ರುತ ಪೂಜೆ ನಡೆಸಲಾಯಿತು. 108 ಮಂತ್ರಪುಷ್ಟ ಅರ್ಚನೆ ಬಳಿಕ ಜಯಮಾಲಾ ಅರ್ಘ್ಯ ಅರ್ಪಿಸಲಾಯಿತು. ಬಸದಿಯ ಪ್ರಧಾನ ಅರ್ಚಕ ಕೆ. ಜಯರಾಜ ಇಂದ್ರರ ನೇತೃತ್ವದಲ್ಲಿ ನವೀನ ಕುಮಾರ ಇಂದ್ರ ಮತ್ತು ಕೆ. ಮಹಾವೀರ ಇಂದ್ರರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಧರ್ಮಸ್ಥಳದ ಸೌಮ್ಯ ಸುಭಾಶ್ ಮತ್ತು ಬಳಗದವರ ಜಿನಭಜನೆಗಳ ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು. ಮೂಡಬಿದ್ರೆಯ ಸರ್ವೇಶ್ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗೀತೆಗಳ ಗಾಯನ ನಡೆಯಿತು. ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಶ್ರೀನಾಥ್ ಬಳ್ಳಾಲ್, ವಿನಯಾ ಜೆ. ಬಳ್ಳಾಲ್, ವೈಶಾಲಿ ಬಳ್ಳಾಲ್, ಡಾ. ಪ್ರಿಯಾ ಬಳ್ಳಾಲ್, ವಿಜಯಾ ಬ್ಯಾಂಕ್ ನಿವೃತ್ತ ಮೇನೇಜರ್ ಎಂ. ಜಿನರಾಜ ಶೆಟ್ಟಿ ಮತ್ತು ಬಳ್ಳಾಲ್ ಕುಟುಂಬಸ್ಥರು ಉಪಸ್ಥಿತರಿದ್ದರು. 18 ಮಂದಿ ಚಂದನ ಷಷ್ಠಿ ನೋಂಪಿ ವ್ರತಧಾರಿಗಳಲ್ಲಿ 8 ಮಂದಿ 6 ವರ್ಷಗಳನ್ನು ಪೂರೈಸಿದ್ದು ನೋಂಪಿ ಉದ್ಯಾಪನೆ ಮಾಡಿದರು. ನೋಂಪಿ ವ್ರತಧಾರಿಗಳಾದ ಕುಂಡದಬೆಟ್ಟು ವಿನಯಮ್ಮ, ಸಬ್ರಬೈಲು ಸುಮಲತಾ ಜೀವಂಧರ ಚೌಟ ಮತ್ತು ಸುಜಾತ ಧನಕೀರ್ತಿ ಆರಿಗ ಧರ್ಮಸ್ಥಳ ಪ್ರಕಟಿಸಿದ “ಚಂದನ ಷಷ್ಠಿ ನೋಂಪಿ ವಿಧಾನ” ಕೃತಿಯನ್ನು ಸ್ವಾಮೀಜಿ ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಕೃತಿಯನ್ನು ಎಲ್ಲರಿಗೂ ಶಾಸ್ತ್ರದಾನವಾಗಿ ವಿತರಿಸಲಾಯಿತು. ಸ್ವಾಮೀಜಿಯವರಿಂದ ಮಂಗಲಪ್ರವಚನ: ನೋಂಪಿಗಳಿಂದ ಕರ್ಮನಿರ್ಜರೆಯಾಗಿ ಮೋಕ್ಷ ಪ್ರಾಪ್ತಿ: ಉಪನ್ಯಾಸ ಹಾಗೂ ಕಠಿಣವ್ರತ ನಿಯಮಗಳ ಪಾಲನೆಯೊಂದಿಗೆ ಚಂದನ ಷಷ್ಠಿಯಂತಹ ಪವಿತ್ರ ನೋಂಪಿಗಳನ್ನು ಮಾಡಿದರೆ ನಮ್ಮ ಕರ್ಮಗಳ ನಿರ್ಜರೆಯಾಗಿ ರೋಗಗಳೂ ನಿವಾರಣೆಯಾಗಿ ಶಾಶ್ವತ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಮಂಗಲಪ್ರವಚನ ನೀಡಿದ ಶ್ರವಣಬೆಳಗೊಳದ ಸ್ವಾಮೀಜಿ ಹೇಳಿದರು. ಹೆಚ್ಚಾಗಿ ನೋಂಪಿಗಳನ್ನು ಚಾತುರ್ಮಾಸದ ಅವಧಿಯಲ್ಲಿ ಭಾದ್ರಪದ ಮಾಸದಲ್ಲಿ ಮಾಡುತ್ತಾರೆ. ಏಕೆಂದರೆ ಭಾದ್ರಪದ ಮಾಸ ಬಹಳ ಹಿತಕರವಾಗಿದ್ದು ಆಗ ನಾವು ಮಾಡಿದ ಭಾವನೆಗಳು ಭದ್ರವಾಗುತ್ತವೆ. ಪರಿಶುದ್ಧ ತನು, ಮನದೊಂದಿಗೆ ವೃತ ನಿಯಮಗಳ ಪಾಲನೆಯೊಂದಿಗೆ ದೇವರು ಮತ್ತು ಗುರುಗಳ ಸೇವೆ, ಆರಾಧನೆ ಮಾಡಬೇಕು. ಆಧುನಿಕತೆಯ ನೆಪದಲ್ಲಿ ಎಂದೂ ಅಪವಿತ್ರ, ಅವಿನಯ ಮಾಡಬಾರದು ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು. ಬಸದಿಯ ಅನುವಂಶೀಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಅಧ್ಯಕ್ಷತೆ ವಹಿಸಿದರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ಧರಣೇಂದ್ರ ಕುಮಾರ್ ಕೊನೆಯಲ್ಲಿ ಧನ್ಯವಾದವಿತ್ತರು.

ಕವಿ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನಕ್ಕೆ ರಾಷ್ಟ್ರೀಯ ಪುರಸ್ಕಾರ

Article Image

ಕವಿ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನಕ್ಕೆ ರಾಷ್ಟ್ರೀಯ ಪುರಸ್ಕಾರ

ಕವಿ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನಕ್ಕೆ 2025 ನೇ ಸಾಲಿನ ರಾಷ್ಟ್ರ ಮಟ್ಟದ “ಕಾವ್ಯ ಸಿರಿ” ಪ್ರಶಸ್ತಿಗೆ ಆಯ್ಕೆಯಾಗಿದೆ. ಹೈದರಬಾದಿನ ರಾಷ್ಟ್ರೀಯ ಕನ್ನಡ ಸಾಹಿತ್ಯ ಬಳಗ ಪ್ರತಿ ವರ್ಷ ಕನ್ನಡ ಕವನ ಸಂಕಲನಗಳಿಗೆ ರಾಷ್ಟ್ರ ಮಟ್ಟದ ಕಾವ್ಯ ಸಿರಿ ಪ್ರಶಸ್ತಿಯನ್ನು ನೀಡಲಾಗುತ್ತ ಬಂದಿದ್ದು ಈ ವರ್ಷ ಸಾಗರದ ವಿ.ಟಿ.ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ, ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪ್ರಸಾದ್ ಅವರು ತಿಳಿಸಿದ್ದಾರೆ. ಸಾಗರದ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಟಿ.ಸ್ವಾಮಿಯವರು ಕಳೆದ ಹಲವು ದಶಕಗಳ ಕಾಲ ಶೈಕ್ಷಣಿಕ ಸಾಹಿತ್ಯ, ಸಾಂಸ್ಕೃತಿಕ ಸಾಮಾಜಿಕ ಕ್ಷೇತ್ರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿರುವ ಇವರು, ಈಗಾಗಲೇ 30 ಕ್ಕೂ ಹೆಚ್ಚಿನ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿರುವ ಇವರು ಸ್ಥಳೀಯ ಜಿಲ್ಲೆ ರಾಜ್ಯ ಮಟ್ಟದ ಅನೇಕ ಪತ್ರಿಕೆಗಳಲ್ಲಿ ತಮ್ಮ ಬರಹಗಳನ್ನು ಪ್ರಕಟಿಸಿದ್ದಾರೆ. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ವಿವಿಧ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಬಂದಿರುವ ಇವರು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದಾರೆ. ಸಾಂಸ್ಕೃತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಹಿತ್ಯ, ಜಾನಪದ ಸಾಹಿತ್ಯದಲ್ಲಿ ಇವರು ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರವರ್ಧನ್ ಜೈನ್ ಪ್ರಥಮ

Article Image

ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರವರ್ಧನ್ ಜೈನ್ ಪ್ರಥಮ

ಇತ್ತೀಚೆಗೆ ಮುಂಬೈನಲ್ಲಿ ನಡೆದ ಹೈರೋಕ್ಸ್ ದೇಹ ಸಧೃಢತೆಯ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಜೈನ ಸಮುದಾಯದ ಏಕೈಕ ಸ್ಪರ್ಧಿ ಪ್ರವರ್ಧನ್ ಜೈನ್ ರವರು ವಿಜಯಿಯಾಗಿದ್ದಾರೆ. ಈ ಸ್ಪರ್ಧೆಯು ಎಂಟು ಕಿ.ಮೀ. ಓಟ ಹಾಗೂ ಎಂಟು ವಿವಿಧ ಬಗೆಯ ದೈಹಿಕ ಸ್ಪರ್ಧೆಗಳನ್ನು ಒಳಗೊಂಡಿದ್ದು ಅತ್ಯಂತ ಕಡಿಮೆ ಸಮಯದಲ್ಲಿ ಪೂರೈಸುವ ಸ್ಪರ್ಧಿ ವಿಜೇತರಾಗುತ್ತಾರೆ. ಇವರು ಕುತ್ಲೂರು ಪದ್ಮಾಂಬಾ ನಿಲಯ ಪಾರ್ಶ್ವನಾಥ ಜೈನ್ ಹಾಗೂ ವಾಗೀಶ್ವರಿ ದಂಪತಿಗಳ ಪುತ್ರರಾಗಿದ್ದಾರೆ.

ವಧು ವರರ ಅನ್ವೇಷಣೆಯಲ್ಲಿದ್ದ ಜೈನರಿಗೆ ಸುವರ್ಣಾವಕಾಶ

Article Image

ವಧು ವರರ ಅನ್ವೇಷಣೆಯಲ್ಲಿದ್ದ ಜೈನರಿಗೆ ಸುವರ್ಣಾವಕಾಶ

ಬದಲಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ವರನಿಗೆ ವಧು, ವಧುವಿಗೆ ವರ ಸುಲಭವಾಗಿ ಸಿಕ್ಕು ಮದುವೆಯಾಗುವದು ತುಂಬಾ ಕಷ್ಟಸಾದ್ಯವಾಗಿದೆ. ಅದರಲ್ಲೂ ಮುಖ್ಯವಾಗಿ ಹುಡುಗರಿಗೆ ಹುಡುಗಿಯರು ಸಿಗದಿರುವದೇ ಗಂಭೀರವಾದ ಸಮಸ್ಯೆಯಾಗಿದೆ. ಈ ಸಮಸ್ಯೆ ಎಲ್ಲಾ ಸಮುದಾಯದಲ್ಲೂ ಇದೆ ಆದರೆ ಜೈನ ಸಮುದಾಯದಲ್ಲಿ ತುಸು ಹೆಚ್ಚು ಎಂದೇ ಹೇಳಬೇಕು ( ಇದಕ್ಕೆ ಹಲವಾರು ಕಾರಣಗಳಿವೆ ಇವುಗಳನ್ನು ವಿಶ್ಲೇಶಿಸುವದು ಬೇಡ ಇದು ಎಲ್ಲರಿಗೂ ಗೊತ್ತಿದ್ದ ಸಂಗತಿ ) ಈ ವಿಷಯವಾಗಿ ಮಕ್ಕಳ ಪಾಲಕರು ಕಷ್ಟಪಡುತ್ತಿದಾರೆ ಅಷ್ಟೇ ಅಲ್ಲ ತುಂಬಾ ನೊಂದುಕೊಳ್ಳುತ್ತಿದ್ದಾರೆ. ಈ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಅನೇಕ ಮಾಹಿತಿ ಕೇಂದ್ರಗಳು, ಮೇಳಗಳು ಮತ್ತು ಮೆಟ್ರಿಮೊನಿ ಇತ್ಯಾದಿ ಸಂಸ್ಥೆಗಳು ಹುಟ್ಟಿಕೊಂಡಿವೆಯಾದರೂ ಅವೆಲ್ಲವೂ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. "ಇಂಥ ಸಮಸ್ಯೆ ಪರಿಹಾರಕ್ಕೆ ಕಂಕಣಬದ್ದವಾಗಿದೆ ಬೆಳಗಾವಿಯ ಮಾಣಿಕಬಾಗ ದಿಗಂಬರ ಜೈನ್ ಬೋರ್ಡಿಂಗ್ ಸಂಸ್ಥೆ" ಇವೆಲ್ಲವನ್ನೂ ಗಮನಿಸಿದ ದಕ್ಷಿಣ ಭಾರತ ಜೈನ ಸಭಾದ ಅಂಗ ಸಂಸ್ಥೆ ಬೆಳಗಾವಿಯ ಮಾಣಿಕಭಾಗ ದಿಗಂಬರ ಜೈನ ಬೋರ್ಡಿಂಗಿನ ಆಡಳಿತ ಮಂಡಳಿ ಶ್ರೀ ಕುಂತಿನಾಥ ಕಲಮನಿ ಇವರ ಸಾರಥ್ಯದಲ್ಲಿ ಕಳೆದ 17 ವರ್ಷಗಳಿಂದ ಮದುವೆಗಾಗಿ ಸೂಕ್ತ ವಧು ಅಥವಾ ವರರನ್ನು ಹುಡುಕುವ ಪ್ರಕ್ರಿಯೆಯ ಭಾಗವಾಗಿ ಜೈನ್ ವಧು-ವರ ಪರಿಚಯ ಸಮಾವೇಶವನ್ನು ಅತ್ಯಂತ ಪ್ರಾಮಾಣಿಕವಾಗಿ ಹಾಗೂ ಯಶಸ್ವಿಯಾಗಿ ನಡೆಸುತ್ತಾ ಬಂದಿದೆ ಇದು ಎಷ್ಟು ಅದ್ಭುತವಾದ ಕಾರ್ಯಮಾಡುತ್ತಿದೆ ಎಂದರೆ ಪರಸ್ಪರ ಹೊಂದಾಣಿಕೆಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಮದುವೆಗಳು ಜರುಗಿವೆ ಹಾಗೂ ಅವರೆಲ್ಲ ಸುಖವಾಗಿ ಕೌಟುಂಬಿಕ ಜೀವನ ಸಾಗಿಸುತ್ತಾ ಈ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದೀಗ ಈ ವರ್ಷದ 18 ನೇ ಜೈನ್ ವಧು-ವರ ಪರಿಚಯ ಸಮಾವೇಶ ಜರುಗಲಿದೆ. 17ನೇ ಸಮಾವೇಶದ ಭವ್ಯ ಯಶಸ್ಸಿನ ನಂತರ ಬಹಳಷ್ಟು ಶ್ರಾವಕ ಶ್ರಾವಿಕೆಯರ ಆಗ್ರಹ ಹಾಗೂ ವಿನಂತಿಯ ಮೇರೆಗೆ ಇದೀಗ 18ನೇ ಜೈನ್ ವಧು-ವರ ಪರಿಚಯ ಸಮಾವೇಶ ಮುಂಬರುವ ದಿನಾಂಕ 12-10-2025 ರಂದು ರವಿವಾರ ಬೆಳಗಾವಿಯ ಧರ್ಮನಾಥ ಭವನದಲ್ಲಿ ಬೆಳಿಗ್ಗೆ 9ರಿಂದ ಪ್ರಾರಂಭವಾಗಲಿದೆ. ನೋಂದಣಿ ಕಾರ್ಯ ಪ್ರಾರಂಭವಾಗಿದೆ: ಈ ಸಮಾವೇಶದಲ್ಲಿ ಭಾಗಿಯಾಗಲು ಹೆಚ್ಚಿನ ಸಂಖ್ಯೆಯ ಜನ ನೋಂದಣಿ ಮಾಡಿಸಿದ್ದಾರೆ. ಸಮಾವೇಶದ ಪ್ರಯೋಜನ ಪಡೆದುಕೊಳ್ಳಲು ತಾವೂ ರೂ 820/- ಶುಲ್ಕ ಪಾವತಿಸಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದಾಗಿದೆ. www.mdjbbelagavi.in ನೋಂದಣಿಗೆ ಕೊನೆಯ ದಿನಾಂಕ: 30/09/2025 ಇರುತ್ತದೆ. ಇದರ ಪ್ರಯೋಜನ ಪಡೆದುಕೊಳ್ಳಲು ಜೈನ ಧರ್ಮ ಬಂಧುಗಳಿಗೆ ಇದೊಂದು ದೊಡ್ಡ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 70226 91008, 94804 48108 ಈ ಸಂಖ್ಯೆಯಿಂದ ಪಡೆದುಕೊಳ್ಳಬಹುದು. ವರದಿ : ಶಾಂತರಾಜ ಮಲ್ಲಸಮುದ್ರ

ಎಕ್ಸಲೆಂಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Article Image

ಎಕ್ಸಲೆಂಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಮೂಡುಬಿದಿರೆ: ಮೂಡುಬಿದಿರೆಯ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾ0ಶುಪಾಲರಾದ ದಿನೇಶ್ ಚೌಟ ಮಾತನಾಡುತ್ತಾ, ಶಿಕ್ಷಕರ ದಿನಾಚರಣೆ ವಿದ್ಯಾರ್ಥಿಗಳ ಪ್ರೀತಿ ಮತ್ತು ಅಭಿಮಾನಗಳ ಧ್ಯೋತಕವಾಗಿದೆ. ಡಾ. ರಾಧಾಕೃಷ್ಣ ಅವರ ಜ್ಞಾನ ಮತ್ತು ಸಾಧನೆ ಶಿಕ್ಷಣ ವೃತ್ತಿಯಲ್ಲಿರುವ ನಮಗೆಲ್ಲರಿಗೂ ಮಾದರಿ. ಅವರು ಮೇಧಾವಿಗಳಾಗಿದ್ದರೂ ತಮ್ಮ ವಿದ್ಯಾರ್ಥಿಗಳೊಂದಿಗೆ ಸರಳತೆ ಮತ್ತು ಸಜ್ಜನಿಕೆಯೊ0ದಿಗೆ ನಡೆದುಕೊಳ್ಳುತ್ತಿದ್ದರು. ಅವರ ವಿದ್ಯಾರ್ಥಿಗಳಿಂದ ಅವರಿಗೆ ಸಿಕ್ಕ ಪ್ರೀತಿ ಮತ್ತು ಗೌರವ ಎಲ್ಲಾ ಶಿಕ್ಷರಿಗೂ ಸಲ್ಲಬೇಕೆನ್ನುವ ಅವರ ಆಶಯವೇ ಅವರ ಜನ್ಮ ದಿನದಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲು ಕಾರಣವಾಯಿತು ಎಂದರು. ಒಬ್ಬ ಉತ್ತಮ ಶಿಕ್ಷಕ ಒಬ್ಬ ಶ್ರೇಷ್ಟ ಶಿಷ್ಯ ವೃಂದವನ್ನು ಹುಟ್ಟು ಹಾಕುತ್ತಾನೆ. ಅಂಥಹ ಶಿಕ್ಷಕರ ಸಾಲಿನಲ್ಲಿ ನನಗೆ ಅಗ್ರ ಪಂಕ್ತಿಯಲ್ಲಿ ಕಂಡು ಬರುವುದು ನೋಬಲ್ ಪ್ರಶಸ್ತಿ ವಿಜೇತ ಜೆ ಜೆ ಥಾಮ್ಸನ್. ಕೇವಲ ಆತನಷ್ಟೇ ಅಲ್ಲದೆ ಆತನಿಂದ ಪ್ರಭಾವಿತರಾಗಿ ಒಟ್ಟು ಏಳು ಜನ ಶಿಷ್ಯರು ತಮ್ಮ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿ ನೋಬಲ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಅದು ಅತ್ಯಂತ ಶ್ಲಾಘನೀಯವಾದ ವಿಚಾರ. ಇಂದು ನನ್ನ ಶಿಷ್ಯರಲ್ಲೊಬ್ಬರಾದ ಯುವರಾಜ ಜೈನರ ಸಾಧನೆ ನನಗೆ ಅತ್ಯಂತ ಸಂತಸವನ್ನುಂಟು ಮಾಡಿದೆ. ಇವರ ಸಾಧನೆ ಇತರರಿಗೂ ಪ್ರೇರಣೆಯಾಗಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಮಾತನಾಡುತ್ತಾ ಒಳ್ಳೆಯ ಗುರುವನ್ನು ಪಡೆಯಲು ಹಾಗೂ ಒಳ್ಳೆಯ ಶಿಷ್ಯವೃಂದವನ್ನು ಪಡೆಯಲು ಯೋಗ ಬೇಕು. ನಾನು ಉಪನ್ಯಾಸಕ ವೃತ್ತಿಯನ್ನು ಆರಂಭಿಸಿದಾಗ ನನಗೆ ಪಾಠ ಮಾಡಿದ ಗುರುಗಳೇ ನನ್ನ ಸಹೋದ್ಯೋಗಿಗಳಾಗಿದ್ದರು. ಈ ರೀತಿ ನಮ್ಮ ವಿಭಾಗದಲ್ಲಿ ನಾಲ್ಕು ತಲೆಮಾರುಗಳ ಗುರು ಶಿಷ್ಯ ಪರಂಪರೆ ಇತ್ತು. ನನ್ನನ್ನು ಆಸಂದರ್ಭದಲ್ಲಿ ಕೈ ಹಿಡಿದು ನಡೆಸಿದ ಗುರುಗಳಿಗೆ ನಾನು ಋಣಿ ಎಂದರು. ನನ್ನ ಗುರುಗಳ ಕರ್ತವ್ಯ ಪ್ರಜ್ಞೆ, ಶಿಷ್ಯರೆಡೆಗೆ ಅವರು ತೋರುವ ಪ್ರೀತಿ ನನಗೆ ಪ್ರೇರಣೆಯಾಗಿದೆ. ಸಮಾಜದಲ್ಲಿ ಏನೇ ಕಷ್ಟ ಬಂದರೂ ಅದನ್ನು ಎದುರಿಸಲು ತಯಾರಿರಬೇಕು. ಅದು ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಸಾಧ್ಯ. ಕೊಡೆ ಮಳೆಯನ್ನು ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ ಮಳೆಯಿಂದ ರಕ್ಷಣೆ ನೀಡುತ್ತದೆ. ಈ ಸಂಸ್ಥೆಯಲ್ಲಿ ಶಿಕ್ಷಣದೊಂದಿಗೆ ಸಿಗುವ ಸಂಸ್ಕಾರ ಮು0ದೆ ಬದುಕನ್ನು ಎದುರಿಸಲು ನಿಮಗೆ ದಾರಿದೀಪವಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಸಭೆಯಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಮೂಡು ಮಾರ್ನಾಡಿನ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಡಾ. ರಾಜಶ್ರೀ ಬಿ. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಧನಕನಕಾದಿಗಳಿಂದ ಬದುಕು ಭವ್ಯವಾಗಬಲ್ಲದೇ ಹೊರತು ದಿವ್ಯವಾಗುವುದಿಲ್ಲ. ಜೀವನದಲ್ಲಿ ಹಣ ಗಳಿಸುವುದು ಇದ್ದೇ ಇದೆ. ಆದರೆ ಸಮಾಜಕ್ಕೆ ಕೊಡುಗೆ ನೀಡುವುದರ ಕುರಿತು ಕೂಡ ತಮ್ಮ ಗಮನವಿರಲಿ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯಿಂದ ಜೀವನವನ್ನು ಬೆಳಗಿಸಿಕೊಂಡು ಹೋಗುವುದೇ ಗುರುಗಳಾದವರಿಗೆ ಕೊಡಬಹುದಾದ ದೊಡ್ಡ ಗುರುದಕ್ಷಿಣೆ ಎಂದರು. ಸನ್ಮಾನಕ್ಕೆ ಉತ್ತರಿಸಿದ ರಾಷ್ಟ್ರ ಮಟ್ಟದ ವಿಕಸನ ತರಬೇತುದಾರರು ಹಾಗೂ ಪ್ರಶಸ್ತಿ ವಿಜೇತ ಶಿಕ್ಷಕರಾದ ಜೇಸಿ ರಾಜೇ0ದ್ರ ಭಟ್ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ತನ್ನ ಬುದ್ಧಿವಂತಿಕೆಯ ಅನುಸಾರ ತಾನು ಬೇರೆ ಕೋರ್ಸುಗಳನ್ನು ಆಯ್ಕೆ ಮಾಡಲು ಅವಕಾಶವಿದ್ದರೂ ಶಿಕ್ಷಕಿಯಾಗಿದ್ದ ತನ್ನ ತಾಯಿಗೆ ಸಮಾಜದಲ್ಲಿ ಸಿಗುತ್ತಿದ್ದ ಗೌರವಾದರಗಳನ್ನು ಕಂಡು ಶಿಕ್ಷಕ ವೃತ್ತಿಯನ್ನು ಆಯ್ದುಕೊಂಡೆ. ಭಾರತ ಗುರು ಪರಂಪರೆಗೆ ಹೆಸರುವಾಸಿಯಾಗಿದೆ. ಜಗತ್ತಿನ ಶ್ರೇಷ್ಟ ವಿಶ್ವ ವಿದ್ಯಾನಿಲಯಗಳಲ್ಲಿ ಹದಿನೆಂಟು ವಿಶ್ವವಿದ್ಯಾನಿಲಯಗಳು ಒಂದು ಕಾಲದಲ್ಲಿ ಭಾರತದಲ್ಲಿತ್ತು. ವಿದೇಶಿಗರ ಆಕ್ರಮಾಣದಿಂದ ಭಾರತದ ಜ್ಞಾನ ಸ0ಪತ್ತು ನಾಶವಾದರೂ ಗುರುವಿನ ಛಲದಿಂದ ಕೆಲವೇ ವರ್ಷಗಳಲ್ಲಿ ಅದನ್ನು ಮರುಕಳಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಇದು ಪ್ರಪಂಚದಲ್ಲಿ ಎಲ್ಲೂ ನಡೆದಿಲ್ಲ. ಅವತಾರ ಪುರುಷರಿಗೂ ಗುರುಗಳಿದ್ದರು ಎ0ಬುದೇ ನಮ್ಮ ದೇಶದ ಗುರುಪರಂಪರೆಯ ಮಹತ್ವಕ್ಕೆ ಸಾಕ್ಷಿ. ಕೇವಲ ಪಾಠಕ್ಕೆ ಸೀಮಿತವಾಗಿರದೆ ಜೀವನಕ್ಕೆ ಸಜ್ಜುಗೊಳಿಸುವವನೇ ನಿಜವಾದ ಗುರು ಎಂದರು. ಉಜಿರೆ ಎಸ್ ಡಿ ಎಂ ಕಾಲೇಜಿನ ಸಹ ಪ್ರಾಧ್ಯಾಪಕರಾದ ಗಜಾನನ ಆರ್ ಭಟ್ ಸನ್ಮಾನಕ್ಕೆ ಉತ್ತರಿಸುತ್ತಾ ತಾನು ಕರ್ತವ್ಯ ನಿಷ್ಠೆಗೆ ಹೆಸರಾದ ಅನೇಕ ಹಿರಿಯ ಶಿಕ್ಷಕರಿಂದ ಸ್ಪೂರ್ತಿಯನ್ನು ಪಡೆದುಕೊಂಡಿದ್ದೇನೆ. ಬದುಕಿನಲ್ಲಿ ಜ್ಞಾನವನ್ನು ಗಳಿಸಲು ಕಷ್ಟಪಡಲೇ ಬೇಕು. ಕಷ್ಟ ಸಹುಷ್ಣುತೆ ಇದ್ದಲ್ಲಿ ಆತ್ಮ ವಿಶ್ವಾಸ ಬೆಳೆಯುತ್ತದೆ. ಆಗ ಮಾತ್ರ ಸಾಧನೆ ಸಾಧ್ಯ. ಪ್ರಾಮಾಣಿಕತೆಯಿಂದ ಒಂದು ಸಂಸ್ಥೆಯನ್ನು ಎತ್ತರಕ್ಕೆ ಕೊಂಡೊಯ್ಯಬಹುದು ಅನ್ನುವುದಕ್ಕೆ ಎಕ್ಸಲೆಂಟ್ ವಿದ್ಯಾ ಸ0ಸ್ಥೆಯೇ ಸಾಕ್ಷಿ ಎಂದರು. ಸನ್ಮಾನಿತರಾದ ಎಸ್ ಡಿ ಎಂ ಕಾಲೇಜಿನ ಉಪಪ್ರಾ0ಶುಪಾಲರಾದ ನಂದಾ ಕುಮಾರಿ ಕೆ ಪಿ ಮಾತನಾಡುತ್ತಾ ಈ ಕಲ್ಲಬೆಟ್ಟುವಿನ ಕಲ್ಲು ಕಲ್ಲುಗಳಲ್ಲಿ ಹೂವುಗಳನ್ನು ಅರಳಿಸುವ ಕೆಲಸವನ್ನು ಯುವರಾಜ ಜೈನ್ ರಶ್ಮಿತಾ ಜೈನ್ ದ0ಪತಿಗಳು ಮಾಡಿದ್ದಾರೆ. ಈ ಸಂಸ್ಥೆ ಈಗಾಗಲೇ ರಾಜ್ಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ನನ್ನ ವಿದ್ಯಾರ್ಥಿಯ ಸಾಧನೆಗೆ ಹೃದಯ ತುಂಬಿ ಬಂದಿದೆ. ವಿದ್ಯೆಗೆ ವಿನಯವೇ ಭೂಷಣ ಅನ್ನುವ ಮಾತಿನ0ತೆ ಸಾಧನೆಗೆ ಗುರುಗಳೇ ಕಾರಣ ಅನ್ನುವ ಅವರ ಮನೋಭಾವವೇ ಅವರನ್ನು ಈ ಎತ್ತರಕ್ಕೇರಿಸಿದೆ. ಈ ಸ0ಸ್ಥೆ ಇನ್ನು ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟಗಳಲ್ಲೂ ಬೆಳಗಲಿ ಎಂದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡುತ್ತಾವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಸದಾ ಕಾರ್ಯಪ್ರವೃತ್ತರಾಗಿರುವ ಶಿಕ್ಷಕರು ಜಗತ್ತಿನಾದ್ಯಂತ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಾ ಬಂದಿದ್ದಾರೆ. ತಂತ್ರಜ್ಞಾನ ಎಷ್ಟೇ ಮುಂದುವರೆದರೂ ವಿದ್ಯಾರ್ಥಿಯ ಉದ್ಧಾರ ಆಗಬೇಕೆಂದರೆ ಗುರುವಿನ ಸಾಂಗತ್ಯ ಇರಲೇಬೇಕು. ಹಾಗಾಗಿ ಗುರು ಶಿಷ್ಯ ಸಂಬಂಧ ಈ ಹಿಂದಿನಂತೆಯೇ ನಡೆದುಕೊಂಡು ಬಂದಿದೆ ಎಂದರು. ತಮ್ಮ ಬದುಕಿನಲ್ಲಿ ಮಾರ್ಗದರ್ಶನವನ್ನು ನೀಡುತ್ತಾ ಬಂದಿರುವ ಗುರುಗಳನ್ನು ಹಾಗೂ ಸಂಸ್ಥೆಯಲ್ಲಿ ಕಾರ್ಯನಿರತರಾಗಿರುವ ಗುರುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಸ0ಸ್ಥೆಯ ಮಾಸ ಪತ್ರಿಕೆ “ಮನೋರಮಾ”ಈ ಸಂದರ್ಭದಲ್ಲಿ ಬಿಡುಗಡೆಯಾಯಿತು. 100 ಅಂಕ ತೆಗೆದ ವಿಷಯವಾರು ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು. ಸಿಬಿಎಸ್ಸಿ ಶಾಲೆಯ ಪ್ರಾಂಶುಪಾಲರಾದ ಶ್ರೀಪ್ರಸಾದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪದವಿಪೂರ್ವ ಪ್ರಾ0ಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾರರಾದ ಶಿವಪ್ರಸಾದ ಭಟ್ ವಂದಿಸಿದರು.ಉಪನ್ಯಾಸಕರಾದ ಯಶಸ್ವಿನಿ ಮತ್ತು ದಿವ್ಯಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ : ದಶಲಕ್ಷಣ ಪರ್ವ ಆಚರಣೆ

Article Image

ಕಾರ್ಕಳ : ದಶಲಕ್ಷಣ ಪರ್ವ ಆಚರಣೆ

ಕಾರ್ಕಳ ಹಿರಿಯಂಗಡಿ ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮದಲ್ಲಿ ದಿನಾಂಕ 28.08.2025 ನೇ ಗುರುವಾರದಿಂದ ದಿನಾಂಕ 06.09.2025 ನೇ ಶನಿವಾರದವರೆಗೆ ಪರಮ ಪೂಜ್ಯ 108 ಮುನಿಶ್ರೀ ಮಹಿಮಾಸಾಗರ ಮುನಿ ಮಹಾರಾಜರ ಆಶೀರ್ವಾದಪೂರ್ವಕ ಹಾಗೂ ಕಾರ್ಕಳ ದಾನಶಾಲಾ ಜೈನ ಮಠದ ರಾಜಗುರು ಧ್ಯಾನ ಯೋಗಿ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಶಲಕ್ಷಣ ಪರ್ವವನ್ನು ಶ್ರದ್ಧಾ ಭಕ್ತಿಯಿಂದ ಪ್ರತಿ ವರ್ಷದಂತೆ ಆಚರಿಸಲಾಯಿತು. ಉತ್ತಮ ಕ್ಷಮಾಧರ್ಮದಂದು ಯುವ ನ್ಯಾಯವಾದಿಗಳಾದ ಸುವೃತ್ ಕುಮಾರ್ ಹಾಗೂ ಸಮಾಜದ ಹಿರಿಯರು ದೀಪ ಬೆಳಗಿಸುವುದರ ಮೂಲಕ 10 ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರತಿದಿನ ಸಂಜೆ ಜಿನಪೂಜೆ, ಭಜನೆ, ಮಹಾಮಂಗಳಾರತಿ, ವಿದ್ವಾಂಸರಿಂದ ಉಪನ್ಯಾಸ, ತತ್ವಾರ್ಥ ಸೂತ್ರವಾಚನ, ನಿಲಯದ ವಿದ್ಯಾರ್ಥಿಗಳಿಂದ ಭಾಷಣ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕೊನೆಯ ದಿನವಾದ ದಿನಾಂಕ 06.09.2025 ನೇ ಶನಿವಾರ ಉತ್ತಮ ಬ್ರಹ್ಮಚರ್ಯ ಧರ್ಮದ ಆಚರಣೆಯಂದು ಆಶ್ರಮದ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಎಂಕೆ ವಿಜಯಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕೋಶಾಧಿಕಾರಿಗಳಾದ ಎಸ್ ಅನಂತರಾಜ್ ಪೂವಣಿ ಮತ್ತು ಆಶ್ರಮದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸನ್ಮತ್ ಕುಮಾರ್ ನಾರಾವಿ ಇವರ ಗೌರವ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಆರಂಭದಲ್ಲಿ ಯೋಗರಾಜ್ ಶಾಸ್ತ್ರಿ ಇವರು ಸ್ವಾಗತಿಸಿದರು. ಪರ್ವದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನಡೆಸಲಾದ ಧಾರ್ಮಿಕ ಮತ್ತು ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಆಶ್ರಮದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ವತಿಯಿಂದ 7 ನೇ, 10 ನೇ ಮತ್ತು ದ್ವಿತೀಯ ಪಿಯುಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪುರಸ್ಕರಿಸಲಾಯಿತು. ಧಾರ್ಮಿಕ ಗುರುಗಳಾದ ಯೋಗರಾಜ್ ಶಾಸ್ತ್ರಿ ಇವರು ತತ್ವಾರ್ಥಸೂತ್ರ ಪಠಿಸಿದರು. ವಿದ್ಯಾರ್ಥಿ ಹಿತೇಶ್ ಪ್ರಾರ್ಥಿಸಿದರು. ಅನ್ವಿತ್ ಎಚ್ ಎಸ್ ವರದಿ ಮಂಡಿಸಿದರು. ಶ್ರವಣ್ ವಿದ್ಯಾರ್ಥಿ ಭಾಷಣ ನೆರವೇರಿಸಿದರು. ಆಶ್ರಮದ ಮೇಲ್ವಿಚಾರಕರಾದ ವೀರೇಂದ್ರ ಜೈನ್ ಧನ್ಯವಾದ ಸಮರ್ಪಿಸಿದರು. ತೀರ್ಥನ್ ಇವರು ಕಾರ್ಯಕ್ರಮ ನಿರೂಪಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Article Image

ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ : ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ದಿ. ನೇಮಿರಾಜು ಜೈನ್ ಮತ್ತು ಪುಷ್ಪಾವತಿ ದಂಪತಿಗಳ ಎರಡನೇ ಪುತ್ರಿಯಾಗಿ ಜನಿಸಿದ ಆರತಿ ಕುಮಾರಿ ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಬಳಿಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಹಂಬಲದೊಂದಿಗೆ 1994ರಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗಾಧಿಬನೂರು ಎಂಬಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುತ್ತಾರೆ. 1997ರಲ್ಲಿ ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವಂತಹ ವಿದ್ಯಾಸಂಸ್ಥೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಟ್ಟಡೆಗೆ ಕರ್ತವ್ಯಕ್ಕೆ ಹಾಜರಾಗಿರುತಗತ್ತಾರೆ. ವಿದ್ಯಾರ್ಥಿ ಸಾಗರದಲ್ಲಿ ಪ್ರೀತಿ ಆದರ್ಶಗಳ ನೆಚ್ಚಿನ ಶಿಕ್ಷಕಿಯಾಗಿ, ಶಿಕ್ಷಕ ವೃಂದದವರ ಮಧ್ಯೆ ಆತ್ಮೀಯ ಸಹೋದ್ಯೋಗಿಯಾಗಿ, ಇಲಾಖಾಧಿಕಾರಿಗಳ ಮೆಚ್ಚುಗೆಯ ನೌಕರಳಾಗಿ, ಊರ ವಿದ್ಯಾಭಿಮಾನಿಗಳ ಪೋಷಕರ ಮನಗೆದ್ದು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುತ್ತಾರೆ. ಇವರು ಸರಕಾರಿ ನೌಕರರ ಸಂಘದಲ್ಲಿ ಪದಾಧಿಕಾರಿಯಾಗಿ 2 ಬಾರಿ ರಾಜ್ಯ ಪರಿಷತ್ ಸದಸ್ಯೆಯಾಗಿ ಪ್ರಸ್ತುತ ಕ್ರೀಡಾ ಮತ್ತು ಸಾಂಸ್ಕೃತಿಕ ಸದಸ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್-2 ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸತ್ತಿದ್ದಾರೆ. ಇವರು ವಲಯ ಮಟ್ಟದ ಪಂದ್ಯಾಟ ಹಾಗೂ ಕ್ರೀಡಾಕೂಟಕ್ಕೆ ನೋಡೆಲ್ ಆಗಿ, ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸದಸ್ಯರಾಗಿ ಹಾಗೂ ಉಪಾಧ್ಯಕ್ಷರಾಗಿ 2 ಬಾರಿ ಸೇವೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ 2 ಬಾರಿ ರಾಜ್ಯ ಪರಿಷತ್ ಸದಸ್ಯರಾಗಿ ಸೇವೆ, ಭಾರತ ಸೇವಾದಳ ಜಿಲ್ಲಾ ಸಮಿತಿಯಲ್ಲಿ ಸದಸ್ಯರಾಗಿ ಪ್ರಸ್ತುತ ಕಾರ್ಯದರ್ಶಿಯಾಗಿ, ಭಾರತ ಸೇವಾದಳದ ತಾಲೂಕು ಮಟ್ಟದ ರ‍್ಯಾಲಿ ಹಾಗೂ ಜಿಲ್ಲಾ ಮಟ್ಟದ ರ‍್ಯಾಲಿಯ ಸಂಯೋಜಕರಾಗಿಯೂ ಸೇವೆ ಸಲ್ಲಿಸಯತ್ತಿದ್ದಾರೆ. ಇವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸುದೀರ್ಘ 31 ವರ್ಷಗಳ ಸೇವೆ, ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗಿದೆ.

ಜೈನ ತತ್ವ-ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ : ಡಾ. ಅಪ್ಪಣ್ಣ ಹಂಜೆ

Article Image

ಜೈನ ತತ್ವ-ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ : ಡಾ. ಅಪ್ಪಣ್ಣ ಹಂಜೆ

ಜೈನ ಧರ್ಮವು ‘ಅಹಿಂಸಾ ಪರಮೋಧರ್ಮ’ ಎಂಬ ಧ್ಯೇಯ ವಾಕ್ಯದೊಂದಿಗೆ ಅಹಿಂಸೆ, ಅಪರಿಗ್ರಹ, ಅನೇಕಾಂತವಾದ ಮುಂತಾದ ಸಿದ್ಧಾಂತಗಳ ಮೂಲಕ ಇಂದಿಗೂ ವಿಶ್ವಹಿತವನ್ನು ಬಯಸುತ್ತ ಮುನ್ನಡೆದಿದ್ದು, ಜಗತ್ತಿನ ಎಲ್ಲ ಜೀವಿಗಳಿಗೂ ಬದುಕುವ ಸಮಾನವಾದ ಹಕ್ಕಿದೆ, ಎಲ್ಲ ಜೀವಿಗಳೂ ಇತರ ಎಲ್ಲ ಜೀವಿಗಳನ್ನು ಮನ್ನಿಸಬೇಕು, ಎಲ್ಲ ಜೀವಿಗಳೂ ಸೌಹಾರ್ದದಿಂದ ಬದುಕಬೇಕೆಂಬುದು ಈ ಧರ್ಮದ ಹೆಬ್ಬಯಕೆಯಾಗಿದೆ ಎಂದು ಡಾ. ಅಪ್ಪಣ್ಣ ಹಂಜೆ ಹೇಳಿದರು. ಅವರು ಗದಗ ಜಿಲ್ಲಾ ದಿಗಂಬರ ಜೈನ ಸಂಘವು ‘ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ’ ಕಾರ್ಯಕ್ರಮದ ನಿಮಿತ್ತ ಗದುಗಿನ ವಿದ್ಯಾದಾನ ಸಮಿತಿಯ ಬಾಲಕರ ಪ್ರೌಢ ಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಸಾಮೂಹಿಕ ಕ್ಷಮಾವಳಿ ಹಾಗೂ ಸಮಾರೋಪ ಸಮಾರಂಭ’ದಲ್ಲಿ ಉಪನ್ಯಾಸ ಮಾಡುತ್ತ, ಜೈನರು “ನಾನು ಲೋಕದ ಸಕಲ ಜೀವಿರಾಶಿಗಳನ್ನು ಕ್ಷಮಿಸುತ್ತೇನೆ, ಸಕಲ ಜೀವರಾಶಿಗಳೂ ನನ್ನನ್ನು ಕ್ಷಮಿಸಲಿ, ನಾನು ಎಲ್ಲ ಜೀವಿಗಳಲ್ಲಿ ಮೈತ್ರಿಯನ್ನು ಇರಿಸಿಕೊಳ್ಳಲು ಬಯಸುತ್ತೇನೆ, ಯಾವ ಜೀವಿಯಲ್ಲೂ ನನಗೆ ವೈರವಾಗಲಿ ಮತ್ಸರವಾಗಲಿ ಇಲ್ಲ” ಎಂಬ ಸೌಹಾರ್ದ ಮಂತ್ರವನ್ನು ಆರಂಭದಿಂದಲೂ ಅನುಸರಿಸುತ್ತ ಬಂದಿದ್ದು, ದಶಲಕ್ಷಣ ಪರ್ವವು ಒಂದು ಅರ್ಥದಲ್ಲಿ ಜೈನರಿಗೆ ವಿಧಿಸಲಾದ ನೀತಿ ಸಂಹಿತೆ, ಇದು ಜೈನರ ಬದುಕುವ ಕಲೆಯಾಗಿದೆ ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗಜೇಂದ್ರಗಡದ ಉದ್ಯಮಿ ಮತ್ತು ಭಗವಾನ ಮಹಾವೀರ ಜೈನ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಅಧ್ಯಕ್ಷ ಅಶೋಕಕುಮಾರ ಬಾಗಮಾರ ಅವರು ಜೈನ ಧರ್ಮವು ಅರಿವು, ವಿಚಾರ, ಆಚಾರಕ್ಕೆ ಒತ್ತು ಕೊಡುತ್ತ ಬಂದಿದ್ದು, ಇಂದು ಸಂಖ್ಯಾದೃಷ್ಟಿಯಿಂದ ಜೈನರು ಮತೀಯ ಅಲ್ಪಸಂಖ್ಯಾತರೆಂದು ಪರಿಗಣಿಸಲ್ಪಟ್ಟಿದ್ದರೂ ತತ್ವ-ಸಿದ್ಧಾಂತಗಳು ಮತ್ತು ಅರ್ಥಪೂರ್ಣ ಆಚರಣೆ-ಅನುಷ್ಠಾನಗಳ ದೃಷ್ಟಿಯಿಂದ ನಾಡಿನ ಪ್ರಜ್ಞಾವಂತರ ಪ್ರೀತಿಗೆ ಪಾತ್ರರಾಗಿದ್ದಾರೆಂದು ಹೇಳಿದರು. ಸಂಘದ ಅಧ್ಯಕ್ಷ ಪಿ.ಎ. ಕುಲಕರ್ಣಿ ಪ್ರಾಸ್ತಾವಿಕವಾಗಿ ಮತ್ತು ಅಧ್ಯಕ್ಷತೆ ವಹಿಸಿ ಮಾತನಾಡುತ್ತ ವಿದ್ಯಾದಾನ ಸಮಿತಿಯ ಅಧ್ಯಕ್ಷ ಡಿ.ಬಿ. ಹುಯಿಲಗೋಳ ಮತ್ತು ಕಾರ್ಯದರ್ಶಿ ಶ್ರೀನಿವಾಸ ಹುಯಿಲಗೋಳ ಅವರು ಗದುಗಿನ ದಿಗಂಬರ ಜೈನ ಸಮಾಜದ ಕಾರ್ಯಕ್ರಮಗಳ ಆಯೋಜನೆಗೆ ಕಳೆದ ಇಪ್ಪತ್ತೆರಡು ವರ್ಷಗಳಿಂದಲೂ ಶಾಲೆಯ ಸಭಾಂಗಣವನ್ನು ಯಾವುದೇ ಅಪೇಕ್ಷೆಯಿಲ್ಲದೆ ಕೊಡಮಾಡುತ್ತ ಬಂದಿದ್ದು, ಅವರ ‘ಅಭಯದಾನ’ಕ್ಕೆ ಜೈನ ಸಮಾಜವು ಯಾವತ್ತೂ ಋಣಿಯಾಗಿದ್ದು, ಸಾಧಕರ ಸನ್ಮಾನಕ್ಕೆ ಅವಶ್ಯವಿರುವ ಸಾಮಗ್ರಿಗಳನ್ನು ಗದುಗಿನ ಗಣ್ಯ ವ್ಯಾಪಾರಸ್ಥ ಸಂಜಯ ಬಾಗಮಾರ ಅವರು ಪ್ರತಿವರ್ಷ ದಾನಮಾಡುತ್ತ ಬಂದಿದ್ದು, ಅವರ ‘ಶಾಸ್ತ್ರದಾನ’ ಮೌಲ್ಯ ಸಮಾಜಕ್ಕೆ ಮಾದರಿಯಾಗಿದೆ. ಸಂಘಕ್ಕೆ ಗಣ್ಯ ವ್ಯಾಪಾರಸ್ಥರಾಗಿರುವ ಕುಷ್ಟಗಿಯ ಅಭಿನಂದನ ಗೋಗಿ ಮತ್ತು ಗಜೇಂದ್ರಗಡದ ಬಾಹುಬಲಿ ಹೂಲಿ ಅವರ ಉದಾರವಾದ ಮಾರ್ಗದರ್ಶನ, ಸೇವೆ ಸ್ಮರಣೀಯವಾಗಿದೆ. ಜಿಲ್ಲೆಯ ಸಮಸ್ತ ಜೈನ ಸಮಾಜದ ಸಹಾಯ-ಸಹಕಾರದಿಂದಲೇ ದಶಲಕ್ಷಣ ಪರ್ವದ ಆಚರಣೆ ಸಾಂಗವಾಗಿ ನಡೆಯುತ್ತ ಬಂದಿದೆ ಎಂದು ಹೇಳಿದರು. ಸಾಮೂಹಿಕ ಪಂಚ ನಮೋಕಾರ ಮಂತ್ರ ಪಠಣ, ಜ್ವಾಲಾಮಾಲಿನಿ ಸದರಣ್ಣವರ ಪ್ರಾರ್ಥನೆ, ಯಶವಂತ ಸಿದ್ದಣ್ಣವರ ಭಕ್ತಿಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ ವಿದ್ಯಾರ್ಥಿಗಳು, ದಾನಿಗಳು ಮತ್ತು ಗಣ್ಯರನ್ನು ಸನ್ಮಾನಿಸಲಾಯಿತು. ಪ್ರಕಾಶ ಮುತ್ತಿನ ನಿರೂಪಣೆ ಮತ್ತು ಸಂಕಪ್ಪ ನಾವಳ್ಳಿ ವಂದನಾರ್ಪನೆಗೈದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳ ಮುನ್ನೂರಕ್ಕೂ ಹೆಚ್ಚು ಶ್ರಾವಕರು, ಶ್ರಾವಿಕೆಯರು ಭಾಗವಹಿಸಿದ್ದರು. ಎಲ್ಲರೂ ಸಾಮೂಹಿಕವಾಗಿ ಪರಸ್ಪರ ಕ್ಷಮೆ ಕೋರಿ, ಪಂಚ ನಮೋಕಾರ ಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

ವೇಣೂರು: ದಶಲಕ್ಷಣ ಪರ್ವದ ಸಮಾರೋಪ ಸಮಾರಂಭ

Article Image

ವೇಣೂರು: ದಶಲಕ್ಷಣ ಪರ್ವದ ಸಮಾರೋಪ ಸಮಾರಂಭ

ಉಜಿರೆ: ದಶಲಕ್ಷಣ ಪರ್ವವು ಸರ್ವ ಪರ್ವಗಳ ರಾಜನಾಗಿದ್ದು, ಉತ್ತಮ ಕ್ಷಮಾ, ಮಾರ್ದವ, ಆರ್ಜವ, ಶೌಚ, ಸತ್ಯ, ಸಂಯಮ, ತಪ, ತ್ಯಾಗ, ಅಕಿಂಚನ್ಯ ಮತ್ತು ಬ್ರಹ್ಮಚರ್ಯ ಎಂಬ ದಶಧರ್ಮಗಳ ಪಾಲನೆಯಿಂದ ಮುನಿಯಾಗುವ ಯೋಗವೂ, ಭಾಗ್ಯವೂ ಪ್ರಾಪ್ತಿಯಾಗುತ್ತದೆ ಎಂದು ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಶನಿವಾರ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ಯಾತ್ರಿನಿವಾಸದಲ್ಲಿ ಕ್ಷಮಾವಳಿಯೊಂದಿಗೆ ದಶಲಕ್ಷಣ ಪರ್ವದ ಸಮಾರೋಪ ಸಮಾರಂಭದಲ್ಲಿ ಮಂಗಲ ಪ್ರವಚನ ನೀಡಿದರು. ದಶಧರ್ಮಗಳು ಮನಸ್ಸನ್ನು ಸುಂದರಗೊಳಿಸಿ ವಿವೇಕ ಪ್ರಾಪ್ತಿಗೆ ಪ್ರೇರಕವಾಗಿವೆ. ಅನುಕಂಪ ಮತ್ತು ಕರುಣೆಯೊಂದಿಗೆ ಅಹಿಂಸೆಯ ಪಾಲನೆ ಮಾಡಿದಾಗ ಕ್ಷಮಾ ಗುಣವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಅಜ್ಞಾನ ಮತ್ತು ಮಿಥ್ಯತ್ವವನ್ನು ತ್ಯಜಿಸಿ, ದರ್ಶನಗಳಲ್ಲಿ ಸಮನ್ವಯತೆಯನ್ನು ಸಾಧಿಸಿ, ವಿವೇಕದೊಂದಿಗೆ ಸರ್ವಜೀವಿಗಳಲ್ಲಿಯೂ ಅಹಿಂಸೆಯನ್ನು ತೋರಿದಾಗ ಮೋಕ್ಷ ಪ್ರಾಪ್ತಿ ಸಾಧ್ಯವಾಗುತ್ತದೆ. ಸದಾ ಸತ್ಯ, ಧರ್ಮ, ನ್ಯಾಯ, ನೀತಿಯ ಪಾಲನೆಯೊಂದಿಗೆ ಸದಾಚಾರದೊಂದಿಗೆ ವರ್ತಮಾನದ ಬದಕಿನ ಸವಾಲುಗಳನ್ನು ಕ್ಷಮಾಗುಣದೊಂದಿಗೆ ತಾಳ್ಮೆ ಮತ್ತು ಸಂಯಮದಿಂದ ಸುಲಭದಲ್ಲಿ ಪರಿಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಸ್ವಾಮೀಜಿಯವರ ನೇತೃತ್ವದಲ್ಲಿ ಸರ್ವರೂ ಪರಸ್ಪರ ಕ್ಷಮೆ ಯಾಚಿಸಿ ಎಲ್ಲರಿಗೂ ಶುಭ ಹಾರೈಸಿ ಕ್ಷಮಾವಳಿ ಆಚರಿಸಿದರು. ಧಾರ್ಮಿಕ ಉಪನ್ಯಾಸ ನೀಡಿದ ಮೂಡಬಿದ್ರೆ ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಭಾತ್ ಬಲ್ನಾಡ್, ಜೈನ ಧರ್ಮ ಅತ್ಯಂತ ಪ್ರಾಚೀನ ಧರ್ಮವಾಗಿದ್ದು, ವೇದಗಳ ಕಾಲದಲ್ಲಿಯೂ ಆಚರಣೆಯಲ್ಲಿತ್ತು. ಕರ್ಮಸಿದ್ಧಾಂತದ ಪ್ರಕಾರ ನಾವು ಮಾಡಿದ ಕರ್ಮವನ್ನು ಅನುಭವಿಸಲೇಬೇಕು. ಆಧ್ಯಾತ್ಮಿಕ ಚಿಂತನೆಯೊಂದಿಗೆ ಜಪ-ತಪ, ನೋಂಪಿ, ಆರಾಧನೆ ಮಾಡಿ ಪಂಚಾಣುವೃತಗಳ ಪಾಲನೆಯೊಂದಿಗೆ ಸರಳ ಜೀವನ ನಡೆಸಿ ಧರ್ಮದ ಅನುಷ್ಠಾನ ಮಾಡಬೇಕು. ದಾನ-ಧರ್ಮಾದಿ ಸತ್ಕಾರ್ಯಗಳಿಂದ ಆತ್ಮನಿಂಗಟಿದ ಕರ್ಮದ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾತ್ಮನಾಗಿ ಮೋಕ್ಷ ಪ್ರಾಪ್ತಿ ಸಾಧ್ಯವಾಗುತ್ತದೆ ಎಂದು ಹೇಳಿದರು. ಕ್ಷಮಾಗುಣ ನಮ್ಮ ದೌರ್ಬಲ್ಯ ಅಲ್ಲ, ವೀರರಿಗೆ ಭೂಷಣವಾಗಿದೆ. ಸಂಯಮದೊಂದಿಗೆ ದೈನಂದಿನ ವ್ಯವಹಾರದಲ್ಲಿ ಕ್ಷಮಾ ಧರ್ಮ ಪಾಲನೆ ಮಾಡಿದರೆ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಅಶ್ವಿನಿ ಪ್ರವೀಣ್ ಕುಮಾರ್ ಇಂದ್ರ ಧನ್ಯವಾದವಿತ್ತರು. ಮಹಾವೀರ ಜೈನ್ ಮೂಡುಕೋಡಿಗುತ್ತು ಕಾರ್ಯಕ್ರಮ ನಿರ್ವಹಿಸಿದರು. ಡಾ. ವರ್ಷಾ ಮತ್ತು ಸತ್ಯಪ್ರಸಾದ್ ವಿ. ಜೈನ್ ಸಮಾರಂಭದ ಪ್ರಾಯೋಜಕರಾಗಿ ಸಹಕರಿಸಿದರು.

ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ

Article Image

ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ

‘ಬ್ರಹ್ಮ’ವೆಂದರೆ ‘ಆತ್ಮ’ ಮತ್ತು ‘ಚರ್ಯ’ ಎಂದರೆ ‘ಪಾಲನೆ’ ಎಂದರ್ಥ. ಆತ್ಮನಲ್ಲಿ ಲೀನವಾಗಿ ಕಾಮಾದಿ ವಿಕಾರಗಳನ್ನು ತೊರೆದು ಆತ್ಮನ ನೈಜ ಗುಣಗಳನ್ನು ಅರಿತು ಆತ್ಮೋನ್ನತಿಯನ್ನು ಸಾಧಿಸುವುದೇ ಬ್ರಹ್ಮಚರ್ಯ ಧರ್ಮವಾಗಿದ್ದು, ಕಾರ್ಯ-ವಚನ ಆಲೋಚನೆಗಳಲ್ಲಿ ಬ್ರಹ್ಮಚರ್ಯ ಪಾಲನೆಯಿಂದ ಪರಿಶುದ್ಧ ಜೀವನ ನಡೆಸಲು ಸಾಧ್ಯವೆಂದು ವಸಂತಮಾಲಾ ದೇಸಾಯಿ ಹೇಳಿದರು. ಅವರು ಗದಗ ಜಿಲ್ಲಾ ದಿಗಂಬರ ಜೈನ ಸಂಘವು ‘ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ’ ನಿಮಿತ್ತ ಸಂಘದ ಕಾರ್ಯಾಲಯದಲ್ಲಿ ಮಹಿಳಾ ಮಂಡಳದ ಸಹಯೋಗದಲ್ಲಿ ಆಯೋಜಿಸಿದ್ದ ‘ಉತ್ತಮ ಬ್ರಹ್ಮಚರ್ಯ ಧರ್ಮ’ ಕುರಿತು ಉಪನ್ಯಾಸ ಮಾಡುತ್ತ, ಆತ್ಮವು ಪರಿಶುದ್ಧ, ಪ್ರಬುದ್ಧ, ಶಾಶ್ವತ, ಆನಂದಯಮವಾಗಿದ್ದು, ಆತ್ಮನ ನಿಜವಾದ ಗುಣವನ್ನು ತಿಳಿಯುವುದರಿಂದ ಬದುಕು ಸುಂದರವಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶೋಭಕ್ಕ ಇಂಚಲ ಅವರು ಮಹಿಳೆಯನ್ನು ರಕ್ಷಿಸುವ ಅಭೇದ್ಯ ಬೇಲಿ ಅವಳ ಬ್ರಹ್ಮಚರ್ಯದ ಸದ್ಗುಣವಾಗಿದ್ದು, ಬೇರೆ ಯಾವುದೇ ಬೇಲಿಯೂ ಅವಳನ್ನು ರಕ್ಷಿಸಲು ಸಾಧ್ಯವಿಲ್ಲವೆಂದು ಹೇಳಿದರು. ಕಾರ್ಯಕ್ರಮದಲ್ಲಿ ಅಪ್ಪಣ್ಣ ಹಂಜೆ, ಪಿ.ಎ. ಕುಲಕರ್ಣಿ, ಯಶವಂತ ಸಿದ್ದಣ್ಣವರ, ಪ್ರಕಾಶ ಮುತ್ತಿನ, ಸಂಕಪ್ಪ ನಾವಳ್ಳಿ, ಸಂಜಯ ಪಾಂಡ್ರೆ, ಎಚ್.ಎ. ಕುಲಕರ್ಣಿ, ಸುಭಾಸ ಅಂಗಡಿ, ಪರಿಮಳಾ ಕುಲಕರ್ಣಿ, ಸಹನಾ ಹಂಜೆ, ಪದ್ಮಾವತಿ ತುಕೋಳ, ಸುಕನ್ಯಾ ಕುಲಕರ್ಣಿ, ಸುಪ್ರೀಯಾ ಪಾಂಡ್ರೆ ಸೇರಿದಂತೆ ಸ್ಥಳೀಯ ಶ್ರಾವಕರು, ಶ್ರಾವಿಕೆಯರು ಪಾಲ್ಗೊಂಡಿದ್ದರು. ಮಧುಮತಿ ಕಬ್ಬಿಣ ಭಕ್ತಿಗೀತೆ ಹಾಡಿದರು. ಸುಮನ ಮುತ್ತಿನ ನಿರೂಪಣೆ ಮತ್ತು ಸುಪ್ರೀಯಾ ನಾವಳ್ಳಿ ವಂದನಾರ್ಪಣೆಗೈದರು.

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

Article Image

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

ತೌಳವ ಇಂದ್ರ ಸಮಾಜ(ರಿ). ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಇತ್ತೀಚೆಗೆ ಮೂಡಬಿದಿರೆ ಶ್ರೀ ಧವಳ ಕಾಲೇಜ್ ನ ಸಭಾಂಗಣದಲ್ಲಿ ನಡೆಯಿತು. "2009ರಲ್ಲಿ ಸಮಾಜ ಮುಖಿ ಚಿಂತನೆಯ ಇಂದ್ರ ಬಂಧುಗಳ ಶ್ರಮದಲ್ಲಿ,ಸಮಸ್ತ ಇಂದ್ರ ವರ್ಗದವರನ್ನು ಒಗ್ಗೂಡಿಸಿ, ಸಂಘ ಸ್ಥಾಪನೆಯಾಯಿತು ಮತ್ತು ಕಳೆದ ಹಲವಾರು ವರ್ಷಗಳಲ್ಲಿ ಸಂಘಟನೆಯು ಪೂಜಾಪಾಠಗಳ ತರಬೇತಿ, ಹಿರಿಯ ಪುರೋಹಿತರ ಸನ್ಮಾನ, ವಿದ್ಯಾರ್ಥಿ ಪುರಸ್ಕಾರ, ಕ್ರೀಡಾಕೂಟ, ಸಾಮೂಹಿಕ ಮೃತ್ಯುಂಜಯ ಆರಾಧನೆ, ಸಾಧಕರ ಸನ್ಮಾನ, ವಿದ್ಯಾರ್ಥಿ ವೇತನ ನೀಡಿಕೆ, ಆಟಿಕೂಟ, ಪ್ರವಾಸ, ಉಚಿತ ಆರೋಗ್ಯ ಶಿಬಿರ, ಸಾಮೂಹಿಕ ಉಪನಯನ ಸಂಸ್ಕಾರ ಹಾಗೂ ವೃತೋಪದೇಶಗಳು ಮುಂತಾದ ಪರಸ್ಪರ ಬಾಂಧವ್ಯ ಸಂವರ್ಧನೆಯ ಕೆಲಸ ಕಾರ್ಯಗಳನ್ನು ಮಾಡಿದೆ." ಎಂದು ಪ್ರಾಸ್ತಾವಿಕ ಭಾಷಣವನ್ನು ಸಂಘದ ಉಪಾಧ್ಯಕ್ಷರಾದ ಪ್ರೊ.ಅಕ್ಷಯ ಕುಮಾರ್ ಮಳಲಿಯವರು ಬಳಿಕ ಅತಿಥಿಗಳನ್ನೂ ಸ್ವಾಗತಿಸಿದರು. ಹಿರಿಯ ಪುರೋಹಿತರಾದ ಮಿತ್ರಸೇನ ಇಂದ್ರ ಮುಂಡಾಜೆ,ನೆರೆಂಕಿ ಸುಭಾಶ್ಚಂದ್ರ ಇಂದ್ರ, ಆನಂತರಾಜ ಇಂದ್ರ ಬಂಟ್ವಾಳ, ಹಾಗೂ ಶ್ಯಾಮರಾಜ ಇಂದ್ರ, ನೇರೆಂಕಿ ಅವರುಗಳನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಎಂ. ಜ್ಞಾನಚಂದ್ರ ಇಂದ್ರರವರು ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲರನ್ನು ಸ್ಮರಿಸುತ್ತಾ, ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ಪ್ರತಿ ವರ್ಷದಂತೆ ಎಸ್ ಎಸ್ ಎಲ್ ಸಿ ಮತ್ತು ಪಿ. ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಶಸ್ತ ವರ್ಷದಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು. ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿ ವಿವಿಧ ಉನ್ನತ ಹುದ್ದೆಯನ್ನು ಅಲಂಕರಿಸಿರುವ ಸಮಾಜ ಬಾಂಧವರನ್ನು ಅಭಿನಂದಿಸಲಾಯಿತು. ಅನಂತರ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಕಾರ್ಯಕ್ರಮ ನಡೆಯಿತು. ಅರ್ಕಕೀರ್ತಿ ಇಂದ್ರರವರು ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷ ಧರಣೇಂದ್ರ ಇಂದ್ರರು ತಮ್ಮ ಮುಂದಿನ ಯೋಜನೆಗಳನ್ನು ಪ್ರಸ್ತಾಪಿಸಿದರು. ಕಾರ್ಯದರ್ಶಿ ಅಭಯ ಕುಮಾರ್ ಬಿ. ವಾರ್ಷಿಕ ವರದಿ ಓದಿದರು, ಸುವಿಧಿ ಇಂದ್ರ ಲೆಕ್ಕಪತ್ರ ಮಂಡಿಸಿದರು.ಮಹಾ ಸೇನಾ ಇಂದ್ರ ಪ್ರತಿಭಾ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು, ದಿವ್ಯಾ ವೀರೇಂದ್ರ ಶ್ರದ್ಧಾಂಜಲಿ ಅರ್ಪಣೆ ಮಾಡಿದರು. ಪ್ರಮೋದ್ ಕುಮಾರ್ ಅಭಿನಂದಿತರ ಪಟ್ಟಿ ಓದಿ ಕಾರ್ಯಕ್ರಮ ನಡೆಸಿಕೊಟ್ಟರು. ಕೋಶಾಧಿಕಾರಿ ವಿಜಯ ಕುಮಾರಿ ಇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿಶ್ಚಿತ ಪ್ರಾರ್ಥನೆ ಮಾಡಿದರು, ಹರಿಶ್ಚಂದ್ರ ಇಂದ್ರ ಕಾರ್ಯಕ್ರಮ ನಿರೂಪಿಸಿದರು. ಸುಜ್ಞಾನ ಇಂದ್ರ ಧನ್ಯವಾದ ಸಮರ್ಪಿಸಿದರು.

ಬಿ. ಪ್ರಮೋದ್ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

Article Image

ಬಿ. ಪ್ರಮೋದ್ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

ಬೆಂಗಳೂರು, ಆ. 30: ರಾ‌ಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾಮರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಹಾಸನ ಜಿಲ್ಲೆ ಸಕಲೇಶಪುರ ಉಪ-ವಿಭಾಗದ ಡಿವೈಎಸ್‌ಪಿ ಆಗಿರುವ ಬಿ. ಪ್ರಮೋದ್ ಕುಮಾರ್‌ರವರಿಗೆ ಮಾನ್ಯ ರಾ‌ಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ-ಗಣರಾಜ್ಯೋತ್ಸವ ದಿನಾಚರಣೆ-2023ನ್ನು ನೀಡಿ ಗೌರವಿಸಿರುತ್ತಾರೆ.

ಪಿ. ವೀರೇಂದ್ರ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

Article Image

ಪಿ. ವೀರೇಂದ್ರ ಕುಮಾರ್‌ರವರಿಗೆ ಶ್ಲಾಘನೀಯ ಸೇವಾ ಪದಕ

ಬೆಂಗಳೂರು, ಆ. 30: ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾಮರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಬೆಂಗಳೂರು ಕೆಎಲ್‌ಎ ಡಿವೈಎಸ್‌ಪಿ ಆಗಿರುವ ಪಿ. ವೀರೇಂದ್ರ ಕುಮಾರ್‌ರವರಿಗೆ ಪೋಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ-ಗಣರಾಜ್ಯೋತ್ಸವ ದಿನಾಚರಣೆ-2023ನ್ನು ನೀಡಿ ಗೌರವಿಸಿರುತ್ತಾರೆ.

ಶಾಂತರಾಜ ಮಲ್ಲಸಮುದ್ರ ಇವರಿಗೆ ಆಚಾರ್ಯ ಗುರುಕುಲದ ಮಹಾವೀರ ಪ್ರಶಸ್ತಿ

Article Image

ಶಾಂತರಾಜ ಮಲ್ಲಸಮುದ್ರ ಇವರಿಗೆ ಆಚಾರ್ಯ ಗುರುಕುಲದ ಮಹಾವೀರ ಪ್ರಶಸ್ತಿ

ಮೈಸೂರಿನ ಆಚಾರ್ಯ ಗುರುಕುಲದಿಂದ ಕೊಡಮಾಡುವ 2024ರ ಭಗವಾನ್ ಮಹಾವೀರ ಪ್ರಶಸ್ತಿಗೆ ಧಾರವಾಡದ ಶಾಂತರಾಜ ಮಲ್ಲಸಮುದ್ರ ಇವರು ಭಾಜನರಾಗಿದ್ದಾರೆ. ಲೇಖಕ, ಅಂಕಣ ಬರಹಗಾರ, ವರದಿಗಾರ, ಸಮರ್ಥ ಸಂಘಟಕರೆಂದು ಹೆಸರು ಮಾಡಿದ ಶಾಂತರಾಜ ಮಲ್ಲಸಮುದ್ರ ಇವರು ಬ್ಯಾಂಕಿಂಗ್ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಇದೀಗ ಸಮಾಜ ಸೇವೆಯಲ್ಲಿ ಮತ್ತು ಬರವಣಿಗೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. 1978ರಲ್ಲಿ ಹುಬ್ಬಳ್ಳಿಯ ನಾಡೋಜ ಪಾಟೀಲ್ ಪುಟ್ಟಪ್ಪನವರ "ವಿಶ್ವ ವಾಣಿ" ಮತ್ತು "ಪ್ರಪಂಚ" ಪತ್ರಿಕೆಗಳಲ್ಲಿ ಬರಹಗಾರರಾಗಿ ವೃತ್ತಿ ಜೀವನ ಪ್ರಾರಂಭಿಸಿದ ಇವರು ಬಳಿಕ 1979 ರಿಂದ ಎರಡು ವರ್ಷ ಹುಬ್ಬಳ್ಳಿ ಜೈನ ಬೋರ್ಡಿಂಗ್ ನಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ನಂತರ 1981 ರಿಂದ 30 ವರ್ಷಗಳ ಕಾಲ ವರ್ಧಮಾನ ಕೋ-ಆಪ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಯಲ್ಲಿ ಕಾರ್ಯನಿರ್ವಹಿಸಿ ನಂತರ ವಿಲೀನಗೊಂಡ ಸುಕೋ ಬ್ಯಾಂಕ್ ನಿಂದ ಜನರಲ್ ಮ್ಯಾನೇಜರ್ ಆಗಿ ನಿವೃತ್ತಿಯಾಗಿದ್ದಾರೆ. ಹುಬ್ಬಳ್ಳಿ - ಧಾರವಾಡ ದಿಗಂಬರ ಜೈನ ಸಮಾಜ ಹಾಗೂ ಇತರ ಸಂಘ ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದ ಇವರು ಉತ್ತರ ಕರ್ನಾಟಕ ಜೈನ ಮಹಾಸಂಘದ ಪ್ರದಾನ ಕಾರ್ಯದರ್ಶಿಯಾಗಿ, ನವನಗರ ಅಲ್ಪಸಂಖ್ಯಾತ ಜೈನ ಸೇವಾ ಸಂಘದ ಅಧ್ಯಕ್ಷರಾಗಿ ಕಳೆದ 12 ವರ್ಷಗಳಿಂದ ಇಲ್ಲಿನ ಭ. ಮುನಿಸುವೃತ ತೀರ್ಥoಕರ ಬಸದಿಯ ಎಲ್ಲ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಇದು ಅತ್ಯಂತ ಶೃದ್ದಾ ಭಕ್ತಿಯ ಅತಿಶಯ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡ ಇವರು ಹುಬ್ಬಳ್ಳಿ - ಧಾರವಾಡ ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟಿನ ಸಂಸ್ಥಾಪನೆಗೆ ಪ್ರಮುಖ ಕಾರಣಿಕರ್ತರಾಗಿದ್ದು ಇದರ ಪ್ರವರ್ಥಕರಾಗಿ ಇದೀಗ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಈ ಸಂಸ್ಥೆಯಿಂದ ಪ್ರತಿ ತಿಂಗಳೂ ಕೊನೆಯ ರವಿವಾರ ನಡೆಯುತ್ತಿರುವ ಸರಣಿ ಉಪನ್ಯಾಸ ಮಾಲಿಕೆಯ "ದಿವ್ಯವಾಣಿ" ಜನಪ್ರಿಯ ಕಾರ್ಯಕ್ರಮದ ರೂವಾರಿಯೂ ಆಗಿದ್ದಾರೆ. ಸದ್ಯ ಬೆಳಗಾವಿಯಿಂದ ಪ್ರಕಟವಾಗುತ್ತಿರುವ ಜನಪ್ರೀಯ ಕನ್ನಡ ದಿನಪತ್ರಿಕೆ "ಹಳ್ಳಿಯ ಸಂದೇಶ" ದ ಧಾರವಾಡದ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು ಈ ಭಾಗದ ಧಾರ್ಮಿಕ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳ ವರದಿ ಮತ್ತು ಲೇಖನಗಳನ್ನು ಬರೆಯುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಈ ಪತ್ರಿಕೆಯ ಭ. ಮಹಾವೀರ ಜನ್ಮ ಕಲ್ಯಾಣಕದ ವಿಶೇಷಾಂಕದ ಸಂಪಾದಕರಾಗಿಯೂ ಕಾರ್ಯನಿರ್ವಾಹಿಸುತ್ತಿದ್ದಾರೆ. ಈ ಹಿರಿ ವಯಸ್ಸಿನಲ್ಲೂ ಹಿರಿ-ಕಿರಿಯರ ಸಾಧಕರ ಕುರಿತು ಪರಿಚಯಾತ್ಮಕ ಲೇಖನ ಬರೆಯುವ ಮೂಲಕ ಅವರ ಪ್ರತಿಭೆಗಳನ್ನು ಗುರುತಿಸುವದು, ಪ್ರೋತ್ಸಾಹಿಸುವುದು ಮತ್ತು ಅನೇಕ ಸಾಧಕರನ್ನು ಗುರುತಿಸಿ ಅವರ ಸಾಧನೆಯನ್ನು ಇಡೀ ಸಮಾಜಕ್ಕೆ ಪರಿಚಯಿಸುವ ಮೂಲಕ ಹಿರಿಯರಿಗೆ ಯುವಕರಿಗೆ ಮತ್ತು ಸಾಧಕರಿಗೆ ಪ್ರಮುಖ ಪ್ರೇರಕರಾಗಿದ್ದಾರೆ. 2023ರಲ್ಲಿ ಅಮೇರಿಕಾದಲ್ಲಿರುವ ಇವರ ಮಗ ಸೊಸೆ ಮತ್ತು ಮೊಮ್ಮಕ್ಕಳೊಂದಿಗೆ ನೂರು ದಿನಗಳ ಕಾಲ ಈ ದೇಶದಲ್ಲಿ ವಾಸ್ತವ್ಯ ಮಾಡಿ ಆ ಸಂದರ್ಭದಲ್ಲಿ ತಮ್ಮ ಅನುಭವ ಅನಿಸಿಕೆ ಅಭಿಪ್ರಾಯವನ್ನು ಪ್ರವಾಸ ಕಥನ ರೂಪದಲ್ಲಿ ಅಲ್ಲಿನ ಸಮಗ್ರ ಚಿತ್ರಣವನ್ನು ತುಂಬಾ ನೈಜವಾಗಿ ಬರೆಯುವುದರೊಂದಿಗೆ ಓದುಗರನ್ನು ತಾವೇ ಅಮೆರಿಕಾ ಪ್ರವಾಸ ಮಾಡಿದ ಅನುಭವವಾಗುವಂತೆ ಚಿತ್ರಿಸಿದ್ದಾರೆ. ಅದು ಈಗ ಪುಸ್ತಕ ರೂಪದಲ್ಲಿ ಪ್ರಕಟವಾಗಲಿದೆ. ಸಮಾಜ ಸೇವೆ, ಬರವಣಿಗೆ, ಸಾಹಿತ್ಯ ಮತ್ತು ಪತ್ರಿಕಾ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಗುರುತಿಸಿ ಮೈಸೂರಿನ ಆಚಾರ್ಯ ಗುರುಕುಲ ಮಹಾವಿದ್ಯಾಲಯವು "ಮಹಾವೀರ ಪ್ರಶಸ್ತಿ" ನೀಡಿ ಗೌರವಿಸಿದೆ. ಪ್ರಶಸ್ತಿ ಪತ್ರವನ್ನು ಆಚಾರ್ಯ ಗುರುಕುಲದ ಕುಲಸಚಿವರಾದ ವಿದ್ಯಾವಾಚಷ್ಪತಿ ಡಾ. ಮೋಹನ ಕುಮಾರ ಶಾಸ್ತ್ರೀಯರು ಹುಬ್ಬಳ್ಳಿಯ ನವನಗರದಲ್ಲಿ ನಡೆಯುತ್ತಿರುವ ದಶಲಕ್ಷಣ ಮಹಾಪರ್ವದ ಸಮಾರಂಭದಲ್ಲಿ ನೀಡಿ ಗೌರವಿಸಿದರು.

ನಾರಾವಿ : ಶ್ರೀ ಅನಂತ ನೋಂಪಿ ಆರಾಧನಾ ಪೂಜಾ ವಿಧಾನ

Article Image

ನಾರಾವಿ : ಶ್ರೀ ಅನಂತ ನೋಂಪಿ ಆರಾಧನಾ ಪೂಜಾ ವಿಧಾನ

ನಾರಾವಿ ಮಾಗಣೆ ಭ। ೧೦೦೮ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ, ಪರಮ ಪೂಜ್ಯ ರಾಜಯೋಗಿ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯ ಮತ್ತು ಆಶೀರ್ವಚನದೊಂದಿಗೆ ದಿನಾಂಕ 5-9-2025ನೇ ಶುಕ್ರವಾರದಿಂದ 7-9-2025ನೇ ಆದಿತ್ಯವಾರದ ಪರ್ಯಂತ 14ನೇ ವರ್ಷದ ಶ್ರೀ ಅನಂತ ನೋಂಪಿ ಆರಾಧನಾ ಪೂಜಾ ವಿಧಾನವು ಜರಗಲಿರುವುದು. ಕಾರ್ಯಕ್ರಮ : 1. ದಿನಾಂಕ 5-9-2025ನೇ ಶುಕ್ರವಾರ, ಅನಂತ ತ್ರಯೋದಶಿ, ಬೆಳಿಗ್ಗೆ ಗಂಟೆ 8.00ರಿಂದ ಜಿನಾಭಿಷೇಕದೊಂದಿಗೆ ಆರಾಧನಾ ಪೂಜಾ ಆರಂಭ. 2. ದಿನಾಂಕ 6-9-2025ನೇ ಶನಿವಾರ, ಅನಂತ ಚತುರ್ದಶಿ, ಬೆಳಿಗ್ಗೆ ಗಂಟೆ 8.00ರಿಂದ ಜಿನಾಭಿಷೇಕದೊಂದಿಗೆ ಆರಾಧನಾ ಪೂಜಾ ಆರಂಭ. ಮಧ್ಯಾಹ್ನ 1.00 ಗಂಟೆಗ ಮಹಾ ಅರ್ಥ್ಯ ಮತ್ತು ಜಿನ ಚೈತ್ಯಾಲಯಗಳಿಗೆ ಆರತಿ. 3. ದಿನಾಂಕ 7-9-2025ನೇ ಆದಿತ್ಯವಾರ, ಅನಂತ ಹುಣ್ಣಿಮೆ, ಬೆಳಿಗ್ಗೆ ಗಂಟೆ 8.00ರಿಂದ ಪರಮ ಪೂಜ್ಯ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರ ಉಪಸ್ಥಿತಿಯೊಂದಿಗೆ ಆರಾಧನಾ ಪೂಜಾ ವಿಧಾನ ಆರಂಭ. ವಿ.ಸೂ.: * ದಿನಾಂಕ 6-9-2025 ಮತ್ತು 7-9-2025ರಂದು ಸರ್ವೆಶ್ ಜೈನ್ ಮತ್ತು ಬಳಗ, ಮೂಡುಬಿದ್ರೆ ಇವರಿಂದ ಸಂಗೀತ ಪೂಜಾಷ್ಟಕ. * ಪ್ರತಿ ದಿನ ಮಧ್ಯಾಹ್ನ ಗಂಟೆ 1.30ಕ್ಕೆ ಕಂದಮೂಲ ರಹಿತ ಶುದ್ಧ ಭೋಜನದ ವ್ಯವಸ್ಥೆ ಇದೆ. * ದಿನಾಂಕ 7-9-2025ನೇ ಆದಿತ್ಯವಾರ “ಶ್ರೀ ಜಿನ ಪ್ರಸಾದ” ಸಮರ್ಪಣೆ ಇದೆ.

ದಶಲಕ್ಷಣ ಮಹಾಪರ್ವ: ಉತ್ತಮ ಮಾರ್ದವ

Article Image

ದಶಲಕ್ಷಣ ಮಹಾಪರ್ವ: ಉತ್ತಮ ಮಾರ್ದವ

ವೇಣೂರು: ದಶಲಕ್ಷಣ ಮಹಾಪರ್ವದ ಎರಡನೇ ದಿನದಂದು ಉತ್ತಮ ಮಾರ್ದವ ಧರ್ಮದ ಬನ್ನಿ ಉಪಾನ್ಯಾಸ ಕಾರ್ಯಕ್ರಮವು ಯಾತ್ರಿ ನಿವಾಸದಲ್ಲಿ ಆ. 29ರಂದು ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರದಾನ ಮಂತ್ರಿಯವರ ಅಲ್ಪಸಂಖ್ಯಾತ 15 ಅಂಶಗಳ ಕಾರ್ಯಕ್ರಮ ಅನುಷ್ಠಾನದ ಜಿಲ್ಲಾ ಸಮಿತಿಯ ನಿರ್ದೇಶಕರು, ಕೆಲ್ಲಪುತ್ತಿಗೆ ಗುತ್ತು ದರೆಗುಡ್ಡೆಯ ಸುಭಾಶ್ಚಂದ್ರ ಚೌಟರವರು ಗಣ್ಯರೊಂದಿಗೆ ಸೇರಿ ಉದ್ಘಾಟಿಸಿ ಮಾತನಾಡುತ್ತಾ, ಧರ್ಮವನ್ನು ಉಳಿಸಿ, ಬೆಳೆಸಬೇಕು ಧಾರ್ಮಿಕ ಪ್ರವಚನಗಳಿಗೆ ಚಿಕ್ಕ ಮಕ್ಕಳಿಂದ ದೊಡ್ಡವರವರೆಗೆ ಕರೆದುಕೊಂಡು ಬಂದು ಧರ್ಮದ ಬಗ್ಗೆ ಇನ್ನಷ್ಟು ತಿವಳಿದುಕೊಳ್ಳುವ ಹಾಗೆ ಮಾಡಬೇಕು. ಧರ್ಮದ ಬಗ್ಗೆ ಒಲವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಭರತ್‌ರಾಜ್‌ ಜೈನ್‌ ಮುಡಾರು ಇವರು ಉತ್ತಮ ಮಾರ್ದವ ಧರ್ಮದ ಬಗ್ಗೆ ಉಪನ್ಯಾಸ ನೀಡಿದರು. ದಶಧರ್ಮಗಳು ನಮ್ಮನ್ನು ಧರ್ಮಾತ್ಮರನ್ನಾಗಿ ಮಾಡುವುದರ ಜೊತೆಗೆ ನಮ್ಮ ಆತ್ಮವನ್ನು ಕೇವಲ ಧರ್ಮಾತ್ಮರಲ್ಲಿ ಪರಮಾತ್ಮನಾಗಲು ಯೋಗ್ಯತೆ ಹೊಂದಿದೆ ಎನ್ನುವುದನ್ನು ಕೂಡ ಸೂಚಿಸುತ್ತದೆ. ಧರ್ಮಾತ್ಮನಾಗಲು ಅವಕಾಶವಿರುವುದು ಮನುಷ್ಯರಿಗೆ ಮಾತ್ರ. ನಾವೆಲ್ಲರೂ ನಮ್ಮ ಜೀವನದಲ್ಲಿ ದಶಧರ್ಮಗಳನ್ನು ಅಳವಡಿಸಿಕೊಂಡು ಪಾಲಿಸೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀ ದಿಗಂಬರ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿಯವರಾದ ವಿ. ಪ್ರವೀಣ್‌ ಕುಮಾರ್‌ ಇಂದ್ರ ಕಾರ್ಯಕ್ರಮದ ಅತಿಥೇಯರಾದ ಗುಣಪಾಲ ಅತಿಕಾರಿ ಕಡಂಬಿಲ, ಪ್ರಸನ್ನಾ ಆರ್‌. ಹೆಗ್ಡೆ, ಅರುಣ ಅಜಿತ್‌ ಕುಮಾರ್‌, ಪ್ರಿಯಕಾರಿಣಿ, ಸಂಭಾಷಿಣಿ ಉದಯ ಕುಮಾರ್‌ ಹಾಗೂ ಅಪಾರ ಸಂಖ್ಯೆಯಲ್ಲಿ ಶ್ರಾವಕ-ಶ್ರಾವಕಿಯು ಉಪಸ್ಥಿತರಿದ್ದರು. ಸಂಭಾಷಿಣಿ ಉದಯಕುಮಾರ್‌ ಪ್ರಾರ್ಥಿಸಿ, ಸಮಿತಿಯ ಕಾರ್ಯದರ್ಶಿ ವಿ. ಪ್ರವೀಣ್‌ ಕುಮಾರ್‌ ಇಂದ್ರ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಮಿತಿಯ ಜೊತೆ ಕಾರ್ಯದರ್ಶಿ ಮಹಾವೀರ ಜೈನ ಮೂಡುಕೋಡಿಗುತ್ತುರವರು ನಿರೂಪಿಸಿ, ಧನ್ಯವಾದವಿತ್ತರು.

ಧರ್ಮಸ್ಥಳದಲ್ಲಿ ಜೈನಮಠಗಳ ಭಟ್ಟಾರಕರುಗಳಿಂದ: ಧರ್ಮ ಸಂರಕ್ಷಣಾ ಸಮಾವೇಶ

Article Image

ಧರ್ಮಸ್ಥಳದಲ್ಲಿ ಜೈನಮಠಗಳ ಭಟ್ಟಾರಕರುಗಳಿಂದ: ಧರ್ಮ ಸಂರಕ್ಷಣಾ ಸಮಾವೇಶ

ಉಜಿರೆ: ಸತ್ಯ ಮತ್ತು ಅಹಿಂಸಾ ಪರಿಪಾಲಕರಾದ ಜೈನರು ಯಾರಿಗೂ ತೊಂದರೆ ಕೊಡುವುದಿಲ್ಲ. ಆದರೆ ತೊಂದರೆ ಕೊಟ್ಟವರನ್ನು ನಾವು ಬಿಡುವುದಿಲ್ಲ ಎಂದು ತಮಿಳುನಾಡು ಅರಹಂತಗಿರಿ ಜೈನಮಠದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಎಲ್ಲಾ ಜೈನಮಠಗಳ ಭಟ್ಟಾರಕರುಗಳ ನೇತೃತ್ವದಲ್ಲಿ ಆಯೋಜಿಸಿದ ಧರ್ಮ ಸಂರಕ್ಷಣಾ ಸಮಾವೇಶದ ಉದ್ದೇಶವನ್ನು ವಿವರಿಸಿದರು. ಸತ್ಯಮೇವ ಜಯತೇ ಎನ್ನುವಂತೆ ಸತ್ಯಕ್ಕೆ ಸದಾ ಜಯವಿದೆ. ಸತ್ಯಕ್ಕೆ ಎಂದೂ ಸಾವಿಲ್ಲ. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆ ನಿಂತ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಶೋಭೆ ಮತ್ತು ಕೀರ್ತಿಗೆ ಎಂದೂ ಚ್ಯುತಿ ಬಾರದು ಎಂದು ಅವರು ಹೇಳಿದರು. ಶುಕ್ರವಾರ ಎಲ್ಲಾ ಭಟ್ಟಾರಕರುಗಳು ದೇವಸ್ಥಾನಕ್ಕೆ ಹೋಗಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ನ್ಯಾಯಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಹೊರಗೆ ಬರುವಾಗ ದೇವಸ್ಥಾನದಲ್ಲಿ ಮಹಾಪೂಜೆಯೊಂದಿಗೆ ಘಂಟೆ ಬಾರಿಸಿತು. ಆದುದರಿಂದ ಸಣ್ಣ ಕಳಂಕ ಮಾಯವಾಯಿತು ಎಂದು ತಮಗೆ ತಿಳಿಯಿತು ಎಂದು ಸ್ವಾಮೀಜಿ ಹೇಳಿದರು. ರಾಮಚಂದ್ರ, ಸೀತೆಯ ಹಾಗೆ ಮಹಾಪುರುಷರಿಗೂ ಕಷ್ಟ, ಅಪವಾದ ಬರುತ್ತದೆ. ಹಾಗೆ ಧರ್ಮಸ್ಥಳಕ್ಕೆ ಬಂದ ಸಣ್ಣ ಕಳಂಕ ದೋಷ ಅಲ್ಲ. ಇಂದು ಸಣ್ಣ ಕಳಂಕವೂ ನಿವಾರಣೆಯಾಗಿದೆ. ಧರ್ಮಸ್ಥಳ ಹಾಗೂ ಹೆಗ್ಗಡೆಯವರಿಗೆ ನ್ಯಾಯ ಸಿಗದಿದ್ದರೆ ಎಲ್ಲಾ ಭಟ್ಟಾರಕರುಗಳು ಮುಂದೆ ವಿಧಾನಸಭೆ ಎದುರು ಪ್ರತಿಭಟನೆ ಹಾಗೂ ಉಗ್ರ ಹೋರಾಟ ನಡೆಸುವುದಾಗಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಹೆಗ್ಗಡೆಯವರು ಸಮಗ್ರ ಸಮಾಜದ ಚಕ್ರವರ್ತಿ. ಇಡೀ ರಾಷ್ಟ್ರದ ಮಹಾಪುರುಷ. ಅಧರ್ಮಿಗಳು ಷಡ್ಯಂತ್ರ ಹಾಗೂ ಅಸೂಯೆಯಿಂದ ಧರ್ಮಸ್ಥಳಕ್ಕೆ ಚ್ಯುತಿ ತರಲು ವಿಫಲಯತ್ನ ಮಾಡಿದ್ದಾರೆ. ಸರ್ವಧರ್ಮೀಯರ ಸಕಲ ಮಠ-ಮಂದಿರಗಳಿಗೂ ಸದಾ ನೆರವು, ಮಾರ್ಗದರ್ಶನ, ಪ್ರೋತ್ಸಾಹ ನೀಡುತ್ತಿರುವ ಹೆಗ್ಗಡೆಯವರ ಜೊತೆ ನಾವು ಸದಾ ಇದ್ದೇವೆ. ಹೆಗ್ಗಡೆಯವರು ಎಲ್ಲರಿಗೂ ಪೂಜ್ಯರು ಹಾಗೂ ಸರ್ವಮಾನ್ಯರು. ಜೈನಧರ್ಮೀಯರಾದ ಹೆಗ್ಗಡೆ ಸರ್ವಧರ್ಮೀಯರನ್ನೂ ಸಮಾನ ಪ್ರೀತಿ-ವಿಶ್ವಾಸದಿಂದ ನೋಡುತ್ತಾರೆ, ಗೌರವಿಸುತ್ತಾರೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದರು. ಅಭಿನಂದನಾ ಭಾಷಣ ಮಾಡಿದ ಖ್ಯಾತ ಸಾಹಿತಿ ನಾಡೋಜಾ ಹಂಪನಾ (ಹಂಪ ನಾಗರಾಜಯ್ಯ) ಮಾತನಾಡಿ, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಇಂದ್ರಿಯ ನಿಗ್ರಹ, ತಾಳ್ಮೆ, ಸಂಯಮ, ಗಾಭೀರ್ಯ, ಸ್ಥಿತಪ್ರಜ್ಞ ಶಕ್ತಿಯ ಪ್ರತಿಭೆ ವರ್ಣಿಸಲಸದಳವಾಗಿದೆ. ಅವರ ಮೌನದ ಶಕ್ತಿ ಮತ್ತು ಮೌಲ್ಯ ಕರ್ನಾಟಕದ ಮನೆಮಾತಾಗಿದೆ ಎಂದು ಶ್ಲಾಘಿಸಿ, ಅಭಿನಂದಿಸಿದರು. ಕಲುಷಿತ ವಾತಾವರಣದಿಂದ ಯುವಜನರ ಮನಸ್ಸು ಹಾಳಾಗಿದೆ. ಭಿನ್ನಾಭಿಪ್ರಾಯ ಬಂದಾಗ ಅದನ್ನು ಪರಿಹರಿಸುವ ಜವಾಬ್ಧಾರಿ ಹಿರಿಯರಿಗಿದೆ. ಸತ್ಯದ ಸ್ವರೂಪವನ್ನು ಅವರಿಗೆ ತಿಳಿಸಬೇಕು. ಏನೇ ಆಗಲಿ ಷಡ್ಯಂತ್ರದಿಂದ ಆದ ಸಣ್ಣ ಕಳಂಕ ನಿವಾರಣೆಯಾಗಿದೆ. ಅಗ್ನಿಪರೀಕ್ಷೆಯಲ್ಲಿ ಹೆಗ್ಗಡೆಯವರು ಉತ್ತೀರ್ಣರಾಗಿ ಸತ್ಯದ ಸಾಕ್ಷಾತ್ಕಾರವಾಗಿದೆ. ಹೆಗ್ಗಡೆಯವರ ಬೀಡಿನಲ್ಲಿ (ಮನೆಯಲ್ಲಿ), ಕುಟುಂಬದಲ್ಲಿ ಸುಖ-ಶಾಂತಿ, ನೆಮ್ಮದಿಯ ತಂಗಾಳಿ ಸದಾ ಬೀಸುತ್ತಿರಲಿ ಎಂದು ಹಂಪನಾ ಹಾರೈಸಿದರು. ಕನಕಗಿರಿ ಜೈನಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಹೆಗ್ಗಡೆಯವರು ಮಾನವ ಅಲ್ಲ, ದೇವಮಾನವ ಎಂದು ಬಣ್ಣಿಸಿದರು. ಧರ್ಮಸ್ಥಳವು ಸರ್ವಧರ್ಮೀಯರ ಮನೆಗಳನ್ನು ಹಾಗೂ ಮನಗಳನ್ನು ಬೆಳಗುವ “ನಂದಾದೀಪ”ವಾಗಿದೆ. ಅದನ್ನು ನಂದಿಸಲು ಹೋದರೆ ಧರೆಯ ಹೊತ್ತಿ ಉರಿಯಬಹುದು ಎಂದು ಭವಿಷ್ಯ ನುಡಿದರು. ಶ್ರವಣಬೆಲಗೊಳ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ ಜೈನಧರ್ಮ ಮತ್ತು ಹಿಂದೂ ಧರ್ಮ ಸಮಗ್ರ ಸಮಾಜದ ಸಂಪರ್ಕ ಸೇತುವಾಗಿದೆ. ಹಿಂದೂಗಳನ್ನು ಮತ್ತು ಜೈನರನ್ನು ಬೇರ್ಪಡಿಸಲು ಸಾಧ್ಯವಿಲ್ಲ. 800 ವರ್ಷಗಳ ಹಿಂದೆ ತಮ್ಮ ವಾಸ್ತವ್ಯದ ಮನೆಯನ್ನೆ ಧರ್ಮದೇವತೆಗಳಿಗಾಗಿ ಬಿಟ್ಟುಕೊಟ್ಟವರು ಹೆಗ್ಗಡೆ ಪರಂಪರೆಯವರು. ಇಲ್ಲಿನ ಸರ್ವಧರ್ಮ ಸಮನ್ವಯ ಹಾಗೂ ಚತುರ್ವಿದ ದಾನ ಪರಂಪರೆ ವಿಶ್ವವಿಖ್ಯಾತವಾಗಿದೆ. ಧರ್ಮ ಮತ್ತು ಧರ್ಮಸ್ಥಳದ ಸಂರಕ್ಷಣೆ ತಾವೆಲ್ಲರೂ ಹೆಗ್ಗಡೆಯವರ ಜೊತೆ ಇದ್ದೇವೆ ಎಂದು ಸ್ವಾಮೀಜಿ ಭರವಸೆ ನೀಡಿದರು. ತಮ್ಮ ಪೂರ್ವಾಶ್ರಮದಲ್ಲಿ ಉಜಿರೆಯಲ್ಲಿ ಪಿ.ಯು.ಸಿ. ವಿದ್ಯಾರ್ಥಿಯಾಗಿದ್ದಾಗ ಸಿದ್ಧವನ ಗುರುಕುಲ ಹಾಗೂ ಪದವಿಪೂರ್ವ ಕಾಲೇಜು ಶಿಕ್ಷಣ ಹಾಗೂ ಸ್ವಯಂ ಸೇವಕನಾಗಿ ಕರ್ತವ್ಯ ನಿರ್ವಹಿಸಿರುವುದನ್ನು ಸ್ವಾಮೀಜಿ ಧನ್ಯತೆಯಿಂದ ಸ್ಮರಿಸಿದರು. ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರ ಸಂರಕ್ಷಣೆಗಾಗಿ ಧರ್ಮಸ್ಥಳದ ವತಿಯಿಂದ ಮಾಡುತ್ತಿರುವ ಸೇವಾಕಾರ್ಯ ವಿಶ್ವಮಾನ್ಯವಾಗಿದೆ. ಹಳ್ಳಿಯಿಂದ ದಿಲ್ಲಿಯವರೆಗೆ ಮಾಡಿದ ಗ್ರಾಮಾಭಿವೃದ್ಧಿ ಯೋಜನೆ, ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಆರೋಗ್ಯ, ಶಿಕ್ಷಣ ಮತ್ತು ಇತರ ಬಹುಮುಖ ಸೇವಾ ಕಾರ್ಯಗಳು ಸಾರ್ವಕಾಲಿಕ ಮೌಲ್ಯ ಹೊಂದಿವೆ ಎಂದರು. ದೂರುದಾರನ ಸುಳ್ಳು ಮಾತು ಕೇಳಿ ತೆಗೆಸಿದ ಹೊಂಡಗಳಲ್ಲಿ ಗಿಡಗಳನ್ನಾದರೂ ನೆಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಸೋಂದಾ ಮಠದ ಭಟ್ಟಾಕಳಂಕ ಸ್ವಮೀಜಿ ಮಾತನಾಡಿ, ಸತ್ಯವು ಸದಾ ಪರಿಶುದ್ಧವಾಗಿರುತ್ತದೆ. ಜೈನರು ಹಾಗೂ ಜೈನಧರ್ಮದ ಬಗ್ಗೆ ಎಂದೂ ಅವಹೇಳನ ಸಲ್ಲದು ಎಂದರು. ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಧರ್ಮದಲ್ಲಿ ರಾಜಕೀಯ ಮಾಡಬಾರದು. ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಕಿವಿಮಾತು ಹೇಳಿದರು. ತಮಗೆ ಸ್ವಾಮೀಜಿ ಆಗಿ ಪಟ್ಟಾಭಿಷೇಕ ಆಗುವಾಗ “ಅಪೇಕ್ಷೆ ಪಡಬೇಡಿ, ಉಪೇಕ್ಷೆ ಮಾಡಬೇಡಿ” ಎಂದು ಹೆಗ್ಗಡೆಯವರು ಹೇಳಿದ ಕಿವಿಮಾತನ್ನು ಸ್ವಾಮೀಜಿ ಧನ್ಯತೆಯಿಂದ ಸ್ಮರಿಸಿದರು. ನಮ್ಮ ಸನಾತನ ಧರ್ಮ ಯಾವುದೇ ಜಾತಿ, ಮತಕ್ಕೆ ಸೀಮಿತವಲ್ಲ. ಧರ್ಮಸ್ಥಳದ ಬಗ್ಯೆ ಅಸೂಯೆಯಿಂದ ಅಪಪ್ರಚಾರ ಮಾಡುವವರು “ಮಾನಸಿಕ ಭಯೋತ್ಪಾದಕರು” ಎಂದು ಸ್ವಾಮೀಜಿ ಬಣ್ಣಿಸಿದರು. ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ರಾಜಸ್ಥಾನದ ತಿಜಾರ ಮಠದ ಸೌರಭಸೇನ ಭಟ್ಟಾರಕ ಸ್ವಾಮೀಜಿ, ಲಕ್ಕವಳ್ಳಿ ಜೈನಮಠದ ವೃಷಭಸೇನ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ವರೂರು ಜೈನಮಠದ ಧರ್ಮಸೇನ ಭಟ್ಟಾರಕ ಸ್ವಾಮೀಜಿ ಶುಭ ಹಾರೈಸಿ ಧರ್ಮಸ್ಥಳ ಹಾಗೂ ಹೆಗ್ಗಡೆಯವರ ಜೊತೆ ಸದಾ ತಾವೆಲ್ಲರೂ ಸೇವೆಗೆ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಭಾದ್ರಪದ ಮಾಸದಲ್ಲಿ ದಶಲಕ್ಷಣ ಪರ್ವ ಆಚರಣೆಯ ಶುಭಾವಸರದಲ್ಲಿ ಎಲ್ಲಾ ಮಠಾಧೀಶರುಗಳ ದರ್ಶನ ಭಾಗ್ಯ ಲಭಿಸಿರುವುದು ಅತೀವ ಸಂತಸವಾಗಿದೆ ಎಂದರು. ಸತ್ಯ, ಅಹಿಂಸೆ, ತ್ಯಾಗ, ಬ್ರಹ್ಮಚರ್ಯ ಇತ್ಯಾದಿ ದಶಧರ್ಮಗಳನ್ನು ಜೈನರು ನಿತ್ಯವೂ ಪಾಲಿಸುತ್ತಾರೆ. ಇಂತಹ ಪವಿತ್ರಪರ್ವದ ಸಂದರ್ಭದಲ್ಲಿ ಎಲ್ಲಾ ಭಟ್ಟಾರಕರುಗಳು ತಮಗೆ ಹಾಗೂ ಧರ್ಮಸ್ಥಳಕ್ಕೆ ಬೆಂಬಲ ನೀಡಿ, ನಿಮ್ಮ ಜೊತೆ ಸದಾ ಇದ್ದೇವೆ ಎಂದು ಭರವಸೆ ನೀಡಿರುವುದು ತಮಗೆ ಹೆಚ್ಚಿನ ಉತ್ಸಾಹ ಮತ್ತು ಪ್ರೇರಣೆ ನೀಡಿದೆ ಎಂದು ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದರು. ತತ್ವ, ಸಿದ್ಧಾಂತ, ಧರ್ಮ ಇರುವುದು ಕೇವಲ ಓದಲು, ಉಪದೇಶಕ್ಕೆ ಮಾತ್ರ ಅಲ್ಲ. ಅದನ್ನು ನಾವು ನಿತ್ಯವೂ ಪಾಲಿಸಬೇಕು. “ಸಮ್ಯಕ್‌ದರ್ಶನ, ಜ್ಞಾನ ಚಾರಿತ್ರಾಣಿ ಮೋಕ್ಷ ಮಾರ್ಗಃ” ಎಂಬುದು ಜೈನ ಧರ್ಮದ ಸಾರವಾಗಿದೆ. ಅಂದರೆ ಸರಿಯಾದ ತತ್ವ ಸಿದ್ಧಾಂತಗಳ ಬಗ್ಯೆ ನಂಬಿಕೆ, ತಿಳುವಳಿಕೆ (ಜ್ಞಾನ) ಮತ್ತು ಆಚರಣೆಯಿಂದ ಮೋಕ್ಷಪ್ರಾಪ್ತಿಯಾಗುತ್ತದೆ ಎಂಬುದು ಜೈನ ಸಿದ್ಧಾಂತವಾಗಿದೆ. ಇದರ ಪ್ರತೀಕವಾಗಿ ಮೂರು ಎಳೆಗಳಿರುವ ಜನಿವಾರ (ಯಜ್ಞೋಪವೀತ) ವನ್ನು ಜೈನರು ಧರಿಸುತ್ತಾರೆ. ಇಂತಹ ಸಾತ್ವಿಕ ಹಾಗೂ ನೈತಿಕ ಜೀವನದಿಂದ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿ ಹೆಗ್ಗಡೆಯವರು ಎಲ್ಲಾ ಭಟ್ಟಾರಕರುಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದರು. ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರೀಯಾ ಹರ್ಷೇಂದ್ರ ಕುಮಾರ್, ಶ್ರದ್ಧಾಅಮಿತ್, ಮತ್ತು ಸೋನಿಯಾವರ್ಮ ಉಪಸ್ಥಿತರಿದ್ದರು.

ಸಾವಿರ ಕಂಬದ ಬಸದಿಗೆ ಬಂದ ಐರಾವತ

Article Image

ಸಾವಿರ ಕಂಬದ ಬಸದಿಗೆ ಬಂದ ಐರಾವತ

ಮೂಡುಬಿದಿರೆ: ಪ್ರಾಣಿ ಪ್ರಿಯರ ಸಂಘಟನೆ "ಪೇಟಾ"ದ ಮುತುವರ್ಜಿಯಲ್ಲಿ ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಆಕೆಯ ಪುತ್ರಿ ರಾಶಾ ತಾದಾನಿ ಕೊಡುಗೆಯಾಗಿ ನೀಡಿದ "ಐರಾವತ" ಜೈನಕಾಶಿ ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಯ ಆವರಣಕ್ಕೆ ಶುಕ್ರವಾರ ಸೇರಿಕೊಂಡಿದೆ. ಧಾರ್ಮಿಕ ಕೇಂದ್ರಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಪಳಗಿಸಿದ ಆನೆಗಳನ್ನು ಬಳಸಿ ಅವುಗಳಿಗೆ ತನ್ನ ಕುಟುಂಬದೊಂದಿಗೆ ಕಾಡಿನ ಸಹಜ ಬದುಕನ್ನು ಕಸಿದುಕೊಂಡು ಹಿಂಸೆ ನೀಡಿದಂತಾಗುತ್ತದೆ ಎಂದು ಅದರ ವಿರುದ್ಧ ನೈಜ್ಯ ಆನೆಗಳನ್ನೇ ಹೋಲುವ ಮೆಕ್ಯಾನಿಕಲ್ ಆನೆಗಳನ್ನು ಪ್ರೋತ್ಸಾಹಿಸಿ ಎನ್ನುತ್ತಿರುವ ಪೇಟಾ ಇಂಡಿಯಾದ ಮುಂಬೈ ಮೂಲದ ಪ್ರೇರಣೆಯಿಂದ ಬಾಲಿವುಡ್ ತಾರಾ ಕುಟುಂಬದ ಕೊಡುಗೆಯಾಗಿ ಈ ಐರಾವತ ಒದಗಿ ಬಂದಿದೆ. ಜೈನಕಾಶಿಯಲ್ಲಿ ಚಾತುರ್ಮಾಸ ನಿರತ 108 ಗುಲಾಬ್ ಭೂಷಣ ಮುನಿ ಮಹಾರಾಜರು ನೂತನ ಐರಾವತವನ್ನು ಅನಾವರಣಗೊಳಿಸಿದರು. ಪಟ್ಟಾಭಿಷೇಕ ರಜತ ಮಹೋತ್ಸವ ಸಂಭ್ರಮದಲ್ಲಿರುವ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ , ಪಟ್ನಶೆಟ್ಟಿ ಸುಧೇಶ್ ಕುಮಾರ್, ಎಂ ಬಾಹುಬಲಿ ಪ್ರಸಾದ್, ಪೇಟಾ ಮುಂಬೈ ಘಟಕದ ಪದಾಧಿಕಾರಿಗಳಾದ ಅನುಷ್ಕಾ ಯಾದವ್, ಸುಧಾಕರ್ ರಾವ್ ಕರ್ನಾಲ್, ಶುಭಂ ಅಗರ್ವಾಲ್, ರೋಹನ್ ಸರ್ವಪ್ರಿಯ, ಮಹೆಕ್ ಜುನೇಜಾ ಸಹಿತ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. ದೇಶದಲ್ಲೇ ಮೊದಲ ಬಸದಿಗೆ ಐರಾವತ! ಐತಿಹಾಸಿಕ ಸಾವಿರ ಕಂಬದ ಬಸದಿಯಲ್ಲಿ ನೆಲೆ ಕಂಡಿರುವ ಮೆಕ್ಯಾನಿಕಲ್ ಆನೆ ಐರಾವತ ದೇಶದಲ್ಲೇ ಮೊದಲ ಬಾರಿಗೆ ಜೈನ ಬಸದಿಗೆ ಬಂದಂತಾಗಿದೆ. ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಮೊದಲ ಬಸದಿ ಎನ್ನುವ ಹಿರಿಮೆ ಸಾವಿರ ಕಂಬದ ಬಸದಿಗೆ ಲಭಿಸಿದೆ. ಪೇಟಾ ಧಾರ್ಮಿಕ ಸಂಸ್ಥೆಗಳಿಗೆ ಒದಗಿಸುತ್ತಿರುವ 12 ನೆಯ ಹಾಗೂ ಮಂಗಳೂರು ವಲಯಕ್ಕೆ ದೊರೆತ ಮೊದಲ ಐರಾವತ ಇದಾಗಿದೆ. ಮೂರು ಮೀಟರ್ ಎತ್ತರ 800 ಕೆಜಿ ಭಾರ ಈ ಮೆಕ್ಯಾನಿಕಲ್ ಐರಾವತವನ್ನು ರಬ್ಬರ್, ಫೈಬರ್, ಮೆಟಲ್, ಮೆಶ್, ಫೋಮ್, ಕಬ್ಬಿಣ ಹಾಗೂ ಐದು ಮೋಟಾರುಗಳ ನೆರವಿನಿಂದ ನಿರ್ಮಿಸಲಾಗಿದೆ. ವಿದ್ಯುತ್ ಸಂಪರ್ಕ ನೀಡಿ ಅದನ್ನು ನೈಜ್ಯ ಆನೆಯಂತೆ ಬಳಸಿಕೊಳ್ಳಲು ಸಾಧ್ಯವಿದೆ. ಚಕ್ರಗಳ ನೆರವಿನಿಂದ ರಸ್ತೆಯಲ್ಲೂ ಒಡಾಡಿಬಹುದಾಗಿದೆ. 2023ರಲ್ಲಿ ಇಂತಹ ಸಾಹಸಕ್ಕೆ ಮುಂದಾದ ಪೇಟಾ ದಕ್ಷಿಣ ಭಾರತದ ಹಲವೆಡೆ ಮೆಕ್ಯಾನಿಕಲ್ ಆನೆಗಳನ್ನು ಹಸ್ತಾಂತರಿಸಿದೆ.

ನ್ಯಾಯವಾದಿ ಶ್ವೇತಾ ಕೆ. ಅವರ ನೂತನ ಕಚೇರಿ ಉದ್ಘಾಟನೆ

Article Image

ನ್ಯಾಯವಾದಿ ಶ್ವೇತಾ ಕೆ. ಅವರ ನೂತನ ಕಚೇರಿ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ನ್ಯಾಯವಾದಿ ಮತ್ತು ನೋಟರಿ ಶ್ವೇತಾ ಕೆ. ಅವರ ನೂತನ ಕಚೇರಿಯು ಸ್ವರಾಜ್ಯ ಮೈದಾನದ ಮುಂಭಾಗದಲ್ಲಿರುವ ಕೋರ್ಟ್ ರಸ್ತೆಯ ಶೆಟ್ಟೀಸ್ ರಾಮಪ್ರಸಾದ್ ಕಾಂಪ್ಲೆಕ್ಸ್‌ನಲ್ಲಿ ಆ. 29ರಂದು ಅಪರಾಹ್ನ ಉದ್ಘಾಟನೆಗೊಂಡಿತು. ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯಕುಮಾರ್ ಅವರು ದೀಪ ಪ್ರಜ್ವಲನದ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ., ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ., ನ್ಯಾಯವಾದಿಗಳಾದ ಎಂ. ಆರ್. ಬಲ್ಲಾಳ್, ಕೆ.ಆರ್. ಪಂಡಿತ್, ದಿವಿಜೇಂದ್ರ, ಎಂ.ಎಸ್‌. ತಂತ್ರಿ, ಕಟ್ಟಡದ ಮಾಲೀಕ ಪಾಲಡ್ಕ ಹರಿಪ್ರಸಾದ್ ಶೆಟ್ಟಿ, ಹಿರಿಯ ಉದ್ಯಮಿ ಕೆ. ಶ್ರೀಪತಿ ಭಟ್, ಪ್ರಭಾತ್ ಸಿಲ್ಸ್‌ನ ಪ್ರಭಾಚಂದ್ರ ಜೈನ್‌, ರಾಜವರ್ಮ ಬೈಲಂಗಡಿ, ಟೆಂಪಲ್ ಟೌನ್ ರೋಟರಿ ಅಧ್ಯಕ್ಷ ಹರೀಶ್‌ ಎಂ.ಕೆ.. ನಿಕಟಪೂರ್ವ ಅಧ್ಯಕ್ಷ ಪೂರ್ಣಚಂದ್ರ ಜೈನ್‌ ಮತ್ತಿತರರು ಉಪಸ್ಥಿತರಿದ್ದರು. ನ್ಯಾಯವಾದಿ ಶ್ವೇತಾ ಕೆ. ಮತ್ತು ಪ್ರಮಯಿ ಅತಿಥಿಗಳನ್ನು ಗೌರವಿಸಿದರು. ಸಾಹಿಲ್ ಕಾರ್ಯಕ್ರಮ ನಿರೂಪಿಸಿದರು.

ದಶಲಕ್ಷಣ ಮಹಾಪರ್ವ ಆಚರಣೆ- ಉದ್ಘಾಟಣಾ ಸಮಾರಂಭ

Article Image

ದಶಲಕ್ಷಣ ಮಹಾಪರ್ವ ಆಚರಣೆ- ಉದ್ಘಾಟಣಾ ಸಮಾರಂಭ

ವೇಣೂರು: ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ಪ್ರತಿವರ್ಷ ನಡೆಯುವ ದಶಲಕ್ಷಣ ಮಹಾಪರ್ವ ಆಚರಣೆಯ ಉದ್ಘಾಟನಾ ಸಮಾರಂಭವು ಆ. 28ರಂದು ನಡೆಯಿತು. ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ಮಧುರಾ ಪಿ. ಅಜಿಲರವರು ನೆರವೇರಿಸಿದರು. ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪಾವನ ಸಾನ್ನಿಧ್ಯ ವಹಿಸಿ ದಶಲಕ್ಷಣ ಮಹಾಪರ್ವದ ಮೊದಲನೇ ದಿನದ ಉತ್ತಮ ಕ್ಷಮಾ ಧರ್ಮದ ಬಗ್ಗೆ ಪ್ರವಚನ ನೀಡುತ್ತಾ, ನಾವು ನಮ್ಮ ಜೀವನದಲ್ಲಿ ಕ್ಷಮಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಕ್ರೋಧವನ್ನು ನಿಗ್ರಹಿಸಿಕೊಳ್ಳಬೇಕು. ಕ್ಷಮಿಸುವ ಗುಣ ದೇವರಗುಣ. ಮನುಷ್ಯನ ಸ್ವಭಾವಗಳಲ್ಲಿ ಕ್ರೋಧವು ಕೂಡ ಒಂದು. ಸಿಟ್ಟು ಬಾರದಿರುವ ಹಾಗೆ ಪ್ರಯತ್ನಿಸೋಣ ಎಂದು ಹೇಳಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಶ್ರೀಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಉಪಾಧ್ಯಕ್ಷರು, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು, ಹಬ್ಬಗಳ ರಾಜ, ದಶಲಕ್ಷಣ ಪರ್ವ, ಆತ್ಮಶುದ್ಧೀಕರಣದ ಪವಿತ್ರ ಹಬ್ಬವೇ ದಶಲಕ್ಷಣ ಮಹಾಪರ್ವ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲರು ಆಗಮಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೂಡುಬಿದಿರೆಯ ಸಂಜಯಂತ್‌ ಕುಮಾರ್‌ ಶೆಟ್ಟಿ, ಶಂಭವ ಕುಮಾರ್‌, ಸುದೇಶ್‌ ಕುಮಾರ್‌ ಮತ್ತಿತರ ಗಣ್ಯರು ಸೇರಿದಂತೆ ಶ್ರಾವಕ-ಶ್ರಾವಕಿಯರು ಪಾಲ್ಗೊಂಡಿದ್ದರು. ಸಮಿತಿಯ ಪ್ರದಾನ ಕಾರ್ಯದರ್ಶಿ ವಿ. ಪ್ರವೀಣ್‌ ಕುಮಾರ್‌ ಇಂದ್ರರವರು ಸ್ವಾಗತಿಸಿದರು. ಅಳದಂಗಡಿ ಅರಮನೆ ಶಿವಪ್ರಸಾದ್‌ ಅಜಿಲರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಸಮಿತಿಯ ಜೊತೆ ಕಾರ್ಯದರ್ಶಿ ಮಹಾವೀರ್‌ ಜೈನ್‌ ಮೂಡುಕೋಡಿರವರು ನಿರೂಪಿಸಿದರು.

ದಶಲಕ್ಷಣ ಪರ್ವ

Article Image

ದಶಲಕ್ಷಣ ಪರ್ವ

ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ (ರಿ.) ಹಿರಿಯಂಗಡಿ, ಕಾರ್ಕಳದಲ್ಲಿ ದಿನಾಂಕ 28.08.2025ನೇ ಗುರುವಾರದಿಂದ 06.09.2025ನೇ ಶನಿವಾರದ ಪರ್ಯಂತ ಆಶ್ರಮದ ಜಿನ ಮಂದಿರದ ಪ್ರಾಂಗಣದಲ್ಲಿ ಪ್ರತಿನಿತ್ಯ ಸಂಜೆ ಗಂಟೆ 6.00ರಿಂದ ಪರಮಪೂಜ್ಯ 108 ಮುನಿಶ್ರೀ ಮಹಿಮಾಸಾಗರ ಮುನಿ ಮಹಾರಾಜರ ಆಶೀರ್ವಾದ ಪೂರ್ವಕ ಹಾಗೂ ಕಾರ್ಕಳ ಶ್ರೀ ಜೈನ ಮಠದ ರಾಜಗುರು ಧ್ಯಾನಯೋಗಿ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ದಶಲಕ್ಷಣ ಪರ್ವ ಸಮಾರಂಭವು ಪೂಜೆ, ಭಜನೆ ಉಪನ್ಯಾಸ, ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ವಿ.ಸೂ. ಈ ಪುಣ್ಯ ದಿನಗಳಲ್ಲಿ ತಾವು ನೀಡಿದ ಅಮೂಲ್ಯ ದಾನವನ್ನು ಸ್ವೀಕರಿಸಲಾಗುವುದು.

ವೇಣೂರು: ನವೀಕೃತ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Article Image

ವೇಣೂರು: ನವೀಕೃತ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

2000ನೇ ಇಸವಿಯಲ್ಲಿ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದಭ೯ದಲ್ಲಿ ಶ್ರೀ ಬಾಹುಬಲಿ ಸಭಾಭವನವನ್ನು ನಿಮಾ೯ಣ ಮಾಡಿ ಲೋಕಾಪ೯ಣೆ ಮಾಡಲಾಗಿತ್ತು. ಈಗ ಈ ಸಭಾಭವನದ ವ್ಯವಸ್ಥೆಯನ್ನು ಇನ್ನಷ್ಟು ಉನ್ನತೀಕರಿಸಿ ಆಧುನಿಕವಾಗಿ ನವೀಕರಿಸಲಾಗಿದೆ. ದಿನಾಂಕ 22.08.2025ನೇ ಶ್ರಾವಣ ಶುಕ್ರವಾರದ ಶುಭ ಸಂದಭ೯ದಲ್ಲಿ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆಯನ್ನು ಮೂಡುಬಿದ್ರಿ ಶ್ರೀ ಜೈನ ಮಠದ ಪರಮ ಪೂಜ್ಯ ,"ಭಾರತಭೂಷಣ" ಡಾ|ಸ್ವಸ್ತಿಶ್ರೀ ಚಾರುಕೀತಿ೯ ಪಂಡಿತಾಚಾಯ೯ವಯ೯ ಮಹಾಸ್ವಾಮೀಜಿಯವರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ್‌ ಅಜಿಲರ ಉಪಸ್ಥಿತಿಯಲ್ಲಿ, ಕನಾ೯ಟಕ ಸರಕಾರದ ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್‌ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ಸಂದಭ೯ದಲ್ಲಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಹೇಮರಾಜ್‌ ಬೆಳ್ಳಿಬೀಡು, ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಕಾಯ೯ದಶಿ೯ಗಳಾದ ವಿ.ಪ್ರವೀಣ್‌ ಕುಮಾರ್‌ ಇಂದ್ರ ಕೋಶಾಧಿಕಾರಿಗಳಾದ ಪಿ. ಜಯರಾಜ್‌ ಕಂಬ್ಳಿ, ಜತೆ ಕಾಯ೯ದಶಿ೯ಗಳಾದ ಮಹಾವೀರ್‌ ಜೈನ್‌ ಮೂಡುಕೋಡಿ, ಕಾಯ೯ಕಾರಿ ಸಮಿತಿಯ ಸದಸ್ಯರುಗಳಾದ ಬಿ.ರತ್ನವಮ೯ ಇಂದ್ರ, ಪ್ರವೀಣ್‌ ಅಜ್ರಿ, ಸುರೇಶ್‌ ಕುಮಾರ್‌ ಆರಿಗ, ಭರತ್‌ ಕುಮಾರ್‌ ಆರಿಗ, ಶಮಿ೯ತ್‌ ಕುಮಾರ್‌ ಹಾಗೂ ಹಿರಿಯ ಶ್ರಾವಕಿಯಾದ ಗುಣವತಿ ಎ. ಆಳ್ವ ಮತ್ತು ರಾಜ್ಯ ಜೈನ ಮಹಿಳಾ ಒಕ್ಕೂಟದ ನಿದೇ೯ಶಕಿಯಾದ ಸರೋಜಾ ಜಿ.ಜೈನ್‌, ಪುರೋಹಿತ ಸಚಿನ್‌ ಇಂದ್ರ ಮತ್ತಿತರರು ಉಪಸ್ಥಿತರಿದ್ದರು.

ವೇಣೂರು: ದಶಲಕ್ಷಣ ಮಹಾಪರ್ವ ಆಚರಣೆ

Article Image

ವೇಣೂರು: ದಶಲಕ್ಷಣ ಮಹಾಪರ್ವ ಆಚರಣೆ

ಬೆಳ್ತಂಗಡಿ ತಾಲೂಕಿನ ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥ ಸಮಿತಿ (ರಿ.) ವತಿಯಿಂದ ಇತಿಹಾಸ ಪ್ರಸಿದ್ಧ ಭ| ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ಪರಮಪೂಜ್ಯ 'ಭಾರತಭೂಷಣ' ಜಗದ್ಗುರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಶ್ರೀ ದಿಗಂಬರ ಜೈನ ಮಠ ಮೂಡುಬಿದಿರೆ ಇವರ ದಿವ್ಯ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಸಮಿತಿಯ ಅಧ್ಯಕ್ಷರಾದ ಪದ್ಮವಿಭೂಷಣ ರಾಜರ್ಷಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಸಮಿತಿಯ ಉಪಾಧ್ಯಕ್ಷರಾದ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆ ಇವರ ನೇತೃತ್ವದಲ್ಲಿ ಇಂದಿನಿಂದ ಮೊದಲ್ಗೊಂಡು ತಾ. 06-09-2025ನೇ ಶನಿವಾರದವರೆಗೆ ಪ್ರತಿದಿನ ಅಪರಾಹ್ನ ಗಂಟೆ 4-30ರಿಂದ 6-00ರ ವರೆಗೆ ದಶಲಕ್ಷಣ ಮಹಾಪರ್ವ ಆಚರಣೆಯು ಜರುಗಲಿದೆ. ವಿ.ಸೂ: ಪ್ರತೀ ದಿನ ಅಪರಾಹ್ನ ಗಂಟೆ 4-00ರಿಂದ ವೇಣೂರು ಬಸದಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಯಾತ್ರಿ ನಿವಾಸದಲ್ಲಿ ಉಪನ್ಯಾಸ ಕಾರ್ಯಕ್ರಮಗಳು ಇರುತ್ತದೆ.

ಕಲಾವಿದನ ಕೈಚಳಕ: ತೆಂಗಿನಕಾಯಿಯಲ್ಲಿ ಅರಳಿದ ಗಣೇಶ

Article Image

ಕಲಾವಿದನ ಕೈಚಳಕ: ತೆಂಗಿನಕಾಯಿಯಲ್ಲಿ ಅರಳಿದ ಗಣೇಶ

ಒಬ್ಬ ಕಲಾವಿದನ ಕೈಚಳಕದಿಂದ ಅದ್ಬುತ ಕಲೆಗಳು ಸೃಷ್ಟಿಯಾಗುತ್ತವೆ ಹಾಗೂ ಅವರ ಕಲ್ಪನೆಯ ಚಿತ್ರಗಳು ವೈವಿದ್ಯಮಯವಾಗಿ ಮೂಡಿ ಬರುತ್ತವೆ ಹಲವಾರು ಕ್ಷೇತ್ರಗಳಲ್ಲಿ ಇಂಥ ಪ್ರಸಂಗಗಳನ್ನು ನೋಡಬಹುದಾಗಿದೆ. ಇವರಲ್ಲಿ ಬೆಳಗಾವಿ ಜಿಲ್ಲಾ ಬೈಲಹೊಂಗಲ ತಾಲೂಕು ದೇವಲಾಪುರ ಗ್ರಾಮದ ಕುಬೇರ ಮಹಾವೀರ ಲಗಮಣ್ಣವರ ಇವರೂ ಕೂಡಾ ಒಬ್ಬರು. ಇವರು ಅಪ್ಪಟ ಗ್ರಾಮೀಣ ಕಲಾವಿದ, ಅವರ ಮೂಲ ವೃತ್ತಿ ಕೃಷಿ. ಜೊತೆಗೆ ಕೃಷಿಗೆ ಪೂರಕ ಚಟುವಟಿಕೆಯಲ್ಲಿ ತೊಡಗಿಕೊಂಡ ಇವರು ಸೃಜನಶೀಲ ಕಲಾವಿದರಲ್ಲಿ ಅತ್ಯಂತ ಪ್ರಮುಖರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿರುವದರಿಂದ ಸಹಜವಾಗಿ ಇವರಲ್ಲಿ ಪರಿಸರಪ್ರೇಮ ಮೈಗೂಡಿಕೊಂಡಿದೆ. ಇದೀಗ ಗಣೇಶ ಉತ್ಸವ ಬಂದಿದೆ ದೇಶದಾದ್ಯಂತ ಗಣೇಶ ಚತುರ್ಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇವರು ಸಿಪ್ಪೆಸಹಿತ ಇರುವ ಟೆಂಗಿನಕಾಯಿಯಲ್ಲಿ ಸೂಕ್ಷ್ಮವಾಗಿ ಕೆತ್ತನೆ ಮಾಡಿ ಗಣೇಶನ ಮೂರ್ತಿಯನ್ನು ಅತ್ಯಂತ ಸುಂದರವಾಗಿ ತಯಾರಿಸುತ್ತಾರೆ. ಇವುಗಳು ಎಷ್ಟು ಸುಂದರವಾಗಿವೆ ಎಂದರೆ ಇವುಗಳನ್ನು ನೋಡಿದ ತಕ್ಷಣ ಆಕರ್ಷಣೀಯವಾಗಿರುತ್ತವೆ. ಇವರ ಈ ಟೆಂಗಿನಕಾಯಿಯ ಗಣಪತಿಯನ್ನು ಮನೆ ಮನೆಯಲ್ಲಿ ಪ್ರತಿಷ್ಠಾಪಿಸಲು ಜನ ತುಂಬಾ ಉತ್ಸುಕರಾಗಿದ್ದಾರೆ. ಐದು ದಿನಗಳ ಪೂಜೆಯ ನಂತರ ಈ ಮೂರ್ತಿಯನ್ನು ಹೊಲದಲ್ಲಿ ಅಥವಾ ಹಿತ್ತಲಿನಲ್ಲಿ ತೆಗ್ಗು ತೆಗೆದು ಹೂಳುವ ಮುಖಾಂತರ ವಿಸರ್ಜಿಸುತ್ತಾರೆ. ಇದು ಕೆಲವು ದಿನಗಳ ನಂತರ ಮೊಳಕೆಯೊಡೆದು ಮತ್ತೊಂದು ತೆಂಗಿನಗಿಡವಾಗಿ ಬೆಳೆಯುತ್ತದೆ ಎನ್ನುವ ಉದ್ದೇಶವಿರುತ್ತದೆ. ಇದರಿಂದಾಗಿ ಪರಿಸರದ ರಕ್ಷಣೆಯ ಜೊತೆಗೆ ಸಸ್ಯವೃದ್ಧಿಯಾಗುತ್ತದೆ ಎನ್ನುವ ಪರಿಕಲ್ಪನೆ ನಿಜವಾಗಿಯೂ ಅದ್ಭುತವಾದದ್ದು. ಗಣೇಶ ಮಾತ್ರವಲ್ಲ ತೀರ್ಥoಕರರ ಮೂರ್ತಿಯನ್ನು ಕೂಡಾ ಸಿಪ್ಪೆಸಹಿತ ಇರುವ ಟೆಂಗಿನಕಾಯಿ ಯಲ್ಲಿ ಮೂಡಿಸುತ್ತಾರೆ. ಇವರ ಕಲೆಯನ್ನು ಮೆಚ್ಚಿ ದಿಗಂಬರ ಜೈನ ಮುನಿಗಳು ತ್ಯಾಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ ಆಶೀರ್ವದಿಸಿದ್ದಾರೆ. ಇವರದು ಇದೇತರಹದ ಕಲ್ಪನಾ ಲೋಕ, ಗ್ರಾಮೀಣ ಪರಿಸರದಲ್ಲಿ ಅಲ್ಲಿನ ಜನಪದ ಪ್ರಭಾವದಿಂದಾಗಿ ಎತ್ತು, ಚಕ್ಕಡಿ, ಗ್ವಾದಲಿ ಮುಂತಾದ ಕಮತದ ಪರಿಕರಗಳ ಚಿತ್ರಣಗಳನ್ನು ಕಣ್ಣು ಕಟ್ಟುವಂತೆ ತಯಾರಿಸುವದಕ್ಕೆ ಇವರು ಸಿದ್ದ ಹಸ್ತರು. ನಮ್ಮ ಹಳೆಯ ಕಾಲದ ಮನೆಗಳ ಕೂಡುಕುಟುಂಬ ಜೀವನದ ಸೊಗಸನ್ನು ಅರ್ಥ ಮಾಡಿಕೊಂಡವರಿಗೆ ಮಾತ್ರ ನಮ್ಮ ಜಾನಪದ ಸೊಗಡು ಅರ್ಥವಾಗಬಲ್ಲದು ಅಳಿವಿನ ಅಂಚಿನಲ್ಲಿರುವ ಇಂಥ ವಸ್ತುಗಳನ್ನು ತಯಾರಿಸಿ ಕುತೂಹಲ ಮೂಡಿಸುತ್ತಿದ್ದಾರೆ. ಇವರಲ್ಲಿಯ ಕಲಾಪ್ರತಿಭೆಗೆ ಪ್ರೋತ್ಸಾಹ ಹಾಗೂ ಪುರಸ್ಕಾರದ ಅಗತ್ಯವಿದೆ. ಈ ಅದ್ಬುತ ಕಲಾವಿದನ ಕೈಯಿಂದ ಇನ್ನೂ ಹಲವಾರು ಸಾಮಗ್ರಿಗಳು ಮೂಡಿಬರಲಿ, ಸರಕಾರವೂ ಸೇರಿದಂತೆ ಎಲ್ಲರೂ ಇವರ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸಲಿ ಎನ್ನುವ ಆಶಯ ನಮ್ಮದು. ಶಾಂತರಾಜ ಮಲ್ಲಸಮುದ್ರ ಲೇಖಕರು

ಗುರುವಂದನಾ ಕಾರ್ಯಕ್ರಮ

Article Image

ಗುರುವಂದನಾ ಕಾರ್ಯಕ್ರಮ

ಮೂಡುಬಿದಿರೆ: ಪ.ಪೂ. ಆಚಾರ್ಯ 108 ಗುಲಾಬು ಭೂಷಣ ಮುನಿಮಹಾರಾಜರ ಪಾವನ ಸಾನ್ನಿಧ್ಯದಲ್ಲಿ ದಶಲಕ್ಷಣ ಮಹಾಪರ್ವ ಆಚರಣೆ ಹಾಗೂ ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. "ಭಾರತಭೂಷಣ" ಜಗದ್ಗುರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳವರ ಪಟ್ಟಾಭಿಷೇಕ ವರ್ಧಂತಿ ರಜತ ಮಹೋತ್ಸವದ ಪ್ರಯುಕ್ತ ಗುರುವಂದನಾ ಕಾರ್ಯಕ್ರಮವು ದಿನಾಂಕ: 29-08-2025ನೇ ಶುಕ್ರವಾರ 1000 ಕಂಬದ ಬಸದಿ ಆವರಣದಲ್ಲಿ ಜರಗಲಿರುವುದು.

ಜೈನ ವಧು-ವರರ ರಾಜ್ಯಮಟ್ಟದ ಸಮಾವೇಶ

Article Image

ಜೈನ ವಧು-ವರರ ರಾಜ್ಯಮಟ್ಟದ ಸಮಾವೇಶ

ಚಿಗುರು ಆಲ್ ಇಂಡಿಯಾ ವಧು-ವರರ ವೇದಿಕೆಯ ಆಶ್ರಯದಲ್ಲಿ ವಿದ್ಯಾಗಿರಿಯ ಆಳ್ವಾಸ್‌ ನುಡಿಸಿರಿ ವೇದಿಕೆಯಲ್ಲಿ ಭಾನುವಾರ ಸಂಪರ್ಕ-ಪರಿಚಯ ರಾಜ್ಯಮಟ್ಟದ ಜೈನ ವಧು ವರರ ಸಮಾವೇಶ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌ ಸಮಾವೇಶವನ್ನು ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ ಮೋಹನ ಆಳ್ವ ಅವರು ವೆಬ್‌ಸೈಟ್ ಅನಾವರಣಗೊಳಿಸಿದರು. ಸುಭಾಶ್ಚಂದ್ರ ಚೌಟ ಅಧ್ಯಕ್ಷತೆ ವಹಿಸಿದರು. ಸಂಚಾಲಕ ಸಂಪತ್ ಜೈನ್ ಹೊಸ್ಕಾರ್ ಪ್ರಸ್ತಾವನೆಗೈದರು. ಜೈನ ಸಮುದಾಯದ ಪ್ರಮುಖರಾದ ಸಂಪತ್‌ ಶಿಮುಂಜೆಗುತ್ತು, ಭುಜಬಲಿ ಧರ್ಮಸ್ಥಳ, ಪೂರ್ಣಚಂದ್ರ ಜೈನ್‌, ವಿಜಯ ಕುಮಾ‌ರ್‌ ಜೈನ್ ನೂರಾಳ್‌ಬೆಟ್ಟು, ರಕ್ಷಿತ್ ಜೈನ್ ಬಡೆಕಾವುಗುತ್ತು, ಪ್ರಭಾತ್ ಬಲ್ನಾಡ್, ನೇಮಿರಾಜ್ ಅರಿಗ, ಜಿನೇಂದ್ರ ಜೈನ್ ಈದು, ಮಹೇಂದ್ರ ಜೈನ್‌, ಕೆ.ಸಿ. ಧರಣೇಂದ್ರಯ್ಯ, ಜ್ವಾಲ ಪ್ರಸಾದ್, ಆಮಂತ್ರಣ ವೇದಿಕೆ ಜಿಲ್ಲಾ ಉಪಾಧ್ಯಕ್ಷೆ ಅನಿತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Article Image

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ ಪರಂಪರೆ ಹಾಗೂ ಹೆಗ್ಗಡೆಯವರ ಬಹುಮುಖಿ ಸಮಾಜಸೇವಾ ಕಾರ್ಯಗಳನ್ನು ಬೆಂಬಲಿಸಿ ಸಕ್ರಿಯ ಸಹಕಾರ ನೀಡುವುದು ಸಮಗ್ರ ಜೈನಸಮಾಜದ ಕರ್ತವ್ಯವಾಗಿದೆ ಎಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಕಾರ್ಕಳ ಸೀಮೆಯ ಜೈನ ಬಾಂಧವರೊಂದಿಗೆ ಶನಿವಾರ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರನ್ನು ಗೌರವಿಸಿ ಶುಭ ಹಾರೈಸಿದರು. ಕೆಸರಾದ ನೀರನ್ನು ಮತ್ತೆ ತಿಳಿಯಾಗಿ ಪರಿಶುದ್ಧಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಪಪ್ರಚಾರ, ಆರೋಪಗಳಲೆಲ್ಲ ದೂರವಾಗಲಿ. ಹೆಗ್ಗಡೆಯವರಿಗೆ ಎಲ್ಲಾ ದೈವ-ದೇವರುಗಳು ದೀರ್ಘಾಯುರಾರೋಗ್ಯವನ್ನಿತ್ತು ಇನ್ನಷ್ಟು ಲೋಕಕಲ್ಯಾಣ ಕಾರ್ಯಗಳನ್ನು ಮಾಡುವಂತೆ ಹರಸಲೆಂದು ಸ್ವಾಮೀಜಿ ಪ್ರಾರ್ಥಿಸಿದರು. ಕಾರ್ಕಳ ಸೀಮೆಯ ಎಲ್ಲಾ ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುರೋಹಿತರು ತಂದ ಪ್ರಸಾದವನ್ನು ಹೆಗ್ಗಡೆಯವರಿಗೆ ಅರ್ಪಿಸಿದರು. ಸ್ವಾಮೀಜಿಯವರು ಕಾರ್ಕಳ ಮಠದ ಬಸದಿಯ ವಿಶೇಷ ಪ್ರಸಾದವನ್ನು ಹೆಗ್ಗಡೆಯವರಿಗೆ ನೀಡಿ ಶುಭ ಹಾರೈಸಿದರು. ಕಾರ್ಕಳದ ಡಾ. ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ಸತ್ಯಕ್ಕೆ ಸದಾ ಜಯವಿದೆ. ಮಾತುಬಿಡ ಮಂಜುನಾಥ ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಸತ್ಯ ಪ್ರಕಟವಾಗುವುದರೊಂದಿಗೆ ಆರೋಪಿಗಳಿಗೆ ಶಿಕ್ಷೆಯಾಗಲಿ. ಹೆಗ್ಗಡೆಯವರ ಜೊತೆ ನಾವೆಲ್ಲ ಸದಾ ಪೂರ್ಣ ಬೆಂಬಲ ನೀಡಲು ಸಿದ್ಧರು, ಬದ್ಧರು ಎಂದು ಅವರು ಭರವಸೆ ನೀಡಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಶಿರ್ತಾಡಿಯ ಎಸ್.ಡಿ. ಸಂಪತ್ ಸಾಮ್ರಾಜ್ಯ, ಸುದರ್ಶನ ಜೈನ್ ಬಂಟ್ವಾಳ, ಪುಷ್ಪರಾಜ ಜೈನ್, ಮಂಗಳೂರು, ಕುಲದೀಪ್, ಚೌಟರ ಅರಮನೆ, ಮೂಡಬಿದ್ರೆ, ಅಂಡಾರು ಮಹಾವೀರ ಹೆಗ್ಡೆ, ಅನಂತ್ರಾಜ ಪೂವಣಿ, ಶಿಶುಪಾಲ ಜೈನ್, ಮೋಹನ ಪಡಿವಾಳ್, ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ, ಗುಣವರ್ಮ ಜೈನ್, ಕಾರ್ಕಳ, ನೇಮಿರಾಜ ಆರಿಗಾ ಮೊದಲಾದವರು ಇದ್ದರು. ತಮ್ಮ ಬಗ್ಗೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಸಮಾಜ ಬಾಂಧವರ ಭಕ್ತಿ-ಗೌರವ, ಅಭಿಮಾನ ಸದಾ ಇದೇ ರೀತಿ ಇರಲೆಂದು ಹಾರೈಸಿ, ಹೆಗ್ಗಡೆಯವರು ಎಲ್ಲರಿಗೂ ಶುಭ ಹಾರೈಸಿದರು. ಕಾರ್ಕಳ ಸೀಮೆಯಿಂದ ಸುಮಾರು ಮುನ್ನೂರು ಮಂದಿ ಶ್ರಾವಕರು-ಶ್ರಾವಕಿಯರು ಆಗಮಿಸಿದರು.

First Previous

Showing 4 of 21 pages

Next Last