Article Image

ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ವಯೋನಿವೃತಿ

Article Image

ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ವಯೋನಿವೃತಿ

ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು. ‌ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ವಹಿಸಿದ್ದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಇವರು ಆಗಮಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ. ರವಿಕುಮಾರ್, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್, ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ, ಡಾ| ಸಂತೋಷ್ ಗೌಡ, ಡಾ| ಯತೀಶ್, ಡಾ| ವಿನಯ್ ಕುಮಾರ್, ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ, ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು., ಜಾನುವಾರು ಅಧಿಕಾರಿಗಳವರಾದ ನಾಗಶಯನ, ಪ್ರಶಾಂತ್ ಕುಮಾರ್ ಮತ್ತು ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು.

ಮೂಡುಬಿದಿರೆ: ಜೈನ್ ಮಿಲನ್ ಪದ ಸ್ವೀಕಾರ ಸಮಾರಂಭ

Article Image

ಮೂಡುಬಿದಿರೆ: ಜೈನ್ ಮಿಲನ್ ಪದ ಸ್ವೀಕಾರ ಸಮಾರಂಭ

ಭಾರತೀಯ ಜೈನ್ ಮಿಲನ್ ಮೂಡುಬಿದರೆ ವಲಯದ 25-27ನೇ ಸಾಲಿನ ಪದ ಸ್ವೀಕಾರ ಸಮಾರಂಭ ಜುಲೈ 27ರಂದು ಮಹಾವೀರಭಾನದಲ್ಲಿ ಜರಗಿತು. ನೂತನ ಅಧ್ಯಕ್ಷರಾಗಿ ಮಹೇಂದ್ರ ಕುಮಾ‌ರ್ ಜೈನ್, ಕಾರ್ಯದರ್ಶಿಯಾಗಿ ಶಶಿಕಾಂತ್ ಎ, ಕೋಶಾಧಿಕಾರಿಯಾಗಿ ಶ್ರೇಯಾಂಸ ಹೆಗ್ಡೆ, ಅಧಿಕಾರವನ್ನು ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ದಿವ್ಯ ಉಪಸ್ಥಿತ ಪರಮಪೂಜ್ಯ ಆಚಾರ್ಯ ಗುಲಾಬ್ ಭೂಷಣ್ ಜಿ ಮಹಾರಾಜ್ ಅವರು: ಜೈನರು, ಬದುಕು ಬದುಕಲು ಬಿಡು ಎನ್ನುವ ಧೈಯವನ್ನು ಪಾಲಿಸಬೇಕು. ಶಾಂತಿ ಸುಖವನ್ನು ನೀಡುವ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಂಡು ಆಚಾರ್ಯರುಗಳ, ಗುರುಗಳ ಆಶೀರ್ವಾದವನ್ನು ಸದಾ ಪಡೆದುಕೊಳ್ಳಬೇಕು ಎಂದು ಕರೆ ಕೊಟ್ಟರು. ಮೂಡುಬಿದಿರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಮ್ಮ ಆಶೀರ್ವಚನದಲ್ಲಿ ಧರ್ಮವಾರ್ತೆಯನ್ನು ಕೇಳಿ ಜೈನ ಬಂಧುಗಳು ಸದುಪಯೋಗದ ಉತ್ತಮ ಕೆಲಸಗಳನ್ನು ಮಾಡಿ ಸಂಘಟನೆಯನ್ನು ಬಲಪಡಿಸಬೇಕು. ಅಸಹನೆಗೆ ಅವಕಾಶವನ್ನು ನೀಡದೆ ಆಚಾರ್ಯರಿಗೆ ಪೂಜ್ಯತೆಯಿಂದ ಒಗ್ಗಟ್ಟನ್ನು ತೋರಿಸಿಕೊಡಬೇಕಾಗಿದೆ ಎಂದು ಕೇಳಿಕೊಂಡರು. ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಮಾತನಾಡಿ ಜೈನ ಪರಂಪರೆಯನ್ನು ಯುವಕರಿಗೆ ತಿಳಿಸಿ ಕೊಡುವುದರೊಂದಿಗೆ ಮಕ್ಕಳನ್ನು, ಯುವಕರನ್ನು ಒಟ್ಟುಗೂಡಿಸಿ ಯುವ ಜೈನ್ ಸಂಘಟನೆ ರಚಿಸಬೇಕಾದ ಅಗತ್ಯವಿದೆ ಎಂದರು. ಸನ್ಮಾನಕ್ಕೆ ಉತ್ತರಿಸಿದ ಉಜಿರೆಯ ಸೋನಿಯಾ ವರ್ಮ ಅವರು. ಒಳ್ಳೆಯ ಸಮಯವನ್ನು ಹಾಳು ಮಾಡದೆ ಉತ್ತಮ ಕೆಲಸಗಳಿಗೆ ತೊಡಗಿಸಬೇಕೆಂದು ಕೇಳಿಕೊಂಡರು. 17 ಮಂದಿ ನೂತನ ಸದಸ್ಯರನ್ನು ಸಭೆಗೆ ಪರಿಚಯಿಸಲಾಯಿತು. ಅಭಯ ಚಂದ್ರ ಮಂಜುಳಾ ಜೈನ್ ದಂಪತಿಗಳನ್ನು ಸನ್ಮಾನಿಸಲಾಯಿತು. ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಮಾತನಾಡಿ ಜೈನ ಪರಂಪರೆಯನ್ನು ಯುವಕರಿಗೆ ತಿಳಿಸಿ ಕೊಡುವುದರೊಂದಿಗೆ ಮಕ್ಕಳನ್ನು, ಯುವಕರನ್ನು ಒಟ್ಟುಗೂಡಿಸಿ ಯುವ ಜೈನ್ ಸಂಘಟನೆ ರಚಿಸಬೇಕಾದ ಅಗತ್ಯವಿದೆ ಎಂದರು. ಸನ್ಮಾನಕ್ಕೆ ಉತ್ತರಿಸಿದ ಉಜಿರೆಯ ಸೋನಿಯಾ ವರ್ಮ ಅವರು. ಒಳ್ಳೆಯ ಸಮಯವನ್ನು ಹಾಳು ಮಾಡದೆ ಉತ್ತಮ ಕೆಲಸಗಳಿಗೆ ತೊಡಗಿಸಬೇಕೆಂದು ಕೇಳಿಕೊಂಡರು. 17 ಮಂದಿ ನೂತನ ಸದಸ್ಯರನ್ನು ಸಭೆಗೆ ಪರಿಚಯಿಸಲಾಯಿತು. ಅಭಯ ಚಂದ್ರ ಮಂಜುಳಾ ಜೈನ್ ದಂಪತಿಗಳನ್ನು ಸನ್ಮಾನಿಸಲಾಯಿತು. ವಲಯ ನಿರ್ದೇಶಕ ಜಯರಾಜ ಕಂಬಳಿ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಆಸ್ಪತ್ರೆಯಲ್ಲಿರುವ ಜೈನ್ ಮಿಲನ್ ನ ಅಧ್ಯಕ್ಷ ಅನಡ್ಕ ದಿನೇಶ್ ಕುಮಾರ್ ಅವರ ಆರೋಗ್ಯ ಸುಧಾರಿಸಲು ಎಲ್ಲರೂ ಭಗವಂತನಲ್ಲಿ ಪ್ರಾರ್ಥಿಸಿದರು. ಅವರ ಅನುಪಸ್ಥಿತಿಯಲ್ಲಿ ಪ್ರಭಾತ್ ಕುಮಾರ್ ಬಲ್ನಾಡ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶ್ವೇತಾ ಜೈನ್ ಉಪಸ್ಥಿತರಿದ್ದರು. ಅನಂತವೀರ ಜೈನ್ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್ ಕುಮಾರ್ ವರದಿ ವಾಚಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಜೈನ್ ಲೆಕ್ಕಪತ್ರ ಮಂಡಿಸಿದರು. ನೂತನ ಅಧ್ಯಕ್ಷ ಮಹೇಂದ್ರ ಕುಮಾ‌ರ್ ಜೈನ್ ತಮ್ಮ ಎರಡು ವರ್ಷದ ಕಾಲಾವಧಿಯ ಕಾರ್ಯಸೂಚಿಯನ್ನು ಪ್ರಸ್ತುತಪಡಿಸಿದ್ದರು. ನಿತೀಶ್ ಕುಮಾರ್ ಬಲ್ಲಾಳ್ ಕಾರ್ಯಕ್ರಮ ನಿರ್ವಹಿಸಿದರು. ನೂತನ ಕಾರ್ಯದರ್ಶಿ ಶಶಿಕಾಂತ್ ಜೈನ್ ವರದಿ: ರಾಯಿ ರಾಜಕುಮಾರ ಮೂಡುಬಿದಿರೆ

ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Article Image

ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

ನವದೆಹಲಿ: ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭ. ಇಡೀ ಭರತಖಂಡದಲ್ಲಿ 1552 ರಿಂದ 1606ರವರೆಗೆ 54 ವರ್ಷಗಳ ಸುದೀರ್ಘಕಾಲ ರಾಜ್ಯಭಾರ ನಡೆಸಿದ ರಾಣಿ ಚೆನ್ನಭೈರಾದೇವಿಯ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ಪ್ರಕಟಸಿದ ವಿಶೇಷ ಅಂಚೆ ಚೀಟಿಯ ಲೋಕಾರ್ಪಣೆಯ ಐತಿಹಾಸಿಕ ಕಾರ‍್ಯಕ್ರಮ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ದಿನಾಂಕ 24.7.2025 ರಂದು ನಡೆಯಿತು. ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಈ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು. ಅಂಚೆಚೀಟಿ ಬಿಡುಗಡೆಗೊಳಿಸಿ ಮಾತನಾಡಿದ ರಾಷ್ಟ್ರಪತಿಗಳು ರಾಣಿ ಚೆನ್ನಭೈರಾದೇವಿಯ ಕೊಡುಗೆಗಳನ್ನು ಸ್ಮರಿಸಿಕೊಂಡು ರಾಷ್ಟ್ರದ ಗೌರವವನ್ನು ಸಲ್ಲಿಸಿದರು. ರಾಷ್ಟ್ರಪತಿಗಳು ತಮ್ಮ ಸಂದೇಶದಲ್ಲಿ, ರಾಣಿ ಚೆನ್ನಭೈರಾದೇವಿಯ ಧೈರ್ಯ ಸ್ಥೈರ್ಯ ಮತ್ತು ಸಾಧನೆಯನ್ನು ನಾವು ಸುವರ್ಣಾಕ್ಷರಗಳಲ್ಲಿ ಮಾತ್ರವಲ್ಲ ವಜ್ರದ ಅಕ್ಷರಗಳಲ್ಲಿ ಕೆತ್ತಬೇಕು. ರಾಣಿ ಚೆನ್ನಭೈರಾದೇವಿಯ ನಾಡಿನ ರಕ್ಷಣೆಗಾಗಿ ಆಕೆ ನಡೆಸಿದ ಹೋರಾಟ, ಸಾಮಾಜಿಕ ಕಾಳಜಿ, ಜಾತ್ಯತೀತ ಮನೋಭಾವ, ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಅಭಿವೃದ್ಧಿಗಾಗಿ ಆಕೆ ಕೈಕೊಂಡ ರಾಜನೀತಿಗಳನ್ನು ಮುಕ್ತಕಂಠದಿಂದ ಪ್ರಶಂಶಿಸಿದರು. ಅಂಚೆಚೀಟಿ ಹೊರತಂದ ಭಾರತೀಯ ಅಂಚೆ ಇಲಾಖೆ ಹಾಗೂ ಪ್ರಾಯೋಜಕರಾದ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳನ್ನು ಅಭಿನಂದಿಸಿದರು. ಕಾರ್ಯಕ್ರಮದ ಆರಂಭದಲ್ಲಿ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅತಿಥಿಗಣ್ಯರನ್ನು ಸ್ವಾಗತಿಸುತ್ತ, “ರಾಜ್ಯ ವಿಸ್ತರಣೆ ರಾಣಿ ಚೆನ್ನಭೈರಾದೇವಿಯರಾಜ ನೀತಿಯಾಗಿರಲಿಲ್ಲ. ಬದಲಿಗೆ ಪ್ರಜೆಗಳ ಬದುಕಿಗೆ ಸುಖ ಸೌಲಭ್ಯ ಒದಗಿಸುವುದು ಅವಳ ಉದ್ದೇಶವಾಗಿತ್ತು. ಆಕೆ ವಾಣಿಜ್ಯ ವ್ಯವಹಾರದಲ್ಲಿ ನಿಷ್ಣಾತೆಯಾಗಿದ್ದಳು.ತನ್ನರಾಜ್ಯದಿಂದ, ಕರಿ ಮೆಣಸು, ದಾಲ್ಚಿನ್ನಿ, ಶುಂಠಿ, ಏಲಕ್ಕಿ, ಗಂಧ, ಅಕ್ಕಿ, ಬೆಲ್ಲ, ದಂತ ಮುಂತಾದ ವಸ್ತುಗಳನ್ನು ವಿದೇಶಗಳಿಗೆ ರಫ್ತು ಮಾಡಿ ಅಪಾರ ಪ್ರಮಾಣದ ವಿದೇಶೀ ವಿನಿಮಯಗಳಿಸಿದ್ದಳು. ರಾಜಕೀಯವಾಗಿ ವೈರ ಸಾಧಿಸುತ್ತಿದ್ದ ಪೋರ್ಚುಗೀಸರೊಡನೆ ಉತ್ತಮ ವ್ಯಾವಹಾರಿಕ ಸಂಬಂಧ ಇರಿಸಿಕೊಂಡು, ಅವರಿಂದಲೇ "ರೈನಾದ ಪೆಮೆಂಟಾ" ಅರ್ಥಾತ್ "ಕರಿಮೆಣಸಿನ ಅರಸಿ" ಎಂಬ ಬಿರುದು ಪಡೆದಿದ್ದಳು. ಅಂಥ ಹೆಮ್ಮೆಯ ವೀರವನಿತೆಗೆ ಇಂದು ದೇಶದದೊಡ್ಡ ಗೌರವ ಪ್ರಾಪ್ತವಾಗಲಿದೆ” ಎಂದು ಆಶಿಸಿದರು. ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ‍್ಯದರ್ಶಿ ರಶ್ಮಿತಾ ಜೈನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ರಾಣಿ ಚೆನ್ನಭೈರಾದೇವಿಯ ಇತಿಹಾಸ, ವೀರತ್ವ ಹಾಗೂ ಸಮಾಜಮುಖಿ ಕರ‍್ಯಗಳನ್ನು ನೆನಪಿಸಿ ಗೌರವ ಸೂಚಿಸಿದರು. ಅಲ್ಲದೆ ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿಯನ್ನು ಹಾಗೂ ಇಂದಿನ ಕರ‍್ಯಕ್ರಮವನ್ನು ಎಕ್ಸಲೆಂಟ್ ಎಜುಕೇಶನ್ ಫೌಂಡೇಶನ್, ಮೂಡುಬಿದಿರೆ ಇದರ ಮೂಲಕ ಪ್ರಾಯೋಜಿಸಲಾಗಿದೆ ಎಂಬುದನ್ನೂ ಅವರು ವಿವರಿಸಿದರು. ಕಾರ‍್ಯಕ್ರಮಕ್ಕೆ ಮಾರ್ಗದರ್ಶನ ನೀಡಿ ಸಹಕರಿಸಿದವರು ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ ಅವರು ರಾಣಿ ಚೆನ್ನಭೈರಾದೇವಿಯ ಶೌರ್ಯ, ದೃಢ ನಿರ್ಧಾರ ಮತ್ತು ಆಡಳಿತ ಕೌಶಲ್ಯವನ್ನು ಸ್ಮರಿಸಿದರು. ರಾಣಿ ಚೆನ್ನಭೈರಾದೇವಿ ವಾಣಿಜ್ಯ ಮತ್ತು ನೌಕಾಯಾನದಲ್ಲಿ ದಿಟ್ಟ ಹೆಜ್ಜೆ ಇಟ್ಟ ಹೆಗ್ಗುರುತು ಸ್ವರೂಪ ಎಂದು ಅವರು ಹೇಳಿದರು. ಪೋರ್ಚುಗೀಸ್ ಬಲಗಳ ವಿರುದ್ಧ ನಿರ್ಭೀತಿಯಾಗಿ ಪ್ರತಿರೋಧಿಸಿದ ರಾಷ್ಟ್ರೀಯ ಸ್ವಾಭಿಮಾನದ ಸಂಕೇತವಾಗಿದ್ದಾಳೆ ಎಂದರು. ರೈತರು ಮತ್ತು ಮೀನುಗಾರರ ನೆಮ್ಮದಿಗೆ ಹಲವಾರು ಸಾಮಾಜಿಕ ಸೌಲಭ್ಯಗಳನ್ನು ನೀಡಿದಳು ಎಂಬುದನ್ನು ಜೋಷಿ ತಿಳಿಸಿದರು. ಇಂತಹ ಮಹಾನ್ ಮಹಿಳೆಯ ನೆನಪಿಗಾಗಿ ಸ್ಮಾರಕ ಅಂಚೆಪಟ್ಟಿ ಬಿಡುಗಡೆ ಮಾಡುವುದು ಹೆಮ್ಮೆಯ ವಿಚಾರ ಎಂದು ಅವರು ಅಭಿಪ್ರಾಯಪಟ್ಟರು. ಅಂಚೆ ಚೀಟಿ ಪ್ರಾಯೋಜಕರಾದ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಉಪಸ್ಥಿತರಿದ್ದು ಶುಭಕೋರಿದರು. ಕಾರ‍್ಯಕ್ರಮದಲ್ಲಿ ದೆಹಲಿಯ ಅಂಚೆ ಮಹಾನಿರ್ದೇಶಕರಾದ ಅಖಿಲೇಶ್‌ಕುಮಾರ್ ಪಾಂಡಿಯವರು, ಹುಬ್ಬಳ್ಳಿಯ ಸಾಮಾಜಿಕ ಕಾರ‍್ಯಕರ್ತರಾದ ಮಹೇಂದ್ರ ಸಿಂಗ್, ಕರಿಮೆಣಸಿನ ರಾಣಿ ಕಾದಂಬರಿಯ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿರುವ ಖ್ಯಾತ ಲೇಖಕರಾದ ಡಾ.ಗಜಾನನ ಶರ್ಮ, ಸಂಯೋಜಕರಾದ ಹುಬ್ಬಳ್ಳಿಯ ಖ್ಯಾತ ಉದ್ಯಮಿ ಮಹಾವೀರ ಕುಂದೂರ್, ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕರೂ ಕಾರ‍್ಯಕ್ರಮ ಸಂಯೋಜಕರೂ ಆದ ಡಾ. ಬಿ. ಪಿ. ಸಂಪತ್‌ ಕುಮಾರ, ಅಂಚೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಇತರ ಗಣ್ಯರು ಈ ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾದರು. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಪ್ರಾಯೋಜಕತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪ್ರಕಟಿಸಿದ ರಾಣಿ ಚೆನ್ನಭೈರಾದೇವಿಯ ಅಂಚೆ ಚೀಟಿ ಬಿಡುಗಡೆ ಸಮಾರಂಭವು ಇತಿಹಾಸದ ಪುಟದಲ್ಲಿ ಶಾಶ್ವತ ಸ್ಥಾನ ಪಡಯುವಲ್ಲಿ ಸಾರ್ಥಕತೆಯನ್ನು ಪಡೆಯಿತು. ಇತಿಹಾಸದ ಗರ್ಭದಲ್ಲಿ ಮರೆಯಾಗಿದ್ದ ಮಹಾನ್ ಚೇತನವೊಂದಕ್ಕೆ ಗೌರವ ನೀಡುವ ಹಾಗೂ ಹೊಸತಲೆಮಾರಿನಲ್ಲಿ ರಾಣಿಯ ಪೌರುಷ, ರಾಜನೀತಿ, ದೂರದೃಷ್ಟಿಯ ಆಡಳಿತ, ನಾಡಪ್ರೇಮ, ಸಂಸ್ಕೃತಿ ಪ್ರೀತಿ ಮೊದಲಾದ ನೆನಪುಗಳನ್ನು ಪುನರ್ ಸ್ಥಾಪಿಸುವ ರಾಷ್ಟ್ರಭಕ್ತಿಯ ಪ್ರತೀಕವಾಗಿಯೂ ಗಮನಸೆಳೆಯಿತು.

ರಾಜರತ್ನ ಕೆ. ನಿಧನ

Article Image

ರಾಜರತ್ನ ಕೆ. ನಿಧನ

ಧಾರ್ಮಿಕ ಮುಖಂಡ, ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಕೊಡಂಗೆ ಮನೆ, ಹಿರಿಯ ಮುತ್ಸದಿ ಶ್ರೀ ರಾಜರತ್ನ ಕೆ (74), ಇವರು 2025ನೇ ಜುಲೈ 24 ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ರಾಜೇಂದ್ರ ಜೈನ್ ಮತ್ತು ಸೊಸೆ, ಪುತ್ರಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಹಾಗೂ ಅಳಿಯ ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮಾನ್ಯರು ಬಂಟ್ವಾಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಮ್ಯಾನೇಜರ್ ಆಗಿ ಸುಮಾರು 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ್ದರು. ಸಮಾಜದ ಎಲ್ಲ ವರ್ಗದ ಜನರ ಧಾರ್ಮಿಕ, ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ ಪ್ರೀತಿಪಾತ್ರರಾಗಿ ಜನಾನುರಾಗಿಯಾಗಿದ್ದರು. ಬಾಳ್ತಿಲ ಗ್ರಾಮದ ಆದರ್ಶ ಪ್ರಗತಿಪರ ಕೃಷಿಕರಾಗಿ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿಯೂ ಹಲವಾರು ಜನಪರ ಕಾಳಜಿಯಿಂದ ಸೇವೆ ಸಲ್ಲಿಸಿದ ಅವರು ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ಟ್ರಸ್ಟಿಯಾಗಿದ್ದರು. ಜೈನ್ ಮಿಲನ್, ಪಂಚಕಲ್ಯಾಣದಂತಹ ಕಾರ್ಯಕ್ರಮಗಳಲ್ಲಿ ಪ್ರೇರಕರಾಗಿ ಕಾರ್ಯನಿರ್ವಹಿಸಿದ್ದರು.

ಮಹಿಳೆಯರ ಸೇವಾ ಸಾಧನೆ ಸ್ತುತ್ಯರ್ಹ- ಅನಿತಾ ಸುರೇಂದ್ರ ಕುಮಾರ್

Article Image

ಮಹಿಳೆಯರ ಸೇವಾ ಸಾಧನೆ ಸ್ತುತ್ಯರ್ಹ- ಅನಿತಾ ಸುರೇಂದ್ರ ಕುಮಾರ್

ಮೂಡುಬಿದಿರೆ: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಮತ್ತು ಸಾಧನೆಯ ಮೂಲಕ ಸ್ತುತ್ಯರ್ಹ ಕಾರ್ಯ ಮಾಡುತ್ತಿದ್ದಾರೆ. ಇಂತಹ ಸೇವೆ, ಸಾಧನೆಗಳು ನಿರಂತರ ಮುಂದುವರಿಯಲಿ ಎಂದು ಭಾರತೀಯ ಜೈನ್ ಮಿಲನ್ ನ ಉಪಾಧ್ಯಕ್ಷೆಯೂ ಆಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ನುಡಿದರು. ಜು. 21ರಂದು ಸಂಜೆ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆದ ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನೂತನ ಅಧ್ಯಕ್ಷೆ ನ್ಯಾಯವಾದಿ ಶ್ವೇತಾ ಜೈನ್, ಕಾರ್ಯದರ್ಶಿ ಅನಿತಾ ಪಿ. ಶೆಟ್ಟಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಮೂಡುಬಿದಿರೆಯ ಇನ್ನರ್ ವೀಲ್ ಕ್ಲಬ್ ಕಳೆದ 35 ವರ್ಷಗಳಿಂದ ಗೈದಿರುವ ಸೇವೆ ಸಾಧನೆಗಳನ್ನು ಗಮನಿಸುತ್ತಾ ಬಂದಿದ್ದೇನೆ. ವಿದ್ಯಾಗಿರಿ, ನಿಶ್ಮಿತಾ ಟವರ್ ಬಳಿಯ ಬಸ್ ತಂಗುದಾಣ, ಇನ್ನರ್ ವೀಲ್ ಕ್ಲಬ್ ವೃತ್ತಗಳು ಮೂಡುಬಿದಿರೆಯಲ್ಲಿ ಕ್ಲಬ್ ಹಮ್ಮಿಕೊಂಡಿರುವ ಸೇವೆಯ ಪ್ರತೀಕವಾಗಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕ್ಲಬ್‌ನ ಎಲ್ಲಾ ಹಿರಿಯ ಸದಸ್ಯೆಯರು ಅಭಿನಂದನೀಯರು ಎಂದು ನುಡಿದರು. ಇನ್ನರ್ ವೀಲ್ ಕ್ಲಬ್ ಜಿಲ್ಲಾ ಉಪಾಧ್ಯಕ್ಷೆ ರಜನಿ ಭಟ್ ಅವರು ಮಾತನಾಡಿ ಒಂದು ಹೆಜ್ಜೆ ಮುಂದೆ ಹೋಗಿ ಮಾದರಿ ನಾಯಕತ್ವ ಈ ವರ್ಷ ಇನ್ನರ್ ವೀಲ್ ಕ್ಲಬ್‌ನ ಧ್ಯೇಯವಾಕ್ಯವಾಗಿದ್ದು ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನ ನೂತನ ಅಧ್ಯಕ್ಷೆ ಶ್ವೇತಾ ಜೈನ್ ಒಂದು ಹೆಜ್ಜೆ ಮುಂದೆ ಹೋಗಿ 33 ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು ಶ್ಲಾಘಿಸಿ ಶುಭ ಕೋರಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಹಗಡೆಯವರು ಮಾತನಾಡಿ ಸ್ನೇಹ ಮತ್ತು ಸೇವೆ ಇನ್ನರ್ ವೀಲ್ ಕ್ಲಬ್‌ನ ಧ್ಯೇಯವಾಗಿದ್ದು ಈ ಆಶಯದೊಂದಿಗೆ ನಡೆಯುವ ಕ್ಲಬ್‌ನ ಎಲ್ಲಾ ಚಟುವಟಿಕೆಗಳಿಗೆ ಪೂರ್ಣ ಬೆಂಬಲ ನೀಡುವ ಭರವಸೆಯಿತ್ತರು. ನೂತನ ಅಧ್ಯಕ್ಷೆ ಶ್ವೇತಾ ಜೈನ್ ಅವರು ಮಾತನಾಡಿ ಕ್ಲಬ್‌ನ ಹಿರಿಯ ಸದಸ್ಯೆಯರಾದ ಶಾಲಿನಿ ನಾಯಕ್, ಜಯಶ್ರೀ ಅಮರನಾಥ ಶೆಟ್ಟಿ, ಪ್ರಕಾಶಿನಿ ಹೆಗ್ಡೆ ಮುಂತಾದವರ ಪಾರದರ್ಶಕ ನಾಯಕತ್ವ ತಮಗೆ ಮಾದರಿಯಾಗಿದ್ದು, ತಮ್ಮ ಕಕ್ಷಿದಾರರಿಗೆ ಯಾವುದೇ ತೊಂದರೆಯಾಗದಂತೆ ವಕೀಲ ವೃತ್ತಿಯನ್ನು ಮುಂದುವರಿಸಿ, ಕ್ಲಬ್‌ ಮುಖಾಂತರ ಹಮ್ಮಿಕೊಳ್ಳುವ ಎಲ್ಲಾ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಭರವಸೆಯಿತ್ತರು. ಸೇವಾ ಕಾರ್ಯಕ್ರಮದ ಅಂಗವಾಗಿ ದ್ವಿತೀಯ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ಕುಸುಮಾ ಅವರಿಗೆ ರೂ. 15 ಸಾವಿರ ಸಹಾಯಧನ, ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರೂ. 10 ಸಾವಿರದ ಪುಸ್ತಕಗಳು, ಮೂಡುಬಿದಿರೆ ಪ್ರೆಸ್ ಕ್ಲಬ್ ನೂತನ ಕಟ್ಟಡ ನಿರ್ಮಾಣಕ್ಕೆ ರೂ. 10 ಸಾವಿರ ಕೊಡುಗೆ ಹಾಗೂ ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ನ ಹಸಿ ಮತ್ತು ಒಣ ಕಸ ಸಂಗ್ರಹಣಾ ವ್ಯವಸ್ಥೆಗೆ ರೂ. 5ಸಾವಿರ ಮೌಲ್ಯದ ಸಾಮಗ್ರಿ ವಿತರಿಸಲಾಯಿತು. ಇನ್ನರ್ ವೀಲ್ ಕ್ಲಬ್ ಜಿಲ್ಲಾ ಸಂಪಾದಕಿ ದೀಪಾ ಭಂಡಾರಿ, ಐ.ಎಸ್.ಒ. ಸಹನಾ ಭಟ್ ಉಪಸ್ಥಿತರಿದ್ದರು. ಬಿಂದಿಯಾ ಶೆಟ್ಟಿ ಸ್ವಾಗತಿಸಿದರು. ಅನಿತಾ ಪ. ಶೆಟ್ಟಿ ಸೇವಾ ಕಾರ್ಯಗಳ ವಿವರ ನೀಡಿದರು. ಅಪೇಕ್ಷಾ ಪೂರ್ಣಚಂದ್ರ ಜೈನ್ ಪ್ರಾರ್ಥಿಸಿದರು. ತರೀನಾ ಪಿಂಟೋ ನಿರೂಪಿಸಿದ ಕಾರ್ಯಕ್ರಮದಲ್ಲಿ ನಿಶ್ಮಿತಾ ನಾಗರಾಜ್ ವಂದಿಸಿದರು.

ಮೂಡುಬಿದಿರೆ: ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ

Article Image

ಮೂಡುಬಿದಿರೆ: ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ

ಧರ್ಮ ಬಂಧು, ಶ್ರೀ ದಿಗಂಬರ ಜೈನ ಮಠದಲ್ಲಿ ಪ.ಪೂ ಆಚಾರ್ಯ ೧0೮ ಗುಲಾಬ್ ಭೂಷಣ ಮುನಿ ಮಹಾರಾಜ್ ಉಪಸ್ಥಿತಿ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾ ಚಾರ್ಯವರ್ಯ ಮಹಾಸ್ವಾಮೀಜಿ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ ಗಂಟೆ 2.00 ರಿಂದ 20.07.2025 ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ ಜರುಗಿತು. ಆಚಾರ್ಯರ ಉಪಸ್ಥಿತಿಯಲ್ಲಿ ಪ್ರವಚನ ನೀಡಿದ ಪ.ಪೂ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಪ್ರತಿ ಸಂಸಾರಿ ಜೀವಿಗಳು ದರ್ಶನಾವರಣಿಯ ಜ್ಞಾನಾವರಣಿಯ ವೇದನಿಯ, ಮೋಹನೀಯ, ಆಯು, ನಾಮ,ಗೋತ್ರ ಅಂತರಾಯ ಎಂಬ ಎಂಟು ಕರ್ಮಗಳನ್ನು ನಾಶ ಮಾಡ ದ ಹೊರತು ಮುಕ್ತಿ ಸಿಗದು ಮುಕ್ತಿ ಸಿಗಲು ಉತ್ತಮ ಮನಸ್ಸು ರತ್ನತ್ರಯ ಅವಲಂಬನೆ ಮುಖ್ಯ ಇಂದಿನ ಆರಾಧನೆ ಮೂಲ ಎಂಟು ಕರ್ಮ ದ ಭೇದ ಗಳಾದ 148 ಕರ್ಮ ನಾಶ ಪಡಿಸಿದ ಸಿದ್ದ ಭಗವಂತರ ಗುಣಗಾನ ಎಂದು ಆಶೀರ್ವಾದ ನೀಡಿದರು ಬಳಿಕ ಆಚಾರ್ಯರ ಸ್ವಾಮೀಜಿ, ಗಳ ಪಾದಪೂಜೆ, ಆರತಿ ಜರುಗಿತು.

ಭಾರತೀಯ ಜೈನ್ ಮಿಲನ್‌: ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

Article Image

ಭಾರತೀಯ ಜೈನ್ ಮಿಲನ್‌: ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

ಮಹಾನಗರ, ಜು. 20: ಭಾರತೀಯ ಜೈನ್ ಮಿಲನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಗರದ ಲಾರ್ಡ್ ಮಹಾವೀರ್ ಜೈನ್ ಬೋರ್ಡಿಂಗ್‌ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ಭಾರತೀಯ ಜೈನ್ ಮಿಲನ್ ಅಧ್ಯಕ್ಷ ರತ್ನಾಕರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಶಾರದಾ ವಿದ್ಯಾ ಸಮೂಹದ ಟ್ರಸ್ಟಿ ಸುಧಾಕರ್ ರಾವ್‌ ಪೇಜಾವರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ| ಸಿ.ಕೆ. ಬಲ್ಲಾಳ್ ಹಾಗೂ ಉದ್ಯಮಿ ದರ್ಶನ್ ಜೈನ್‌, ದಿಲೀಪ್‌ ಜೈನ್‌ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮಿಲನ್‌ ವತಿಯಿಂದ ಗೌರವಿಸಲಾಯಿತು. ನ್ಯಾಯಾಂಗ ಇಲಾಖೆಯ ಆಡಳಿತಾಧಿಕಾರಿಯಾಗಿ ನೇಮಕಗೊಂಡ ರಾಜೇಶ್ ಎಂ. ಅವರನ್ನು ಮಿಲನ್ ವತಿಯಿಂದ ಸಮ್ಮಾನಿಸಲಾಯಿತು. ವಲಯ ನಿರ್ದೇಶಕ ಸುಕುಮಾರ್ ಬಲ್ಲಾಳ್, ಕಾರ್ಯದರ್ಶಿ ವೈಶಾಲಿ ಪಡೀವಾಳ್ ಇದ್ದರು. ಪ್ರೀಯ ಸುದೇಶ್, ಶಿಲ್ಪಾ ಸಂದೀಪ್ ನಿರೂಪಿಸಿದರು. ನಿರ್ಮಲಾ ಜ್ಞಾನಚಂದ್ರ, ಯಶೋಧರ ಜೈನ್‌ ಸಹಕರಿಸಿದರು.

ಬಸದಿ ಸ್ಚಚ್ಛತಾ ಕಾರ್ಯಕ್ರಮ

Article Image

ಬಸದಿ ಸ್ಚಚ್ಛತಾ ಕಾರ್ಯಕ್ರಮ

ಭ 1008 ಶ್ರೀ ಶೀತಲನಾಥ ತೀರ್ಥoಕರ ಹಾಗೂ ಬ್ರಹ್ಮ ದೇವರ ಅತಿಶಯ ಕ್ಷೇತ್ರ ಮುಗುಳಿಯಲ್ಲಿ ಸ್ವಚ್ಛತೆ. ಬಸದಿ ಸ್ವಚ್ಛತಾ ತಂಡದಿಂದ 2ನೇ ವರ್ಷದ ಸ್ವಚ್ಛತೆ. ಸುಮಾರು 45 ಜನ ಶ್ರಾವಕರು ಭಾಗವಹಿಸಿದ್ದರು

ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

Article Image

ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

BA, BSc, B.Com ವಿವಿಧ ಡಿಗ್ರಿ ಕೋರ್ಸ್‌ಗಳನ್ನು ಪೂರ್ಣಗೊಳಿಸಲು ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ. ಇದರ ಸಂಪೂರ್ಣ ಶುಲ್ಕವನ್ನು ನಿರ್ದೇಶನಾಲಯದಿಂದಲೇ ಭರಿಸಲಾಗುವುದು. ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01.07.2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.08.2025 ವೆಬ್ ಸೈಟ್: https://minority. Ksouportal.com/ https://dom.karnataka.gov.in/

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Article Image

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಬಯಸುವ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ./ಐ ಎ ಎಸ್., ಕೆ.ಎ.ಎಸ್. ಕೆ.ಪಿ.ಎಸ್.ಸಿ- ಗ್ರೂಪ್ ಸಿ, RRB & SSCಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02.08.2025 ಹೆಚ್ಚಿನ ವಿವರ ಹಾಗೂ ಅರ್ಜಿ ಸಲ್ಲಿಸಲು https://sevasindhu.karnataka.gov.in/sevasindhu/departmentservices https://dom.karnataka.gov.in/

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Article Image

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿವೇತನಕ್ಕೆ SSP ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ: 30.09.2025 ಅರ್ಜಿಗಳನ್ನು SSP ಪೋರ್ಟಲ್ https://ssp.postmatric.karnataka.gov.in/ssppre/ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in/

ವಿದ್ಯಾರ್ಥಿವೇತನಕ್ಕಾಗಿ‌ ಆನ್‌ಲೈನ್ ಅರ್ಜಿ ಆಹ್ವಾನ

Article Image

ವಿದ್ಯಾರ್ಥಿವೇತನಕ್ಕಾಗಿ‌ ಆನ್‌ಲೈನ್ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ QS Top 500 ಪಟ್ಟಿಯಲ್ಲಿ ಸ್ಥಾನ ಪಡೆದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.09.2025 ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in/ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ Sevasindhu/DepartmentService ಮೂಲಕ ಸಲ್ಲಿಸಬೇಕು.

ಡಾ. ಅಭೀಷ್ ಹೆಗ್ಡೆಯರಿಗೆ ಪ್ರಥಮ ಬಹುಮಾನ

Article Image

ಡಾ. ಅಭೀಷ್ ಹೆಗ್ಡೆಯರಿಗೆ ಪ್ರಥಮ ಬಹುಮಾನ

ಮಂಗಳೂರು: ಏಪ್ರಿಲ್ 2025ರಲ್ಲಿ ಕೋಲ್ಕತ್ತಾದಲ್ಲಿ ನಡೆದ ವಾರ್ಷಿಕ ಯುರೊಲಿಥಿಯಾಸಿಸ್ ಸಮ್ಮೇಳನದಲ್ಲಿ ಸಲಹೆಗಾರರ ರಸಪ್ರಶ್ನೆಯಲ್ಲಿ ಮಂಗಳೂರಿನ ಮೂತ್ರ ಶಾಸ್ತ್ರತಜ್ಞ ಡಾ. ಅಭೀಷ್ ಹೆಗ್ಡೆರವರು ಪ್ರಥಮ ಬಹುಮಾನ ಪಡೆದಿರುತ್ತಾರೆ. ಇವರು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀ ಯ ಕಾಲೇಜಿನ ಮೂತ್ರ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುತ್ತಾರೆ.

ಶ್ರೀ ದಿಗಂಬರ ಜೈನ ಮಠದಲ್ಲಿ ಕರ್ಮ ದಹನ ಆರಾಧನಾ ಕಾರ್ಯಕ್ರಮ

Article Image

ಶ್ರೀ ದಿಗಂಬರ ಜೈನ ಮಠದಲ್ಲಿ ಕರ್ಮ ದಹನ ಆರಾಧನಾ ಕಾರ್ಯಕ್ರಮ

ಮೂಡಬಿದಿರೆ: ಶ್ರೀ ದಿಗಂಬರ ಜೈನ ಮಠದಲ್ಲಿ ನಾಳೆ (ಜು.20) ಪ.ಪೂ ಆಚಾರ್ಯ ೧0೮ ಗುಲಾಬ್ ಭೂಷಣ ಮುನಿ ಮಹಾರಾಜ್‌ರ ಸಾನ್ನಿಧ್ಯದಲ್ಲಿ, ಜಗದ್ಗುರು ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಉಪಸ್ಥಿತಿಯಲ್ಲಿ ಮಧ್ಯಾಹ್ನ 2.00 ರಿಂದ ವಿಶೇಷ ಅಭಿಷೇಕ ಕರ್ಮ ದಹನ ಆರಾಧನೆ, ಆಚಾರ್ಯರ ಪ್ರವಚನ, ಸ್ವಾಮೀಜಿಗಳವರ ಆಶೀರ್ವಚನ ಆಚಾರ್ಯರ ಪಾದಪೂಜೆ, ಆರತಿ ಈ ಎಲ್ಲಾ ಕಾರ್ಯಕ್ರಮಗಳು ಜರುಗಲಿದೆ.

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿಗೆ ಆನ್‌ಲೈನ್ ಅರ್ಜಿ ಆಹ್ವಾನ

Article Image

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿಗೆ ಆನ್‌ಲೈನ್ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಪಿ ಹೆಚ್ ಡಿ ತಾಂತ್ರಿಕ & ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ SSP ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.09.2025 ಅರ್ಜಿಗಳನ್ನು SSP ಪೋರ್ಟಲ್ https://ssp.postmatric.karnataka.gov. in/post_sa/signin.aspx ಮೂಲಕ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್: https://dom.karnataka.gov.in/

ತಿಮ್ಮಣಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Article Image

ತಿಮ್ಮಣಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

ವೇಣೂರು: ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳು ನಿಜವಾಗಿಯೂ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಕೇಂದ್ರಗಳಾಗಿವೆ ಇಂತಹ ಶಾಲೆಗಳ ವಿದ್ಯಾರ್ಥಿಗಳನ್ನು ಹಾಗೂ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸಮಾಜದ ಸರ್ವರ ಪ್ರೋತ್ಸಾಹ ಅಗತ್ಯವಿದೆ. ಶಾಲಾ ಎಸ್.ಡಿ.ಎಂ.ಸಿ, ಮುಖ್ಯಶಿಕ್ಷಕರು ಮತ್ತು ಶಿಕ್ಷಕ ವೃಂದ ಹಾಗೂ ಪೋಷಕರು ಸಹಕಾರವಿದ್ದಾಗ ಮಾತ್ರ ಗ್ರಾಮೀಣ ಪ್ರದೇಶಗಳ ಶಾಲೆಗಳ ಉನ್ನತಿ ಸಾಧ್ಯ ಎಂದು ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಹಾಗೂ ಮೂಡುಬಿದಿರೆ ಶ್ರೀ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಹೇಮರಾಜ್ ಬೆಳ್ಳಿಬೀಡು ಹೇಳಿದರು. ಅವರು ಕರಿಮಣೇಲು ಗ್ರಾಮದ ತಿಮ್ಮಣಬೆಟ್ಟು ಸರಕಾರಿ ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ತಮ್ಮ ವೈಯಕ್ತಿಕ ನಿಧಿಯಿಂದ ಒಂದರಿಂದ ಏಳನೇ ತರಗತಿವರೆಗಿನ ಮಕ್ಕಳಿಗೆ ಇಡೀ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ನೋಟ್ ಪುಸ್ತಕಗಳನ್ನು ಮತ್ತು ಇತರ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಕಾರ್ಯಕ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿದ ಅವರು ಈ ದಿನದಂದು ವಿತರಿಸಿದ ಪುಸ್ತಕಗಳನ್ನು ಸದುಪಯೋಗ ಪಡಿಸಿಕೊಂಡು ತಾವು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ, ನಿಮ್ಮೊಂದಿಗೆ ನಿಮ್ಮ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕವೃಂದ, ಪೋಷಕರು ಬೆಂಬಲವಾಗಿ ಇರುತ್ತಾರೆ, ಕಲಿಕೆಯಲ್ಲಿ ಉತ್ತಮ ಆಸಕ್ತಿಯನ್ನು ವಹಿಸಿ ತಮ್ಮ ಸಾಧನೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಶಾಲೆಗೆ, ಊರಿಗೆ ಮತ್ತು ನಿಮ್ಮ ಹೆತ್ತವರಿಗೆ ಕೀರ್ತಿ ತರಬೇಕೆಂದರು. ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್‌ ಮೂಡುಕೋಡಿ ಭಾಗವಹಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ ಹಾಗೂ ಗ್ರಾಮ ಪಂಚಾಯತ್ ಸದಸ್ಯೆ ಸುಮ, ಮರಾಠಿ ಸೇವಾ ಸಂಘದ ಅಧ್ಯಕ್ಷ ವಿಠಲ ನಾಯ್ಕ, ಮಾಜಿ ಅಧ್ಯಕ್ಷ ಲಕ್ಷ್ಮಣ ನಾಯ್ಕ, ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಸಚಿನ್ ಬೇಗೂರ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಗಾಯತ್ರಿ ಪ್ರಶಾಂತ್ ಅತಿಥಿಗಳಾದ ಕೆ. ಹೇಮರಾಜ್ ರವರನ್ನು ಸಭೆಗೆ ಪರಿಚಯಿಸಿದರು. ಶಿಕ್ಷಕಿ ಕವಿತಾ ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ರಾಜುನಾಯ್ಕ ವಂದಿಸಿದರು.

ವೇಣೂರು: ನೂತನ ಪದಾಧಿಕಾರಿಗಳ ಪದಗ್ರಹಣ

Article Image

ವೇಣೂರು: ನೂತನ ಪದಾಧಿಕಾರಿಗಳ ಪದಗ್ರಹಣ

ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಯಾತ್ರಿ ನಿವಾಸದಲ್ಲಿ ಜು. 13ರಂದು ನಡೆಯಿತು. ಸಭಾ ಕಾರ್ಯಕ್ರಮ ಪ್ರಾರಂಭವಾಗುವ ಮೊದಲು ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಭ| ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಮತ್ತು ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ಜಿನವಾಣಿ ಮಹಿಳಾ ಸಮಾಜದ ಅಧ್ಯಕ್ಷರಾದ ಸುಮನಾಜಿ ಡಿ. ಅಧಿಕಾರಿ ಹಾಗೂ ಮೂಡಬಿದ್ರಿ ಸರ್ವಮಂಗಳ ಜೈನ ಮಹಿಳಾ ಸಮಾಜದ ಅಧ್ಯಕ್ಷರಾದ ಮಂಜುಳಾ ಯಶೋಧರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಅಧ್ಯಕ್ಷರಾಗಿ ಸುನೀತಾ ಶಾಂತಿಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿ ದೀಪಶ್ರೀ ಜೈನ್ ಮತ್ತು ಕೋಶಾಧಿಕಾರಿಯಾಗಿ ಸುಕನ್ಯ ಬಲ್ಲಾಳ್ ಆಯ್ಕೆಯಾದರು. ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಮಹಿಳಾ ಒಕ್ಕೂಟದ ನಿರ್ದೇಶಕರಾದ ಸರೋಜ ಗುಣಪಾಲ್ ಜೈನ್ ವಹಿಸಿದ್ದರು. ಗೌರವ ಉಪಸ್ಥಿತಿಯನ್ನು ಬ್ರಾಹ್ಮಿ ಜೈನ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷರಾದ ಪ್ರಸನ್ನ ಆರ್. ಹೆಗ್ಡೆ ಹಾಗೂ ರಾಜೇಶ್ವರಿ ವಿ.ಅಧಿಕಾರಿ ವಹಿಸಿದ್ದರು. ವಾರ್ಷಿಕ ಗತ ಸಭೆಯ ವರದಿಯನ್ನು ನಿರ್ಗಮಿತ ಕಾರ್ಯದರ್ಶಿಗಳಾದ ಆಶಾಲತಾ ಮಂಡಿಸಿದರು. ಹಾಗೆಯೇ ನಿರ್ಗಮಿತ ಕೋಶಾಧಿಕಾರಿ ವಾಣಿ ವೃಷಭರಾಜ್ ಲೆಕ್ಕ ಪತ್ರ ಮಂಡಿಸಿದರು. ನಿರ್ಗಮಿತ ಅಧ್ಯಕ್ಷರಾದ ಸರೋಜಾ ಗುಣಪಾಲ್ ಜೈನ್ ನೂತನ ಅಧ್ಯಕ್ಷರಾದ ಸುನೀತಾ ಶಾಂತಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪದ್ಮಲತಾ ಮತ್ತು ಸುನೀತಾ ಬಲ್ಲಾಳ್ ಪ್ರಾರ್ಥಿಸಿ, ನಿರ್ಗಮಿತ ಜತೆ ಕಾರ್ಯದಶಿಗಳಾದ ಮಮತಾ ಪ್ರಸಾದ್ ಸ್ವಾಗತಿಸಿದರು. ನೂತನ ಕಾರ್ಯದರ್ಶಿಗಳಾದ ದೀಪಶ್ರೀ ಜೈನ್ ಧನ್ಯವಾದವಿತ್ತರು. ಸಂಧ್ಯಾ ಸುಕುಮಾರ್, ಆಶಾಲತಾ ಜೈನ್‌ರವರು ಕಾರ್ಯಕ್ರಮ ನಿರೂಪಿಸಿದರು.

ಸತ್ತೂರು, ಧಾರವಾಡ: ಡಾ. ನಿರಂಜನ್ ಕುಮಾರ್ ಅವರಿಗೆ ಜಾಗತಿಕ ಶ್ರೇಷ್ಠತೆ ಮತ್ತು ಗೌರವ ಪ್ರಧಾನ

Article Image

ಸತ್ತೂರು, ಧಾರವಾಡ: ಡಾ. ನಿರಂಜನ್ ಕುಮಾರ್ ಅವರಿಗೆ ಜಾಗತಿಕ ಶ್ರೇಷ್ಠತೆ ಮತ್ತು ಗೌರವ ಪ್ರಧಾನ

ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರಿಗೆ ಟೈಮ್ಸ್ ಆಫ್ ಇಂಡಿಯಾ ಮತ್ತು ವಿಜಯ ಕರ್ನಾಟಕ ಸಮೂಹ ಮಾಧ್ಯಮಗಳು, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಡಾ. ನಿರಂಜನ್ ಕುಮಾರ್ ಅವರ ಮಹತ್ವದ ಕೊಡುಗೆಗಳನ್ನು ಪರಿಗಣಿಸಿ ಜಾಗತಿಕ ಶ್ರೇಷ್ಠತೆಯ ಪ್ರಮಾಣಪತ್ರವನ್ನು ನೀಡಿ ಗೌರವಿಸಿವೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ ಅವರು ಡಾ. ನಿರಂಜನ್ ಕುಮಾರ್ ಅವರ ಪರವಾಗಿ ಈ ಪ್ರತಿಷ್ಠಿತ ಜಾಗತಿಕ ಶ್ರೇಷ್ಠತೆಯ ಗೌರವವನ್ನು ಮಲೇಷ್ಯಾದ ಮ್ಯಾಪ್ಸ್ ಗ್ರುಪ್‌ನ ಸಂಸ್ಥಾಪಕರಾದ ದಾತುಕ್ ಎಂ.ಎ.ಪಿ. ಸಿಗರನ್ ಮತ್ತು ಇತರ ಗಣ್ಯರಿಂದ ಸ್ವೀಕರಿಸಿದರು. ಈ ಪ್ರಶಸ್ತಿಯನ್ನು ಜುಲೈ 13, 2025 ರಂದು ಮಲೇಷ್ಯಾದ ಕೌಲಾಲಂಪುರದ ರಾಯಲ್ ಚುಲಾನ್‌ನಲ್ಲಿ ನಡೆದ ಕರ್ನಾಟಕ ಜಾಗತಿಕ ಸಾಧಕರ ಅಂತರರಾಷ್ಟ್ರೀಯ ಆಚರಣೆಯ ಸಂದರ್ಭದಲ್ಲಿ ನೀಡಲಾಯಿತು.

ಶೀಘ್ರದಲ್ಲಿಯೇ ಧಾರ್ಮಿಕ ಪಾಠಶಾಲೆ ಪ್ರಾರಂಭ

Article Image

ಶೀಘ್ರದಲ್ಲಿಯೇ ಧಾರ್ಮಿಕ ಪಾಠಶಾಲೆ ಪ್ರಾರಂಭ

ಕೊಪ್ಪಳ: ಜೈನ ಕಾಶಿ ಕೊಪ್ಪಳ ತಾಲೂಕಿನ ಹುಲಗಿಯಲ್ಲಿ ಜೈನ ಧರ್ಮದ ತತ್ವಗಳನ್ನು ತಿಳಿಸುವ, ಮುಂದಿನ ಪಿಳಿಗೆಯು ಜೈನ ಧರ್ಮದ ಅಸ್ತಿತ್ವವನ್ನು ಉಳಿಸುವ ಉದ್ದೇಶದಿಂದ ಧಾರ್ಮಿಕ ಪಾಠಶಾಲೆ ಮಾಡಲು ಪ್ರಕ್ರೀಯೆ ಪ್ರಾರಂಭವಾಗಿದೆ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ನೇಮಕವನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಅದನ್ನು ಪ್ರಾರಂಭ ಮಾಡಲಾಗುವುದು ಎಂದು ಶ್ರಾವಕ ಸುಹಾಸ ಇಜಾರೆ ಹುಲಗಿ ಅವರು ತಿಳಿಸಿದ್ದಾರೆ. ಕೊಪ್ಪಳದಲ್ಲಿ ಸುಮಾರು ಏಳು ನೂರು ಜೈನ ಬಸದಿಗಳು ಅಸ್ತಿತ್ವದಲ್ಲಿದ್ದವು, ಕಾಲಕ್ರಮೇಣ ಅವು ಇತಿಹಾಸದ ಪುಟ ಸೇರಿದವು. ಮೂಲ ಇದು ಜೈನ ಸ್ಥಳವಾಗಿದ್ದು, ಅದರ ಪುನರ್ ಸ್ಥಾಪನೆ ಇದರ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಅಂಠರಣಾದಲ್ಲಿ ಆದಿನಾಥರ ವಿಗ್ರಹ ವಿದ್ದು, ಅಲ್ಲಿ ಜೈನರ ಉಪಸ್ಥಿತಿ ಇಲ್ಲದ ಕಾರಣ ಗ್ರಾಮಸ್ಥರು ಅದರ ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ, ಅದನ್ನು ಕೊಪ್ಪಳ ಜೈನ ಬಸದಿಗೆ ಹಸ್ತಾಂತರ ಮಾಡಬೇಕು, ಹಾಗೇಯೇ ತಾಲೂಕಿನ ಜಬ್ಬಲಗುಡ್ಡದಲ್ಲಿ ಜೈನ ಬಸದಿಯ ಜಿರ್ಣೋದ್ಧಾರ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಬೇಕು ಎಂದು ಅವರು ತಿಳಿಸಿದರು. ಧಾರ್ಮಿಕ ಪಾಠಶಾಲೆಗೆ ಅಭಿನಂದನ ಗೋಗಿ, ಸಮೇದ ಜೈನ ಪದ್ಮ ಗೌಡ ಹೀರೆಗೌಡ್ರ, ಭುಜಬಲಿ ಪಾಟೀಲ್, ಉದಯರಾಜ ಕಾರಟಗಿ, ಉದಯ ಕುಮಾರ್ ಕಂಪಸಾಗರ, ಪಾಯಸಾಗರ, ಪದ್ಮಾವತಿ ಆನಂದ ಬಸ್ತಿ ನಿಲೋಗಲ್, ಗುರುರಾಜ್ ದೇಸಾಯಿ,ಅನಿಲ್ ಕುಮಾರ್ ಕಲ್ಯಾವಿ, ವಿನಯ ತುಂಬಳ, ಪುಷ್ಪದಂತ ಪಾಟೀಲ್‌, ಸನ್ಮತಿ ಇಜಾರೆ, ಶ್ರೀಕರ ಇಜಾರೆ, ಅನಿಲ್ ಕುಮಾರ್ ರೋಗೆ ಹೊಸಪೇಟೆ ಇವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದ್ದು, ಆಸಕ್ತ ಶ್ರಾವಕ, ಶ್ರಾವಕಿಯರು ಇದರ ಸದಸ್ಯತ್ವ ಪಡೆಯಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೋವಿನಕೆರೆ ಜೈನ ಮಂದಿರದಲ್ಲಿ ಚಾತುರ್ಮಾಸ

Article Image

ತೋವಿನಕೆರೆ ಜೈನ ಮಂದಿರದಲ್ಲಿ ಚಾತುರ್ಮಾಸ

ತೋವಿನಕೆರೆ: ಗ್ರಾಮದ ಚಂದ್ರನಾಥ ದೇವಾಲಯದಲ್ಲಿ ದಿಗಂಬರ ಜೈನ ಮುನಿ ಪಾಯಸಾಗರ ಮುನಿ ಚಾತುರ್ಮಾಸ ಕೈಗೊಂಡಿದ್ದು, ಇಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಜುಲೈ 14ರಿಂದ ಇಲ್ಲಿ ಚಾತುರ್ಮಾಸ ಆಚರಣೆ ಕೈಗೊಂಡಿದ್ದಾರೆ. ಅಕ್ಟೋಬರ್ 21ರವರೆಗೆ ಮುಂದುವರೆಯುತ್ತದೆ. 20ರಂದು ಮಂಗಳ ಕಳಸ ಪ್ರತಿಷ್ಠಾಪನೆ ಸಲುವಾಗಿ ವಿಶೇಷ ಸಮಾರಂಭ ದೇವಾಲಯದ ಅವರಣದಲ್ಲಿ ನಡೆಯುತ್ತದೆ ಎಂದು ಚಂದ್ರನಾಥ ಸ್ವಾಮಿ ದಿಗಂಬರ ಜೈನ ಸಂಘದವರು ತಿಳಿಸಿದ್ದಾರೆ. ಪ್ರತಿ ದಿನ ಸಂಜೆ 6ರಿಂದ ಮುನಿಗಳಿಂದ ಉಪನ್ಯಾಸ ಹಾಗೂ ಭಕ್ತರಿಂದ ಅರತಿ ಕಾರ್ಯಕ್ರಮ ನಡೆಯುತ್ತದೆ.

ರಚನಾ ಎಸ್.ಡಿ. ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Article Image

ರಚನಾ ಎಸ್.ಡಿ. ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಕಾರ್ಕಳ: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2025ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಡಾ.ಎನ್. ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 2017-2020 ನೇ ಸಾಲಿನ ಬಿಕಾಂ ವಿದ್ಯಾರ್ಥಿನಿ ರಚನಾ ಎಸ್.ಡಿ. ತೇರ್ಗಡೆಯಾಗಿದ್ದಾರೆ. ಇವರು ಮೂಡಬಿದ್ರೆಯ ಧೀರಜ್ ಎಸ್.ಎಮ್. ಮತ್ತು ಪದ್ಮಜಾ ಶೆಟ್ಟಿಯವರ ಪುತ್ರಿ, ರಚನಾ ಎಸ್.ಡಿ. ಮಂಗಳೂರಿನ ಕೆಎನ್‌ಡಿಸಿ ಆಂಡ್ ಅಸೋಸಿಯೆಶನ್‌ನಲ್ಲಿ ಸಿಎ ಪ್ರಾಯೋಗಿಕ ತರಬೇತಿಯನ್ನು ಪಡೆದಿರುತ್ತಾರೆ.

ತುಮಕೂರು ವಿಶ್ವ ವಿದ್ಯಾಲಯದಿಂದ ನಾಡೋಜ ಹಂಪಾನಾ ಸರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Article Image

ತುಮಕೂರು ವಿಶ್ವ ವಿದ್ಯಾಲಯದಿಂದ ನಾಡೋಜ ಹಂಪಾನಾ ಸರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಸಂಶೋಧಕ ನಾಡೋಜ, ಹಂ.ಪ ನಾಗರಾಜಯ್ಯ ಭಾಷಾ ವಿಜ್ಞಾನಿ, ಗ್ರಂಥ ಸಂಪಾದಕ, ಶ್ರೇಷ್ಠವಾಗ್ಮಿ, ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದವರು. 1936ರ ಅಕ್ಟೋಬರ್ 7ರಂದು ಕೋಲಾರ ಜಿಲ್ಲೆ (ಚಿಕ್ಕಬಳ್ಳಾಪುರ ಜಿಲ್ಲೆ) ಗೌರಿಬಿದನೂರು ತಾಲೂಕಿನ ಹಂಪಸಂದ್ರದಲ್ಲಿ ಜನನ. ಪ್ರಾಥಮಿಕ ವಿದ್ಯಾಭ್ಯಾಸ ಹಂಪಸಂದ್ರದಲ್ಲಿ, ಪ್ರೌಢ ಹಾಗೂ ಕಾಲೇಜು ಶಿಕ್ಷಣ ಗೌರಿಬಿದನೂರಿನಲ್ಲಿ, ಪಡೆದ ಇವರು ಕಲಾ ಪದವಿ ಹಾಗೂ ಕಲಾ ಸ್ನಾತಕೋತ್ತರ ಪದವಿಗಳನ್ನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪಡೆದರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು ಅಂದಿನಿಂದಲೂ ಮೈಸೂರು ದಸರಾ ಬಗ್ಗೆ ವಿಶೇಷವಾದ ಗೌರವ, ಪ್ರೀತಿ. ನಾಡೋಜ ಹಂ.ಪ ನಾಗರಾಜಯ್ಯ ಸಾಹಿತ್ಯ ಲೋಕದ ವಿಶೇಷ ಆಸ್ತಿ, ಹಂಪನ ಎಂಬ ಕಾವ್ಯ ನಾಮದಿಂದ ಹೆಸರಾಗಿರುವ ಇವರು, ನಾಡೋಜ ಎಂಬ ಕೀರ್ತಿ ಭಾಷಾ ವಿಜ್ಞಾನಿ, ಕಾದಂಬರಿ ಕಾರ, ಕಾವ್ಯ, ಇತಿಹಾಸ, ಭಾಷಾ ಶಾಸ್ತ್ರ, ಜೈನ ಸಾಹಿತ್ಯ ಇನ್ನಿತರ ಕೃತಿಗಳನ್ನು ರಚಿಸಿರುವವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಇವರ ಕೊಡುಗೆ ಅಪಾರ. (ಜೆ.ರಂಗನಾಥ ತುಮಕೂರು)

ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮಗಳು

Article Image

ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮಗಳು

ಚಿಕ್ಕಮಗಳೂರು: ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರ ಪೆನುಗೊಂಡ ದಿಗಂಬರ ಜೈನ ಮಹಾಸಂಸ್ಥಾನ ಮಠ ಶ್ರೀ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತೀ ಭಾನುವಾರ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ. ಪೂಜಾ ವಿವರ ಬೆಳಿಗ್ಗೆ 8-00 ಕ್ಕೆ : ಜಿನೇಶ್ವರರ ಪಂಚಾಮೃತ ಅಭಿಷೇಕ, 09-30 ಕ್ಕೆ : ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪಂಚಾಮೃತ ಅಭಿಷೇಕ ಮತ್ತು ಆರಾಧನೆ, ಸಂಜೆ 6-30 ಕ್ಕೆ : ಅಷ್ಠಾವದಾನ ಸೇವೆ, ಷೋಡಶೋಪಚಾರ ಪೂಜೆ, 7-30 ಕ್ಕೆ : ಮಹಾಮಂಗಳಾರತಿ ನಡೆಯಲಿದೆ.

ಮೀನಾಕ್ಷಿ ಜೈನ್ ರಾಜ್ಯಸಭೆಗೆ ರಾಷ್ಟ್ರಪತಿಯಿಂದ ನೇಮಕ

Article Image

ಮೀನಾಕ್ಷಿ ಜೈನ್ ರಾಜ್ಯಸಭೆಗೆ ರಾಷ್ಟ್ರಪತಿಯಿಂದ ನೇಮಕ

ರಾಷ್ಟ್ರಪತಿಯವರು ಹೊಸದಾಗಿ ನಾಲ್ಕು ಜನರನ್ನು ರಾಜ್ಯಸಭಾ ಸದಸ್ಯರನ್ನು ನೇಮಕ ಮಾಡಿದ್ದು ಅವರಲ್ಲಿ ಮೀನಾಕ್ಷಿ ಜೈನ್ ಕೂಡ ಒಬ್ಬರಾಗಿದ್ದಾರೆ. ಮೀನಾಕ್ಷಿ ಜೈನ್ ( 23ನೇ ಮಾರ್ಚ್ 1943 )ರವರು ದೆಹಲಿಯ ಗಾರ್ಗಿ ಕಾಲೇಜಿನಲ್ಲಿ ಇತಿಹಾಸದ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಭಾರತೀಯ ವಿಜ್ಞಾನಿ ಮತ್ತು ಇತಿಹಾಸಕಾರರು. 2014 ರಲ್ಲಿ ಅವರು ಭಾರತ ಸರ್ಕಾರದಿಂದ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್‌ನ ಸದಸ್ಯರಾಗಿ ನಾಮನಿರ್ದೇಶನಗೊಂಡರು. 2020 ರಲ್ಲಿ ಅವರು ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕಾಗಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಗುರು ಪೂರ್ಣಿಮೆಯ ಅಂಗವಾಗಿ ಸನ್ಮಾನ ಕಾರ್ಯಕ್ರಮ

Article Image

ಗುರು ಪೂರ್ಣಿಮೆಯ ಅಂಗವಾಗಿ ಸನ್ಮಾನ ಕಾರ್ಯಕ್ರಮ

ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ವತಿಯಿಂದ ಗುರುಪೂರ್ಣಿಮೆ ಹಾಗೂ ಆಷಾಡ ಮಾಸದ ವಿಶೇಷತೆಯ ಕುರಿತು ಕಾರ್ಯಕ್ರಮ ಪೆರ್ವಾಜೆ ಶಾಲೆಯಲ್ಲಿ ನಡೆಯಿತು. ವಸುಧಾ ಶೆಣೈಯವರು ಆಷಾಡ ಮಾಸದ ವಿಶೇಷತೆಯ ಕುರಿತು ಮಾತನಾಡಿದರು. ಗುರು ಪೂರ್ಣಿಮೆಯ ಕುರಿತು ಸಾವಿತ್ರಿ ಮನೋಹರ ಮಾತನಾಡಿದರು. ಗುರು ಪೂರ್ಣಿಮೆಯ ಅಂಗವಾಗಿ ಡಾಕ್ಟರೇಟ್ ಪದವಿಯನ್ನು ಪಡೆದ ಸದಸ್ಯೆಯರಾದ ಡಾ. ಸುಮತಿ ಪ್ರಭು ಹಾಗೂ ಡಾ. ಮಾಲತಿ ಜಿ. ಪೈಯವರನ್ನು ಸನ್ಮಾನಿಸಲಾಯಿತು. ರೂಪ ಚಿಪ್ಲೂಂಕರ್ ಪ್ರಾರ್ಥಿಸಿ, ಜಾಗೃತಿಯ ಅಧ್ಯಕ್ಷೆ ಪ್ರೊ. ಮಿತ್ರಪ್ರಭಾ ಹೆಗ್ಡೆ ಸ್ವಾಗತಿಸಿ, ಸುಲೋಚನ ಬಿ.ವಿ. ಧನ್ಯವಾದವನ್ನಿತ್ತರು. ಶೈಲಜಾ ಹೆಗ್ಡೆ ನಿರೂಪಿಸಿದರು.

ಅನಂತ ಪಾರ್ಶ್ವ ಜೈನ್ ಮಿಲನ್ ಪದಗ್ರಹಣ ಮತ್ತು ಬಸ್ ನಿಲ್ದಾಣ ಉದ್ಘಾಟನೆ

Article Image

ಅನಂತ ಪಾರ್ಶ್ವ ಜೈನ್ ಮಿಲನ್ ಪದಗ್ರಹಣ ಮತ್ತು ಬಸ್ ನಿಲ್ದಾಣ ಉದ್ಘಾಟನೆ

ಕುಪ್ಪೆ ಪದವು:- ಅನಂತ ಪಾರ್ಶ್ವ ಜೈನ್ ಮಿಲನಿನ ಪದಗ್ರಹಣ ಮತ್ತು ನಮ್ಮ ಮಿಲನ ಸದಸ್ಯರಾದ ಅಜಿತ್ ಕುಮಾರ್ ಜೈನ್ ರವರು ಸಾರ್ವಜನಿಕರಿಗೆ ಬಸ್ ನಿಲ್ದಾಣವನ್ನು ನಿರ್ಮಿಸಿದರು, ಮಂಗಳೂರು ವಲಯ -8 ರ ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್‌ ಜೈನ್‌ರವರು ಉದ್ಘಾಟಿಸಿದರು. ಅನಂತ್ ರಾಜ ಸಭಾಭವನದಲ್ಲಿ ದಿನಾಂಕ 29-6-2025 ಸಂಜೆ 3 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಿತು. ಜಯರಾಜ್ ಕಂಬಳಿ, ವಲಯ ನಿರ್ದೇಶಕರು ಹೊಸ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಮಾಡಿದರು. ಸುದರ್ಶನ್ ಜೈನ್, ಉಪಾಧ್ಯಕ್ಷರು ಮಂಗಳೂರು ವಲಯ-8. ಕುಪ್ಪೆಪದ ಜೈನ್ ಮಿಲನ್ ಸಣ್ಣದಾದರು ಅಚ್ಚುಕಟ್ಟಾಗಿ ಎಲ್ಲಾ ಕೆಲಸಗಳನ್ನು ಒಳ್ಳೆಯ ರೀತಿಯಲ್ಲಿ ನಿರ್ವಹಿಸುತ್ತಾ ಒಳ್ಳೆ ಹೆಸರನ್ನು ಗಳಿಸಿದ್ದಾರೆ ಎಂದು ಶ್ಲಾಘಿಸಿದರು. ವೇದಿಕೆಯಲ್ಲಿ ಪುಷ್ಪರಾಜ್ ಜೈನ್, ಸುಭಾಷ್ ಚಂದ್ರ ಜೈನ್, ಶ್ವೇತಾ ಜೈನ್, ಡಾ। ಸುದೀಪ್ ಜೈನ್, ಭೋಜರಾಜ್ ಜೈನ್, ಅಧ್ಯಕ್ಷ ಸ್ವರ್ಣ ಲತಾ ಅಜಿತ್, ಹರ್ಷ ಲತಾ, ವನಿತಾ ಭೋಜರಾಜ ಜೈನ ಹಾಗೂ ಪದಗ್ರಹಣ ಸ್ವೀಕರಿಸಿದ ಧೀರಜ್ ಜೈನ ಮತ್ತು ಕಾರ್ತಿಕ್ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವಿತಾ ಪ್ರಾರ್ಥನೆ ಮಾಡಿದರು. ಅನ್ವಿತ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು. ಅದ್ವಿತ ಮತ್ತು ಅಶ್ವಿತ ಶಾಂತಿ ಮಂತ್ರವನ್ನು ಪಟಿಸಿ ಸಭೆಯನ್ನು ಮುಕ್ತಾಯ ಗೊಳಿಸಿದರು.

ಗಾನವಿ ಡಿ. ಅವರಿಗೆ ಪಿಎಚ್.ಡಿ ಪದವಿ

Article Image

ಗಾನವಿ ಡಿ. ಅವರಿಗೆ ಪಿಎಚ್.ಡಿ ಪದವಿ

ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and Biological Activity Studies of Some Simple and Fused Nitrogenous Heterocycles) ಎಂಬ ಶೀರ್ಷಿಕೆಯಲ್ಲಿ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಪ್ರೊ. ಭೋಜ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಮಂಡಿಸಿದ್ದಾರೆ. ಸಮರ್ಥ ಶೋಧನಾ ಕಾರ್ಯಕ್ಕೆ ಬೆಂಗಳೂರು ಸಿಟಿ ಯುನಿವರ್ಸಿಟಿಯ ರಸಾಯನ ಶಾಸ್ತ್ರ ವಿಭಾಗದ ಸೀನಿಯರ್ ಪ್ರೊಪೆಸರ್ ಡಾ. ಹರಿಪ್ರಸಾದ್ ಎಸ್. ಇವರ ಸಮ್ಮುಖದಲ್ಲಿ ಡಾ. ಗಾನವಿ ಡಿ. ಅವರಿಗೆ ದಿನಾಂಕ 11 ಜುಲೈ 2025 ರಂದು ಪಿಎಚ್.ಡಿ ಪದವಿ ನೀಡಲಾಯಿತು. ಉಜಿರೆಯ ಲಲಿತನಗರದ ನಿವಾಸಿಯಗಿರುವ ಇವರು ಧರ್ಮಸ್ಥಳದ ದೇವಸ್ಥಾನ ಕಚೇರಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಯ ಜೈನ್ ಅವರ ಧರ್ಮಪತ್ನಿ.

ಭಾರತೀಯ ಜೈನ್ ಮಿಲನ್ ವಲಯ-8 ಸಭೆ

Article Image

ಭಾರತೀಯ ಜೈನ್ ಮಿಲನ್ ವಲಯ-8 ಸಭೆ

ತಾ. 22.06.2025ನೇ ಭಾನುವಾರ ಜೈನ್ ಮಿಲನ್ ಪುತ್ತೂರು ಶಾಖೆ ಮತ್ತು ಜೈನ್ ಮಿಲನ್ ಇಚ್ಲಂಪಾಡಿ ಶಾಖೆ ಜಂಟಿಯಾಗಿ ಪುತ್ತೂರು ಭ. ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪುತ್ತೂರು ಮಿಲನ್ ಅತಿಥೇಯತ್ವದಲ್ಲಿ ಜರಗಿತು. ಜಂಟಿ ಮಿಲನ್ ಸಭೆಯು ಸತೀಶ್ ಪಡಿವಾಳ್ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ವಲಯ ನಿರ್ದೇಶಕರಾದ ರಾಜಶ್ರೀ ಎಸ್. ಹೆಗ್ಡೆ, ಮುಖ್ಯ ಅತಿಥಿಯಾಗಿ ಡಾ| ಮಹಾವೀರ್ ಜೈನ್, ಡಾ| ಅಶೋಕ್ ಪಡಿವಾಳ್, ಅಜಿತ್ ಪ್ರಸಾದ್ ರೈ, ಕಾರ‍್ಯದರ್ಶಿ ರಾಜೇಶ್ ಕುಮಾರ್ ವಿ. ಇಚ್ಲಂಪಾಡಿ ಜೈನ್ ಮಿಲನ್ ಅಧ್ಯಕ್ಷರು ಹೇಮಾವತಿ ಮಹವೀರ್, ಕಾರ‍್ಯದರ್ಶಿ ದೀವಿಕ ರವೀಂದ್ರ ಜೈನ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳು ಬಸದಿ ದರ್ಶನ ಕ್ರಮ ಮತ್ತು ಮಹತ್ವವನ್ನು ಅರ್ಥಪೂರ್ಣವಾಗಿ ಸಭೆಗೆ ತಿಳಿಸಿದರು. ಪುತ್ತೂರು ಜೈನ ಮಿಲನ್ ವತಿಯಿಂದ ಡಾಕ್ಟರೇಟ್ ಪದವಿ ಮಹಾವೀರ್ ಜೈನ್ ಇಚ್ಲಂಪಾಡಿ ಹಾಗೂ ಪ್ರಗತಿಪರ ಕೃಷಿಕರಾದ ಅಜಿತ್ ಪ್ರಸಾದ್ ರೈ ಅವರನ್ನು ಗೌರವಿಸಲಾಯಿತು. ಪುತ್ತೂರು ಹಾಗೂ ಇಚ್ಲಂಪಾಡಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮದುವೆ ದಿನ ಹಾಗೂ ಹುಟ್ಟುಹಬ್ಬ ಆಚರಿಸಿಕೊಂಡವರಿಗೆ ಹೂ ನೀಡಿ ಗೌರವಿಸಲಾಯಿತು. ಕಾರ‍್ಯಕ್ರಮವು ಬೆಳಿಗ್ಗೆ 10ರಿಂದ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಮದ್ಯಾಹ್ನ 2.00 ಗಂಟೆಗೆ ಶಾಂತಿಮಂತ್ರದೊಂದಿಗೆ ಮುಕ್ತಾಯವಾಯಿತು.

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Article Image

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ಹಾಗೂ ಶ್ರಾವಕ ಬಂಧುಗಳ ಸರ್ವ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ಕಳೆದ ಹಲವಾರು ವರ್ಷಗಳಿಂದ ನೀಡುತ್ತಾ ಬರಲಾಗುತ್ತಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನವನ್ನು ನೀಡಲಾಗುತ್ತಿದೆ. ಅದೇ ರೀತಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಜೈನ ಧರ್ಮೀಯ ವಿದ್ಯಾರ್ಥಿಗಳನ್ನು 2025 ನೇ ಸೆಪ್ಟಂಬರ್ 21ರಂದು ಶ್ರೀಕ್ಷೇತ್ರ ಹೊಂಬುಜ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಶ್ರೀಮದ್ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ನೀಡಿ ಪ್ರೋತ್ಸಾಹಿಸಲಾಗುವುದು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ SSLC, ಗಿಂತ ಮೇಲ್ಪಟ್ಟು ಪಿಯುಸಿ, ಪದವಿ, ಐಟಿಐ, ಪಾಲಿಟೆಕ್ನಿಕ್, ಬಿಬಿಎಂ, ಎಂಬಿಎ, ಇಂಜಿನಿಯರಿಂಗ್, ವೈದ್ಯಕೀಯ ಇನ್ನಿತರ ವ್ಯಾಸಂಗವನ್ನು ಮುಂದುವರಿಸುತ್ತಿರುವ ವಿದ್ಯಾರ್ಥಿಗಳು ಮಾತ್ರ ನಿಗದಿತ ಅರ್ಜಿ ನಮೂನೆಯಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಕಚೇರಿಯಲ್ಲಿ ಪಡೆದುಕೊಳ್ಳುವುದು ಮತ್ತು ಅರ್ಜಿಯೊಂದಿಗೆ ಪ್ರಸ್ತುತ ಕಲಿಯುತ್ತಿರುವ ಸಂಸ್ಥೆಯಿಂದ ವ್ಯಾಸಂಗ ಪ್ರಮಾಣ ಪತ್ರ, ಕಳೆದ ವರ್ಷ ಕಲಿತು ತೇರ್ಗಡೆ ಆಗಿರುವ ಬಗ್ಗೆ ಅಂಕಪಟ್ಟಿಯ ಯಥಾಪ್ರತಿ, ವಿದ್ಯಾರ್ಥಿಯ ಪ್ರಸ್ತುತ ಮನೆಯ ವಿಳಾಸ, ವಿದ್ಯಾರ್ಥಿಯ ಆಧಾರ್ ಕಾರ್ಡ್ ಯಥಾಪ್ರತಿ, ಸಂಪರ್ಕ ಸಂಖ್ಯೆ, ತಂದೆ ಮತ್ತು ತಾಯಿಯ ಹೆಸರು ನಮೂದಿಸಿ ಇವರಿಬ್ಬರಲ್ಲಿ ಒಬ್ಬರ ಸಹಿಯೊಂದಿಗೆ ಆಗಸ್ಟ್ 31ರ ಒಳಗೆ ಕೆ. ಜಯವರ್ಮರಾಜ್ ಬಳ್ಳಾಲ್, ಮ್ಯಾನೇಜಿಂಗ್ ಟ್ರಸ್ಟಿ, ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ (ರಿ,) ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ, ಜೈನ್ ಪೇಟೆ, ಬೆಳ್ತಂಗಡಿ,-574214 ದಕ್ಷಿಣ ಕನ್ನಡ ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಬೇಕು. ಅದೇ ರೀತಿ ಉಭಯ ಜಿಲ್ಲೆಗಳಲ್ಲಿ ತೀವ್ರತರದ ಕಾಯಿಲೆಗಳಾದ ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವ ಜೈನ ಸಮಾಜದ ಅರ್ಹ ಬಂಧುಗಳು ಕೂಡ ಈ ಬಗ್ಗೆ ಈ ಕೆಳಗಿನ ವಿಳಾಸದಾರರನ್ನು ಸಂಪರ್ಕಿಸಿದ್ದಲ್ಲಿ ಪರಿಶೀಲಿಸಿ ಅಗತ್ಯ ನೆರವು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 08256-233577 ಅಥವಾ 9448180439,8310381962 ಸಂಖ್ಯೆಯ ದೂರವಾಣಿಯನ್ನು ಸಂಪರ್ಕಿಸಬಹುದೆಂದು ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕೆ. ಜಯವರ್ಮರಾಜ್ ಬಳ್ಳಾಲ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

ಧಾರವಾಡ ಜೈನ ಮಿಲನದ ಕಾರ್ಯಗಳು ಜನರ ಮನಸಿನಲ್ಲಿ ಅಚ್ಚಳಿಯದೆ ಉಳಿದಿವೆ : ಡಾ. ಅಜಿತಪ್ರಸಾದ

Article Image

ಧಾರವಾಡ ಜೈನ ಮಿಲನದ ಕಾರ್ಯಗಳು ಜನರ ಮನಸಿನಲ್ಲಿ ಅಚ್ಚಳಿಯದೆ ಉಳಿದಿವೆ : ಡಾ. ಅಜಿತಪ್ರಸಾದ

ಒಂದು ಸಂಸ್ಥೆ ಅದು ಮಾಡುವ ಅತ್ಯುನ್ನತ ಕಾರ್ಯಗಳಿಂದಲೇ ಸಮಾಜದಲ್ಲಿ ವಿಶಿಷ್ಟ ಸ್ಥಾನ ಪಡೆದು ವಿಶೇಷವಾಗಿ ಗುರುತಿಸಿಕೊಳ್ಳುತ್ತದೆ ಮತ್ತು ಅದು ಧರ್ಮಪ್ರಭಾವನೆಗೆ ಕಾರಣವಾಗುತ್ತದೆ ಎಂದು ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿಗಳು ಹಾಗೂ ಧಾರವಾಡ ಜೈನ ಮಿಲನ ಸಂಸ್ಥಾಪಕ ಕಾರ್ಯದರ್ಶಿಗಳೂ ಆದ ಡಾ. ಅಜಿತಪ್ರಸಾದ ಹೇಳಿದರು, ಅವರು ಧಾರವಾಡ ಜೈನ ಮಿಲನ್ ಅಯೋಜಿಸಿದ್ದ ವನಮಹೋತ್ಸವ, ಪ್ರಸಕ್ತ ಸಾಲಿನ ಪದಾಧಿಕಾರಿಗಳ ಪದಗ್ರಹಣ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಮುಂದುವರೆದ ಅವರು ಕಳೆದ 33 ವರ್ಷಗಳಿಂದ ಧಾರವಾಡ ಜೈನ ಮಿಲನ್ ಇಂಥ ಹಲವಾರು ಜನೋಪಯೋಗಿ ಕಾರ್ಯಕ್ರಮ ಮಾಡುವಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದರು. ಪ್ರಾರಂಭದಲ್ಲಿ ಜೆ ಎಸ್ ಎಸ್ ಸಂಸ್ಥೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ವನಮಹೋತ್ಸವ ಆಚರಿಸಲಾಯಿತು ಮುಂದಿನ ಒಂದು ವಾರದಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಅರ್ಥಪೂರ್ಣವಾಗಿ ವನಮಹೋತ್ಸವವನ್ನು ರಚನಾತ್ಮಕವಾಗಿ ಆಯೋಜಿಸಲಾಯಿತು. ಸಂಸ್ಥೆಯ ಐವತ್ತಕ್ಕೂ ಹೆಚ್ಚು ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ನೋಟ ಬುಕ್ ವಿತರಿಸಿ ಅವರ ವಿದ್ಯಾರ್ಜನೆಗೆ ಉತ್ಸಾಹ ಪ್ರೋತ್ಸಾಹ ತುಂಬಲಾಯಿತು. ಮಿಲನದ ನೂತನ ಅಧ್ಯಕ್ಷ ಜಿನ್ನಪ್ಪ ಕುಂದಗೋಳ, ಕಾರ್ಯದರ್ಶಿ ರತ್ನಾಕರ ಹೋಳಗಿ ಮತ್ತು ಖಜಾಂಚಿ ಮೋಹನಕುಮಾರ ಗೋಗಿ ಇವರುಗಳಿಗೆ ಬ್ಯಾಡ್ಜ್ ವಿತರಿಸಿ ಪ್ರಮಾಣ ವಚನವನ್ನು ಡಾ. ಅಜಿತಪ್ರಸಾದ ಬೋಧಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟಿನ ಕಾರ್ಯದರ್ಶಿ ಶಾಂತರಾಜ ಮಲ್ಲಸಮುದ್ರ ಇವರು ವಹಿಸಿದ್ದರು. ಇದೇ ಸಂದರ್ಭದಲ್ಲಿ ಮಿಲನದ ನಿಕಟಪೂರ್ವಅಧ್ಯಕ್ಷಿಣಿ ಸುಜಾತಾ ಹಡಗಲಿ ಹಾಗೂ ಇತರ ಪದಾಧಿಕಾರಿಗಳಾದ ಸಂಗೀತಾ ಉಪಾಧ್ಯ, ಸುನಂದಾ ವರದಿ ಜೈನ ಅಧ್ಯಯನ ಪೀಠದ ಸಂಯೋಜಕರಾದ ಡಾ. ಜಿನದತ್ತ ಹಡಗಲಿ, ಗಣ್ಯರಾದ ಮಹಾವೀರ ಉಪಾಧ್ಯ, ಎ ಎ ಬಾಳಿಕಾಯಿ, ಕೆ.ಜೆ. ರಪಾಟಿ ಹಾಗೂ ಬ್ರಹ್ಮಪ್ರಕಾಶ, ಡಿ.ಸಿ. ನಾಯಕ, ಅಮಿತ್ ಡೊರ್ಲೆ ಹಾಗೂ ಮಿಲನದ ಸದಸ್ಯರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇದೇ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಆಥಿತ್ಯವನ್ನು ನೀಡಿದ ವಾಣಿಪ್ರಸಾದ ಇವರನ್ನು ಗೌರವಿಸಿ ಸತ್ಕಾರಿಸಲಾಯಿತು. ಣಮೋಕಾರ ಮಂತ್ರದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕಿ ರಾಜೇಶ್ವರಿ ಶೆಟ್ಟಿ ಇವರು ಸ್ವಾಗತ ಗೀತೆ ಹಾಡಿದರು, ಡಾ. ಸೂರಜ ಜೈನ ಇವರು ಸಮಾರಂಭದಲ್ಲಿ ಭಾಗವಹಿಸಿದ ಸರ್ವರನ್ನು ಸ್ವಾಗತಿಸಿದರು. ಕೊನೆಯಲ್ಲಿ ವೈಶಾಲಿ ಹೊನ್ನಪ್ಪನವರ ಇವರು ವಂದಿಸಿದರು. ಕಾರ್ಯಕ್ರಮವನ್ನು ಸುನಂದಾ ವರೂರ ಅತ್ಯಂತ ಅಚ್ಚುಕಟ್ಟಾಗಿ ನಿರೂಪಿಸಿದರು. ವರದಿ: ಶಾಂತರಾಜ ಮಲ್ಲಸಮುದ್ರ

First Previous

Showing 5 of 20 pages

Next Last