Article Image

ನರಸಿಂಹರಾಜಪುರ: ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

Article Image

ನರಸಿಂಹರಾಜಪುರ: ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

ಶ್ರೀ ಜ್ವಾಲಾಮಾಲಿನಿ ದೇವಿ ಅತಿಶಯ ಕ್ಷೇತ್ರ ಸಿಂಹನಗದ್ದೆ ನರಸಿಂಹರಾಜಪುರ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸುತ್ತಿರುವ ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ನೀಡಲಾಗುತ್ತಿದೆ. 2024-25ನೇ ಸಾಲಿನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳ ನೋಂದಣಿ ಆರಂಭವಾಗಿದೆ. ಜೈನ ಪೋಷಕರು ಬಾಲಕರನ್ನು ವಿದ್ಯಾಪೀಠದ ಪ್ರವೇಶಕ್ಕೆ ತಮ್ಮ ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳೊಂದಿಗೆ ಸಂಪರ್ಕಿಸಬೇಕಾಗಿ ಅಪೇಕ್ಷಿಸಲಾಗಿದೆ. ಸಂಪರ್ಕ: ಶ್ರೀ ಜ್ವಾಲಾಮಾಲಿನಿ ದೇವಿ ಅತಿಶಯ ಕ್ಷೇತ್ರ ಪೆನುಗೊಂಡೆ ದಿಗಂಬರ ಜೈನ ಮಹಾಸಂಸ್ಥಾನ ಮಠ ಸಿಂಹನಗದ್ದೆ ಬಸ್ತಿಮಠ, ನರಸಿಂಹರಾಜಪುರ - 577134 ಮೊ: 8277741008, 08266220609

ಫಿಜೋಥೆರಪಿ ಪದವಿಯಲ್ಲಿ ಸನ್ನಿಧಿ ಜೈನ್‌ರವರು ಉತ್ತಮ ಅಂಕ

Article Image

ಫಿಜೋಥೆರಪಿ ಪದವಿಯಲ್ಲಿ ಸನ್ನಿಧಿ ಜೈನ್‌ರವರು ಉತ್ತಮ ಅಂಕ

ಬೆಂಗಳೂರು ರಾಜೀವ್ ಗಾಂಧಿ ವೈದ್ಯಕೀಯ ವಿಶ್ವ ವಿದ್ಯಾಲಯ ವ್ಯಾಪ್ತಿಯಲ್ಲಿ ಇರುವ ಮೂಡಬಿದಿರೆಯ ಆಳ್ವಾಸ್ ವೈದ್ಯಕೀಯ ಕಾಲೇಜು, ಫಿಜೋಥೆರಫಿ ವೈದ್ಯಕೀಯ ವಿಭಾಗದ ಡಾಕ್ಟರ್ ಫಿಜೋಥೆರಪಿ ಪದವಿಯಲ್ಲಿ ಸನ್ನಿಧಿ ಜೈನ್‌ರವರು ಉತ್ತಮ ಅಂಕಗಳನ್ನು ಪಡೆದಿದ್ದಾರೆ. ಇವರು ನಾರಾವಿ ಹಂಬಡದ ಸಂಧ್ಯಾ ಮತ್ತು ಮುನಿರಾಜ್ ಜೈನ್ ಇವರ ಸುಪುತ್ರಿ.

ಧರ್ಮಸ್ಥಳ: ವಿಷು ಜಾತ್ರೆ ಸಂಪನ್ನ

Article Image

ಧರ್ಮಸ್ಥಳ: ವಿಷು ಜಾತ್ರೆ ಸಂಪನ್ನ

ಬೆಳ್ತಂಗಡಿ, ಏ. 23: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಎ. 13ರಂದು ಮೊದಲ್ಗೊಂಡು ಎ. 23ರಂದು ಶ್ರೀ ಮಂಜುನಾಥ ಸ್ವಾಮಿಯ ಉತ್ಸವ ಮೂರ್ತಿ ಓಕುಳಿಯಾಗಿ ನೇತ್ರಾವತಿ ನದಿಯಲ್ಲಿ ಅವಭೃಥ ಸ್ನಾನ ಹಾಗೂ ಧ್ವಜಾವರೋಹಣದೊಂದಿಗೆ ಭಕ್ತಿ, ಸಂಭ್ರಮದಿಂದ ವಿಧ್ಯುಕ್ತವಾಗಿ ಸಂಪನ್ನಗೊಂಡಿತು. ಎ.22ರಂದು ರಾತ್ರಿ ಶ್ರೀ ಸ್ವಾಮಿಯ ಮಹಾರಥೋತ್ಸವ ಪ್ರಯುಕ್ತ ದೇವಸ್ಥಾನದ ಒಳಾಂಗಣದಲ್ಲಿ ಉತ್ಸವ ಮೂರ್ತಿಯ ಉಡ್ಕು ಹಾಗೂ ವಿವಿಧ ವಾದ್ಯ ವೈಭವಗಳ ನಾಲ್ಕು ಸುತ್ತು ಬಲಿ ಉತ್ಸವ ನಡೆದು, ಹೊರಾಂಗಣದಲ್ಲಿ ಚೆಂಡೆ, ನಾದಸ್ವರ, ಶಂಖ ಜಾಗಟೆ, ಬ್ಯಾಂಡ್ ವಾಲಗ, ಸರ್ವ ವಾದ್ಯ, ತಟ್ಟಿರಾಯ ಸಹಿತ ಪ್ರದಕ್ಷಿಣೆ ಬಂದು ಬ್ರಹ್ಮ ರಥಕ್ಕೆ ಸುತ್ತು ಪ್ರದಕ್ಷಿಣೆ ಬಂದು ರಥಾರೋಹಣ ನಡೆಯಿತು. ಕ್ಷೇತ್ರದ ಸಕಲ ಬಿರುದಾವಲಿಗಳೊಂದಿಗೆ ಬಸವ, ಎರಡು ಆನೆಗಳು, ಸಹಸ್ರಾರು ಭಕ್ತರು ಮಹೋತ್ಸವದಲ್ಲಿ ಭಾಗಿಗಳಾಗಿದ್ದರು. ರಥಕ್ಕೆ ಭಕ್ತರು ಬಾಳೆಹಣ್ಣು ಎಸೆದು ತಮ್ಮ ಭಕ್ತಿ ಸಮರ್ಪಿಸಿದರು. ಡಾ| ಡಿ.ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಹೆಗ್ಗಡೆ ಕುಟುಂಬಸ್ಥರು, ಸೋನಿಯಾ ವರ್ಮಾ, ಕೆ.ಎನ್.ಜನಾರ್ದನ, ಜನಾರ್ದನ ಎಂ., ಡಾ| ಸತೀಶ್ಚಂದ್ರ ಎಸ್., ಡಾ| ಬಿ.ಎ.ಕುಮಾರ ಹೆಗ್ಡೆ, ಡಾ| ಶ್ರೀನಾಥ್ ಎಂ.ಪಿ., ವೀರು ಶೆಟ್ಟಿ, ಲಕ್ಷ್ಮೀನಾರಾಯಣ ರಾವ್, ಕ್ಷೇತ್ರದ ಅರ್ಚಕವೃಂದ, ಸಿಬ್ಬಂದಿ ಹಾಗೂ ಊರ ಪರವೂರ ಭಕ್ತರು ಪಾಲ್ಗೊಂಡಿದ್ದರು.

ವರಂಗ: ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾವಕಾಶ

Article Image

ವರಂಗ: ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾವಕಾಶ

ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನದಲ್ಲಿ ಶ್ರೀಕ್ಷೇತ್ರ ವರಂಗ ಜೈನ ಮಠದಲ್ಲಿ ನಡೆಯುತ್ತಿರುವ ವಿದ್ಯಾಪೀಠಕ್ಕೆ 2024-25ನೇ ಸಾಲಿನ ಪ್ರವೇಶ ಪ್ರಾರಂಭಿಸಲಾಗಿದ್ದು, 8 ರಿಂದ 10ನೇ ತರಗತಿಯ, ಪದವಿಪೂರ್ವ ಹಾಗೂ ಪದವಿ ವಿದ್ಯಾಭ್ಯಾಸ ಮಾಡಲು ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು. ಮೂಲ ದಾಖಲೆಗಳೊಂದಿಗೆ ಶ್ರೀಮಠದ ಆಡಳಿತ ಮಂಡಳಿಯನ್ನು ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 8762785044, 8123924492, 9481249127, 9481944083,

ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Article Image

ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಭ| ೧೦೦೮ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಇದೇ ಬರುವ ದಿನಾಂಕ 3, 4 ಮತ್ತು 5 ಮೇ 2024 ರಂದು ವಿಜೃಂಭಣೆಯಿಂದ ಜರಗಲಿರುವುದು. ಈ ಪ್ರಯುಕ್ತ ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳ ವಿವರ ಮತ್ತು ನಿಯಮ 1.ಧರ್ಮನಾಥ ಸ್ವಾಮಿಯ ಸಂಗೀತ/ಭಜನೆ ಸ್ಪರ್ಧೆ ಪ್ರಥಮ ಬಹುಮಾನ : 10,000 ನಗದು ಮತ್ತು ಸ್ಮರಣಿಕೆ ದ್ವಿತೀಯ ಬಹುಮಾನ : 8,000 ನಗದು ಮತ್ತು ಸ್ಮರಣಿಕೆ ನಿಯಮಗಳು :- ಧರ್ಮನಾಥ ಸ್ವಾಮಿಯ ಬಗ್ಗೆ ಹಾಡು/ಭಜನೆಯನ್ನು ಒಬ್ಬರೇ ಹಾಡಿ (ಹಿನ್ನೆಲೆ/ಮುನ್ನೆಲೆ) ವಿಡಿಯೋ ಮಾಡಿ ಕಳುಹಿಸಬೇಕು. ಸಾಹಿತ್ಯ ರಚಿಸುವವರು ಮತ್ತು ಗಾಯಕರು ಕಡ್ಡಾಯವಾಗಿ ‌‌ಶ್ರಾವಕ/ಶ್ರಾವಕಿಯರೇ ಆಗಿರಬೇಕು ಮತ್ತು ವಿಡಿಯೋದಲ್ಲಿ ಪ್ರತಿಯೊಬ್ಬರ ಹೆಸರುಗಳನ್ನು ನಮೂದಿಸಬೇಕು. ರಚನೆ ಮತ್ತು ಗಾಯನಕ್ಕೆ ಒಬ್ಬರಿಗೆ ಒಂದೇ ವಿಡಿಯೋಕ್ಕೆ ಮಾತ್ರ ಅವಕಾಶ. ಸಾಹಿತ್ಯ, ಸ್ವರ, ಹಿನ್ನೆಲೆ ಸಂಗೀತ, ಛಾಯಾಗ್ರಹಣ, ಇತ್ಯಾದಿ ಅಂಶಗಳನ್ನು ಪರಿಗಣಿಸಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ನಕಲು ಮಾಡಿದ ಅಥವಾ ಈ ಹಿಂದೆ ಪ್ರಕಟವಾದ ಹಾಡು/ಭಜನೆಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಭಜನೆ/ಸಂಗೀತ ಕನ್ನಡ ಅಥವಾ ಹಿಂದಿ ಭಾಷೆಯಲ್ಲಿರಬೇಕು. 2. ಪ್ರಬಂಧ ಸ್ಪರ್ಧೆ ಪ್ರಥಮ ಬಹುಮಾನ : 3,000 ನಗದು ಮತ್ತು ಸ್ಮರಣಿಕೆ ದ್ವಿತೀಯ ಬಹುಮಾನ : 2000 ನಗದು ಮತ್ತು ಸ್ಮರಣಿಕೆ ನಿಯಮಗಳು :- ಪ್ರಬಂಧದ ವಿಷಯ : "ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ". ಪ್ರಬಂಧವು 900 ಶಬ್ದಗಳನ್ನು ಮೀರಬಾರದು. (ಅಂದಾಜು 2 ಪುಟಗಳು) ಪ್ರಬಂಧವನ್ನು ಕನ್ನಡ ನುಡಿಯಲ್ಲಿ ಟೈಪ್ ಮಾಡಿ PDF ಮಾಡಿ ಕಳುಹಿಸಬೇಕು. ವಿಶೇಷ ಸೂಚನೆಗಳು ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸಲು ಕೊನೆಯ ದಿನಾಂಕ 30 ಎಪ್ರಿಲ್ 2024. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸುವವರು ತಮ್ಮ ಫೋಟೊ, ವಿಳಾಸ, ಹಾಗೂ ಮೊಬೈಲ್ ನಂಬರ್ ನೊಂದಿಗೆ 9481016887 ಈ ವಾಟ್ಸಪ್ ನಂಬರ್ ಗೆ ಅಥವಾ naravibasadi24@gmail.com ಗೆ ಕಳುಹಿಸಬೇಕಾಗಿ ವಿನಂತಿ. ದಿನಾಂಕ 1 ಮೇ 2024 ರಂದು ವಿಜೇತರನ್ನು ಆಯ್ಕೆ ಮಾಡಲಾಗುವುದು ಮತ್ತು ದಿನಾಂಕ 5 ಮೇ 2024 ರಂದು ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿಜೇತರನ್ನು ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಅತುಲ್ ಎಸ್. ಸೇಮಿತ: 9481016887 ಜ್ಞಾನೇಂದ್ರ ಕುಮಾರ್ ಜೈನ್: 9902799196

ಮೂಡುಬಿದಿರೆ: ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವ

Article Image

ಮೂಡುಬಿದಿರೆ: ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವ

ವರ್ಷಂಪ್ರತಿ ಜರುಗುವ ಜಗತ್ಪ್ರಸಿದ್ಧ ತ್ರಿಭುವನ ತಿಲಕ ಚೂಡಾಮಣಿ ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವವು ಎ. 18ರಿಂದ ಪ್ರಾರಂಭಗೊಂಡಿದ್ದು, ಇಂದು (ಏ.23) ಹಿರಿಯ ರಥೋತ್ಸವ ಮತ್ತು ಶ್ರವಣ ಸಂಸ್ಕೃತಿ ಸಮ್ಮೇಳನ ೧೦೮ ಚಾರಿತ್ರ ಚಕ್ರವರ್ತಿ ಶಾಂತಿಸಾಗರ ಮುನಿಮಹಾರಾಜರ ಆಚಾರ್ಯ ಪದಾರೋಹಣ ಶತಾಬ್ಧಿವರ್ಷ ಆಚರಣೆಯು, ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಪಾವನ ಸಾನಿಧ್ಯ ಮತ್ತು ಆಶೀರ್ವಚನದೊಂದಿಗೆ ಜರಗಲಿರುವುದು.

ರಥೋತ್ಸವ ಮತ್ತು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು

Article Image

ರಥೋತ್ಸವ ಮತ್ತು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು

ಸಂಸೆ: ಇಲ್ಲಿಯ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ವಷ೯ಂಪ್ರತಿ ನಡೆಯುವ ಶ್ರೀ ಮನ್ಮಮಹಾರಥೋತ್ಸವದ ಪೂಜಾ ಮಹೋತ್ಸವಗಳು ಕಾಕ೯ಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾಯ೯ವಯ೯ ಮಹಾ ಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಏ. 18ರಿಂದ ಪ್ರಾರಂಭಗೊಂಡು ಏ. 24ರವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿರುವುದು.

ಬೆಳ್ತಂಗಡಿ: ಮಹಾವೀರ ಜಯಂತಿ ಆಚರಣೆ, ಚತುರ್ವಿಂಶತಿ ತೀರ್ಥಂಕರರ ಆರಾಧನೆ

Article Image

ಬೆಳ್ತಂಗಡಿ: ಮಹಾವೀರ ಜಯಂತಿ ಆಚರಣೆ, ಚತುರ್ವಿಂಶತಿ ತೀರ್ಥಂಕರರ ಆರಾಧನೆ

ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಇದೇ 21 ರಂದು ಭಾನುವಾರ ಹತ್ತನೆ ವಾರ್ಷಿಕೋತ್ಸವ, ಚತುರ್ವಿಂಶತಿ (ಇಪ್ಪತ್ತನಾಲ್ಕು) ತೀರ್ಥಂಕರರ ಆರಾಧನೆ, ೧೦೮ ಕಲಶಾಭಿಷೇಕ ಹಾಗೂ ಭಗವಾನ್ ಮಹಾವೀರ ಜಯಂತಿ ಆಚರಣೆ ನಡೆಯಲಿದೆ ಎಂದು ಬಸದಿಯ ಅನುವಂಶೀಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ ಏಳು ಗಂಟೆಯಿಂದ ತೋರಣಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ. ಪೂರ್ವಾಹ್ನ ಗಂಟೆ 8.45 ರಿಂದ ಸಾಮೂಹಿಕ ಚತುರ್ವಿಂಶತಿ (24) ತೀರ್ಥಂಕರರ ಆರಾಧನೆ ನಡೆಯಲಿದೆ. ಭಗವಾನ್ ಮಹಾವೀರ ಸ್ವಾಮಿಗೆ ನವಕಲಶಾಭಿಷೇಕ, ಭಗವಾನ್ ಶಾಂತಿನಾಥ ಸ್ವಾಮಿಗೆ ೧೦೮ ಕಲಶಗಳಿಂದ ಅಭಿಷೇಕ, ನೂತನ ಗಂಧಕುಟಿಯಲ್ಲಿ 24 ತೀರ್ಥಂಕರರ ಬಿಂಬಗಳ ಸ್ಥಾಪನೆ ನಡೆಯಲಿದೆ. ಅಪರಾಹ್ನ 3.00 ಗಂಟೆಗೆ ಹೊಂಬುಜ ಶ್ರೀ ಜೈನಮಠದ ಪ.ಪೂ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಮಹಾವೀರ ಜಯಂತಿ ಆಚರಣೆ ಬಗ್ಗೆ ಮಂಗಲ ಪ್ರವಚನ ನೀಡಲಿದ್ದಾರೆ. ಬಳಿಕ ನೂತನ ಘಂಟಾಮಂಟಪ ಹಾಗೂ ಜಲಧಾರ ಲೋಕಾರ್ಪಣೆಗೊಳ್ಳಲಿದೆ.

ಬೋಳ: ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ

Article Image

ಬೋಳ: ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಶ್ರೀ ವರ್ಧಮಾನ ಸ್ವಾಮಿ ಬಸದಿಯ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಪ.ಪೂ ಮುನಿಶ್ರೀ ೧೦೮ ಅಮರಕೀರ್ತಿ ಮಹಾರಾಜರು, ಪ.ಪೂ. ಮುನಿಶ್ರೀ ೧೦೮ ಅಮೋಘಕೀರ್ತಿ ಮಹಾರಾಜರು ಮತ್ತು ಪ.ಪೂ. ಮುನಿಶ್ರೀ ೧೦೮ ಪ್ರಸಂಗ ಸಾಗರ ಮಹಾರಾಜರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ಮಾರ್ಗದರ್ಶನದಲ್ಲಿ ಏ.22 ರಂದು ನೆರವೇರಲಿರುವುದು.

ಧರ್ಮಸ್ಥಳ: 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Article Image

ಧರ್ಮಸ್ಥಳ: 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ನೆರವೇರುವ ಉಚಿತ ಸಾಮೂಹಿಕ ವಿವಾಹವು ದಿನಾಂಕ 01-05-2024ನೇ ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಜರುಗಲಿರುವುದು. ಈ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಿವಾಹವಾಗಲಿಚ್ಛಿಸುವವರು ದಿನಾಂಕ 25-04-2024ನೇ ಗುರುವಾರದ ಒಳಗಾಗಿ ವಧೂ-ವರರ ಹೆಸರು ದಾಖಲು ಮಾಡಿಸುವುದು. ಬರುವಾಗ ಮಂಡಲ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಯಾ ಕಾರ್ಯದರ್ಶಿಯವರಿಂದ ವಧೂ-ವರರ ಹೆಸರು, ಪ್ರಾಯ, ಹಿರಿಯರ ಒಪ್ಪಿಗೆ ಹಾಗೂ ಅವಿವಾಹಿತನೆಂಬುದಕ್ಕೆ ಅವಶ್ಯ ದೃಢಪತ್ರಿಕೆ ಮತ್ತು ವಧೂ-ವರರ ಇತ್ತೀಚಿನ ಭಾವಚಿತ್ರ 1+1 (ಪಾಸ್‌ಪೋರ್ಟ್ ಅಳತೆ) ತರಬೇಕು. ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆಕಣ ಮತ್ತು ಮಂಗಲಸೂತ್ರವನ್ನು ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ: ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರಿನ ಪ್ರವಚನ ಮಂಟಪದಲ್ಲಿರುವ ಸಾಮೂಹಿಕ ವಿವಾಹ ನೋಂದಣಿ ಕಚೇರಿಯನ್ನು ಸಂಪರ್ಕಿಸಿ: 9663464648/8147263422/08256 - 266644 ಅರ್ಜಿ ಮತ್ತು ಹೆಚ್ಚಿನ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ: www.shridharmasthala.org ವಿ.ಸೂ.: ಯಾವುದೇ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.

ಹೊಂಬುಜ: ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

Article Image

ಹೊಂಬುಜ: ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಶುಭಾಶೀರ್ವಾದದೊಂದಿಗೆ ಜೈನ ಮಠದ ಆಶ್ರಯದಲ್ಲಿ ಸುವ್ಯವಸ್ಥಿತಗೊಂಡಿರುವ ಶ್ರೀ ಕುಂದಕುಂದ ವಿದ್ಯಾಪೀಠವು ಜೈನ ಬಾಂಧವರ ಪ್ರೋತ್ಸಾಹಕ್ಕೆ ಪಾತ್ರವಾಗಿ ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣ ನೀಡುವಲ್ಲಿ ಯಶಸ್ಸುಗಳಿಸಿ ಪ್ರಗತಿ ಪಥದಲ್ಲಿ ಮುನ್ನಡೆದಿದೆ. ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ 5 ರಿಂದ 10ನೇ ತರಗತಿಯವರೆಗಿನ, 2024-25ನೇ ಸಾಲಿನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳ ‌ನೋಂದಣಿ ಆರಂಭವಾಗಿದೆ. ಜೈನ ಪೋಷಕರು/ತಂದೆ ತಾಯಿಯರು ಬಾಲಕರನ್ನು ಈ ವಿದ್ಯಾಸ್ಫೂರ್ತಿ ಸೆಲೆಯ ವಿದ್ಯಾಪೀಠದ ಪ್ರವೇಶಕ್ಕೆ ತಾವು ಹಿಂದಿನ ತರಗತಿಯ ಉತ್ತೀರ್ಣರಾದ ಅಂಕಪಟ್ಟಿ ಹಾಗೂ ಅಲ್ಲಿಯ ಜೈನ ಸಮಾಜದ ಮುಖಂಡರಿಂದ ಪಡೆದ ಪರಿಚಯ ಪತ್ರ, ಮೂಲ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ವಿ.ಸೂ: ಶ್ರೀ ಹೊಂಬುಜ ಪದ್ಮಾವತಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಪರಂಜ್ಯೋತಿ ಆಂಗ್ಲಮಾಧ್ಯಮ ಪ್ರಾಥಮಿಕ ಪಾಠಶಾಲೆಗೆ 8ನೇ ತರಗತಿಯಿಂದ ಅವಕಾಶವಿರುತ್ತದೆ ವ್ಯವಸ್ಥಾಪಕರು, ಶ್ರೀಕುಂದ ಕುಂದ ವಿದ್ಯಾಪೀಠ : 8123924492, 8762180697, 9481249127, 9481944083

ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಬಿಳ್ಕೋಡುಗೆ ಸಮಾರಂಭ

Article Image

ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಬಿಳ್ಕೋಡುಗೆ ಸಮಾರಂಭ

ಸತ್ತೂರು, ಧಾರವಾಡ: ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಏ.16 ರಂದು ಎಸ್.ಡಿ.ಎಂ. ವಿಶ್ವವಿದ್ಯಾಲಯದ ವತಿಯಿಂದ ಬಿಳ್ಕೋಡಲಾಯಿತು. ಸುಮಾರು 13 ವರ್ಷಗಳಿಗಿಂತ ಹೆಚ್ಚು ಕಾಲ ಪ್ರಾಂಶುಪಾಲರು ಮತ್ತು ನರ್ಸಿಂಗ್ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪ್ರೊ. ಡೇವಿಡ್ ಎ. ಕೋಲಾ ಅವರ ಕೊಡುಗೆಗಳನ್ನು ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಶ್ಲಾಘಿಸಿದರು ಮತ್ತು ಎಸ್.ಡಿ.ಎಂ. ನರ್ಸಿಂಗ್ ಕಾಲೇಜಿನ ಬೆಳವಣಿಗೆಗೆ ಅವರ ಸೇವೆ ಅಪಾರ ಕೊಡುಗೆ ನೀಡಿದೆ ಎಂದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ ಕುಮಾರ, ಹಣಕಾಸು ಅಧಿಕಾರಿಯಾದ ವಿ.ಜಿ. ಪ್ರಭು, ಉಪ ಕುಲಸಚಿವರಾದ ಡಾ. ಅಜಂತಾ ಜಿ.ಎ ಸ್. ಅವರು ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಸನ್ಮಾನ ಪತ್ರ, ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು, ವೈದ್ಯಕೀಯ ಅಧೀಕ್ಷಕರು, ಉಪ ವೈದ್ಯಕೀಯ ಅಧೀಕ್ಷಕರು, ಶೂಶ್ರುಷಕ ಅಧೀಕ್ಷಕರು ಮತ್ತು ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನರ್ಸಿಂಗ್ ಕಾಲೇಜಿನ ಹಿರಿಯ ಪ್ರಾಧ್ಯಾಪಕಿಯವರಾದ ಡಾ. ಗಂಗಾಬಾಯಿ ಕುಲಕರ್ಣಿ ಅವರು ಪ್ರೊ. ಡೇವಿಡ್ ಎ. ಕೋಲಾ ಅವರ ಸಮರ್ಪಣಾ ಸೇವೆ ಮತ್ತು ಅವರು ಕಾಲೇಜಿನಲ್ಲಿ ಅನುಸರಿಸಿದ ಶಿಸ್ತು ಬದ್ದತೆಯನ್ನು ಸ್ಮರಿಸಿದರು. ಡಾ. ನಾಗೇಶ ಅಜ್ಜವಾಡಿಮಠ ಅವರು ಸನ್ಮಾನ ಪತ್ರವನ್ನು ವಾಚಿಸಿದರು. ಡಾ. ಪ್ರಸನ್ನ ದೇಶಪಾಂಡೆ ಅತಿಥಿಗಳನ್ನು ಸ್ವಾಗತಿಸಿದರು. ಡಾ. ತಿಲಕ ಜೋಶಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೊ. ಮೆಟಿಲ್ಡಾ ಬಿಜಾಪುರ ವಂದನಾರ್ಪಣೆ ಸಲ್ಲಿಸಿದರು.

ನಾರಾವಿ ಮಾಗಣೆ ಬಸದಿಯಲ್ಲಿ ಪೂಜಾ ಕಾರ್ಯಕ್ರಮ

Article Image

ನಾರಾವಿ ಮಾಗಣೆ ಬಸದಿಯಲ್ಲಿ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ನಾರಾವಿ ಮಾಗಣೆ ಭ| ೧೦೦೮ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಏ.15(ನಾಳೆ )ರಂದು ಶ್ರೀ ಸ್ವಾಮಿಯ ಜಿನ ಬಿಂಬಕ್ಕೆ "ವಜ್ರ ಲೇಪನಾ "ಪ್ರಕ್ರಿಯೆ ಜರುಗಲಿರುವುದು. ಆ ಪ್ರಯುಕ್ತ ಬೆಳಿಗ್ಗೆ 8 ಗಂಟೆಯಿಂದ "ಚೌವ್ವೀಸ ತೀರ್ಥಂಕರ"ರ ಸಾಮೂಹಿಕ ಆರಾಧನಾ ಪೂಜಾ ವಿಧಾನ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಕಳ: ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಪಿ.ಯು.ಸಿ ವಿದ್ಯಾರ್ಥಿಗಳ ಸಾಧನೆ

Article Image

ಕಾರ್ಕಳ: ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಪಿ.ಯು.ಸಿ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ ದಾನಶಾಲೆಯಲ್ಲಿರುವ ಶ್ರೀ ಬಾಹುಬಲಿ ಶ್ರಾವಿಕಾಶ್ರಮದಲ್ಲಿ ವಾಸ್ತವ್ಯವಿದ್ದು, ಹಿರಿಯಂಗಡಿ ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪದವಿಪೂರ್ವ ಕಾಲೇಜಿನ ಪಿ.ಯು.ಸಿ.ಯಲ್ಲಿ ಸಿಂಚನಾ 97% (582-ವಾಣಿಜ್ಯ), ಮಾನ್ಯ 96.8% (581-ವಾಣಿಜ್ಯ), ನಮಿತಾ 96.7% (580-ವಾಣಿಜ್ಯ), ಪ್ರಾಪ್ತಿ 96.5% (579-ವಾಣಿಜ್ಯ), ಅನ್ವೇಶ 96% (578-ವಾಣಿಜ್ಯ), ನಮ್ರತಾ 95.3% (572-ವಾಣಿಜ್ಯ), ಕುಶಿ 91.7% (550-ವಾಣಿಜ್ಯ) ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಆಚಾರ್ಯ ಪದರೋಹಣ ಶತಾಬ್ಧಿ ಮಹೋತ್ಸವ

Article Image

ಆಚಾರ್ಯ ಪದರೋಹಣ ಶತಾಬ್ಧಿ ಮಹೋತ್ಸವ

ಹುಬ್ಬಳ್ಳಿಯ ದಿಗಂಬರ ಜೈನ ಬೋರ್ಡಿಂಗ್ ಆಯೋಜಿಸಿರುವ ಚಾರಿತ್ರ ಚಕ್ರವರ್ತಿ ಪ. ಪೂ. ಪ್ರಥಮಾಚಾರ್ಯ ಶ್ರೀ ೧೦೮ ಶಾಂತಿಸಾಗರ ಮುನಿ ಮಹಾರಾಜರ ಆಚಾರ್ಯ ಪದರೋಹಣ ಶತಾಬ್ಧಿ ಮಹೋತ್ಸವ ಸಮಾರಂಭವು ಪ. ಪೂ. ಅಭಿಕ್ಷಜ್ಞಾನ ಬಾಸ್ಕರ ಶ್ರೀ ೧೦೮ ಪುಣ್ಯಸಾಗರ ಮುನಿಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ಕ್ಷೇತ್ರ ವರೂರು ನವಗ್ರಹ ತೀರ್ಥದ, ಪ. ಪೂ. ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮೀಜಿಗಳವರ ಮತ್ತು ಸೋಂದಾ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಏ. 14 (ನಾಳೆ) ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸೋಂದಾ: ಶ್ರೀ ಸ್ವಾದಿ ದಿಗಂಬರ ಜೈನ ಮಠದ ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ

Article Image

ಸೋಂದಾ: ಶ್ರೀ ಸ್ವಾದಿ ದಿಗಂಬರ ಜೈನ ಮಠದ ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ

ಮಲೆನಾಡಿನ ಶಿರಸಿ ತಾಲೂಕಿನ ಸೋಂದಾದ ಶ್ರೀ ಸ್ವಾದಿ ದಿಗಂಬರ ಜೈನ ಮಠದ ಅತೀ ಪ್ರಾಚೀನ ಬಸದಿಯಾದ ಮುತ್ತಿನಕೆರೆಯ ಶ್ರೀ ಆದಿನಾಥ ಸ್ವಾಮಿ ಬಸದಿಯು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಈ ಬಸದಿಯನ್ನು 10ನೇ ಶತಮಾನದಲ್ಲಿ ಶ್ರೀ ಜಿನದೇವಣ್ಣ, 16ನೇ ಶತಮಾನದಲ್ಲಿ ಶ್ರೀ ಅರಸಪ್ಪನಾಯಕ, 1996ರಲ್ಲಿ ಹಿಂದಿನ ಭಟ್ಟಾರಕರು ಶಿಥಿಲವಾದ ಬಸದಿಯನ್ನು ಜೀರ್ಣೋದ್ಧಾರ ಮಾಡಿಸಿದ್ದಾರೆ. ಈಗ ಪುನಃ ಶಿಥಿಲಗೊಂಡ ಬಸದಿಯನ್ನು ಸಂಪೂರ್ಣವಾಗಿ ಶಿಲಾಮಯವಾಗಿ ಜೀರ್ಣೋದ್ಧಾರ ಮಾಡಬೇಕೆಂದು ಸಂಕಲ್ಪ ಮಾಡಿ ಭಗವಂತರನ್ನು ಬಾಲಾಲಯದಲ್ಲಿ ಸ್ಥಾಪಿಸಲಾಗಿದೆ. ಈ ಬಸದಿಯ ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮವು ಯುಗಳ ಮುನಿಗಳಾದ ೧೦೮ ಮುನಿಶ್ರೀ ಅಮರಕೀರ್ತಿ ಮಹಾರಾಜರು ಮತ್ತು ೧೦೮ ಮುನಿಶ್ರೀ ಅಮೋಘಕೀರ್ತಿ ಮಹಾರಾಜರ ಪಾವನ ಸಾನಿಧ್ಯದಲ್ಲಿ ಹಾಗೂ ಪ. ಪೂ. ಸ್ವಸ್ತಿಶ್ರೀ ಭಟ್ಟಾಕಲಂಕ ಸ್ವಾಮೀಜಿಗಳವರ ಮಾರ್ಗದರ್ಶನ, ಪ. ಪೂ. ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಏ.12ರಂದು (ನಾಳೆ) ನೆರವೇರಲಿದೆ.

ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Article Image

ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

ಬೆಳ್ತಂಗಡಿ ತಾಲೂಕಿನ ವೇಣೂರಿನ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. “ಭಾರತ ಭೂಷಣ” ಜಗದ್ಗುರು ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಏ. 13ರಂದು ಜರಗಲಿರುವುದು. ನಿರೀಕ್ಷಾ ಜೈನ್ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ವಿ. ಸೂ.: ವಿವಿಧ ದ್ರವ್ಯಗಳ ಅಭಿಷೇಕ ಮತ್ತು ಜಲಾಭಿಷೇಕ ಮಾಡಲಿಚ್ಚಿಸುವ ಧರ್ಮ ಬಂಧುಗಳು ಯಾತ್ರಿನಿವಾಸದಲ್ಲಿರುವ ಕಚೇರಿ ದೂರವಾಣಿ: 9606356288ನ್ನು ಸಂಪರ್ಕಿಸಬಹುದು.

ಶ್ರೀ ಕ್ಷೇತ್ರ ಕತ್ತೋಡಿಯಲ್ಲಿ ಸಂಕ್ರಮಣ

Article Image

ಶ್ರೀ ಕ್ಷೇತ್ರ ಕತ್ತೋಡಿಯಲ್ಲಿ ಸಂಕ್ರಮಣ

ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಶ್ರೀ ಕ್ಷೇತ್ರ ಕತ್ತೋಡಿಯ ಶಿವಭುವನೇಶ್ವರಿ ದೇಗುಲದಲ್ಲಿ ಮೇಷ ಸಂಕ್ರಮಣವು ಏ.13ರಂದು ನಡೆಯಲಿದೆ. ವಿ. ಸೂ.: ತುಪ್ಪದ ಸೇವೆ, ಹೂವಿನ ಪೂಜೆ ಹಾಗೂ ಮತ್ತಿತರ ಸೇವೆಗಳು ಇರಲಿದೆ. ಈ ಎಲ್ಲಾ ಸೇವೆಗಳನ್ನು ಮಾಡಲಿಚ್ಚಿಸುವವರು ಧರ್ಮದರ್ಶಿಗಳು: 94449714337 ನ್ನು ಸಂಪರ್ಕಿಸಬಹುದು.

ಭಾರತೀಯ ಜೈನ್ ಮಿಲನ್ ಕಾರ್ಕಳ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

Article Image

ಭಾರತೀಯ ಜೈನ್ ಮಿಲನ್ ಕಾರ್ಕಳ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ : ಭಾರತೀಯ ಜೈನ್ ಮಿಲನ್ ಕಾರ್ಕಳ ಇದರ 2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಾಹುಬಲಿ ಅರ್ಥ್ ಮೂವರ್ಸ್ ಮಾಲಕ ಅಶೋಕ್ ಎಚ್. ಎಂ., ಕಾರ್ಯದರ್ಶಿಯಾಗಿ ವಕೀಲ ವಿಖ್ಯಾತ್ ಜೈನ್ ಆಯ್ಕೆಯಾಗಿದ್ದಾರೆ. ಎ. 7ರಂದು ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅರ್ಥ್ ಮೂವರ್ಸ್ ಯೂನಿಯಾನ್ ಕಾರ್ಯದರ್ಶಿಯಾಗಿರುವ ಅಶೋಕ್ ಅವರು ಈ ಹಿಂದೆ ಜೈನ್ ಮಿಲನ್ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ವಿಖ್ಯಾತ್ ಅವರು ಜೈನ್ ಯುವ ಬ್ರಿಗೇಡ್ ಸಂಚಾಲಕರಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಮತ್ ಕುಮಾರ್ ಬಂಗ ಹಾಗೂ ಖಜಾಂಚಿಯಾಗಿ ಸುರೇಶ್ ಇಂದ್ರ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಜೈನ ಜೀರ್ಣೋದ್ದಾರ ಸಂಘದ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್, ಕಾರ್ಯದರ್ಶಿ ಎಂ. ಕೆ. ವಿಜಯ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಜಿತೋ ಸಂಸ್ಥೆ ವತಿಯಿಂದ ಜೈನ ಸಮಾಜದ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಉಚಿತ ತರಬೇತಿ

Article Image

ಜಿತೋ ಸಂಸ್ಥೆ ವತಿಯಿಂದ ಜೈನ ಸಮಾಜದ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಉಚಿತ ತರಬೇತಿ

ಬೆಳಗಾವಿ, ಏ.6: ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ್ ಜಿತೋ ಸಂಸ್ಥೆಯ ವತಿಯಿಂದ ಕಳೆದ 11 ವರ್ಷಗಳಿಂದ ಜೈನ ಸಮಾಜದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ದತೆಗಾಗಿ ಉಚಿತ ತರಬೇತಿಯನ್ನು ನೀಡುತ್ತ ಬಂದಿದೆ. ಈ ವರ್ಷವೂ ಸಹ ಜಿತೋ ಸಂಸ್ಥೆಯ ವತಿಯಿಂದ ಯುಪಿಎಸ್‌ಸಿ ಪರೀಕ್ಷೆಯ ಸಿದ್ದತೆಗಾಗಿ ಉಚಿತ ತರಬೇತಿಯನ್ನು ನೀಡಲಿದೆ. ವಿದ್ಯಾರ್ಥಿಗಳು ಹೆಸರು ನೋಂದಾಯಿಸುವುದು ಕಡ್ಡಾಯವಾಗಿರುತ್ತದೆ. ಹೆಸರು ನೋಂದಣಿಗೆ ಯಾವುದೇ ಶುಲ್ಕ ಇರುವುದಿಲ್ಲ. ಹೆಸರು ನೋಂದಣಿ ಮಾಡುವ ಕೊನೆಯ ದಿನಾಂಕ 24-04-2024 ಆಗಿದ್ದು, ಈ ಅವಧಿಯೊಳಗೆ ಹೆಸರು ನೊಂದಾಯಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕುಂತಿನಾಥ ಕಲಮನಿ ಮೊ: 94804-48108 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶ್ರೀ ಅನಂತನಾಥಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವ

Article Image

ಶ್ರೀ ಅನಂತನಾಥಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವ

ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರು ಬಸದಿ ಭಗವಾನ್ ೧೦೦೮ ಶ್ರೀ ಅನಂತನಾಥಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವ 09-04-2024ನೇ ಮಂಗಳವಾರ ಮೊದಲ್ಗೊಂಡು 15-04-2024ನೇ ಸೋಮವಾರ ಪರ್ಯಂತ ನಡೆಯಲಿದೆ. 14-04-2024ನೇ ಭಾನುವಾರ ಮಹಾರಥಯಾತ್ರಾ ಮಹೋತ್ಸವ ಜರಗಲಿರುವುದು.

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ ಪ್ರಬಂಧ ಸ್ಪರ್ಧೆ

Article Image

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ 'ಪ್ರಾತಃಸ್ಮರಣೀಯ ಪ.ಪೂ. ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜರು, ಭ. ಮಹಾವೀರ ಸ್ವಾಮಿಯವರ ಅಹಿಂಸಾ ಪರಮೋ ಧರ್ಮ ಸಂದೇಶವನ್ನು ಜಗತ್ತಿಗೆ ಪಂಚಮಕಾಲದಲ್ಲಿ ಪರಿಚಯಿಸಿದ ಮಹಾಸಂತರು' ಈ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ವಂತ ಕೈ ಬರಹದಲ್ಲಿ ಬರೆದ ಪ್ರಬಂಧ 2 ಪುಟ ಮೀರದಂತಿರಬೇಕು. ಪ್ರಬಂಧವನ್ನು ದಿನಾಂಕ 10-04-2024ರ ಒಳಗಾಗಿ ಕಳುಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವೈ.ಡಿ. ರತ್ನಾಕರ್ : ದೂ. 9886589725, 7892159744 ಇವರನ್ನು ಸಂಪರ್ಕಿಸಬಹುದು.

ವೇಣೂರು: ಸುರಭಿ ಮನೆ ಶ್ರೀಮತಿ ವಸಂತಿ ನಿಧನ

Article Image

ವೇಣೂರು: ಸುರಭಿ ಮನೆ ಶ್ರೀಮತಿ ವಸಂತಿ ನಿಧನ

ಬೆಳ್ತಂಗಡಿ ತಾಲೂಕಿನ ವೇಣೂರು, ಬಜಿರೆ ಗ್ರಾಮದ ಸುರಭಿ ಮನೆ ನಿವಾಸಿ, ಬಿ. ರತ್ನವರ್ಮ ಇಂದ್ರರ ಧರ್ಮಪತ್ನಿ ಶ್ರೀಮತಿ ವಸಂತಿ (76ವ) ಇವರು ಇಂದು (ಎ.1) ನಿಧನ ಹೊಂದಿದರು. ಇವರು ಮಕ್ಕಳಾದ ಪ್ರಮೋದ್ ಕುಮಾರ್, ಶುಭ, ಮತ್ತು ಪೂರ್ಣಿಮಾ, ಸವಿತ, ಸುಧೀರ್ ಕುಮಾರ್ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಬೈಪಾಡಿ : ಭಗವಾನ್ 1008 ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣೆ

Article Image

ಬೈಪಾಡಿ : ಭಗವಾನ್ 1008 ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣೆ

ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ 1008 ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣೆ ಮತ್ತು ನೂತನ ಏಕಶಿಲಾ ಮಾನಸ್ತಂಭೋಪರಿ ಚತುರ್ಮುಖ 1008 ಶ್ರೀ ಶಾಂತಿನಾಥ ತೀರ್ಥಂಕರರ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ನೇತೃತ್ವದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಜೈನ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಎ. 1 ರಂದು ಪ್ರಾರಂಭಗೊಂಡು ಎ.3ರ ತನಕ ನೆರವೇರಲಿರುವುದು.

ಉಜಿರೆ : “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

Article Image

ಉಜಿರೆ : “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುವ “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಛಿಸುವ ಬಡ, ಹಿಂದುಳಿದ ಹಾಗೂ ಕೃಷಿಕ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಇಲ್ಲಿ ನಮ್ಮ ಆಯ್ಕೆ ಪರೀಕ್ಷೆಗೆ ಹಾಜರಾಗಿ ಮೂರು ದಿನ ರತ್ನಮಾನಸದಲ್ಲಿ ಉಳಿದು ಇಲ್ಲಿನ ಪರಿಸರ ಹಾಗೂ ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಕ್ರಮವನ್ನು ಅಳವಡಿಸಿಕೊಳ್ಳುವ ಅಂಗವಾಗಿ ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವ-ಉದ್ಯೋಗ ತರಬೇತಿಯನ್ನು ನೀಡಲಾಗುವುದು. ಇಲ್ಲಿನ ಜೀವನ ಶಿಕ್ಷಣ ಕ್ರಮದ ಮಾಹಿತಿಯನ್ನು ಪಡೆದ ಬಳಿಕ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಯ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ದಿನಾಂಕ 05-04-2024ರಿಂದ ಅರ್ಜಿಗಳನ್ನು ನೀಡಲಾಗುವುದು ಮತ್ತು 25-04-2024ರಂದು ಅರ್ಜಿ ನೀಡಲು ಕೊನೆಯ ದಿನಾಂಕವಾಗಿರುತ್ತದೆ. ವಿ.ಸೂ. : ಆಂಗ್ಲಮಾಧ್ಯಮ, 9ನೇ ಮತ್ತು 10ನೇ ತರಗತಿ ದಾಖಲಾತಿಗೆ ಅವಕಾಶವಿರುವುದಿಲ್ಲ. ಹಾಗೂ ಹುಡುಗಿಯರಿಗೆ ದಾಖಲಾತಿ ಇರುವುದಿಲ್ಲ. ಅರ್ಜಿಯನ್ನು ರತ್ನಮಾನಸ ವಸತಿ ನಿಲಯದಲ್ಲಿಯೇ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 08023901791, 9480351201, 9449244425, 9901546846

ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವಾರ್ಷಿಕ ರಥಯಾತ್ರಾ ಮಹೋತ್ಸವ

ನರಸಿಂಹರಾಜಪುರ, ಶ್ರೀಕ್ಷೇತ್ರ ಸಿಂಹನಗದ್ದೆ ಬಸ್ತಿಮಠದ ಭಗವಾನ್ ಶ್ರೀ 1008 ಚಂದ್ರಪ್ರಭ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಜ್ವಾಲಾಮಾಲಿನಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಪ.ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮಾ.31ರಂದು ಪ್ರಾರಂಭಗೊಂಡು ಎ. 4ರವರೆಗೆ ಜರಗಲಿದೆ.

ಹೊಂಬುಜ: ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ಹೊಂಬುಜ: ವಾರ್ಷಿಕ ರಥಯಾತ್ರಾ ಮಹೋತ್ಸವ

ಶ್ರೀ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಪರಂಪರಾನುಗತವಾಗಿ ನಡೆದು ಬಂದಿರುವ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಪ. ಪೂ. ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದಿನಿಂದ (ಮಾ. 29) ಮೊದಲ್ಗೊಂಡು ಏ.3ರವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರಗಲಿರುವುದು.

ವಾಲ್ಪಾಡಿ ಗ್ರಾಮದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

Article Image

ವಾಲ್ಪಾಡಿ ಗ್ರಾಮದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವವು ಮೂಡಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ, ನೇತೃತ್ವ ಮತ್ತು ಪಾವನ ಸಾನ್ನಿಧ್ಯದಲ್ಲಿ, ಮಂಡ್ಯ ಶ್ರೀ ಕ್ಷೇತ್ರ ಆರತಿಪುರದ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯೊಂದಿಗೆ ಮಾ.28ರಿಂದ ಮೊದಲ್ಗೊಂಡು ಮಾ.30ರವರೆಗೆ ಜೈನ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಜರಗಲಿರುವುದು.

ಶ್ರೀ ಚಕ್ರೇಶ್ವರಿ ಮಹಿಳಾ ಸಮಾಜದ ವತಿಯಿಂದ ಸಂತೆ ಆಯೋಜನೆ

Article Image

ಶ್ರೀ ಚಕ್ರೇಶ್ವರಿ ಮಹಿಳಾ ಸಮಾಜದ ವತಿಯಿಂದ ಸಂತೆ ಆಯೋಜನೆ

ಬೆಂಗಳೂರಿನ ಶ್ರೀ ಚಕ್ರೇಶ್ವರಿ ಮಹಿಳಾ ಸಮಾಜದ ವತಿಯಿಂದ ಜಯನಗರದಲ್ಲಿ ಮಾ.31 ರಂದು ಸಂತೆ ಆಯೋಜನೆ ಮಾಡಲಾಗಿದೆ. ಈ ಸಂತೆಯಲ್ಲಿ ಕರಕುಶಲ ವಸ್ತುಗಳು, ರುಚಿಕರವಾದ ತಿಂಡಿ ತಿನಿಸುಗಳು (ಜೈನ ತಿಂಡಿ ತಿನಿಸುಗಳು), ವಿವಿಧ ವಸ್ತುಗಳು, ಸೀರೆಗಳು, ಇತರ ಯಾವದಾದರೂ ವಸ್ತುಗಳನ್ನು ಮಾರಾಟ ಮಾಡಲು ಮಳಿಗೆಯನ್ನು ಹಾಕಬಹುದು. ಒಂದು ಮಳಿಗೆಗೆ 200 ರೂಪಾಯಿ ಆಗಿರುತ್ತದೆ. ನೊಂದಾಯಿಸಲು ಕೊನೆಯ ದಿನಾಂಕ 29-03-2024. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9008817766, 9980875624

ಮಹಾವೀರ ತೀರ್ಥಂಕರರ 2550ನೇ ಜನ್ಮಕಲ್ಯಾಣದ ನಿಮಿತ್ತವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

Article Image

ಮಹಾವೀರ ತೀರ್ಥಂಕರರ 2550ನೇ ಜನ್ಮಕಲ್ಯಾಣದ ನಿಮಿತ್ತವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ತೇರದಾಳ ಶ್ರೀ ವಾಸುಪೂಜ್ಯ ವೀತರಾಗ ದಿಗಂಬರ ಜೈನ ಮಂದಿರದ ವತಿಯಿಂದ ಭಗವಾನ ಶ್ರೀ 1008 ಮಹಾವೀರ ತೀರ್ಥಂಕರರ 2550ನೇ ಜನ್ಮಕಲ್ಯಾಣದ ನಿಮಿತ್ತವಾಗಿ ಪ.ಪೂ. ಸಂತ ಶಿರೋಮಣಿ ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜರ ಜೀವನ, ತಪ, ತ್ಯಾಗ ಮತ್ತು ಪ್ರೇರಣಾ ಕಾರ್ಯಗಳು ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನು ಒಳಗೊಂಡಿರುತ್ತದೆ. ಸೂಚನೆಗಳು:- * ಪ್ರಬಂಧವನ್ನು A4 ಸೀಟ್‌ನಲ್ಲಿ ಒಂದೇ ಮಗ್ಗುಲಿನಲ್ಲಿ ಬರೆಯಬೇಕು. 10 ಪುಟ ಮೀರದಂತೆ ಇರಬೇಕು. * ಶುದ್ಧ ಕೈ ಬರಹ ಅಥವಾ ಟೈಪ್ ಮಾಡಬಹುದು. * ಪ್ರಬಂಧ ಬರೆಯಲು ವಯಸ್ಸಿನ ಮಿತಿ ಇಲ್ಲ. * ಪ್ರಬಂಧ ಬರೆಯುವವರ ಹೆಸರು, ವಿಳಾಸ, ವಾಟ್ಸ್ಆಪ್ ನಂಬರ್ ಕಡ್ಡಾಯವಾಗಿ ನಮೂದಿಸಬೇಕು. * ಪ್ರಬಂಧವನ್ನು ಕನ್ನಡ ಭಾಷೆಯಲ್ಲಿ ಮಾತ್ರ ಬರೆಯಬೇಕು. * ಆಯೋಜಕರ ತೀರ್ಮಾನ ಅಂತಿಮವಾಗಿರುತ್ತದೆ. * ಪ್ರಬಂಧ ಕಳುಹಿಸುವ ಕೊನೆಯ ದಿನಾಂಕ 16-04-2024 * ಪ್ರಬಂಧ ಕಳುಹಿಸುವ ವಿಳಾಸ- ಸಂತೋಷ ಶೆಟ್ಟಿ, ಗುರುಕುಲ ರೋಡ್, ಟೀಚರ್ ಕಾಲೋನಿ, A/Po ತೇರದಾಳ, 587315 ತಾ: ರಬಕವಿ-ಬನಹಟ್ಟಿ ಜಿ: ಬಾಗಲಕೋಟ * ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ- 9164896108, 7019326565, 8951742543 * ಪ್ರಬಂಧದಲ್ಲಿ ಭಾಗವಹಿಸುವ ಎಲ್ಲರಿಗೂ ಬಹುಮಾನ ನೀಡಲಾಗುವುದು.

First Previous

Showing 5 of 8 pages

Next Last