Article Image

ಡಾ. ಪ್ರಭಾತ್ ಬಲ್ನಾಡು ಪ್ರಾಂಶುಪಾಲರಾಗಿ ಪದೋನ್ನತಿ

Article Image

ಡಾ. ಪ್ರಭಾತ್ ಬಲ್ನಾಡು ಪ್ರಾಂಶುಪಾಲರಾಗಿ ಪದೋನ್ನತಿ

ಮೂಡುಬಿದಿರೆಯ 52 ವರ್ಷಗಳ ಇತಿಹಾಸವನ್ನು ಹೊಂದಿರುವ ಜೈನ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಪ್ರಭಾತ್ ಬಲ್ನಾಡು ಪೇಟೆಯವರು ಪದೋನ್ನತಿ ಹೊಂದಿದ್ದಾರೆ. 1999ರಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆಯಲ್ಲಿ ಉಪನ್ಯಾಸ ವೃತ್ತಿ ಆರಂಭಿಸಿದ ಇವರು ಕಳೆದ 22 ವರ್ಷಗಳಿಂದ ಜೈನ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯಕ್ಷಗಾನ ಕಲಾವಿದರಾಗಿ, ಸಂಘಟಕರಾಗಿ, ಆಕಾಶವಾಣಿ ಹಾಗೂ ಟಿವಿ ಮಾಧ್ಯಮಗಳ ಸಂಪನ್ಮೂಲ ವ್ಯಕ್ತಿಯಾಗಿ, ಇತಿಹಾಸ ಸಂಶೋಧಕರಾಗಿ, ಲೇಖಕರಾಗಿ, ಜೆಸಿಐ ತರಬೇತುದಾರರಾಗಿ, ಅಧ್ಯಕ್ಷರಾಗಿ ಹತ್ತಾರು ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಇವರು ಹಿರಿಯ ಯಕ್ಷಗಾನ ಸಂಘಟಕ ಮರ್ಕಂಜದ ಯುವರಾಜ ಜೈನ್ ಮತ್ತು ಪ್ರಸನ್ನ ದಂಪತಿಗಳ ಪುತ್ರ.

ಹಾಸನ: ಡಾ. ಎಸ್. ಎ. ನಿತಿನ್ ನೇಮಕ

Article Image

ಹಾಸನ: ಡಾ. ಎಸ್. ಎ. ನಿತಿನ್ ನೇಮಕ

ಬೆಂಗಳೂರಿನ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಸದಸ್ಯರನ್ನಾಗಿ ಡಾ.ಎಸ್.ಎ ನಿತಿನ್ ಅವರನ್ನು ನೇಮಕ ಮಾಡಲಾಗಿದೆ. ಇವರು ಪ್ರಸ್ತುತ ನಗರದ ರಾಜೀವ್ ಗಾಂಧಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವೇಣೂರು : ಮಾ. 25ರಂದು ಭಗವಾನ್‌ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ, ಮಹೋತ್ಸವ ಹಾಗೂ ಮಹಾಪೂಜೆ

Article Image

ವೇಣೂರು : ಮಾ. 25ರಂದು ಭಗವಾನ್‌ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ, ಮಹೋತ್ಸವ ಹಾಗೂ ಮಹಾಪೂಜೆ

ಬೆಳ್ತಂಗಡಿ ತಾಲೂಕಿನ ವೇಣೂರಿನ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವು ಇತ್ತೀಚೆಗೆ ಸಂಪನ್ನಗೊಂಡಿದ್ದು, ಇದೀಗ ಮಾ. 25ರಂದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವದ ದಿನವಾಗಿದ್ದು, ಆ ಪ್ರಯುಕ್ತ ನಾಳೆ (ಮಾ. 25)ರಂದು ಸಾಯಂಕಾಲ ಗಂಟೆ 6.00ರಿಂದ ಭ|| ಶ್ರೀ ಬಾಹುಬಲಿ ಸ್ವಾಮಿಗೆ ೫೪ ಕಲಶಗಳಿಂದ ಪಾದಾಭಿಷೇಕ, ಮಹೋತ್ಸವ ಹಾಗೂ ಮಹಾಪೂಜೆಯು ನೆರವೇರಲಿದೆ ಎಂದು ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಪ್ರಕಟಣೆ ತಿಳಿಸಿದೆ.

ದರೆಗುಡ್ಡೆ: ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಸಿದ್ಧರ ಪಂಚಾಮೃತ ಅಭಿಷೇಕ

Article Image

ದರೆಗುಡ್ಡೆ: ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಸಿದ್ಧರ ಪಂಚಾಮೃತ ಅಭಿಷೇಕ

ದ.ಕ.ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕೆಲ್ಲಪುತ್ತಿಗೆ- ದರೆಗುಡ್ಡೆ ಗ್ರಾಮದ ಭಗವಾನ್ ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಸಿದ್ಧರ ಪಂಚಾಮೃತ ಅಭಿಷೇಕ ಮತ್ತು ಅಷ್ಟಮ ನಂದೀಶ್ವರದ ಐವತ್ತೆರಡು ನೂತನ ಜಿನ ಬಿಂಬಗಳಿಗೆ ಮಹಾಭಿಷೇಕವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವ ಮತ್ತು ಆಶೀರ್ವಚನದೊಂದಿಗೆ ಮಾ.24 ರಂದು ನೆರವೇರಲಿರುವುದು.

ಮರುಕಳಿಸಿದ ಹಂತೂರಿನ ಗತವೈಭವ: ಸರ್ವಧರ್ಮ ಸಮನ್ವಯತೆಯ ಕ್ಷೇತ್ರ

Article Image

ಮರುಕಳಿಸಿದ ಹಂತೂರಿನ ಗತವೈಭವ: ಸರ್ವಧರ್ಮ ಸಮನ್ವಯತೆಯ ಕ್ಷೇತ್ರ

ಮೂಡಿಗೆರೆ, ಮಾ. 22: ಹೊಯ್ಸಳ ಸಾಮ್ರಾಜ್ಯದ ನಾಡದ ಹಂತೂರು ವೈಭವದಿಂದ ಮೆರೆದ ನಾಡಾಗಿತ್ತು, ಶಿಲ್ಪಕಲೆಗೆ ಹೆಸರಾಗಿತ್ತು, ಹೊಯ್ಸಳ ಸಾಮ್ರಾಜ್ಯದ ಉಗಮ ಸ್ಥಾನ ಸಮೀಪದ ಅಂಗಡಿ ಗ್ರಾಮವೇ ಆಗಿತ್ತು, ಅಹಿಂಸಾ ವೈಭವದಿಂದ ಮೆರೆದ ನಾಡು, ಕಾಲಚಕ್ರಕ್ಕೆ ಸಿಲುಕಿ ಅವನತಿಯಾಯಿತು, ಸರ್ವಧರ್ಮ ಜನರ ಸಹಕಾರ, ಧಾರ್ಮಿಕ ಮನೋಭಾವ, ಶಾಂತಿ ಅಹಿಂಸೆ ಫಲವಾಗಿ ಇಂದು ಶಿಲ್ಪಕಲಾ ಬಸದಿಯ ಪುನರ್ ನಿರ್ಮಾಣದಿಂದ ಈ ಹಿಂದಿನ ಗತವೈಭವ ಮರುಕಳಿಸಿದೆ ಎಂದು ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹೇಳಿದರು. ಅವರಿಂದು ಹಂತೂರಿನ ಶ್ರೀ ಪಾರ್ಶ್ವನಾಥ ಜಿನ ಮಂದಿರದ ಧಾಮಸಂಪ್ರೋಕ್ಷಣಾಪೂರ್ವಕ ಪಂಚಕಲ್ಯಾಣ ಮಹೋತ್ಸವ ಸಹಿತ ಮಾನಸ್ತಂಭೋಪರಿ ಚತುರ್ಮುಖ ಬಿಂಬ ಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮದಲ್ಲಿ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇಲ್ಲಿನ ಜನ, ಧರ್ಮ ಕಾರ್ಯಕ್ಕೆ ಆದ್ಯತೆ ನೀಡುತ್ತಿದ್ದು, ಯಾವುದೇ ತಪ್ಪು ಒಪ್ಪುಗಳಿಗೆ ಜಟ್ಟಿಂಗರಾಯನ ಆಶ್ರಯಿಸುತ್ತಾರೆ. ಇಂತಹ ಧರ್ಮಭೂಮಿಯಲ್ಲಿ ಬಿಟ್ಟಿದೇವ, ಶಾಂತಲೆ, ಹರಿಯಲೇ, ಶಿಲ್ಪಕಲಾ ಬಸದಿ ಕಟ್ಟಿಸಿದರು, ಈ ಬಸದಿ ಸಂರಕ್ಷಣೆಯಲ್ಲಿ ಸ್ಥಳೀಯ ಗ್ರಾಮಸ್ಥರ ಕೊಡುಗೆ ಅಪಾರ. ಸ್ಥಳೀಯ ಜನರು ಹಾಗೂ ಕಳಸ ಭಾಗದ 8 ಸೀಮೆಯ ಜನರ ಸಹಕಾರದಿಂದ ಈ ಬಸದಿ ಜೀರ್ಣೋದ್ಧಾರಗೊಂಡಿದೆ ಎಂದರು. ಇಲ್ಲಿಯ ಜನ ಶ್ರೀಮಂತಿಕೆ ಜನರು ಇಲ್ಲಿನ ಪದ್ಮಾವತಿ ಮೂರ್ತಿ ಮನಮೋಹಕವಾಗಿದೆ. ಈ ಗತ ವೈಭವಕ್ಕೆ ಜನಸಾಗರವೇ ಹರಿದು ಬರುತ್ತಿದೆ ಎಂದು ಹೇಳಿದರು. ಬಳಿಕ ಕಂಬದಹಳ್ಳಿ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹೆಚ್.ಏನ್.ಸುಬ್ಬೆ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೂಡಿಗೆರೆ ಹಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾನಾಗರಾಜ್, ಮಾಜಿ ಶಾಸಕ ಬಿ. ಬಿ. ನಿಂಗಯ್ಯ, ಅಶೋಕ್ ಗೌಡ, ಕೆ. ಸಿ. ಧರಣೇಂದ್ರಯ್ಯ, ವಿಮಲ್ ತಾಳಿಕೋಟೆ, ಶ್ರೀಪಾಲಯ್ಯ, ಎಚ್. ಕೆ. ಸುದರ್ಶನ್, ಪ್ರಶಾಂತ್ ಚಿತ್ರಗುತ್ತಿ, ತೇಜು ಕುಮಾರ್ ಕಟೋರಿಯ, ಪಾಶ್ವನಾಥ, ಜಿ. ಬಿ. ಸನ್ಮತಿ ಕುಮಾರ್, ಶೈಲಾ ಹರೀಶ್, ಭರತ್‌ರಾಜು, ಎಳನೀರು ಕೀರ್ತಿ ಜೈನ್, ಬಿ. ಎಲ್. ಜಿನರಾಜ ಇಂದ್ರ, ಬ್ರಹ್ಮಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕ್ಷೇತ್ರದ ಏಳಿಗೆಗೆ ಸಹಕರಿಸಿದ ಸ್ಥಳೀಯರನ್ನು, ಹಲವಾರು ಗಣ್ಯರನ್ನು ಸನ್ಮಾನಿಸಲಾಯಿತು. ಹೊರನಾಡು ಅರ್ಕಕೀರ್ತಿರವರು ಪ್ರಾರ್ಥಿಸಿದರು. ಎಚ್. ಸಿ. ಅಣ್ಣಯ್ಯ ಸ್ವಾಗತಿಸಿದರು. ಪ್ರದೀಪ್ ಕುಮಾರ್ ತಡಪಾಲು ಪ್ರಾಸ್ತಾವಿಕ ನುಡಿಗಳನ್ನಾಡಿದರು. -ಜೆ. ರಂಗನಾಥ, ತುಮಕೂರು

ಮಾ. 24 : ಕಣ್ಣಿನ ಉಚಿತ ತಪಾಸಣೆ - ಪೊರೆ ಶಸ್ತ್ರಚಿಕಿತ್ಸಾ ಶಿಬಿರ

Article Image

ಮಾ. 24 : ಕಣ್ಣಿನ ಉಚಿತ ತಪಾಸಣೆ - ಪೊರೆ ಶಸ್ತ್ರಚಿಕಿತ್ಸಾ ಶಿಬಿರ

ಕಾರ್ಕಳ : ಜಿನವಾಣಿ ಮಹಿಳಾ ಸಂಘ ದಾನಶಾಲೆ ಮತ್ತು ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಾ. 24ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾರ್ಕಳ ಜೈನ ಮಠದ ಬಳಿಯಿರುವ ಸಭಾಂಗಣದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ: 9880015655 (ಸುಮನಾಜಿ), 9844511211 (ಹರ್ಷ) ಅಥವಾ 9591918216 (ವಿಶುಕುಮಾರ್) ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂ. ಎಂ. ಜಿನೇಂದ್ರರವರ ಜೀವನ ಯಶೋಗಾಥೆ ಕೃತಿ ಶ್ರೀಘ್ರದಲ್ಲಿ ಲೋಕಾರ್ಪಣೆ

Article Image

ಎಂ. ಎಂ. ಜಿನೇಂದ್ರರವರ ಜೀವನ ಯಶೋಗಾಥೆ ಕೃತಿ ಶ್ರೀಘ್ರದಲ್ಲಿ ಲೋಕಾರ್ಪಣೆ

ಇತ್ತೀಚೆಗೆ ರಚಿತಗೊಂಡಿರುವ ಖ್ಯಾತ ಛಾಯಾಗ್ರಾಹಕ ಚಿತ್ತ ಜಿನೇಂದ್ರರವರ ಜೀವನ ಯಶೋಗಾಥೆಯಾದ "ಸವ್ಯಸಾಚಿ ಕಲಾವಿದ ಜಿನೇಂದ್ರ" ಎಂಬ ಕೃತಿ ಕೆಲವೇ ದಿನಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ತುಮಕೂರಿನ ಹಿರಿಯ ಸಾಹಿತಿ ಡಾ. ಎಸ್. ಪಿ. ಪದ್ಮಪ್ರಸಾದ್ ಜೈನ್ ರವರಿಂದ ರಚಿತವಾದ ಈ ಕೃತಿಗೆ ಹಿರಿಯ ಸಾಹಿತಿ, ನಾಡೋಜ ಹಂಪ ನಾಗರಾಜಯ್ಯ (ಹಂಪನಾ) ಮುನ್ನುಡಿ ಬರೆದಿದ್ದು, ಈ ಕೃತಿಯನ್ನು ಬೆಂಗಳೂರಿನ ಕರ್ನಾಟಕ ಪುರಾತತ್ವ ಮತ್ತು ಸಾಹಿತ್ಯ ಪರಿಷತ್ ಹೊರತುರುತ್ತಿದ್ದು ವಿಶಿಷ್ಟ ಕಲ್ಪನೆಯಲ್ಲಿ ಮೂಡಿಬರುತ್ತದೆ. ಕೃತಿಯಲ್ಲಿ ಎಂ.ಎಂ. ಜಿನೇಂದ್ರ ಅವರ ಜೀವನ, ಸವೆಸಿದ ಹಾದಿ, ಬೆಳೆದ ನೋಟ, ಅವರು ರಚಿಸಿದ ಕಲಾಕೃತಿಗಳ ಗುಚ್ಛವೇ ಈ ಕೃತಿಯಲ್ಲಿ ಅಡಗಿದೆ. ಸಾಂಪ್ರದಾಯಿಕ ಚಿತ್ರಕಲೆ, ಶಿಲ್ಪಕಲೆ, ಜಲವರ್ಣ, ವರ್ಣ ಚಿತ್ರಗಳು, ರೇಖಾ ಚಿತ್ರಗಳು, ವ್ಯಕ್ತಿ ಚಿತ್ರಗಳು, ಸ್ತಬ್ಧಚಿತ್ರಗಳು, ಸೆರಾಮಿಕ ಕಲಾಕೃತಿಗಳು ಆಧುನಿಕ ತಂತ್ರಜ್ಞಾನದ ರೂಪದಲ್ಲಿ ಮೂಡಿಬಂದಿವೆ. ಇದರಲ್ಲಿ ಕಲಾವಿದ ಎಂ. ಎಂ. ಜಿನೇಂದ್ರ ಅವರ ಕಲಾ ನೈಪುಣ್ಯತೆ, ಚತುರತೆ, ಸೂಕ್ಷ್ಮತೆ, ಗ್ರಹಿಕೆ, ರಚನಾ ಶೈಲಿ, ರೇಖೆಗಳ ಮೋಡ, ಭಾವನಾ ಲಹರಿ, ವಿಸ್ಮಯಕಾರಿ ಆಲೋಚನೆಗಳು, ಬೃಹತ್ ಮೂರ್ತಿಗಳು ಈ ಕೃತಿಯಲ್ಲಿ ಮೂಡಿ ಬಂದಿವೆ, ಅಲ್ಲದೆ ಸಮಾಜಕ್ಕೆ ಅವರ ಕೊಡುಗೆ, ಅವರಿಗೆ ಸಂದ ಗೌರವಗಳು ಅಡಕವಾಗಿವೆ. ಈ ಕೃತಿಯನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಹೊರ ತರಲಾಗಿದೆ.

ಹಂತೂರಿನ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪಂಚಕಲ್ಯಾಣ ಮಹೋತ್ಸವ

Article Image

ಹಂತೂರಿನ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪಂಚಕಲ್ಯಾಣ ಮಹೋತ್ಸವ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಕೃತಿ ಸೌಂದರ್ಯದಿಂದ ಕೂಡಿದ ಮಲೆನಾಡ ಮಡಿಲಿನ ಹಂತೂರಿನ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪಂಚಕಲ್ಯಾಣ ಮಹೋತ್ಸವ ಸಹಿತ ಮಾನಸ್ಥಂಭೋಪರಿ ಚತುರ್ಮುಖ ಬಿಂಬದ ಪ್ರತಿಷ್ಠಾಪನೆಯು ನರಸಿಂಹರಾಜಪುರ, ಸಿಂಹನಗದ್ದೆ ಬಸ್ತಿಮಠದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಮತ್ತು ಸಮಸ್ತ ಭಟ್ಟಾರಕ ಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಹಾಗೂ ಶೃಂಗೇರಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶ್ರೀ ಶ್ರೀ ಗುಣನಾಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ದಿನಾಂಕ 22.03.2024 ರಿಂದ ಪ್ರಾರಂಭಗೊಂಡು 24.03.2024 ರವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ.

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಉಪಾಧ್ಯಕ್ಷರಾಗಿ ಸೂರಜ್ ಜೈನ್ ಮಾರ್ನಾಡ್ ಆಯ್ಕೆ

Article Image

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಉಪಾಧ್ಯಕ್ಷರಾಗಿ ಸೂರಜ್ ಜೈನ್ ಮಾರ್ನಾಡ್ ಆಯ್ಕೆ

ಕಳೆದ ಅನೇಕ ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸೂರಜ್ ಜೈನ್ ಅವರು ಇದೀಗ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ. ಈ ಹಿಂದೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾಗಿಯು ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಅದೇ ರೀತಿ ಅನೇಕ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರು ಮೂಡುಬಿದಿರೆ ತಾಲೂಕಿನ ಮಾರ್ನಾಡಿನವರು

ಮೂಡುಬಿದ್ರೆ: ಗುರುಗಳ ಬಸದಿಯ ಎಂಟನೇಯ ವಾರ್ಷಿಕೋತ್ಸವ

Article Image

ಮೂಡುಬಿದ್ರೆ: ಗುರುಗಳ ಬಸದಿಯ ಎಂಟನೇಯ ವಾರ್ಷಿಕೋತ್ಸವ

ಮೂಡುಬಿದ್ರೆ ಗುರುಗಳ ಬಸದಿ ಭಗವಾನ್ ಶ್ರೀ 1008 ಪಾರ್ಶ್ಶ್ವನಾಥ ಸ್ವಾಮಿ ತೀರ್ಥಂಕರ ಬಸದಿಯ ಎಂಟನೇಯ ವಾರ್ಷಿಕೋತ್ಸವವು ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ, ನೇತೃತ್ವ, ಪಾವನ ಸಾನಿಧ್ಯದಲ್ಲಿ ಮಾ.16 ಜರುಗಿತು. ಕಾರ್ಯಕ್ರಮದ ಅಂಗವಾಗಿ ತೋರಣ ಮಹೂರ್ತ, ನಾಗ ಕ್ಷೇತ್ರಪಾಲ ಪೂಜೆ, ಶ್ರೀ ಸರಸ್ವತಿ ಪೂಜೆ, ಪದ್ಮಾವತಿ ಯಕ್ಷಿ ಷೋಡಶೋಪಚಾರ ಪೂಜೆ, ಬ್ರಹ್ಮ ದೇವರ ಪೂಜೆ, ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿತು. ಆಶೀರ್ವಚನ ನೀಡಿದ ಪ.ಪೂ ಸ್ವಾಮೀಜಿಗಳವರು ಇಂದಿನಿಂದ ಜೈನರ ಎಂಟು ದಿನಗಳ ಪಾಲ್ಗುಣ ಮಾಸದ ಪರ್ವ ಅಷ್ಟಮ ನಂದಿಶ್ವರ ದ್ವೀಪಗಳ ಐವತ್ತ ಎರಡು ಜಿನಲಾಯಗಳ ಅಕೃತಿಮ ಜಿನ ಮಂದಿರ ಪೂಜೆ ನೆರವೇರಲಿದೆ. ಪ್ರಾರಂಭದ ದಿನ ಗುರು ಬಸದಿ ವಾರ್ಷಿಕೋತ್ಸವದ ನಿಮಿತ್ತ ಜಿನ ಭಗವಂತರ ಕೇವಲ ಜ್ಞಾನದಿಂದ ಪಡೆದ ದಿವ್ಯ ಸಂದೇಶ ತಿಳಿದುಕೊಳ್ಳಲು ಪ್ರಯತ್ನ ಮಾಡುವ ದಿನ ಲೋಕಕಲ್ಯಾಣ ಭಾವನೆಯಿಂದ ಜಿನ ಭಗವಂತ ನೀಡಿದ ಸಂದೇಶ ಅಳವಡಿಸಿ ಜೀವನ ಪಾವನವಾಗುವುದು ಎಂದರು ಹಾಗೂ ಪೂಜಾ ಸೇವಾದಾತರನ್ನು ಹರಸಿ ಆಶೀರ್ವಾದ ಮಾಡಿದರು. ಬಸದಿ ಮೋಕ್ತೆಸರರಾದ ಪಟ್ಣ ಶೆಟ್ಟಿ ಸುದೇಶ್ ಕುಮಾರ್, ದಿನೇಶ್ ಕುಮಾರ್, ಆದರ್ಶ್, ಮಂಜುಳಾ ಅಭಯ ಚಂದ್ರ ಜೈನ್, ವೀಣಾ ರಘುಚಂದ್ರ ಶೆಟ್ಟಿ, ಬಿ.ವಿಮಲ್ ಕುಮಾರ್, ವೀರೇಂದ್ರ ಕುಮಾರ್, ವೀರೇಂದ್ರ ಇಂದ್ರ, ಶ್ರೀನಾಥ್ ಬಲ್ಲಾಳ್, ಎಸ್. ಪಿ. ವಿದ್ಯಾಕುಮಾರ್, ಜ್ಞಾನ ಚಂದ್ರ, ಅಜಿತ್ ಪ್ರಸಾದ್, ನವೀನ್ ಲಂಡನ್ ಉಪಸ್ಥಿತರಿದ್ದರು. ವ್ಯವಸ್ಥಾಪಕ ಸಂಜಯಂತ ಕುಮಾರ್ ವಂದಿಸಿದರು.

ಹಂತೂರು ಜೈನ ಬಸದಿಯ ನೂತನ ಮಾನಸ್ತಂಭ ಸ್ಥಾಪನೆ

Article Image

ಹಂತೂರು ಜೈನ ಬಸದಿಯ ನೂತನ ಮಾನಸ್ತಂಭ ಸ್ಥಾಪನೆ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಇತಿಹಾಸ ಪ್ರಸಿದ್ಧ ನೂತನ ಶ್ರೀ ಪಾರ್ಶ್ವನಾಥ ಜಿನ ಮಂದಿರದ ಮಾನಸ್ಥಂಭ ಹಾಗೂ ಚತುರ್ಮುಖ ಜಿನಬಿಂಬ ಸ್ಥಾಪನ ಕಾರ್ಯಕ್ರಮವು ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಸ್ವಸ್ತಿಶ್ರೀ ಲಕ್ಷ್ಮಿಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳರ ಪಾವನ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳಿಂದ ಮಾ. 16ರಂದು ನೆರವೇರಿತು. ನೂತನ ಮಾನಸ್ತಂಭವು 31.4 ಅಡಿಗಳ ಎತ್ತರದಲ್ಲಿದೆ. ಇದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕಿನ, ಕೊಯ್ರಾ ಬಂಡೆಯಿಂದ ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ಮಾನಸ್ತಂಭದ ದಾನಿಗಳಾದ ಚಿತ್ರದುರ್ಗ ಜಿಲ್ಲೆ ಚಳ್ಳಕೆರಿಯ ಸವಿತಾ-ಗೌರಿಪುರ ಪಾರ್ಶ್ವನಾಥ ದಂಪತಿಗಳು, ಪುರೋಹಿತ ಬಿ. ಎಸ್. ಧರಣಿಂದ್ರ ಇಂದ್ರ, ಆರ್. ಕೆ. ಬ್ರಹ್ಮದೇವ್, ಬಸದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಊರ-ಪರವೂರ ಜಿನ ಬಂಧುಗಳು, ಮತ್ತಿತರರು ಉಪಸ್ಥಿತರಿದ್ದರು.

ಲೋಕ ಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Article Image

ಲೋಕ ಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲದ ಚಂದ್ರಪುರ ಭಗವಾನ್ ಶ್ರೀ, ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ ನಡೆಯಿತು. ಕಾರ್ಕಳ ಜೈನಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ನಡೆಯಿತು. ಶಶಿಪ್ರಭ ಉಜಿರೆ, ಚಂಚಲ ಕೃಷ್ಣರಾಜ ಧರ್ಮಸ್ಥಳ, ಶಕುಂತಲಾ ಡಾ. ಜಯಕೀರ್ತಿ ಜೈನ್, ಶೋಭಾ ಸಂತೋಷ್ ಜೈನ್, ಚಂದನ ವೃಷಭ, ವಿಮಲ ವಿಜಯ್ ಕುಮಾರ್, ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಪ್ರೇಮ ವಸಂತ್ ಕುಮಾರ್ ಉಜಿರೆ, ರೇಷ್ಮಾ ಫಣಿರಾಜ್, ಸುರಭಿ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಜಯಕುಮಾರ್ ಮತ್ತಿತರರು ಪೂಜೆ ನೆರವೇರಿಸಿದರು. ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ, ಅರಹಂತ ಇಂದ್ರ ಶಿಶಿಲ, ಕೀರ್ತಿ ಇಂದ್ರ ಬೈಲಂಗಡಿ, ಚಿತ್ತರಂಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

ಅಮೇರಿಕಾದ ಹಾರ್ವರ್ಡ್ ಯೂನಿವರ್ಸಿಟಿಗೆ ಪ್ರದೀಪ್ ಜೈನ್ ಬಲ್ನಾಡು ಪೇಟೆ

Article Image

ಅಮೇರಿಕಾದ ಹಾರ್ವರ್ಡ್ ಯೂನಿವರ್ಸಿಟಿಗೆ ಪ್ರದೀಪ್ ಜೈನ್ ಬಲ್ನಾಡು ಪೇಟೆ

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರೇಟೆಜಿಕ್ ಲೀಡರಶಿಪ್ ಪ್ರೋಗ್ರಾಮ್ ಗೆ (strategic Leadership ) ಸುಳ್ಯ ತಾಲೂಕು ಮರ್ಕಂಜದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ ಯಾಗಿದ್ದು ಇದರಲ್ಲಿ ಭಾಗವಹಿಸಲು ಶನಿವಾರ ಅಮೆರಿಕದ ಬೋಸ್ಟನ್ ಗೆ ತೆರಳಿದ್ದಾರೆ. ಇದೇ ಸಂದರ್ಭ ಅವರು ಅಮೆರಿಕದ ನ್ಯೂಯಾರ್ಕ್ ಮತ್ತು ವಾಷಿಂಗ್ಟನಿಗೂ ಭೇಟಿ ನೀಡಲಿದ್ದಾರೆ. ದೇಶದಾದ್ಯಂತ 25 ರಾಜ್ಯಗಳಲ್ಲಿ 750 ಶಾಖೆಗಳನ್ನು ಹೊಂದಿರುವ ಉಜ್ಜಿವನ್ ಬ್ಯಾಂಕ್ ಇದರ ಹೌಸಿಂಗ್ ಲೋನ್ ವಿಭಾಗದ ರಾಷ್ಟ್ರಮಟ್ಟದ ವ್ಯವಹಾರ ಮುಖ್ಯಸ್ಥರಾಗಿರುವ ಇವರು ಸುಳ್ಯ ತಾಲೂಕು ಬಲ್ನಾಡು ಪೇಟೆ ಬಸದಿಯ ಆಡಳಿತ ಮುಕ್ತೆಸರರಾದ ಮತ್ತು ಯಕ್ಷಗಾನ ಸಂಘಟಕರಾದ ಮರ್ಕಂಜ ಯುವರಾಜ ಜೈನ್ ಮತ್ತು ಪ್ರಸನ್ನ ದಂಪತಿಗಳ ಕಿರಿಯ ಪುತ್ರರಾಗಿದ್ದಾರೆ.

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

Article Image

ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವಾರ್ಪಣೆ

SCDCC ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಮುಲ್ಕಿ ಅರಮನೆಯ ವತಿಯಿಂದ ಎಂ ಗೌತಮ್ ಜೈನ್ ಹಾಗೂ ಪವಿತ್ರೇಶ್ ಗೌರವಾರ್ಪಣೆ ಸಲ್ಲಿಸಿದರು.

ಇಂದು ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Article Image

ಇಂದು ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

ಬೆಳ್ತಂಗಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವೇಣೂರು [ರಿ]. ವತಿಯಿಂದ ಇಂದು ಸಂಜೆ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ಜರಗಲಿರುವುದು. ಫೆ.22 ರಿಂದ ಮಾ. 01ರವರೆಗೆ ಜರಗಿದ ಮಹಾಮಸ್ತಕಾಭಿಷೇಕದ ಯಶಸ್ವಿಗೆ ಸಹಕರಿಸಿದ ಶ್ರಾವಕ ಶ್ರಾವಕಿಯರ ಅಭಿನಂದನಾ ಕಾರ್ಯಕ್ರಮವು ಮೂಡಬಿದ್ರೆ ಶ್ರೀ ಜೈನ ಮಠದ ಪರಮಪೂಜ್ಯ ‘ಭಾರತಭೂಷಣ' ಜಗದ್ಗುರು ಸ್ವಸಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ರವರ ಗೌರವ ಉಪಸ್ಥಿತಿಯಲ್ಲಿ, ಅಪರಾಹ್ನ ಗಂಟೆ 3-30 ಕ್ಕೆ ಶ್ರೀ ಭರತೇಶ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಜೆ 5-00 ರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಶ್ರೀ ಕೊಡಮಣಿತ್ತಾಯ ದೈವ ಹಾಗೂ ಕಲ್ಕುಡ-ಕಲ್ಲುರ್ಟಿ ದೈವಗಳ ಭಂಡಾರಗಳ ಆಗಮನ. 6-00 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಜಲಾಭಿಷೇಕ ಪ್ರಾರಂಭ. ರಾತ್ರಿ 7-00 ರಿಂದ ಶ್ರೀ ಮಹಾಲಿಂಗೇಶ್ವರ ದೇವರಿಗೆ ರಂಗ ಪೂಜೆ, 7-30 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ವಿವಿಧ ದ್ರವ್ಯಗಳಿಂದ ಮಹಾಮಸ್ತಕಾಭಿಷೇಕ, 8-00 ರಿಂದ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ ದೈವಗಳ ನೇಮ. ಈ ಎಲ್ಲ ಕಾರ್ಯಕ್ರಮಗಳು ಜರಗಲಿದೆ. ವಿ.ಸೂ: ಶ್ರಾವಕ ಬಂಧುಗಳು ರೂ.3000. ರೂ.5000, ರೂ.10000 ಕಲಶಗಳನ್ನು ಪಡೆದು ಅಭಿಷೇಕ ಮಾಡಬಹುದು. ದ್ರವ್ಯಾಬಿಷೇಕ ಮಾಡಲಿಚ್ಚಿಸುವ ಬಂಧುಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು. ಮೊ: 9606356288

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

Article Image

ನೂತನ ಅಧ್ಯಕ್ಷರಾಗಿ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆ

ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ನ್ಯೂ ಪಡಿವಾಳ್ ಮಾಲಕ ಹರ್ಷವರ್ಧನ ಪಡಿವಾಳ್ ಅವರು ಆಯ್ಕೆಯಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ಅಧ್ಯಕ್ಷರಿಲ್ಲದೇ ಇದ್ದ ಮೂಡಾ ಕ್ಕೆ ಇದೀಗ ಹೊಸ ಸಾರಥಿಯ ನೇಮಕವಾಗಿರುತ್ತದೆ.

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರಕ್ಕೆ ಪೂಜ್ಯ ಹೆಗ್ಗಡೆಯವರ ಭೇಟಿ

Article Image

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರಕ್ಕೆ ಪೂಜ್ಯ ಹೆಗ್ಗಡೆಯವರ ಭೇಟಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಕೆ. ಜಯಕೀರ್ತಿ ಜೈನ್, ವಿಜಯ ಕುಮಾರ್, ಯುವರಾಜ್ ಪೂವಣಿ, ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ. ಏನ್. ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀಂದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಶ್ರೀ ಪಾರ್ಶ್ವ ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ನಾಗಕನ್ನಿಕಾ, ಶಕುಂತಲಾ ಜೈನ್, ವತ್ಸಲಾ, ಅಪೂರ್ವ, ವಿಮಲಾ, ಮಂಜುಳಾ, ಶೋಭಾ, ಸುರಭಿ, ಚಂಪಾ ಮುಂತಾದವರು ಉಪಸ್ಥಿತರಿದ್ದರು.

ವಾರ್ಷಿಕೋತ್ಸವ

Article Image

ವಾರ್ಷಿಕೋತ್ಸವ

ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕೋತ್ಸವವು ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಮತ್ತು ರಾಜಸ್ಥಾನ ತೀಜಾರ ಸಂಸ್ಥಾನ ಮಠದ ಪ.ಪೂ. ಸ್ವಸ್ತಿಶ್ರೀ ಸೌರಭಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಮಾ.11ರಂದು ನೆರವೇರಲಿರುವುದು.

ಹಿರಿಯ ಸಾಹಿತಿ ನಾಗರಾಜ್ ಪೂವಣಿ ನಿಧನ

Article Image

ಹಿರಿಯ ಸಾಹಿತಿ ನಾಗರಾಜ್ ಪೂವಣಿ ನಿಧನ

ಹಿರಿಯ ಸಾಹಿತಿ, ಬರಹಗಾರರು, ನಾ ವುಜಿರೆ ಎಂದೇ ಪ್ರಸಿದ್ಧಿ ಹೊಂದಿದ್ದ ಎಸ್‌ಡಿಎಂ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಪ್ರೋಫೆಸರ್, ನಾಗರಾಜ್ ಪೂವಣಿ (84 ವ). ಇವರು ಇಂದು (ಮಾ. 11) ನಿಧನ ಹೊಂದಿದರು. ಇವರು ಪತ್ನಿ ಸರಸ್ವತಿ ನಾ ವುಜಿರೆ ಮತ್ತು ಪುತ್ರ ಪಾಶ್ವನಾಥ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

Article Image

ಕಾರ್ಕಳದ ಶ್ರದ್ಧಾ ಜೈನ್ ಅವರಿಗೆ ಪ್ರಧಾನಿ ಮೋದಿ ಗೌರವ

ಹೊಸದಿಲ್ಲಿ ಮಾ. 8: ಕಾರ್ಕಳದ ಶ್ರದ್ಧಾ ಜೈನ್, ತಾಂಜಾನಿಯಾದ ಕಿಲಿ ಪೌಲ್ ಸಹಿತ ಸಾಮಾಜಿಕ ಜಾಲತಾಣಗಳ ಮೂಲಕ ಜನಮನ ಗೆದ್ದಿರುವ ಒಟ್ಟು 20 ಕ್ಷೇತ್ರಗಳ 23 ಯುವ ಕ್ರಿಯೇಟರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ದೇಶದ ಪ್ರಪ್ರಥಮ 'ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ'ಯನ್ನು ಪ್ರದಾನ ಮಾಡಿದರು. ಅತ್ಯಂತ ಸೃಜನಶೀಲ ಮಹಿಳಾ ಕ್ರಿಯೇಟರ್ ವಿಭಾಗದಲ್ಲಿ 'ಅಯ್ಯೋ ಶ್ರದ್ಧಾ' ಎಂದೇ ಖ್ಯಾತರಾಗಿರುವ ಕನ್ನಡತಿ ಶ್ರದ್ಧಾ ಜೈನ್ ಅವರು ಪ್ರಶಸ್ತಿ ಪಡೆದರು. ಇವರಲ್ಲದೆ ಪಂಖ್ತಿ ಪಾಂಡೆ, ಕೀರ್ತಿಕಾ ಗೋವಿಂದಸ್ವಾಮಿ, ಗಾಯಕಿ ಮೈಥಿಲಿ ಠಾಕೂರ್, ಮಲ್ಹಾರ್ ಕಳಂಬೆ ಸಹಿತ ಹಲವು ಯುವ ಪ್ರತಿಭೆಗಳ ಜತೆಗೆ ಮೂವರು ಅಂತರಾಷ್ಟ್ರೀಯ ಕ್ರಿಯೇಟರ್‌ಗಳಿಗೆ ಕೂಡ ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ, ನಾವೆಲ್ಲರೂ ಭಾರತದಲ್ಲೇ ರೂಪಿಸೋಣ, ಜಗತ್ತಿಗಾಗಿ ರೂಪಿಸೋಣ ಎಂದ ಪ್ರಧಾನಿ, ಭಾರತದ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುವಂತೆ ಮತ್ತು ನಾರಿ ಶಕ್ತಿಯ ಥೀಮ್‌ನೊಂದಿಗೆ ಕಂಟೆಂಟ್ ರೂಪಿಸುವಂತೆ ಪ್ರಶಸ್ತಿ ಪುರಸ್ಕೃತರಿಗೆ ಕರೆ ನೀಡಿದರು.'ಅಯ್ಯೋ ಶ್ರದ್ಧಾ ಕಾರ್ಕಳ ತಾಲೂಕಿನ ಬಜಗೋಳಿ ವರ್ಧಮಾನ ಜೈನ್ ಹಾಗೂ ದಿ.ಸುಶೀಲಾ ದಂಪತಿಯ ಇಬ್ಬರು ಪುತ್ರಿಯರಲ್ಲಿ ಶ್ರದ್ಧಾ ಒಬ್ಬರು. 'ಅಯ್ಯೋ ಶ್ರದ್ಧಾ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಪ್ರಸ್ತುತ ಬೆಂಗಳೂರಿನಲ್ಲಿದ್ದಾರೆ. ಪ್ರಶಸ್ತಿ ಸ್ವೀಕರಿಸುವ ವೇಳೆ ಶ್ರದ್ಧಾ, ಎಷ್ಟೇ ಒತ್ತಡದ ಪರಿಸ್ಥಿತಿ ಇದ್ದರೂ ನಾವು ಭಾರತೀಯರು ನಗುವ ಮಾರ್ಗವನ್ನು ಕಂಡುಕೊಳ್ಳುತ್ತಲೇ ಇರುತ್ತೇವೆ ಎಂದರು.

ದ.ಕ.ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ಸೇವಾ ನಿವೃತ್ತಿಗೊಂಡ ಡಾ.ಕೆ.ಜಯಕೀರ್ತಿ ಜೈನ್ ಅವರಿಗೆ ಸನ್ಮಾನ

Article Image

ದ.ಕ.ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ಸೇವಾ ನಿವೃತ್ತಿಗೊಂಡ ಡಾ.ಕೆ.ಜಯಕೀರ್ತಿ ಜೈನ್ ಅವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಪರಿಕ್ಷಕರ ಸಂಘದಿಂದ ಜಿಲ್ಲಾ ಸಂಘದ ಅಧ್ಯಕ್ಷ ರಾಗಿ 30 ವರ್ಷ ಸೇವೆ ಸಲ್ಲಿಸಿದ ಡಾ.ಕೆ. ಜಯಕೀರ್ತಿ ಜೈನ್ ಅವರನ್ನು ಪಶು ಸಂಗೋಪನೆ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಡಾ.ಅರುಣ್ ಕುಮಾರ್ ಶೆಟ್ಟಿ ಯವರು ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಸನ್ಮಾನಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೃಷ್ಣಮೂರ್ತಿ.ಜಿ. ವಹಿಸಿದ್ದರು. ಈ ಸಂದರ್ಭದಲ್ಲಿ ಪುಷ್ಪರಾಜ್ ಶೆಟ್ಟಿ, ಪ್ರಶಾಂತ್ ಕುಮಾರ್, ಶ್ರೀಮಂದರ ಜೈನ್, ಮೋಹನ್ ದಾಸ್, ಡಾ. ವಸಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Article Image

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

ಧರ್ಮಸ್ಥಳ,ಮಾ.7: ಶಿವರಾತ್ರಿ ಎಂಬುದು ತಾಳ್ಮೆ. ಸಂಯಮ, ಜಾಗರಣೆ, ಉಪವಾಸ, ವ್ರತ - ನಿಯಮಗಳ ಪಾಲನೆಯೊಂದಿಗೆ ಪಂಚೇಂದ್ರಿಯಗಳ ನಿಯಂತ್ರಣ ಮಾಡಿ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಕಳೆದ 45 ವರ್ಷಗಳಿಂದ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರತಿವರ್ಷ ಪಾದಯಾತ್ರೆಯನ್ನು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಆಯೋಜಿಸುತ್ತಿರುವ ಹನುಮಂತಪ್ಪ ಸ್ವಾಮೀಜಿ ಮತ್ತು ಅವರ ಶಿಷ್ಯರನ್ನು ಗೌರವಿಸಿ ಅಭಿನಂದಿಸಿದರು. ಮುಂದೆ ನಿರ್ಧಿಷ್ಠ ಗುರಿ ಮತ್ತು ಹಿಂದೆ ಆದರ್ಶ ಗುರು ಇದ್ದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಪಾದಯಾತ್ರೆಯಲ್ಲಿ ಶ್ರದ್ಧಾ - ಭಕ್ತಿಯಿಂದ ಭಗವಂತನ ನಾಮಸ್ಮರಣೆಯೊಂದಿಗೆ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ತ್ಯಾಗ ಮನೋಭಾವ ಮತ್ತು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಯುವಜನರು ಹೆಚ್ಚಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಚಲನಚಿತ್ರ ನಿರ್ದೇಶಕ ಶಶಿಕುಮಾರ್, ನಾಗರಾಜ ರೆಡ್ಡಿ, ಕಮಲಾ. ಮೋಹನ ಗೌಡ, ಚಂದ್ರಪ್ಪ, ಹನುಂತರಾಯಪ್ಪ, ನರಸಿಂಹಪ್ಪ ಮತ್ತು ಮರಿಯಪ್ಪ ಅವರನ್ನು ಸನ್ಮಾನಿಸಲಾಯಿತು. ಪಾದಯಾತ್ರಿಗಳ ಕ್ಷೇತ್ರದರ್ಶನ ಸುಗಮವಾಗಲು ಸಹಕರಿಸಿದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.

ಶಿವನಾಮ ಸ್ಮರಣೆಯಿಂದ ಸಕಲದೋಷಗಳ ಪರಿಹಾರ

Article Image

ಶಿವನಾಮ ಸ್ಮರಣೆಯಿಂದ ಸಕಲದೋಷಗಳ ಪರಿಹಾರ

ಧರ್ಮಸ್ಥಳ,ಮಾ. 8: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೊತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು. ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು. ಬಳಿಕ ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು. ಶಿವರಾತ್ರಿ ಪ್ರಯುಕ್ತ ಆಹೋರಾತ್ರಿ ಜಾಗರಣೆಯಿಂದಾಗಿ ಧರ್ಮಸ್ಥಳ ಅನ್ನಛತ್ರದ ಸೇವೆ ಇರುವುದಿಲ್ಲ. ಈ ಹಿನ್ನಲೆಯಲ್ಲಿ ಭಕ್ತರು ಭಕ್ತರಿಗಾಗಿ ವಿವಿಧ ಉಪಾಹಾರ ವ್ಯವಸ್ಥೆ ಕಲ್ಪಿಸಿರುವುದು ವಿಶೇಷ. ಈ ಬಾರಿ ಧರ್ಮಸ್ಥಳದಲ್ಲಿ ಧರ್ಮಶಾಸ್ತ ಅನ್ನದಾನ ಸಮಿತಿ, ಶ್ರೀ ಪಾಪಣ್ಣ ಗೆಳೆಯರ ಬಳಗ, ತಿಮ್ಮಾರೆಡ್ಡಿ, ಯಲಹಂಕ, ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಅನ್ನಸಂತರ್ಪಣಾ ಸಮಿತಿ, ನಾಗರಬಾವಿ, ಬೆಂಗಳೂರು, ಜನಜಾಗೃತಿ ವೇದಿಕೆ, ಹೊಸಪೇಟೆ, ವಿಜಯನಗರ, ಶ್ರೀ ಮಂಜುನಾಥ ಸ್ವಾಮಿ ಸೇವಾ ಸಮಿತಿ, ಬೆಂಗಳೂರು ಇನ್ನು ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

Article Image

ದ.ಕ ಜಿಲ್ಲಾ ಸಮಿತಿಗೆ ಸುಪ್ರೀತ್ ಜೈನ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಸುಪ್ರೀತ್ ಜೈನ್ ಅವರನ್ನು ಆಯ್ಕೆ ಮಾಡಲಾಗಿದೆ. ಇವರು ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಪತ್ರಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾಧ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು.

ಫೆ.29 : ಮಹಾಮಸ್ತಕಾಭಿಷೇಕದ 8ನೇ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Article Image

ಫೆ.29 : ಮಹಾಮಸ್ತಕಾಭಿಷೇಕದ 8ನೇ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಇಂದಿನ (9ನೇ ದಿನ) ಸೇವಾಕರ್ತರುಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ರಾಜರ್ಷಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಮಾಡಿಸುವ ನಿತ್ಯವಿಧಿ ಸಹಿತ, ಆಹಾರ ದಾನ ವಿಧಿ, ಗಂಧ ಯಾಂತ್ರಾರಾಧನಾ ವಿಧಾನ, ಬೆಳಿಗ್ಗೆ 11.28ರಿಂದ 11.40ರ ವೃಷಭ ಲಗ್ನದಲ್ಲಿ ಮಂತ್ರನ್ಯಾಸ ಪೂರ್ವಕ ಶ್ರೀ ಕೇವಲಜ್ಞಾನ ಕಲ್ಯಾಣ, ಮುಖವಸ್ತ್ರ ಉದ್ಘಾಟನೆ ಮಧ್ಯಾಹ್ನ ಗಂಟೆ 3.00ರಿಂದ ಸಮವಸರಣ ಪೂಜೆಯು ಯುಗಳ ಮುನಿಶ್ರೀಗಳಾದ ಪ.ಪೂ. 108 ಶ್ರೀ ಅಮೋಘಕೀರ್ತಿ ಮಹಾರಾಜರು ಹಾಗೂ ಪ.ಪೂ. 108 ಶ್ರೀ ಅಮರಕೀರ್ತಿ ಮಹಾರಾಜರುಗಳ ಪಾವನ ಸಾನ್ನಿಧ್ಯ ಮತ್ತು ಧರ್ಮೋಪದೇಶಗಳೊಂದಿಗೆ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದು ಬಳಿಕ ಅಗ್ರೋದಕ ಮೆರವಣಿಗೆ. ಸಂಜೆ ಗಂಟೆ 7.00ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 504 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರಗಲಿದೆ. ಭರತೇಶ ಸಮುದಾಯ ಭವನದ ಮುಖ್ಯ ವೇದಿಕೆಯಲ್ಲಿ ರಾತ್ರಿ 7.30 ರಿಂದ ಉಜಿರೆ ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳು (ರಿ.) ನ ಎಸ್.ಡಿ.ಎಮ್. ಕಲಾ ಕೇಂದ್ರದ ಕಲಾವಿದರಿಂದ ಕಲಾ ವೈಭವ, ರಾತ್ರಿ 9.30ರಿಂದ ಕಾರ್ಕಳದ ಶ್ರೀ ಲಲಿತಕೀರ್ತಿ ಯಕ್ಷಗಾನ ಕಲಾ ಮಂಡಳಿ ಇವರಿಂದ ಯಕ್ಷಗಾನ- ಕಮಠೋಪಸರ್ಗ ವಿಜಯಿ, ವಸ್ತು ಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ಗುಂಡೂರಿ ಸ್ಪೂರ್ತಿ ಭಟ್ ಬಳಗದವರಿಂದ ಭಕ್ತಿಗೀತೆ ಹಾಗೂ ಭಾವಗೀತೆ, ವೇಣೂರು ಶಿವಾಂಜಲಿ ಡ್ಯಾನ್ಸ್ ಇನ್‌ಸ್ಟಿಟ್ಯೂಟ್ ಇವರಿಂದ ನೃತ್ಯ ಪ್ರದರ್ಶನ ನಡೆಯಲಿದೆ

ಮಾ. 01: ಕೊನೆಯ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

Article Image

ಮಾ. 01: ಕೊನೆಯ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

12 ವರ್ಷಗಳಿಗೊಮ್ಮೆ ನೆರವೇರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಸಂಭ್ರಮವು ವೇಣೂರಿನಲ್ಲಿ ಫೆ. 22ರಂದು ಮೊದಲ್ಗೊಂಡು, ಇಂದು(ಮಾ. 1) ಸಂಪನ್ನಗೊಳ್ಳಲಿದೆ. ಈ ದಿನದ ಸೇವಾಕರ್ತರಾದ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯಿಂದ 1008 ಕಲಶಾಭಿಷೇಕ ನಡೆಯಲಿದೆ. ಬೆಳಗ್ಗೆ 9.00ಕ್ಕೆ ನಿತ್ಯ ವಿಧಿ ಸಹಿತ ಸಿದ್ದಚಕ್ರ ಯಂತ್ರಾರಾಧನಾ ವಿಧಾನ, ಗಂಟೆ 10.15ರಿಂದ ಅಗ್ನಿತ್ರಯಾರ್ಚನಾ ಪೂರ್ವಕ ನಿರ್ವಾಣ ಕಲ್ಯಾಣ, ಅಗ್ರೋದಕ ಮೆರವಣಿಗೆ, ಸಂಜೆ ಗಂಟೆ 4.00ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ಮಹೋತ್ಸವ, ಮಹಾಪೂಜೆ, ಸಂಘಪೂಜೆ, ಮಹಾಮಂಗಳಾರತಿ, ಕುಂಕುಮೋತ್ಸವ, ಅವಭೃತ ಸ್ನಾನ, ಧ್ವಜಾವರೋಹಣ, ತೋರಣ ವಿಸರ್ಜನೆ, ಮತ್ತು ಕಂಕಣ ವಿಸರ್ಜನೆ ಜರಗಲಿದೆ. ಅಪರಾಹ್ನ 3.00 ಗಂಟೆಗೆ ಯುಗಳ ಮುನಿಶ್ರೀಗಳಾದ, ಪ. ಪೂ. ೧೦೮ ಶ್ರೀ ಅಮೋಘಕೀರ್ತಿ ಮಹಾರಾಜರು ಹಾಗೂ ಪ. ಪೂ. ೧೦೮ ಶ್ರೀ ಅಮರ ಕೀರ್ತಿ ಮಹಾರಾಜರ ಪಾವನ ಸಾನಿಧ್ಯದಲ್ಲಿ, ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಮತ್ತು ಶ್ರೀ ಕ್ಷೇತ್ರ ಜಿನಕಂಚಿಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರ ಉಪಸ್ಥಿತಿಯಲ್ಲಿ, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ಜರಗಲಿದೆ. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು, ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್ ಎಂ.ಎಲ್., ಎಂಎಲ್‌ಸಿ ಕೆ. ಪ್ರತಾಪಸಿಂಹ ನಾಯಕ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ನಾಗಪುರದ ಡಿ.ಪಿ. ಜೈನ್, ನಾಸಿಕ್‌ನ ರವೀಂದ್ರ ಪಾಟೀಲ್ ಉಪಸ್ಥಿತರಿರಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಭರತೇಶ ಸಮುದಾಯ ಭವನದ ಮುಖ್ಯ ವೇದಿಕೆಯಲ್ಲಿ ಸಂಜೆ 7.00ರಿಂದ ಸಾಲಿಗ್ರಾಮದ ಶ್ರೀ ಗುರು ಪ್ರಸಾದಿತ ಯಕ್ಷಗಾನ ಮಂಡಳಿ ಇವರಿಂದ ‘ಹೊಂಬುಜ ಕ್ಷೇತ್ರ ಮಹಾತ್ಮೆ'. ವಸ್ತುಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ವೇಣೂರಿನ ಅನುಸೂಯ ಫಾಟಕ ಮತ್ತು ತಂಡದವರಿಂದ ‘ಸಂಗೀತ ಕಾರ್ಯಕ್ರಮ’, ರಾತ್ರಿ 8.30ರಿಂದ ಮಂಜೇಶ್ವರದ ನಾಟ್ಯ ನಿಲಯಂ ತಂಡದವರಿಂದ ‘ನೃತ್ಯ ಕಾರ್ಯಕ್ರಮ’, ರಾತ್ರಿ 11.00ರಿಂದ ಪುಷ್ಕಳ್ ಕುಮಾರ್ ತೋನ್ಸ್‌ರವರ ತಂಡದವರಿಂದ ‘ಜಿನಕಥೆ-ಶ್ರೀ ಬಾಹುಬಲಿ ಚರಿತೆ’. ಈ ಎಲ್ಲಾ ಕಾರ್ಯಕ್ರಮಗಳು ಇಂದು ನಡೆಯಲಿದೆ.

ಮಹಾಮಸ್ತಕಾಭಿಷೇಕದ 7ನೇ ದಿನ - ಫೆ. 28 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

Article Image

ಮಹಾಮಸ್ತಕಾಭಿಷೇಕದ 7ನೇ ದಿನ - ಫೆ. 28 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ 7ನೇ ದಿನವಾದ ಇಂದು (ಫೆ.28) ಸೇವಾಕರ್ತರಾದ ಸ್ವಸ್ತಿಕ್ ಜೈನ್ ಹಾಗೂ ಕುಟುಂಬಸ್ಥರು ಮಾಡಿಸುವ ನಿತ್ಯವಿಧಿ ಸಹಿತ, ಯಾಗಮಂಡಲ ಆರಾಧನಾ ವಿಧಾನ, ಮಧ್ಯಾಹ್ನ 2.00 ಗಂಟೆಗೆ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿಯ ರಾಜ್ಯಾಭಿಷೇಕ, ರಾಜ್ಯಭಾರ, ಸಂಜೆ ಗಂಟೆ 4.05ರ ಕರ್ಕಾಟಕ ಲಗ್ನದಲ್ಲಿ ವೈರಾಗ್ಯ ಪೂರ್ವಕ ದೀಕ್ಷಾ ವಿಧಿ, ಕೇಶಲೋಚನಾ ವಿಧಿ, ಪರಿಷ್ಕೃಮಣ ಕಲ್ಯಾಣ, ಅಗ್ರೋದಕ ಮೆರವಣಿಗೆ, ಬಳಿಕ ಸಂಜೆ ಗಂಟೆ 7.00ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರಗಲಿದೆ. ಭರತೇಶ ಸಮುದಾಯ ಭವನದ ಮುಖ್ಯ ವೇದಿಕೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮವು ಅಪರಾಹ್ನ 3.00 ಗಂಟೆಗೆ ಯುಗಳ ಮುನಿಶ್ರೀಗಳಾದ ಪ.ಪೂ. ೧೦೮ ಶ್ರೀ ಅಮೋಘಕೀರ್ತಿ ಮಹಾರಾಜರು ಮತ್ತು ಪ.ಪೂ. ೧೦೮ ಶ್ರೀ ಅಮರಕೀರ್ತಿ ಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ವರೂರು ಜೈನ ಮಠದ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹಾಗೂ ಶ್ರೀಕ್ಷೇತ್ರ ಕೊಲ್ಲಾಪುರ ಜೈನಮಠದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜರಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಭಾ.ಜ.ಪ. ಅಧ್ಯಕ್ಷರು ಮತ್ತು ಶಾಸಕರಾದ ಬಿ.ವೈ. ವಿಜಯೇಂದ್ರ ಇವರು ವಹಿಸಲಿದ್ದು, ಐಪಿಎಸ್ ಪೋಲಿಸ್ ಆಯುಕ್ತರಾದ ಅನುಪಮ್ ಅಗ್ರವಾಲ್, ಚೆನ್ನೈನ ಐ.ಎ.ಎಫ್. ಗ್ರೂಪ್ ಕ್ಯಾಪ್ಟನ್ ವೀರಚಕ್ರ ಅಭಿನಂದನ್ ವರ್ಧಮಾನ್, ಜೈಪುರ್ ರಿಲಯನ್ಸ್ ಇಂಡಸ್ಟ್ರೀಸ್ ಲಿ. ನ ಅಧ್ಯಕ್ಷರಾದ ಉಮೇಶ ಭಂಡಾರಿ, ಬೆಂಗಳೂರು ಗ್ರೀನ್‌ಚೆಫ್‌ನ ಸ್ಥಾಪಕಾಧ್ಯಕ್ಷರಾದ ಸುಖಲಾಲ್ ಜೈನ್, ಬೆಂಗಳೂರು ಮೈಕ್ರೊ ಲ್ಯಾಬ್ ಅಧ್ಯಕ್ಷರು ಮತ್ತು ಎಂ.ಡಿ. ದಿಲೀಪ್ ಸುರಾನ್, ಉಜಿರೆ ಎಸ್.ಡಿ.ಎಮ್. ಸೊಸೈಟಿ (ರಿ.)ನ ಪ್ರಾಜೆಕ್ಟ್ ಡೈರೆಕ್ಟರ್ ಶ್ರೇಯಸ್ ಕುಮಾರ್ ಮತ್ತು ಉದ್ಯಮಿ ಕಿರಣ್ ಜೈನ್ ಉಪಸ್ಥಿತರಿರುವರು. ಬೆಂಗಳೂರಿನ ಲೇಖಕಿ, ಪ್ರಾಧ್ಯಾಪಕಿ ಡಾ. ಪದ್ಮಿನಿ ನಾಗರಾಜ್ ರವರು ವಿಶ್ವಧರ್ಮವಾದ ಜೈನಧರ್ಮದ ಪ್ರಸ್ತುತತೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು. ಮುಖ್ಯ ವೇದಿಕೆಯಲ್ಲಿ ರಾತ್ರಿ 8.00ರಿಂದ ಹೊಸದೆಹಲಿಯ ಸ್ವಾತಿ ನಿಹಾಲ್ ಜೈನ್ ಮತ್ತು ಬಳಗದವರಿಂದ ಸಂಗೀತ ಸುಧೆ ಮತ್ತು ವಸ್ತು ಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ಧಾರವಾಡದ ಕು. ಪ್ರಾಪ್ತಿ ಜೈನ್ ಕೆ.ಎ. ಇವರಿಂದ ಭರತ ನಾಟ್ಯ, ವೇಣೂರು ತುಳುನಾಡ ಕಲಾವಿದರಿಂದ ತುಳುನಾಡ ವೈಭವ ನಡೆಯಲಿದೆ.

ವೇಣೂರು ಭಗವಾನ್‌ ಬಾಹುಬಲಿ ಕ್ಷೇತ್ರಕ್ಕೆ ಮೈಸೂರು ಮಹಾರಾಜರ ಭೇಟಿ

Article Image

ವೇಣೂರು ಭಗವಾನ್‌ ಬಾಹುಬಲಿ ಕ್ಷೇತ್ರಕ್ಕೆ ಮೈಸೂರು ಮಹಾರಾಜರ ಭೇಟಿ

ವೇಣೂರು ಭ| ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ 5ನೇ ದಿನದ ಕಾರ್ಯಕ್ರಮಕ್ಕೆ ಮೈಸೂರು ಅರಮನೆ, ಮೈಸೂರು ಮಹಾಸಂಸ್ಥಾನದ ಮಹಾರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗಮಿಸಿದ್ದರು. ಮಹಾರಾಜರನ್ನು ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಸ್ವಾಗತಿಸಿ ಬಾಹುಬಲಿ ಕ್ಷೇತ್ರಕ್ಕೆ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು, ಸೇವಾಕರ್ತರಾದ ಎಕ್ಸಲೆಂಟ್‌ ವಿದ್ಯಾಸಂಸ್ಥೆಯ ಯುವರಾಜ್‌ ಜೈನ್ ದಂಪತಿಗಳು, ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್‌ ಕುಮಾರ್‌ ಇಂದ್ರ, ಕೆ. ಕೃಷ್ಣರಾಜ್‌ ಹೆಗ್ಡೆ, ಮುಲ್ಕಿ ಅರಮನೆಯ ಎಂ. ಗೌತಮ್‌ ಜೈನ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಮೊದಲಿಗೆ ಭ| ಬಾಹುಬಲಿ ಸ್ವಾಮಿಗೆ ನಮಿಸಿ, ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕೊನೆಗೆ ರಾತ್ರಿ ನಡೆದ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿಯೂ ಭಾಗವಹಿಸಿದ್ದರು. ಇದಕ್ಕೂ ಮೊದಲು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಅರಮನೆಗೆ ತಿಮ್ಮಣರಸರಾದ ಡಾ. ಪದ್ಮಪ್ರಸಾದ್ ಅಜಿಲರ ಆಹ್ವಾನದ ಮೇರೆಗೆ ಮೈಸೂರಿನ ಅರಮನೆಯ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದರು. ಅಜಿಲರು ಮಹಾರಾಜರನ್ನು ಗೌರವಿಸಿದ ಸಂದರ್ಭದಲ್ಲಿ ಶಿವಪ್ರಸಾದ್ ಅಜಿಲರು, ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತಿತರರು ಉಪಸ್ಥಿತರಿದ್ದರು.

ಫೆ. 26 : ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆದ 5ನೇ ದಿನದ ಮಹಾಮಸ್ತಕಾಭಿಷೇಕ

Article Image

ಫೆ. 26 : ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆದ 5ನೇ ದಿನದ ಮಹಾಮಸ್ತಕಾಭಿಷೇಕ

ವೇಣೂರು ಭ| ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ 5 ದಿನವಾದ ಫೆ. 26ರಂದು ಶಾಂತಿಯ ಮೂರುತಿಗೆ ದ್ರವ್ಯಗಳ ಅಭಿಷೇಕ, ಭಕ್ತರಿಗೆ ಕಣ್ತುಂಬಿಕೊಳ್ಳುವ ಸಂಭ್ರಮ ಸಡಗರ. ಕಳೆದ ನಾಲ್ಕು ದಿನಗಳಿಂದ ಮಹಾಮಸ್ತಕಾಭಿಷೇಕವು ವೈಭವಪೋರಿತವಾಗಿ ನೆರವೇರಿ, ಸೋಮವಾರದಂದು ನಿತ್ಯವಿಧಿ ಸಹಿತ ಬೃಹತ್ ಯಾಂತ್ರಾರಾಧನಾ ವಿಧಾನ, ಮಂಟಪ ಪ್ರತಿಷ್ಠೆ, ವೇದಿ ಪ್ರತಿಷ್ಠೆ, ಅಗ್ರೋದಕ ಮೆರವಣಿಗೆ, ಜಲಯಾತ್ರಾ ಮಹೋತ್ಸವ ಮೊದಲಾದ ಧಾರ್ಮಿಕ ವಿಧಿ - ವಿಧಾನಗಳು ಜರುಗಿತು. ಗರ್ಭಾವತರಣ ಕಲ್ಯಾಣದ ದೃಶ್ಯ ರೂಪಕ ಎಲ್ಲರನ್ನು ಮಂತ್ರಮುಗ್ದರನ್ನಾಗಿಸಿತು. ಬಳಿಕ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಿತು. ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ ಮತ್ತು ರಶ್ಮಿತಾ ಜೈನ್ ಹಾಗೂ ಕುಟುಂಬಸ್ಥರು ದಿನದ ಸೇವಾಕೃರ್ತರಾಗಿದ್ದರು. ಭ| ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ವಿಶೇಷ ಗಣ್ಯರಾಗಿ ಮೈಸೂರು ಅರಮನೆ ಮಹಾರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಕಮಿಷನರ್‌ ಅನುಪಮ ಅಗರ್‌ವಾಲ್‌, ಐಜಿಪಿ ಬೋರಲಿಂಗಯ್ಯ ಪಾಲ್ಗೊಂಡರು.

ಫೆ. 26: ಮಹಾಮಸ್ತಕಾಭಿಷೇಕದ 5ನೇ ದಿನದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Article Image

ಫೆ. 26: ಮಹಾಮಸ್ತಕಾಭಿಷೇಕದ 5ನೇ ದಿನದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

"ದಕ್ಷಿಣ ಭಾರತದಲ್ಲಿ ಜೈನ ಪರಂಪರೆಯ ಪ್ರಭಾವ ಚಂದ್ರಗುಪ್ತ ಮೌರ್ಯನ ಕಾಲದಿಂದಲೂ ಅನೇಕ ಕೊಡುಗೆಗಳ ಮೂಲಕ ಬೆಳೆದು ಬಂದಿತ್ತು. ಮೈಸೂರು ಸಂಸ್ಥಾನಕ್ಕೂ ಜೈನ ಪರಂಪರೆಯ ಮಾರ್ಗದರ್ಶನವಿದ್ದು, ಸಂಸ್ಥಾನದಿಂದಲೂ ಜೈನ ಪರಂಪರೆಗೆ ದೊಡ್ಡ ಕೊಡುಗೆ ನೀಡಿದೆ" ಎಂದು ಮೈಸೂರು ಮಹಾ ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ 5ನೇ ದಿನವಾದ ಫೆ. 26ರಂದು ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುನಿಶ್ರೀ ಅಮೋಘಕೀರ್ತಿ ಮಹಾರಾಜರು ಪ್ರವಚನ ನೀಡಿ, ವ್ಯಕ್ತಿಯ ಸುಖ-ಭೋಗ, ವೈಭವ, ಆಡಂಬರ ನೋಡಿ ಗೌರವಿಸುವುದಲ್ಲ. ಮಹಾಮಸ್ತಕಾಭಿಷೇಕದಿಂದ ಮಾನಸಿಕ ಪರಿವರ್ತನೆಯೊಂದಿಗೆ ಸಾಮಾಜಿಕ ಸುಧಾರಣೆಯಾಗಬೇಕು ಎಂದರು. ಮುನಿಶ್ರೀ ಅಮರಕೀರ್ತಿ ಮುನಿಮಹಾರಾಜರು ಆಶೀರ್ವಚನ ನೀಡಿ ಪರಿಶುದ್ಧವಾದ ಅಚಲ ಭಕ್ತಿಯಿಂದ ಮಾನವನೇ ಮಾಧವನಾಗಬಲ್ಲ ಆತ್ಮನೇ ಪರಮಾತ್ಮನಾಗುತ್ತಾನೆ. ಅದಕ್ಕಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಎಂದರು. ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಿದರು. ಜಮಖಂಡಿಯ ಸಾಹಿತಿ ಬಿ.ಪಿ. ನ್ಯಾಮಗೌಡ ವಿಶೇಷ ಉಪನ್ಯಾಸ ನೀಡಿದರು. ಅಂಚೆ ಕಾರ್ಡ್ ಬಿಡುಗಡೆ: ಕರ್ನಾಟಕದ ಮುಖ್ಯ ಅಂಚೆ ಮಹಾಪ್ರಬಂಧಕ ಶಿರ್ತಾಡಿ ರಾಜೇಂದ್ರ ಕುಮಾರ್, ಅಂಚೆ ಇಲಾಖೆ ಮೂಲಕ ರೂಪಿಸಿದ ಬಾಹುಬಲಿ ಸ್ವಾಮಿಯ ಸಚಿತ್ರ ಅಂಚೆ ಕಾರ್ಡ್‌ನ್ನು ಮೈಸೂರು ಮಹಾರಾಜರು ಬಿಡುಗಡೆಗೊಳಿಸಿದರು. ಕು| ಮೌಲ್ಯ ಅವರ "ಬಾಹುಬಲಿ ಗೀತಾಮೃತ" ಗಾನಲಹರಿ ಬಿಡುಗಡೆಗೊಳಿಸಿ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ವಿ. ಪ್ರವೀಣ್ ಕುಮಾರ್ ಇಂದ್ರ, ಪಿ. ಜಯರಾಜ್ ಕಂಬಳಿ ಮತ್ತು ಹುಬ್ಬಳ್ಳಿಯ ಮಹಾವೀರ ಕುಂದೂರು ಉಪಸ್ಥಿತರಿದ್ದರು. ಸೇವಾಕರ್ತರಾದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಸ್ವಾಗತಿಸಿದರು. ಕಾರ್ಯದರ್ಶಿ ರಶ್ಮಿತಾ ಜೈನ್ ವಂದಿಸಿದರು. ಆಡಳಿತಾಧಿಕಾರಿ ಬಿ.ಪಿ. ಸಂಪತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

First Previous

Showing 6 of 8 pages

Next Last